Ballari News Dr Vishwanath performed a rare successful brain surgery on a 5 year old boy Ballari News : 5 ವರ್ಷದ ಬಾಲಕನಿಗೆ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ - Vistara News

ಕರ್ನಾಟಕ

Ballari News : 5 ವರ್ಷದ ಬಾಲಕನಿಗೆ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ

Ballari News: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದ ನಾಗೇಶ್ ಮತ್ತು ಪಾರ್ವತಿ ದಂಪತಿಯ 5 ವರ್ಷದ ಬಾಲಕನಿಗೆ ಮೆದುಳಿನ ಅರ್ಧ ಭಾಗದ ತಲೆಯ ಬುರುಡೆ ತೆರೆದು ಮೈಕ್ರೋಸ್ಕೋಪ್ ಮೂಲಕ ಅತೀ ಕ್ಲಿಷ್ಟಕರ ಹಾಗೂ ಅತೀ ಸೂಕ್ಷ್ಮ ರೀತಿಯ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ವಿಮ್ಸ್ ನ್ಯೂರೋ ಸರ್ಜರಿ ವಿಭಾಗದ ಡಾ. ವಿಶ್ವನಾಥ್‌ ಯಶಸ್ವಿಯಾಗಿದ್ದಾರೆ.

VISTARANEWS.COM


on

successful brain surgery on a 5 year old boy at ballari vims
ಬಳ್ಳಾರಿಯ ಟ್ರಾಮಾಕೇರ್‌ ಸೆಂಟರ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಪಟ್ಟ 5 ವರ್ಷದ ಬಾಲಕನೊಂದಿಗೆ ನ್ಯೂರೋ ಸರ್ಜನ್ ಡಾ.ಎಸ್.ವಿಶ್ವನಾಥ್‌ ಮತ್ತು ವೈದ್ಯರ ತಂಡ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಐದು ವರ್ಷದ ಬಾಲಕನಿಗೆ ಮೆದುಳಿನ (Brain) ಅರ್ಧ ಭಾಗದ ತಲೆಯ ಬುರುಡೆ ತೆರೆದು ಮೈಕ್ರೋಸ್ಕೋಪ್ (Microscope) ಮೂಲಕ ಅತೀ ಕ್ಲಿಷ್ಟಕರ ಹಾಗೂ ಅತೀ ಸೂಕ್ಷ್ಮ ರೀತಿಯ ಶಸ್ತ್ರ ಚಿಕಿತ್ಸೆ (Surgery) ಮಾಡುವಲ್ಲಿ ಯಶಸ್ವಿಯಾಗಿರುವ ವಿಮ್ಸ್ ನ್ಯೂರೋ ಸರ್ಜರಿ ವಿಭಾಗದ ಡಾ. ವಿಶ್ವನಾಥ ಅವರ ಸಾಧನೆ ವೈದ್ಯಕೀಯ ಕ್ಷೇತ್ರವೇ ಹೆಮ್ಮೆ ಪಡುವ ಸಂಗತಿಯಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದ ನಾಗೇಶ್ ಮತ್ತು ಪಾರ್ವತಿ ದಂಪತಿಯ ಐದು ವರ್ಷದ ಬಾಲಕ ಹುಟ್ಟಿನಿಂದಲೇ ಈ ಕಾಯಿಲೆಯಿಂದ ಬಳಲುತ್ತಿದ್ದನು. ಕಳೆದ ಕೆಲ ತಿಂಗಳಿನಿಂದ ನಿರಂತರವಾಗಿ ನಿಯಂತ್ರಣ ತಪ್ಪಿ ಬೀಳುತ್ತಿದ್ದ, ಇದನ್ನು ಗಮನಿಸಿದ ಪೋಷಕರು ಸ್ಥಳೀಯ ವೈದ್ಯರ ಬಳಿ ತಪಾಸಣೆಗೊಳಪಡಿಸಿದಾಗ ಮಗುವಿಗೆ ಅತೀ ವಿರಳ ಕಾಯಿಲೆ ಇದ್ದು, ನರ ರೋಗತಜ್ಞ ವೈದ್ಯರ ಬಳಿ ಮಾಡಿಸುವಂತೆ ಸಲಹೆ ನೀಡಲಾಗಿತ್ತು.

ಇದನ್ನೂ ಓದಿ: WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಏನಿದು ಕಾಯಿಲೆ?

ಉಸಿರಾಟ ಮತ್ತು ಹೃದಯ ಬಡಿತ ಕ್ರಿಯೆ ನಿಯಂತ್ರಿಸುವ ಬ್ರೈನ್ ಸ್ಟೆಮ್ ಬಳಿ ಮೆದುಳಿನ ದ್ರವದಿಂದ ಉಂಟಾದ ನೀರಿನ ಗುಳ್ಳೆ ರೂಪದ ಚೀಲ (cyst) ದಂತಹ ಅತೀವಿರಳ ಖಾಯಿಲೆಯಿಂದ ಬಳಲುತ್ತಿದ್ದನು. ಬೆಂಗಳೂರಿನ ನಿಮಾನ್ಸ್, ಇಂದಿರಾಗಾಂಧಿ ಆಸ್ಪತ್ರೆಗೆ ಬಂದು ತಪಾಸಣೆಗೊಳಪಟ್ಟು, ಶೀಘ್ರವಾಗಿ ಚಿಕಿತ್ಸೆಗೆ ದಿನಾಂಕ ನಿಗದಿಯಾಗದ ಹಿನ್ನಲೆಯಲ್ಲಿ ವಿಮ್ಸ್‌ನಲ್ಲಿ ತಪಾಸಣೆಗೊಳಗಾಗಿದ್ದನು. ಎಂಆರ್‌ಐ ಪರೀಕ್ಷೆಯಿಂದ ಅತೀ ವಿರಳ ಖಾಯಿಲೆ ಇರುವುದನ್ನು ಖಚಿತಪಡಿಸಿಕೊಂಡ ಡಾ.ವಿಶ್ವನಾಥ್, ಬಾಲಕನನ್ನು ಮೇ 08 ರಂದು ದಾಖಲು ಮಾಡಿಕೊಂಡು ಪಾಲಕರೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದರು.

