Education Department: ಶಾಲಾ ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಬ್ರೇಕ್‌; ಶಿಕ್ಷಣ ಇಲಾಖೆ ಸುತ್ತೋಲೆ - Vistara News

ಕರ್ನಾಟಕ

Education Department: ಶಾಲಾ ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಬ್ರೇಕ್‌; ಶಿಕ್ಷಣ ಇಲಾಖೆ ಸುತ್ತೋಲೆ

Education Department: ಬೆಂಗಳೂರಿನ ಹಲವು ಶಾಲೆಗಳಿಗೆ ಇತ್ತೀಚೆಗೆ ಹುಸಿ ಬಾಂಬ್‌ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಶಿಕ್ಷಣ ಇಲಾಖೆಯು, ಶಾಲೆಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಮುಂದಾಗಿದೆ.

VISTARANEWS.COM


on

School
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಆವರಣ ಅಥವಾ ಮೈದಾನವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇನ್ನಿತರ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳಬಾರದು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಾದ ಬಿ. ಬಿ. ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದು, ಇದರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಇಲಾಖೆ ಅನುಮತಿ ಇಲ್ಲದೇ ಬಳಸಿಕೊಳ್ಳುವುದಕ್ಕೆ ಹಾಗೂ ಅನುಮತಿಸುವುದಕ್ಕೆ ಅವಕಾಶ ನೀಡಬಾರದು. ಶಾಲಾ ಆವರಣವು ಮಕ್ಕಳಿಗೆ ದೈನಂದಿನ ಪಾಠ ಪ್ರವಚನಗಳೊಂದಿಗೆ, ಪಠ್ಯೇತರ ಚಟುವಟಿಕೆಗಳು ಮತ್ತು ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗವಾಗಬೇಕು. ಹೀಗಾಗಿ ಶಾಲಾ ಮೈದಾನ ಅಥವಾ ಆವರಣವನ್ನು ಶಿಕ್ಷಣೇತರ ಚಟುವಟಿಕೆ ಉದ್ದೇಶಗಳಿಗೆ ಸರ್ಕಾರ, ಇಲಾಖೆ ಅನುಮತಿ ಇಲ್ಲದೆ ಬಳಸಬಾರದು ಹಾಗೂ ಅನುಮತಿ ನೀಡಬಾರದು ಎಂದು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಂದುವರಿದು ಶಾಲೆಗೆ ಸಂಬಂಧವಿರದ ಯಾವುದೇ ವ್ಯಕ್ತಿಗಳು ಶಾಲೆಯ ಆವರಣದಲ್ಲಿ ಅನಗತ್ಯವಾಗಿ ಸುತ್ತಾಡುತ್ತಿರುವುದು ಕಂಡುಬಂದಲ್ಲಿ ಹಾಗೂ ಯಾವುದೇ ವ್ಯಕ್ತಿಗಳಿಂದ ಶಾಲಾ ಸುರಕ್ಷತೆಗೆ ಭಂಗ ತರುವಂತಹ ಅನಾಮಧೇಯ ದೂರವಾಣಿ ಕರೆಗಳು, ಪತ್ರಗಳು ಬಂದಲ್ಲಿ ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಪಡಿಸಿದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಲಾ ಮುಖ್ಯಸ್ಥರು, ಉಸ್ತುವಾರಿ ಅಧಿಕಾರಿ, ಸಿಬ್ಬಂದಿಗೆ ತಿಳಿಸಲಾಗಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

ವಸತಿ ಶಾಲೆಯ 6ನೇ ತರಗತಿ ಪ್ರವೇಶಾತಿ; ಅರ್ಜಿ ಸಲ್ಲಿಸೋಕೆ ಡಿ.31 ಕೊನೇ ದಿನ

DR BR Ambedkar Residential School hanagal

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (Karnataka Residential Educational Institutions Society) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ (Residential School) 2024-25ರ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 6ನೇ ತರಗತಿ ಪ್ರವೇಶಕ್ಕೆ (6th Class Admission) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ – Karnataka Examination Authority) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಲೇ ಆರಂಭವಾಗಿದೆ.

ಹಾಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಘದ ವ್ಯಾಪ್ತಿಯಲ್ಲಿರುವ ಶಾಲೆ ಅಥವಾ ಕಾಲೇಜಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಡಿಸೆಂಬರ್‌ 7ರಿಂದ ಆರಂಭವಾಗಿದ್ದು, ಡಿ.31 ಕೊನೆಯ ದಿನವಾಗಿದೆ. 2024ರ ಫೆ. 18ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಇದನ್ನೂ ಓದಿ: Aadhaar update: ಆಧಾರ್‌ ಕಾರ್ಡ್‌ ಉಚಿತ ಅಪ್ಡೇಟ್‌ಗೆ 4 ದಿನ ಮಾತ್ರವೇ ಅವಕಾಶ! ಹೀಗೆ ಮಾಡಿ ನವೀಕರಿಸಿ

ಯಾವ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು?

ವಸತಿ ಶಿಕ್ಷಣ ಸಂಸ್ಥೆಗಳಡಿ ಕಾರ್ಯ ನಿರ್ವಹಿಸುವ ಎಲ್ಲ ಮಾದರಿಯ ವಸತಿ ಶಾಲೆಗಳಿಗೂ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಯಾರಿಗೆ ಯಾವುದು ಸೂಕ್ತ ಎಂದೆನ್ನಿಸುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಮೊರಾರ್ಜಿ ದೇಸಾಯಿ ವಸತಿ ಶಾಲೆಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
  • ಏಕಲವ್ಯ ಮಾದರಿ ವಸತಿ ಶಾಲೆ
  • ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ
  • ಇಂದಿರಾ ಗಾಂಧಿ ವಸತಿ ಶಾಲೆ
  • ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ
  • ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ವಸತಿ ಶಾಲೆ
  • ಸಂಗೊಳ್ಳಿ ರಾಯಣ್ಣ ವಸತಿ ಶಾಲೆ
  • ಕವಿರನ್ನ ವಸತಿ ಶಾಲೆ
  • ಗಾಂಧಿತತ್ವ ಮತ್ತು ನಾರಾಯಣ ಗುರು ವಸತಿ ಶಾಲೆ

ಈ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೆಇಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಾರ್ಷಿಕ ಆದಾಯ ಮಿತಿ ಇರಲಿದೆ

ಈ ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳ ಕುಟುಂಬದವರ ಆದಾಯ ಮಿತಿಯನ್ನು ಇಲ್ಲಿ ಪರಿಗಣಿಸಲಾಗುತ್ತದೆ. ನಿಗದಿತ ಮಾನದಂಡಕ್ಕಿಂತ ಹೆಚ್ಚಿನ ವಾರ್ಷಿಕ ವರಮಾನ ಇದ್ದರೆ ಅಂಥವರಿಗೆ ಪ್ರವೇಶದ ಅವಕಾಶ ಇರುವುದಿಲ್ಲ. ಪರಿಶಿಷ್ಟ ಜಾತಿ/ ಪಂಗಡ, ಹಿಂದುಳಿದ ವರ್ಗದ ಪ್ರವರ್ಗ – 1ರ ವಿದ್ಯಾರ್ಥಿಗಳಿಗೆ 2.50 ಲಕ್ಷ ರೂ. ಮತ್ತು ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿಗೆ 1 ಲಕ್ಷ ರೂ.ಗಳ ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ನಿಗದಿ ಪಡಿಸಲಾಗಿದೆ. ಹೀಗಾಗಿ ಆದಾಯ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿರಲಿದೆ.

ಏನೇನು ದಾಖಲೆ ಬೇಕು?

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಸ್ಯಾಟ್ಸ್ ಸಂಖ್ಯೆ, ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲಾತಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಈ ಸಹಾಯವಾಣಿಗೆ ಕರೆ ಮಾಡಿ

ಹೆಚ್ಚಿನ ಮಾಹಿತಿಗಾಗಿ ಕೆಇಎಯ ಸಹಾಯವಾಣಿ 080 23460460 ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲ್ಲಿರಲಿ!

ವೆಬ್‌ಸೈಟ್‌ ಲಿಂಕ್‌ ಇಲ್ಲಿದೆ

ಕೆಇಎ ವೆಬ್‌ಸೈಟ್ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್‌ ಸಂಪರ್ಕಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

IPL 2024 : ಬೆಂಗಳೂರಿನಲ್ಲಿ ನಡೆಯುತ್ತಿರುವ ಆರ್‌ಸಿಬಿ vs ಜಿಟಿ ಐಪಿಎಲ್‌ ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಾಗಿ ಮಧ್ಯಾಹ್ನ ಮೂರು ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ (Traffic Restrictions) ಹೇರಲಾಗಿದೆ.

