Murugha Seer | ಪರಿಶಿಷ್ಟ ಬಾಲಕಿ ಮೇಲೆ ದೌರ್ಜನ್ಯ, ಧಾರ್ಮಿಕ ಸಂಸ್ಥೆ ದುರುಪಯೋಗ: ಮುರುಘಾ ಶರಣರ ವಿರುದ್ಧ ಟೈಟ್‌ ಚಾರ್ಜ್‌ಶೀಟ್‌ - Vistara News

ಕರ್ನಾಟಕ

Murugha Seer | ಪರಿಶಿಷ್ಟ ಬಾಲಕಿ ಮೇಲೆ ದೌರ್ಜನ್ಯ, ಧಾರ್ಮಿಕ ಸಂಸ್ಥೆ ದುರುಪಯೋಗ: ಮುರುಘಾ ಶರಣರ ವಿರುದ್ಧ ಟೈಟ್‌ ಚಾರ್ಜ್‌ಶೀಟ್‌

Murugha Seer | ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಚಾರ್ಜ್‌ಶೀಟ್‌ನಲ್ಲಿ ಕೆಲವೊಂದು ಮಹತ್ವದ ಅಂಶವನ್ನು ಉಲ್ಲೇಖಿಸಲಾಗಿದೆ. ಅಲ್ಲದೆ, ಈ ಬಾಲಕಿಯರಲ್ಲಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾಗಿದ್ದಾಳೆಂಬುದು ತಿಳಿದುಬಂದಿದೆ.

VISTARANEWS.COM


on

Murugha Seer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್‌ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಶರಣರಿಗೆ (Murugha Seer) ಪೋಕ್ಸೋ ಜತೆಗೆ ಈಗ ಅಟ್ರಾಸಿಟಿ ಪ್ರಕರಣದ ಕಂಟಕವೂ ಎದುರಾಗಿದೆ. ಮುರುಘಾಶ್ರೀ ಪ್ರಕರಣದ ಚಾರ್ಜ್‌ಶೀಟ್‌ “ವಿಸ್ತಾರ ನ್ಯೂಸ್‌”ಗೆ ಲಭ್ಯವಾಗಿದ್ದು, ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳು ಎಂಬ ವಿಷಯ ಗೊತ್ತಾಗಿದೆ.

ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ ಬಾಲಕಿಯರ ಹೇಳಿಕೆ ಸೇರಿದಂತೆ ವಿವಿಧ ಆಯಾಮದಲ್ಲಿ ತನಿಖೆ ನಡೆಸಿದ್ದ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು ಅಕ್ಟೋಬರ್ 27ರಂದು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿತ್ತು. ಎ ಮತ್ತು ಬಿ ಎಂಬುದಾಗಿ ಒಟ್ಟು ಎರಡು ಭಾಗವಾಗಿ ಚಾರ್ಜ್‌ಶೀಟ್‌ ಅನ್ನು ಪೊಲೀಸರು ಸಲ್ಲಿಸಿದ್ದರು. 347 + 347 ಪುಟಗಳ (ಒಟ್ಟು 694 ಪುಟ) ದೋಷಾರೋಪಣ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು. ಇದರಲ್ಲಿ ಈಗ ಮಹತ್ವದ ಅಂಶವನ್ನು ಉಲ್ಲೇಖಿಸಲಾಗಿದ್ದು, ಮುರುಘಾ ಶರಣರಿಗೆ ಅಟ್ರಾಸಿಟಿ ಕೇಸ್‌ ಸುತ್ತಿಕೊಂಡಿರುವುದು ತಿಳಿದುಬಂದಿದೆ.

ಪರಿಶಿಷ್ಟ ಜಾತಿಗೆ ಸೇರಿದ ಸಂತ್ರಸ್ತ ಬಾಲಕಿ
ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾಗಿರುವುದರಿಂದ ಮುರುಘಾ ಶರಣರ ಮೇಲೆ ಹೆಚ್ಚುವರಿ ಕಲಂ ಅಳವಡಿಕೆ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ತಡೆ ಪ್ರತಿಬಂಧಕ
ಅಧಿನಿಯಮ ಕಲಂ ಅಡಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ | Murugha Seer | ಮುರುಘಾ ಮಠದಲ್ಲಿದ್ದ ಫೋಟೊ ಕಳವಿಗೆ ಸೂಚಿಸಿದ್ದು ಬಸವರಾಜನ್‌ ದಂಪತಿ; ಬಾಯ್ಬಿಟ್ಟ ಬಂಧಿತರು!

