Tata Motors: ಟಾಟಾ ಮೋಟರ್ಸ್‌ನಿಂದ 'ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್' ಮೂಲಕ 4000 ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ - Vistara News

ಕರ್ನಾಟಕ

Tata Motors: ಟಾಟಾ ಮೋಟರ್ಸ್‌ನಿಂದ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಮೂಲಕ 4000 ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ

Tata Motors: ಟಾಟಾ ಮೋಟಾರ್ಸ್ ಕಂಪನಿಯು ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಸಹಯೋಗದ ಮೂಲಕ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಸ್ಥಾಪಿಸಿದೆ. ಇಲ್ಲಿಯವರೆಗೂ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಆಯ್ದ ಜೆಎನ್‌ವಿಗಳಲ್ಲಿ ಅಗತ್ಯ ಉಪಕರಣಗಳಿಂದ ಸುಸಜ್ಜಿತಗೊಂಡ 25 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದ್ದು, ಈ ವಿಶಿಷ್ಟವಾದ ಔದ್ಯಮಿಕ- ಶೈಕ್ಷಣಿಕ ಜಂಟಿ ಉಪಕ್ರಮದ ಮೂಲಕ ವರ್ಷದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಟೋಮೋಟಿವ್ ಕೌಶಲ್ಯಗಳನ್ನು ಕಲಿಸುವ ಮೂಲಕ ಆಟೋಮೋಟಿವ್ ಕ್ಷೇತ್ರಕ್ಕೆ ಬೇಕಾದ ಉದ್ಯೋಗಿಗಳನ್ನಾಗಿ ಸಜ್ಜುಗೊಳಿಸಲಾಗುತ್ತದೆ.

VISTARANEWS.COM


on

Automotive skill training for 4000 students through Automotive Skill Labs by Tata Motors
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯುವ ಪ್ರತಿಭೆಗಳನ್ನು ಬೆಳೆಸುವ ಮತ್ತು ಆಟೋಮೋಟಿವ್ ಉದ್ಯಮಕ್ಕೆ ಬೇಕಾಗುವ ನುರಿತ ಉದ್ಯೋಗಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು (Tata Motors) ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಸಹಯೋಗದ ಮೂಲಕ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಸ್ಥಾಪಿಸಿದೆ.

ಇಲ್ಲಿಯವರೆಗೂ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಆಯ್ದ ಜೆಎನ್‌ವಿಗಳಲ್ಲಿ ಅಗತ್ಯ ಉಪಕರಣಗಳಿಂದ ಸುಸಜ್ಜಿತಗೊಂಡ 25 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದೆ. ಈ ವಿಶಿಷ್ಟವಾದ ಔದ್ಯಮಿಕ- ಶೈಕ್ಷಣಿಕ ಜಂಟಿ ಉಪಕ್ರಮದ ಮೂಲಕ ವರ್ಷದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಟೋಮೋಟಿವ್ ಕೌಶಲ್ಯಗಳನ್ನು ಕಲಿಸುವ ಮೂಲಕ ಆಟೋಮೋಟಿವ್ ಕ್ಷೇತ್ರಕ್ಕೆ ಬೇಕಾದ ಉದ್ಯೋಗಿಗಳನ್ನಾಗಿ ಸಜ್ಜುಗೊಳಿಸಲಾಗುತ್ತದೆ. ಅಷ್ಟು ಮಂದಿಯಲ್ಲಿ 30% ಮಂದಿ ಹುಡುಗಿಯರಾಗಿರುತ್ತಾರೆ ಎನ್ನುವುದು ವಿಶೇಷ.