ಇದನ್ನೂ ಓದಿ: BSNL Revival: ಬಿಎಸ್ಸೆನ್ನೆಲ್‌ ಹಳಿಗೆ ತರಲು ಕೇಂದ್ರದಿಂದ 89 ಸಾವಿರ ಕೋಟಿ ರೂ. ಪ್ಯಾಕೇಜ್‌, ಸಿಗಲಿದೆಯೇ 5ಜಿ?

ವಿರಳ ಶಸ್ತ್ರ ಚಿಕಿತ್ಸೆಯಲ್ಲಿ ಎರಡನೇಯದು

ವೈದ್ಯಕೀಯ ದಾಖಲಾತಿಗಳ ಸಂಗ್ರಹವಾದ ಪಬ್ ಮೆಡ್ (Pub Med) ಪ್ರಕಾರ ಜಗತ್ತಿನಲ್ಲೇ ಅತ್ಯಂತ ವಿರಳ ಚಿಕಿತ್ಸೆಯಲ್ಲಿ ಇದು ಎರಡನೇ ಶಸ್ತ್ರ ಚಿಕಿತ್ಸೆಯಾಗಿದೆ ಎಂದು ತಿಳಿದು ಬಂದಿದೆ. ಈ ಬಾಲಕನಿಗೆ ಟ್ರಾಮಾಕೇರ್‌ ಸೆಂಟರ್‌ನಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿ, ನಂತರ ನಿರಂತರ ತಪಾಸಣೆ ಔಷದೋಪಚಾರ ನೀಡಲಾಗಿದೆ. ಬಾಲಕನಲ್ಲಿ ಸಹಜ ಚಟುವಟಿಕೆಗಳು ಕಂಡುಬಂದಿದ್ದು, ಯಾವುದೇ ನ್ಯೂನತೆಗಳನ್ನು ಇರುವುದಿಲ್ಲ. ಸ್ವತಂತ್ರವಾಗಿ ಆಹಾರ ಸೇವನೆ, ಚಲನೆ ಮಾಡುತ್ತಿದ್ದಾನೆ. ಇಂತಹ ಅತೀ ವಿರಳ ಶಸ್ತ್ರ ಚಿಕಿತ್ಸೆ ಉಚಿತವಾಗಿ ಕೈಗೊಂಡು, ಬಾಲಕ ಸಹಜತೆಯತ್ತ ಮಾಡುವಂತೆ ಪರಿಶ್ರಮ ಪಟ್ಟ ಡಾ.ವಿಶ್ವನಾಥ ಮತ್ತು ಅವರ ತಂಡ ಹಾಗೂ ವಿಮ್ಸ್‌ ಗೆ ಬಾಲಕನ ಪೋಷಕರಾದ ನಾಗೇಶ್ ಮತ್ತು ಪಾರ್ವತಿ ಕೃತಜ್ಞತೆ ತಿಳಿಸಿದ್ದಾರೆ.

ತಂಡಕ್ಕೆ ಮೆಚ್ಚುಗೆ

ಶಸ್ತ್ರಚಿಕಿತ್ಸೆಯಲ್ಲಿ ಡಾ. ವಿಶ್ವನಾಥ್ ಅವರೊಂದಿಗೆ ಡಾ. ಬಸವರಾಜ್ ಪಾಟೀಲ್, ಡಾ. ಚಂದ್ರಕುಮಾರ್, ಅರವಳಿಕೆ ತಜ್ಞ ಡಾ. ಶ್ರೀನಿವಾಸುಲು, ಶುಶ್ರೂಷಕಿರಾದ ಸಿಜ್ಜು, ನ್ಯಾನ್ಸಿ ಅವರು ಪಾಲ್ಗೊಂಡಿದ್ದರು.

ವಿಮ್ಸ್‌ನ ಮೆದುಳು ಮತ್ತು ನರರೋಗ ಶಸ್ತ್ರ ಚಿಕಿತ್ಸೆ ತಜ್ಞ (ನ್ಯೂರೋ ಸರ್ಜನ್) ಡಾ. ಎಸ್. ವಿಶ್ವನಾಥ ಅವರು ಮೆದುಳು ಹಾಗೂ ನರರೋಗಗಳಿಗೆ ಸಂಬಂಧಿಸಿದ ಅನೇಕ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗಳನ್ನು ಕೈಗೊಂಡು ವಿಮ್ಸ್‌ ಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ: Chaitra Hallikeri: ಕಿರುತೆರೆಗೆ ಎಂಟ್ರಿ ಕೊಟ್ಟ ಬಿಗ್‌ ಬಾಸ್‌ ಖ್ಯಾತಿಯ ಚೈತ್ರಾ ಹಳ್ಳಿಕೇರಿ

ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಕೈಗೊಂಡು ಸಾಧನೆಗೈದ ಡಾ. ವಿಶ್ವನಾಥ್ ಮತ್ತು ತಂಡಕ್ಕೆ ವಿಮ್ಸ್‌ ನ ನಿರ್ದೇಶಕ ಡಾ. ಗಂಗಾಧರ ಗೌಡ, ಟ್ರಾಮಾಕೇರ್‌ ಸೆಂಟರ್‌ನ ಅಧೀಕ್ಷಕ ಡಾ. ಶಿವ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Firing in Jewellery : ಕೊಡಿಗೇಹಳ್ಳಿ ಜುವೆಲ್ಲರಿ ಫೈರಿಂಗ್‌ ಕೇಸಿಗೆ ಟ್ವಿಸ್ಟ್‌; ದರೋಡೆಕೋರನೇ ಗುಂಡಿಗೆ ಬಲಿ!

