Banavasi Kadambotsava: ಬನವಾಸಿಯ ಕದಂಬೋತ್ಸವಕ್ಕೆ ದಿನಾಂಕ ನಿಗದಿಯಾದರೂ ಇನ್ನೂ ಘೋಷಣೆಯಾಗದ ಪಂಪ ಪ್ರಶಸ್ತಿ - Vistara News

ಉತ್ತರ ಕನ್ನಡ

Banavasi Kadambotsava: ಬನವಾಸಿಯ ಕದಂಬೋತ್ಸವಕ್ಕೆ ದಿನಾಂಕ ನಿಗದಿಯಾದರೂ ಇನ್ನೂ ಘೋಷಣೆಯಾಗದ ಪಂಪ ಪ್ರಶಸ್ತಿ

Banavasi Kadambotsava: ಫೆ. 25 26ಕ್ಕೆ ಕದಂಬೋತ್ಸವ ನಿಗದಿಯಾಗಿದ್ದರೂ ವೇದಿಕೆಯಲ್ಲಿ ಪ್ರದಾನ ಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಸರ್ಕಾರ ಈವರೆಗೂ ಘೋಷಣೆ ಮಾಡಿಲ್ಲ.

VISTARANEWS.COM


on

Banavasi Kadambotsavam Pampa Award
ಬನವಾಸಿ ದೇವಸ್ಥಾನ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾಸ್ಕರ್ ಆರ್. ಗೆಂಡ್ಲ ವಿಸ್ತಾರ ನ್ಯೂಸ್ ಶಿರಸಿ

ಶಿರಸಿ (ಬನವಾಸಿ): ರಾಜ್ಯದ ಪ್ರತಿಷ್ಠಿತ ಉತ್ಸವಗಳ ಪೈಕಿ ಒಂದಾದ ಬನವಾಸಿಯ ಕದಂಬೋತ್ಸವಕ್ಕೆ (Banavasi Kadambotsava) ದಿನಾಂಕ ನಿಗದಿಯಾದರೂ, ಕನ್ನಡ ಸಾಹಿತ್ಯಕ್ಕೆ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ ಪಂಪ ಪ್ರಶಸ್ತಿ ಘೋಷಣೆ ಮಾತ್ರ ಇನ್ನೂ ಆಗಿಲ್ಲ. 

ಕನ್ನಡಿಗರ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಕಳೆದ ಮೂರು ವರ್ಷಗಳಿಂದ ಕದಂಬೋತ್ಸವ ನಡೆದಿಲ್ಲ. ಈ ಬಾರಿ ಫೆ. ೨೫ ಹಾಗೂ ೨೬ರಂದು ಉತ್ಸವ ನಡೆಯಲಿದೆ. ಕನ್ನಡ ಭಾಷೆಯ ಬೆಳವಣಿಗೆ, ಕನ್ನಡ ಸಾಹಿತ್ಯದಲ್ಲಿ ಮೇರು ಸಾಧನೆ ಮಾಡಿದ ಸಾಹಿತಿಗೆ ಆದಿಕವಿ ಪಂಪನ ನೆನಪಿನಲ್ಲಿ ಪಂಪ ಪ್ರಶಸ್ತಿ ನೀಡುವ ಸಂಪ್ರದಾಯ 1987ರಲ್ಲಿ ಆರಂಭಗೊಂಡಿತು. ಮೊದಲು 1 ಲಕ್ಷ ರೂ. ಇದ್ದ ಪ್ರಶಸ್ತಿಯ ಮೊತ್ತ 2008ರಿಂದ 3 ಲಕ್ಷ ರೂ.ಗೆ ಹೆಚ್ಚಳವಾಗಿದೆ. ಪಂಪ ಪ್ರಶಸ್ತಿಯು ಕನ್ನಡದ ಜ್ಞಾನಪೀಠ ಎಂದು ಕರೆಯಿಸಿಕೊಳ್ಳುವಷ್ಟು ಎತ್ತರದ ಸ್ಥಾನದಲ್ಲಿದೆ. ಪ್ರಥಮ ಪ್ರಶಸ್ತಿಗೆ ರಾಷ್ಟ್ರಕವಿ ಕುವೆಂಪು ಭಾಜನರಾಗಿದ್ದರು. ಸರ್ಕಾರವು ವಾರ್ಷಿಕವಾಗಿ ನೀಡುವ ಈ ಪ್ರಶಸ್ತಿಗೆ ಪ್ರತ್ಯೇಕ ಆಯ್ಕೆ ಸಮಿತಿಯನ್ನು ರಚನೆ ಮಾಡಿ ಸಾಹಿತಿಯನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಕದಂಬೋತ್ಸವ ಸಮೀಪಿಸುತ್ತಿದ್ದರೂ ಇದೇ ವೇದಿಕೆಯಲ್ಲಿ ಪ್ರದಾನ ಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಸರ್ಕಾರ ಘೋಷಣೆ ಮಾಡಿಲ್ಲ.