‘ರಾಷ್ಟ್ರೀಯ ಶಿಕ್ಷಣ ನೀತಿ 2020’ ರಲ್ಲಿ ಪರಿಕಲ್ಪಿಸಲಾದ ವೃತ್ತಿಪರ ಕೋರ್ಸ್‌ಗಳ ಸಾಲಿನಲ್ಲಿ ನಿಲ್ಲುವ ಟಾಟಾ ಮೋಟಾರ್ಸ್‌ನ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್,’ 9 ರಿಂದ 12 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿಯೇ ಅವರಿಗೆ ಅಗತ್ಯವಾಗಿ ಬೇಕಾಗುವ ವಿಷಯ ಜ್ಞಾನ, ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯುವುದರ ಕಡೆಗೆ ಮತ್ತು ಅವರಿಗೆ ಉತ್ತಮವಾದ ಔದ್ಯಮಿಕ ಕ್ಷೇತ್ರದ ಅರಿವು ನೀಡುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ.

ಇದನ್ನೂ ಓದಿ: Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

ಜತೆಗೆ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್‌ನ ಘಟಕಗಳಿಗೆ ಭೇಟಿ ನೀಡಬಹುದು. ಸರ್ವೀಸ್ ಮತ್ತು ಡೀಲರ್‌ಶಿಪ್ ವೃತ್ತಿಪರರ ಜತೆ ಸಂವಹನ ನಡೆಸಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಉದ್ಯಮ ತಜ್ಞರ ಉಪನ್ಯಾಸ ಕಾರ್ಯಕ್ರದಲ್ಲಿ ಭಾಗಿಯಾಗಿ ಹೆಚ್ಚು ಜ್ಞಾನ ಪಡೆಯುವ ಮತ್ತು ಉತ್ತಮ ಅನುಭವ ಹೊಂದುವ ಅವಕಾಶ ಪಡೆಯಲಿದ್ದಾರೆ. ಅಷ್ಟು ಮಾತ್ರವಲ್ಲದೆ ಈ ಲ್ಯಾಬ್‌ಗಳಲ್ಲಿ ಬೋಧನೆ ಮಾಡುವ ಬೋಧಕರು ಕಂಪನಿಯ ಪ್ಲಾಂಟ್‌ಗಳಿರುವ ಸ್ಥಳಗಳಲ್ಲಿ ಅಗತ್ಯ ತರಬೇತಿಯನ್ನು ಪಡೆಯುತ್ತಾರೆ. ಪುಣೆಯ ಸ್ಕಿಲ್ ಲ್ಯಾಬ್‌ನಲ್ಲಿ ವಿದ್ಯಾರ್ಥಿಗಳು ರಚಿಸಿರುವ ಇ-ರಿಕ್ಷಾ ಈ ವಿಶಿಷ್ಟವಾದ ಕಲಿಕಾ ಉಪಕ್ರಮದ ಯಶಸ್ಸಿಗೆ ಒಂದು ಶ್ರೇಷ್ಠ ಪುರಾವೆಯಾಗಿದೆ.

ಈ ಕಲಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್ ಮತ್ತು ಎನ್‌ವಿಎಸ್ ನಿಂದ ಜಂಟಿ ಪ್ರಮಾಣಪತ್ರ ಸ್ವೀಕರಿಸುತ್ತಾರೆ. ತಮ್ಮ ಶಿಕ್ಷಣದ ಬಳಿಕ ವಿದ್ಯಾರ್ಥಿಗಳು ಡಿಪ್ಲೊಮಾ ಇನ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿಗೆ ಸೇರಿಕೊಳ್ಳಬಹುದು. ಸೇರಿಕೊಳ್ಳುವವರಿಗೆ ಪೂರ್ತಿ ಸ್ಟೈಫಂಡ್ ನೀಡಲಾಗುತ್ತದೆ ಮತ್ತು ಟಾಟಾ ಮೋಟಾರ್ಸ್‌ನ ಉತ್ಪಾದನಾ ಘಟಕಗಳಲ್ಲಿ ಉದ್ಯೋಗ ತರಬೇತಿಯನ್ನೂ ಪಡೆಯಬಹುದಾಗಿದೆ. ಜತೆಗೆ ಟಾಟಾ ಮೋಟಾರ್ಸ್‌ನಲ್ಲಿ ಮುಂದುವರಿಯಲು ಆಸಕ್ತಿಯುಳ್ಳವರು ಆಯ್ದ ಎಂಜಿನಿಯರಿಂಗ್ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸುವ 3.5 ವರ್ಷಗಳ ವಿಶೇಷ ಶಿಕ್ಷಣ ಕಾರ್ಯಕ್ರಮವಾದ ಬಿಟೆಕ್ ಇನ್ ಎಂಜಿನಿಯರಿಂಗ್‌ ಪದವಿಗೆ ಸೇರಿಕೊಳ್ಳಬಹುದು. ಹಾಗೆ ಮಾಡಿದರೆ ಐದು ವರ್ಷಗಳ ನಂತರ ಟಾಟಾ ಮೋಟಾರ್ಸ್‌ನಲ್ಲಿ ಪರ್ಮನೆಂಟ್ ಉದ್ಯೋಗಕ್ಕೆ ಸೇರಿಕೊಳ್ಳಬಹುದು.

