attempt murder case Youth clash in Nanjangud in MysuruAttempt Murder Case: ಜೈ ಶ್ರೀ ರಾಮ್‌ ಅನ್ನಂಗಿಲ್ಲ, ಈಗಿರೋದು ನಮ್ಮ ಸರ್ಕಾರವೆಂದು ಚಾಕು ಇರಿದ ಗುಂಪು! - Vistara News

ಕರ್ನಾಟಕ

Attempt Murder Case: ಜೈ ಶ್ರೀ ರಾಮ್‌ ಅನ್ನಂಗಿಲ್ಲ, ಈಗಿರೋದು ನಮ್ಮ ಸರ್ಕಾರವೆಂದು ಚಾಕು ಇರಿದ ಗುಂಪು!

ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಾರೆಂಬ ಆರೋಪದ ಮೇರೆಗೆ ಅನ್ಯಕೋಮಿನ ಯುವಕರ ಗುಂಪು, ಯುವಕನಿಗೆ ಚಾಕು ಇರಿದು ಹಲ್ಲೆ (Attempt Murder Case) ನಡೆಸಿದ್ದಾರೆ.

VISTARANEWS.COM


on

Attempt Murder Case
ಗಾಯಾಳು ಪ್ರಸಾದ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಧರ್ಮ ದಂಗಲ್ ಶುರುವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾಪದ ಬೆನ್ನಲ್ಲೇ ಕೋಮು ಸೌಹಾರ್ದತೆ ಕಾಪಾಡುವುದು ಸವಾಲಾಗಿ ಪರಿಣಮಿಸಿದೆ. ಈ ಹೊತ್ತಿನಲ್ಲಿ ಮೈಸೂರಿನ ನಂಜನಗೂಡಿನಲ್ಲಿ ಗಲಾಟೆ ನಡೆದಿದ್ದು, ಸೂಕ್ಷ್ಮ ಸ್ವರೂಪ ಪಡೆದುಕೊಳ್ಳುತ್ತಿದೆ. ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ಅನ್ಯಕೋಮಿನ ಯುವಕರ ಗುಂಪು, ಹಿಂದು ಯುವಕನಿಗೆ ಚಾಕು ಇರಿದಿರುವ ಘಟನೆ ಭಾನುವಾರ ನಡೆದಿದೆ. ಪ್ರಸಾದ್ (22) ಚಾಕು ಇರಿತಕ್ಕೊಳಗಾದವರು. ಇಲ್ಲಿ ಜೈ ಶ್ರೀರಾಮ್‌ ಎಂಬ ಘೋಷಣೆ ಬಗ್ಗೆ ಅಪಸ್ವರ ಕೇಳಿಬಂದಿದೆ ಎನ್ನಲಾಗಿದ್ದು, ಅನ್ಯ ಕೋಮಿನ ಯುವಕರು ಈಗ ನಮ್ಮ ಸರ್ಕಾರ ಇದೆ. ನೀವು ಹೀಗೆ ಹೊರಗೆಲ್ಲ ಯಾವ ಆಚರಣೆಯನ್ನೂ ಮಾಡಕೂಡದು ಎಂದು ಅವಾಜ್‌ ಹಾಕಿರುವ ಆರೋಪವೂ ಕೇಳಿಬಂದಿದೆ.

ನೀಲಕಂಠನಗರದ ಯುವಕರ ಗುಂಪೊಂದು ಅಂಗಡಿ ಬಳಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಿಡಿಗೇಡಿಗಳ ಗುಂಪು, ಇದು ನಮ್ಮ ಸರ್ಕಾರ. ನೀವು ಹಿಂದುಗಳು ಏನೂ ಮಾಡಲು ಆಗುವುದಿಲ್ಲ ಎಂದು ತಗಾದೆ ತೆಗೆದಿದ್ದಾರೆ. ಇನ್ಮುಂದೆ ನೀವೆಲ್ಲ ರೋಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸುವಂತಿಲ್ಲ. ಎಲ್ಲ ನಿಮ್ಮ ಮನೆಗಳಲ್ಲಿ ಆಚರಿಸಬೇಕು ಅಷ್ಟೇ ಎಂದು ಅವಾಜ್‌ ಹಾಕಿದ್ದಾರೆ. ಈ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಅಲ್ಲಿಗೆ ಬಜ್ಜಿ ತಿನ್ನಲು ಬಂದ ಪ್ರಸಾದ್‌ಗೆ, ಇಲ್ಲು ಅಲಿಯಾಸ್ ಇಸ್ಮಾಯಿಲ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ.

