Site icon Vistara News

Ballari News: ಬಳ್ಳಾರಿ; ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್‌ ವಿತರಣೆ

MLA Nara Bharat Reddy distributed a compensation check to the families of the deceased

ಬಳ್ಳಾರಿ: ವಿಜಯನಗರ ಜಿಲ್ಲೆ ಕಾರಿಗನೂರು ಬಳಿ ಈಚೆಗೆ ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟ ಗುಗ್ಗರಟ್ಟಿಯ ಉಮೇಶ್ ಹಾಗೂ ಅಂದ್ರಾಳ್‌ನ ಶಾಮೂ ಅವರ ಕುಟುಂಬಗಳಿಗೆ ಸರ್ಕಾರದ ಪರವಾಗಿ ತಲಾ ಎರಡು ಲಕ್ಷಗಳ ಪರಿಹಾರದ ಚೆಕ್‌ ನ್ನು (Compensation checks) ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ವಿತರಿಸಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಶಾಸಕರಲ್ಲಿ ತೋಡಿಕೊಂಡರು. ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿದ ಶಾಸಕರು ಕೂಡಲೇ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Virat Kohli: ಸಚಿನ್ ವಿಶ್ವ​ ದಾಖಲೆ ಮುರಿಯಲು ಸಜ್ಜಾದ ಕಿಂಗ್​ ಕೊಹ್ಲಿ

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಕು.ತ್ರಿವೇಣಿ, ಉಪ ಮೇಯರ್ ಜಾನಕಿ, ಪಾಲಿಕೆ ಸದಸ್ಯರಾದ ಜಬ್ಬಾರ್ ಸಾಬ್, ಶ್ರೀ ರಾಮಾಂಜನೇಯಲು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಕಮ್ಮಲೆ ಸೂರಿ, ಸಿ.ಡಿ. ಹೊನ್ನೂರು ಸ್ವಾಮಿ ಸೇರಿದಂತೆ ಮುಖಂಡರು ಹಾಗೂ ಇತರರು ಪಾಲ್ಗೊಂಡಿದ್ದರು.

Exit mobile version