Firing in Jewellery : ಇದೊಂಥರಾ ಕಾವ್ಯಾತ್ಮಕ ನ್ಯಾಯ. ಜುವೆಲ್ಲರಿ ದರೋಡೆಗೆ ಬಂದು ಗುಂಡು ಹಾರಿಸಿದ್ದ ದುಷ್ಕರ್ಮಿಗಳ ಪೈಕಿ ಒಬ್ಬ ಅವರದೇ ಗುಂಡಿಗೆ ಬಲಿಯಾಗಿದ್ದಾನೆ. ಇದು ಕೊಡಿಗೇಹಳ್ಳಿಯ ಜುವೆಲ್ಲರಿ ದರೋಡೆ ಪ್ರಕರಣದ ಟ್ವಿಸ್ಟ್‌

VISTARANEWS.COM


on

Firing in JewelleryFiring in Jewellery
Koo

ಬೆಂಗಳೂರು: ಬೆಂಗಳೂರು : ಮಾರ್ಚ್‌ 14ರಂದು ಬೆಂಗಳೂರಿನ (Bangalore News) ಕೊಡಿಗೇ ಹಳ್ಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಬ್ಯಾಂಕರ್ಸ್‌ ಎಂಡ್‌ ಜುವೆಲ್ಲರ್ಸ್‌ಗೆ (Lakshmi Bankers and Jewellers) ನುಗ್ಗಿ ದರೋಡೆಗೆ ಯತ್ನಿಸಿದ ಪ್ರಕರಣ ಆರೋಪಿಗಳಿಗೇ ತಿರುಮಂತ್ರವಾಗಿದೆ. ಆವತ್ತು ಜುವೆಲ್ಲರಿ ಮಾಲೀಕನನ್ನು ಗುಂಡು ಹಾರಿಸಿ ಕೊಲ್ಲಲು (Firing in Jewellery) ಪ್ರಯತ್ನಿಸಿದ ದುಷ್ಕರ್ಮಿಗಳಲ್ಲಿ ಒಬ್ಬಾತ ಗುಂಡೇಟಿಗೆ ಬಲಿಯಾಗಿದ್ದಾನೆ (One miscreant died of firing). ಅಂದರೆ ಆವತ್ತು ಜುವೆಲ್ಲರಿಯಲ್ಲಿ ಮಾಲೀಕನಿಗೆ ಹಾರಿಸಿದ (Attack on Jewellery) ಗುಂಡೇ ಅವನಿಗೆ ತಾಗಿತ್ತು. ಇದೀಗ ಅವನು ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ!

ದೇವಿ ನಗರದಲ್ಲಿ ದರೋಡೆಗೆ ಯತ್ನಿಸಿದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಮಾರ್ಚ್‌ 18ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದರು. ಸಣ್ಣ ಸಣ್ಣ ಜ್ಯುವೆಲರಿಗಳನ್ನು ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದ ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್ ಬಂಟಿ ಮತ್ತು ಸೂರಜ್‌ ಸೂರಜ್‌ ಆರೋಪಿಗಳಾಗಿದ್ದು, ಮೂವರನ್ನು ವಶಕ್ಕೆ ಪಡೆದಿದ್ದರು. ಅವರಲ್ಲಿ ಸೂರಜ್‌ ಎಂಬಾತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

Firing in Bangalore1

ಮಾರ್ಚ್‌ 14ರಂದು ಅಂದಾ ರಾಮ್‌ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ನಾಲ್ವರು ದರೋಡೆಕೋರರು ಬಂದಿದ್ದರು. ಬೈಕ್‌ನಲ್ಲಿ ಬಂದಿದ್ದ ಅವರು ಬೈಕ್‌ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದಾಗ ಕೊಟ್ಟಿರಲಿಲ್ಲ. ಆಗ ಮೊದಲು ಮಚ್ಚಿನಿಂದ ಕೊಚ್ಚಲು ಮುಂದಾಗಿದ್ದಾರೆ. ಆದರೆ ಮಾಲೀಕ ಹೆದರದೆ ಇದ್ದಾಗ ಪಿಸ್ತೂಲು ತೋರಿಸಿದ್ದಾರೆ. ಆಗಲೂ ಜಗ್ಗದಿದ್ದಾಗ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾರೆ. ಯೇ ಹಣ ಕೇಳಿದ್ದಾರೆ. ಆದರೆ, ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.

ಆಗ ಅಂದಾರಾಮ್‌ ಮತ್ತು ಆಪುರಾಮ್‌ ಎಂಬವರಿಗೆ ಗಾಯಗಳಾಗಿವೆ. ಈ ನಡುವೆ, ದುಷ್ಕರ್ಮಿಗಳು ಪಿಸ್ತೂಲನ್ನು ಅಲ್ಲೇ ಬಿಟ್ಟು ತಾವು ಬಂದಿದ್ದ ಎರಡು ಬೈಕ್‌ಗಳಲ್ಲಿ ಅಲ್ಲಿಂದ ಪರಾರಿಯಾಗಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರು ಈಗ ಚೇತರಿಸಿಕೊಳ್ಳುತಿದ್ದಾರೆ.

ಗ್ವಾಲಿಯರ್‌ನಲ್ಲಿ ಸಿಕ್ಕಿಬಿದ್ದ ದುಷ್ಕರ್ಮಿಗಳು

ಬೆಂಗಳೂರಿನಲ್ಲಿ ನಡೆದ ಈ ಭಯಾನಕ ದರೋಡೆ ಯತ್ನ ಪ್ರಕರಣದ ಬೆನ್ನು ಹತ್ತಿದ ಕೊಡಿಗೇಹಳ್ಳಿ ಪೊಲೀಸರು ತಮ್ಮ ಎಲ್ಲ ಚಾಣಾಕ್ಷತೆಯನ್ನು ಧಾರೆ ಎರೆದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೂ ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ!

ಆರೋಪಿಗಳ ಓಡಾಟ, ಪ್ರಯಾಣದ ಎಲ್ಲ ವಿವರಗಳನ್ನು ಚಾಣಾಕ್ಷತೆಯಿಂದ ಕಲೆ ಹಾಕಿದ ಪೊಲೀಸರು ಆಶು ಪಂಡಿತ್, ಮೋಸೆ ಅಲಿಯಾಸ್ ಬಂಟಿ, ಸೂರಜ್ ಎಂಬವರನ್ನು ಬಂಧಿಸಿದರು. ಅವರು ಸಣ್ಣ ಸಣ್ಣ ಜ್ಯುವೆಲರಿಗಳನ್ನೇ ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದ ವಿಷಯ ಬಯಲಿಗೆ ಬಂತು.

