B.S. Yediyurappa Birthday: ಮತ್ತಷ್ಟು ಸಫಲ, ಅರ್ಥಪೂರ್ಣ ಜೀವನ ನಿಮ್ಮದಾಗಲಿ: ಬಿ.ಎಸ್‌. ಯಡಿಯೂರಪ್ಪಗೆ ಬಿ.ಎಲ್‌. ಸಂತೋಷ್‌ ಶುಭಾಶಯ - Vistara News

ಕರ್ನಾಟಕ

B.S. Yediyurappa Birthday: ಮತ್ತಷ್ಟು ಸಫಲ, ಅರ್ಥಪೂರ್ಣ ಜೀವನ ನಿಮ್ಮದಾಗಲಿ: ಬಿ.ಎಸ್‌. ಯಡಿಯೂರಪ್ಪಗೆ ಬಿ.ಎಲ್‌. ಸಂತೋಷ್‌ ಶುಭಾಶಯ

ರಾಜ್ಯ ಕಂಡ ಅತ್ಯಂತ ಸಫಲ ಮುಖ್ಯಮಂತ್ರಿ ಎಂದು ಬಿ.ಎಸ್‌. ಯಡಿಯೂರಪ್ಪ ಅವರನ್ನು ಬಿ.ಎಲ್‌. ಸಂತೋಷ್‌ ಬಣ್ಣಿಸಿದ್ದಾರೆ.

VISTARANEWS.COM


on

BL Santhosh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಕೀಯದ ಅತ್ಯಂತ ಸಫಲ ಮುಖ್ಯಮಂತ್ರಿಗಳಲ್ಲೊಬ್ಬರಾದ ಬಿ.ಎಸ್‌. ಯಡಿಯೂರಪ್ಪ ಅವರ ಮುಂದಿನ ಜೀವನ ಮತ್ತಷ್ಟು ಸಫಲ ಹಾಗೂ ಅರ್ಥಪೂರ್ಣವಾಗಿರಲಿ ಎಂದು ರಾಷ್ಟ್ರೀಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಶುಭ ಹಾರೈಸಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಎಸ್‌. ಯಡಿಯೂರಪ್ಪ ಜತೆಗಿರುವ ಫೋಟೊವನ್ನು ಪೋಸ್ಟ್‌ ಮಾಡಿ ಹುಟ್ಟುಹಬ್ಬದ ಶುಭಾಶಯ( B.S. Yediyurappa Birthday) ಕೋರಿದ್ದಾರೆ.

ಅನೇಕರಿಗೆ ಈ ಭಾವಚಿತ್ರ, ಈ ದಿನದ ಅತ್ಯುತ್ತಮ ಚಿತ್ರ. ಆದರೆ ನಮಗೆ ಇದು ಅದಕ್ಕಿಂತಲೂ ಹೆಚ್ಚಿನ ಮಹತ್ವ ಹೊಂದಿದೆ. ಅನೇಕ ರಾಜಕೀಯ ಪಕ್ಷಗಳಲ್ಲಿ ಇಂತಹ ಚಿತ್ರವನ್ನು ನೋಡಲು ಸಾಧ್ಯವಿಲ್ಲ, ಏಕೆಂದರೆ ಅವು ಕುಟುಂಬ ಕೇಂದ್ರಿತವಾಗಿವೆ.

ಈ ಇಬ್ಬರೂ ನಾಯಕರು 70 ವರ್ಷ ದಾಟಿದ್ದಾರೆ. ಇಬ್ಬರೂ ಅತ್ಯಂತ ಸಾಮಾನ್ಯ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಒಬ್ಬರು ತಮ್ಮ ಕುಟುಂಬದ ಸಹಾಯಕ್ಕಾಗಿ ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರಿದರು. ಮತ್ತೊಬ್ಬರು ಅಕ್ಕಿ ಗಿರಣಿಯಲ್ಲಿ ಗುಮಾಸ್ತನಾಗಿದ್ದರು. ಇಬ್ಬರೂ ಆರ್‌ಎಸ್‌ಎಸ್‌ ಮೂಲಕ ಸಾಮಾಜಿಕ ಜೀವನ ಆರಂಭಿಸಿದರು. ಒಬ್ಬರು ಪ್ರಚಾರಕರಾಗಿದ್ದವರು, ಮತ್ತೊಬ್ಬರು ತಾಲೂಕು ಕಾರ್ಯವಾಹರಾಗಿದ್ದರು.

