Cow slaughter | ತುಮಕೂರಿನಲ್ಲಿ ಬಜರಂಗ ದಳ ಕಾರ್ಯಾಚರಣೆ: ಗೋಮಾಂಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ - Vistara News

ಕರ್ನಾಟಕ

Cow slaughter | ತುಮಕೂರಿನಲ್ಲಿ ಬಜರಂಗ ದಳ ಕಾರ್ಯಾಚರಣೆ: ಗೋಮಾಂಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ

ತುಮಕೂರಿನಲ್ಲಿ ಗೋಮಾಂಸ ಮಾರಾಟ (Cow slaughter) ಮಾಡುತ್ತಿದ್ದ ವ್ಯಕ್ತಿಯ ಮೇಲೆ ಬಜರಂಗ ದಳ ಕಾರ್ಯಕರ್ತರು ದಾಳಿ ಮಾಡಿದ್ದು, ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Cow slaughter
ಬಂಧನಕ್ಕೆ ಒಳಗಾದ ವ್ಯಕ್ತಿ ಮತ್ತು ವಶಪಡಿಸಿಕೊಳ್ಳಲಾದ ವಾಹನ ಹಾಗೂ ಮಾಂಸ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ತುಮಕೂರಿನ ಬಜರಂಗ ದಳದಿಂದ ಗೋ ಮಾಂಸ ಮಾರಾಟ ಅಡ್ಡೆಯ (Cow slaughter) ಮೇಲೆ ದಾಳಿ ಮಾಡಲಿದ್ದು, ಒಬ್ಬ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ತುಮಕೂರು ನಗರದ ಹೊರವಲಯದ ಮರಳೂರು ದಿಣ್ಣೆಯಲ್ಲಿ ಗೋ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗ ದಳ ಕಾರ್ಯಕರ್ತರು ಅಲ್ಲಿಗೆ ದಾಳಿ ನಡೆಸಿದ್ದು, ದಸ್ತಗಿರ್ ಅಹಮದ್ (30) ಎಂಬಾತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ದಸ್ತಗಿರ್ ಅಹಮದ್ ತುಮಕೂರಿನ ಸದಾಶಿವ ನಗರದ ನಿವಾಸಿಯಾಗಿದ್ದು, ಆತನ ಕೈಯಲ್ಲಿದ್ದ 150 ಕೆಜಿಗೂ ಹೆಚ್ಚು ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ.

ಈ ಭಾಗದಲ್ಲಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ನಡೆಯುತ್ತಿರುವ ಬಗ್ಗೆ ಹಿಂದಿನಿಂದಲೂ ಮಾಹಿತಿ ಇತ್ತು. ಇದೀಗ ಬಜರಂಗ ದಳ ಕಾರ್ಯಕರ್ತರು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡೇ ದಾಳಿ ಮಾಡಿದ್ದಾರೆ. ಆರೋಪಿಯನ್ನು ತುಮಕೂರಿನ ಜಯನಗರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

ಇದನ್ನೂ ಓದಿ | Cow slaughter | ಕಸಾಯಿ ಖಾನೆಗೆ ಸಾಗಿಸುತ್ತಿದ್ದ 16 ಕರುಗಳನ್ನು ರಕ್ಷಿಸಿದ ಶ್ರೀ ರಾಮ ಸೇನೆ ಕಾರ್ಯಕರ್ತರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೆಲೆಯೇರಿಕೆಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದ, ಬೆಲೆಯೇರಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್‌ ಈಗ ರಾಜ್ಯ ಸರ್ಕಾರದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ. ಮೊದಲೇ, ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಗಾಯದ ಮೇಲೆ ಬರೆ ಎಳೆದಂತಾಗಿದೆ.

