Ayanur Manjunath to get Congress ticket from Shivamogga opposed from District Congress Karnataka Election 2023 updates Karnataka Election 2023: ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್?;‌ ಸಿಡಿದೆದ್ದ ಜಿಲ್ಲಾ ಕಾಂಗ್ರೆಸ್‌ - Vistara News

ಕರ್ನಾಟಕ

Karnataka Election 2023: ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್?;‌ ಸಿಡಿದೆದ್ದ ಜಿಲ್ಲಾ ಕಾಂಗ್ರೆಸ್‌

Ayanur Manjunath: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಆಕ್ರೋಶಗೊಂಡಿದ್ದು, ಆಯನೂರಿಗೆ ಟಿಕೆಟ್‌ ನೀಡಿದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Ayanur Manjunath to get Congress ticket from Shivamogga opposed from District Congress Karnataka Election 2023 updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಮೇ 10ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ನಡುವೆ ಆಯಾ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಇನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಗೊಂದಲ ಮುಂದುವರಿದಿದೆ. ಈ ನಡುವೆ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದು, ಅವರಿಗೆ ಟಿಕೆಟ್‌ ನೀಡಲಾಗುವುದು ಎಂಬ ವದಂತಿ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಿಡಿದೆದ್ದಿದೆ.

ಈ ಸಂಬಂಧ ಶಿವಮೊಗ್ಗ ಕಾಂಗ್ರೆಸ್‌ನ 32 ವಾರ್ಡ್ ಅಧ್ಯಕ್ಷರು ಸಭೆ ನಡೆಸಿದ್ದು, ಆಯನೂರು ಮಂಜುನಾಥ್‌ಗೆ ಟಿಕೆಟ್‌ ಕೊಡುವ ವಿಚಾರವಾಗಿ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್‌ನಲ್ಲಿ ರೂಢಿಸಿಕೊಂಡು ಬಂದಿರುವ ನಿಯಮಾವಳಿಯಂತೆ ಟಿಕೆಟ್‌ ಹಂಚಿಕೆಯಾಗಬೇಕು. ಅದರಂತೆ ಅರ್ಜಿ ಸಲ್ಲಿಸಿದವರಿಗೆ ಟಿಕೆಟ್‌ ಕೊಡಬೇಕು. ಅದು ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿದರೆ ಸಾಮೂಹಿಕ ರಾಜಿನಾಮೆ ನೀಡಲಾಗುವುದು ಎಂಬ ಎಚ್ಚರಿಕೆ ಸಂದೇಶವನ್ನು ಈ ಸಭೆಯ ಮೂಲಕ ರವಾನಿಸಲಾಗಿದೆ.

ಸಭೆಯಲ್ಲಿ ಸಾಮೂಹಿಕ ನಿರ್ಣಯ ತೆಗೆದುಕೊಂಡ 32 ವಾರ್ಡ್‌ಗಳ ಅಧ್ಯಕ್ಷರು

ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಈಗಾಗಲೇ 11 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದೆ. ಇವರಲ್ಲಿ ಯಾರಿಗಾದರೂ ಒಬ್ಬರಿಗೆ ಟಿಕೆಟ್ ನೀಡಿದರೆ ನಮ್ಮ ಅಭ್ಯಂತರ ಏನೂ ಇಲ್ಲ. ಎಲ್ಲರೂ ಸೇರಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ಅದು ಬಿಟ್ಟು ಹೊರಗಡೆಯಿಂದ ಬಂದವರಿಗೆ ಟಿಕೆಟ್‌ ನೀಡಿದರೆ ಶಿವಮೊಗ್ಗ ನಗರದ ಎಲ್ಲ 32 ವಾರ್ಡ್ ಅಧ್ಯಕ್ಷರು ರಾಜೀನಾಮೆ ನೀಡುತ್ತೇವೆ. ಚುನಾವಣೆಯಲ್ಲಿ ಕೆಲಸ ಮಾಡದೆ, ತಟಸ್ಥರಾಗಿ ಉಳಿದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: SC ST Reservation : ಎಸ್ಸಿ ಪಟ್ಟಿಯಿಂದ ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ, ಕಾಂಗ್ರೆಸ್‌ನಿಂದ ಅಪಪ್ರಚಾರ ಎಂದ ಬೊಮ್ಮಾಯಿ