ಇದನ್ನೂ ಓದಿ: Firing in Bangalore : ಹಾಡಹಗಲೇ ಜುವೆಲ್ಲರಿಗೆ ನುಗ್ಗಿ ಫೈರಿಂಗ್‌ ಮಾಡಿದ ದುಷ್ಕರ್ಮಿಗಳು; ಇಬ್ಬರು ಗಂಭೀರ

ಶೂಟೌಟ್‌ನಲ್ಲಿ ಗಾಯಗೊಂಡಿದ್ದ ಸೂರಜ್‌

ಈ ನಡುವೆ, ಇನ್ನೊಂದು ಅಚ್ಚರಿಯ ಸಂಗತಿ ಆಗ ಬೆಳಕಿಗೆ ಬಂದಿತ್ತು. ಅದೇನೆಂದರೆ ಅಂದು ನಡೆದ ಶೂಟೌಟ್‌ನಲ್ಲಿ ನಿಜಕ್ಕೂ ಸರಿಯಾಗಿ ಗಾಯವಾಗಿದ್ದು ಅಲ್ಲಿನ ಮಾಲೀಕರಿಗಲ್ಲ. ಬದಲಾಗಿ ದುಷ್ಕರ್ಮಿಗಳ ತಂಡಕ್ಕೆ ಸೇರಿದ ಸೂರಜ್‌ ಎಂಬಾತನಿಗೆ. ಹಾಗಾಗಿಯೇ ಅವರು ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿ ಪರಾರಿಯಾಗಿದ್ದರು.

ಆವತ್ತು ಹಾರಿದ ಗುಂಡು ಸೂರಜ್‌ನ ಕುತ್ತಿಗೆಗೆ ಗುಂಡು ತಗುಲಿತ್ತು. ಆಶು ಪಂಡಿತ್‌ ಹಾರಿಸಿದ ಗುಂಡಿನಿಂದ ಸೂರಜ್‌ನಿಗೆ ಗುಂಡು ತಗುಲುತ್ತಿದ್ದಂತೆಯೇ ಅವರೆಲ್ಲ ಓಡಿ ಹೋಗಿ ತಪ್ಪಿಸಿಕೊಂಡಿದ್ದರು. ಆದರೆ, ಗುಂಡನ್ನು ತೆಗೆಯುವ ಪ್ರಯತ್ನ ಫಲಿಸಿರಲಿಲ್ಲ. ಅವರು ಬೆಂಗಳೂರಿನಿಂದ ಅನಂತಪುರಕ್ಕೆ ತೆರಳಿ ಅಲ್ಲಿಂದ ಗ್ವಾಲಿಯರ್‌ಗೆ ಹೋಗಿದ್ದರು.

ಈ ನಡುವೆ ಪೊಲೀಸರು ಬೆನ್ನಟ್ಟಿ ಅವರನ್ನು ಹಿಡಿದು ಹಾಕಿದ್ದರು. ಆಗ ಸೂರಜ್‌ನ ಕುತ್ತಿಗೆಗೆ ಗುಂಡೇಟು ಬಿದ್ದು ನರಳುತ್ತಿದ್ದುದು ಕಂಡುಬಂತು. ಕೂಡಲೇ ಪೊಲೀಸರು ಆತನನ್ನು ಗ್ವಾಲಿಯರ್‌ನ ಆಸ್ಪತ್ರೆಗೆ ದಾಖಲಿಸಿದ್ದರು. ಈಗ ಆತ ಅಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಈ ತಂಡ ಕಳೆದ ವಾರವಷ್ಟೇ ಮುಂಬಯಿಯಲ್ಲಿ ದರೋಡೆ ಮಾಡಿ ಬೆಂಗಳೂರಿಗೆ ಬಂದಿತ್ತು. ಆದರೆ, ಬೆಂಗಳೂರಿನ ದರೋಡೆ ಅವರ ಪಾಲಿಗೇ ಕಂಟಕವಾಯಿತು.

Continue Reading

ಬೆಂಗಳೂರು

IT Raid: ಬೆಂಗಳೂರಿನಲ್ಲಿ 10 ಕಡೆ ಐಟಿ ದಾಳಿ, ತೆರಿಗೆ ಪಾವತಿಸದ ರೆಸ್ಟೋರೆಂಟ್‌ಗಳ ಪರಿಶೀಲನೆ

ನಗರದ ಕೋರಮಂಗಲದಲ್ಲಿ ಇರುವ ಕಚೇರಿ, ಇಂದಿರಾನಗರ, ಜಯನಗರ ಮತ್ತಿತರ ಕಡೆಗಳಲ್ಲಿ ಇರುವ ರೆಸ್ಟೋರೆಂಟ್‌ಗಳು ಸೇರಿ ಹಲವೆಡೆ ದಾಳಿ (IT raid in bengaluru) ನಡೆಸಲಾಗಿದೆ.

VISTARANEWS.COM


on

meghana foods it raid
Koo

ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ಮುಂಜಾನೆ ಐಟಿ ಅಧಿಕಾರಿಗಳು ರೆಸ್ಟೋರೆಂಟ್‌ ಚೈನ್‌ ಒಂದರ ಮೇಲೆ ದಾಳಿ (IT Raid) ನಡೆಸಿದ್ದಾರೆ.

ಮೇಘನಾ ಫುಡ್ಸ್ ಗ್ರೂಪ್ (Meghana foods group) ನಡೆಸುತ್ತಿರುವ ರೆಸ್ಟೋರೆಂಟ್‌ಗಳು (Restaurant) ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ನಗರದ ಕೋರಮಂಗಲದಲ್ಲಿ ಇರುವ ಕಚೇರಿ, ಇಂದಿರಾನಗರ, ಜಯನಗರ ಮತ್ತಿತರ ಕಡೆಗಳಲ್ಲಿ ಇರುವ ರೆಸ್ಟೋರೆಂಟ್‌ಗಳು ಸೇರಿ ಹಲವೆಡೆ ದಾಳಿ ನಡೆಸಲಾಗಿದೆ.

ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ಹೊಂದಿರುವ ಕಂಪನಿ, ಬೆಂಗಳೂರಿನಲ್ಲಿ ಒಂಬತ್ತು ಔಟ್‌ಲೆಟ್‌ಗಳನ್ನು ಹೊಂದಿದೆ. ಹೈದರಾಬಾದ್‌ ಮೂಲದ ಕಂಪನಿ ಸ್ಥಾಪಕರು 2006ರಿಂದ ಬೆಂಗಳೂರಿನಲ್ಲಿ ಶಾಖೆಗಳನ್ನು ತೆರೆದಿದ್ದಾರೆ.