ಇಬ್ಬರೂ ಕೇವಲ ತಮ್ಮ ಪರಿಶ್ರಮದಿಂದಲೇ ಈ ಹಂತಕ್ಕೆ ಬೆಳೆದಿದ್ದಾರೆ. ಇಬ್ಬರೂ ದಣಿವರಿಯದವರು, ಛಲಬಿಡದವರು, ಗೊಂದಲವಿಲ್ಲದ ಬದ್ಧತೆ ಹೊಂದಿರುವವರು, ಅನುಕಂಪ ಹೊಂದಿರುವವರು ಹಾಗೂ ಸಂಘಟನೆಯೊಂದಿಗೆ ಬೆಸೆದುಕೊಂಡಿರುವವರು.

ಇದನ್ನೂ ಓದಿ: Shivamogga Airport: ಬಿ.ಎಸ್‌. ಯಡಿಯೂರಪ್ಪ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ: ಮೊಬೈಲ್‌ ಫ್ಲಾಷ್‌ ಲೈಟ್‌ ಮೂಲಕ ಗೌರವ

ಇಂದು ಒಬ್ಬರು ವಿಶ್ವ ನಾಯಕನಾದರೆ ಮತ್ತೊಬ್ಬರು ಸಫಲ ಮುಖ್ಯಮಂತ್ರಿ. ಮುಂದಿನ ಅನೇಕ ವರ್ಷಗಳಿಗಾಗುವಷ್ಟು ಛಾಪನ್ನು ಇಬ್ಬರೂ ಮೂಡಿಸಿದ್ದಾರೆ. ಇವರಿಬ್ಬರ ನಡುವೆ ಇಂದು ಇರುವ ಆತ್ಮೀಯತೆಯ ಭಾವವೇ ಬಿಜೆಪಿಯನ್ನು ಭಿನ್ನವಾಗಿಸುತ್ತದೆ. ಇಬ್ಬರ ನಡುವೆ ಇರುವುದು ಸೈದ್ಧಾಂತಿಕ, ಸಂಘಟನಾತ್ಮಕ ಹಾಗೂ ಸಾರ್ವಜನಿಕರ ಕಲ್ಯಾಣಕ್ಕಾಗಿರುವ ಆತ್ಮೀಯತೆ.

ಈ ಆತ್ಮೀಯತೆಗೆ ಕಲಷವಿಟ್ಟಂತೆ ಇಂದು ಬಿ.ಎಸ್.‌ ಯಡಿಯೂರಪ್ಪ ಅವರ ಜನ್ಮದಿನ. ಮತ್ತಷ್ಟು ಸಫಲ ಹಾಗೂ ಅರ್ಥಪೂರ್ಣ ಜೀವನವು ನಿಮ್ಮದಾಗಲಿ ಎಂದು ಆಶಿಸುತ್ತೇನೆ ಎಂದು ಬಿ.ಎಲ್‌. ಸಂತೋಷ್‌ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆ ದಾಖಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Continue Reading