ಶಿವಮೊಗ್ಗದಲ್ಲಿ ವಾರ್ಡ್‌ ಅಧ್ಯಕ್ಷರ ಸಭೆ

ಈ ಸಂಬಂಧ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಸೇರಿದ್ದ ವಾರ್ಡ್ ಅಧ್ಯಕ್ಷರು, ಈ ತೀರ್ಮಾನಕ್ಕೆ ಬಂದಿದ್ದಾರೆ. ಒಮ್ಮತದಿಂದ ಪ್ರಮಾಣ ಮಾಡಿ ಈ ತೀರ್ಮಾನವನ್ನು ಪ್ರಕಟಿಸಲಾಗಿದೆ. ಮಹದೇವ, ಶಿವಮೂರ್ತಿ, ಶಶಿ, ಅನ್ನು, ರೂಪಾ, ಮೇರಿ ಸೇರಿದಂತೆ ಇನ್ನಿತರ ವಾರ್ಡ್‌ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.

ವಿಧಾನಸಭೆಯತ್ತ ಆಯನೂರು ಕಣ್ಣು

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಮೇಲೆ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಕಣ್ಣಿಟ್ಟಿದ್ದಾರೆ. ಅವರು ಈಗಾಗಲೇ ಬಿಜೆಪಿಯಿಂದ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಆದರೆ, ಬಿಜೆಪಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ, ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರಿಗೆ ವಯಸ್ಸಿನ ಆಧಾರದ ಮೇಳೆ ಈ ಬಾರಿ ಟಿಕೆಟ್‌ ನೀಡಲಾಗುವುದಿಲ್ಲ ಎಂಬ ಸುದ್ದಿ ಹರಿದಾಡುತ್ತಿರುವುದರಿಂದ ಆ ಸ್ಥಾನಕ್ಕೆ ತಮಗೆ ಟಿಕೆಟ್‌ ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ. ಆದರೆ, ಇದಕ್ಕೆ ಈಶ್ವರಪ್ಪ ಸುತರಾಂ ಒಪ್ಪದೆ, ತಮಗೆ ಇಲ್ಲವೇ ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್‌ ನೀಡಬೇಕು ಎಂದು ಬಯಸಿದ್ದಾರೆ.

ಇದರಿಂದ ವ್ಯಗ್ರರಾಗಿರುವ ಆಯನೂರು ಮಂಜುನಾಥ್‌, ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಈಶ್ವರಪ್ಪ ಮೇಲೆಯೂ ನೇರವಾಗಿ ಹರಿಹಾಯ್ದು, ಅಪ್ಪನ ನಂತರ ಮಗನಿಗೆ ಟಿಕೆಟ್‌ ಕೊಡಲು ತಮ್ಮ ವಿರೋಧ ಇದೆ ಎಂದು ಹೇಳಿದ್ದಾರೆ. ಈಶ್ವರಪ್ಪ ಮಗನಿಗಿಂತ ತಮಗೆ ಹೆಚ್ಚಿನ ಅರ್ಹತೆ ಇದೆ ಎಂದೂ ಹೇಳಿದ್ದಾರೆ. ತಮಗಲ್ಲದೆ ಬೇರೆ ಯಾರಿಗೇ ಟಿಕೆಟ್‌ ನೀಡಿದರೂ ವಿರೋಧವಿದೆ ಎಂದು ಗುಡುಗಿದ್ದರು.

ಇದನ್ನೂ ಓದಿ: Ballary young Mayor : ಬಳ್ಳಾರಿ ಪಾಲಿಕೆಗೆ 21 ವರ್ಷದ ಯುವತಿ ಮೇಯರ್‌, ರಾಜ್ಯದಲ್ಲೇ ಅತಿಕಿರಿಯ ವಯಸ್ಸಿನ ಮಹಾಪೌರರು!