ಕಲಂ 376(2)(N), 376(DA), 376(3), 201, 202, 506,R/34&37 ಐಪಿಸಿ ಮತ್ತು ಕಲಂ 17, 5(ಎಲ್) , 6 ಪೋಕ್ಸೋ ಕಾಯ್ದೆ-2012 ಮತ್ತು 3 ಕ್ಲಾಸ್ (1) ಸಬ್ ಕ್ಲಾಸ್ W(1),(2), 3 ಕ್ಲಾಸ್ (2), (V),(VA), SC/ST PA
1989 SEC 3(f) ಸೇರಿದಂತೆ ಹೆಚ್ಚುವರಿಯಾಗಿ ಕಾಯ್ದೆಯನ್ನು ಬಳಕೆ ಮಾಡಲಾಗಿದೆ ಎಂಬ ವಿಚಾರ ಗೊತ್ತಾಗಿದೆ.

Murugha Seer

ವಿವಿಧ ಕಲಂ ಅಡಿ ಕೇಸ್‌ ದಾಖಲು
ಅನ್ನ, ಅಕ್ಷರ ಮತ್ತು ಆಶ್ರಯ ನೀಡುವ ನೆಪದಲ್ಲಿ ದೌರ್ಜನ್ಯ ಎಸಗಲಾಗಿದೆ. ಬಡತನದಿಂದ ಆಶ್ರಯ ಬಯಸಿ‌ ಬಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ದಲಿತ ಸಮುದಾಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ವೈಯಕ್ತಿಕ ಇಚ್ಛೆಗೆ ಧಾರ್ಮಿಕ ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ಕಾಯ್ದೆ -1988, ಬಾಲಾಪರಾಧಿ ನ್ಯಾಯ ರಕ್ಷಣೆ ಕಲಂ 75, ಮಕ್ಕಳ ರಕ್ಷಣೆ ಕಾಯ್ದೆ 2015 ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಚಾರ್ಜ್‌ಶೀಟ್‌ನಲ್ಲಿ ಏನೆಲ್ಲ ಉಲ್ಲೇಖ?
ನಾಲ್ವರು ವಿದ್ಯಾರ್ಥಿನಿಯರನ್ನು ಹೇಗೆ? ಮತ್ತು ಯಾವ ಯಾವ ಸಂದರ್ಭದಲ್ಲಿ ಲೈಂಗಿಕ ಚಟುವಟಿಕೆಗೆ ಬಳಸಿಕೊಳ್ಳಲಾಗಿದೆ. ಜತೆಗೆ ಇದಕ್ಕೆ ಯಾರು ಸಹಾಯ, ಸಹಕಾರ ನೀಡಿದ್ದಾರೆ. ಮತ್ತುಬರುವ ಔಷಧವನ್ನು ಯಾವ ರೂಪದಲ್ಲಿ ನೀಡಲಾಗುತ್ತಿತ್ತು? ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಹೇಗೆ ಕೊಡಲಾಗುತ್ತಿತ್ತು? ಬಡತನವನ್ನು ಹೇಗೆ ತಮ್ಮ ದಾಹಕ್ಕೆ ಬಳಸಿಕೊಂಡಿದ್ದಾರೆ ಎಂಬಿತ್ಯಾದಿ ಅಂಶಗಳನ್ನು ಡಿವೈಎಸ್‌ಪಿಯವರು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ.

ಅಟ್ರಾಸಿಟಿ ಬಗ್ಗೆ ಏನಿದೆ?
ಡಿವೈಎಸ್‌ಪಿ ನೀಡಿರುವ ದೋಷಾರೋಪ ಪಟ್ಟಿಯ ೨೪ ಮತ್ತು ೨೫ನೇ ಪುಟದಲ್ಲಿ ಮುರುಘಾ ಶರಣರು ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಉಲ್ಲೇಖ ಮಾಡಲಾಗಿದ್ದು, ಅದರ ವಿವರವನ್ನು ಇಲ್ಲಿ ಯಥಾವತ್ತು ನೀಡಲಾಗಿದೆ.