ಮೂರು ವರ್ಷಗಳ ಪಂಪ ಪ್ರಶಸ್ತಿ ಬಾಕಿ

ಪ್ರಸಕ್ತ ಸಾಲಿನ ಕದಂಬೋತ್ಸವಕ್ಕೆ ಇನ್ನು ೧೭ ದಿನಗಳು ಬಾಕಿ ಉಳಿದಿವೆ. ಆದರೆ 2020, 2021 ಹಾಗೂ 2022ನೇ ಸಾಲಿನ ಪಂಪ ಪ್ರಶಸ್ತಿ ಘೋಷಣೆ ಇನ್ನೂ ಆಗಿಲ್ಲ. ಪಂಪ ಪ್ರಶಸ್ತಿ ಪ್ರದಾನವೇ ಕದಂಬೋತ್ಸವದ ಪ್ರಮುಖ ಘಟ್ಟವಾಗಿದೆ. ಪಂಪ ಪ್ರಶಸ್ತಿ ಪ್ರದಾನ ಇಲ್ಲದಿದ್ದರೆ ಉತ್ಸವಕ್ಕೆ ಮಹತ್ವ ಬರಲಾರದು. ಪ್ರಶಸ್ತಿ ಘೋಷಣೆಯ ಹೊಣೆ ಹೊತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಶೀಘ್ರ ಎಚ್ಚೆತ್ತುಕೊಳ್ಳಬೇಕಿದೆ. 

ಕಗ್ಗಂಟಾಗಿದ್ದ ಕದಂಬೋತ್ಸವ ಆಚರಣೆ

ಕಳೆದ ಮೂರು ವರ್ಷಗಳಲ್ಲಿ ಕೊರೊನಾ ಮಹಾಮಾರಿಯಿಂದ ಕದಂಬೋತ್ಸವ ನಡೆಸಲು ತಡೆ ಹಿಡಿಯಲಾಗಿತ್ತು. ಕಳೆದ ವರ್ಷ ಡಿಸೆಂಬರ್ ೧೮ರಂದೇ ಕದಂಬೋತ್ಸವ ಆಗಬೇಕಿತ್ತು. ಆದರೆ ಈ ವಿಚಾರ ಕಗ್ಗಂಟಾಗಿಯೇ ಉಳಿದಿತ್ತು. ಶಿರಸಿಗೆ ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವತಃ ತಾವೇ ಕದಂಬೋತ್ಸವ ನಡೆಸುವ ವಿಚಾರ ಪ್ರಸ್ತಾಪ ಮಾಡಿದ್ದರು. ಇದೀಗ ಕದಂಬೋತ್ಸವ ಫೆ. ೨೫ ಹಾಗೂ ೨೬ಕ್ಕೆ ನಿಗದಿಯಾಗಿದೆ.

ಇದನ್ನೂ ಓದಿ: ವಿಸ್ತಾರ Explainer: Turkey Earthquake: ಯಾಕಿಷ್ಟು ಭಯಾನಕ? ನಮ್ಮಲ್ಲೂ ಇಂಥ ಭೂಕಂಪ ಆಗಬಹುದೇ?

