Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ! - Vistara News

ಕರ್ನಾಟಕ

Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!

Back Benchers Movie: “ಬ್ಯಾಕ್ ಬೆಂಚರ್ಸ್” ಚಿತ್ರ ಬಿಡುಗಡೆಗೊಂಡು ವಾರ ಕಳೆಯುವ ಮುನ್ನವೇ, ರಾಜ್ಯದ ನಾನಾ ಭಾಗಗಳಲ್ಲಿ ಭರ್ಜರಿ ಓಪನಿಂಗ್ ಸಿಗಲಾರಂಭಿಸಿದೆ. ಹೊಸತನವನ್ನೇ ಆತ್ಮವಾಗಿಸಿಕೊಂಡಂತಿರುವ ಈ ಕಾಲೇಜು ಕೇಂದ್ರಿತ ಕಥೆಗೆ ನೋಡುಗರೆಲ್ಲ ಫಿದಾ ಆಗಿದ್ದಾರೆ. ಬಾಯಿಂದ ಬಾಯಿಗೆ ಹಬ್ಬಿಕೊಳ್ಳುತ್ತಿರುವ ಸದಭಿಪ್ರಾಯಗಳೇ ಸಿನಿಮಾ ಮಂದಿರಗಳು ಭರ್ತಿಯಾಗುವಂಥಾ ಕಮಾಲ್ ಮಾಡುತ್ತಿವೆ. ಬ್ಯಾಕ್ ಬೆಂಚರ್ಸ್‍ಗೆ ಆರಂಭದಿಂದ ಸಿಗುತ್ತಿರುವ ಪ್ರತಿಕ್ರಿಯೆ, ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂದಣಿ ಹೆಚ್ಚಾಗುತ್ತಿರುವ ರೀತಿ ಕಂಡು ವಿತರಕರಿಗೆ ಸಂತಸವಾಗಿದೆ.

VISTARANEWS.COM


on

Back benchers Kannada movie is happy to have a great opening
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರ್ದೇಶಕ ರಾಜಶೇಖರ್ ಸೇರಿದಂತೆ ಒಂದಿಡೀ ಚಿತ್ರತಂಡ ಖುಷಿಯ ಮೂಡ್‌ನಲ್ಲಿದೆ. ಒಂದು ಹೊಸಬರ ತಂಡ ಕಟ್ಟಿಕೊಂಡು “ಬ್ಯಾಕ್ ಬೆಂಚರ್ಸ್” ಚಿತ್ರವನ್ನು (Back Benchers Movie) ರೂಪಿಸುವ ಸಾಹಸ ಮಾಡಿದ್ದವರು ರಾಜಶೇಖರ್. ಇದೀಗ ಈ ಚಿತ್ರ ಬಿಡುಗಡೆಗೊಂಡು ವಾರ ಕಳೆಯುವ ಮುನ್ನವೇ, ರಾಜ್ಯದ ನಾನಾ ಭಾಗಗಳಲ್ಲಿ ಭರ್ಜರಿ ಓಪನಿಂಗ್ ಸಿಗಲಾರಂಭಿಸಿದೆ.

ಹೊಸತನವನ್ನೇ ಆತ್ಮವಾಗಿಸಿಕೊಂಡಂತಿರುವ ಈ ಕಾಲೇಜು ಕೇಂದ್ರಿತ ಕಥೆಗೆ ನೋಡುಗರೆಲ್ಲ ಫಿದಾ ಆಗಿದ್ದಾರೆ. ಬಾಯಿಂದ ಬಾಯಿಗೆ ಹಬ್ಬಿಕೊಳ್ಳುತ್ತಿರುವ ಸದಭಿಪ್ರಾಯಗಳೇ ಸಿನಿಮಾ ಮಂದಿರಗಳು ಭರ್ತಿಯಾಗುವಂಥಾ ಕಮಾಲ್ ಮಾಡುತ್ತಿವೆ.