ಈ ಕುರಿತು ಟಾಟಾ ಮೋಟಾರ್ಸ್‌ನ ಸಿಎಸ್‌ಆರ್ ಮುಖ್ಯಸ್ಥ ವಿನೋದ್ ಕುಲಕರ್ಣಿ ಮಾತನಾಡಿ, “ನಮ್ಮ ಆಟೋಮೋಟಿವ್ ಸ್ಕಿಲ್ ಲ್ಯಾಬ್‌ಗಳು ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಗಳ ಯುವಜನತೆಗೆ ಬೆಳೆಯುತ್ತಿರುವ ಆಟೋಮೋಟಿವ್‌ ಕ್ಷೇತ್ರದ ಉದ್ಯೋಗ ಗಳಿಸಲು ಬೇಕಾಗುವ ಸೂಕ್ತವಾದ ಕೌಶಲ್ಯಗಳನ್ನು ಕಲಿಸಿ ಅವರನ್ನು ಸಶಕ್ತಗೊಳಿಸುತ್ತವೆ. ಈ ಲ್ಯಾಬ್ ಗಳು 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಉದ್ಯೋಗಾವಕಾಶಗಳನ್ನು ಹೊಂದಲು ದಾರಿಗಳನ್ನು ಸೃಷ್ಟಿಸುತ್ತದೆ.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

‘ಸ್ಕಿಲ್ ಇಂಡಿಯಾ ಮಿಷನ್ʼಗೆ ಕೊಡುಗೆ ನೀಡುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನವೀನ ಚಿಂತನೆ, ಉದ್ಯಮಶೀಲತಾ ಮನೋಭಾವ, ವಿಶ್ಲೇಷಣಾತ್ಮಕ ಮನಸ್ಥಿತಿ ಮತ್ತು ವಿಮರ್ಶಾತ್ಮಕ ಸಂವಹನ ಇತ್ಯಾದಿ ಕೌಶಲಗಳನ್ನು ಬೆಳೆಸುತ್ತದೆ. ಈ ಉಪಕ್ರಮಕ್ಕೆ ವಿದ್ಯಾರ್ಥಿಯರು ಕೂಡ ಉತ್ತಮವಾಗಿ ಸ್ಪಂದಿಸಿದ್ದು, ಆ ಮೂಲಕ ವಿಕಸಿತ ಭಾರತ @2047 ಪರಿಕಲ್ಪನೆಗೆ ಪೂರಕವಾಗಿ ಭವಿಷ್ಯದ ನಾಯಕರನ್ನು ಸಜ್ಜುಗೊಳಿಸುವ ನಮ್ಮ ಬದ್ಧತೆಗೆ ಬಲ ದೊರೆತಿದೆ” ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Viral video: 15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ.

