Site icon Vistara News

Road Accident : ಸ್ಕೂಟಿಗೆ ಗುದ್ದಿ ಬೈಕ್‌ನಿಂದ ಹಾರಿ ಬಿದ್ದ ಸವಾರರು; ಸ್ಥಳದಲ್ಲೇ ಓರ್ವ ಸಾವು, ಮತ್ತಿಬ್ಬರು ಗಾಯ

Road Accident

ಬಾಗಲಕೋಟೆ: ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೆ ಓರ್ವ ಬೈಕ್ ಸವಾರ ಮೃತಪಟ್ಟಿದ್ದಾರೆ. ಬಾಗಲಕೋಟೆಯ ಬನಹಟ್ಟಿ ಹೊರ ವಲಯದ ಹೊಸೂರು ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಬೈಕ್ ಡಿಕ್ಕಿ ಹೊಡೆದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಲ್ಲಿಕಾರ್ಜುನ (22) ಮೃತ ದುರ್ದೈವಿ.

ತಲೆ, ಮುಖ ಭಾಗಕ್ಕೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದೆ. ಘಟನೆಯಲ್ಲಿ ರಮೇಶ್, ಕಲ್ಮೇಶ್, ಶ್ರೀಶೈಲ್ ಮೂವರಿಗೂ ಗಂಭೀರ ಗಾಯಗೊಂಡವರು. ಮೃತ ಮಲ್ಲಿಕಾರ್ಜುನ್ ಕುಳಲಿ ಗ್ರಾಮದ ನಿವಾಸಿ ಆಗಿದ್ದಾರೆ. ಮಲ್ಲಿಕಾರ್ಜುನ್ ಕುಳಲಿಯಿಂದ ಬನಹಟ್ಟಿಗೆ ಇಬ್ಬರು ಸ್ನೇಹಿತರೊಂದಿಗೆ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದ್ದಕ್ಕಿದ್ದಂತೆ ಬೆಂಕಿ ತಗುಲಿ ಹೊತ್ತಿ ಉರಿದ ಕಾರು

ನೋಡ ನೋಡುತ್ತಿದ್ದಂತೆ ಮಾರುತಿ ‌ಕಾರು ಹೊತ್ತಿ ಉರಿದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬೆಳಗಾವಿ ಬಾಗಲಕೋಟ್ ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ತಗುಲಿ ಕಾರು ಸುಟ್ಟು ಭಸ್ಮವಾಗಿದೆ. ಬೆಳಗಾವಿ ತಾಲೂಕಿನ‌ ಸಾಂಬ್ರಾ ಬಳಿ ಘಟನೆ ನಡೆದಿದೆ. ಯರಗಟ್ಟಿಯಿಂದ‌ ಬೆಳಗಾವಿ ಕಡೆಗೆ ಬರುತ್ತಿದ್ದ ಮಾರುತಿ ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ನಿಲ್ಲಿಸಿ, ಎಲ್ಲರನ್ನು ಹೊರೆಗೆ ಕಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version