ಇದನ್ನೂ ಓದಿ | Murugha Seer | ಮುರುಘಾಶ್ರೀ ವಿರುದ್ಧ ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ; ಆಡಿಯೊ ವೈರಲ್!

“1ನೇ ಆಪಾದಿತರು, ಲಿಂಗಾಯತ ಜಂಗಮ ಜನಾಂಗದವರಾಗಿದ್ದು, 1991 ರಿಂದ ಚಿತ್ರದುರ್ಗ ನಗರದ ಎಂ.ಕೆ.ಹಟ್ಟಿ ಬಳಿ ಇರುವ ಶ್ರೀ ಜಗದ್ಗುರು ಮುರುಘಾ ರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾಗಿರುತ್ತಾರೆ. ಸದರಿ ಆಪಾದಿತರ ಅಡಿಯಲ್ಲಿ 2ನೇ ಆಪಾದಿತರು ಕೆಲಸ ಮಾಡುತ್ತಿರುತ್ತಾರೆ. 4ನೇ ಆಪಾದಿತರು ೧ನೇ ಆಪಾದಿತರ ಆಪ್ತರಾಗಿದ್ದು, ಮುರುಘಾ ಮಠಕ್ಕೆ ಸಂಬಂಧಿಸಿದೆ. ಎಲ್ಲ ವ್ಯವಹಾರಗಳ ಮಾಹಿತಿ ಹೊಂದಿದವರಾಗಿರುತ್ತಾರೆ. ೧ನೇ ಆಪಾದಿತರು ತಾವು ಪೀಠಾಧ್ಯಕ್ಷರಾಗಿರುವ ಮುರುಘಾ ಮಠದ ಅಡಿಯಲ್ಲಿ ಅಕ್ಕಮಹಾದೇವಿ ವಸತಿ ನಿಲಯವನ್ನು ನಡೆಸಿಕೊಂಡು ಹೋಗುತ್ತಿದ್ದು, ಮಠವು ಸ್ಥಾಪಿಸಿದ ಮತ್ತು ನಡೆಸುತ್ತಿರುವ ಶಾಲಾ ಕಾಲೇಜುಗಳಲ್ಲಿ ಪ್ರವೇಶ ಪಡೆದು ಶಿಕ್ಷಣ ಪಡೆಯುತ್ತಿರುವ ಬಡ ಕುಟುಂಬದಿಂದ ಬಂದ ಮಕ್ಕಳಲ್ಲಿ ಅಗತ್ಯವಾಗಿರುವವರಿಗೆ ಉಚಿತ ವಸತಿ ನಿಲಯಗಳಲ್ಲಿ ಆಶ್ರಯ ನೀಡುವ ಸೌಲಭ್ಯವನ್ನು ಕೊಡುತ್ತಾ ಬಂದಿರುತ್ತಾರೆ. ನೊಂದ ಬಾಲಕಿ ಸಾಕ್ಷಿ-3 ರವರು ಬಡ ಕುಟುಂಬಕ್ಕೆ ಸೇರಿದ ಬಾಲಕಿಯಾಗಿದ್ದು, ಮುರುಘಾ ಮಠಕ್ಕೆ ಸೇರಿರುವ ಪ್ರಿಯದರ್ಶಿನಿ ಪ್ರೌಢಶಾಲೆಯಲ್ಲಿ 2021ನೇ ಸಾಲಿನಲ್ಲಿ 10ನೇ ತರಗತಿಗೆ ಪ್ರವೇಶ ಪಡೆದು ಅದೇ ವರ್ಷ ಮಠದ ಆವರಣದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದಲ್ಲಿ ಆಶ್ರಯ ಪಡೆದುಕೊಂಡಿರುತ್ತಾಳೆ. ಸದರಿ ವಸತಿ ನಿಲಯಕ್ಕೆ 2ನೇ ಆಪಾದಿತಳು ವಾರ್ಡನ್ ಎಂದು ಕೆಲಸ ಮಾಡುತ್ತಿದ್ದು, ಸಾಕ್ಷಿ-3 ರವರನ್ನು ಒಳಗೊಂಡಂತೆ ವಸತಿ ನಿಲಯದಲ್ಲಿರುವ ಎಲ್ಲ ಬಾಲಕಿಯರ ಸುರಕ್ಷತೆ ಮತ್ತು ಪೋಷಣೆ ಆರೋಪಿ 1 ಮತ್ತು 2 ರವರುಗಳು ಜವಾಬ್ದಾರರಾಗಿರುತ್ತಾರೆ.