ಕರ್ನಾಟಕ

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

PM Narendra Modi: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

VISTARANEWS.COM


on

PM Narendra Modi
Koo

ಹೊಸಪೇಟೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಭಾನುವಾರ ಕರ್ನಾಟಕದಲ್ಲಿ (Karnataka) ಸಾಲು ಸಾಲು ರ‍್ಯಾಲಿಗಳನ್ನು ಕೈಗೊಳ್ಳುತ್ತಿರುವ ನರೇಂದ್ರ ಮೋದಿ, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಸಮಾವೇಶದಲ್ಲೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಒಬ್ಬ ಪುಕ್ಕಲ ನಾಯಕ ದೇಶವನ್ನು ಆಳಬಲ್ಲನೆ” ಎಂದು ಪ್ರಶ್ನಿಸುವ ಮೂಲಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ರಾಮಮಂದಿರ ನಿರ್ಮಾಣವಾದರೆ ದಂಗೆ ಸೃಷ್ಟಿಯಾಗುತ್ತದೆ. ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಕಾಂಗ್ರೆಸ್‌ ನಾಯಕರು ಭಯ ಹುಟ್ಟಿಸುತ್ತಿದ್ದರು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿದರೂ ಇದೇ ರೀತಿ ಆಗುತ್ತದೆ ಎಂದು ಸುಳ್ಳು ಹಬ್ಬಿಸಿದರು. ಆದರೆ, ಈಗ ರಾಮಮಂದಿರ ನಿರ್ಮಿಸಲಾಗಿದೆ. 370ನೇ ವಿಧಿಯನ್ನೂ ರದ್ದುಗೊಳಿಸಲಾಗಿದೆ. ಎಲ್ಲಾದರೂ ಗಲಾಟೆ ನಡೆಯಿತೇ? ಬೆಂಕಿ ಹೊತ್ತಿಕೊಂಡಿತೇ? ಅಷ್ಟಕ್ಕೂ, ಪುಕ್ಕಲ ನಾಯಕನೊಬ್ಬ ದೇಶದ ಪ್ರಧಾನಿಯಾಗಿ ಆಡಳಿತ ನಡೆಸಬಲ್ಲನೇ? ದೇಶ ಮುನ್ನಡೆಸಲು ಛಾತಿ ಇರುವ ನಾಯಕ ಬೇಕೇ ಹೊರತು, ಪುಕ್ಕಲ ನಾಯಕ” ಎಂದು ರಾಹುಲ್‌ ಗಾಂಧಿ ಪ್ರಸ್ತಾಪಿಸದೆ ಕುಟುಕಿದರು.

“ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿ ಗೆಲುವು ಸಾಧಿಸಿದರೆ ರೈತರು, ಬಡವರ ಪರವಾಗಿ ಕೆಲಸ ಮಾಡಲಾಗುತ್ತದೆ. ಹಾಗಾಗಿ, ಬಳ್ಳಾರಿಯಲ್ಲಿ ಬಿ.ಶ್ರೀರಾಮುಲು, ಕೊಪ್ಪಳದಲ್ಲಿ ಬಸವರಾಜ್‌ ಅವರನ್ನು ಗೆಲ್ಲಿಸಿ. ನೀವು ನೀಡುವ ಪ್ರತಿಯೊಂದು ಮತವೂ ಮೋದಿಯ ಕೈ ಬಲಪಡಿಸುತ್ತದೆ. ಇದು ದೇಶದಲ್ಲಿ ಉತ್ತಮ ಆಡಳಿತ ನೀಡಲು ಸಹಕಾರಿಯಾಗುತ್ತದೆ. ನೀವು ನೀಡುವ ಮತವು ವಿಕಸಿತ ಭಾರತ, ವಿಕಸಿತ ಕರ್ನಾಟಕದ ಗ್ಯಾರಂಟಿಯಾಗಿದೆ” ಎಂದು ತಿಳಿಸಿದರು.

ಕೆಫೆ ಬಾಂಬ್‌ ಸ್ಫೋಟದ ಕುರಿತೂ ಉಲ್ಲೇಖ

ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

“ಬಿಜೆಪಿ ನೇತೃತ್ವದ ಸರ್ಕಾರವು ದೇಶದಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಮಂಗಳೂರು, ಅಯೋಧ್ಯೆ, ಮುಂಬೈ ಸೇರಿ ಯಾವುದೇ ನಗರಗಳಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಬಾಂಬ್‌ ದಾಳಿಕೋರರನ್ನು ನಾವು ಮಟ್ಟಹಾಕಿದ್ದೇವೆ. ಒಂದು ಕಾಲದಲ್ಲಿ ಯೋಧರನ್ನು ಅಪಹರಿಸಿ, ಅವರ ರುಂಡ ಕತ್ತರಿಸಿ ಕಳುಹಿಸಲಾಗುತ್ತಿತ್ತು. ಆದರೆ, ಈಗ ಕೇಂದ್ರದಲ್ಲಿ ಮೋದಿ ಸರ್ಕಾರವಿದೆ. ಮನೆಯೊಳಗೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮದಾಗಿದೆ” ಎಂದರು.