ಪ್ರಶಸ್ತಿಗೆ ಮೀನಾಮೇಷ

ಮೊದಮೊದಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಪ್ರಶಸ್ತಿ ಪ್ರದಾನ ಮಾಡುತ್ತಿತ್ತು. ಪಂಪ ನೆಚ್ಚಿದ ನೆಲ ಬನವಾಸಿಯಲ್ಲಿಯೇ ಪಂಪ ಪ್ರಶಸ್ತಿ ಪ್ರದಾನ ಜರುಗಬೇಕೆಂಬ ಆಶಯದಿಂದ 1995ರಿಂದ ಕದಂಬೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇದರಿಂದಾಗಿ ಕದಂಬೋತ್ಸವದ ಘನತೆಯೂ ಹೆಚ್ಚಿದೆ. 2013ನೇ ಸಾಲಿನ ಪ್ರಶಸ್ತಿಯನ್ನು ಘೋಷಿಸಿ ಕದಂಬೋತ್ಸವ ವೇದಿಕೆಯಲ್ಲಿ ನೀಡುವುದಾಗಿ ಕೊನೆಯ ಕ್ಷಣದವರೆಗೂ ಭರವಸೆ ನೀಡಿದ್ದ ಸರ್ಕಾರ, ಜನರ ನಿರೀಕ್ಷೆಯನ್ನು ಹುಸಿಯಾಗಿಸಿತು. ಹೀಗಾಗಿ ಪಂಪ ಪ್ರಶಸ್ತಿ ಪ್ರದಾನ ಇಲ್ಲದೆಯೇ ಕದಂಬೋತ್ಸವ ಜರುಗಿತು. ಎರಡು ದಶಕಗಳಲ್ಲಿ ಐವರು ಸಾಹಿತಿಗಳು ಕದಂಬೋತ್ಸವ ವೇದಿಕೆಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಲು ಆಗಮಿಸಲಿಲ್ಲ. ಪಂಪ ಪ್ರಶಸ್ತಿ ಇಲ್ಲದೇ ಕದಂಬೋತ್ಸವ ಇಲ್ಲ ಎನ್ನುವಷ್ಟು ಬೆಸೆದುಕೊಂಡಿದ್ದ ಸ್ಮರಣೀಯ ಕ್ಷಣಗಳು ಒಂದಿಲ್ಲೊಂದು ಕಾರಣದಿಂದ ಇತ್ತೀಚೆಗೆ ಬೇರ್ಪಡುತ್ತಿವೆ ಎಂಬುದು ಬನವಾಸಿಗರ ಅಭಿಪ್ರಾಯವಾಗಿದೆ.

“ಬನವಾಸಿಯಲ್ಲಿ ನಡೆಯುವ ಕದಂಬೋತ್ಸವ ವೇದಿಕೆಯಲ್ಲೇ ಪಂಪ ಪ್ರಶಸ್ತಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ. 2020 ರಿಂದ 2022 ರವರೆಗಿನ ಪಂಪ ಪ್ರಶಸ್ತಿಯನ್ನೂ ನೀಡಲಾಗುವುದು. ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಶೀಘ್ರವೇ ಪಂಪ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗುವುದು” ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ

ಇದನ್ನೂ ಓದಿ: Brahmin CM: ಪ್ರಲ್ಹಾದ ಜೋಶಿ ಸಿಎಂ ಸ್ಥಾನಕ್ಕೆ ಅರ್ಹ ಅಭ್ಯರ್ಥಿ: ಜಾತಿ ಆಧಾರದಲ್ಲಿ ಟೀಕೆ ಸರಿಯಲ್ಲ ಎಂದ ಬ್ರಾಹ್ಮಣ ಮಹಾಸಭಾ