VISTARANEWS.COM


on

assault case viral video
Koo

ಬೆಂಗಳೂರು: ಬೆಂಗಳೂರಿನ (Bangalore crime news) ಬೀದಿಯಲ್ಲಿ ಹಾಡಹಗಲೇ ನಡೆದ ರಾಜಾರೋಷ ಹಲ್ಲೆಯೊಂದರ (Assault Case) ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿ ಸೋಶಿಯಲ್‌ ಮೀಡಿಯಾಗಳಲ್ಲಿ (Viral Video) ಹಂಚಿಕೊಂಡಿದ್ದಾರೆ. ಸದ್ಯ ಇದು ಮೆಟ್ರೋ ನಗರದ (Metro City) ಮಾನ ತೆಗೆಯುತ್ತಿದೆ. ವಿದ್ಯಾರಣ್ಯಪುರದಲ್ಲಿ (Vidyaranyapura) ಘಟನೆ ನಡೆದಿದೆ.

15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ನರಸೀಪುರ ಬಳಿ ನಡೆದ ಘಟನೆಯಿದು. ಹಲ್ಲೆಗೊಳಗಾದವನು ಹಾಗೂ ಹಲ್ಲೆ ಮಾಡಿದವರ ಕುರಿತ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಹಲ್ಲೆಯಿಂದ‌ ಯುವಕನ‌ ಮುಖ ಮತ್ತು ಮೂಗಿನ‌ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಈಶಾನ್ಯ ಡಿಸಿಪಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗಿದೆ. ʼಬಿಎನ್‌ಎಸ್ 109 ಅಂದರೆ ಕೊಲೆ‌ ಯತ್ನ?ʼ ಎಂದು ಉಲ್ಲೇಖಿಸಿ ಪೋಸ್ಟ್‌ ಮಾಡಲಾಗಿದೆ.

ಕಲಬುರಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಕಲಬುರಗಿ: ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ (Dead Body Foundಪತ್ತೆಯಾಗಿದೆ. ಕಲಬುರಗಿಯ (Kalaburagi News) ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದಾರೆ.

ಕಲಬುರಗಿ ನಗರದ ಜಗತ್ ಬಡಾವಣೆಯ ನಿವಾಸಿ ಬಸಮ್ಮ (45) ಮೃತ ದುರ್ದೈವಿ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ‌ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಾಗಾವ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಹತ್ಯೆಗೆ ಕಾರಣವೇನು? ಹತ್ಯೆ ಮಾಡಿದ್ದು ಯಾರು ಎಂಬುದು ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕಲಬುರಗಿಯಲ್ಲಿ ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಸೇತುವೆಯಿಂದ ಬೆಣ್ಣೆತೋರಾ ನದಿಗೆ ಹಾರಿ ಯುವಕ- ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೀಲ್ ಕುಮಾರ್ ಮೂಲಗೆ (37) ನದಿಗೆ ಹಾರಿ ಮೃತಪಟ್ಟವರು. ಬೆಣ್ಣೆತೋರಾ ನದಿಯಲ್ಲಿ ಅನೀಲ್ ಕುಮಾರ್ ಶವ ಪತ್ತೆಯಾಗಿದೆ. ಅನೀಲ್ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕುಣಿ ಸಂಗಾವಿ ಗ್ರಾಮದ ನಿವಾಸಿಯಾಗಿದ್ದಾರೆ. ಅನೀಲ್ ಜತೆ ನದಿಗೆ ಹಾರಿದ ಯುವತಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸ್ಥಳಕ್ಕೆ ಮಹಾಗಾಂವ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈಜು ತಜ್ಞರ ಮೂಲಕ ಶವ ಹುಡುಕಾಟ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

kalaburagi news

ಹಾಸನದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಮಗುವಿನ ಅನಾರೋಗ್ಯದಿಂದ ಮನನೊಂದ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಸನದ ಹಿಮ್ಸ್ ಆಸ್ಪತ್ರೆಯ ಕಟ್ಟಡದ ಮೇಲೇರಿದ ಬಸವರಾಯನಪುರ ಗ್ರಾಮದ ಗಂಗಸ್ವಾಮಿಯಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ಗ್ರಾಮದಲ್ಲಿ ಘಟನೆ ನಡೆದಿದೆ. ಗಂಗಸ್ವಾಮಿ ತನ್ನ ಎರಡು ತಿಂಗಳ ಮಗುವಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹಿಮ್ಸ್‌ಗೆ ದಾಖಲು ಮಾಡಿದ್ದರು. ಆದರೆ ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದರು. ಇತ್ತ ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ. ಗಂಗಸ್ವಾಮಿಯನ್ನು ಮನವೊಲಿಸಿ‌ ಕೆಳಗಿಳಿಸಿ ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದಲಾಗಿದೆ.

ಇದನ್ನೂ ಓದಿ: Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

Continue Reading

Latest

Pani Puri Machine: ಬೆಂಗಳೂರಿಗೆ ಬಂದಿದೆ ಪಾನಿಪುರಿ ನೀಡುವ ಮೆಷಿನ್! ಇದು ಹೇಗಿದೆ ನೋಡಿ

Pani Puri Machine: ಮಳೆ ಇರಲಿ, ಸೆಕೆ ಇರಲಿ ಪಾನಿಪುರಿ ಅಂಗಡಿ ನೋಡಿದಾಕ್ಷಣ ಕಾಲು ಅಲ್ಲಿಯೇ ನಿಂತು ಬಿಡುತ್ತದೆ. ಹೌದು ಅದರ ರುಚಿಯೇ ಅಂಥಹದ್ದು. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನ ಸ್ವಯಂಚಾಲಿತ ಪಾನಿಪುರಿ ಮಾರಾಟ ಯಂತ್ರ ಕಂಡುಬಂದಿದೆ. “ಡಬ್ಲ್ಯುಟಿಎಫ್ – ವಾಟ್ ದಿ ಫ್ಲೇವರ್ಸ್” ಎಂದು ಹೆಸರಿಸಲಾದ ಈ ಯಂತ್ರದ ಪಾನಿಪುರಿ ಎಲ್ಲರ ಗಮನ ಸೆಳೆದಿದೆ. ಇದರಿಂದ ನಿಮಗಿಷ್ಟವಾದ ಫ್ಲೇವರ್ಸ್‍ನಲ್ಲಿ ಪಾನಿಪುರಿಯನ್ನು ಸವಿಯಬಹುದು. ಈ ಸ್ವಯಂಚಾಲಿತ ಪಾನಿಪುರಿ ಮೆಷಿನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

VISTARANEWS.COM


on

Pani Puri Machine
Koo

ಬೆಂಗಳೂರು : ಪಾನಿಪುರಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರೂ ಶಾಪಿಂಗ್‌ಗೆಂದು ಹೊರಗೆ ಹೊರಟರೆ ಬೀದಿ ಬದಿಯಲ್ಲಿ ಪಾನೀಪುರಿ ಮಾರುತ್ತಿದ್ದರೆ ಅದನ್ನು ತಿನ್ನದೇ ಮುಂದೆ ಹೋಗಲು ಇಷ್ಟವಾಗುವುದಿಲ್ಲ. ಪತಿ ತಮ್ಮ ಪತ್ನಿಯನ್ನು ಓಲೈಸಲು, ಪೋಷಕರು ತಮ್ಮ ಮಕ್ಕಳಿಗೆ ಖುಷಿ ಪಡಿಸಲು ಹಾಗೂ ಯುವಕರು ತಮ್ಮ ಪ್ರೇಯಸಿಯ ಪ್ರೀತಿಯನ್ನು ಗಳಿಸಲು ಒಂದು ಪ್ಲೇಟ್ ಪಾನೀಪುರಿ ಕೊಡಿಸುವುದಂತು ಖಂಡಿತ. ಇದೀಗ ಪಾನಿಪುರಿ ಪ್ರಿಯರಿಗೆ ಖುಷಿ ವಿಚಾರ. ಅದೇನೆಂದರೆ ಈಗ ಪಾನಿಪುರಿ ( Pani Puri Machine) ವಿತರಿಸುವ ಮೆಷಿನ್ ಬಂದಿದೆಯಂತೆ. ಅದರಿಂದ ನಿಮಗಿಷ್ಟವಾದ ಫ್ಲೇವರ್ಸ್‍ನಲ್ಲಿ ಪಾನಿಪುರಿಯನ್ನು ಸವಿಯಬಹುದು. ಈ ಸ್ವಯಂಚಾಲಿತ ಪಾನಿಪುರಿ ಮೆಷಿನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Pani Puri Machine

