Site icon Vistara News

Hindu activist dead | ಬಜರಂಗ ದಳ ಮುಖಂಡನ ಶವ ನೇತ್ರಾವತಿ ನದಿಯಲ್ಲಿ ಪತ್ತೆ: ಸಾವಿನ ಬಗ್ಗೆ ಸಂಶಯ

Rajesh poojari dead

ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಲಡ್ಕದ ಬಜರಂಗ ದಳ ಮುಖಂಡರೊಬ್ಬರ ಶವ ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ (Hindu activist dead). ಈ ಸಾವಿನ ಬಗ್ಗೆ ಹಲವು ಸಂಶಯಗಳು ವ್ಯಕ್ತವಾಗಿವೆ.

ಬಜರಂಗ ದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ಆಗಿರುವ ರಾಜೇಶ್ ಪೂಜಾರಿ (26) ಅವರೇ ಶವವಾಗಿ ಪತ್ತೆಯಾದವರು. ಅವರ ಶವ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾದ ಹಿನ್ನೆಲೆ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಆಗಮಿಸಿ ಕಾರ್ಯಾಚರಣೆ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯವಾಗಿ ಅನುಮಾನ ವ್ಯಕ್ತವಾಗಿದೆ. ಅವರು ತಾವಾಗಿಯೇ ಹೋಗಿ ವಾಹನ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆಯಾದರೂ ಇದ ಹಿಂದೆ ಬೇರೇನೋ ಸಂಗತಿಗಳೂ ಇರಬಹುದು ಎನ್ನುವ ಸಂಶಯವೂ ಜನರಲ್ಲಿದೆ. ಇದು ಆತ್ಮಹತ್ಯೆಯೋ, ಅಪಘಾತವೋ, ಕೊಲೆಯೋ ಎನ್ನುವ ಬಗ್ಗೆ ಸಮಗ್ರ ತನಿಖೆ ನಡೆಸುಂತೆ ಜನರು ಒತ್ತಾಯಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | Suicide Case | ಹಾಲಿನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗು ಸಾವು, ಇನ್ನೊಂದು ಗಂಭೀರ

Exit mobile version