ಇದನ್ನೂ ಓದಿ: SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

ಅಷ್ಟಕ್ಕೂ ಆರಂಭದಲ್ಲಿ ಈ ಚಿತ್ರ 23 ಸ್ಕ್ರೀನ್‌ಗಳಲ್ಲಿ ಬಿಡುಗಡೆಗೊಂಡಿತ್ತು. ಹೆಚ್ಚಾಗಿ ಮಲ್ಟಿಪ್ಲೆಕ್ಸ್‌ಗಳಲ್ಲೇ ಈ ಚಿತ್ರ ತೆರೆಗಂಡಿತ್ತು. ಅಲ್ಲೆಲ್ಲ ದಾಖಲೆ ಮಟ್ಟದಲ್ಲಿ ಬ್ಯಾಕ್ ಬೆಂಚರ್ಸ್ ಚಿತ್ರ ಪ್ರದರ್ಶನ ಕಂಡಿದೆ. ಬ್ಯಾಕ್ ಬೆಂಚರ್ಸ್‍ಗೆ ಆರಂಭದಿಂದ ಸಿಗುತ್ತಿರುವ ಪ್ರತಿಕ್ರಿಯೆ, ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂದಣಿ ಹೆಚ್ಚಾಗುತ್ತಿರುವ ರೀತಿ ಕಂಡು ವಿತರಕರಿಗೆ ಸಂತೋಷವಾಗಿದೆ. ಅಂಥಾದ್ದೊಂದು ಸಮ್ಮೋಹಕ ಚೇತರಿಕೆ ಬ್ಯಾಕ್ ಬೆಂಚರ್ಸ್ ಕಡೆಯಿಂದ ಕಂಡು ಬರುತ್ತಿದೆ.

ಇನ್ನುಳಿದಂತೆ, ರಾಯಚೂರು, ಧಾರವಾಡ, ಶಿವಮೊಗ್ಗ, ಹುಬ್ಬಳ್ಳಿ ಮುಂತಾದೆಡೆಗಳಲ್ಲಿಯೂ ಬ್ಯಾಕ್ ಬೆಂಚರ್ಸ್ ಅಕ್ಷರಶಃ ಕಮಾಲ್ ಮಾಡಿದ್ದಾರೆ. ಈ ಭಾಗಗಳಲ್ಲಿ ಹೊಸಬರ ಚಿತ್ರಗಳು ಅದೇನೇ ಪ್ರಯತ್ನ ಪಟ್ಟರೂ ಓಪನಿಂಗ್ ಪಡೆದುಕೊಳ್ಳುತ್ತಿರಲಿಲ್ಲ. ಇಂಥಾ ವಾತಾವರಣದಲ್ಲಿ ಬ್ಯಾಕ್ ಬೆಂಚರ್ಸ್ ದಿನದಿಂದ ದಿನಕ್ಕೆ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ದಿನ ಕಳೆದಂತೆ ಶೋಗಳು ತುಂಬಿಕೊಳ್ಳುತ್ತಿವೆ. ಮೈಸೂರಿನಲ್ಲಿ ಮೊದಲ ದಿನ ಒಂದು ಶೋ ಅಷ್ಟೇ ಆಯೋಜಿಸಲಾಗಿತ್ತು. ಎರಡು ಮೂರು ದಿನ ಕಳೆಯುವಷ್ಟರಲ್ಲಿ ಅಲ್ಲಿನ ಚಿತ್ರಣವೇ ಬದಲಾಗಿ ಬಿಟ್ಟಿದೆ. ಗುರುವಾರದಂದು ಆರು ಶೋಗಳನ್ನು ನಿಗದಿಪಡಿಸಲಾಗಿದೆ. ಇದು ನಿಜಕ್ಕೂ ಕನ್ನಡ ಚಿತ್ರರಂಗದ ದೃಷ್ಟಿಯಿಂದಲೂ ಸಕಾರಾತ್ಮಕ ಬೆಳವಣಿಗೆ.