ಇದನ್ನೂ ಓದಿ: PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

Continue Reading

Lok Sabha Election 2024

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕದಲ್ಲಿ ಭರ್ಜರಿಯಾಗಿ ಪ್ರಚಾರ ನಡೆಸಿದ್ದಾರೆ. ನನ್ನ ಜೀವ ಈ ದೇಶದ ಜನರಿಗಾಗಿ ಮುಡಿಪು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ನಿಮ್ಮ ಕನಸೇ ಮೋದಿ ಸಂಕಲ್ಪ ಎಂದು ಇಲ್ಲಿಯ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ಬೆಳಗಾವಿ, ಶಿರಸಿ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸಿದ ನರೇಂದ್ರ ಮೋದಿ (Narendra Modi) ಅವರು ಹಿಂದೆಂದಿಗಿಂತ ಹೆಚ್ಚು ಭಾವುಕರಾಗಿ, ಆಕ್ರಮಣಕಾರಿಯಾಗಿ ಮಾತನಾಡಿದರು. ನಿಮ್ಮ ಸೇವೆಗಾಗಿಯೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ. ಈ ನನ್ನ ಜೀವ ದೇಶಕ್ಕೆ ಮೀಸಲು ಎಂದರು.
ನನ್ನ ಜೀವನದ ಕ್ಷಣಕ್ಷಣವೂ ಈ ದೇಶದ ಒಳಿತಿಗಾಗಿ, ಈ ದೇಶದ ಜನರ ಒಳಿತಿಗಾಗಿ ಮೀಸಲು. 24×7 ನಾನು ಈ ದೇಶಕ್ಕಾಗಿ ದುಡಿಯುತ್ತಿದ್ದೇನೆ. ಇದು ನನ್ನ ಸೌಭಾಗ್ಯ ಎಂದು ಭಾವಿಸಿದ್ದೇನೆ ಎಂದು ಮೋದಿ ಹೇಳಿದಾಗ ವೇದಿಕೆ ಮುಂಭಾಗದ ಸಾವಿರಾರು ಮಂದಿ ಮೋದಿ ಮೋದಿ ಎಂಬ ಜಯಘೋಷ ಮೊಳಗಿಸಿದರು.

ನಿಮ್ಮ ಕನಸೇ ಮೋದಿ ಸಂಕಲ್ಪ ಎಂದು ಇಲ್ಲಿಯ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಕೆಲಸ ಮಾಡುತ್ತಾ 2047ರ ವಿಕಸಿತ ಭಾರತಕ್ಕಾಗಿ ನನ್ನ ಸೇವೆ ಮುಡಿಪಾಗಿಡುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಭಯೋತ್ಪಾದಕರಿಗೆ ಕಾಂಗ್ರೆಸ್‌ ಕುಮ್ಮಕ್ಕು

ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟವನ್ನು (Rameswaram cafe blast) ಮೊದಲು ಸಿಲಿಂಡರ್ ಸ್ಫೋಟವೆಂದು ಕಾಂಗ್ರೆಸ್ ಸರ್ಕಾರದವರು ಹೇಳಿದ್ದರು. ಆದರೆ, ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಕೇವಲ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ. ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಈ ಹಿಂದೆ ಮಂಗಳೂರಲ್ಲಿ ಸ್ಫೋಟ, ಬೆಂಗಳೂರಲ್ಲಿ ಸ್ಫೋಟ, ದೆಹಲಿಯಲ್ಲಿ ಸ್ಫೋಟ, ಸೂರತ್‌ನಲ್ಲಿ ಸ್ಫೋಟ ಹೀಗೆ ದೇಶದ ಎಲ್ಲ ಕಡೆ ಸ್ಫೋಟ.. ಸ್ಫೋಟವೆಂದು ನ್ಯೂಸ್ ಬರುತ್ತಿತ್ತು. ಆದರೆ, ಈಗ ಅಂದ್ರೆ 2014ರ ನಂತರ ಬಾಂಬ್‌ ಸ್ಫೋಟದ ಪ್ರಕರಣಗಳು ಆಗುತ್ತಾ ಇದೆಯಾ? ಕಾಂಗ್ರೆಸ್‌ ಪಕ್ಷದಿಂದ ಆ್ಯಂಟಿ ಸೋಷಿಯಲ್ ಹಾಗೂ ಆ್ಯಂಟಿ ನ್ಯಾಷನಲ್ ಕಾರ್ಯ ನಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಜನರ ಆಸ್ತಿ ಮೇಲೆ ಕಾಂಗ್ರೆಸ್‌ಗೆ ಕಣ್ಣು