ಕಂಪನಿಯ ಆದಾಯ ತೆರಿಗೆ ಪಾವತಿಯಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆ ಐದು ಘಂಟೆಯಿಂದ ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳ ಹಲವು ತಂಡಗಳು ನಗರದಲ್ಲಿ ಸುಮಾರು ಹತ್ತಕ್ಕೂ ಹಚ್ಚು ಕಡೆಗಳಲ್ಲಿ ದಾಳಿ ನಡೆಸಿವೆ.

ವಿದೇಶದಿಂದ ತರುತ್ತಿದ್ದ 1.5 ಕೆಜಿ ಅಕ್ರಮ ಚಿನ್ನ ವಶಕ್ಕೆ

ಬೆಂಗಳೂರು : ಅಕ್ರಮವಾಗಿ ವಿದೇಶದಿಂದ ತರಲಾಗುತ್ತಿದ್ದ ಚಿನ್ನ‌ವನ್ನು (illegal gold smuggling) ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ (Bengaluru international Airport) ಕಸ್ಟಮ್ಸ್ (Customs) ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.

ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 1.5 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕೌಲಾಲಂಪುರ್, ಕುವೈತ್, ಮೆದಿನಾ ಮತ್ತು ಬೆಹ್ರೇನ್‌ನಿಂದ ಬಂದಿದ್ದವರು ಚಿನ್ನವನ್ನು ಬಚ್ಚಿಟ್ಟುಕೊಂಡು ತಂದಿದ್ದರು. ಬಳೆ, ಚೈನ್, ಡಾಲರ್, ಕಟ್ ಪೀಸ್ ಮಾದರಿಯಲ್ಲಿ ಚಿನ್ನ ತರಲಾಗಿತ್ತು. ಲಗೇಜ್ ಬ್ಯಾಗ್‌ನಲ್ಲಿ ಬಟ್ಟೆಯಲ್ಲಿ ಸುತ್ತಿ ಮರೆ ಮಾಚಿ ಚಿನ್ನ ತರಲಾಗಿತ್ತು.

99 ಲಕ್ಷ ಮೌಲ್ಯದ 1.5 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದರು. ಕೌಲಾಲಂಪುರದಿಂದ ಚಿನ್ನವನ್ನು ನೆಟ್ ಮಾದರಿಯಲ್ಲಿ ಮಾಡಿ ಸಿಲ್ವರ್ ಕೋಟ್ ಮಾಡಿದ್ದ ಸ್ಮಗ್ಲರ್ಸ್, ವಂಚಿಸಲು ಯತ್ನಿಸಿದರೂ ಬಿಡದೆ ಪ್ರಯಾಣಿಕರ ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದರು. ಚಿನ್ನ ವಶಕ್ಕೆ ಪಡೆದು ಅಕ್ರಮ ಸಾಗಾಟ ಮಾಡುತ್ತಿದ್ದವರ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: IT Raid : ಬಿಜೆಪಿಯಿಂದ ದೂರ ಸರಿದ ರೌಡಿ ಶೀಟರ್‌ ಫೈಟರ್‌ ರವಿ ಮೇಲೆ ಐಟಿ ದಾಳಿ

Continue Reading

ಕ್ರೈಂ

Self Harm: ಪ್ರೀತಿಸಿದ ಯುವತಿ ಸಿಗಲಿಲ್ಲ, ಕೈ ಕೊಯ್ದು ನೇಣು ಬಿಗಿದುಕೊಂಡ ಯುವಕ

ಯುವತಿಯ ಪ್ರೇಮ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಧಮಕಿಯಿಂದ ನೊಂದ ಯುವಕ ಆತ್ಮಹತ್ಯೆ (Self Harm) ಮಾಡಿಕೊಂಡಿದ್ದಾನೆ.

VISTARANEWS.COM


on

anekal self harm
Koo

ಆನೇಕಲ್: ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಯುವತಿಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಮನನೊಂದ (love disappointment) ಯುವಕ ಬ್ಲೇಡ್‌ನಿಂದ ಕೈ ಕೊಯ್ದುಕೊಂಡು, ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ (Self harm) ಮಾಡಿಕೊಂಡಿದ್ದಾನೆ.

ಈ ಘಟನೆ ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರದಲ್ಲಿ ನಡೆದಿದೆ. ಹರ್ಷಿತ್ ಮನನೊಂದು ನೇಣಿಗೆ ಶರಣಾದ ನತದೃಷ್ಟ ಪ್ರೇಮಿ. ಯುವತಿಯ ಅತ್ತೆ-ಮಾವ ಹಾಗೂ ಸಂಬಂಧಿಗಳಿಂದ ಯುವಕನಿಗೆ ಕಿರುಕುಳವಿತ್ತು.

ಇಂದ್ರಕುಮಾರ್ ಮತ್ತು ರಾಧಾ ದಂಪತಿಗಳ ಪುತ್ರ ಹರ್ಷಿತ್, ತುಮಕೂರು ಮೂಲದ ಮೃದುಲ ಯಾನೆ ಮೇಘ ಎಂಬಾಕೆಯನ್ನು ಪ್ರೀತಿ ಮಾಡುತ್ತಿದ್ದ. ಆನೇಕಲ್ ಎಎಸ್ ಬಿ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿ ಹುಟ್ಟಿಕೊಂಡಿತ್ತು. ಕಳೆದ ಒಂದೂವರೆ ವರ್ಷದಿಂದ ಪರಸ್ಪರ ಇವರು ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ತಂದೆ-ತಾಯಿ ಇಲ್ಲದ ಮೃದುಲ ಅತ್ತೆ ಮತ್ತು ಮಾವನ ಮನೆಯಲ್ಲಿ ವಾಸವಾಗಿದ್ದಳು. ಯುವತಿಯ ಮನೆಗೆ ಇವರ ಪ್ರೀತಿಯ ವಿಚಾರ ತಿಳಿದಿದ್ದು, ಯುವಕ ಹರ್ಷಿತ್‌ಗೆ ನಿಂದಿಸಿದ್ದಾರೆ. ಯುವತಿಯ ಬಳಿ ಮಾತನಾಡದಂತೆ ಧಮಕಿ ಹಾಕಿದ್ದರು. ಯುವತಿಗೂ ಆಕೆಯ ಅತ್ತೆ ಮಾವ ನಿರ್ಬಂಧ ಹಾಕಿದ್ದರು. ಯುವತಿಯೂ ಇದರಿಂದ ಬೆದರಿ ಹರ್ಷಿತ್‌ ಪ್ರೀತಿಯನ್ನು ನಿರಾಕರಣೆ ಮಾಡಿದ್ದಳು.