ಅತ್ತ ಕಾಂಗ್ರೆಸ್‌ ಪಕ್ಷದ ನಾಯಕರ ಜತೆಗೂ ಆಯನೂರು ಸಂಪರ್ಕದಲ್ಲಿದ್ದು, ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದು ಈಗ ಸ್ಥಳೀಯ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಟಿಕೆಟ್‌ ನೀಡುವುದೇ ಆದರೆ, ಪಕ್ಷದಲ್ಲಿದ್ದವರಿಗೆ ಕೊಡಬೇಕು, ಹೊರಗಡೆಯಿಂದ ಬಂದವರಿಗೆ ಯಾವುದೇ ಕಾರಣಕ್ಕೂ ಟಿಕೆಟ್‌ ನೀಡಬಾರದು. ಒಂದು ವೇಳೆ ಇದನ್ನೂ ಮೀರಿ ನಿರ್ಧಾರ ತೆಗೆದುಕೊಂಡರೆ ಅಭ್ಯರ್ಥಿಗೆ ತಮ್ಮ ಬೆಂಬಲ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ತಮ್ಮ ಸೇವೆ ಒದಗಿಸಲು ಅಡ್ಡಿಪಡಿಸುವ ವ್ಯಕ್ತಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

VISTARANEWS.COM


on

bike taxi services
Koo

ಬೆಂಗಳೂರು: ಆಟೋ ಯೂನಿಯನ್‌ಗಳು ಮತ್ತು ಅವುಗಳ ಸದಸ್ಯರಿಂದ ಬೈಕ್ ಟ್ಯಾಕ್ಸಿ ಸವಾರರು ಎದುರಿಸುತ್ತಿರುವ ಕಿರುಕುಳ, ದೈಹಿಕ ಹಿಂಸೆ, ವಾಹನ ಹಾನಿ ಮತ್ತು ಅಡಚಣೆಯ ವಿರುದ್ಧದ ಕಾನೂನು ಹೋರಾಟದಲ್ಲಿ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ (Bike Taxi Welfare Association) ಗಮನಾರ್ಹ ಜಯ ಸಾಧಿಸಿದೆ. ಬೈಕ್ ಟ್ಯಾಕ್ಸಿ ಸವಾರರು ತಮ್ಮ ಸೇವೆ (Bike Taxi Services) ಒದಗಿಸಲು ಕಾನೂನುಬಾಹಿರವಾಗಿ ಅಡ್ಡಿಪಡಿಸುವ ಯಾವುದೇ ವ್ಯಕ್ತಿ ಅಥವಾ ಘಟಕದ ವಿರುದ್ಧ ತ್ವರಿತ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಹಿರಿಯ ನ್ಯಾಯವಾದಿ ಕೆ.ಎನ್. ಫಣೀಂದ್ರ ಅವರ ಮೂಲಕ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್, ಭಾರತದ ಸಂವಿಧಾನದ 226 ಮತ್ತು 227 ರ ಪರಿಚ್ಛೇದದ ಅಡಿ ತಮ್ಮ ಕಾರ್ಯಾಚರಣೆಗಳಲ್ಲಿ ಕಾನೂನುಬಾಹಿರ ಹಸ್ತಕ್ಷೇಪದಿಂದ ಪರಿಹಾರ ಕೋರಿ ರಿಟ್ ಅರ್ಜಿ (WP -9255/2024) ಸಲ್ಲಿಸಿತ್ತು. ಅರ್ಜಿ ಸ್ವೀಕರಿಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿ ನಿರ್ವಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಅಡೆತಡೆಯಿಲ್ಲದ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ನಿರ್ಣಾಯಕ ಆದೇಶ ಹೊರಡಿಸಿದೆ.

ನ್ಯಾಯಾಲಯದ ನಿರ್ದೇಶನವು, ಬೈಕ್ ಟ್ಯಾಕ್ಸಿ ಸವಾರರು ತಮ್ಮ ಸೇವೆಗಳನ್ನು ಒದಗಿಸಲು ಕಾನೂನುಬಾಹಿರವಾಗಿ ಅಡ್ಡಿಪಡಿಸುವ ಯಾವುದೇ ವ್ಯಕ್ತಿ ಅಥವಾ ಘಟಕದ ವಿರುದ್ಧ ತ್ವರಿತ ಮತ್ತು ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದೆ. ಈ ಆದೇಶವು ಕಾನೂನು ಬಾಧ್ಯತೆಯ ರಕ್ಷೆಯನ್ನು ಹೊಂದಿರುವುದು ಮಾತ್ರವಲ್ಲದೆ ನಮ್ಮ ಸಾರಿಗೆ ವ್ಯವಸ್ಥೆಯೊಳಗೆ ಎಲ್ಲಾ ಸವಾರರ ಸುರಕ್ಷತೆ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ.