ಈವರೆಗಿನ ಪಂಪ ಪ್ರಶಸ್ತಿ ಪುರಸ್ಕೃತರು  

ಕುವೆಂಪು, ತೀ.ನಂ.ಶ್ರೀಕಂಠಯ್ಯ, ಶಿವರಾಮ ಕಾರಂತ, ಸಂ.ಶಿ.ಭೂಸನೂರಮಠ, ಪು.ತಿ.ನ., ಎ.ಎನ್.ಮೂರ್ತಿರಾವ್, ಗೋಪಾಲಕೃಷ್ಣ ಅಡಿಗ, ಸೇಡಿಯಾಪು ಕೃಷ್ಣ ಭಟ್ಟ, ಕೆ.ಎಸ್.ನರಸಿಂಹಸ್ವಾಮಿ, ಎಂ.ಎಂ.ಕಲಬುರ್ಗಿ, ಜಿ.ಎಸ್.ಶಿವರುದ್ರಪ್ಪ, ದೇಜಗೌ, ಚನ್ನವೀರ ಕಣವಿ, ಡಾ. ಎಲ್.ಬಸವರಾಜು, ಪೂರ್ಣಚಂದ್ರ ತೇಜಸ್ವಿ, ಚಿದಾನಂದಮೂರ್ತಿ, ಡಾ. ಚಂದ್ರಶೇಖರ ಕಂಬಾರ, ಹೆಚ್.ಎಲ್.ನಾಗೇಗೌಡ, ಎಸ್.ಎಲ್.ಭೈರಪ್ಪ, ಜಿ.ಎಸ್.ಆಮೂರ್, ಯಶವಂತ ಚಿತ್ತಾಲ, ಟಿ.ವಿ.ವೆಂಕಟಾಚಲ ಶಾಸ್ತ್ರಿ, ಚಂದ್ರಶೇಖರ ಪಾಟೀಲ, ಜಿ.ಹೆಚ್.ನಾಯಕ, ಬರಗೂರು ರಾಮಚಂದ್ರಪ್ಪ, ಡಾ.ಡಿ.ಎನ್.ಶಂಕರ ಭಟ್ಟ, ಕಯ್ಯಾರ ಕಿಞ್ಞಣ್ಣ ರೈ, ಪ್ರೊ.ಜಿ. ವೆಂಕಟಸುಬ್ಬಯ್ಯ, ಬಿ.ಎ.ಸನದಿ, ಡಾ.ಹಂ.ಪ. ನಾಗರಾಜಯ್ಯ, ಎಸ್.ನಿಸಾರ್ ಅಹಮದ್, ಷ.ಶೆಟ್ಟರ್, ಸಿದ್ದಲಿಂಗಯ್ಯ ಅವರಿಗೆ ಇದುವರೆಗೆ ಪಂಪ ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ: Parliament Budget Session: ಅದಾನಿ ವಿಚಾರಕ್ಕೆ ಮತ್ತೆ ಕಲಾಪ ಬಲಿ, ಪಟ್ಟು ಸಡಿಲಿಸದ ಪ್ರತಿಪಕ್ಷಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ಬಸವಕಲ್ಯಾಣ: ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada Election Result 2024: ಉತ್ತರ ಕನ್ನಡದಲ್ಲಿ ಗೆದ್ದು ಬೀಗಿದ ವಿಶ್ವೇಶ್ವರ ಹೆಗಡೆ ಕಾಗೇರಿ

Uttara Kannada Election Result 2024: ಲೋಕಸಭಾ ಚುನಾವಣೆ ಹಿನ್ನೆಲೆ ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತ ಬಂದಿದೆ. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾರಮ್ಯ ಮೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕಾರವಾರ, ಶಿರಸಿ, ಹಳಿಯಾಳ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕುಮಟಾ ಮತ್ತು ಯಲ್ಲಾಪುರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಕಿತ್ತೂರಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ್‌ ಅವರು ಈಗ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಅವರನ್ನು ಸುಮಾರು 60 ಸಾವಿರ ಮತಗಳ ಭಾರಿ ಅಂತರದಿಂದ ಪರಾಭವಗೊಳಿಸಿದ್ದರು. ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲ ಹೊಂದಿದೆಯಾದರೂ, ಜನಮಾನಸದಲ್ಲಿ ಮೋದಿ ಅವರ ಮೇಲಿನ ಅಭಿಮಾನ ಜೋರಾಗಿತ್ತು.

VISTARANEWS.COM


on

Uttara Kannada Election Result 2024
Koo

ಉತ್ತರ ಕನ್ನಡ: ತೀವ್ರ ಕುತೂಹಲ, ನಿರೀಕ್ಷೆ ಹೆಚ್ಚಿಸಿದ್ದ ಉತ್ತರ ಕನ್ನಡ (Uttara Kannada Election Result 2024) ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್‌ (Anjali Nimbalkar) ಅವರ ವಿರುದ್ಧ ಕಾಗೇರಿ ಅವರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಲೋಕಸಭೆ ಚುನಾವಣೆಯಲ್ಲಿ 2.86 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ.