VISTARANEWS.COM


on

By

IPL 2024
Koo

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ (IPL 2024) ಇರುವ ಕಾರಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ (Traffic Restrictions) ನಿರ್ಬಂಧವಿದೆ. ಶನಿವಾರದಂದು ಬೆಂಗಳೂರಿನಲ್ಲಿ ಆರ್‌ಸಿಬಿ vs ಜಿಟಿ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಕ್ರೀಡಾಂಗಣದ ಸುತ್ತಲಿನ ಕೆಲವು ರಸ್ತೆಗಳಲ್ಲಿ ಸಂಚಾರಿ ವ್ಯವಸ್ಥೆಗಳ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 03:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಈ ನಿಯಮಗಳು ಅನ್ವಯವಾಗಲಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ ಹೀಗಿದೆ

ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ ಹಾಗೂ ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ. ಲ್ಯಾವೆಲ್ಲೆ ರಸ್ತೆಯೊಂದಿಗೆ ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವಂತಿಲ್ಲ.

ಬೇರೆ ಎಲ್ಲಿ ಪಾರ್ಕಿಂಗ್‌ ಮಾಡಬಹುದು?

ಸಾರ್ವಜನಿಕರು ತಮ್ಮ ವಾಹನಗಳ ನಿಲುಗಡೆ ಮಾಡಲು ಸ್ಥಳಗಳನ್ನು ನಿಯೋಜನೆ ಮಾಡಲಾಗಿದೆ. ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯು.ಬಿ ಸಿಟಿ ಪಾರ್ಕಿಂಗ್‌, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಹಿಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)ದಲ್ಲಿ ಪಾರ್ಕಿಂಗ್‌ ಮಾಡಬಹುದಾಗಿದೆ.

ಇದನ್ನೂ ಓದಿ: IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಇದೀಗ ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ, ಹೀಗಾಗಿ ಬೆಂಗಳೂರಿನನಲ್ಲಿ ನಡೆಯುವ ಪಂದ್ಯಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡಬೇಕು ಎಂದು ಸಾರ್ವಜನಿಕ ವಲಯದಿಂದ ಸರ್ಕಾರಕ್ಕೆ ಮನವಿ ಬಂದಿತ್ತು. ಈ ವೇಳೆ ಕೆಎಸ್​ಸಿಎ ಆಡಳಿತ ಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ದ ನೀರು ಬಳಕೆ ಮಾಡುಲಾಗುತ್ತದೆ ಎಂದು ಹೇಳಿ ಪಂದ್ಯವಾವಳಿಯನ್ನು ನಡೆಸಿತ್ತು.

ಈ ವೇಳೆ ಸ್ಪಷ್ಟನೆ ನೀಡಿದ್ದ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶುಭೇಂದು ಘೋಷ್, ನೀರಿಗೆ ಸಂಬಂಧಿಸಿದಂತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರವು ಹೊರಡಿಸಿರುವ ನೀರು ಬಳಕೆ ಮಾರ್ಗಸೂಚಿಯನ್ನು ನಾವು ಪಾಲಿಸುತ್ತೇವೆ. ಪಿಚ್ ಮತ್ತು ಹೊರಾಂಗಣಕ್ಕಾಗಿ ನಾವು ಯೋಗ್ಯವಾದ ನೀರನ್ನು ಬಳಸುವುದಿಲ್ಲ. ನೀರಿನ ಮೌಲ್ಯ ಏನೆಂಬುವುದು ನಮಗೆ ತಿಳಿದಿದೆ. ಎಸ್‌ಟಿಪಿ ಘಟಕದ ನೀರನ್ನು ನಾವು ಬಳಸುತ್ತಿದ್ದೇವೆ. ಕ್ರೀಡಾಂಗಣದಲ್ಲಿ ಕೆಲವು ಕಾರ್ಯಗಳಿಗಾಗಿ ಬಳಸಲು ಕೂಡ ಇದೇ ಸಂಸ್ಕರಿತ ನೀರು ಬಳಕೆ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಪಂದ್ಯಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಿರುವುದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪ್ರಧಾನ ಪೀಠ ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಬಳಕೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (ಕೆಎಸ್‌ಸಿಎ) ಆದೇಶಿಸಿ ಮೇ 2ಕ್ಕೆ ಎರಡನೇ ಹಂತದ ವಿಚಾರಣೆಯನ್ನು ನಿಗದಿಪಡಿಸಿತ್ತು.