ಕಾಲೇಜು ಕೇಂದ್ರಿತ ಕಥೆಗಳು ಕನ್ನಡದಲ್ಲಿ ಹಿಟ್ ಆಗಿವೆ. ನಿರ್ದೇಶಕ ರಾಜಶೇಖರ್, ಕಾಲೇಜು ಬೇಸ್‌ನ ಈ ಕಥೆಯನ್ನು ಕಟ್ಟಿಕೊಟ್ಟಿರುವ ರೀತಿ, ಹೊಸಬರ ತಂಡ ಅದರಲ್ಲಿ ತಲ್ಲೀನವಾದ ಪರಿಗಳೆಲ್ಲವೂ ಪ್ರೇಕ್ಷಕರನ್ನು ಸೆಳೆದಿವೆ. ಒಂದು ಶೋಗೆ ಒಬ್ಬರು ಬಂದರೆ, ಮತ್ತೊಂದು ಶೋಗೆ ಹತ್ತದಿನೈದು ಮಂದಿಯ ಸಮೇತ ಬರಲಾರಂಭಿಸಿದ್ದಾರೆ. ಸದ್ಯದ ಮಟ್ಟಿಗೆ ಕನ್ನಡ ಸಿನಿಮಾಗಳಿಗೆ ಹೇಳಿಕೊಳ್ಳುವಂಥಹ ಪ್ರತಿಕ್ರಿಯೆ ಸಿಗುತ್ತಿಲ್ಲ. ಅಂಥಹುದರಲ್ಲಿ ಬ್ಯಾಕ್ ಬೆಂಚರ್ಸ್ ಭಾರೀ ಸಂಚಲನ ಸೃಷ್ಟಿಸುತ್ತದೆ.

ಇದನ್ನೂ ಓದಿ: Karnataka Rain News: ಮುಂದುವರಿದ ಮಳೆ ಅವಾಂತರ; ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಪಿ.ಪಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ರಮ್ಯಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್., ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Dengue Fever: ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

VISTARANEWS.COM


on

Health Minister Dinesh Gundurao instructs to send a team of deputy directors to dengue hot spots
Koo

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು (Dengue Fever) ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು. ಜನರಲ್ಲಿ ಡೆಂಗ್ಯೂ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಗ್ಯೂ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಟಿ ಮೇಲ್ವಿಚಾರಣೆ ನಡೆಸುವಂತೆ ಸಚಿವರು ಸೂಚನೆ ನೀಡಿದರು. ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌

ಅಲ್ಲದೇ ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್, ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಡೆಂಗ್ಯೂ ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಗ್ಯೂ ಕಡಿಮೆಯಾಗಬಹುದು. ಆದರೆ ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು. ಹೀಗಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಹತೋಟಿಗೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳ ಸಭೆ ಕರೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಡೆಂಗ್ಯೂ ಡೆತ್ ಆಡಿಟ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್ ಆಗಿ ಸೂಚನೆ ನೀಡಿರುವ ಆರೋಗ್ಯ ಸಚಿವರು, ಯಾವುದನ್ನು ಮುಚ್ಚಿಡುವುದು ಬೇಡ. ಡೆಂಗ್ಯೂ ಡೆತ್‌ಗಳಾಗಿದ್ದರೆ ಅದನ್ನು ಡೆಂಗ್ಯೂ ಡೆತ್ ಎಂದೇ ವರದಿ ಸಲ್ಲಿಸುವಂತೆ ಸಚಿವ ದಿನೇಶ್ ಗುಂಡೂರಾವ್‌ ಸೂಚಿಸಿದರು.

Continue Reading

ಬೆಂಗಳೂರು

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

Media Connect: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

Media Connect Founder and ceo Dr Divya Rangenahalli honored at Chess Festival in bengaluru
Koo

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮತ್ತು ಅಖಿಲ ಭಾರತ ಚೆಸ್‌ ಫೆಡರೇಷನ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼವಿಧಾನಸೌಧ ಓಪನ್‌ ರ‍್ಯಾಪಿಡ್‌ ಚೆಸ್‌ ಟೂರ್ನ್‌ಮೆಂಟ್‌ – 2024ʼ ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ (Media Connect) ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ಅಂತಾರಾಷ್ಟ್ರೀಯ ಚೆಸ್‌ ದಿನಾಚರಣೆ ಹಾಗೂ ಫಿಡೆ ಶತಮಾನೋತ್ಸವದ ಅಂಗವಾಗಿ ನಗರದ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸಚಿವರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು ಹಾಗೂ ಅಧಿಕಾರಿ/ಸಿಬ್ಬಂದಿಗಳಿಗಾಗಿ ವಿಧಾನಸೌಧ ಚೆಸ್‌ ಹಬ್ಬವನ್ನು ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಚೆಸ್‌ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಅರವಿಂದ್‌ ಶಾಸ್ತ್ರಿ, ಜೇವರ್ಗಿ ಶಾಸಕ ಅಜಯ್‌ ಸಿಂಗ್‌ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