ಹಿಂದೆ ಇದು ಕೆನರಾ ಕ್ಷೇತ್ರ

ಈ ಕ್ಷೇತ್ರವನ್ನು ಮೊದಲು ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. 2008ರಲ್ಲಿ ಕ್ಷೇತ್ರ ಮರು ವಿಂಗಡಣೆ ಆದ ಬಳಿಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಎಂದು ಬದಲಾಯಿತು. ಈ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ವಿಶೇಷ ಅಂದರೆ ಇದರಲ್ಲಿ ಬೆಳಗಾವಿಯ ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಕ್ಷೇತ್ರಗಳೂ ಸೇರಿಕೊಂಡಿವೆ.

ಯಾರಿಗೆ ಎಷ್ಟು ಮತ?

ವಿಶ್ವೇಶ್ವರ ಹೆಗಡೆ ಕಾಗೇರಿ (ಬಿಜೆಪಿ): 7,82,495

ಅಂಜಲಿ ನಿಂಬಾಳ್ಕರ್‌ (ಕಾಂಗ್ರೆಸ್): 4,45,067

ಕಾಗೇರಿ ಗೆಲುವಿನ ಅಂತರ: 3,37,428

ಲೋಕಸಭಾ ಚುನಾವಣೆ ಹಿನ್ನೆಲೆ ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತ ಬಂದಿದೆ. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾರಮ್ಯ ಮೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕಾರವಾರ, ಶಿರಸಿ, ಹಳಿಯಾಳ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕುಮಟಾ ಮತ್ತು ಯಲ್ಲಾಪುರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಕಿತ್ತೂರಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ್‌ ಅವರು ಈಗ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಅವರನ್ನು ಸುಮಾರು 60 ಸಾವಿರ ಮತಗಳ ಭಾರಿ ಅಂತರದಿಂದ ಪರಾಭವಗೊಳಿಸಿದ್ದರು. ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲ ಹೊಂದಿದೆಯಾದರೂ, ಜನಮಾನಸದಲ್ಲಿ ಮೋದಿ ಅವರ ಮೇಲಿನ ಅಭಿಮಾನ ಜೋರಾಗಿತ್ತು. ಹಾಗಾಗಿ ಬಿಜೆಪಿ ಈ ಬಾರಿಯೂ ಇಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ ಎಂದೇ ಹೇಳಲಾಗುತ್ತಿತ್ತು. ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಉತ್ತರ ಕನ್ನಡದವರಲ್ಲ ಎನ್ನುವುದು ಕೂಡ ಬಿಜೆಪಿಗೆ ವರದಾನವಾಗಿತ್ತು. ಹಿಂದಿನ ಎಲ್ಲ ಚುನಾವಣೆಗಳಲ್ಲಿ ಕಿತ್ತೂರು ಮತ್ತು ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಭಾರೀ ಲೀಡ್‌ ಸಿಗುತ್ತಿತ್ತು. ಆದರೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಖಾನಾಪುರದವರು.

Uttara Kannada Lok Sabha Constituency BJP Candidate Vishweshwara Hegde Kageri latest Statement