VISTARANEWS.COM


on

Siddaramaiah
Koo

ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಟಿಕೆಟ್‌, ಮನೆಗಳಲ್ಲಿ 200 ಯೂನಿಟ್‌ಗಳವರೆಗೆ ವಿದ್ಯುತ್‌ ಫ್ರೀ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿ ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರವು (Karnataka Government), ಅವುಗಳನ್ನು ಯಶಸ್ವಿಯಾಗಿಯೂ ಜಾರಿಗೆ ತಂದಿದೆ. ಯಶಸ್ವಿ ಜಾರಿಯಿಂದ ದೇಶಾದ್ಯಂತ ಖ್ಯಾತಿಯನ್ನೂ ಗಳಿಸಿದೆ. ಆದರೆ, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ನೇರವಾಗಿ ಜನರ ಜೇಬಿಗೆ ಕೈ ಹಾಕಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ (Petrol, Diesel Price Hike) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಈಗ ತೀವ್ರ ಚರ್ಚೆ, ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ, ಅವುಗಳನ್ನು ಸಮರ್ಪಕವಾಗಿ ಜಾರಿಗೂ ತಂದ, ಬಡವರಿಗೆ ಅನುಕೂಲ ಮಾಡಿಕೊಟ್ಟ ಸಿದ್ದರಾಮಯ್ಯ ಅವರ ಸರ್ಕಾರವು ಮೊದಲಿಗೆ ಮದ್ಯದ ಬೆಲೆಯನ್ನು ಏರಿಕೆ ಮಾಡಿತು. ಮದ್ಯ ಪ್ರಿಯರ ಜೇಬಿಗೆ ಕತ್ತರಿ ಹಾಕಿ ಸಂಪನ್ಮೂಲವನ್ನು ಕ್ರೋಡೀಕರಣ ಮಾಡಿತು. ಒಂದೇ ವರ್ಷದಲ್ಲಿ ಎರಡೆರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿತು. ಅಷ್ಟೇ ಅಲ್ಲ, ರಾಜ್ಯ ಸರ್ಕಾರವು ಈಗಾಗಲೇ ಮುದ್ರಾಂಕ ಶುಲ್ಕಗಳನ್ನು ಏರಿಸಿದೆ. ದತ್ತು ಸ್ವೀಕಾರ ಪ್ರಮಾಣಪತ್ರ, ಅಫಿಡವಿಟ್‌, ಆಸ್ತಿ ಪರಭಾರೆ, ಪವರ್‌ ಆಫ್‌ ಅಟಾರ್ನಿ ಸೇರಿ ಯಾವುದೇ ದಾಖಲೆಯನ್ನು ಪಡೆಯಲು ನಿಗದಿಪಡಿಸಿದ್ದ ಶುಲ್ಕವನ್ನು ಎರಡು ಅಥವಾ ಅದಕ್ಕಿಂತ ಹೆಚ್ಚು ಪಟ್ಟು ಹೆಚ್ಚಿಸಲಾಗಿದೆ. ಇದು ಕೂಡ ಸಂಪನ್ಮೂಲ ಕ್ರೋಡೀಕರಣದ ಭಾಗವೇ ಆಗಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಅದರ ಬೆಲೆ ಹೆಚ್ಚಿಸಿದರೂ ತೊಂದರೆ ಇಲ್ಲ ಎಂದು ಜನ ಸುಮ್ಮನಾದರು. ಮುದ್ರಾಂಕ ಶುಲ್ಕವು ದಿನನಿತ್ಯದ ಖರ್ಚು-ವೆಚ್ಚ ಅಲ್ಲದ ಕಾರಣ, ಅದರ ಬೆಲೆಯೇರಿಕೆಯನ್ನೂ ಜನ ಮನ್ನಿಸಿದರು. ಆದರೆ, ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿರುವುದು ಅಕ್ಷಮ್ಯವಾಗಿದೆ.

