Site icon Vistara News

Attack on women : ಕುರಿಗಾಹಿ ಮಹಿಳೆಯರ ಮೇಲೆ ನಾಲ್ವರು ಪುಂಡರಿಂದ ಆಕ್ರಮಣ, ಜಾತಿ ನಿಂದನೆ ಆರೋಪ

Attack on woman

#image_title

ಕೋಲಾರ: ಪುಂಡ ಯುವಕರ ತಂಡವೊಂದು ಕುರಿಗಾಹಿ ಮಹಿಳೆ ಮೇಲೆ ಗಂಭೀರ ಹಲ್ಲೆ (Attack on women) ನಡೆಸಿದ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ಸಂಭವಿಸಿದೆ. ಮುಸ್ಲಿಂ ಯುವಕರ ತಂಡವೊಂದು ಮಹಿಳೆಯರ ಮೇಲೆ ಆಕ್ರಮಣ ಮಾಡಿದ್ದು, ಜಾತಿನಿಂದನೆಯನ್ನೂ ನಡೆಸಿದೆ ಎಂದು ಆರೋಪಿಸಲಾಗಿದೆ. ಜಾತಿ ನಿಂದನೆ ಮತ್ತು ಹಲ್ಲೆ ಸಂಬಂಧ ಪ್ರಕರಣ ದಾಖಲಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗೌನಿಪಲ್ಲಿ ವ್ಯಾಪ್ತಿಯ ಅಡ್ಡಗಲ್ ಗ್ರಾಮದ ನಾಲ್ಕು ಮಹಿಳೆಯರು ಕುರಿ ಮೇಯಿಸುವ ವೇಳೆ ಅಡ್ಡಗಲ್‌ ಗ್ರಾಮದ ಮುಸ್ಲಿಮ್‌ ಯುವಕರು ದಾಳಿ ಮಾಡಿದ್ದಾರೆ.

ಸರ್ಕಾರಿ ಜಮೀನಿನಲ್ಲಿ ಕುರಿ ಮೇಯಿಸುವ ವೇಳೆ ಉದ್ದೇಶಪೂರ್ವಕವಾಗಿ ಮುಸ್ಲಿಂ ಯುವಕರು ತಮ್ಮ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾಗಿ ಗಾಯಾಳುಗಳು ಆರೋಪ ಮಾಡಿದ್ದಾರೆ. ಅಡ್ಡಗಲ್ ಗ್ರಾಮಕ್ಕೆ ಸೇರಿದ ಅಲಿ ಮತ್ತು ಇತರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯ ಹಿಂದಿನ ನಿಜ ಕಾರಣ ತಿಳಿದುಬಂದಿಲ್ಲ. ಹಲ್ಲೆ ಮಾಡಿದ ಅಲಿ ಮತ್ತು ಇತರರ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಜೈಲಿಗೆ ಅಟ್ಟಿದ ಪೊಲೀಸರು

ಶಿರಸಿ: ಇಲ್ಲಿನ ನೀಲೆಕಣಿ ಅರಣ್ಯ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿದೆ. ನಗರದ ಹಾಲೋ ಹೊಂಡ ಬಡಾವಣೆಯ ಸೋಹನ ಭಂಡಾರಿ (21) ಬಂಧಿತ ಆರೋಪಿ ಆಗಿದ್ದಾನೆ.

ಶಿರಸಿ ನಗರದ ಸುತ್ತಮುತ್ತ ಈತ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ ಖಚಿತ ಮಾಹಿತಿ ಮೇರೆಗೆ ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತನಿಂದ 333 ಗ್ರಾಂ ಗಾಂಜಾ ಹಾಗೂ 550 ನಗದು ವಶಕ್ಕೆ ಪಡೆಯಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಕುಡಿದ ಅಮಲಿನಲ್ಲಿ ಕಾರು ಚಾಲನೆ

ಬೆಂಗಳೂರಿನ ಬಾಳೆಕುಂದ್ರಿ ಸರ್ಕಲ್ ಬಳಿ ಅತಿ ವೇಗದ ಚಾಲನೆಯಿಂದಾಗಿ ಕಾರು ಅಪಘಾತ ಸಂಭವಿಸಿದೆ. ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಕಾರಲ್ಲಿ ಮೂರು ಯುವಕರು ಹಾಗೂ ಒಬ್ಬ ಮಹಿಳೆ ಇದ್ದರು ಎಂದು ತಿಳಿದು ಬಂದಿದೆ.

ಕಾರನ್ನು ಅತಿ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಅಂಗಡಿ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಏರ್ ಬ್ಯಾಗ್ ಓಪನ್ ಇದ್ದ ಕಾರಣ ಯಾವುದೇ ಅನಾಹುತವಾಗಿಲ್ಲ. ಪಾರ್ಟಿ ಮುಗಿಸಿ ವಾಪಸ್‌ ಆಗುವಾಗ ಈ ಘಟನೆ ನಡೆದಿದ್ದು, ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ Murder Case : ತನ್ನ ಜತೆ ಬರಲು ಒಪ್ಪದ 8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಂದ ಪಾಪಿ ತಂದೆ

Exit mobile version