ಇದೀಗ ವಿಚಾರಣೆ ನಡೆದಿದ್ದು, ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ. ಮುಂದಿನ ವಿಚಾರಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದು ಈ ವೇಳೆಗಾಗಲೇ ಐಪಿಎಲ್​ ಪಂದ್ಯ ಕೂಡ ಮುಕ್ತಾಯ ಕಂಡಿರುತ್ತದೆ. ಹೀಗಾಗಿ ಈ ಬಾರಿಯ ಆರ್​ಸಿಬಿ ಪಂದ್ಯಗಳಿಗೆ ಯಾವುದೇ ಅಡ್ಡಿ ಉಂಟಾಗದು. ಚಿನ್ನಸ್ವಾಮಿಯಲ್ಲಿ ಇನ್ನು ಕೇವಲ 2 ಪಂದ್ಯ ಮಾತ್ರ ಬಾಕಿ ಉಳಿದಿದೆ. ಇದರಲ್ಲಿ ಒಂದು ಪಂದ್ಯ ಇಂದು(ಶನಿವಾರ) ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

IPL 2024: ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

IPL 2024: ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

VISTARANEWS.COM


on

IPL 2024
Koo

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಇದೀಗ ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ, ಹೀಗಾಗಿ ಬೆಂಗಳೂರಿನನಲ್ಲಿ ನಡೆಯುವ ಪಂದ್ಯಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡಬೇಕು ಎಂದು ಸಾರ್ವಜನಿಕ ವಲಯದಿಂದ ಸರ್ಕಾರಕ್ಕೆ ಮನವಿ ಬಂದಿತ್ತು. ಈ ವೇಳೆ ಕೆಎಸ್​ಸಿಎ ಆಡಳಿತ ಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ದ ನೀರು ಬಳಕೆ ಮಾಡುಲಾಗುತ್ತದೆ ಎಂದು ಹೇಳಿ ಪಂದ್ಯವಾವಳಿಯನ್ನು ನಡೆಸಿತ್ತು.

ಇದನ್ನೂ ಓದಿ IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

ಈ ವೇಳೆ ಸ್ಪಷ್ಟನೆ ನೀಡಿದ್ದ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶುಭೇಂದು ಘೋಷ್, ನೀರಿಗೆ ಸಂಬಂಧಿಸಿದಂತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರವು ಹೊರಡಿಸಿರುವ ನೀರು ಬಳಕೆ ಮಾರ್ಗಸೂಚಿಯನ್ನು ನಾವು ಪಾಲಿಸುತ್ತೇವೆ. ಪಿಚ್ ಮತ್ತು ಹೊರಾಂಗಣಕ್ಕಾಗಿ ನಾವು ಯೋಗ್ಯವಾದ ನೀರನ್ನು ಬಳಸುವುದಿಲ್ಲ. ನೀರಿನ ಮೌಲ್ಯ ಏನೆಂಬುವುದು ನಮಗೆ ತಿಳಿದಿದೆ. ಎಸ್‌ಟಿಪಿ ಘಟಕದ ನೀರನ್ನು ನಾವು ಬಳಸುತ್ತಿದ್ದೇವೆ. ಕ್ರೀಡಾಂಗಣದಲ್ಲಿ ಕೆಲವು ಕಾರ್ಯಗಳಿಗಾಗಿ ಬಳಸಲು ಕೂಡ ಇದೇ ಸಂಸ್ಕರಿತ ನೀರು ಬಳಕೆ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಪಂದ್ಯಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಿರುವುದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪ್ರಧಾನ ಪೀಠ ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಬಳಕೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (ಕೆಎಸ್‌ಸಿಎ) ಆದೇಶಿಸಿ ಮೇ 2ಕ್ಕೆ ಎರಡನೇ ಹಂತದ ವಿಚಾರಣೆಯನ್ನು ನಿಗದಿಪಡಿಸಿತ್ತು.