Attempt Murder Case:
ನಂಜನಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ ಹಿಂದು ಯುವಕರ ಗುಂಪು

ಚಾಕು ಇರಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರಸಾದ್ ಘಟನೆ ಸಂಬಂಧ ಮಾತನಾಡಿದ್ದು, ಭಾನುವಾರ ರಾತ್ರಿ ಯಾರದ್ದೋ ಹುಟ್ಟು ಹಬ್ಬದ ಪಾರ್ಟಿ ನಡೆಯುತ್ತಿತ್ತು. ಈ ವೇಳೆ ಏಳೆಂಟು ಜನರ ಗುಂಪು ಗಲಾಟೆ ಮಾಡುತ್ತಿತ್ತು. ಬಜ್ಜಿ ತಿನ್ನಲು ಹೋಗಿದ್ದ ನನ್ನನ್ನು ಎಳೆದುಕೊಂಡು ಹೊಡೆದರು. ಸಲ್ಮಾನ್ ಎಂಬಾತ ಕಬ್ಬಿಣದ ಹಿಡಿಯಿಂದ ಹಣೆಗೆ ಬಲವಾಗಿ ಹೊಡೆದ. ಇಸ್ಮಾಯಿಲ್ ಎಂಬಾತ ಚಾಕುವಿನಿಂದ ಇರಿದು ಬಿಟ್ಟ ಎಂದು ಘಟನೆಯನ್ನು ವಿವರಿಸಿದರು. ಗಲಾಟೆ ವೇಳೆ ಯಾರೋ ಭಾರತ್ ಮಾತಾಕಿ‌ ಜೈ ಎಂದು ಕೂಗಿದರು, ಆದರೆ ನಾನು ಕೂಗಲಿಲ್ಲ ಎಂದು ಹೇಳಿದ್ದಾರೆ. ಈ ನಡುವೆ ಜೈ ಶ್ರೀರಾಮ್‌ ಘೋಷಣೆಯನ್ನೂ ಕೂಗಲಾಗಿದೆ ಎಂದು ಹೇಳಲಾಗುತ್ತಿದೆ.

ಚಾಕು ಇರಿತಕ್ಕೊಳಗಾದ ಪ್ರಸಾದ್‌ಗೆ ನಂಜನಗೂಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಮೈಸೂರಿನ‌ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ವಿರುದ್ಧ ಎಫ್‌ಐಆರ್‌ ಹಾಕಲಾಗಿದೆ.

ಇದನ್ನೂ ಓದಿ: Murder Case: ಟೋಲ್‌ ವಿಚಾರಕ್ಕೆ ಕಿರಿಕ್‌; ಹಾಕಿ ಸ್ಟಿಕ್‌ನಿಂದ ಬಡಿದು ಕೊಂದೇಬಿಟ್ಟರು ದುರುಳರು

ಏರಿಯಾದಲ್ಲಿ ಹವಾ ಮೆಂಟೇನ್‌ ಗೀಳು

ನಂಜನಗೂಡು ಗಲಾಟೆ ವಿಚಾರಕ್ಕೆ ಟ್ವಿಸ್ಟ್ ಸಿಕ್ಕಿದೆ. ಏರಿಯಾದಲ್ಲಿ ಹವಾ ಸೃಷ್ಟಿಸಲು ಆರೋಪಿಗಳು ಕತ್ತಿ, ತಲವಾರ್ ಹಿಡಿದು ಓಡಾಟ ನಡೆಸುತ್ತಿರುವುದು ತಿಳಿದು ಬಂದಿದೆ. ನೀಲಕಂಠನಗರ ಗಲಾಟೆ ಆರೋಪಿಗಳು ರೀಲ್ಸ್ ಮಾಡಿರುವ ವಿಡಿಯೊ ಕೂಡ ವೈರಲ್ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Weather Report: ಬೆಂಗಳೂರಿನ ಜನ ಮಳೆಗಾಗಿ ಮೇವರೆಗೆ ಕಾಯಬೇಕು!