ಕ್ಷೇತ್ರದ ಚುನಾವಣಾ ಹಿನ್ನೋಟ

1952ರ ಕೆನರಾ ಲೋಕಸಭೆ ಕ್ಷೇತ್ರದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜೋಕಿಂ ಆಳ್ವಾ ಅವರು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಇವರು ಕಾಂಗ್ರೆಸ್‌ ನಾಯಕಿಯಾಗಿದ್ದ ಮಾರ್ಗರೇಟ್ ಆಳ್ವಾ ಅವರ ಮಾವ. ಮುಂದೆ 1957, 1962ರಲ್ಲೂ ಇವರು ಜಯ ಸಾಧಿಸಿದ್ದರು. 1967ರಲ್ಲಿ ಚುಟುಕು ಖ್ಯಾತಿಯ ದಿನಕರ ದೇಸಾಯಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. 1971ರಲ್ಲಿ ಕಾಂಗ್ರೆಸ್‌ನ ಬಿ ವಿ ನಾಯ್ಕ್ ಗೆಲುವು ಸಾಧಿಸಿದರು. 1977ರಲ್ಲಿ ಕಾಂಗ್ರೆಸ್‌ನ ಬಿ ಪಿ ಕದಂ ಗೆದ್ದರು. ಆ ಬಳಿಕ 1980ರಿಂದ 1991ರವರೆಗೆ ನಿರಂತರ ನಾಲ್ಕು ಚುನಾವಣೆಗಳಲ್ಲಿ ಜಿ ದೇವರಾಯ ನಾಯ್ಕ್ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದರು. 1996ರ ನಂತರ ಹಿಂದೂ ಜಾಗರಣ ವೇದಿಕೆಯಿಂದ ಬಿಜೆಪಿ ಪ್ರವೇಶಿಸಿದ ಅನಂತ್ ಕುಮಾರ್ ಹೆಗಡೆ ಜಯಭೇರಿ ಬಾರಿಸುತ್ತ ಬಂದರು.

Ask your wives how much gas costs; Congress candidate question to BJP workers

ಘಟಾನುಘಟಿಗಳನ್ನು ಸೋಲಿಸಿದ ಕ್ಷೇತ್ರ ಇದು!

ಈ ಲೋಕಸಭಾ ಕ್ಷೇತ್ರದಲ್ಲಿ ದಿನಕರ ದೇಸಾಯಿ, ಶಿವರಾಮ ಕಾರಂತ, ರಾಮಕೃಷ್ಣ ಹೆಗಡೆ, ಅನಂತ್‌ ನಾಗ್‌ ಸೋತು ಹೋಗಿದ್ದರು! ನಾಡಿನ ಖ್ಯಾತ ಕವಿ ಮತ್ತು ಶಿಕ್ಷಣ ತಜ್ಞರಾಗಿದ್ದ ದಿನಕರ ದೇಸಾಯಿ ಅವರು 1971ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಎಲ್ಲ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದೆ ದಿನಕರ ದೇಸಾಯಿ ಅವರಿಗೆ ಬೆಂಬಲ ಘೋಷಿಸಿದ್ದವು. ಆದರೆ ದಿನಕರ ದೇಸಾಯಿ ಸೋತು ಹೋದರು. ಕಾಂಗ್ರೆಸ್‌ ಅಭ್ಯರ್ಥಿ ಬಿ ವಿ ನಾಯಕ್‌ 1,61,296 ಮತಗಳನ್ನು ಗಳಿಸಿದರೆ, ದಿನಕರ ದೇಸಾಯಿ ಅವರಿಗೆ ಬಿದ್ದಿದ್ದು ಕೇವಲ 64,517 ಮತಗಳು.

ಉತ್ತರ ಕನ್ನಡವು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹುಟ್ಟೂರು. ಆದರೆ 1977ರ ಲೋಕಸಭೆ ಚುನಾವಣೆಯಲ್ಲಿ ಜನತಾ ಪರಿವಾರದ ಭಾರತೀಯ ಲೋಕ ದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಮಕೃಷ್ಣ ಹೆಗಡೆ ಅವರು ಸೋಲು ಅನುಭವಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಬಿ ಪಿ ಕದಂ 1,95,974 ಮತಗಳನ್ನು ಪಡೆದು ಗೆದ್ದರೆ, ರಾಮಕೃಷ್ಣ ಹೆಗಡೆ ಅವರಿಗೆ 1,61,580 ಮತಗಳು ಬಿದ್ದಿದ್ದವು.