ಇದೀಗ ವಿಚಾರಣೆ ನಡೆದಿದ್ದು, ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ. ಮುಂದಿನ ವಿಚಾರಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದು ಈ ವೇಳೆಗಾಗಲೇ ಐಪಿಎಲ್​ ಪಂದ್ಯ ಕೂಡ ಮುಕ್ತಾಯ ಕಂಡಿರುತ್ತದೆ. ಹೀಗಾಗಿ ಈ ಬಾರಿಯ ಆರ್​ಸಿಬಿ ಪಂದ್ಯಗಳಿಗೆ ಯಾವುದೇ ಅಡ್ಡಿ ಉಂಟಾಗದು. ಚಿನ್ನಸ್ವಾಮಿಯಲ್ಲಿ ಇನ್ನು ಕೇವಲ 2 ಪಂದ್ಯ ಮಾತ್ರ ಬಾಕಿ ಉಳಿದಿದೆ. ಇದರಲ್ಲಿ ಒಂದು ಒಂದ್ಯ ಇಂದು(ಶನಿವಾರ) ನಡೆಯಲಿದೆ.

Continue Reading

ಬೆಂಗಳೂರು

Bribery Case : ಕಾಸಿನ ಜತೆಗೆ ಎಣ್ಣೆ ಕೊಟ್ರಷ್ಟೇ ಫೈಲ್‌ ಮೂಮ್ಮೆಂಟ್‌ ; ಇದು ಕುಡುಕ ಪಂಚಾಯಿತಿ ಪಿಡಿಓ ಲಂಚಾವತಾರ

Bribery Case: ಪಿಡಿಓ ಅಧಿಕಾರಿಯ ಲಂಚಾವತಾರಕ್ಕೆ ಜನರು ಸುಸ್ತಾಗಿದ್ದಾರೆ. ಸರ್ಕಾರಿ ಕೆಲಸ ಆಗಬೇಕೆಂದರೆ ಆ ಸರ್ಕಾರಿ ಅಧಿಕಾರಿಗೆ ಹಣದೊಂದಿಗೆ, ದುಬಾರಿ ಮದ್ಯದ ಬಾಟೆಲ್‌ ಕೊಡಿಸಲೇಬೇಕು.

VISTARANEWS.COM


on

By

Bribery Case in Bengaluru news
Koo

ಬೆಂಗಳೂರು: ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತು ಕೇವಲ ಗೋಡೆಗಳ ಮೇಲಿನ ಬರಹಕ್ಕೆ ಅಷ್ಟೇ ಸೀಮಿತವಾಗಿದೆ. ಕೆಲಸ ಮಾಡುವ ಜಾಗ ದೇವಾಲಯ ಎನ್ನುವ ಕಾಲ ಮಾಯವಾಗಿ ಬಹಳ ದಿನಗಳೇ ಕಳೆದಿವೆ. ಸದ್ಯ ಇಲ್ಲೊಬ್ಬ ಅಧಿಕಾರಿ ದೇವಾಲಯವನ್ನೇ ಅಪವಿತ್ರ (Bribery Case) ಮಾಡಿದ್ದಾನೆ. ಕೆಲಸ ಆಗ್ಬೇಕು ಸರ್ ಎಂದು ಆತನ ಬಳಿ ಹೋದರೆ ಹಣದ ಜತೆಗೆ ಎಣ್ಣೆಗೆ ಡಿಮ್ಯಾಂಡ್ ಮಾಡುತ್ತಾನೆ. ದುಡ್ಡು‌, ಡ್ರಿಂಕ್ಸ್ ಮುಂದಿಟ್ಟರೆ ಸಾಕು ರೂಲ್ಸ್ ಬ್ರೇಕ್ ಮಾಡಿ ನಿಮಗೆ ಬೇಕಾದ ರೆಕಾರ್ಡ್ಸ್ ರೆಡಿಯಾಗುತ್ತಂತೆ.

ಅಂದಹಾಗೇ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪಿಡಿಓ ಲಂಚಾವತಾರದ ಕಥೆ ಇದು. ಕಣ್ಣೂರು ಗ್ರಾಮ ಪಂಚಾಯಿತಿ ಪಿಡಿಓ ಮುನಿಚಿಕ್ಕಯ್ಯ ಎಂಬಾತನ ಲಂಚಾವತಾರಕ್ಕೆ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಲ್ಯಾಂಡ್ ಕನ್ವರ್ಷನ್ ಆಗದಿದ್ದರೂ ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡುತ್ತಾರೆ. ರೆವಿನ್ಯೂ ಸೈಟ್‌ಗಳ ಖಾತೆ ಮಾಡಿಕೊಳ್ಳಲು ಒಂದು ಲಕ್ಷ ರೂ. ಫಿಕ್ಸ್ ಮಾಡಿದ್ದರಂತೆ.

