Bharatiya Janata Party | ಬೃಹತ್‌ ನವಶಕ್ತಿ ಸಮಾವೇಶಕ್ಕೆ ಫುಲ್‌ ರೆಡಿ, ವೇದಿಕೆಯಲ್ಲೇ ವಾಲ್ಮೀಕಿ ಪುತ್ಥಳಿ - Vistara News

ಕರ್ನಾಟಕ

Bharatiya Janata Party | ಬೃಹತ್‌ ನವಶಕ್ತಿ ಸಮಾವೇಶಕ್ಕೆ ಫುಲ್‌ ರೆಡಿ, ವೇದಿಕೆಯಲ್ಲೇ ವಾಲ್ಮೀಕಿ ಪುತ್ಥಳಿ

ನವೆಂಬರ್‌ 20ರಂದು ಬಳ್ಳಾರಿಯಲ್ಲಿ ಬಿಜೆಪಿಯ ಎಸ್‌ ಟಿ ಪಂಗಡದ ಬೃಹತ್‌ ಸಮಾವೇಶ ನಡೆಯಲಿದೆ. ಸುಮಾರು 10 ಲಕ್ಷ ಮಂದಿಯ ನಿರೀಕ್ಷೆ ಇರುವ ಸಮಾವೇಶಕ್ಕೆ ಸಕಲ ಸಿದ್ಧತೆಗಳು ನಡೆದಿವೆ.

VISTARANEWS.COM


on

Ballary Navashakthi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಳ್ಳಾರಿ: ಮುಂದಿನ ಚುನಾವಣೆಗೆ ಬಿಜೆಪಿಗೆ ಮತ್ತು ಶ್ರೀರಾಮುಲು ಅವರಿಗೆ ನವಚೈತನ್ಯ ತುಂಬುವ ಪರಿಶಿಷ್ಟ ಪಂಗಡದ ನವಶಕ್ತಿ ಸಮಾವೇಶಕ್ಕೆ ಗಣಿನಾಡಿನಲ್ಲಿ ಬೃಹತ್‌ ವೇದಿಕೆಯ ಸಿದ್ಧತೆ ಕಾರ್ಯ ಅಂತಿಮಗೊಂಡಿದೆ. ವೇದಿಕೆ ಮೇಲೆ ಥರ್ಮೋಕೋಲ್‌ನಿಂದ ನಿರ್ಮಿಸಿರುವ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಇನ್ನು ವಾಲ್ಮೀಕಿ ಸಮುದಾಯದ ಮಹಾನ್‌ ನಾಯಕರ ಕಟೌಟ್‌ಗಳನ್ನು ಸ್ಥಾಪಿಸಲಾಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಪ್ರದೇಶದಲ್ಲಿ ಬೃಹತ್‌ ಸಮಾವೇಶಕ್ಕೆ ವೇದಿಕೆ ಅಣಿಯಾಗಿದೆ. ಭಾನುವಾರ (ನವೆಂಬರ್‌ ೨೦) ನಡೆಯುವ ಸಮಾವೇಶದಲ್ಲಿ ೧೦ ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ವೇದಿಕೆಯ ಹಿಂದೆಯೇ ಹೆಲಿಪ್ಯಾಡ್‌
ಕಾರ್ಯಕ್ರಮಕ್ಕೆ ಆಗಮಿಸುವ ಪ್ರಮುಖ ನಾಯಕರನ್ನು ಕರೆತರಲು ವೇದಿಕೆ ಹಿಂದುಗಡೆಯೇ ಹೆಲಿಪ್ಯಾಡ್‌ ವ್ಯವಸ್ಥೆ ಮಾಡಿದ್ದಾರೆ, ಹೆಲಿಪ್ಯಾಡ್‌ನಿಂದ ವೇದಿಕೆಗೆ ಬರಲು ಅರ್ಧ ಕಿ.ಮೀ. ಪ್ರತ್ಯೇಕ ಡಾಂಬರ್‌ ರಸ್ತೆ ನಿರ್ಮಿಸಿದ್ದಾರೆ, ವೇದಿಕೆಯ ಹಿಂದುಗಡೆಯೇ ಮೆಟ್ಟಿಲು ವ್ಯವಸ್ಥೆ ಮಾಡಿದ್ದಾರೆ, ವೇದಿಕೆ ಹಿಂದುಗಡೆ ವಿವಿಐಪಿಗೆ ವಿಶ್ರಾಂತಿ ಮತ್ತು ಉಪಹಾರದ ವ್ಯವಸ್ಥೆ ಮಾಡಿದ್ದಾರೆ, ವೇದಿಕೆ ಕಾರ್ಯಕ್ರಮದ ಮುಗಿದ ನಂತರವೇ ವೇದಿಕೆಯ ಹಿಂದುಗಡೆ ಇರುವ ಹೆಲಿಪ್ಯಾಡ್‌ ಮೂಲಕವೇ ನಿರ್ಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಜಿಂದಾಲ್‌ನ ವಿದ್ಯಾನಗರಕ್ಕೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಸಮಾವೇಶ ಸ್ಥಳಕ್ಕೆ ಆಗಮಿಸಲಿದ್ದಾರೆ.