ಪೆಟ್ರೋಲ್‌ ಬೆಲೆಯನ್ನು ಒಂದು ಲೀಟರ್‌ಗೆ 3 ರೂ. ಹಾಗೂ ಡೀಸೆಲ್‌ ಬೆಲೆಯನ್ನು ಲೀಟರ್‌ಗೆ 3.5 ರೂ. ಏರಿಕೆ ಮಾಡಿರುವುದು ಜನರ ಮೇಲೆ ನೇರವಾಗಿ, ನಿತ್ಯವೂ ಪರಿಣಾಮ ಬೀರುತ್ತದೆ. ಈಗಾಗಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇ ಜಾಸ್ತಿಯೇ ಇದ್ದ ಕಾರಣ ಮತ್ತೆ ಏರಿಕೆ ಮಾಡಿರುವುದು ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ಸಾಗಣೆ ವೆಚ್ಚ ಜಾಸ್ತಿಯಾಗುತ್ತದೆ. ಇದು ಅಗತ್ಯವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ. ಸಕಲ ರೀತಿಯಲ್ಲೂ ಜನರ ಜೇಬಿಗೆ ಭಾರವಾಗುತ್ತದೆ. ಪ್ರತಿದಿನವೂ ಬಡವರ ಹಣಕ್ಕೆ ಕತ್ತರಿ ಬೀಳುತ್ತದೆ. ಅಲ್ಲಿಗೆ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಪಡೆದುಕೊಂಡಂತೆ ಆಗುತ್ತದೆ. ಆಗ ಗ್ಯಾರಂಟಿಗಳ ಆಶಯವೇ ಮಣ್ಣುಪಾಲಾದಂತಾಗುತ್ತದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದಾಗ, ಅಡುಗೆ ಅನಿಲ ಸಿಲಿಂಡರ್‌ ಬೆಲೆಯೂ ಜಾಸ್ತಿ ಮಾಡಿದಾಗ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಬೆಲೆಯೇರಿಕೆಯನ್ನು ಖಂಡಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಚುನಾವಣೆ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ‘ಬೆಲೆಯೇರಿಕೆ’ ಅಸ್ತ್ರವನ್ನೇ ಬಳಸಿದೆ. ಹೀಗಿರುವಾಗ, ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರವೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದರೆ ಹೇಗೆ? “ಗ್ಯಾರಂಟಿ ಯೋಜನೆಗಳಿಗೆ ಹಣ ಬೇಕಲ್ಲ, ಅದಕ್ಕಾಗಿ ಬೆಲೆಯೇರಿಕೆ ಮಾಡಿದ್ದೇವೆ” ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಹೇಳಿರುವುದು ಯಾವ ರೀತಿಯಲ್ಲಿ ಸಮಂಜಸ? ಸಿದ್ದರಾಮಯ್ಯನವರೇ, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ. ಇದರಿಂದ ನಿಮ್ಮ ಸರ್ಕಾರಕ್ಕೆ ಹೆಸರೂ ಬಂದಿದೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ, ಕರ್ನಾಟಕದಲ್ಲಿ ನೀವು ನಿರೀಕ್ಷಿಸಿದಷ್ಟು ಸೀಟುಗಳು ಕಾಂಗ್ರೆಸ್‌ಗೆ ಬರದಿರುವ ಹೊತ್ತಿನಲ್ಲಿ ರಾಜ್ಯದ ಜನರ ಮೇಲೆ ಬೆಲೆಯೇರಿಕೆ ಅಸ್ತ್ರವನ್ನು ಬಳಸುತ್ತಿರುವುದು, ‘ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ’ ಎಂಬಂತಹ ವರ್ತನೆಯೇ? ಖಂಡಿತವಾಗಿಯೂ ಇದು ಜನ ವಿರೋಧಿ ಕ್ರಮ.

ಇದನ್ನೂ ಓದಿ: Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Continue Reading

ಪ್ರಮುಖ ಸುದ್ದಿ

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

Teachers Transfer: ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು (ಜೂನ್‌ 15) ಪ್ರಕಟಗೊಂಡಿದೆ. ಇದಾದ ನಂತರ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆ ಕೋರಿ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ವೇಳಾಪಟ್ಟಿಯನ್ನು ಪ್ರಕಟಿಸುವ ಕಾರಣ ಶಿಕ್ಷಕರ ಕನಸು ಈಡೇರುವ ಸಮಯ ಬಂದಂತಾಗಿದೆ.

VISTARANEWS.COM


on

Teachers Transfer
Koo

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಶನಿವಾರ (ಜೂನ್‌ 15) ಪ್ರಕಟಗೊಂಡಿದೆ. ಕಡ್ಡಾಯ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರವು (Karnataka Government), ಕೋರಿಕೆಯ ವರ್ಗಾವಣೆ ಪಟ್ಟಿಯನ್ನು ಮಾತ್ರ ಪ್ರಕಟಿಸಿದೆ. ಇದರಿಂದ ಸಾವಿರಾರು ಶಿಕ್ಷಕರು ನಿಟ್ಟುಸಿರು ಬಿಡುವಂತಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ವಲಯವಾರು ವರ್ಗಾವಣೆ ಈ ವರ್ಷ ಕೈಬಿಡುವಂತೆಯೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಿದೆ. ಇನ್ನುಮುಂದೆ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ ಘೋಷಣೆ ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು. ಈಗ ಕೊನೆಗೂ ವರ್ಗಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ.