ಹೌದು. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‍ನಲ್ಲಿ ಸ್ವಯಂಚಾಲಿತ ಪಾನಿಪುರಿ ಮಾರಾಟ ಯಂತ್ರ ಕಂಡುಬಂದಿದೆ. “ಡಬ್ಲ್ಯುಟಿಎಫ್ – ವಾಟ್ ದಿ ಫ್ಲೇವರ್ಸ್” ಎಂದು ಹೆಸರಿಸಲಾದ ಈ ಯಂತ್ರದ ಪಾನಿಪುರಿ ಎಲ್ಲರ ಗಮನ ಸೆಳೆದಿದೆ. ಬೆನೆಡಿಕ್ಟ್ ಎಂಬ ಬಳಕೆದಾರರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಮೆಷಿನ್‌ನ ಪೋಟೊವನ್ನು ಪೋಸ್ಟ್ ಮಾಡಿದ್ದಾರೆ. ಈ ಯಂತ್ರವು ಗ್ರಾಹಕರಿಗೆ ಆಯ್ಕೆ ಮಾಡಲು ವಿವಿಧ ಪರಿಮಳಯುಕ್ತ ಪಾನೀಯವನ್ನು ವಿತರಿಸುವ ಅನೇಕ ನಲ್ಲಿಗಳನ್ನು ಹೊಂದಿದೆ. ಬೆಂಗಳೂರಿನಲ್ಲಿ ಸಂಜೆಯ ವೇಳೆ ಫುಡ್ ಕೌಂಟರ್‌ಗಳಲ್ಲಿ ಕಿಕ್ಕಿರಿದ ಜನಸಂದಣಿಯಿಂದ ತುಂಬಿರುವ ಸ್ಥಳಗಳಲ್ಲಿ ಇಂತಹ ಮೆಷಿನ್ ಬಂದಿದ್ದು ಬಹಳ ಅನುಕೂಲಕರವಾಗಿದೆ ಎಂದೇ ಹೇಳಬಹುದು.

ಆದರೆ ಈ ಸ್ವಯಂಚಾಲಿತ ಪಾನಿಪುರಿ ಮಾರಾಟ ಯಂತ್ರದ ಬಗ್ಗೆ ಆನ್‍ಲೈನ್‍ನಲ್ಲಿ ಅನೇಕ ಚರ್ಚೆಗಳು ಹುಟ್ಟಿಕೊಂಡಿವೆ. ಅನೇಕರು ಈ ಯಂತ್ರ ಬೆಂಗಳೂರಿಗೆ ಮಾತ್ರವೇ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು “ಇದು ಕೊನೆಯಲ್ಲಿ ಸುಕ್ಕಾ ಪುರಿಯನ್ನು ನೀಡುತ್ತದೆಯೇ?” ಎಂದು ತಮಾಷೆಯ ಪ್ರಶ್ನೆ ಕೇಳಿದ್ದಾರೆ.
ಕರ್ನಾಟಕದಲ್ಲಿ ಬೀದಿ ಆಹಾರದ ಗುಣಮಟ್ಟದ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