ಅರ್ಜಿದಾರನೊಬ್ಬ ಅಕ್ರಮವಾಗಿ ನಿರ್ಮಾಣವಾಗಿದ್ದ ಲೇಔಟ್‌ನ ಕಾಮಗಾರಿ ತಡೆಯೋದಕ್ಕೆ ಅರ್ಜಿ ನೀಡಿದ್ದರು. ನಿಮ್ಮ ಕೆಲಸ ಮುಗಿತು ಅಂದುಕೊಳ್ಳಿ‌.. ಆದರೆ ನನಗೆ ದುಬಾರಿ ಮದ್ಯದ ಬಾಟೆಲ್‌ ಕೊಡಿ ಎನ್ನುತ್ತಾನಂತೆ. ಈ ರೀತಿ ನೂರಾರು ಖಾತೆಯನ್ನು ಅಕ್ರಮ ಎಸಗಿದ್ದಾರೆ. ಅಕ್ರಮದ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳಿಂದ ಯಾವುದೇ ಕ್ರಮ ಇಲ್ಲ ಅರ್ಜಿದಾರರು ಕಿಡಿಕಾರುತ್ತಿದ್ದಾರೆ.

ಇದನ್ನೂ ಓದಿ:Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

ಕಜಕೀಸ್ತಾನ: ರೆಸ್ಟೋರೆಂಟ್‌ವೊಂದರಲ್ಲಿ ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು, ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ಘಟನೆ ಕಜಕೀಸ್ತಾನ(Kajakistan)ದಲ್ಲಿ ನಡೆದಿದೆ. ಘಟನೆಯ ಶಾಕಿಂಗ್‌ ವಿಡಿಯೋ(Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಬೆಚ್ಚಿಬೀಳುವಂತಿದೆ. ಕಜಕೀಸ್ತಾನದ ಮಾಜಿ ಆರ್ಥಿಕ ಸಚಿವನಾಗಿದ್ದ ಕುವಾಂಡಿಕ್ ಬಿಶಿಂಬಾಯೆವ್ ತನ್ನ 31 ವರ್ಷದ ಸಲ್ತಾನೇಟ್‌ ನ್ಯೂಕೆನೋವಾ ಮೇಲೆ ಈ ಡೆಡ್ಲಿ ಅಟ್ಯಾಕ್‌(Deadly Attack) ಮಾಡಿದ್ದಾನೆ. ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಪತ್ನಿ ಕೂದಲು ಹಿಡಿದು ಎಳೆದು ತಂದ ಬಿಶಿಂಬಾಯೆವ್, ಆಕೆಯ ಮುಖಾಮೂತಿ ನೋಡದೇ ಚಚ್ಚುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾವಾಗಿ ಗಾಯಗೊಂಡಿದ್ದ ಸಲ್ತಾನೇಟ್‌ ನ್ಯೂಕೆನೋವಾ ಎಂಡು ಗಂಟೆಗಳ ಬಳಿಕ ಕೊನೆಯುಸಿರೆಳೆದಿದ್ದಾಳೆ. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ವಿಚಾರಣೆ ವೇಳೆ ಸಿಸಿಟಿವಿ ವಿಡಿಯೋವನ್ನು ಪ್ರದರ್ಶಿಸಲಾಯಿತು. ಹೀಗಾಗಿ ಈ ವಿಚಾರ ಮತ್ತೊಮ್ಮೆ ಸುದ್ದಿಯಾಗಿದೆ. ಇನ್ನು ಈ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಮಧ್ಯ ಏಷ್ಯಾದ ರಾಷ್ಟಗಳ ಹತ್ತು ಸಾವಿರಕ್ಕೂ ಅಧಿಕ ಜನರು ಸಹಿ ಹಾಕಿರುವ ಅರ್ಜಿಯನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