ಮೂರು ವೇದಿಕೆಯ ವ್ಯವಸ್ಥೆ
ಕಾರ್ಯಕ್ರಮದಲ್ಲಿ ಮೂರು ವೇದಿಕೆಯ ವ್ಯವಸ್ಥೆ ಮಾಡಲಾಗಿದೆ. ಮಧ್ಯದ ವೇದಿಕೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪರಿಶಿಷ್ಟ ಪಂಗಡದ ರಾಷ್ಟ್ರೀಯ ನಾಯಕ ಅರ್ಜುನ ಮುಂಡಾ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿರುವ ಕೇಂದ್ರದ ಸಚಿವರು ಮತ್ತು ರಾಜ್ಯದ ಸಚಿವರಿಗೆ ಮೀಸಲಿಡ ಲಾಗಿದೆ. ಇನ್ನು ಪಕ್ಕದಲ್ಲಿರುವ ಒಂದು ವೇದಿಕೆಯಲ್ಲಿ ರಾಜ್ಯ ವಿವಿಧ ಜಿಲ್ಲೆಗಳಿಂದ ಆಗಮಿಸುವ ಬುಡಕಟ್ಟು, ಎಸ್‌ಟಿ ಸಮುದಾಯ ಮತ್ತು ಇತರ ಸುಮಾರು ೧೬೧ ಕಲಾ ತಂಡಗಳ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನೊಂದು ವೇದಿಕೆಯಲ್ಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಇತರರಿಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಿದ್ದಾರೆ. ಮಳೆ ಬಂದರೂ ಸಮಸ್ಯೆಯಾಗದಂತೆ ಸಮಾವೇಶ ಅರ್ಧ ಭಾಗದ ಟೆಂಟಿನ ವ್ಯವಸ್ಥೆ ಆಗಿದೆ.

೧೧೦೦ ಜನರು ಬಾಣಸಿಗರು
ತುಮಕೂರು ಮತ್ತು ಬೆಂಗಳೂರಿನಿಂದ ಮೂರು ತಂಡದಲ್ಲಿ ಸಮಾವೇಶಕ್ಕೆ ಅಡುಗೆ ಮಾಡಲು ೧೧೦೦ ಜನರು ಬಾಣಸಿಗರು ಆಗಮಿಸಿದ್ದಾರೆ. ಸಮಾವೇಶಕ್ಕೆ ಆಗಮಿಸುವ ೫ ಲಕ್ಷ ಜನರಿಗೆ ಗೋದಿ ಹುಗ್ಗಿ, ಪಲಾವ್‌, ಕುರ್ಮಾ ವ್ಯವಸ್ಥೆ ಮಾಡಿದ್ದಾರೆ. ಬೆಳಗ್ಗೆ ಉಪ್ಪಿಟ್ಟಿನ ಉಪಾಹಾರದ ವ್ಯವಸ್ಥೆ ಆಗಿದೆ. ಬೆಳಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೩.೩೦ರವರೆಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಿದ್ದಾರೆ. ಇಲ್ಲಿ ನ ಊಟಕ್ಕೆ ಪ್ರತ್ಯೇಕವಾಗಿ ಬಿಜೆಪಿಯಿಂದಲೇ ೩೦೦ ಕಾರ್ಯಕರ್ತರು ಅಚ್ಚುಕಟ್ಟಾದ ಊಟದ ವ್ಯವಸ್ಥೆಗೆ ಶ್ರಮಿಸಲಿದ್ದಾರೆ. ಸುಮಾರು ೩೦೦ ಕೌಂಟರ್‌ನಲ್ಲಿ ಊಟದ ವ್ಯವಸ್ಥೆ ಮಾಡಿದ್ದಾರೆ.

