Harassment Case : ಯುವತಿಯರ ಫೋಟೊ ತೆಗೆದು ನಂಬರ್‌ ಕೇಳಿದ ದುರುಳ ಯುವಕರು, ಪ್ರಶ್ನಿಸಿದ್ದಕ್ಕೆ ಹಲ್ಲೆ - Vistara News

ಬಾಗಲಕೋಟೆ

Harassment Case : ಯುವತಿಯರ ಫೋಟೊ ತೆಗೆದು ನಂಬರ್‌ ಕೇಳಿದ ದುರುಳ ಯುವಕರು, ಪ್ರಶ್ನಿಸಿದ್ದಕ್ಕೆ ಹಲ್ಲೆ

Harassment Case : ಅವರು ಕಾಲೇಜು ಬಿಟ್ಟು ಮನೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದರು. ಆಗ ಮೂವರು ಯುವಕರು ಅವರ ಫೋಟೊ ತೆಗೆದು ನಂಬರ್‌ಗಾಗಿ ಪೀಡಿಸಿದ್ದಾರೆ. ಇದನ್ನು ಪ್ರಶ್ನಿಸಿದ ಯುವತಿಯರ ಮೇಲೆ ಹಲ್ಲೆ ಮಾಡಿದ್ದಾರೆ.

VISTARANEWS.COM


on

harassment Case boys Harassment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಮಹಿಳಾ ದಿನಾಚರಣೆಯನ್ನೇನೋ (Women’s day) ಎಲ್ಲರೂ ಖುಷಿಯಿಂದ ಆಚರಿಸುತ್ತಾರೆ. ಶುಭಾಶಯಗಳನ್ನು ಕೋರುತ್ತಾರೆ. ಆದರೆ, ಅದರ ನಡುವೆಯೇ ಯುವತಿಯರನ್ನು ಕೆಣಕುವ (Harassment Case), ಅವರು ದಾರಿ ನಡೆಯದಂತೆ ಮಾಡುವ, ಸದಾ ಕಾಲ ಭಯದಿಂದಲೇ ಬದುಕುವಂತೆ ಮಾಡುವ ದುರುಳ ಪ್ರಯತ್ನಗಳೂ ಎಗ್ಗಿಲ್ಲದೆ ನಡೆಯುತ್ತಿವೆ. ಬಾಗಲಕೋಟೆಯ ರಬಕವಿ ಬಸ್‌ ನಿಲ್ದಾಣದಲ್ಲಿ (Rabakavi Bus station) ಸಂಭವಿಸಿದ ಒಂದು ಘಟನೆ ಇದಕ್ಕೆ ಅತ್ಯುತ್ತಮ ನಿದರ್ಶನವಾಗಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ಮೂವರು ಯುವಕರು ಕಾಲೇಜು ವಿದ್ಯಾರ್ಥಿನಿಯರ (College girl students Harassed) ಫೋಟೊ ತೆಗೆದು ಅವರ ಬಳಿ ನಂಬರ್‌ ಕೇಳಿದ್ದಾರೆ, ಕೊಡದಿದ್ದಕ್ಕೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿನಿಯರ ಪೈಕಿ ಒಬ್ಬಳಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹಲ್ಲೆ ಮಾಡಿದವರು ಮುಸ್ಲಿಂ ಯುವಕರಾಗಿರುವುದರಿಂದ (Three youths Arrested) ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.

Harassment CaseHarassment Case

ಸ್ವಾತಿ, ಸಾಕ್ಷಿ ಮತ್ತು ಕವಿತಾ ಮೂವರೂ ಸ್ನೇಹಿತೆಯರು ಮತ್ತು ಒಂದೇ ಕಾಲೇಜಿನಲ್ಲಿ ಓದುತ್ತಿದ್ದವರು. ಇವರು ತೇರದಾಳ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು. ಬುಧವಾರ ಸಂಜೆ ಇವರು ಕಾಲೇಜು ಮುಗಿಸಿ ತೇರದಾಳದಿಂದ ರಬಕವಿಗೆ ಬಂದು, ರಬಕವಿ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ಹೋಗಲು ಬಸ್‌ ಕಾಯುತ್ತಿದ್ದರು.

