Site icon Vistara News

Ballari News : 5 ವರ್ಷದ ಬಾಲಕನಿಗೆ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ

successful brain surgery on a 5 year old boy at ballari vims

ಬಳ್ಳಾರಿ: ಐದು ವರ್ಷದ ಬಾಲಕನಿಗೆ ಮೆದುಳಿನ (Brain) ಅರ್ಧ ಭಾಗದ ತಲೆಯ ಬುರುಡೆ ತೆರೆದು ಮೈಕ್ರೋಸ್ಕೋಪ್ (Microscope) ಮೂಲಕ ಅತೀ ಕ್ಲಿಷ್ಟಕರ ಹಾಗೂ ಅತೀ ಸೂಕ್ಷ್ಮ ರೀತಿಯ ಶಸ್ತ್ರ ಚಿಕಿತ್ಸೆ (Surgery) ಮಾಡುವಲ್ಲಿ ಯಶಸ್ವಿಯಾಗಿರುವ ವಿಮ್ಸ್ ನ್ಯೂರೋ ಸರ್ಜರಿ ವಿಭಾಗದ ಡಾ. ವಿಶ್ವನಾಥ ಅವರ ಸಾಧನೆ ವೈದ್ಯಕೀಯ ಕ್ಷೇತ್ರವೇ ಹೆಮ್ಮೆ ಪಡುವ ಸಂಗತಿಯಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದ ನಾಗೇಶ್ ಮತ್ತು ಪಾರ್ವತಿ ದಂಪತಿಯ ಐದು ವರ್ಷದ ಬಾಲಕ ಹುಟ್ಟಿನಿಂದಲೇ ಈ ಕಾಯಿಲೆಯಿಂದ ಬಳಲುತ್ತಿದ್ದನು. ಕಳೆದ ಕೆಲ ತಿಂಗಳಿನಿಂದ ನಿರಂತರವಾಗಿ ನಿಯಂತ್ರಣ ತಪ್ಪಿ ಬೀಳುತ್ತಿದ್ದ, ಇದನ್ನು ಗಮನಿಸಿದ ಪೋಷಕರು ಸ್ಥಳೀಯ ವೈದ್ಯರ ಬಳಿ ತಪಾಸಣೆಗೊಳಪಡಿಸಿದಾಗ ಮಗುವಿಗೆ ಅತೀ ವಿರಳ ಕಾಯಿಲೆ ಇದ್ದು, ನರ ರೋಗತಜ್ಞ ವೈದ್ಯರ ಬಳಿ ಮಾಡಿಸುವಂತೆ ಸಲಹೆ ನೀಡಲಾಗಿತ್ತು.

ಇದನ್ನೂ ಓದಿ: WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಏನಿದು ಕಾಯಿಲೆ?

ಉಸಿರಾಟ ಮತ್ತು ಹೃದಯ ಬಡಿತ ಕ್ರಿಯೆ ನಿಯಂತ್ರಿಸುವ ಬ್ರೈನ್ ಸ್ಟೆಮ್ ಬಳಿ ಮೆದುಳಿನ ದ್ರವದಿಂದ ಉಂಟಾದ ನೀರಿನ ಗುಳ್ಳೆ ರೂಪದ ಚೀಲ (cyst) ದಂತಹ ಅತೀವಿರಳ ಖಾಯಿಲೆಯಿಂದ ಬಳಲುತ್ತಿದ್ದನು. ಬೆಂಗಳೂರಿನ ನಿಮಾನ್ಸ್, ಇಂದಿರಾಗಾಂಧಿ ಆಸ್ಪತ್ರೆಗೆ ಬಂದು ತಪಾಸಣೆಗೊಳಪಟ್ಟು, ಶೀಘ್ರವಾಗಿ ಚಿಕಿತ್ಸೆಗೆ ದಿನಾಂಕ ನಿಗದಿಯಾಗದ ಹಿನ್ನಲೆಯಲ್ಲಿ ವಿಮ್ಸ್‌ನಲ್ಲಿ ತಪಾಸಣೆಗೊಳಗಾಗಿದ್ದನು. ಎಂಆರ್‌ಐ ಪರೀಕ್ಷೆಯಿಂದ ಅತೀ ವಿರಳ ಖಾಯಿಲೆ ಇರುವುದನ್ನು ಖಚಿತಪಡಿಸಿಕೊಂಡ ಡಾ.ವಿಶ್ವನಾಥ್, ಬಾಲಕನನ್ನು ಮೇ 08 ರಂದು ದಾಖಲು ಮಾಡಿಕೊಂಡು ಪಾಲಕರೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದರು.

ಇದನ್ನೂ ಓದಿ: BSNL Revival: ಬಿಎಸ್ಸೆನ್ನೆಲ್‌ ಹಳಿಗೆ ತರಲು ಕೇಂದ್ರದಿಂದ 89 ಸಾವಿರ ಕೋಟಿ ರೂ. ಪ್ಯಾಕೇಜ್‌, ಸಿಗಲಿದೆಯೇ 5ಜಿ?