Pralhad Joshi: ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಾಗಿದೆ ಎಂದು ದೂರಿದ್ದಾರೆ.

VISTARANEWS.COM


on

1200 farmers suicides in last 15 months in Karnataka says Minister Pralhad Joshi Minister Pralhad Joshi alleges
Koo

ನವದೆಹಲಿ: ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಾಗಿದೆ. ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಇದನ್ನೂ ಓದಿ: Pralhad joshi: ಎಸ್ಸಿ, ಎಸ್ಟಿ ಹಣ ದುರುಪಯೋಗ; ಸಿಎಂ ರಾಜೀನಾಮೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ, ಕಾಂಗ್ರೆಸ್ ಸರ್ಕಾರ ರೈತರಿಗಿತ್ತ ವರದಾನವೇ? ಎಂದು ಜೋಶಿ ಕಿಡಿ ಕಾರಿದ್ದಾರೆ.

ರೈತರ ಮನವಿ ಪತ್ರ ಕಸದ ಬುಟ್ಟಿಗೆ

ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿಸಿತು. ಇಂಥ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ ಜೋಶಿ “X” ಖಾತೆಯಲ್ಲಿ ಆತಂಕ ಹೊರ ಹಾಕಿದ್ದಾರೆ.

ನುಡಿದಂತೆ ನಡೆಯದ ಕಾಂಗ್ರೆಸ್

ನಾವು ಬಡವರ ಪರ, ಪರಿಶಿಷ್ಟರ ಪರ, ರೈತರ ಪರ ಎಂದು ಪರಿಪರಿಯಾಗಿ ಕಂತೆಪುರಾಣ ಹೇಳುವ ಕಾಂಗ್ರೆಸ್ ನುಡಿದಂತೆ ನಡೆಯದು. ಮಾತು ಉಳಿಸಿಕೊಳ್ಳುವ ಯೋಗ್ಯತೆ ಇಲ್ಲ ಎಂದು ಸಚಿವರು ಟೀಕಿಸಿದ್ದಾರೆ.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ರೈತರ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆಯುವ ಇವರಿಗೆ ಅಧಿಕಾರದಲ್ಲಿ ಇರುವ ಅರ್ಹತೆಯೇ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಈ ಕೂಡಲೇ ಸಿಎಂ ರಾಜಿನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

BJP Protest: ಕಾಂಗ್ರೆಸ್‌ ಸರ್ಕಾರ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದರು.

VISTARANEWS.COM


on

BJP Protest
Koo

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ (BJP Protest) ತಿಳಿಸಿದರು.

ಬಿಜೆಪಿ, ಜೆಡಿಎಸ್‌ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿ, ಕಾಂಗ್ರೆಸ್‌ ಸರ್ಕಾರ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಬಯಲಿಗೆ ಬಂದಿದೆ. ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನ ಪಡೆದಿದ್ದರೆ, ಅವರ ಕುಟುಂಬದವರು ನೂರಾರು ಸೈಟುಗಳನ್ನು ಪಡೆದಿದ್ದಾರೆ. ಸಂವಿಧಾನ ರಕ್ಷಣೆ ಮಾಡುತ್ತೇನೆಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರೇ ಸಂವಿಧಾನವನ್ನು ಭಕ್ಷಣೆ ಮಾಡಿದ್ದಾರೆ ಎಂದು ದೂರಿದರು.