Weather Alert: ಒಂದೆಡೆ ಕುಡಿಯಿವ ನೀರಿಲ್ಲ, ಮತ್ತೊಂದೆಡೆ ಬಿಸಿಲಿನ ತೀವ್ರತೆ ಜನರನ್ನು ಕಂಗೆಡುವಂತೆ ಮಾಡಿದೆ. ಬಿಸಿಲಿನ ತೀವ್ರತೆ ನೋಡಿ ಬೇಗ ಮಳೆಯಾಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ. ರಾಜ್ಯದಲ್ಲಿ ಶೀಘ್ರದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

By

Rain in Karnataka
Koo

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟ ಕರ್ನಾಟಕದ (karnataka) ಜನತೆ ಇಂದು ಮಳೆಯಾಗಬಹುದೋ (rain), ನಾಳೆ ಮಳೆ ಸುರಿಯಬಹುದೋ (Rain in karnataka) ಎನ್ನುವ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಆದರೆ ರಾಜ್ಯದ ಅಲ್ಲಿ ಇಲ್ಲಿ ಸಣ್ಣ ಮಳೆ ಸುರಿದು ಕೊಂಚ ನಿರೀಕ್ಷೆ ಮೂಡಿಸಿದರೂ ಬಳಿಕ ತೀವ್ರ ಬಿಸಿಲು ಮತ್ತಷ್ಟು ಧಗೆಯನ್ನು ಹೆಚ್ಚು ಮಾಡಿದೆ.

ಭಾರತದ (india) ಸಿಲಿಕಾನ್ ಸಿಟಿ (Silicon City) ಬೆಂಗಳೂರಿನಲ್ಲಿ (bengaluru) ಕಳೆದ ಮೂರು ತಿಂಗಳಿನಿಂದ ತೀವ್ರ ಬಿಸಿಲು ಜನರನ್ನು ಕಂಗೆಡಿಸಿದೆ. ಏಪ್ರಿಲ್ ನಲ್ಲಿ (april) ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ಭಾರತೀಯ ಹವಾಮಾನ ಇಲಾಖೆಯು (IMD) ಏಪ್ರಿಲ್‌ನಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಏಪ್ರಿಲ್ ತಿಂಗಳಲ್ಲಿ ಯಾವುದೇ ಮಳೆಯಾಗುವುದಿಲ್ಲ (Weather Report ಎಂದು ಹೇಳಿದೆ.

ಬೆಂಗಳೂರಿನಲ್ಲಿ ಶುಷ್ಕ ಸ್ಪೆಲ್‌ಗಳು ಸುಮಾರು 100- 120 ದಿನಗಳವರೆಗೆ ಇರುತ್ತದೆ. ಆದರೆ ಇದು ಸಾಮಾನ್ಯಕ್ಕಿಂತ ಹೆಚ್ಚು ದೀರ್ಘವಾಗಿದೆ. ಆರಂಭದಲ್ಲಿ ಭಾರತೀಯ ಹವಾಮಾನ ಇಲಾಖೆಯು ವಾರದೊಳಗೆ ಬೆಂಗಳೂರಿಗೆ ಮಳೆಯಾಗುವ ಮುನ್ಸೂಚನೆ ನೀಡಿತು. ಆದರೆ ಇತ್ತೀಚಿನ ವರದಿ ವರದಿ ಪ್ರಕಾರ ತೀವ್ರವಾದ ಶಾಖದ ಕಾರಣದಿಂದ ಶೀಘ್ರದಲ್ಲಿ ಮಳೆಯಾಗುವುದು ಸಾಧ್ಯವಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Dubai Rain: ಭಾರತೀಯ ಕುಸ್ತಿಪಟುಗಳ ಪ್ಯಾರಿಸ್​ ಒಲಿಂಪಿಕ್ಸ್​ ಕನಸಿಗೆ ತಣ್ಣೀರೆರಚಿದ ದುಬೈ ಮಳೆ

ಮುಂದಿನ 10 ದಿನ ಮಳೆಯಿಲ್ಲ

ಘಟ್ಟ ಪ್ರದೇಶಗಳನ್ನು ಹೊರತುಪಡಿಸಿ ಮುಂದಿನ 10 ದಿನ ಬೆಂಗಳೂರು ಸೇರಿ ಕರ್ನಾಟಕದ ಯಾವುದೇ ಪ್ರದೇಶಗಳಲ್ಲಿ ಮಳೆಯಾಗುವುದಿಲ್ಲ ಎಂದು ECMWF ಮತ್ತು GFS ಸೂಚಿಸುತ್ತದೆ.