ವಿರಳ ಶಸ್ತ್ರ ಚಿಕಿತ್ಸೆಯಲ್ಲಿ ಎರಡನೇಯದು

ವೈದ್ಯಕೀಯ ದಾಖಲಾತಿಗಳ ಸಂಗ್ರಹವಾದ ಪಬ್ ಮೆಡ್ (Pub Med) ಪ್ರಕಾರ ಜಗತ್ತಿನಲ್ಲೇ ಅತ್ಯಂತ ವಿರಳ ಚಿಕಿತ್ಸೆಯಲ್ಲಿ ಇದು ಎರಡನೇ ಶಸ್ತ್ರ ಚಿಕಿತ್ಸೆಯಾಗಿದೆ ಎಂದು ತಿಳಿದು ಬಂದಿದೆ. ಈ ಬಾಲಕನಿಗೆ ಟ್ರಾಮಾಕೇರ್‌ ಸೆಂಟರ್‌ನಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿ, ನಂತರ ನಿರಂತರ ತಪಾಸಣೆ ಔಷದೋಪಚಾರ ನೀಡಲಾಗಿದೆ. ಬಾಲಕನಲ್ಲಿ ಸಹಜ ಚಟುವಟಿಕೆಗಳು ಕಂಡುಬಂದಿದ್ದು, ಯಾವುದೇ ನ್ಯೂನತೆಗಳನ್ನು ಇರುವುದಿಲ್ಲ. ಸ್ವತಂತ್ರವಾಗಿ ಆಹಾರ ಸೇವನೆ, ಚಲನೆ ಮಾಡುತ್ತಿದ್ದಾನೆ. ಇಂತಹ ಅತೀ ವಿರಳ ಶಸ್ತ್ರ ಚಿಕಿತ್ಸೆ ಉಚಿತವಾಗಿ ಕೈಗೊಂಡು, ಬಾಲಕ ಸಹಜತೆಯತ್ತ ಮಾಡುವಂತೆ ಪರಿಶ್ರಮ ಪಟ್ಟ ಡಾ.ವಿಶ್ವನಾಥ ಮತ್ತು ಅವರ ತಂಡ ಹಾಗೂ ವಿಮ್ಸ್‌ ಗೆ ಬಾಲಕನ ಪೋಷಕರಾದ ನಾಗೇಶ್ ಮತ್ತು ಪಾರ್ವತಿ ಕೃತಜ್ಞತೆ ತಿಳಿಸಿದ್ದಾರೆ.

ತಂಡಕ್ಕೆ ಮೆಚ್ಚುಗೆ

ಶಸ್ತ್ರಚಿಕಿತ್ಸೆಯಲ್ಲಿ ಡಾ. ವಿಶ್ವನಾಥ್ ಅವರೊಂದಿಗೆ ಡಾ. ಬಸವರಾಜ್ ಪಾಟೀಲ್, ಡಾ. ಚಂದ್ರಕುಮಾರ್, ಅರವಳಿಕೆ ತಜ್ಞ ಡಾ. ಶ್ರೀನಿವಾಸುಲು, ಶುಶ್ರೂಷಕಿರಾದ ಸಿಜ್ಜು, ನ್ಯಾನ್ಸಿ ಅವರು ಪಾಲ್ಗೊಂಡಿದ್ದರು.

ವಿಮ್ಸ್‌ನ ಮೆದುಳು ಮತ್ತು ನರರೋಗ ಶಸ್ತ್ರ ಚಿಕಿತ್ಸೆ ತಜ್ಞ (ನ್ಯೂರೋ ಸರ್ಜನ್) ಡಾ. ಎಸ್. ವಿಶ್ವನಾಥ ಅವರು ಮೆದುಳು ಹಾಗೂ ನರರೋಗಗಳಿಗೆ ಸಂಬಂಧಿಸಿದ ಅನೇಕ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗಳನ್ನು ಕೈಗೊಂಡು ವಿಮ್ಸ್‌ ಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ: Chaitra Hallikeri: ಕಿರುತೆರೆಗೆ ಎಂಟ್ರಿ ಕೊಟ್ಟ ಬಿಗ್‌ ಬಾಸ್‌ ಖ್ಯಾತಿಯ ಚೈತ್ರಾ ಹಳ್ಳಿಕೇರಿ

ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಕೈಗೊಂಡು ಸಾಧನೆಗೈದ ಡಾ. ವಿಶ್ವನಾಥ್ ಮತ್ತು ತಂಡಕ್ಕೆ ವಿಮ್ಸ್‌ ನ ನಿರ್ದೇಶಕ ಡಾ. ಗಂಗಾಧರ ಗೌಡ, ಟ್ರಾಮಾಕೇರ್‌ ಸೆಂಟರ್‌ನ ಅಧೀಕ್ಷಕ ಡಾ. ಶಿವ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Exit mobile version