ನ್ಯಾಯಾಲಯದ ಆದೇಶದ ಪ್ರಮುಖ ಅಂಶಗಳು

1.ಅಡಚಣೆಯ ವಿರುದ್ಧ ಕ್ರಮ: ಕಾನೂನುಬಾಹಿರವಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಡ್ಡಿಪಡಿಸುವ ವ್ಯಕ್ತಿಗಳ ವಿರುದ್ಧ ತಕ್ಷಣವೇ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

2.ರಾಜ್ಯದ ಜವಾಬ್ದಾರಿ: ಬೈಕ್ ಟ್ಯಾಕ್ಸಿ ನಿರ್ವಾಹಕರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡುವ ರಾಜ್ಯ ಸರ್ಕಾರದ ಜವಾಬ್ದಾರಿಯನ್ನು ಒತ್ತಿಹೇಳಿದೆ.

3.ಸಾಂಸ್ಥಿಕ ಕರ್ತವ್ಯ: ಬೈಕ್ ಟ್ಯಾಕ್ಸಿ ನಿರ್ವಾಹಕರು ಸಲ್ಲಿಸಿದ ದೂರುಗಳ ಮೇಲೆ ಕಾರ್ಯನಿರ್ವಹಿಸಲು ಸರ್ಕಾರಿ ಇಲಾಖೆಗಳ ಕರ್ತವ್ಯವನ್ನು ಗುರುತಿಸುವುದು, ಹೊಣೆಗಾರಿಕೆ ಮತ್ತು ನ್ಯಾಯವನ್ನು ಖಾತ್ರಿಪಡಿಸುವುದು.

ಈ ಆದೇಶವು ಬೈಕ್ ಟ್ಯಾಕ್ಸಿ ನಿರ್ವಾಹಕರ ಹಕ್ಕುಗಳನ್ನು ಎತ್ತಿಹಿಡಿಯುವ ಮತ್ತು ಅವರ ಸೇವೆಗಳಿಗೆ ಪೂರಕ ವಾತಾವರಣವನ್ನು ಬೆಳೆಸುವ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. ಬೈಕ್ ಟ್ಯಾಕ್ಸಿ ಅಸೋಸಿಯೇಷನ್, ಬೈಕ್ ಸವಾರರ ಹಿತರಕ್ಷಿಸುವ ಆದೇಶಕ್ಕಾಗಿ ಹೈಕೋರ್ಟ್‌ಗೆ ಕೃತಜ್ಞತೆ ಸಲ್ಲಿಸಿದೆ.

ಇದನ್ನೂ ಓದಿ | Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

ಬೈಕ್ ಟ್ಯಾಕ್ಸಿ ನಿರ್ವಾಹಕರ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವ ತನ್ನ ಧ್ಯೇಯೋದ್ದೇಶದಲ್ಲಿ ಸಂಘವು ದೃಢವಾಗಿ ಪ್ರಯತ್ನಿಸುತ್ತದೆ, ಎಲ್ಲಾ ಮಧ್ಯಸ್ಥಗಾರರನ್ನು ಅಭಿವೃದ್ಧಿ ಹೊಂದುತ್ತಿರುವ ಸಾರಿಗೆ ಪರಿಸರ ವ್ಯವಸ್ಥೆಗಾಗಿ ಕಾನೂನಿನ ನಿಯಮಕ್ಕೆ ಬದ್ಧವಾಗಿರಲು ಮತ್ತು ಮಾರ್ಚ್‌ 28ರಂದು ರಿಟ್ ಅರ್ಜಿ ಸಂಖ್ಯೆ 9255/2024 ಯಲ್ಲಿ ಉಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಗೌರವಿಸಿ ಪಾಲಿಸಲು ಒತ್ತಾಯಿಸಿದೆ.