ಏಪ್ರಿಲ್‌ನಲ್ಲಿ ನಿರೀಕ್ಷಿತ ತುಂತುರು ಮಳೆಯಾಗುವ ಸಂಭವ ಇದೆ. ಕೆಲವು ಪ್ರದೇಶಗಳಲ್ಲಿ ಮಳೆ ಕಾಣಿಸಿಕೊಳ್ಳಬಹುದು, ಇನ್ನು ಕೆಲವು ಪ್ರದೇಶಗಳಲ್ಲಿ ಇಲ್ಲದೇ ಇರಬಹುದು.


ಮೇಯಲ್ಲಿ ಮಳೆ ಸಾಧ್ಯತೆ

ಮೇ ತಿಂಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇದು ಬಿಸಿಲಿನ ತೀವ್ರತೆಯಿಂದ ಉರಿಯುತ್ತಿರುವ ಧರೆಯನ್ನು ಕೊಂಚ ತಂಪಾಗಿಸುತ್ತದೆ.

ಚಂಡಮಾರುತ ಎಚ್ಚರಿಕೆ

ಮೇ ತಿಂಗಳಲ್ಲಿ ಚಂಡಮಾರುತ ಕಾಣಿಸಿಕೊಳ್ಳುವ ಎಚ್ಚರಿಕೆ ನೀಡಲಾಗಿದೆ. ಮುಂದಿನ ವಾರದಲ್ಲಿ ಭಾಗಶಃ ಮೋಡ ಮತ್ತು ಬಹುತೇಕ ಸ್ಪಷ್ಟವಾದ ಆಕಾಶ ಕಾಣಿಸಲಿದೆ. ಏಪ್ರಿಲ್‌ನಲ್ಲಿ 21ರಿಂದ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.

ಟೈಮಂಡ್‌ಡೇಟ್ ಮುನ್ಸೂಚನೆ ಪ್ರಕಾರ ಏಪ್ರಿಲ್ 30ರಂದು ಶೇ. 55ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, 6.5 ಮಿಮೀಗಿಂತ ಹೆಚ್ಚಿನ ಮಳೆ ಬೀಳುವ ನಿರೀಕ್ಷೆಯಿದೆ.


ದುಬೈಯಲ್ಲಿ ಭಾರೀ ಮಳೆ

ಸಾಮಾನ್ಯವಾಗಿ ಒಣ ಹವಾಮಾನ ಮತ್ತು ಸುಡುವ ತಾಪಮಾನವನ್ನು ಹೊಂದಿರುವ ಒಮಾನ್‌ , ದುಬೈ ಬಹ್ರೇನ್‌ ರಾಷ್ಟ್ರಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಠಾತ್‌ ಪ್ರವಾಹ ಉಂಟಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಅನಿರೀಕ್ಷಿತವಾದ ಜಲಧಾರೆ ಮರುಭೂಮಿ ನಗರವನ್ನು ಸ್ತಬ್ಧಗೊಳಿಸಿದೆ. ಮಾತ್ರವಲ್ಲದೆ, ಹವಾಮಾನ ವೈಪರೀತ್ಯದ ಹೆಚ್ಚು ಸ್ಪಷ್ಟವಾದ ಪ್ರಭಾವವನ್ನು ತೋರಿಸಿ ಕಳವಳವನ್ನು ಹುಟ್ಟುಹಾಕಿದೆ.

ಆಕಸ್ಮಿಕ ಚಂಡಮಾರುತದ ಪ್ರಭಾವ ದುಬೈನ ಆಚೆಗೂ ವಿಸ್ತರಿಸಿದೆ. ಸಂಪೂರ್ಣ ಯುಎಇ ಮತ್ತು ನೆರೆಯ ಬಹ್ರೇನ್ ಪ್ರವಾಹ ಮತ್ತು ಅವ್ಯವಸ್ಥೆಯನ್ನು ಅನುಭವಿಸುತ್ತಿದೆ. ಎಮಿರೇಟ್ಸ್‌ನಾದ್ಯಂತ ಶಾಲೆಗಳನ್ನು ಮುಚ್ಚಲಾಗಿದೆ. ಆಲಿಕಲ್ಲು ಮಳೆ ಸುರಿದಿದೆ. ಸರ್ಕಾರಿ ನೌಕರರಿಗೆ ವರ್ಕ್‌ ಫ್ರಂ ಹೋಮ್‌ ಮಾಡಲು ಕೇಳಿಕೊಳ್ಳಲಾಗಿದೆ. ಚಂಡಮಾರುತದಿಂದಾಗಿ ಬಹ್ರೇನ್ ಕೂಡ ಪ್ರವಾಹವನ್ನು ಅನುಭವಿಸಿದೆ.