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ಜನರ ಆಸ್ತಿಪಾಸ್ತಿಯ ಪರಿಶೀಲನೆ ನಡೆಸುತ್ತಾರಂತೆ. ನಿಮ್ಮ ಆಸ್ತಿ, ನಿಮ್ಮ ಜಮೀನು, ನಿಮ್ಮ ಚಿನ್ನವನ್ನು ಸರ್ವೆ ಮಾಡ್ತಾರಂತೆ. ಮಹಿಳೆಯರ ಮಂಗಳ ಸೂತ್ರವನ್ನು ಸರ್ವೆ ಮಾಡುತ್ತಾರಂತೆ. ಕಾಂಗ್ರೆಸ್ ಪಕ್ಷದವರು ಹಾಗೆ ಸರ್ವೆ ಮಾಡ್ತೀನಿ ಅಂತಾ ಹೋದರೆ ಸುಮ್ಮನೆ ಬಿಡುತ್ತೇನಾ? ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ವೆ, ಎಕ್ಸ್‌ರೇ ಕಾರ್ಯವನ್ನು ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ ಶ್ರೀರಾಮನ ವಿರೋಧಿ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

Continue Reading

ಕರ್ನಾಟಕ

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

PM Narendra Modi: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ಭಾಷಣ ಮಾಡಿದರು. ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಸೇರಿ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

PM Narendra Modi
Koo

ಹೊಸಪೇಟೆ (ವಿಜಯನಗರ): ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅಬ್ಬರದ ಪ್ರಚಾರ ನಡೆಸಿದರು. ಇದೇ ವೇಳೆ, ಸಮಾವೇಶದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ (Congress) ವಿರುದ್ಧ ವಾಗ್ದಾಳಿ ನಡೆಸಿದರು. ಹಾಗೆಯೇ, ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಯುವತಿ ನೇಹಾ ಹಿರೇಮಠ (Neha Hiremath) ಪ್ರಕರಣವನ್ನೂ ಪ್ರಸ್ತಾಪಿಸಿ ಕಾಂಗ್ರೆಸ್‌ಗೆ ಚಾಟಿ ಬೀಸಿದರು. ರಾಮೇಶ್ವರಂ ಬಾಂಬ್‌ ಸ್ಫೋಟದ ಕುರಿತು ಕೂಡ ಮಾತನಾಡಿದರು.

“ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಹತ್ಯೆಯಾಯಿತು. ನೇಹಾ ಹಿರೇಮಠ ಅವರ ಇಡೀ ಕುಟುಂಬವೇ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಅಷ್ಟಕ್ಕೂ, ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ನೇಹಾ ಹಿರೇಮಠ ಹತ್ಯೆಯಂತಹ ಪ್ರಕರಣಗಳು ಎಲ್ಲೂ ನಡೆಯಬಾರದು. ಇಂತಹ ಕೃತ್ಯಗಳು ನಡೆದರೂ ಕಾಂಗ್ರೆಸ್‌ಗೆ ಚಿಂತೆ ಇಲ್ಲ” ಎಂದು ಟೀಕಿಸಿದರು.

“ಕರ್ನಾಟಕದಲ್ಲಿ ಬಿಜೆಪಿ ಆಡಳಿತ ಇದ್ದಾಗ ಉದ್ಯಮದ ಏಳಿಗೆಗೆ ಬಿಜೆಪಿ ಆದ್ಯತೆ ನೀಡಿತ್ತು. ಆದರೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ವಿದ್ಯುತ್‌ ಸಮಸ್ಯೆ ಸೃಷ್ಟಿಸಿತು. ವಿದ್ಯುತ್‌ ಸಮಸ್ಯೆ ಉಂಟಾದರೆ, ಉದ್ಯಮಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ರೈತರು ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೈತರ ಹಣವನ್ನೂ ಕಾಂಗ್ರೆಸ್‌ ನುಂಗಿಹಾಕಿದೆ. ರಾಜ್ಯ ಸರ್ಕಾರ ನೀಡುತ್ತಿದ್ದ ಕಿಸಾನ್‌ ಸಮ್ಮಾನ್‌ ನಿಧಿಯನ್ನೂ ಕಾಂಗ್ರೆಸ್‌ ನಿಲ್ಲಿಸಿದೆ. ರಾಜ್ಯ ಹಾಗೂ ದೇಶಕ್ಕೆ ಕಾಂಗ್ರೆಸ್‌ ಅಪಾಯಕಾರಿಯಾಗಿದೆ. ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಮೂಲಭೂತವಾದಿ ಸಂಘಟನೆಯ ಜತೆಗೂ ನಿಲ್ಲುತ್ತದೆ” ಎಂದು ತಿರುಗೇಟು ನೀಡಿದರು.