ಈ ವೇಳೆ ಬಸ್‌ ನಿಲ್ದಾಣಕ್ಕೆ ಮೂವರು ಯುವಕರು ಬಂದಿದ್ದಾರೆ. ಯುವತಿಯರನ್ನು ನೋಡಿದ ಇವರು ತಮಗೂ ಅಕ್ಕ ತಂಗಿ ಇದ್ದಾರೆ ಎಂಬುದನ್ನು ಮರೆತು ಕೆಟ್ಟದಾಗಿ ಚುಡಾಯಿಸಲು ಆರಂಭಿಸಿದರು. ಮಾತ್ರವಲ್ಲ ಯುವತಿಯರ ಚಿತ್ರಗಳನ್ನು ಬೇರೆ ಬೇರೆ ಕೋನಗಳಲ್ಲಿ ತೆಗೆದು ಕಿರಿಕಿರಿ ಮಾಡಿದರು.

Harassment Case1

ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿ ಅಹ್ಮದ್ ಎಂಬ ಹೆಸರಿನ ಈ ಯುವಕರು ಫೋಟೊ ಕ್ಲಿಕ್ಕಿಸಿದ ಬಳಿಕ ಯುವತಿಯರ ಬಳಿಗೆ ತೆರಳಿ ಮೊಬೈಲ್ ನಂಬರ್ ನೀಡುವಂತೆ ಕೇಳಿದ್ದಾರೆ. ಮೊದಲೇ ಕಿರಿಕಿರಿಗೆ ಒಳಗಾಗಿದ್ದ ವಿದ್ಯಾರ್ಥಿನಿಯರು ನಂಬರ್ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಿತರಾದ ಯುವಕರು ಈ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ : Harassment Case : ಸೈಕಲ್‌ ಅಡ್ಡ ಬಂತೆಂದು ಬಾಲಕಿಗೆ ಹಲ್ಲೆ; ಕಾಲು ಹಿಡಿದು ಬೇಡಿದರೂ ಕರಗದ ಪಾಪಿ ಮನಸ್ಸು

ಈ ಘಟನೆ ನಡೆದ ಬಳಿಕ ಯುವತಿಯರು ಮನೆಗೆ ತೆರಳಿದ್ದಾರೆ. ವಿದ್ಯಾರ್ಥಿನಿಯರ ಪೈಕಿ ಸ್ವಾತಿ ನಡಕಟ್ಟಿ ಎಂಬಾಕೆಗೆ ತೀವ್ರ ಗಾಯಗಳೇ ಆಗಿವೆ. ಆಕೆಯನ್ನು ಮನೆಯವರು ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ನಡುವೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ರಬಕವಿ ಬಸ್‌ ನಿಲ್ದಾಣದಲ್ಲಿ ಮತ್ತು ಪೊಲೀಸ್‌ ಠಾಣೆ ಬಳಿ ಜಮಾಯಿಸಿ ಆರೋಪಿ ಯುವಕರ ಬಂಧನಕ್ಕೆ ಒತ್ತಾಯಿಸಿದರು.

ತೇರದಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿ ಅಹ್ಮದ್ ಎಂಬವರನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ ಸ್ವಾತಿ ನಡಕಟ್ಟಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Karnataka Weather Forecast : ರಾಜ್ಯದಲ್ಲಿ ಆಗಾಗ ಮಳೆಯು (Rain News) ದರ್ಶನ ಕೊಡುತ್ತಿದ್ದರೂ, ಸೂರ್ಯನ ಶಾಖಕ್ಕೆ ಭೂಮಿ ಕಾದ ಕೆಂಡವಾಗುತ್ತಿದೆ. ಬಿಸಿಲ ಧಗೆಯು ಹೆಚ್ಚಾಗುತ್ತಲೇ ಇದ್ದು, ಮಳೆಗಾಗಿ ತಾವರೆಕೆರೆ ಗ್ರಾ.ಪಂ ಪಿಡಿಓ ವರುಣ ದೇವನನ್ನು ಪ್ರತಿಷ್ಠಾಪಿಸಿ ತಲೆ ಮೇಲೆ ಹೊತ್ತು ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

By

Karnataka Weather Forecast
ದೇವರ ಮೊರೆ ಹೋದ ತಾವರೆಕೆರೆ ಗ್ರಾ.ಪಂ ಪಿಡಿಒ
Koo

ತುಮಕೂರು/ಬೆಂಗಳೂರು: ಬಿಸಿಲ ಬೇಗೆಗೆ ಬೇಸತ್ತ ಜನರು ಮಳೆಗಾಗಿ (Rain News) ದೇವರ ಮೊರೆ ಹೋಗುತ್ತಿದ್ದಾರೆ. ಮಳೆರಾಯನ (Karnataka Weather Forecast) ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಮಳೆಗಾಗಿ ಪೂಜೆ ನಡೆದಿದೆ.

ತಾವರೆಕೆರೆ ಗ್ರಾ.ಪಂ ಪಿಡಿಒ ನಾಗರಾಜ್ ಅವರು ಸ್ವತಃ ಮಳೆರಾಯನ ಹೊತ್ತು ಜಲಾಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದರು. ವರುಣ ದೇವನನ್ನು ಪ್ರತಿಷ್ಠಾಪಿಸಿ ನಂತರ ತಲೆ ಮೇಲೆ ಹೊತ್ತು ಮನೆ ಮನೆಗೆ ಹೋಗಿ ಪ್ರಾರ್ಥನೆ ಸಲ್ಲಿಸಿದರು. ಭೀಕರ ಬರಗಾಲ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿದರು.

ಇನ್ನೂ‌ ಶನಿವಾರದಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರದ ಎಂ.ಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 44.7 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

ಮತ್ತಷ್ಟು ದಿನ ಬಿಸಿಲ ತಾಪ

ರಣಬಿಸಿಲು, ಉಷ್ಣಗಾಳಿ ಹೊಡೆತಕ್ಕೆ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಮತ್ತಷ್ಟು ದಿನ ಬಿಸಿಲ ತಾಪ ಹೆಚ್ಚಾಗಲಿದ್ದು, ಆರೋಗ್ಯದ ಕಾಳಜಿ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಉಷ್ಣತೆಯು ಇದ್ದಕ್ಕಿದ್ದಂತೆ ತೀಕ್ಷ್ಣವಾಗಿ ಮೇಲೇರಿ, ತನ್ನ ಸಾಮಾನ್ಯ ಮಟ್ಟವನ್ನು ಮೀರುವುದನ್ನು ಶಾಖದ ಅಲೆಗಳು ಅಥವಾ ಹೀಟ್‌ವೇವ್‌ ಎನ್ನಲಾಗುತ್ತದೆ. ಸದ್ಯ ಸಾಮಾನ್ಯ ಮಟ್ಟವನ್ನು ಮೀರಿ, ಉಷ್ಣತೆ ಮೇಲೇರುವುದರಿಂದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಸುಸ್ತು, ಆಯಾಸ, ಎಚ್ಚರ ತಪ್ಪುವುದು ಆಗಲಿದೆ. ಹೀಗಾಗಿ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.

ಮೇ.8ರವೆರೆಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಲಿದೆ.

ಮಳೆ ಸೂಚನೆ ಇದ್ಯಾ?

ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದರ ಹೊರತಾಗಿಯೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಮತ್ತೆ ತಾಪಮಾನ ಏರಿಕೆ

ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ನಿರ್ಮಲ ಆಕಾಶ ಇರಲಿದ್ದು, ಗರಿಷ್ಠ ಉಷ್ಣಾಂಶವು 39ರ ಗಡಿ ದಾಟಲಿದೆ.‌ ಜತೆಗೆ ಆಗಾಗ ಗಾಳಿ ವೇಗವು ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Karnataka Weather Forecast : ಬೆಂಗಳೂರಲ್ಲಿ ಎರಡು ದಿನಗಳಿಂದ ಮಳೆಯು ಅಬ್ಬರಿಸಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ (Rain News) ಜತೆಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ನಿನ್ನೆ ಶುಕ್ರವಾರ ಬಂದ ಬಿರುಗಾಳಿ ಮಳೆಗೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

karnataka weather Forecast
ಬಿರುಗಾಳಿಗೆ ಸಿಲುಕಿ ಮೃತಪಟ್ಟ ವೃದ್ಧೆ ಮಾದಮ್ಮ
Koo

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಬಿಸಿಲು ಸಿಕ್ಸರ್‌ ಬಾರಿಸುತ್ತಿದ್ದರೆ, ಅತ್ತ ಮಳೆಯು ಫೋರ್ ಬಾರಿಸುತ್ತಿದೆ. ಗುರುವಾದ ಅಬ್ಬರಿಸಿದ ಬಿರುಗಾಳಿ ಮಳೆಗೆ (Rain News) ವೃದ್ಧೆಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಘಟನೆ (Karnataka Weather Forecast) ನಡೆದಿದೆ.

ಮಾದಮ್ಮ (66) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಮಾದಮ್ಮ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದಿನಂತೆ ತಮ್ಮ ಜಮೀನಿಗೆ ಮೇವು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿ ಮಳೆಗೆ ಸಿಲುಕಿದ್ದಾರೆ. ಮೇವನ್ನು ತೆಗೆದುಕೊಂಡು ಬರುವಾಗ ರಸ್ತೆ ಮಧ್ಯದಲ್ಲಿ ಬಿರುಗಾಳಿ ಮಳೆಗೆ ಸಿಲುಕಿ ಕುಸಿದು ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ಮಾದಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ನಾಗರಹೊಳೆ ಅಭಯಾರಣ್ಯಕ್ಕೆ ತಂಪೆರೆದ ಮಳೆರಾಯ

ನಾಗರಹೊಳೆ ಅಭಯಾರಣ್ಯದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಕಾಡ್ಗಿಚ್ಚು ಆತಂಕದಲ್ಲಿದ್ದ ಸಿಬ್ಬಂದಿಗೆ ವರಣನ ಸಿಂಚನದಿಂದ ಆತಂಕ ದೂರವಾಗಿದೆ. ಮೈಸೂರು ಜಿಲ್ಲೆ ಎಚ್.ಡಿ ಕೋಟೆ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದವು.

ಎಚ್.ಡಿ ಕೋಟೆಯ ದಮ್ಮನಕಟ್ಟೆ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ಒಣಗಿ ನಿಂತ ಕಾನನಕ್ಕೆ ಜೀವ ಕಳೆ ಬಂದಿದೆ. ರಸ್ತೆಯ ಹಿಕ್ಕೆಲೆಗಳ ಹಸಿರು ಹುಲ್ಲು ಬರಲು ಮೊದಲ ಮಳೆ ಸಹಕಾರಿಯಾಗಿದೆ. ಸದ್ಯಕ್ಕೆ ಕಾಡಿಗೆ ಬೆಂಕಿ ಬೀಳುವ ಆತಂಕವು ಅರಣ್ಯ ಇಲಾಖೆ‌ ಸಿಬ್ಬಂದಿಗೆ ದೂರಾವಾಗಿದೆ.