1989ರಲ್ಲಿ ಇದೇ ಕ್ಷೇತ್ರದಿಂದ ಖ್ಯಾತ ಸಾಹಿತಿ ಶಿವರಾಮ ಕಾರಂತರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅವರ ಸ್ಪರ್ಧೆಗೂ ಒಂದು ಕಾರಣ ಇತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆಗ ಕೈಗಾ ವಿರೋಧಿ ಹೋರಾಟ ಭುಗಿಲೆದ್ದಿತ್ತು. ಶಿವರಾಮ ಕಾರಂತರು ಈ ಹೋರಾಟದ ಮುಂಚೂಣಿಯಲ್ಲಿದ್ದರು. ಪರಿಸರವಾದಿಗಳೆಲ್ಲರ ಒತ್ತಾಸೆಯ ಮೇರೆಗೆ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಆ ವರ್ಷ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೇ ನಡೆದಿದ್ದವು. ಬಿಜೆಪಿ ಪಕ್ಷವು ಕೆನರಾ ಲೋಕಸಭೆಗೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸದೆ ಶಿವರಾಮ ಕಾರಂತರಿಗೆ ಬೆಂಬಲ ನೀಡಿತು. ಶಿವರಾಮ ಕಾರಂತರ ಪರ ಪ್ರಚಾರ ಜೋರಾಗಿ ನಡೆಯಿತು. ಆದರೆ ಶಿವರಾಮ ಕಾರಂತರು ಒಂದು ದಿನವೂ ಪ್ರಚಾರದಲ್ಲಿ ಭಾಗಿಯಾಗದೆ ವಿದೇಶ ಪ್ರವಾಸಕ್ಕೆ ಹೊರಟರು! ಮತ್ತೊಂದು ವಿಶೇಷ ಏನೆಂದರೆ, ಜನತಾ ದಳದ ಅಭ್ಯರ್ಥಿಯಾಗಿ ಜನಪ್ರಿಯ ನಟ ಅನಂತ್‌ನಾಗ್‌ ಸ್ಪರ್ಧಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ದೇವರಾಯ ನಾಯ್ಕ್‌ 2,40,571 ಮತಗಳನ್ನು ಪಡೆದು ಜಯಶಾಲಿಯಾದರು. 2,೦9,003 ಮತ ಪಡೆದ ಅನಂತ್‌ನಾಗ್‌ ದ್ವಿತೀಯ ಸ್ಥಾನಿಯಾದರು. ರೈತ ಸಂಘದ ಅಭ್ಯರ್ಥಿ ಬಸಣ್ಣ 80,566 ಮತಗಳನ್ನು ಪಡೆದು ಮೂರನೇ ಸ್ಥಾನಿಯಾದರೆ, ಶಿವರಾಮ ಕಾರಂತರಿಗೆ ಸಿಕ್ಕಿದ್ದು ಕೇವಲ 58,902 ಮತಗಳು.

2014ರ ಚುನಾವಣೆ ಫಲಿತಾಂಶ
ಅನಂತ್ ಕುಮಾರ್ ಹೆಗಡೆ, ಬಿಜೆಪಿ: 5.46 ಲಕ್ಷ ಮತ
ಪ್ರಶಾಂತ್ ಆರ್ ದೇಶಪಾಂಡೆ, ಕಾಂಗ್ರೆಸ್‌: 4.06 ಲಕ್ಷ ಮತ
ಗೆಲುವಿನ ಅಂತರ: 1 ಲಕ್ಷಕ್ಕೂ ಅಧಿಕ

2019ರ ಚುನಾವಣೆ ಫಲಿತಾಂಶ
ಅನಂತ್ ಕುಮಾರ್ ಹೆಗಡೆ, ಬಿಜೆಪಿ: 7.86 ಲಕ್ಷ ಮತ
ಆನಂದ್‌ ಅಸ್ನೋಟಿಕರ್‌, ಕಾಂಗ್ರೆಸ್‌: 3.06 ಲಕ್ಷ ಮತ
ಗೆಲುವಿನ ಅಂತರ: 4.8 ಲಕ್ಷ

ಇದನ್ನೂ ಓದಿ: Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

Continue Reading

ಮಳೆ

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Heavy Rain Warning: ರಾಜ್ಯಾದ್ಯಂತ (Karnataka Weather forecast) ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Yellow Alert) ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Waring) ನೀಡಲಾಗಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Monsoon rains) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಜೂ.4ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ (Rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ಜತೆಗೆ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರದೊಂದಿಗೆ ಶುರುವಾಗಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಜೂ.6ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ 35- 45 ಕಿ.ಮೀ ಗಾಳಿ ಬೀಸಲಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಇದೆ. ಹೀಗಾಗಿ ಜೂನ್ 4 ರಿಂದ ಜೂನ್ 6ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಯೆಲ್ಲೋ‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

VISTARANEWS.COM


on

First PU Class Commencement Programme at Vishwadarshana College
Koo

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ (Uttara Kannada News) ನಡೆಯಿತು.