ಬಿಶಿಂಬಾಯೆವ್ (44) ಮಾಜಿ ಪ್ರಧಾನಿ ನರ್ಸುಲ್ತಾನ್ ನಜರ್ಬಯೇವ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ಹಿಸುತ್ತಿದ್ದ. 2018ರಲ್ಲಿ ಲಂಚ ಪ್ರಕರಣದಲ್ಲಿ ಆತ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತನ ಪತ್ನಿ ಸಂಬಂಧಿಕರ ರೆಸ್ಟೋರೆಂಟ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಒಂದು ವಾರದವರೆಗೆ ಬಿಶಿಂಬಾಯೆವ್ ತನಗೇನು ಗೊತ್ತಿಲ್ಲ, ತಾನೊಬ್ಬ ಅಮಾಯಕ ಎಂಬಂತೆ ಪೊಲೀಸರ ಎದುರು ನಟಿಸಿದ್ದ. ಆತನ ವಿರುದ್ಧ ಸಾಕ್ಷ್ಯಾಧಾರ ಸಿಗದಂತೆ ರೆಸ್ಟೋರೆಂಟ್‌ ಮಾಲೀಕ, ಸಿಬ್ಬಂದಿಗಳೂ ಸಹಕರಿಸಿದ್ದರು. ಆದರೆ ಕೋರ್ಟ್‌ನಲ್ಲಿ ತಾನೇ ಆಕೆಯಲ್ಲಿ ಹೊಡೆದು ಸಾಯಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

ವೈದ್ಯರ ಮಾಹಿತಿ ಪ್ರಕಾರ ಸಲ್ತಾನೇಟ್‌ ನ್ಯೂಕೆನೋವಾ ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಆಕೆ ಮೃತಪಟ್ಟಿದ್ದಳು. ಇನ್ನು ಆಕೆಯ ಸಹೋದರ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದು, ತನ್ನ ಸಹೋದರಿ ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾನೆ. ಈಗಾಗಲೇ ಮೃತಳಿಗೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದಾರೆ. ರಷ್ಯಾದಂತೆ ಕಜಕೀಸ್ತಾದಲ್ಲೂ ಪುರುಷ ಪ್ರಧಾನ ಸಂಸ್ಕೃತಿ ಚಾಲ್ತಿಯಲ್ಲಿದ್ದು, ಹೀಗಾಗಿ ಕೌಟುಂಬಿಕ ಕಲಹ, ಲೈಂಗಿಕ ದೌರ್ಜನ್ಯ ಮೊದಲಾದ ಅಪರಾಧಗಳು ಹೆಚ್ಚಾಗಿವೆ.2018ರಲ್ಲಿ ವಿಶ್ವಸಂಸ್ಥೆ ನೀಡಿರುವ ವರದಿ ಪ್ರಕಾರ ಪ್ರತಿ ವರ್ಷ 400 ಕ್ಕೂ ಅಧಿಕ ಮಹಿಳೆಯರು ಕೌಟುಂಬಿಕ ಕಲಹಕ್ಕೆ ಬಲಿಯಾಗುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Prajwal Revanna Case: ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

Prajwal Revanna Case: ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಇದರಿಂದಾಗಿ, ಇತ್ತೀಚೆಗೆ ತಾನೇ ಆಗಿರುವ ಬಿಜೆಪಿ- ಜೆಡಿಎಸ್‌ ಮೈತ್ರಿಯ ಮೇಲೂ ದುಷ್ಪರಿಣಾಮ ಆಗುವ ಸಾಧ್ಯತೆಯೂ ಅವರನ್ನು ಬಾಧಿಸುತ್ತಿದೆ.

VISTARANEWS.COM


on

HD Deve gowda prajwal revanna case
Koo

ಬೆಂಗಳೂರು: ಮೊಮ್ಮಗ, ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಪೆನ್ ಡ್ರೈವ್ ಪ್ರಕರಣ (Pen drive Case) ಉಂಟುಮಾಡಿರುವ ಚಿಂತೆ ಹಾಗೂ ಒತ್ತಡದ ದೆಸೆಯಿಂದ ಮಾಜಿ ಪ್ರಧಾನಿ ದೇವೇಗೌಡರ (hd Deve gowda) ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ದೇವೇಗೌಡ ಕುಟುಂಬದ ಸದಸ್ಯರು ಅಲರ್ಟ್‌ ಆಗಿದ್ದು, ತೀವ್ರ ನಿಗಾ ಇರಿಸಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಈ ಪ್ರಕರಣದಲ್ಲಿ ಕೈ ತೊಳೆದುಕೊಂಡು ಬೆನ್ನು ಹತ್ತಿರುವುದು ಇನ್ನಷ್ಟು ಚಿಂತೆ ಮೂಡಿಸಿದೆ. ಇದರಿಂದಾಗಿ, ಇತ್ತೀಚೆಗೆ ತಾನೇ ಆಗಿರುವ ಬಿಜೆಪಿ- ಜೆಡಿಎಸ್‌ ಮೈತ್ರಿಯ ಮೇಲೂ ದುಷ್ಪರಿಣಾಮ ಆಗುವ ಸಾಧ್ಯತೆಯೂ ಅವರನ್ನು ಬಾಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮ ಆರೋಗ್ಯದ ಬಗ್ಗೆಯೂ ಕುಟುಂಬದ ಸದಸ್ಯರು ತೀವ್ರ ನಿಗಾ ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಎರಡೂ ಟೈಮ್ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ದೇವೇಗೌಡರಿಗೆ ವೈದ್ಯರು ಕೂಡ ಸಲಹೆ ನೀಡಿದ್ದಾರೆ.