ರಾಜ್ಯದ ತಂಡದಿಂದ ಉಸ್ತುವಾರಿ ಜವಾಬ್ದಾರಿ
ವಿಧಾನ ಪರಿಷತ್‌ ಸದಸ್ಯರಾದ ಕೇಶವ ಪ್ರಸಾದ್‌ ಸಮಾವೇಶದ ಸಂಯೋಜಕರಾಗಿದ್ದಾರೆ, ಪಕ್ಷದ ಅರುಣ್‌ ಮತ್ತು ಸಿದ್ದೇಶ್‌ ಯಾದವ್‌ ಸೇರಿದಂತೆ ಸುಮಾರು ೧೨ ಜನರ ತಂಡವು ಬಳ್ಳಾರಿಯಲ್ಲಿಯೇ ವಾಸ್ತವ್ಯ ಹೂಡಿ ಕಾರ್ಯಕ್ರಮಕ್ಕೆ ವಿವಿಧ ತಂಡಗಳನ್ನು ರಚನೆ ಮಾಡಿದ್ದಾರೆ. ಪ್ರತಿಯೊಂದು ಕೆಲಸಕ್ಕೆ ಮೂರಕ್ಕೂ ಹೆಚ್ಚು ಜನರನ್ನು ನಿಯೋಜನೆ ಮಾಡಲಾಗಿದೆ.

ಸುಮಾರು ೩ ಸಾವಿರ ಜನ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಕಾರ್ಯಕ್ರಮದ ಯಶಸ್ವಿ ಮತ್ತು ಅಚ್ಚುಕಟ್ಟುತನಕ್ಕೆ ಬಳಸಿಕೊಳ್ಳಲಾಗಿದೆ. ಸುಮಾರು ೩೫೭೫ ಸಾರಿಗೆ ಬಸ್‌ಗಳನ್ನು ಬಾಡಿಗೆ ಪಡೆದಿದ್ದಾರೆ, ಇನ್ನುಳಿದಂತೆ ಖಾಸಗಿ ಬಸ್‌ಗಳು ಮತ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮೈದಾನ, ಬ್ಯಾಕ್‌ ಡ್ರಾಪ್‌, ಮೈದಾನ ಬೆಳಕು, ಊಟದ ವ್ಯವಸ್ಥೆ, ಕುಡಿಯುವ ನೀರು ಸರಬರಾಜು, ಮೈದಾನ, ನಗರ ಅಲಂಕಾರ, ಪ್ರಚಾರ ಸಾಮಗ್ರಿಗಳು, ಮುದ್ರಣ, ವಾಹನ ನಿಲುಗಡೆ, ವಸತಿ, ಶೌಚಾಲಯ, ಅತಿಥಿ ಅನುಕರಣ, ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ವ್ಯವಸ್ಥೆ, ವಾಹನ ವ್ಯವಸ್ಥೆ ಸೇರಿದಂತೆ ಇತರ ಕಾರಣಗಳಿಗೆ ಪ್ರತ್ಯೇಕ ತಂಡ ರಚನೆ ಮಾಡಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಮಹಾಚೇತನಗಳ ಸ್ಮರಣೆ, ವೈಭವ
ಸಮಾಜದ ಮಹಾಚೇತನಗಳಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ವಾಲ್ಮೀಕಿ, ಬೇಡರ ಕಣ್ಣಪ್ಪ, ರಾಮನೊಂದಿಗೆ ಇರುವ ಶಬರಿ, ಮದಕರಿ ನಾಯಕ್‌, ಸುರಪುರದ ವೆಂಕಪ್ಪ ನಾಯಕ್‌, ಬಿರ್ಸಾ ಮುಂಡಾ, ಏಕಲವ್ಯ ಸೇರಿದಂತೆ ಮಹಾನ್‌ ನಾಯಕರ ಕಟೌಟ್‌ಗಳನ್ನು ಅಳವಡಿಸುವ ಮೂಲಕ ಸಮಾವೇಶಕ್ಕೆ ಧಾರ್ಮಿಕ ಮತ್ತು ಭಾವನೆಗಳ ಟಚ್‌ ಕೊಡಲು ವ್ಯವಸ್ಥೆಯನ್ನು ಆಯೋಜಕರು ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಬಳ್ಳಾರಿ ಸೇರಿದಂತೆ ವೇದಿಕೆ ಕಾರ್ಯಕ್ರಮ ಆವರಣ ಕೇಸರಿಮಯವಾಗಿದೆ. ಇನ್ನು ಪಾಸ್‌ಗೆ ಅಳವಡಿಸಿರುವ ಟ್ಯಾಗ್‌ ಕೂಡ ಕೇಸರಿ ಬಣ್ಣದ ದಾರವನ್ನು ಬಳಸಲಾಗಿದೆ.