ಇದೇ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಹರ್ಷಿತ್‌ಗೆ ಫೋನ್ ಮಾಡಿ, ಮೃದುಲಳನ್ನು ತಾನೇ ಮದುವೆಯಾಗುತ್ತೇನೆ, ಆಕೆಯ ತಂಟೆಗೆ ನೀನು ಬರಬಾರದು ಎಂದು ಧಮಕಿ ಹಾಕಿದ್ದ. ಇದರಿಂದ ಸಾಕಷ್ಟು ಮನನೊಂದಿದ್ದ ಹರ್ಷಿತ್, ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬ್ಲೇಡ್‌ನಿಂದ ಕೈ ಕೊಯ್ದುಕೊಂಡಿದ್ದಲ್ಲದೆ ಅದರ ಫೋಟೋ ತೆಗೆದು ತಾಯಿಯ ಮೊಬೈಲ್ ಹಾಗೂ ಹುಡುಗಿಯ ನಂಬರ್‌ಗೆ ವಾಟ್ಸಾಪ್ ಮಾಡಿದ್ದ.

ತಾಯಿ ಹಾಗೂ ತಂದೆ ಇದನ್ನು ನೋಡಿ ಮನೆಗೆ ಬಂದು ನೋಡುವಷ್ಟರಲ್ಲಿ ಕೈ ಕೊಯ್ದುಕೊಂಡು ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಯುವತಿ ಮೃದುಲ @ ಮೇಘ, ಆಕೆಯ ಅತ್ತೆ ಕವಿತಾ, ಮಾವ, ಜೊತೆಗೆ ಅಪರಿಚಿತ ನಂಬರ್‌ನಿಂದ ಫೋನ್ ಮಾಡಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Child Marriage :ಬಾಲ್ಯ ವಿವಾಹದ ಬಲೆಗೆ ಸಿಲುಕಿದ ಬಾಲಕಿ ಆತ್ಮಹತ್ಯೆ; ಗಂಡನ ಬಂಧನ

Continue Reading

ಕೋರ್ಟ್

Family Problem : ಹೆಂಡತಿಗೆ ಮಂಡೆ ಸರಿ ಇಲ್ಲ ಎಂದ ಗಂಡನಿಗೆ ಹೈಕೋರ್ಟ್‌ ದಂಡ!

Family problem : ಇದೊಂದು ವಿಚಿತ್ರ ಕೇಸು. ಗಂಡ ತನ್ನ ಹೆಂಡತಿ ಮೆಂಟಲಿ ಏಜಾಗಿಲ್ಲ. ಹೀಗಾಗಿ ಮದುವೆ ರದ್ದುಗೊಳಿಸಿ ಎಂದು ದಾಖಲೆ ಸಿದ್ಧಪಡಿಸಿದ ಕೇಸು. ಆದರೆ ಆಕೆ ಚೆನ್ನಾಗಿಯೇ ಇದ್ದಾಳೆ. ಕೋರ್ಟ್‌ ಈಗ ಗಂಡನ ಚಳಿ ಬಿಡಿಸಿದೆ.

VISTARANEWS.COM


on

Family Problem High Court
Koo

ಬೆಂಗಳೂರು: ಆಕೆಗೆ ಮಾನಸಿಕವಾಗಿ ಇನ್ನೂ 18 ವರ್ಷ ತುಂಬಿಲ್ಲ (Mental Age). ಅಂದರೆ ವಿವಾಹದ ವಯಸ್ಸು (Marriage Age) ಆಗಿಲ್ಲ ಎಂಬ ವಿಚಿತ್ರ ವಾದ ಮಂಡಿಸಿ ಮದುವೆ ರದ್ದತಿ ಕೋರಿದ್ದ ಗಂಡನೊಬ್ಬನಿಗೆ ಹೈಕೋರ್ಟ್‌ (Karnataka High Court) ಚೆನ್ನಾಗಿ ಚಳಿ ಬಿಡಿಸಿದೆ. ʻನಾನು ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆ (Victoria Hospital) ವೈದ್ಯರಿಗೆ ತೋರಿಸಿದ್ದೇನೆ. ಆಕೆಗೆ ಮಾನಸಿಕವಾಗಿ ಈಗ ಕೇವಲ 11 ವರ್ಷ 8 ತಿಂಗಳಾಗಿದೆ. ಆಕೆಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಹೇಳಿದ್ದರು. ಆಕೆಯ ಮನಸ್ಥಿತಿ ಸರಿ ಇಲ್ಲ, ಬುದ್ಧಿಯೇ ಇಲ್ಲ. ಹೀಗಾಗಿ ಮದುವೆಯನ್ನು ಅನೂರ್ಜಿತಗೊಳಿಸಿ ಎಂದು ಕೋರಿ ಮೆಟ್ಟಿಲು ಹತ್ತಿದ್ದ ಈ ಗಂಡ (Family problem). ಈ ಹೈಕೋರ್ಟ್‌ನ ಆತನಿಗೆ ಚೆನ್ನಾಗಿ ತಪರಾಕಿ ಕೊಟ್ಟು ಜತೆಗೆ 50000 ರೂ. ದಂಡವನ್ನೂ ವಿಧಿಸಿದೆ.

ಇವರಿಬ್ಬರೂ ಬೆಂಗಳೂರಿನ ದಂಪತಿ. ಅವರ ಮದುವೆ ನಡೆದಿದ್ದು ಮೂರು ವರ್ಷದ ಹಿಂದೆ. 2020ರ ನವೆಂಬರ್‌ 26ರಂದು ಮದುವೆಯಾಗಿತ್ತು. ಆದರೆ, ಆರಂಭದಿಂದಲೇ ಅವರಿಬ್ಬರ ನಡುವೆ ಜಗಳ, ಮನಸ್ತಾಪ ನಡೆದಿತ್ತು. ಈ ನಡುವೆ 2021ರ ಜ.28ರಂದು ಅಂದರೆ ಮದುವೆಯಾಗಿ ಮೂರೇ ತಿಂಗಳಲ್ಲಿ ಪತ್ನಿ ತವರು ಮನೆಗೆ ಹೋದವಳು ಮರಳಿ ಬಂದಿಲ್ಲ ಎಂದು ಗಂಡ ಆರೋಪಿಸಿದ್ದ.