ಈ ಹಗರಣಗಳ ಕುರಿತು ಮಾತನಾಡಲು ಸದನದಲ್ಲಿ ಅವಕಾಶ ನೀಡಿಲ್ಲ. ಸ್ಪೀಕರ್‌ ಕೂಡ ಕಾಂಗ್ರೆಸ್‌ ಕಡೆ ವಾಲಿರುವುದು ಸ್ಪಷ್ಟವಾಗಿದೆ. ವಿರೋಧ ಪಕ್ಷಕ್ಕೆ ಪ್ರಶ್ನೆ ಮಾಡುವ ಅಧಿಕಾರ ಇದೆ. ಆದರೆ ಅದನ್ನು ಮೊಟಕುಗೊಳಿಸಿ, ದಾಖಲೆಗಳನ್ನು ಕೊಡುತ್ತೇವೆಂಬ ಭಯದಿಂದ ಆಡಳಿತ ಪಕ್ಷ ಪಲಾಯನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಡಾದಲ್ಲಿ ದಲಿತರ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಬಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೂಡ ದಲಿತರಿಗೆ ಸಂಬಂಧಿಸಿದೆ. ಇಷ್ಟೇ ಅಲ್ಲದೆ 25 ಸಾವಿರ ಕೋಟಿ ರೂಪಾಯಿಯನ್ನು ದಲಿತರಿಗೆ ನೀಡದೆ ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಇದಕ್ಕಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಈ ಬಗ್ಗೆ ರಾಜ್ಯಪಾಲರಿಗೆ ದೂರು ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿಯವರು ಪತ್ರಿಕಾಗೋಷ್ಠಿ ಬದಲು ಅಧಿವೇಶನದಲ್ಲೇ ದಾಖಲೆಗಳನ್ನು ನೀಡಲಿ. ಆಗ ನಾವು ಅಲ್ಲೇ ಪ್ರಶ್ನೆ ಕೇಳಬಹುದಿತ್ತು. ಅದನ್ನು ಬಿಟ್ಟು ಹೇಡಿಯಂತೆ ಪಲಾಯನ ಮಾಡಿದ್ದಾರೆ ಎಂದು ದೂರಿದರು.

ಇದನ್ನೂ ಓದಿ | Assembly session: ಐತಿಹಾಸಿಕ ಸ್ಥಳ, ಸ್ಮಾರಕ ವಿರೂಪಗೊಳಿಸಿದ್ರೆ ಜೈಲು ಫಿಕ್ಸ್‌; ಮಹತ್ವದ ಮಸೂದೆ ಪಾಸ್

Assembly session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನಾಳೆ ಮುಗಿಯಬೇಕಿದ್ದ ಕಲಾಪ ಇಂದೇ ಮೊಟಕು!

Assembly session
Assembly session

ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ನಾಳೆ (ಜು.26) ಮುಗಿಯಬೇಕಿದ್ದ ಅಧಿವೇಶನ (Assembly session) ಇಂದೇ ಮೊಟಕುಗೊಂಡಂತಾಗಿದೆ. 16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನ 8 ದಿನಗಳ ಕಾಲ (37 ಗಂಟೆ, 30 ನಿಮಿಷ) ನಡೆದಿದ್ದು, ರಾಷ್ಟ್ರಗೀತೆಯೊಂದಿಗೆ ಅನಿರ್ಧಿಷ್ಟಾವಧಿಗೆ ಕಲಾಪ ಮುಂದೂಡಿಕೆಯಾಗಿದೆ.

ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ರಾಜಭವನಕ್ಕೆ ತೆರಳಲಿದರು. ಸ್ಪೀಕರ್ ನಡೆ ಕಾಂಗ್ರೆಸ್ ಕಡೆ ಎಂದು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ನಲ್ಲಿ ಭೇಟಿ ಮಾಡಿ ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ, ಮುಡಾ ಹಗರಣ ವಿಚಾರ ಚರ್ಚೆಗೆ ನೀಡದ ಬಗ್ಗೆ ಹಾಗೂ ನಾಳೆಗೆ ಮುಗಿಯುವ ಅಧಿವೇಶನ ಇಂದೇ ಮೊಟಕುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುವಂತೆ ಮನವಿ ಮಾಡಿದ್ದಾರೆ.

