Site icon Vistara News

Self Harming: ತೊದಲು ಸಮಸ್ಯೆಗೆ ಮನನೊಂದ; ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

stuttering problem Suicide by hanging himself from tree

ಬಾಗಲಕೋಟೆ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಕೆಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿನಾಯಕ ನೀಲಗಾರ (27) ಮೃತ ದುರ್ದೈವಿ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಲೋಕಾಪುರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿನಾಯಕ ಮಾತಾಡುವಾಗ ನಾಲಿಗೆ ತೊದಲುತ್ತಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ಎನ್ನಲಾಗಿದೆ. ‌ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: Road Accident : ಚಿಕ್ಕಲ್ಲೂರು ಜಾತ್ರೆಗೆ ತೆರಳುವಾಗ ಭೀಕರ ಅಪಘಾತ; ಚಾಲಕ ಸಾವು, ಮತ್ತಿಬ್ಬರು ಗಂಭೀರ

ಕ್ರಿಕೆಟ್‌ ಆಡುತ್ತಿದ್ದ ಬ್ಯಾಂಕ್‌ ಉದ್ಯೋಗಿ ಅಲ್ಲೇ ಕುಸಿದು ಬಿದ್ದು ಸಾವು

ಬೆಂಗಳೂರು: ಇತ್ತೀಚೆಗೆ ಸಣ್ಣ ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೀಡಾಗಿ (Heart Attack) ಕ್ಷಣ ಮಾತ್ರದಲ್ಲಿ ಜೀವ ಕಳೆದುಕೊಳ್ಳುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಜಿಮ್‌ ನಲ್ಲಿ ವರ್ಕೌಟ್‌ ಮಾಡುವಾಗ, ಆಟ ಆಡುವಾಗ ಒಮ್ಮೆಲೇ ಹೃದಯ ನಿಂತು ಬಿಡುವುದು ಹೆಚ್ಚಾಗುತ್ತಲೇ ಇದೆ. ಈ ಸರಣಿಯ ಇತ್ತೀಚಿನ ಘಟನೆಯಾಗಿ ಬೆಂಗಳೂರಿನಲ್ಲಿ (Bangalore News) ಕ್ರಿಕೆಟ್‌ ಆಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುತ್ತಿದ್ದ ವೇಳೆ ಯುವಕನೊಬ್ಬ ಕುಸಿದು ಬಿದ್ದು ಉಸಿರು ಚೆಲ್ಲಿದ್ದಾರೆ (Bank staff dies while playing Cricket). ಖಾಸಗಿ ಬ್ಯಾಂಕ್‌ ಒಂದರ ಉದ್ಯೋಗಿಯಾಗಿರುವ (Bank Staff death) ರಾಬಿನ್‌ (22) ಎಂಬ ಉತ್ತಮ ಕ್ರಿಕೆಟಿಗನೇ ಪ್ರಾಣ ಕಳೆದುಕೊಂಡವರು.

ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಮೈದಾನದಲ್ಲಿ ನಡೆದ ಕ್ರಿಕೆಟ್‌ ಪಂದ್ಯದ ವೇಳೆ ಶುಕ್ರವಾರ ಮಧ್ಯಾಹ್ನ ಈ ದುರಂತ ನಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಆಗಲೇ ಸಾವು ಸಂಭವಿಸಿ ಆಗಿತ್ತು.

ರಾಬಿನ್‌ ಮೂಲತಃ ತಮಿಳುನಾಡಿನ ತಿರುವಾಣ್ಣಮಲೈ ಮೂಲದ ರಾಬಿನ್‌ ಅವರು ರಾಜಾಜಿನಗರದ ಬೋವಿ ಕಾಲೊನಿಯಲ್ಲಿ ವಾಸವಾಗಿದ್ದರು. ರಾಷ್ಟ್ರೀಕೃತ ಬ್ಯಾಂಕ್‌ ಒಂದರಲ್ಲಿ ಉದ್ಯೋಗಿಯಾಗಿ ವರ್ಷದ ಹಿಂದಷ್ಟೇ ಸೇರಿದ್ದರು.

ಗಣರಾಜ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಬ್ಯಾಂಕ್‌ ವತಿಯಿಂದ ಕ್ರಿಕೆಟ್‌ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಬಿನ್‌ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಅವರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಲಾಗಿತ್ತು.

ತಮ್ಮ ತಂಡವನ್ನು ಎರಡು ಪಂದ್ಯಗಳಲ್ಲಿ ಗೆಲ್ಲಿಸಿದ್ದ ರಾಬಿನ್‌ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸ್ವೀಕರಿಸಲೆಂದು ವೇದಿಕೆಗೆ ಹತ್ತಿದಾಗ ಏಕಾಏಕಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಅವರ ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದರೂ ಫಲ ನೀಡಲಿಲ್ಲ.

ನಿರ್ಜಲೀಕರಣದಿಂದ ಸಂಭವಿಸಿದ ಹೃದಯಾಘಾತ

ರಾಬಿನ್‌ ಅವರ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗಿದೆ. ವೈದ್ಯರ ಪ್ರಕಾರ ನಿರ್ಜಲೀಕರಣದಿಂದ ಹೃದಯಾಘಾತ ಸಂಭವಿಸಿದೆ. ಹೀಗಾಗಿ ಯಾವುದೇ ಆಟ ಆಡುವಾಗ ಕಾಲ ಕಾಲಕ್ಕೆ ನೀರು ಕುಡಿಯುತ್ತಿರಬೇಕು, ಇಲ್ಲವಾದರೆ ಅಪಾಯವಾಗಬಹುದು ಎಂದು ಎಚ್ಚರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version