ನಿನ್ನೆ ದೇವೇಗೌಡರ ಅಳಿಯ, ಹೃದಯ ತಜ್ಞ ಡಾ. ಸಿ.ಎನ್‌ ಮಂಜುನಾಥ್ ಗೌಡರ ಮನೆಗೆ ಭೇಟಿ ನೀಡಿ ನಿಯಮಿತ ತಪಾಸಣೆ ನಡೆಸಿದ್ದಾರೆ. ಇತರ ನುರಿತ ವೈದ್ಯರಿಂದಲೂ ತಪಾಸಣೆ ನಡೆದಿದೆ. ಪುತ್ರಿಯರು ದೇವೇಗೌಡರ ಮನೆಯಲ್ಲಿಯೇ ಉಳಿದುಕೊಂಡಿದ್ದು, ದೇವೇಗೌಡರ ಕೋಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಸದಾ ನೋಡಿಕೊಳ್ಳಲು ಇರಿಸಿದ್ದಾರೆ.

ರೇವಣ್ಣ ಕೂಡ ಕಣ್ಮರೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Pen Drive Case) ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರನೇ ನೋಟೀಸ್ ಹಾಗೂ ಕೊನೆಗೆ ಲುಕೌಟ್ ನೋಟೀಸ್ (Lookout notice) ಜಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇವಣ್ಣ ಅವru ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ (Pen drive case) ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ರೆಡ್ ಕಾರ್ನರ್ ನೊಟೀಸ್ (Red Corner Notice) ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಹೀಗಾಗಿ ಅವರು ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿರಬಹುದು ಎಂದು ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸದ್ಯ ರೇವಣ್ಣ ಅವರಿಗೆ ಬಂಧನದ ಭಯ ಕಾಡುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತೀರ್ಪು ನೋಡಿಕೊಂಡು ನಿರ್ಧಾರ ಮಾಡಲಿದ್ದಾರೆ. ಜಾಮೀನು ಸಿಕ್ಕರೆ ಎಸ್ಐಟಿ ಮುಂದೆ ಬರುವುದು, ಇಲ್ಲವೇ ಮೇಲಿನ ಕೋರ್ಟ್ ಮೊರೆ ಹೋಗೋಣ ಎಂದು ರೇವಣ್ಣ ಪರ ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Continue Reading
Advertisement
Viral Video
ವೈರಲ್ ನ್ಯೂಸ್6 mins ago

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

IPL 2024
ಬೆಂಗಳೂರು23 mins ago

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

Rahul Gandhi
Lok Sabha Election 202423 mins ago

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

IPL 2024
ಕ್ರೀಡೆ46 mins ago

IPL 2024: ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

Amith Shah
ದೇಶ55 mins ago

Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

Bribery Case in Bengaluru news
ಬೆಂಗಳೂರು57 mins ago

Bribery Case : ಕಾಸಿನ ಜತೆಗೆ ಎಣ್ಣೆ ಕೊಟ್ರಷ್ಟೇ ಫೈಲ್‌ ಮೂಮ್ಮೆಂಟ್‌ ; ಇದು ಕುಡುಕ ಪಂಚಾಯಿತಿ ಪಿಡಿಓ ಲಂಚಾವತಾರ

HD Deve gowda prajwal revanna case
ಬೆಂಗಳೂರು1 hour ago

Prajwal Revanna Case: ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

MP High Court
ದೇಶ1 hour ago

MP High Court: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

Aishwarya Rajinikanth new house priceless reaction Rajinikanth
ಕಾಲಿವುಡ್1 hour ago

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Josh Baker
ಕ್ರೀಡೆ1 hour ago

Josh Baker: 6 ವಿಕೆಟ್‌ ಪಡೆದು ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾದ ಇಂಗ್ಲೆಂಡ್ ಕ್ರಿಕೆಟಿಗ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ21 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