“ಬಿಜೆಪಿಯು ದೇಶ, ರಾಜ್ಯಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಅದರಲ್ಲೂ, ಮೂಲಭೂತವಾದಿ ಸಂಘಟನೆಗಳು ಬಾಲ ಬಿಚ್ಚಲು ನಾವು ಬಿಡುವುದಿಲ್ಲ. ಎಂತಹ ಸಂದರ್ಭದಲ್ಲೂ ನಾವು ಮೂಲಭೂತವಾದಿ ಸಂಘಟನೆ ವಿರುದ್ಧ ಕ್ರಮ ತೆಗೆದುಕೊಳ್ಳದೆ ಇರುವುದಿಲ್ಲ. ಇದೇ ಮೂಲಭೂತವಾದಿ ಸಂಘಟನೆಯೊಂದರ ನಾಯಕರು ಈಗ ಜೈಲಿನಲ್ಲಿದ್ದಾರೆ. ಆದರೆ, ಇದೇ ಕಾಂಗ್ರೆಸ್‌ಗೆ ಮೂಲಭೂತವಾದಿ ಸಂಘಟನೆಯು ಲೈಫ್‌ಲೈನ್‌ ಆಗಿದೆ” ಎಂದು ಟೀಕಿಸಿದರು.

ಕೆಫೆ ಬಾಂಬ್‌ ಸ್ಫೋಟದ ಕುರಿತೂ ಉಲ್ಲೇಖ

ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

“ಬಿಜೆಪಿ ನೇತೃತ್ವದ ಸರ್ಕಾರವು ದೇಶದಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಮಂಗಳೂರು, ಅಯೋಧ್ಯೆ, ಮುಂಬೈ ಸೇರಿ ಯಾವುದೇ ನಗರಗಳಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಬಾಂಬ್‌ ದಾಳಿಕೋರರನ್ನು ನಾವು ಮಟ್ಟಹಾಕಿದ್ದೇವೆ. ಒಂದು ಕಾಲದಲ್ಲಿ ಯೋಧರನ್ನು ಅಪಹರಿಸಿ, ಅವರ ರುಂಡ ಕತ್ತರಿಸಿ ಕಳುಹಿಸಲಾಗುತ್ತಿತ್ತು. ಆದರೆ, ಈಗ ಕೇಂದ್ರದಲ್ಲಿ ಮೋದಿ ಸರ್ಕಾರವಿದೆ. ಮನೆಯೊಳಗೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮದಾಗಿದೆ” ಎಂದರು.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನು ದೇಶದ ಹಲವು ಭಾಗಗಳಿಗೆ ಭೇಟಿ ನೀಡಿದ್ದೇನೆ. ಜನರೊಂದಿಗೆ ನಾನು ಒಡನಾಡಿದ್ದೇನೆ. ದೇಶದ ಜನರು ನಮ್ಮ ಸರ್ಕಾರದ ಆಡಳಿತವನ್ನು ಮೆಚ್ಚಿದ್ದಾರೆ ಎಂಬುದಕ್ಕೆ ಅವರು ತೋರಿದ ಪ್ರೀತಿಯೇ ಸಾಕ್ಷಿಯಾಗಿದೆ. ಅಷ್ಟೇ ಅಲ್ಲ, ಪ್ರಸಕ್ತ ಚುನಾವಣೆಯಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎಗೆ 400 ಕ್ಷೇತ್ರಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಕೊಡಲು ತೀರ್ಮಾನಿಸಿದ್ದಾರೆ” ಎಂದು ಹೇಳಿದರು.