Continue Reading

ತುಮಕೂರು

Lok Sabha Election 2024: ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ನನ್ನನ್ನು ಬೆಂಬಲಿಸಿ: ವಿ. ಸೋಮಣ್ಣ

Lok Sabha Election 2024: ಕೊರಟಗೆರೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ವಿ. ಸೋಮಣ್ಣ ಚುನಾವಣಾ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು.

VISTARANEWS.COM


on

Tumkur Lok Sabha constituency BJP candidate Somanna election campaign in various places of Koratagare
Koo

ಕೊರಟಗೆರೆ: ಒಂದು ವರ್ಷದಲ್ಲಿ ಕೊರಟಗೆರೆ, ಮಧುಗಿರಿ ಮಧ್ಯದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಸ್ಥಾಪನೆ ಮಾಡಲು ನನಗೆ ಈ ಬರಿ ಆಶೀರ್ವಾದ ಮಾಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ವಿ. ಸೋಮಣ್ಣ ಮನವಿ (Lok Sabha Election 2024) ಮಾಡಿದರು.

ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸರಿಸಾಟಿ ಯಾರು ಇಲ್ಲ. ಮತ್ತೆ ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

ಬೆಂಗಳೂರಿನ ಗೋವಿಂದರಾಜ ನಗರದಂತೆ ತುಮಕೂರು ಜಿಲ್ಲೆಯ ಎಂಟು ತಾಲೂಕುಗಳನ್ನು ಅಭಿವೃದ್ಧಿ ಮಾಡಲು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ರಾಷ್ಟ್ರಕ್ಕೆ ಮೂರನೇ ಬಾರಿ ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಮಾಜಿ ಐಎಎಸ್ ಅಧಿಕಾರಿ, ಬಿಜೆಪಿ ಮುಖಂಡ ಅನಿಲ್‌ಕುಮಾರ್, ಮಾಜಿ ಶಾಸಕ ಪಿ.ಆರ್‌. ಸುಧಾಕರ್‌ ಲಾಲ್‌, ತಾಲೂಕು ಅಧ್ಯಕ್ಷ ಡಾ. ಕೆ.ಎಲ್. ದರ್ಶನ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ಪವನಕುಮಾರ್, ಮುಖಂಡರಾದ ಕಾಮರಾಜು, ವೆಂಕಟಚಲಯ್ಯ, ಗುರುಧತ್, ಪ್ರಕಾಶ್, ಕುಸುಮ, ಸೀಬಿರಂಗಮ್ಮ, ಮರಡಪ್ಪ, ವೆಂಕಟೇಶ್, ವಿಶ್ವನಾಥ್, ಸಿದ್ದಮಲ್ಲಪ್ಪ, ವೀರಕ್ಯಾತರಾಯಪ್ಪ, ದಯಾನಂದ್, ಚೇತನ್, ಸಿದ್ದನಂಜಪ್ಪ, ಚಂದ್ರಮೋಹನ್, ಹನುಮಂತರಾಜು, ಗೋಪಿ, ಕಿಶೋರ್, ಮಂಜುನಾಥ್, ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ಇಂದು ಹೀಗಿದೆ ದರ

ವಿವಿಧೆಡೆ ಮತಯಾಚನೆ

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ವಿ.ಸೋಮಣ್ಣ,ಕ್ಷೇತ್ರದ ಓಬಳಪುರ, ಬೆಳಧರ, ಗೊಲ್ಲಹಳ್ಳಿ, ಅಗ್ರಹಾರ, ಬುಕ್ಕಪಟ್ಟಣ, ಕುರಂಕೋಟೆ, ಬೂದಗವಿ, ತುಂಬಾಡಿ, ವಡ್ಡಗೆರೆ, ಹುಲೀಕುಂಟೆ, ಹೊಳವನಹಳ್ಳಿ, ಅಕ್ಕಿರಾಂಪುರ, ಬೈಚಾಪುರ, ಬೈರೇನಹಳ್ಳಿ, ಕೊಡಗದಾಲ, ಬ್ಯಾಲ್ಯ, ಪುರವಾರ, ಗೊಂದಿಹಳ್ಳಿ, ಕೋಡ್ಲಾಪುರ, ಕೊಂಡವಾಡಿ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.