Continue Reading

Lok Sabha Election 2024

Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

Lok Sabha Election 2024: ಜಾತಿ ಗಣತಿಯನ್ನು ಇಡೀ ದೇಶದಲ್ಲಿ ನಡೆಸುತ್ತೇವೆ. ಯಾವ ಸಮುದಾಯದವರು ಎಷ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳುತ್ತೇವೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸುತ್ತೇವೆ. ಅಲ್ಲದೆ, ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ. ಕೃಷಿಗಾಗಿ ಹೊಸ ನೀತಿ ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

VISTARANEWS.COM


on

Lok Sabha Election 2024 Priyanka Gandhi announces constitutional amendment
Koo

ಚಿತ್ರದುರ್ಗ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಈಗ ಪ್ರಿಯಾಂಕಾ ಗಾಂಧಿ (Priyanka Gandhi) ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಸಂವಿಧಾನ ತಿದ್ದುಪಡಿ (Constitutional Amendment) ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಜಾತಿ ಗಣತಿಯನ್ನು ಇಡೀ ದೇಶದಲ್ಲಿ ನಡೆಸುತ್ತೇವೆ. ಯಾವ ಸಮುದಾಯದವರು ಎಷ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳುತ್ತೇವೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸುತ್ತೇವೆ. ಅಲ್ಲದೆ, ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ. ಕೃಷಿಗಾಗಿ ಹೊಸ ನೀತಿ ಮಾಡುತ್ತೇವೆ ಎಂದು ಹೇಳಿದರು.

ಬಂಡವಾಳಶಾಹಿಗಳಿಗೆ ದೇಶದ ಆಸ್ತಿ ಮಾರಾಟ

ದೇಶದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ನಾನು ಮಾತನಾಡುತ್ತೇನೆ. ದೇಶದಲ್ಲಿ ಎರಡು ಸತ್ಯಗಳಿವೆ. ಒಂದು, ನೀವು ಬೆಲೆ ಏರಿಕೆಯಿಂದ ಕಷ್ಟ ಪಡುತ್ತಿದ್ದೀರಿ. ಮತ್ತೊಂದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾತನಾಡುವುದಾಗಿದೆ ಎಂದು ಮಾಧ್ಯಮಗಳು ಹೇಳುತ್ತಿರುವುದು. ಆದರೆ, ದೇಶದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆಗಳಿವೆ. ದೊಡ್ಡ ದೊಡ್ಡ ಮಾತುಗಳನ್ನು ಮೋದಿ ಆಡಿದ್ದರು. ಹೆಣ್ಣುಮಕ್ಕಳು ಹಬ್ಬ ಹರಿ ದಿನ ಮಾಡಲು ಕಷ್ಟ ಪಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಕಷ್ಟಪಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲದರಲ್ಲೂ ಬೆಲೆ ಏರಿಕೆ ಆಗಿದೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ, ಜಿಎಸ್‌ಟಿಯಿಂದ ಜನ ಕಷ್ಟದಲ್ಲಿ ಇದ್ದಾರೆ. ದೇಶದ ಆಸ್ತಿಯನ್ನು ಬಂಡವಾಳಶಾಹಿಗಳಿಗೆ ಮೋದಿ ಮಾರಾಟ ಮಾಡುತ್ತಿದ್ದಾರೆ. ಅವರಿಗೆ 16 ಲಕ್ಷ ಕೋಟಿ ಸಬ್ಸಿಡಿ ಕೊಟ್ಟಿದ್ದಾರೆ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಎಲ್ಲವನ್ನು ಮಾರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಬಿಜೆಪಿಗೆ ಚಂದಾ ಕೊಟ್ಟಿರುವ ಐಟಿ ದಾಳಿಗೊಳಪಟ್ಟ ಕಂಪನಿಗಳು

ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದಾರೆ. ಒಬ್ಬರು ಸಿಎಂ, ಇನ್ನೊಬ್ಬರು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ್ದಾರೆ. ಚುನಾವಣಾ ಬಾಂಡ್‌ಗಳ ಮೂಲಕ ಹಗರಣ ಮಾಡಿದ್ದಾರೆ. ದಾನ ಮಾಡಿದವರ ಹೆಸರು ಯಾರಿಗೂ ಗೊತ್ತಾಗುವುದಿಲ್ಲ. ಹೆಸರು ಮುಚ್ಚಿಡುವುದು ಸರಿಯಲ್ಲ, ಬಹಿರಂಗಗೊಳಿಸಿ ಎಂದು ಕೋರ್ಟ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಯಾರ ಬಳಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಲಿಸ್ಟ್ ಹೊರಗೆ ಬಂದ ಮೇಲೆ ಗೊತ್ತಾಯಿತು. ಯಾವ ಕಂಪನಿಗಳ ಮೇಲೆ ದಾಳಿಯಾಗಿತ್ತೋ ಆ ಕಂಪನಿಗಳು ದಾನ ಕೊಟ್ಟಿವೆ. ಕಪ್ಪು ಹಣ ತರಲು ನೋಟು ರದ್ದು ಮಾಡಿದ್ದಾಗಿ ಹೇಳಿದ್ದರು. ಆ ಸಂದರ್ಭದಲ್ಲಿ ನೀವು ಕಷ್ಟ ಪಟ್ಟಿದ್ದೀರಿ. ಆದರೆ, ಅದೇ ಸಮಯದಲ್ಲಿ ಕಪ್ಪು ಹಣವನ್ನು ವೈಟ್ ಮಾಡಿಕೊಂಡರು. ಅವರ ತಪ್ಪು ಮುಚ್ಚಿಕೊಳ್ಳಲು ವಿಪಕ್ಷದವರು ಭ್ರಷ್ಟರು ಎಂದು ಕರೆಯುತ್ತಿದ್ದಾರೆ. ದೇಶವನ್ನು ಆರ್ಥಿಕವಾಗಿ ಹಾಳು ಮಾಡುತ್ತಿದ್ದಾರೆ. ಚುನಾವಣೆ ಬಂದಾಗ ಜಾತಿ, ಧರ್ಮದ ಬಗ್ಗೆ ಮಾತನಾಡಿ ಗಮನವನ್ನು ಬೇರೆ ಕಡೆ ಸೆಳೆಯುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

ಸಂವಿಧಾನ ಬದಲಾವಣೆ ಮಾತನಾಡುವ ಬಿಜೆಪಿ ನಾಯಕರು

ನಿಮ್ಮ ಕಷ್ಟದ ಬಗ್ಗೆ ಮಾತನಾಡದ ನರೇಂದ್ರ ಮೋದಿ ಅವರು, 400 ಹೆಚ್ಚು ಸ್ಥಾನ ಕೊಡಿ, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದರ ಅರ್ಥವೇನು? ಜನರೇ ಸಾರ್ವಭೌಮರು ಎಂದು ಸಂವಿಧಾನ ಹೇಳಿದೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಿಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

ಸುಳ್ಳು ಬಿಟ್ಟರೆ ಬೇರೇನನ್ನೂ ಹೇಳಿಲ್ಲ

ದೇಶದಲ್ಲಿ ಜನರ ಕಷ್ಟಗಳು ದೊಡ್ಡದಾಗಿವೆ. ನೀವು ಎಷ್ಟು ಸಂಘರ್ಷ ಮಾಡುತ್ತಿದ್ದೀರ ಎಂಬುದು ನರೇಂದ್ರ ಮೋದಿ ಅವರಿಗೆ ಗೊತ್ತಿಲ್ಲ. ಒಂದು ಕಾಲದಲ್ಲಿ ಪ್ರಧಾನ ಮಂತ್ರಿಗಳು ನಿಮ್ಮ ಹಳ್ಳಿ, ನಿಮ್ಮ ಮನೆಗಳಿಗೆ ಬರುತ್ತಿದ್ದರು. ಒಂದು ಕಾಲದಲ್ಲಿ ದೇಶದ ನಾಯಕರು ಸೇವಾ ಮನೋಭಾವದಿಂದ ಇರುತ್ತಿದ್ದರು. ಆದರೆ, ಇಂದಿನ ನಾಯಕನ ಬಳಿ ಅಹಾಂಕರ ಕಾಣುತ್ತಿದೆ. ಮೋದಿ ಸರ್ಕಾರ ಸುಳ್ಳು ಬಿಟ್ಟರೆ ಬೇರೆ ಏನನ್ನೂ ಹೇಳಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಬರ ಪರಿಹಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದು ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಕಳಸಾ ಬಂಡೂರಿ ಯೋಜನೆಗೆ ಅನುಮತಿ ಕೊಟ್ಟಿಲ್ಲ. ಭದ್ರಾ ಯೋಜನೆಗೆ ಹಣ ಕೊಟ್ಟಿಲ್ಲ. ಕರ್ನಾಟಕಕ್ಕೆ ಯಾಕೆ ಮೋದಿ ಹೀಗೆ ಮಾಡುತ್ತಿದ್ದಾರೆ? ಯಾವ ರಾಜ್ಯದಲ್ಲಿ ಅವರಿಗೆ ಅಧಿಕಾರ ಇರುವುದದಿಲ್ಲವೋ ಅಲ್ಲಿ ಹಣ ಕೊಡೋದಿಲ್ಲ. ಕೇವಲ ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಮಾತ್ರ ಹಣ ಕೊಡಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