ದಲ್ಲಾಳಿಗಳ ಹಾವಳಿಗೆ ಮುಕ್ತಿ

“2014ಕ್ಕೂ ಮೊದಲು ದೆಹಲಿಯಲ್ಲಿ ದಲ್ಲಾಳಿಗಳ ಆಡಳಿತ ಜೋರಾಗಿತ್ತು. ದಲ್ಲಾಳಿಗಳ ಹೆಸರಿನಲ್ಲಿ ಹೋಟೆಲ್‌ಗಳಲ್ಲಿ ರೂಮ್‌ಗಳು ಬುಕ್‌ ಆಗಿರುತ್ತಿದ್ದವು. ದಲ್ಲಾಳಿಗಳ ಮೂಲಕವೇ ಕೆಲಸಗಳು ನಡೆಯುತ್ತಿದ್ದವು. ಆದರೆ, 2014ರ ಬಳಿಕ ದಲ್ಲಾಳಿಗಳನ್ನು ದೆಹಲಿಯಿಂದ ಓಡಿಸಲಾಗಿದೆ. ದೆಹಲಿಯನ್ನು ಬಿಟ್ಟಿರುವ ದಲ್ಲಾಳಿಗಳು ಈಗ ಕೆಲವು ರಾಜ್ಯಗಳಲ್ಲಿ ಬೀಡು ಬಿಟ್ಟಿದ್ದಾರೆ” ಎಂದರು.

ಕಲ್ಯಾಣ ಕರ್ನಾಟಕ ಪ್ರಸ್ತಾಪ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ನರೇಂದ್ರ ಮೋದಿ ಹೇಳಿದರು. “ಬೀದರ್‌, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಗದಗ ಸೇರಿ ಉತ್ತರ ಕರ್ನಾಟಕದ ಹಲವೆಡೆ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಬಳ್ಳಾರಿಯಲ್ಲಿ ಜೀನ್ಸ್‌ ಉದ್ಯಮವು ಏಳಿಗೆ ಹೊಂದುತ್ತಿದೆ. ಪಿಎಲ್‌ಐ ಯೋಜನೆ ಮೂಲಕ ಇಲ್ಲಿನ ಸ್ಟೀಲ್‌ ಉದ್ಯಮವೂ ಅಭಿವೃದ್ಧಿಯತ್ತ ಸಾಗುತ್ತಿದೆ. ಕೊಪ್ಪಳದ ಆಟಿಕೆ ಉದ್ಯಮವು ಕೂಡ ಔದ್ಯಮಿಕ ಜಗತ್ತಿನಲ್ಲಿ ಗುರುತಿಸಿಕೊಳ್ಳುತ್ತಿದೆ” ಎಂದು ಮಾಹಿತಿ ನೀಡಿದರು. ‌

ರಾಮಮಂದಿರ ಕುರಿತು ಮೋದಿ ಮಾತು

“ನನಗೆ 140 ಕೋಟಿ ಜನರೂ ಕುಟುಂಬಸ್ಥರಾಗಿದ್ದಾರೆ. ಅವರ ಶ್ರೇಯೋಭಿವೃದ್ಧಿಗಾಗಿ ನಾನು ಇಡೀ ಜೀವನವನ್ನು ಸಮರ್ಪಿಸುತ್ತೇನೆ. 500 ವರ್ಷಗಳವರೆಗೆ ದೇಶದ ಜನರು ರಾಮಮಂದಿರ ಕನಸು ಕಾಣುತ್ತಿದ್ದರು. 500 ವರ್ಷದಲ್ಲಿ ಎಷ್ಟೋ ಪೀಳಿಗೆಗಳು ಕನಸು ಕಾಣುತ್ತಲೇ ಮಾಯವಾದವು. ರಾಮಮಂದಿರಕ್ಕಾಗಿ ಹೋರಾಡಿ ಎಷ್ಟೋ ಜನ ಪ್ರಾಣ ಕಳೆದುಕೊಂಡರು. ಅಷ್ಟಾದರೂ, ನಮ್ಮ ರಾಮಲಲ್ಲಾನಿಗೆ ಮನೆಯೊಂದು ಇರಲಿಲ್ಲ. ಆದರೆ, ಈಗ ರಾಮಮಂದಿರದ ಕನಸು ನನಸಾಗಿದೆ. ನಿಮ್ಮ ಕಣ್ಣೆದುರೇ, ನಿಮ್ಮ ಕನಸು ನನಸಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Continue Reading
Advertisement
Karnataka Weather
ಕರ್ನಾಟಕ2 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ11 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ16 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 202436 mins ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ49 mins ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ1 hour ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್2 hours ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ2 hours ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Parliament Flashback
Lok Sabha Election 20242 hours ago

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20243 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20247 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