Continue Reading

ಕರ್ನಾಟಕ

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Neha Murder Case: ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರ್ಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

VISTARANEWS.COM


on

Neha Murder case JDS slams hands for defending love jihad to protect accused
Koo

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಲು ನಿರಾಕರಣೆ ಮಾಡಿದಳು ಎಂಬ ಕಾರಣಕ್ಕೆ ಮಾಡಿದ ಹತ್ಯೆ (‌Neha Murder Case) ಪ್ರಕರಣ ಖಂಡನೀಯ. ಜೀವ ತೆಗೆದ ಪಾಪಿಯನ್ನು ಸುಮ್ಮನೆ ಬಿಡಬಾರದು. ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ. ಲವ್ ಜಿಹಾದ್ (Love Jihad) ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ನೇಹಾ ಹಿರೇಮಠ (Neha Heremath) ಅವರನ್ನು ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ಜೆಡಿಎಸ್‌ (JDS Karnataka) ಕಿಡಿಕಾರಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಆರೋಪ ಮಾಡಿದೆ.

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ.

ಇದನ್ನೂ ಓದಿ: Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರ್ಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ ಪಾಪಿಯನ್ನು ಸುಮ್ಮನೆ ಬಿಡಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರಕಾರ ಕಟ್ಟೆಚ್ಚರ ವಹಿಸಬೇಕು. ಆ ನತದೃಷ್ಟ ವಿದ್ಯಾರ್ಥಿನಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ತಿಳಿಸಿದೆ.

ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ಫಯಾಜ್‌ ಐಸಿಸ್‌ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆತ ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಬೆಳೆಸಿದ ವಿಷಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ‌ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಿ ಅವರ ಮನೆಯನ್ನು ಬಹಿಷ್ಕರಿಸಬೇಕು. ವಕೀಲರು ಅವನ ಪರ ವಾದ ಮಾಡಲು ನಿಲ್ಲಬಾರದು. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆದೆಯೋ ಅಲ್ಲಿಯವರೆಗೆ ಈ ರೀತಿ ಕೊಲೆಗಳು ಆಗುತ್ತಲೇ ಇರುತ್ತವೆ ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗಿನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದವರು ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೇಲೆ ಹಲ್ಲೆಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗೂಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ. ಅಪರಾಧ ವಿಭಾಗದ ಡಿಜಿಪಿ ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ಇದನ್ನೂ ಓದಿ: Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading

ಕರ್ನಾಟಕ

Pro Pak Slogan: ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

Pro Pak Slogan: ಬೆಂಗಳೂರಿನಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ಹಿಂದು ಯುವಕರ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಹಲ್ಲೆ ನಡೆದಿದೆ. ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಹಿಂದು ಯುವಕನ ಮೇಲೆ ಅಪರಿಚಿತ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Pro Pak Slogan
Koo

ಮೈಸೂರು: ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಯುವಕ ದೂರು ನೀಡಿದ್ದಾನೆ.

ಮೈಸೂರಿನ ರೋಹಿತ್ ಹಲ್ಲೆಗೊಳಗಾದ ಯುವಕ. ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ವಿಡಿಯೊ ಮೂಲಕ ರೋಹಿತ್ ಮಾಹಿತಿ ನೀಡಿದ್ದಾನೆ.

ಘಟನೆ ಬಗ್ಗೆ ಗಾಯಳು ರೋಹಿತ್‌ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ ಸರ್: ಜೋಶಿಗೆ ನೇಹಾ ತಂದೆ ನಿರಂಜನ್ ಮನವಿ

Neha Murder case Niranjan urges Joshi to guarantee the lives of Hindu girls

ಹುಬ್ಬಳ್ಳಿ: “ಮಗಳು ನೇಹಾ ಕಗ್ಗೊಲೆ (Neha Murder Case) ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ, ದಯವಿಟ್ಟು ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ, ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ, ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್. ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ” ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಬಳಿ ಕೊಲೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನ್‌ ಹಿರೇಮಠ (Niranjan Hiremath) ಮನವಿ ಮಾಡಿದರು.

ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿ ನೇಹಾ ಕಗ್ಗೊಲೆ ವಿಷಯ ತಿಳಿದು ಗುರುವಾರ ರಾತ್ರಿಯೇ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಮನೆಗೆ ತೆರಳಿದ್ದ ಕೇಂದ್ರ ಸಚಿವರೆದುರು ಕುಟುಂಬ ವರ್ಗ ದುಃಖ ತೋಡಿಕೊಂಡಿತು.

ಹಿಂದೂ ಹೆಣ್ಣು ಮಕ್ಕಳ ಹತ್ಯೆ ಕೊನೆಯಾಗಲಿ

ಕಾಲೇಜು ಕ್ಯಾಂಪಸ್‌ನಲ್ಲೇ ಹೀಗೆ ಹತ್ಯೆ ನಡೆದರೆ ಹಿಂದೂ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡೋದಾದರೂ ಹೇಗೆ? ಸರ್ಕಾರದವರು ಇಂಥ ನೀಚರಿಗೆ ಕಠಿಣ ಶಿಕ್ಷೆ ಕೊಡಲಿ. ಹಿಂದೂ ಹೆಣ್ಣುಮಕ್ಕಳ ಹತ್ಯೆ ಇಲ್ಲಿಗೇ ಕೊನೆಗಾಣಿಸಿ ಎಂದು ನೇಹಾ ಸೋದರತ್ತೆ ಸಚಿವ ಜೋಶಿ ಅವರಲ್ಲಿ ಕಣ್ಣೀರಿಡುತ್ತಲೇ ಕೋರಿಕೊಂಡರು.

ಹಿಂದೂ ಯುವತಿಯರೇ ಟಾರ್ಗೆಟ್; ತಕ್ಕ ಶಾಸ್ತಿ ಆಗಲೇಬೇಕು

ಅಂದ ಚೆಂದದ ಹಿಂದೂ ವಿದ್ಯಾರ್ಥಿ-ಯುವತಿಯರೇ ಟಾರ್ಗೆಟ್ ಆಗುತ್ತಿದ್ದಾರೆ. ನಾನು ಕಾರ್ಪೋರೇಟ್ ಇದ್ದೇನೆ. ನನ್ನ ಮಗಳಿಗೇ ಹೀಗಾದರೆ ಸಾಮಾನ್ಯರ ಮಕ್ಕಳ ಗತಿ ಏನು? ಹಾಗಾಗಿ ಇದಕ್ಕೊಂದು ತಕ್ಕ ಶಾಸ್ತಿ ಆಗಲೇಬೇಕು ಎಂದು ನೇಹಾಳ ತಂದೆ ನಿರಂಜನ್ ಹಿರೇಮಠ ಅವರು ಪ್ರಲ್ಹಾದ್‌ ಜೋಶಿ ಅವರಲ್ಲಿ ಒತ್ತಾಯಿಸಿದರು.

ಶಿವಪೂಜೆ ಆಗದೆ ಹನಿ ನೀರು ಕುಡಿಯುತ್ತಿರಲಿಲ್ಲ

ನೇಹಾ ನಿತ್ಯ ಬೆಳಗ್ಗೆ ಶಿವಪೂಜೆ ಮಾಡದೇ ಒಂದು ಹನಿ ನೀರನ್ನೂ ಕುಡಿಯುತ್ತಿರಲಿಲ್ಲ. ಅಂಥ ಸಂಸ್ಕಾರವಂತ ಮಗಳು ಆಕೆ. ಲವ್ ಗಿವ್ ಅಂತ ಹೋದವಳಲ್ಲ ಎಂದು ತಂದೆ ಮತ್ತು ಸೋದರತ್ತೆ ಕಣ್ಣೀರಿಟ್ಟರು.

ಒಂದು ತಂಡವೇ ಇದ್ದಂತಿದೆ

ಲವ್ ಪ್ರಪೋಸಲ್ ಒಪ್ಪಲಿಲ್ಲ ಎಂದಾಕ್ಷಣ ಹೀಗೆ ಕಟುಕರಂತೆ ಕೊಲೆ ಮಾಡುವುದೇ? ಹಿಂದೂ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡುವ ಒಂದು ತಂಡವೇ ರೆಡಿಯಾಗಿದೆ ಅನಿಸುತ್ತಿದೆ ಎಂದು ಕಾರ್ಪೋರೇಟರ್ ನಿರಂಜನ್ ಆಕ್ರೋಶವನ್ನು ಹೊರಹಾಕಿದರು.