ಅಗ್ನಿಪಥ್‌ಗೆ ಬ್ರೇಕ್‌

ಗ್ಯಾರಂಟಿ ಯೋಜನೆಯಿಂದ ನಿಮ್ಮ ಬದುಕು ಬದಲಾಗಿಲ್ಲವಾ? ಸುಧಾರಣೆಯಾಗಿಲ್ಲವಾ ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ನ್ಯಾಯ ಪತ್ರವನ್ನು ಬಿಡುಗಡೆ ಮಾಡಿದೆ. ನಮ್ಮ ಪಕ್ಷ ಅಧಿಕಾರಿಕ್ಕೆ ಬಂದರೆ ವರ್ಷಕ್ಕೆ ಒಂದು ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ. ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಶೇಕಡಾ 50ರಷ್ಟನ್ನು ಮಹಿಳೆಯರಿಗೆ ಮೀಸಲಿಡುತ್ತೇವೆ. ಆರೋಗ್ಯ ವಿಮೆ, ಅಂಗನವಾಡಿ ಕಾರ್ಯಕರ್ತರ ಸಂಬಳವನ್ನು ಹೆಚ್ಚಳ ಮಾಡುತ್ತೇವೆ. ಶಿಕ್ಷಣಕ್ಕೆ ಸಾಲ ಕೊಡುತ್ತೇವೆ, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಸಾಲ ಕೊಡುತ್ತೇವೆ. ನರೇಂದ್ರ ಮೋದಿ ಸರ್ಕಾರದಲ್ಲಿ ಎಷ್ಟು ಉದ್ಯೋಗ ಖಾಲಿ ಇದೆಯೋ ಅಷ್ಟನ್ನೂ ಭರ್ತಿ ಮಾಡುತ್ತೇವೆ. ಅಗ್ನಿಪಥ್ ನಿಲ್ಲಿಸಿ ಹಿಂದಿನ ರೀತಿಯಲ್ಲಿ ನೇಮಕಾತಿ ಮಾಡುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.

Continue Reading

ಕರ್ನಾಟಕ

Road Accident: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು; ಅಪಘಾತದ ಬಳಿಕ ಹೊತ್ತಿ ಉರಿದ ಬಸ್

Road Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಮಂಗಳವಾರ ಅಪಘಾತದ ನಡೆದಿದೆ. ಹಿಂಬದಿಯಿಂದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ಹಾಸನ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಮಂಗಳವಾರ ನಡೆದಿದೆ. ಅಪಘಾತದ ನಂತರ ರಸ್ತೆಯಲ್ಲಿ ಕೆ‌ಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತದೇಹಗಳು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ | Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಅಪಘಾತದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ರಸ್ತೆಯಲ್ಲೇ ಚಾಲಕ ಬಸ್ ನಿಲ್ಲಿಸಿದ್ದು, ಬಸ್‌ನಿಂದ ಕೆಳಗಿಳಿದು ಪ್ರಯಾಣಿಕರು ಓಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಬೆಂಕಿಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

bolero hit 3 death road accident raichur

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಬಂತು 10 ಅನಕೊಂಡ! ಬ್ಯಾಂಕಾಕ್‌ನಿಂದ ಅಕ್ರಮ ಆಮದು, ಬಂಧನ

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಕದ್ದು ತರಲಾಗುತ್ತಿದ್ದ 10 ಅನಕೊಂಡಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ತುಮಕೂರು