ಶನಿವಾರವೂ ಮಳೆ ಅಬ್ಬರ

ಶನಿವಾರ ಮಧ್ಯಾಹ್ನದಂದು ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಐಎಂಡಿ ಮಾಹಿತಿ ನೀಡಿದೆ.

ಮೇ.5ರ ಭಾನುವಾರದಂದು ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏ. 6ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ಶಾಖದ ಅಲೆಯ ಎಚ್ಚರಿಕೆ

ಮಳೆ ನಡುವೆಯೂ ಕೆಲವೆಡೆ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಮುಂದಿನ 4 ದಿನಗಳವರೆಗೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿ ಸಮಯ ಬೆಚ್ಚಗಿನ ವಾತಾವರಣ ಇರಲಿದೆ. ಕರಾವಳಿಯಲ್ಲಿ ಬಿಸಿ ಗಾಳಿ ಬೀಸಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Zameer Ahmed Khan: ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರ ಅವನತಿ ಆಗುತ್ತದೆ ಎಂದು ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ.

VISTARANEWS.COM


on

Zameer Ahmed Khan
Koo

ಬಾಗಲಕೋಟೆ: ಇದು ದೇಶ ಬಚಾವ್ ಎಲೆಕ್ಷನ್. ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಅವರು ಅಲ್ಪ ಸಂಖ್ಯಾತರನ್ನು ಮುಗಿಸುತ್ತಾರೆ. ಫಸ್ಟ್ ಟೈಂ ಕ್ಯಾನ್ಸರ್ ಬಂದರೆ ಉಳಿಯುತ್ತಾರೆ, ಎರಡನೇ ಬಾರಿ ಬಂದರೂ ಉಳಿಯುತ್ತಾರೆ, ಆದರೆ ಮೂರನೇ ಬಾರಿ ಬಂದರೆ ನಮ್ಮನ್ನೆಲ್ಲರನ್ನೂ ತಗೊಂಡು ಹೋಗುತ್ತೆ ಎಂದು ಪರೋಕ್ಷವಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರ ಅವನತಿ ಆಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಅಲ್ಪ ಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಸಂಯುಕ್ತಾ, ಶಿವಾನಂದ ಪಾಟೀಲ್ ಪುತ್ರಿ ಅಲ್ಲ, ನನ್ನ‌ ಮಗಳ ಇದ್ದಂತೆ. ಈ ಎಲೆಕ್ಷನ್ ಶಿವಾನಂದ ಪಾಟೀಲ್‌ರದ್ದು ಅಲ್ಲ, ಜಮೀರ್‌ದು ಅಲ್ಲ, ಹಾಗೆಯೇ ಮೇಟಿ ಅವರದೂ ಅಲ್ಲ. ಈ ಬಾರಿ ದೇಶ ಬಚಾವ್ ಮಾಡಲು ಕಾಂಗ್ರೆಸ್‌ಗೆ ಮತ ಹಾಕಿ ಎಂದು ಕರೆ ನೀಡಿದರು.

ಇದನ್ನೂ ಓದಿ | Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

ನಮ್ಮ ಆಡಳಿತದಲ್ಲಿ ಐದು ಅಂಶಗಳಿವೆ. ಎರಡು ಸಾವಿರ ರೂ., ಉಚಿತ ವಿದ್ಯುತ್, ಬಸ್ ಫ್ರಿ, ಅನ್ನಭಾಗ್ಯ, ಇದನ್ನೆಲ್ಲಾ ನಾವು ಮಾಡಿದ್ದೇವೆ. ನಮ್ಮ ಕೋಮಿನ 7 ಲಕ್ಷ ಜನ ಈ ಯೋಜನೆಗಳ ಉಪಯೋಗ ಪಡೆಯುತ್ತಿದ್ದಾರೆ. ರಾಹುಲ್ ಗಾಂಧಿ, ಖರ್ಗೆ ನಮ್ಮ ಸರ್ಕಾರ ಬಂದರೆ ಐದು ಯೋಜನೆ ಜಾರಿ ತರುತೀವೆ ಎಂದು ಹೇಳಿದ್ದಾರೆ. ಹೀಗಾಗಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಮಹಿಳೆಗೆ 1 ಲಕ್ಷ ಕೊಡುತ್ತಾರೆ ಎಂದು ತಿಳಿಸಿದರು.

ಪಾಜಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ರೆ ಗುಂಡಿಟ್ಟು ಕೊಲ್ಲಬೇಕು

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದೇವೆ. ನಮ್ಮ ಸರ್ಕಾರ ಬಂದಮೇಲೆ ಕೋರ್ಟ್‌ನಿಂದ ಡೈರೆಕ್ಷನ್ ತೆಗೆದುಕೊಳ್ಳಬೇಕು. ನಾಲ್ಕು ಜನ ಬಿಜೆಪಿ ಅವರನ್ನು ಕಳುಹಿಸಿಬಿಟ್ಟು ಪಾಕಿಸ್ತಾನ ಜಿಂದಾಬಾದ್ ಜೈಕಾರ ಹಾಕಿಸುತ್ತಾರೆ. ಅಂತಹವರನ್ನು ಪೊಲೀಸರಿಗೆ ಪರ್ಮಿಷನ್ ಕೊಟ್ಟರೆ ಅಲ್ಲೇ ಶೂಟ್ & ಸೈಟ್ ಆರ್ಡರ್ ಆಗಬೇಕು ಎಂದು ಸಚಿವ ಜಮೀರ್ ಅಹ್ಮದ್‌ ಹೇಳಿದರು.

ಇದನ್ನೂ ಓದಿ | Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

ನಾವ್ಯಾರು (ಮುಸ್ಲಿಂರು) ದೇಶ ದ್ರೋಹಿಗಳಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮುನ್ನ ಇಂಡಿಯಾ ಗೇಟ್‌ ಕಡೆ ಹೋಗಿ ನೋಡಿ ಲಿಸ್ಟ್ ಇದೆ. ಶೇ.60 ಮುಸ್ಲಿಂರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ದೇಶ ನಮ್ಮದು, ನಮ್ಮನ್ನು ಇಲ್ಲಿಗೆ ಕರೆಸಿದ ಉದ್ದೇಶ ಈ ಬಾರಿ ಶೇ.95 ವೋಟಿಂಗ್ ಆಗಲು ಎಂದ ಅವರು, ಮೊದಲು ಎಲೆಕ್ಷನ್ ಡಬ್ಬಿ ಇತ್ತು, ಹೇಗೋ ನಡೆಯುತ್ತಿತ್ತು. ಈಗ ಇವಿಎಂ ಮಷಿನ್ ಇದೆ. ಯಾವ ಸಮುದಾಯ ಎಷ್ಟು ಮತದಾನ ಮಾಡಿದೆ ಎಂಬುವುದು ಗೊತ್ತಾಗುತ್ತೆ. ಹಾಗಾಗಿ ಮುಸ್ಲಿಂ ಮತಗಳು ಹೆಚ್ವಿನ ಸಂಖ್ಯೆಯಲ್ಲಿ ಬರಬೇಕು ಎಂದು ಸಮುದಾಯಕ್ಕೆ ಸಚಿವರು ಕರೆ ನೀಡಿದರು.

Continue Reading
Advertisement
Beer Shortage
ಕರ್ನಾಟಕ9 mins ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್22 mins ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 202424 mins ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest26 mins ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ1 hour ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ1 hour ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್1 hour ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

IPL2024
ಕ್ರೀಡೆ1 hour ago

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

Job Alert
ಉದ್ಯೋಗ1 hour ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Ithichanda Ramesh Uthappaʼs Four books to be released in Mysore on May 9
ಮೈಸೂರು1 hour ago

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