ಈ ನಡುವೆ, ಹೆಂಡತಿ, 2022ರ ಏ.14 ರಂದು ನಗರದ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಪತಿ ವಿರುದ್ಧ ಐಪಿಸಿ ಸೆಕ್ಷನ್‌ 498 ‘ಎ’ ದೌರ್ಜನ್ಯ ಮತ್ತು ವರದಕ್ಷಿಣೆ ನಿಷೇಧ ಕಾಯಿದೆ ಸೆಕ್ಷನ್‌ 3 ಮತ್ತು 4ರಡಿ ಕೇಸ್‌ ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿ ಗಂಡನ ವಿರುದ್ಧ ಕೋರ್ಟ್‌ಗೆ ಚಾರ್ಜ್‌ ಶೀಟ್‌ ಸಲ್ಲಿಸಿದ್ದರು.

ಇದೆಲ್ಲ ವಿಚಾರಣೆಗಳು ನಡೆಯುತ್ತಿರುವ ನಡುವೆ ಗಂಡ ಅವಳಿಂದ ನನಗೆ ಮಾನಸಿಕ ಹಿಂಸೆ ಆಗುತ್ತಿದೆ. ಮದುವೆಯನ್ನೂ ರದ್ದು ಮಾಡಿ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ. ಇದರ ಜತೆಗೆ, ಹೆಂಡತಿಯ ಮಾನಸಿಕ ಸ್ಥಿತಿ ಸರಿ ಇಲ್ಲ. ಹಾಗಾಗಿ, ಆಕೆಯನ್ನು ನಿಮ್ಹಾನ್ಸ್‌ನ ವೈದ್ಯರಿಂದ ಪರೀಕ್ಷೆಗೊಳಪಡಿಸಲು ನಿರ್ದೇಶನ ನೀಡಬೇಕೆಂದು ಮತ್ತೊಂದು ಅರ್ಜಿ ಸಲ್ಲಿಸಿದ.

Family Problem

Family Problem : ಬುದ್ಧಿ ನೆಟ್ಟಗಿಲ್ಲ ಎಂದು ವಿಕ್ಟೋರಿಯಾದಲ್ಲಿ ವರದಿ ಕೊಟ್ಟಿದ್ದರಂತೆ!

ಇದರ ನಡುವೆ ಗಂಡ ಒಂದು ರಿಪೋರ್ಟನ್ನು ಕೋರ್ಟ್‌ಗೆ ಸಲ್ಲಿಸಿದ. ಅದು ವಿಕ್ಟೋರಿಯಾ ಆಸ್ಪತ್ರೆಗೆ ಹೊರ ರೋಗಿ ವಿಭಾಗದಲ್ಲಿ ನೀಡಲಾದ ವರದಿ. ಅವಳ ಮಾನಸಿಕ ಸ್ಥಿತಿ ಸರಿ ಇಲ್ಲ ಎಂಬ ಕಾರಣಕ್ಕೆ ವಿಕ್ಟೋರಿಯಾ‌ ಆಸ್ಪತ್ರೆಯಲ್ಲಿ ತೋರಿಸಲಾಗಿತ್ತು. ವೈದ್ಯರು ಆಕೆಗೆ ಮಾನಸಿಕವಾಗಿ 11 ವರ್ಷ 8 ತಿಂಗಳಾಗಿದೆ. ಆಕೆಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಹೇಳಿದ್ದರು. ಆಕೆಯ ಮನಸ್ಥಿತಿ ಸರಿ ಇಲ್ಲ, ಬುದ್ಧಿ ಇಲ್ಲ ಮತ್ತು 18 ವರ್ಷ ಆಗಿಲ್ಲ. ಹಾಗಾಗಿ, ಮದುವೆಯನ್ನು ಅನೂರ್ಜಿತಗೊಳಿಸಿ ಎನ್ನುವುದು ಗಂಡನ ವಾದವಾಗಿತ್ತು.

ಇದನ್ನೂ ಓದಿ : Public Exam: 5,8,9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಅಯೋಮಯ; ತೀರ್ಪು ಕಾದಿರಿಸಿದ ಹೈಕೋರ್ಟ್‌

ಬುದ್ಧಿ ಬೆಳೆಯದಿದ್ದರೆ ನಾನು ಇಷ್ಟೆಲ್ಲ ಓದಲು ಸಾಧ್ಯವೇ?

ಗಂಡ ಕೋರ್ಟ್‌ಗೆ ಸಲ್ಲಿಸಿದ ವರದಿಯನ್ನು ಹೆಂಡತಿ ಆಕ್ಷೇಪಿಸಿದ್ದಳು. ನಾನೊಬ್ಬಳು ಮ್ಯೂಸಿಷಿಯನ್‌. ಈಗಲೂ ಅಧ್ಯಯನ ನಡೆಸುತ್ತಿದ್ದೇನೆ. ನಾನೂ ಕೆಲವು ತಾಂತ್ರಿಕ ಪರೀಕ್ಷೆಗಳನ್ನು ಪಾಸ್‌ ಮಾಡಿದ್ದೇನೆ. ನನ್ನ ಮಾನಸಿಕ ವಯಸ್ಸು 11 ವರ್ಷ 8 ತಿಂಗಳಾಗಿದ್ದರೆ ಇಷ್ಟೆಲ್ಲಾ ಓದಲು ಸಾಧ್ಯವೇ, ಪರೀಕ್ಷೆಗಳಲ್ಲಿತೇರ್ಗಡೆ ಸಾಧ್ಯವೇ? ಎಂದು ಕೇಳಿ ಕೆಲವು ದಾಖಲೆಗಳನ್ನು ಕೋರ್ಟ್‌ ಮುಂದಿಟ್ಟಿದ್ದರು.

Family Problemn : ಈಗ ಹೈಕೋರ್ಟ್‌ ಹೇಳಿದ್ದೇನು?