ಇದನ್ನೂ ಓದಿ: Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

ಮಾದರಿ ಆಗಬೇಕು ಶಿಕ್ಷೆ

ತಮ್ಮ ಮಗಳ ಹತ್ಯೆ ಪ್ರಕರಣದಲ್ಲಿ ಕೊಡುವ ಶಿಕ್ಷೆ ಕ್ರೂರ ಮನಸ್ಥಿತಿಯುಳ್ಳವರಿಗೆ ಪಾಠವಾಗಬೇಕು. ಒಂದು ಮಾದರಿ ಶಿಕ್ಷೆಯಾಗಬೇಕು. ಹೇಗಾದರೂ ಮಾಡಿ ಇಂಥ ನೀಚರನ್ನು ಮಟ್ಟ ಹಾಕಬೇಕು ಸರ್. ಇಲ್ಲದಿದ್ರೆ ನಮಗೆ ಉಳಿಗಾಲವಿಲ್ಲ ಎಂದು ನೇಹಾ ತಂದೆ, ಕಾರ್ಪೋರೇಟರ್‌ ನಿರಂಜನ್ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಹೋರಾಟ ಮಾಡೋಣ ಧೃತಿಗೆಡಬೇಡಿ

ಲವ್ ಫೇಲ್ ಆದವರು ಸಮಾಜದಲ್ಲಿ ಹತ್ಯೆಯಂತಹ ಹಂತಕ್ಕೆ ಹೋಗುತ್ತಿರುವುದು ಆತಂಕವನ್ನು ಹುಟ್ಟಿಸುತ್ತಿದೆ. ಯಾರೂ ಈ ಬಗ್ಗೆ ಧೃತಿಗೆಡಬೇಡಿ. ಇದರ ವಿರುದ್ಧ ಹೋರಾಟ ಮಾಡೋಣ ಎಂದು ಸಚಿವ ಪ್ರಲ್ಹಾದ್‌ ಜೋಶಿ ಅವರು ನೇಹಾಳ ಕುಟುಂಬಕ್ಕೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದರು. ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ತೆಂಗಿನಕಾಯಿ ಮತ್ತಿತರರು ಮುಖಂಡರು ಇದ್ದರು.

Continue Reading
Advertisement
IPL 2024
ಕ್ರಿಕೆಟ್50 seconds ago

IPL 2024: ಅಭ್ಯಾಸದ ವೇಳೆ ರಾಹುಲ್​ಗೆ ಪತ್ನಿಯಿಂದ ಸಾಥ್​; ವಿಡಿಯೊ ವೈರಲ್​

Rain in Karnataka
ಮಳೆ16 mins ago

Weather Report: ಬೆಂಗಳೂರಿನ ಜನ ಮಳೆಗಾಗಿ ಮೇವರೆಗೆ ಕಾಯಬೇಕು!

Tumkur Lok Sabha constituency BJP candidate Somanna election campaign in various places of Koratagare
ತುಮಕೂರು21 mins ago

Lok Sabha Election 2024: ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ನನ್ನನ್ನು ಬೆಂಬಲಿಸಿ: ವಿ. ಸೋಮಣ್ಣ

Lok Sabha Election 2024
Lok Sabha Election 202424 mins ago

Lok Sabha Election 2024: ಹಕ್ಕು ಚಲಾಯಿಸಿ ಮಾದರಿಯಾದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ

Yuva Movie streaming ott yuva rajkumar
ಸ್ಯಾಂಡಲ್ ವುಡ್25 mins ago

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

IPL 2024
ಕ್ರೀಡೆ40 mins ago

MS Dhoni: ಧೋನಿ ಅಭಿಮಾನಿಗಳಿಗೆ ನಿರಾಸೆ; ಇಂದಿನ ಪಂದ್ಯಕ್ಕೆ ಅನುಮಾನ

evm vvpat verification lok sbha election 2024
Lok Sabha Election 202446 mins ago

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

Neha Murder case JDS slams hands for defending love jihad to protect accused
ಕರ್ನಾಟಕ47 mins ago

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Pro Pak Slogan
ಕರ್ನಾಟಕ49 mins ago

Pro Pak Slogan: ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

lok sabha Election
ದೇಶ51 mins ago

Lok Sabha Election : ಮಣಿಪುರದ ಮತಗಟ್ಟೆಯಲ್ಲಿ ಗುಂಡಿನ ಚಕಮಕಿ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ1 hour ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ12 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