ಸದರಿ ವಸತಿ ನಿಲಯದಲ್ಲಿರುವ ಮಕ್ಕಳ ಮತ್ತು ಕುಟುಂಬದವರ ಅನುಕಂಪ, ಗೌರವ ಮತ್ತು ವಿಶ್ವಾಸವನ್ನು ಗಳಿಸಿಕೊಂಡ ಆರೋಪಿತರು ಈ ರೀತಿಯ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ವಾರ್ಡನ್ ಆಗಿರುವ 2ನೇ ಆರೋಪಿಯ ಮೂಲಕ ಸಾಕ್ಷಿ-3 ಅವರನ್ನು 2021ರಲ್ಲಿ ಒಂದು ಬಾರಿ ಹಾಗೂ 2022ರಲ್ಲಿ ಇನ್ನೊಂದು ಬಾರಿ 2ನೇ ಆಪಾದಿತರು ಒಬ್ಬರೇ ಇರುತ್ತಿದ್ದ ಮಠದಲ್ಲಿರುವ ಬೆಡ್‌ರೂಂಗೆ ರಾತ್ರಿ ಸಮಯದಲ್ಲಿ ಪುಸಲಾಯಿಸಿ ಕರೆಸಿಕೊಂಡು ಸದರಿ ಸಾಕ್ಷಿದಾರರು ಅಪ್ರಾಪ್ತಳೆಂದು ತಿಳಿದಿದ್ದರೂ ಸಹ ಆಕೆಯ ಮನಸ್ಸಿಗೆ ವಿರುದ್ಧವಾಗಿ ಚಾಕೋಲೆಟ್ ರೂಪದಲ್ಲಿ ಮತ್ತುಬರುವ ವಸ್ತುವನ್ನು ತಿನ್ನಿಸಿ ಅವಳು ಅರಿವು ಕಳೆದುಕೊಂಡ ನಂತರ ಅವಳ ಮೇಲೆ ಲೈಂಗಿಕ ಬಲಾತ್ಕಾರವೆಸಗಿ ತಮ್ಮ ದೈಹಿಕ ಆಸೆಯನ್ನು ತೀರಿಸಿಕೊಂಡಿದ್ದಾರೆ. ಅವಳು ಎಚ್ಚರವಾದ ನಂತರ ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಬೆದರಿಸಿದ ಅಪರಾಧಗಳನ್ನು ಎಸಗಿದ್ದಾರೆ. ಸದರಿ 1ನೇ ಆಪಾದಿತರು ಮುರುಘಾ ಮಠದ ಪೀಠಾಧ್ಯಕ್ಷರಾಗಿ ತನ್ನ ಪೋಷಣೆಯಲ್ಲಿದ್ದ ಸಾಕ್ಷಿ-೩ ಅವರನ್ನು ಕರೆಯಿಸಿಕೊಂಡು ಲೈಂಗಿಕವಾಗಿ ಹಲವಾರು ಬಾರಿ ಬಳಸಿಕೊಂಡು ಧಾರ್ಮಿಕ ಕೇಂದ್ರವನ್ನು ದುರುಪಯೋಗಪಡಿಸಿಕೊಂಡಿದ್ದರಿಂದ ಲೈಂಗಿಕ ದೌರ್ಜನ್ಯದ ಸಾಕ್ಷಿಗಳನ್ನು ನಾಶಪಡಿಸಿ ಅಪರಾಧವೆಸಗಿದ್ದರಿಂದ, ಕಲಂ: 376(2)(), 376(DA), 376(3), 201, 202 506 ರೆ.ವಿ. 34 & 37 ಐಪಿಸಿ ಕಲಂ: 17. 5(ಎಲ್‌), 6 ಪೋಕ್ಸೋ ಕಾಯ್ದೆ 2012 ಮತ್ತು ಮತ್ತು Sec 3(f) & Sec 7 of Religious Institution Prevention of Misuse Act 1988 and Set 75 of The Juvenile Justice (Care and Protection of Children) Act 2015 ಅಡಿಯಲ್ಲಿ ಆರೋಪವನ್ನು ದಾಖಲಿಸಲಾಗಿದೆ.