Lok Sabha Election 2024: ಶಿರಾದಲ್ಲಿ ಕ್ಯಾಂಡಲ್‌ ಹಿಡಿದು ಮತದಾನ ಜಾಗೃತಿ

Lok Sabha Election 2024: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಪ್ರಯುಕ್ತ ಶಿರಾ ನಗರದಲ್ಲಿ ಸೋಮವಾರ ಸಂಜೆ ಕ್ಯಾಂಡಲ್ ಹಿಡಿದು ಪ್ರಮುಖ ಬೀದಿಯಲ್ಲಿ ಸಂಚರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

VISTARANEWS.COM


on

Voting awareness programme in Shira
Koo

ಶಿರಾ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ (Lok Sabha Election 2024) ಪ್ರಯುಕ್ತ ನಗರದಲ್ಲಿ ಸೋಮವಾರ ಸಂಜೆ ಕ್ಯಾಂಡಲ್ ಹಿಡಿದು ಪ್ರಮುಖ ಬೀದಿಯಲ್ಲಿ ಸಂಚರಿಸುವ ಮೂಲಕ ಮತದಾನ ಜಾಗೃತಿ (Voting awareness) ಮೂಡಿಸಲಾಯಿತು.

ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾ.ಪಂ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಸಹಾಯಕ ಚುನಾವಣಾ ಅಧಿಕಾರಿ ಸೋಮಪ್ಪ ಕಡಕೋಳ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

ತಹಸೀಲ್ದಾರ್‌ ದತ್ತಾತ್ರೇಯ, ನಗರಸಭೆ ಆಯುಕ್ತ ರುದ್ರೇಶ್ ಮಾತನಾಡಿದರು.

ಮತದಾನದ ಜಾಗೃತಿ ಘೋಷಣೆಗಳ ಫಲಕಗಳ ಮೂಲಕ ಕ್ಯಾಂಡಲ್ ಹಿಡಿದು ಸಾರ್ವಜನಿಕರಿಗೆ ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.

ಇದನ್ನೂ ಓದಿ: Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಈ ಸಂದರ್ಭದಲ್ಲಿ ತಾಪಂ ಇಒ ಹನುಮಂತರಾಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
bike taxi services
ಬೆಂಗಳೂರು22 seconds ago

Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

Lok Sabha Election 2024 Priyanka Gandhi announces constitutional amendment
Lok Sabha Election 202412 mins ago

Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

Lok Sabha Election 2024
Lok Sabha Election 202413 mins ago

Lok Sabha Election 2024: ಸೂರತ್‌ನಲ್ಲಿ ಕಮಲ ಪಡೆಯ ಗೆಲುವಿಗೆ ಪರೋಕ್ಷ ಕಾರಣಕರ್ತರಾದ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಸೇರ್ಪಡೆ?

Latest40 mins ago

Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Road Accident
ಕರ್ನಾಟಕ42 mins ago

Road Accident: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು; ಅಪಘಾತದ ಬಳಿಕ ಹೊತ್ತಿ ಉರಿದ ಬಸ್

Himanta Biswa Sarma
ರಾಜಕೀಯ46 mins ago

Himanta Biswa Sarma: ಕಾಂಗ್ರೆಸ್ ಪ್ರಣಾಳಿಕೆ ಪಾಕಿಸ್ತಾನದ ಜನರಿಗೆ ಹೆಚ್ಚು ಸೂಕ್ತ: ಹಿಮಂತ ಬಿಸ್ವಾ ಶರ್ಮಾ

Dungarees Fashion In Summer
ಫ್ಯಾಷನ್46 mins ago

Dungarees Fashion In Summer: ಬೇಸಿಗೆ ಸೀಸನ್‌ನಲ್ಲಿ ಹೀಗಿರಲಿ ಲೈಟ್‌ವೈಟ್‌ ಡಂಗ್ರೀಸ್‌ ಕಾಂಬಿನೇಷನ್‌

Voting awareness programme in Shira
ತುಮಕೂರು49 mins ago

Lok Sabha Election 2024: ಶಿರಾದಲ್ಲಿ ಕ್ಯಾಂಡಲ್‌ ಹಿಡಿದು ಮತದಾನ ಜಾಗೃತಿ

Suresh Raina
ಪ್ರಮುಖ ಸುದ್ದಿ49 mins ago

Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

Karnataka Weather Forecast
ಮಳೆ53 mins ago

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