ಈ ಆಹಾರದಿಂದ ಅನೇಕ ಕಾಯಿಲೆಗಳು ಹರಡುತ್ತದೆ ಮತ್ತು ಇಲ್ಲಿ ಸ್ವಚ್ಛತೆ ಕಡಿಮೆ ಎಂದು ಹೇಳಲಾಗಿದೆ. ಅಲ್ಲದೇ ಆಹಾರ ಸುರಕ್ಷತಾ ಅಧಿಕಾರಿಗಳ ಇತ್ತೀಚಿನ ಆಹಾರ ತಪಾಸಣೆಗಳಲ್ಲಿ ಸಂಗ್ರಹಿಸಿದ ಮಾದರಿಗಳಲ್ಲಿ ಕೃತಕ ಬಣ್ಣಗಳು ಮತ್ತು ಕ್ಯಾನ್ಸರ್ ಕಾರಕಗಳ ಉಪಸ್ಥಿತಿಯನ್ನು ಬಹಿರಂಗಪಡಿಸಿವೆ, ಇದು ಪಾನಿಪುರಿ ಮಳಿಗೆಗಳ ಸುರಕ್ಷತೆ ಮತ್ತು ನೈರ್ಮಲ್ಯದ ಬಗ್ಗೆ ಕಳವಳವನ್ನು ಹೆಚ್ಚಿಸಿದೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

VISTARANEWS.COM


on

rain news kottigehara bus stand collapse
Koo

ಚಿಕ್ಕಮಗಳೂರು: ಮಲೆನಾಡಿನಲ್ಲಿ (Western Ghats) ಧಾರಾಕಾರ ಮಳೆ (Rain News) ಹಾವಳಿ ಎಬ್ಬಿಸುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ (Kottigehara Bus Stand) ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ (bus stand collapse) ಧ್ವಂಸವಾಗಿದೆ.

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಬಸ್ ನಿಲ್ದಾಣದ ಸುತ್ತಮುತ್ತ ಗೋಡೆಗಳು ನಾಶವಾಗಿವೆ. ಭಾರಿ ಮಳೆ ಹಿನ್ನಲೆ ಕೊಟ್ಟಿಗೆಹಾರದಲ್ಲಿ ವಿದ್ಯುತ್ ಸಂಪರ್ಕವೂ ಸ್ಥಗಿತವಾಗಿದ್ದು, ಕತ್ತಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದರು. ಗೋಡೆಗಳು ಬಿದ್ದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದರು.

ಶೃಂಗೇರಿಯಲ್ಲಿ ಮುಳುಗಡೆ

ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿದ್ದು, ಶೃಂಗೇರಿ ಪಟ್ಟಣದ ಗಾಂಧಿ ಮೈದಾನಕ್ಕೆ ನೀರು ನುಗ್ಗಿದೆ. ನದಿ ತಟದಲ್ಲಿದ್ದ ಅಂಗಡಿ ಮುಂಗಟ್ಟು, ಪಾರ್ಕಿಂಗ್ ಜಾಗ ಮುಳುಗಡೆಯಾಗಿವೆ. ಪಟ್ಟಣದ ಯಾತ್ರಿ ನಿವಾಸದ ವರೆಗೂ ನದಿಯ ನೀರು ನುಗ್ಗಿದೆ. ನದಿ ಪಕ್ಕದ ಪ್ಯಾರಲಲ್ ರಸ್ತೆಯೂ ಸಂಪೂರ್ಣ ಮುಳುಗಡೆಯಾಗಿದ್ದು, ಶೃಂಗೇರಿಯಲ್ಲಿ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಶಾಲೆಗಳಿಗೆ ರಜೆ

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

ಶಿವಮೊಗ್ಗದಲ್ಲಿ ರೆಡ್‌ ಅಲರ್ಟ್‌

ಶಿವಮೊಗ್ಗ: ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡದಲ್ಲಿ ವೃದ್ಧೆ ರಕ್ಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರದ ಪರಿಣಾಮ, ಜಲಾವೃತಗೊಂಡ ಮನೆಯಲ್ಲಿದ್ದ ರೋಗಿಯನ್ನು ಹೊರತರಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು. ಕಾರವಾರ ತಾಲೂಕಿ‌ನ ಚೆಂಡಿಯಾ ಗ್ರಾಮದಲ್ಲಿ ಹೆಚ್ಚಿದ ನೀರಿನ ಪ್ರಮಾಣದಿಂದಾಗಿ ಮನೆಗೆ ನೀರು ನುಗ್ಗಿತ್ತು.