2ನೇ ಆಪಾದಿತರು ೧ನೇ ಆಪಾದಿತರ ಅಧೀನದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ಆಗಿ ಸುಮಾರು 06 ವರ್ಷಗಳಿಂದ ಕೆಲಸ ಮಾಡುತ್ತಿರುತ್ತಾರೆ. ಸದರಿ ವಸತಿ ನಿಲಯದಲ್ಲಿ ವಾಸವಾಗಿರುವ ಬಾಲಕಿ ಹಾಗೂ ಹೆಣ್ಣುಮಕ್ಕಳನ್ನು ಪೋಷಣೆ ಮಾಡುವುದು ಇವರ ಕರ್ತವ್ಯವಾಗಿರುತ್ತದೆ.

2021ರಲ್ಲಿ ಸದರಿ ವಸತಿ ನಿಲಯಕ್ಕೆ ದಾಖಲುಗೊಂಡ 3ನೇ ಸಾಕ್ಷಿದಾರರನ್ನು ೧ನೇ ಆಪಾದಿತರ ಸೂಚನೆ ಮೇರೆಗೆ ಪುಸಲಾಯಿಸಿ ಮಠದಲ್ಲಿರುವ 1ನೇ ಆಪಾದಿತರು ಒಬ್ಬರೇ ಇರುವ ಬೆಡ್‌ರೂಂಗೆ 2021ರಲ್ಲಿ ಒಂದು ಬಾರಿ, 20೨2ರಲ್ಲಿ ಇನ್ನೊಂದು ಬಾರಿ ೩ನೇ ಸಾಕ್ಷಿದಾರರು ಅಪ್ರಾಪ್ತಳು ಎಂದು ತಿಳಿದಿದರೂ ಸಹ ೧ನೇ ಆಪಾದಿತರು ಅವರ ಅಕ್ರಮ ಲೈಂಗಿಕ ಚಟುವಟಿಕೆಗೆ ಬಳಸಿಕೊಳ್ಳಲು ಪುಸಲಾಯಿಸಿ ರಾತ್ರಿ ಸಮಯದಲ್ಲಿ ಕಳುಹಿಸಿಕೊಟ್ಟಿರುತ್ತಾರೆ. ಇದಲ್ಲದೇ 3ನೇ ಸಾಕ್ಷಿದಾರರು ಅಪ್ರಾಪ್ತಳೆಂದು ತಿಳಿದಿದ್ದರೂ ಸಹ 2021 ರಿಂದ 2022 ರವರೆಗೆ ಅವಾಚ್ಯ ಶಬ್ದಗಳಿಂದ ಬೈದಾಡಿ ಸ್ಕೇಲ್‌ನಿಂದ ಹೊಡೆದು ಮಾನಸಿಕ ಮತ್ತು ದೈಹಿಕವಾಗಿ ಹಲ್ಲೆ ಮಾಡಿ ಅಪರಾಧವೆಸಗಿರುತ್ತಾರೆ ಅಂತ ಕಲಂ: 376DA, 372, 366, 323, 504 ರೆ.ವಿ. 34 ಮತ್ತು 37 ಐಪಿಸಿ ಮತ್ತು ಕಲಂ: 6 ರೆ.ವಿ. 17 ಪೋಕ್ಸೋ ಕಾಯ್ದೆ 2012 ಮತ್ತು Sec 75 & 77 of The Juvenile Justice (Care and Protection of Children) Act 2015 ಅಡಿಯಲ್ಲಿ ಆರೋಪಣೆ ಹೊರಿಸಲಾಗಿದೆ” ಎಂದು ಡಿವೈಎಸ್‌ಪಿ ಸಹಿ ಮಾಡಿ ಲಿಖಿತ ಪ್ರತಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ | Murugha seer case | ಮುರುಘಾ ಮಠಕ್ಕೆ ಆಡಳಿತಾಧಿಕಾರಿ ಬಗ್ಗೆ ವರದಿ ನಂತರ ತೀರ್ಮಾನ: ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Assault Case: ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಟೀ ಶಾಪ್‌ ಯುವಕನಿಗೆ, ಮುಸ್ಲಿಂ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

VISTARANEWS.COM


on

Assault Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಅಂದಿದ್ದಕ್ಕೆ ಅನ್ಯ ಧರ್ಮೀಯ ಯುವಕರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರಿಂದ ಟೀ ಶಾಪ್ ಯುವಕನ ತಲೆಗೆ ಗಂಭೀರ ಗಾಯವಾಗಿದೆ.

ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಮುಸ್ಲಿಂ ಯುವಕರು, ಟೀ ಶಾಪ್‌ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೆಟ್ಟ ಪದ ಬಳಸಿದಕ್ಕೆ ಟೀ ಶಾಪ್ ಯುವಕ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರು ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ನಂತರ ಬಿಯರ್ ಬಾಟಲಿನಿಂದ ಟೀ ಶಾಪ್ ಯುವಕನ ಮೇಲೆ ಅನ್ಯಧರ್ಮೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಗಲಾಟೆಯಲ್ಲಿ ಟೀ ಶಾಪ್‌ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಅನ್ಯಧರ್ಮಿಯ ಯುವಕರಿಗೂ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

ಅವಾಚ್ಯ ಪದಗಳ ಬಳಕೆ ಮಾಡಿ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಲ್ಲದೆ ಆಸ್ಪತ್ರೆಯಲ್ಲಿ ಮುಸ್ಲಿಂ ಯುವಕರು ಮತ್ತೆ ಧಮ್ಕಿ‌ ಹಾಕಿದ್ದಾರೆ. ಹಲ್ಲೆ ಮಾಡುವ ವೇಳೆ ತಡೆಯಲು ಬಂದ ಸ್ಥಳೀಯ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ. ಗಲಾಟೆ ನಂತರ ಎರಡು ಕಡೆಯಿಂದ ಕಾಟನ್ ಪೇಟೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಪೊಲೀಸರು ಸದ್ಯ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

Murder case in Belgavi

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಕರ್ನಾಟಕ

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Srinivasa Prasad: ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Srinivasa Prasad
Koo

ಬೆಂಗಳೂರು: ಚಾಮರಾಜನಗರ ಸಂಸದ, ರಾಜ್ಯದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್‌ (76) (V Srinivasa Prasad) ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದು, ಬೆಂಗಳೂರಿನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ (Manipal Hospital) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯ, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಶ್ರೀನಿವಾಸ ಪ್ರಸಾದ್‌ ಅವರು ಹಲವು ದಿನಗಳಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧಿಕ ರಕ್ತದೊತ್ತಡ, ಶುಗರ್‌ ಪ್ರಮಾಣದಲ್ಲಿ ಶನಿವಾರ ಭಾರಿ ಏರುಪೇರಾದ ಕಾರಣ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇದೇ ಕಾರಣಕ್ಕಾಗಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸುದ್ದಿ ತಿಳಿದ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ನಿವೃತ್ತಿ

2019ರಲ್ಲಿ ಚಾಮರಾಜನಗರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ. ಶ್ರೀನಿವಾಸ ಪ್ರಸಾದ್‌, ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಆದರೆ, ಕಳೆದ ಮಾರ್ಚ್‌ನಲ್ಲಿಯೇ ರಾಜಕೀಯ ನಿವೃತ್ತಿ ಘೋಷಿಸಿದ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಅಲ್ಲದೆ, ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎಸ್.‌ ಬಾಲರಾಜ್‌ ಅವರ ಪರವಾಗಿಯೂ ಪ್ರಚಾರದಲ್ಲಿ ಭಾಗವಹಿಸಿರಲಿಲ್ಲ. ಇನ್ನು, ಅವರ ಬೆಂಬಲ ಪಡೆಯಲು ಕಾಂಗ್ರೆಸ್‌ ತಂತ್ರ ಕೂಡ ಹೆಣೆದಿತ್ತು.

ಕೆಲ ದಿನಗಳ ಹಿಂದಷ್ಟೇ ಮೈಸೂರಿನಲ್ಲಿ ವಿ. ಶ್ರೀನಿವಾಸ ಪ್ರಸಾದ್‌ ಅವರ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿ, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲವನ್ನು ಸೆಳೆಯುವ ಪ್ರಯತ್ನ ಮಾಡಿದ್ದರು. ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ಮನೆಗೆ ತೆರಳಿದ ಸಿದ್ದರಾಮಯ್ಯ ಅವರು ಕೆಲ ಹೊತ್ತು ಚರ್ಚಿಸಿದ್ದರು.

