Site icon Vistara News

ಹುಟ್ಟುಹಬ್ಬದ ದಿನವೇ ಸಾವಿಗೀಡಾದ ಯುವಕ, ಅಪಘಾತದಲ್ಲಿ ಎರಡು ತುಂಡಾದ ದೇಹ!

accident news

ಬಾಗಲಕೋಟೆ: ಇಲ್ಲಿನ ಗದ್ದನಕೇರಿ ತಾಂಡಾ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದರಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಲ್ಲಿ ಒಬ್ಬ ತನ್ನ ಬರ್ತ್‌ಡೇ ಆಚರಿಸಿಕೊಂಡು ಮರಳುತ್ತಿದ್ದ ಎಂದು ಗೊತ್ತಾಗಿದೆ.

ನವನಗರದ ಸಂಗಮೇಶ(21), ಶಿರಗುಪ್ಪಿ ತಾಂಡಾದ ಕಿರಣ (21) ಮೃತ ದುರ್ದೈವಿಗಳು. ಸಂಗಮೇಶನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ರಸ್ತೆಯಲ್ಲಿರುವ ಕಂಠಿ ರೆಸಾರ್ಟ್‌ನಲ್ಲಿ ಪಾರ್ಟಿ ಮುಗಿಸಿ ಇಬ್ಬರೂ ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗದಲ್ಲಿದ್ದ ಬೈಕ್‌ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತನ ದೇಹ ಏರಡು ತುಂಡಾಗಿ ರಸ್ತೆಯಲ್ಲಿ ಬಿದ್ದಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Series Accident | ಯಾದಗಿರಿಯಲ್ಲಿ ಸರಣಿ ಅಪಘಾತ; ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

Exit mobile version