ವಿಶ್ವದರ್ಶನ ಶಿಕ್ಷಣ ಸಮೂಹದ ಸಿಇಒ ಅಜಯ್ ಭಾರತೀಯ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮಾಡುವ ಕಾರ್ಯ ಸ್ವಹಿತದ ಜತೆಗೆ ದೇಶದ ಹಿತವನ್ನು ಸಾಧಿಸುವಂತಿರಬೇಕು. ಶಿಕ್ಷಣ ನೀಡಬೇಕಾದ, ಪಡೆಯಬೇಕಾದ ಎಲ್ಲರೂ ರಾಷ್ಟ್ರದ ಘನತೆ, ಗೌರವವನ್ನು ಕಾಪಾಡುವ ಆಲೋಚನೆಯನ್ನು ಸದಾ ಮಾಡುತ್ತಿರಬೇಕು ಎಂದು ಹೇಳಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

ಕಾಲೇಜಿನ ಪ್ರಾಚಾರ್ಯ ಡಿ.ಕೆ. ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಿಗಾಗಿ ಸಂಪತ್ತು ಮಾಡುವುದಕ್ಕಿಂತ ಮಕ್ಕಳನ್ನೇ ಸಂಪತ್ತಾಗಿಸುವುದು ಸೂಕ್ತ. ಜ್ಞಾನ ಸಂಪತ್ತಿನಿಂದ ಮಕ್ಕಳನ್ನು ಶ್ರೀಮಂತರಾಗಿಸುವ ಮಾರ್ಗವೇ ಶ್ರೇಷ್ಠವಾದದ್ದು ಆ ಕಾರ್ಯವನ್ನು ವಿಶ್ವದರ್ಶನ ಮಾಡುತ್ತಿದೆ‌ ಎಂದರು.

ಅದಕ್ಕಾಗಿ ನಮ್ಮ ಪಿಯು ಕಾಲೇಜು ಉತ್ತಮ ಮೂಲಸೌಕರ್ಯ ಮತ್ತು ನುರಿತ ಉಪನ್ಯಾಸಕ ವರ್ಗವನ್ನು ಹೊಂದಿದೆ ಎಂದು ಹೇಳಿದರಲ್ಲದೇ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಕಾಲೇಜಿನ ಉಪನ್ಯಾಸಕ ವರ್ಗವನ್ನು ಪರಿಚಯಿಸಿ, ಕಾಲೇಜಿನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಮಾಜಿ ವಿದ್ಯಾರ್ಥಿಗಳಾದ ಅಪೂರ್ವ ಹಾಗೂ ಶ್ರೀಗೌರಿ ಭಟ್, ಕಾಲೇಜಿನಲ್ಲಿ ತಮ್ಮ ಅನುಭವ ಜೀವನಪೂರ್ತಿ ಸ್ಮರಿಸುವಂತದ್ದು ಎಂದು ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

ಶ್ರಾವ್ಯ ಪ್ರಾರ್ಥಿಸಿದಳು. ಉಪನ್ಯಾಸಕ ಗುರುರಾಜ್ ಭಟ್ ನಿರ್ವಹಿಸಿದರು. ಉಪ ಪ್ರಾಂಶುಪಾಲ ನಾಗರಾಜ ಹೆಗಡೆ ವಂದಿಸಿದರು.

Continue Reading
Advertisement
Anna Lezhneva
ರಾಜಕೀಯ4 hours ago

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

BJP celebration about lok sabha election results
ಕರ್ನಾಟಕ4 hours ago

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

MLC TA Sharavana latest statement about lok sabha election results 2024
ಕರ್ನಾಟಕ4 hours ago

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

Election Results 2024
ಪ್ರಮುಖ ಸುದ್ದಿ4 hours ago

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024
ಪ್ರಮುಖ ಸುದ್ದಿ4 hours ago

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Assault Case
ಕರ್ನಾಟಕ5 hours ago

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Narendra Modi Election
ದೇಶ5 hours ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ5 hours ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ5 hours ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 20246 hours ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ20 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