ವರ್ಗಾವಣೆಗಳಲ್ಲಿ ಮೂರು ವಿಧ

ಸಾಮಾನ್ಯವಾಗಿ ಶಿಕ್ಷಕರ ವರ್ಗಾವಣೆಯಲ್ಲಿ ಮೂರು ವಿಧಗಳಿವೆ. ಇವುಗಳನ್ನೇ ರಾಜ್ಯ ಸರ್ಕಾರ ಅನುಸರಿಸುತ್ತದೆ. ಸಾಮಾನ್ಯ ವರ್ಗಾವಣೆಯಲ್ಲಿ ಕೋರಿಕೆ ಸಲ್ಲಿಸಿದವರು, ಪರಸ್ಪರ ವರ್ಗಾವಣೆ ಬಯಸಿದವರಿಗೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇನ್ನು, ಒಂದೇ ಶಾಲೆಯಲ್ಲಿ ಸತತ 10 ವರ್ಷ ಕಾರ್ಯನಿರ್ವಹಿಸಿದವರಿಗೆ ಕಡ್ಡಾಯ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಯಾವುದಾದರೂ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಹೆಚ್ಚಿನ ಶಿಕ್ಷಕರು ಇದ್ದರೆ, ಅವರನ್ನು ಹೆಚ್ಚುವರಿ ವರ್ಗಾವಣೆ ವಿಧದಲ್ಲಿ ಟ್ರಾನ್ಸ್‌ಫರ್‌ ಮಾಡಲಾಗುತ್ತದೆ.

ಕಡ್ಡಾಯ ವರ್ಗಾವಣೆ ಮಾಡುವ ವೇಳೆ ಮೂರು ವಲಯಗಳನ್ನು ಗಮನಿಸಲಾಗುತ್ತದೆ. ಎ ವಲಯದಲ್ಲಿ ನಗರಗಳು ಅಥವಾ ಪಟ್ಟಣಗಳು ಇದ್ದರೆ, ಬಿ ವಲಯದಲ್ಲಿ ನಗರದಿಂದ ಮೂರು ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳು, ಸಿ ವಲಯದಲ್ಲಿ ನಗರದಿಂದ 10 ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಎ ವಲಯದಲ್ಲಿ ಅಂದರೆ ಯಾವುದೇ ಒಂದು ನಗರದಲ್ಲಿ 10 ವರ್ಷ ಸತತವಾಗಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಬಿ ಅಥವಾ ಸಿ ವಲಯಗಳಿಗೆ, ಅಂದರೆ ಹಳ್ಳಿಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಸಿ ವಲಯದಲ್ಲಿ ಕೆಲಸ ಮಾಡಿದ ಶಿಕ್ಷಕರನ್ನು ಎ ವಲಯಕ್ಕೂ ವರ್ಗಾವಣೆ ಮಾಡಲಾಗುತ್ತದೆ.

ಶಿಕ್ಷಕರ ಸಂಘದಿಂದ ಅಭಿನಂದನೆ

ವಲಯವಾರು ವರ್ಗಾವಣೆಯನ್ನು ಕೈಬಿಟ್ಟು, ಕೋರಿಕೆಯ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಅವರು ಸಂಘದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಂಘದ ಪರವಾಗಿ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇತ್ತು. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ದ್ವಿಭಾಷಾ ನೀತಿಗೂ ಅನುಮತಿ

ಶಿಕ್ಷಕರ ವರ್ಗಾವಣೆ ಜತೆಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ನೀತಿಯ ಜಾರಿಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಒಂದು ಸಾವಿರ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನೂ ಪ್ರಾರಂಭಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಗೆ ಬರಲಿದೆ.

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಹಾಗೆಯೇ, ದ್ವಿಭಾಷಾ ನೀತಿ ಅನ್ವಯ ತರಗತಿಗಳನ್ನು ಆರಂಭಿಸುವ ಕುರಿತು ಆಯಾ ಜಿಲ್ಲೆಗಳಲ್ಲಿರುವ ಶಾಲೆಗಳ ಪಟ್ಟಿಯನ್ನೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.

ಇದನ್ನೂ ಓದಿ: Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Continue Reading

ಶ್ರದ್ಧಾಂಜಲಿ

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Sagri Raghavendra Upadhyaya: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕರ್ಥ, ಪ್ರಕಾಶಕ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ.