ಮಹಾಚೇತನಗಳ ನೆನಪು

೩ ಸಾವಿರ ಪೊಲೀಸರ ನಿಯೋಜನೆ
ಸಮಾವೇಶಕ್ಕೆ ಬಂದೋಬಸ್ತ್‌ ವ್ಯವಸ್ಥೆ ಮಾಡಲು ೨೫೦ ಅಧಿಕಾರಿಗಳು, ೨೦೦೦ ಪೊಲೀಸ್‌ ಸಿಬ್ಬಂದಿಗಳನ್ನು, ೩ ಕೆಎಸ್‌ಆರ್‌ಪಿ, ೪ ಡಿಎಆರ್‌, ೪೦೦ ಗೃಹ ರಕ್ಷಕ ದಳದವರನ್ನು ನಿಯೋಜಿಸಲಾಗಿದೆ. ಇದರಲ್ಲಿ ಸಂಚಾರಕ್ಕಾಗಿ ೬೦೦ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಇಬ್ಬರು ಎಎಸ್ಪಿ, ಆರು ಡಿವೈಎಸ್ಪಿ, ೩೦ ಸಿಪಿಐ, ೬೦ ಪಿಎಸ್‌ಐ, ೧೨೦ ಎಎಸ್‌ಐ, ೧೫೦೦ ಸಿಬ್ಬಂದಿಗಳು ನಿಯೋಜಿಸಲಾಗಿದೆ. ಬಳ್ಳಾರಿ ರೇಂಜ್‌, ಹುಬ್ಬಳ್ಳಿ-ಧಾರವಾಡ ರೇಂಜ್‌, ಕಲ್ಬುರ್ಗಿ ರೇಂಜ್‌ನಿಂದ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ಎನ್‌ಸಿಸಿ ಗ್ರೌಂಡ್‌, ಐಟಿಐ ಕಾಲೇಜು ಮೈದಾನ, ಈದ್ಗಾ ಮೈದಾನ ಸೇರಿದಂತೆ ಬಹಳ ಕಡೆಗಳಲ್ಲಿ ವಾಹನಗಳ ನಿಲುಗಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ, ವಿವಿಐಪಿಗಳಿಗೆ ಮತ್ತು ಸಚಿವರ ವಾಹನಗಳಿಗೆ ಕಾರ್ಯಕ್ರಮದ ನಡೆಯುವ ಆವರಣದ ಒಳಗಡೆ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ಪಿ ರಂಜಿತ್‌ಕುಮಾರ್‌ ಬಂಡಾರು ಅವರು ತಿಳಿಸಿದರು.
ಈಗಾಗಲೇ ಬಿಜೆಪಿ ಪಕ್ಷ ಮತ್ತು ನಾಯಕರು ಜನರನ್ನು ಸಮಾವೇಶಕ್ಕೆ ಕರೆತರಲು ಎಲ್ಲಾ ಪ್ರಯತ್ನ ಮಾಡಿದ್ದಾರೆ. ಒಂದೊಂದು ಗ್ರಾಮಕ್ಕೆ ಬಸ್‌, ಕಾರು, ಕ್ರೂಸರ್‌ ಮತ್ತು ಟ್ರ್ಯಾಕ್ಟರ್‌ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ | Bharatiya Janata Party | ಬಿಜೆಪಿಗೆ ʼನವಶಕ್ತಿʼ ನೀಡಲಿದೆಯೇ ಬಳ್ಳಾರಿ ST ಸಮಾವೇಶ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