ಅಸ್ತಮಾ ರೋಗದಿಂದ ಬಳಲುತ್ತಿದ್ದ ಸ್ವಾತಿ ರತ್ನಾಕರ ನಾಯ್ಕ (67) ಹಾಗೂ ಅವರ ಪತಿ ನೀರು ನುಗ್ಗಿದ ಮನೆಯಲ್ಲೇ ಉಳಿದಿದ್ದರು. ದಂಪತಿಗಳನ್ನು ತಾಲೂಕಾಡಳಿತ ಹಾಗೂ ಸ್ಥಳೀಯರು ಮನವೊಲಿಸಿ ಮನೆಯಿಂದ ಹೊರತಂದರು. ನಾಲ್ಕು ಅಡಿ ನೀರಿನಲ್ಲೇ ರೋಗಿಯನ್ನ ಹೊತ್ತು ತಂದು ಅಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆ ಗೆ ರವಾನಿಸಿದರು.

ತುರ್ತು ಕಾರ್ಯಾಚರಣೆ ಕೇಂದ್ರ

ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ (Uttara Kannada News) ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.

ತಗ್ಗು ಪ್ರದೇಶಗಳಲ್ಲಿ ಮತ್ತು ಗುಡ್ಡ ಕುಸಿಯಬಹುದಾದ ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು, ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕಾಳಜಿ ಕೇಂದ್ರಗಳಿಗೆ ಬಂದು ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

Continue Reading

ಮಳೆ

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Karnataka Weather Forecast : ಭಾರಿ ಮಳೆಯಾಗುವ (Heavy Rain alert) ಎಚ್ಚರಿಕೆಯನ್ನೂ ನೀಡಲಾಗಿದ್ದು, ಇಂದು ಕರಾವಳಿ, ಮಲೆನಾಡಿಗೆ ರೆಡ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ (Heavy rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುಂದುವರಿದ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Monkey Attack
Latest9 mins ago

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Actor Yash
ಸಿನಿಮಾ10 mins ago

Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

assault case viral video
ವೈರಲ್ ನ್ಯೂಸ್19 mins ago

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Kashmir encounter
ದೇಶ24 mins ago

Kashmir Encounter: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ; ಮುಂದುವರಿದ ಕಾರ್ಯಾಚರಣೆ

BJP MLA
ಪ್ರಮುಖ ಸುದ್ದಿ46 mins ago

BJP MLA: ಡಿಗ್ರಿ ಉಪಯೋಗಕ್ಕೆ ಬರಲ್ಲ, ಪಂಕ್ಚರ್‌ ಅಂಗಡಿ ತೆರೆಯಿರಿ; ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಕರೆ!

Pani Puri Machine
Latest49 mins ago

Pani Puri Machine: ಬೆಂಗಳೂರಿಗೆ ಬಂದಿದೆ ಪಾನಿಪುರಿ ನೀಡುವ ಮೆಷಿನ್! ಇದು ಹೇಗಿದೆ ನೋಡಿ

Paris Olympics 2024
ಕ್ರೀಡೆ49 mins ago

Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

goa ನನ್ನ ದೇಶ ನನ್ನ ದನಿ
ಅಂಕಣ55 mins ago

ನನ್ನ ದೇಶ ನನ್ನ ದನಿ ಅಂಕಣ: ಗೋವಾದಲ್ಲಿ ಹಿಂದೂಗಳ ಮೇಲಿತ್ತು ಜುಟ್ಟಿನ ತೆರಿಗೆ!

rain news kottigehara bus stand collapse
ಪ್ರಮುಖ ಸುದ್ದಿ1 hour ago

Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

Char Dham Yatra 2024
ಪ್ರವಾಸ2 hours ago

Char Dham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡುವ ಆಸೆ ಇದೆಯೆ? ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ21 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