ಕಳೆದ ಕೆಲವು ವರ್ಷಗಳಿಂದ ಸಿದ್ದರಾಮಯ್ಯ ಅವರಿಂದ ಶ್ರೀನಿವಾಸ ಪ್ರಸಾದ್‌ ಅವರು ದೂರವೇ ಉಳಿದಿದ್ದರು. ಆದರೆ, ಏಕಾಏಕಿ ಸಿದ್ದರಾಮಯ್ಯ ಅವರೇ ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿ ಮಾಡಿದ್ದರು. ಭೇಟಿಯ ಬೆನ್ನಲ್ಲೇ, “ನನಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಹಾಗಾಗಿ, ನಾನು ಮೋದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಚಾಮರಾಜನಗರದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ ಇದೆ” ಎಂದು ಹೇಳಿದ್ದರು.

ಇದನ್ನೂ ಓದಿ: Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Continue Reading

ಕರ್ನಾಟಕ

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Koppala News: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 16 ಜಾನುವಾರುಗಳನ್ನು ರಕ್ಷಣೆ ಮಾಡಿ, 9 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿ ಜರುಗಿದೆ.

VISTARANEWS.COM


on

Illegal Cattle Trafficking 9 Accused Arrested in gangavathi
Koo

ಗಂಗಾವತಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ (Illegal Cattle Trafficking) ಖಚಿತ ಮಾಹಿತಿ ಮೇಗೆ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 16 ಜಾನುವಾರುಗಳನ್ನು ರಕ್ಷಣೆ ಮಾಡಿ, 9 ಆರೋಪಿಗಳನ್ನು ಬಂಧಿಸಿರುವ ಘಟನೆ (Koppala News) ಜರುಗಿದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಘಟನೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಲೂರು ಮಂಡಲದ ಸೀನಹೊತೂರಿನ ಚಾಲಕ ರಘುವೀರ್, ತುಮಿಳುಬೀಡು ಗ್ರಾಮದ ಶೇಖಣ್ಣ ತಹಸೀಲ್ದಾರ್, ಚಂದ್ರಣ್ಣ ತಹಸೀಲ್ದಾರ್, ರಾಮಾಂಜನೇಯ, ಹಂಪಾ ಗ್ರಾಮದ ಆಂಜನೇಯ, ಪೆದ್ದಹೂತೂರಿನ ಹುಚ್ಚೀರಪ್ಪ, ಮೈನಾಪುರದ ವೈಕುಂಠ, ಟಿ. ಹುಚೀರಪ್ಪ ಹಾಗೂ ರಾಯಪ್ಪ ಕೊಡೇಕಲ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ವಿವರ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಖರೀದಿಸಿದ ಆರೋಪಿಗಳು, ಒಂದೇ ವಾಹನದಲ್ಲಿ ಇಕ್ಕಟ್ಟಾದ ಜಾಗದಲ್ಲಿ ಜಾನುವಾರುಗಳಿಗೆ ಕೂರಲು, ನಿಲ್ಲಲು ಅವಕಾಶವಿಲ್ಲದಂತೆ ಸಾಗಿಸಲಾಗುತ್ತಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿ ದಾಳಿ ಮಾಡಿದ ಪೊಲೀಸರು, ವಾಹನದಲ್ಲಿ ಪರಿಶೀಲನೆ ಮಾಡಲಾಗಿ 16 ಜಾನುವಾರುಗಳನ್ನು ಅಕ್ರಮವಾಗಿ ಅಸುರಕ್ಷಿತವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

ಜಾನುವಾರುಗಳನ್ನು ಖರೀದಿ ಮಾಡಿದ್ದಕ್ಕೆ ಅಥವಾ ಸಾಗಾಣಿಕೆ ಮಾಡುತ್ತಿರುವುದಕ್ಕೆ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಅನುಮಾನಗೊಂಡ ಪೊಲೀಸರು, ಜಾನುವಾರುಗಳನ್ನು ರಕ್ಷಣೆ ಮಾಡಿ, ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Continue Reading

ಕೊಪ್ಪಳ

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Lok Sabha Election 2024: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುವುದನ್ನು ಜನರ ಮುಂದಿಡಲಿ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