VISTARANEWS.COM


on

ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಚಿವ ಖಾತೆ ಹಂಚಿಕೆಯ ನಂತರ ರಾಮಲಿಂಗಾರೆಡ್ಡಿ ರಾಜೀನಾಮೆ, ಮುನಿಯಪ್ಪ ಅಸಮಾಧಾನ ಬಹಿರಂಗಗೊಂಡಿದ್ದು, ಈ ಕುರಿತು ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಮಲಿಂಗಾ ರೆಡ್ಡಿ ಅವರಿಗೆ ನಾವು ಮಾತು ಕೊಟ್ಟಿದ್ದು ನಿಜ. ಅವರು ಹಿರಿಯ ನಾಯಕರು. ಬೆಂಗಳೂರಿನ ಅಭಿವೃದ್ಧಿ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಹೈಕಮಾಂಡ್ ತೀರ್ಮಾನ ಮಾಡಿದೆ. ಅದನ್ನು ಮೀರಿ ನಾವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ರಾಮಲಿಂಗಾ ರೆಡ್ಡಿ ಅವರು ಸದ್ಯ ಹೊರಗಡೆ ಇದ್ದಾರೆ. ಅವರು ಬಂದ ಬಳಿಕ ಖುದ್ದಾಗಿ ನಾನೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸುತ್ತೇನೆ” ಎಂದರು.

ಇನ್ನು ಕೆ.ಹೆಚ್‌. ಮುನಿಯಪ್ಪ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ಅವರ ಜೊತೆಯೂ ಮಾತಾಡಿದ್ದೇನೆ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುತ್ತೇನೆಂದು ಅವರು ಹೇಳಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Continue Reading

Latest

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

VISTARANEWS.COM


on

ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಅಭ್ಯರ್ಥಿಯಾಗಿ ಪವನ್‌ ಖೇರಾ ಹಾಗೂ ಮೂರನೇ ಅಭ್ಯರ್ಥಿಯಾಗಿ ಮನ್ಸೂರ್‌ ಆಲಿ ಖಾನ್‌ ನಾಳೆ ಜೂನ್‌ 6 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Continue Reading

Latest

ಲೋಕಭವನದಲ್ಲಿ ಡಿಕೆಶಿ ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ

VISTARANEWS.COM


on

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಕಾರ್ಯಕ್ರಮದ ವೇದಿಕೆಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಸಂಪ್ರದಾಯ ಮತ್ತು ಆಧುನಿಕ ವ್ಯವಸ್ಥೆಗಳ ಸಮನ್ವಯಕ್ಕೆ ಒತ್ತು ನೀಡಲಾಗಿದೆ.

