ಮಹಾಕೂಟೇಶ್ವರ ರಥೋತ್ಸವದ ವೇಳೆ ಚಕ್ರದಡಿ ಸಿಲುಕಿ ಭಕ್ತನ ಸಾವು - Vistara News

ಬಾಗಲಕೋಟೆ

ಮಹಾಕೂಟೇಶ್ವರ ರಥೋತ್ಸವದ ವೇಳೆ ಚಕ್ರದಡಿ ಸಿಲುಕಿ ಭಕ್ತನ ಸಾವು

ಐತಿಹಾಸಿಕ ಮಹಾಕೂಟೇಶ್ವರ ರಥೋತ್ಸವದ ವೇಳೆ ರಥದ ಗಾಲಿಯಡಿ ಇಬ್ಬರು ಭಕ್ತರು ಸಿಲುಕಿದ್ದು, ಚಿಕಿತ್ಸೆ ಫಲಕಾರಿ ಆಗದೆ ಒಬ್ಬ ಮೃತಪಟ್ಟಿದ್ದಾನೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಮಹಾಕೂಟೇಶ್ವರ ಮಹಾ ರಥೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಒಬ್ಬರು ದಾರುಣವಾಗಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳವಾರ ಸಂಜೆ ನಡೆದ ಐತಿಹಾಸಿಕ ಮಹಾಕೂಟೇಶ್ವರ ರಥೋತ್ಸವದ ವೇಳೆ ಈ ದುರಂತ ಸಂಭವಿಸಿದೆ. ಮಹಾಗುಂಡಪ್ಪ ಗಾಳಿ (34) ಎಂಬುವರು ಚಿಕಿತ್ಸೆ ಫಲಿಸದೆ ಬಾಗಲಕೋಟದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈತ ಬಾದಾಮಿ ತಾಲೂಕಿನ ಯಂಕಂಚಿ ಗ್ರಾಮದವನು. ನಂದಿಕೇಶ್ವರ ಗ್ರಾಮದ ಮಲ್ಲಪ್ಪ ಶಿರೂರ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ| ರಸ್ತೆ ಅಪಘಾತ: ಹೆಲ್ಮೆಟ್ ಧರಿಸದ ಸಿಆರ್‌ಪಿಎಫ್ ಯೋಧ ಸಾವು

ಇದನ್ನೂ ಓದಿ| ರಂಜಾನ್ ಹಬ್ಬಕ್ಕೆ ಬಟ್ಟೆ ತರಲು ಹೋದ ಯುವಕ ಅಪಘಾತದಲ್ಲಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

Rain News: ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಲ್ಲಾಪುರದಲ್ಲಿ ಅವಘಡ ನಡೆದಿದೆ. ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಿಡಿಲು ಬಡಿದು ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ಭಾರಿ ಮಳೆಯಿಂದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು.
Koo

ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಯುವತಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಲ್ಲಾಪುರದಲ್ಲಿ ನಡೆದಿದೆ. ಮುಧೋಳ ಸುತ್ತಮುತ್ತ ಶುಕ್ರವಾರ ಗುಡುಗು-ಮಿಂಚು ಸಮೇತ ಭಾರಿ ಮಳೆ (Rain News) ಸುರಿದಿದ್ದು, ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಿಡಿಲು ಬಡಿದು ಯುವತಿ ಕೊನೆಯುಸಿರೆಳೆದಿದ್ದಾಳೆ.

ಮಲ್ಲಾಪುರ ಗ್ರಾಮದ ಭಾಗ್ಯಶ್ರೀ (16) ಸಿಡಿಲಿಗೆ ಬಲಿಯಾದ ಬಾಲಕಿ. ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದ್ದು, ಸ್ಥಳಕ್ಕೆ ಲೋಕಾಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಪುರದ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

Rain News Bhagyashree

ಆಸ್ಪತ್ರೆಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ ನೀಡಿ, ಮೃತ ಭಾಗ್ಯಶ್ರೀ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

ಶಹಾಪುರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಶುಕ್ರವಾರ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯಿತು. ವರುಣನ ಆಗಮನದಿಂದ ರೈತಾಪಿ ವರ್ಗದ ಜನರ ಮೊಗದಲ್ಲಿ‌ ಮಂದಹಾಸ ಮೂಡಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಿತು.

ಚನ್ನರಾಯಪಟ್ಟಣದಲ್ಲಿ ರಸ್ತೆಗಳು ಜಲಾವೃತ, ತಹಸೀಲ್ದಾರ್ ಕಚೇರಿಗೆ ನುಗ್ಗಿದ ನೀರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಸೇರಿ ವಿವಿಧೆಡೆ ವರುಣ ಆರ್ಭಟಿಸಿದ್ದಾನೆ. ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚನ್ನರಾಯಪಟ್ಟಣದಲ್ಲಿ ಸತತ ಒಂದು ಗಂಟೆ ಸುರಿದ ಮಳೆಯಿಂದ ರಸ್ತೆಗಳು ಜಲಾವೃತವಾಗಿದ್ದವು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡಿದರು. ಈ ವೇಳೆ ಕೆಲ ಅಂಗಡಿ ಮಳಿಗೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

ಇನ್ನು ಹೊಳೆನರಸೀಪುರ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಗೆ ತಹಸೀಲ್ದಾರ್ ಕಚೇರಿಗೆ ಮಳೆ ನೀರು ನುಗ್ಗಿದ್ದರಿಂದ ರೆಕಾರ್ಡ್ ರೂಂನಿಂದ ನೀರು ಹೊರ ಹಾಕಲು ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ | Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ. ಬಿಡುವು ನೀಡದೆ ಸುರಿದ ಮಳೆಯಿಂದ
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು. ಇದರಿಂದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ವಾಹನ ಸವಾರರ ಪರದಾಡಿದರು. ಮತ್ತೊಂದೆಡೆ ಮಳೆ ನೀರಿನಿಂದ ಕೃಷಿ ಜಮೀನುಗಳು ಆವೃತವಾಗಿವೆ. ಬೇಗೂರು, ಬೆಳಚಲವಾಡಿ, ತೆರಕಣಾಂಬಿ ಸುತ್ತಮುತ್ತ ಭರ್ಜರಿ ಮಳೆ ಸುರಿದಿದೆ.

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Crime News
ಕ್ರೈಂ8 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ13 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ44 mins ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ60 mins ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ1 hour ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Food Tips Kannada
ಆರೋಗ್ಯ2 hours ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ3 hours ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

ipl 2024
ಪ್ರಮುಖ ಸುದ್ದಿ7 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ8 hours ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