VISTARANEWS.COM


on

Congress leader B K Hariprasad latest statement In Gangavathi
Koo

ಗಂಗಾವತಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುವುದನ್ನು ಜನರ ಮುಂದಿಡಲಿ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ (Lok Sabha Election 2024) ಹೇಳಿದ್ದಾರೆ. ನಗರದ ಆನೆಗೊಂದಿ ರಸ್ತೆಯಲ್ಲಿರುವ ಮಾಜಿ ಸಂಸದ ಎಚ್.ಜಿ. ರಾಮುಲು ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

60 ವರ್ಷದಲ್ಲಿ ಕಾಂಗ್ರೆಸ್‌ನವರು ಏನು ಮಾಡಿದ್ದಾರೆ ಎಂದು ಮೋದಿಯಾದಿಯಾಗಿ ಬಿಜೆಪಿಗರು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡುತ್ತಾರೆ. ಆಯ್ತು ನಮಗೆ ಗಣಿತದ ಲೆಕ್ಕಾಚಾರ ಬರಲ್ಲ ಎಂದೇ ಭಾವಿಸಿ. ಆದರೆ ಕಳೆದ ಹತ್ತು ವರ್ಷದಲ್ಲಿ ನೀವೇನು ಮಾಡಿದ್ದೀರಿ ಎಂಬುವುದನ್ನು ಜನರ ಮುಂದಿಡಬೇಕಲ್ಲ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಚುನಾವಣೆ ಸಂದರ್ಭದಲ್ಲಿ ತಾವು ನೀಡಿದ ಆಡಳಿತ, ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಕು. ಆದರೆ ಬಿಜೆಪಿಗರಿಗೆ ಇದ್ಯಾವುದೂ ಬೇಡ. ಕೇವಲ ಧರ್ಮ, ಜಾತಿ ಆಧಾರದ ಮೇಲೆ ಸಮಾಜವನ್ನು ಇಬ್ಭಾಗವಾಗಿಸುವ ಹೇಳಿಕೆಗಳಿಂದ ಚುನಾವಣೆಗೆ ಹೋಗುತ್ತಾರೆ. ಜನರಲ್ಲಿ ಕೋಮು ಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಚುನಾವಣೆಯ ಸಂದರ್ಭದಲ್ಲಿ ಮಾಡಿದ ಕಾರ್ಯಸಾಧನೆ ಏನು, ಮುಂದಿನ ಅವಧಿಯಲ್ಲಿ ಏನು ಮಾಡುತ್ತೇವೆ ಎಂಬುವುದನ್ನು ಪ್ರಣಾಳಿಕೆ ಮೂಲಕ ಜನರಿಗೆ ಹೇಳಬೇಕು ಎಂದು ಅವರು ತಿಳಿಸಿದರು.

ಕಳೆದ ಹತ್ತು ವರ್ಷದಲ್ಲಿ ಈ ದೇಶಕ್ಕೆ ಉಪಯುಕ್ತವಾಗುವ ಒಂದೇ ಒಂದು ಸ್ಪಷ್ಟ ಯೋಜನೆ ಜಾರಿಗೆ ತರಲು ಸಾಧ್ಯವಾಗಿಲ್ಲ ಎಂದು ಟೀಕಿಸಿದ ಅವರು, ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆ ಮೂಲಕ ದೇಶದುದ್ದಗಲಕ್ಕೂ ಇರುವ ಸಮಸ್ಯೆಗಳನ್ನು ಅರಿತು ಅವುಗಳ ಪರಿಹಾರಕ್ಕಾಗಿ ಪ್ರಣಾಳಿಕೆಯನ್ನು ತಯಾರಿಸಿದ್ದಾರೆ. ಆದರೆ ಬಿಜೆಪಿಯ ಪ್ರಣಾಳಿಕೆಯಲ್ಲಿ ಏನೂ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

ಈ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕ ಎಚ್.ಆರ್. ಶ್ರೀನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Viral News
ವೈರಲ್ ನ್ಯೂಸ್38 seconds ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ4 mins ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Srinivasa Prasad
ಕರ್ನಾಟಕ8 mins ago

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Gold Seized
ಕ್ರೈಂ17 mins ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ29 mins ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ30 mins ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ31 mins ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Kalaburagi Lok Sabha Constituency Congress candidate Radhakrishna Doddamani election campaign
ಯಾದಗಿರಿ35 mins ago

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Narendra Modi
ಕರ್ನಾಟಕ48 mins ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Namma Metro
ಬೆಂಗಳೂರು51 mins ago

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20243 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ8 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