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಕೌಟುಂಬಿಕ ವ್ಯಾಜ್ಯಗಳಲ್ಲಿ ಪತ್ನಿಯ ಮನಸ್ಥಿತಿ ಸರಿ ಇಲ್ಲ. ಆಕೆಯನ್ನು ಮನಃಶಾಸ್ತ್ರಜ್ಞರಿಂದ ಪರೀಕ್ಷೆಗೊಳಪಡಿಸಬೇಕೆಂಬ ಪತಿಯ ಅರ್ಜಿಯನ್ನು ಪರಿಗಣಿಸಬೇಕಾದರೆ ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯವಿರಬೇಕು ಎಂದಿದೆ. ಜತೆಗೆ ಗಂಡನಿಗೆ 50 ಸಾವಿರ ರೂ. ದಂಡ ಹಾಕಿದೆ.

ಹೈಕೋರ್ಟ್‌ ಗಮನಿಸಿದ ಅಂಶಗಳು

1. ಪತಿಯು ಪತ್ನಿಯನ್ನು ಮಾನಸಿಕ ವೈದ್ಯರಿಂದ ಪರೀಕ್ಷೆಗೊಳಪಡಿಸಬೇಕು ಎಂದು ಅರ್ಜಿ ಸಲ್ಲಿಸಿದಾಕ್ಷಣ ಅದನ್ನು ಪರಿಗಣಿಸಲಾಗದು. ಮೇಲ್ನೋಟಕ್ಕೆ ಬಲವಾದ ಸೂಕ್ತ ಸಾಕ್ಷ್ಯ ಮತ್ತು ಆಧಾರ ಬೇಕಾಗುತ್ತದೆ.

2.ಪತ್ನಿಯೇ ತನ್ನ ಮಾನಸಿಕ ಸ್ಥಿತಿ ಸರಿ ಇಲ್ಲಎಂದು ಪತ್ರದಲ್ಲಿ ಬರೆದಿದ್ದಾಳೆಂದು ಪತಿ ಹೇಳಿದ್ದಾರೆ. ಆದರೆ, ಆ ಪತ್ರದಲ್ಲಿ ದಿನಾಂಕ ನಮೂದಿಸಿಲ್ಲ. ಅದನ್ನು ಯಾವಾಗ, ಯಾರಿಗೆ ಬರೆದರು ಎಂಬುದಕ್ಕೆ ಸ್ಪಷ್ಟತೆ ಇಲ್ಲ.

3. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ಹೇಳಿಕೆ ಕೇವಲ ಊಹೆ ಎನಿಸುತ್ತದೆ. ಯಾಕೆಂದರೆ ಆಕೆಯ ದಾಖಲೆಗಳನ್ನು ನೋಡಿದರೆ ಆಕೆ ಪ್ರತಿಭಾವಂತೆ ಅನಿಸುತ್ತದೆ.

4. ಒಟ್ಟಾರೆ ಪ್ರಕರಣವನ್ನು ಗಮನಿಸಿದರೆ ಗಂಡ ವಿವಾಹವನ್ನು ಅನೂರ್ಜಿತಗೊಳಿಸಲು ನ್ಯಾಯಾಲಯದಲ್ಲಿ ತನ್ನ ಪರ ಸಾಕ್ಷ್ಯಕ್ಕೆ ವೇದಿಕೆ ಸಿದ್ಧಪಡಿಸುತ್ತಿರುವುದು ಕಾಣುತ್ತಿದೆ. ಹಾಗಾಗಿ ಅರ್ಜಿಯನ್ನು ಪರಿಗಣಿಸಲಾಗದು.

Continue Reading
Advertisement
Prabhas Vs Allu Arjun
ಟಾಲಿವುಡ್7 mins ago

Prabhas Vs Allu Arjun: ‘ಪುಷ್ಪ 2’ ಜತೆ ಪೈಪೋಟಿಗಿಳಿದ ಶಿವಣ್ಣ, ಪ್ರಭಾಸ್!

Firing in JewelleryFiring in Jewellery
ಕ್ರೈಂ8 mins ago

Firing in Jewellery : ಕೊಡಿಗೇಹಳ್ಳಿ ಜುವೆಲ್ಲರಿ ಫೈರಿಂಗ್‌ ಕೇಸಿಗೆ ಟ್ವಿಸ್ಟ್‌; ದರೋಡೆಕೋರನೇ ಗುಂಡಿಗೆ ಬಲಿ!

meghana foods it raid
ಬೆಂಗಳೂರು21 mins ago

IT Raid: ಬೆಂಗಳೂರಿನಲ್ಲಿ 10 ಕಡೆ ಐಟಿ ದಾಳಿ, ತೆರಿಗೆ ಪಾವತಿಸದ ರೆಸ್ಟೋರೆಂಟ್‌ಗಳ ಪರಿಶೀಲನೆ

Israeli Forces
ದೇಶ23 mins ago

Israel Palestine War: ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್‌ ದಾಳಿ; 20 ಸಾವು

RCB Unbox
ಕ್ರೀಡೆ47 mins ago

RCB Unbox Event: ಇಂದಿನ ಆರ್​ಸಿಬಿ ಅನ್​ಬಾಕ್ಸ್​ನಲ್ಲಿ ವಿರಾಟ್​ ಕೊಹ್ಲಿಯೂ ಹಾಜರ್​!

Thalapathy Vijay
ಮಾಲಿವುಡ್50 mins ago

Thalapathy Vijay: 14 ವರ್ಷಗಳ ಬಳಿಕ ಕೇರಳಕ್ಕೆ ಬಂದ ದಳಪತಿ ವಿಜಯ್‌!

anekal self harm
ಕ್ರೈಂ1 hour ago

Self Harm: ಪ್ರೀತಿಸಿದ ಯುವತಿ ಸಿಗಲಿಲ್ಲ, ಕೈ ಕೊಯ್ದು ನೇಣು ಬಿಗಿದುಕೊಂಡ ಯುವಕ

Family Problem High Court
ಕೋರ್ಟ್1 hour ago

Family Problem : ಹೆಂಡತಿಗೆ ಮಂಡೆ ಸರಿ ಇಲ್ಲ ಎಂದ ಗಂಡನಿಗೆ ಹೈಕೋರ್ಟ್‌ ದಂಡ!

Benefits of Kasoori Methi
ಆರೋಗ್ಯ2 hours ago

Benefits of Kasoori Methi: ಕಸೂರಿ ಮೇಥಿ ರುಚಿ ಹೆಚ್ಚಿಸಲು ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಸೂಕ್ತ

varanasi nandi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು15 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