12 ವಿಧೇಯಕಗಳ ಅಂಗೀಕಾರ

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಒಟ್ಟು 8 ದಿನಗಳ ಕಲಾಪ ನಡೆದಿದ್ದು, ಪೂರಕ ಅಂದಾಜುಗಳು, ಲೆಕ್ಕಪರಿಶೋಧಕರ ವರದಿ ಮಂಡನೆ ಮಾಡಲಾಗಿದೆ. ಭರವಸೆಗಳ ಸಮಿತಿ, ಕಾಗದ ಪತ್ರಗಳ ಸಮಿತಿ, ಅಂದಾಜು ಸಮಿತಿ, ಅನುಸೂಚಿತ ಜಾತಿ, ಅನುಸೂಚಿತ ಪಂಗಡ ಕಲ್ಯಾಣ ಸಮಿತಿ, ಅಲ್ಪಾಸಂಖ್ಯಾತ ಸಮಿತಿಯ ಮೊದಲ ವರದಿ ಮಂಡನೆ ಮಾಡಲಾಗಿದೆ.

ಇದನ್ನೂ ಓದಿ | Assembly session: ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್; ಹೆಚ್ಚಲಿದೆ ಸಿನಿಮಾ ಟಿಕೆಟ್ ದರ, ಒಟಿಟಿ ಶುಲ್ಕ!

12 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ. ನಿಯಮ 69 ಅಡಿಯಲ್ಲಿ 14 ಸೂಚನೆಗಳ ಅಂಗೀಕಾರ ಸಿಕ್ಕಿದ್ದು, 117 ಪ್ರಶ್ನೆಗಳಿಗೆ ಉತ್ತರ ಹಾಗೂ 1902 ಪ್ರಶ್ನೆಗಳಿಗೆ ಪೈಕಿ 1438 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 170 ಗಮನ ಸೆಳೆಯುವ ಸೂಚನೆ ಗಳಿಗೆ ಉತ್ತರ ನೀಡಲಾಗಿದೆ.

ನಾಲ್ಕು ನಿರ್ಣಯ ಪಾಸ್

  • ಒನ್ ನೆಷನ್-ಒನ್ ಎಲೆಕ್ಷನ್‌ಗೆ ವಿರೋಧ
  • ನೀಟ್ ಪರೀಕ್ಷೆ ರದ್ದು
  • 1971 ಜನಗಣತಿ ಆಧರಿಸಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ
  • ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳು ಪಾರಂಪರಿಕ ಅರಣ್ಯವಾಸಿಗಳ ಅಧಿನಿಯಮ 2006 ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮಾರ್ಪಾಡು ಮಾಡುವ ನಿರ್ಣಯ
Continue Reading
Advertisement
Team India
ಕ್ರೀಡೆ12 mins ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ15 mins ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ39 mins ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು43 mins ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ44 mins ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ1 hour ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Rihanna
ವಿದೇಶ1 hour ago

Rihanna: ಮಿನಿ ಸ್ಕರ್ಟ್‌ ತೊಟ್ಟು, ಬ್ರಾ, ಅಂಡರ್‌ವೇರ್‌ ತೋರಿಸುತ್ತ ಓಡಾಡಿದ ಪಾಪ್‌ ಗಾಯಕಿ ರಿಹಾನಾ; Video ಇಲ್ಲಿದೆ

Maharaja Trophy
ಕ್ರೀಡೆ1 hour ago

Maharaja Trophy: ಮೈಸೂರು ವಾರಿಯರ್ಸ್ ತಂಡ ಸೇರಿದ ದ್ರಾವಿಡ್ ಪುತ್ರ ಸಮಿತ್

Monsoon Fashion
ಫ್ಯಾಷನ್2 hours ago

Monsoon Fashion: ಮಾನ್ಸೂನ್‌ ಸೀಸನ್‌ಗೆ ಇಶಾನಿ ಶೆಟ್ಟಿಯ ಫ್ಯಾಷನ್‌ ಟಿಪ್ಸ್‌ ಹೀಗಿದೆ!

Paris Olympics 2024
ಕ್ರೀಡೆ2 hours ago

Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್8 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ9 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ10 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