ಈ ಬಾರಿ ಪ್ರಮಾಣ ವಚನ ಸಮಾರಂಭದಲ್ಲಿ ಹೊಸ ಸಂಪ್ರದಾಯಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಪೂರ್ವಾಭಿಮುಖವಾಗಿ ನಿಂತು ಪ್ರಮಾಣ ವಚನ ಸ್ವೀಕರಿಸಲಿದ್ದು, ಅದಕ್ಕೆ ಅನುಕೂಲವಾಗುವಂತೆ ವೇದಿಕೆಯ ವಿನ್ಯಾಸ ರೂಪಿಸಲಾಗಿದೆ. ಜ್ಯೋತಿಷಿಗಳ ಸಲಹೆ ಹಾಗೂ ಶುಭ ಮುಹೂರ್ತದ ಆಧಾರದ ಮೇಲೆ ವೇದಿಕೆ ಮತ್ತು ಆಸನ ವ್ಯವಸ್ಥೆಗಳನ್ನು ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.

ಪದಗ್ರಹಣ ವೇದಿಕೆಯ ಮೇಲೆ ಸುಮಾರು 20 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರು ಮತ್ತು ವಿಶೇಷ ಆಹ್ವಾನಿತರಿಗೆ ಪ್ರತ್ಯೇಕ ಆಸನಗಳನ್ನು ಕಲ್ಪಿಸಲಾಗಿದೆ. ಸ್ವಾಮೀಜಿಗಳಿಗಾಗಿ ವೇದಿಕೆಯ ಸಮೀಪ ಸ್ವಲ್ಪ ಎತ್ತರದ ಪ್ರತ್ಯೇಕ ಆಸನ ವ್ಯವಸ್ಥೆಯೂ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳ ಅನುಕೂಲಕ್ಕಾಗಿ ಗ್ಲಾಸ್ ಹೌಸ್ ಆವರಣದಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟು 3,500 ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ, ಕಾರ್ಯಕ್ರಮವನ್ನು ಎಲ್ಲರೂ ವೀಕ್ಷಿಸಲು ಲೋಕಭವನದ ಒಳಭಾಗದಲ್ಲಿ ಆರು ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಈ ಸಮಾರಂಭಕ್ಕಾಗಿ 2 ಸಾವಿರಕ್ಕೂ ಹೆಚ್ಚು ವಿಐಪಿ ಪಾಸ್‌ಗಳನ್ನು ವಿತರಿಸಲಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಭದ್ರತೆ ಹಾಗೂ ಪ್ರವೇಶ ವ್ಯವಸ್ಥೆಗಳನ್ನು ಕೂಡ ಕಟ್ಟುನಿಟ್ಟಾಗಿ ರೂಪಿಸಲಾಗಿದೆ.

ಇನ್ನು ಲೋಕಭವನದ ಮುಖ್ಯ ಪ್ರವೇಶ ದ್ವಾರವನ್ನು ಅದ್ಧೂರಿಯಾಗಿ ಅಲಂಕರಿಸಲಾಗಿದ್ದು, ದ್ವಾರದ ಮುಂಭಾಗದಲ್ಲಿ ಬೃಹತ್ ಕಮಾನು ನಿರ್ಮಿಸಲಾಗಿದೆ. ಕಮಾನಿಗೆ ಬಣ್ಣ ಬಣ್ಣದ ವಸ್ತ್ರಗಳು ಹಾಗೂ ವಿವಿಧ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರಗನ್ನು ತಂದಿದೆ. .

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

Continue Reading

Latest

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಹುಲ್ ಗಾಂಧಿಗೆ ಆಹ್ವಾನ

VISTARANEWS.COM


on

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

ನಾಳೆ ಜೂನ್‌ 3 ರಂದು ಸಂಜೆ 4:05ಕ್ಕೆ ಬೆಂಗಳೂರಿನ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರಲಿದ್ದಾರೆ.

ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಾಳೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಸೇರಿದಂತೆ ಪಕ್ಷದ ಹಲವು ರಾಷ್ಟ್ರೀಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಹಾಗೂ ಖರ್ಗೆ ಅವರಿಗೆ ಈಗಾಗಲೇ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

Continue Reading
Advertisement
Latest21 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest24 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ1 day ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest2 days ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest2 days ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest2 days ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest2 days ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest2 days ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest2 days ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest2 days ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