VISTARANEWS.COM


on

Hiriya vidwamsa Sagri Raghavendra Upadhyaya passed away
Koo

ಬೆಂಗಳೂರು: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕಾರ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) (Sagri Raghavendra Upadhyaya) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ನರಸಿಂಹ ಉಪಾಧ್ಯಾಯ ಮತ್ತು ಸೀತಾಲಕ್ಷ್ಮಿ ದಂಪತಿಯ ಪುತ್ರನಾಗಿ 1953ರಲ್ಲಿ ಜನಿಸಿದ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶ್ರೀ ವಿದ್ಯಾಮಾನ್ಯ ತೀರ್ಥರು, ಶೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಶ್ರೀ ಕಾಪು ಹಯಗ್ರೀವಾಚಾರ್ಯರು ಮೊದಲಾದ ಪಂಡಿತರಲ್ಲಿ ಅಧ್ಯಯನ ಮಾಡಿ, ವೇದಾಂತ ಶಾಸ್ತ್ರದಲ್ಲಿ, ಸಂಸ್ಕೃತದಲ್ಲಿ ಎಂ.ಎ ಪಡೆದು ಎಸ್‌ಎಂಎಸ್‌ಪಿ ಸಂಸ್ಕೃತ ಕಾಲೇಜು, ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ತಮ್ಮದೇ ಆದ ಪರವಿದ್ಯಾ ಪ್ರಕಾಶನ ಸಂಸ್ಥೆ ಪ್ರಾರಂಭಿಸಿ, ನೂರಾರು ಗ್ರಂಥಗಳನ್ನು ರಚಿಸಿದ್ದಾರೆ. ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿ ಗೌರವ ಮತ್ತು ಮಾನ್ಯತೆಗೆ ಭಾಜನರಾಗಿದ್ದರು. ಕನ್ನಡ ಧಾರ್ಮಿಕ ಸಾಹಿತ್ಯದಲ್ಲಿ ಉತ್ತಮ ಹೆಸರು ಗಳಿಸಿರುವ ತತ್ವವಾದ ಮತ್ತು ಸರ್ವಮೂಲ ಮಾಸ ಪತ್ರಿಕೆಯ ಸಂಪಾದಕರಾಗಿದ್ದರು.

ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶುಕ್ರವಾರ ಸಂಜೆ ಬೆಂಗಳೂರಿನ ಶ್ರೀ ಭಂಡಾರಕೇರಿ ಮಠದಲ್ಲಿ ಶ್ರೀ ವಿದ್ಯೇಶತೀರ್ಥರ 70ನೇ ವರ್ಷದ ವರ್ಧಂತಿ ಕಾರ್ಯಕ್ರಮದಲ್ಲಿ ತಮ್ಮ ಕೊನೆಯ ಉಪನ್ಯಾಸ ನೀಡಿ, ನಂತರದ ಕೆಲವೇ ನಿಮಿಷಗಳಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಬಳಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚೇತರಿಸಿಕೊಳ್ಳಲಾಗದೇ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಚಾಮರಾಜಪೇಟೆ ಚಿತಾಗಾರದಲ್ಲಿ ನೂರಾರು ವಿದ್ವಾಂಸರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಒದಿ: Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

ತೀವ್ರ ಸಂತಾಪ: ಸಗ್ರಿ ರಾಘವೇಂದ್ರ ಉಪಾಧ್ಯಾಯ ಅವರ ನಿಧನಕ್ಕೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಮತ್ತು ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Continue Reading
Advertisement
Viral Video
Latest10 mins ago

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Health Tips
Latest13 mins ago

Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Temple Bell
ಧಾರ್ಮಿಕ18 mins ago

Temple Bell: ದೇವಾಲಯದಿಂದ ಹಿಂತಿರುಗುವಾಗ ಗಂಟೆ ಬಾರಿಸಲೇಬಾರದು ಯಾಕೆ ಗೊತ್ತೇ?

Morning Nutrition
ಆರೋಗ್ಯ21 mins ago

Morning Nutrition: ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

Karnataka Weather Forecast
ಮಳೆ51 mins ago

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Siddaramaiah
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

International Yoga Day 2024
ಆರೋಗ್ಯ1 hour ago

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

Dina Bhavishya
ಭವಿಷ್ಯ2 hours ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ

Teachers Transfer
ಪ್ರಮುಖ ಸುದ್ದಿ8 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್9 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ17 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