ಸರ್ಕಾರ ಕೊಟ್ಟರೂ ಪೊಲೀಸರು ಕೊಡಲಿಲ್ಲ: ಬೆಂಗಳೂರಿನಲ್ಲಿ 24/7 ಹೋಟೆಲ್‌ ನಡೆಸಲು ಅನುಮತಿಗೆ ಮನವಿ - Vistara News

ಕರ್ನಾಟಕ

ಸರ್ಕಾರ ಕೊಟ್ಟರೂ ಪೊಲೀಸರು ಕೊಡಲಿಲ್ಲ: ಬೆಂಗಳೂರಿನಲ್ಲಿ 24/7 ಹೋಟೆಲ್‌ ನಡೆಸಲು ಅನುಮತಿಗೆ ಮನವಿ

ಬೆಂಗಳೂರಿನಲ್ಲಿ ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಸಿಹಿ ಸುದ್ದಿ. ಹೋಟೆಲ್‌ಗಳು, ಬೇಕರಿಗಳು 24/7 ತೆರೆದಿರಬಹುದು ಎಂದು ಸರ್ಕಾರ ಅನುಮತಿ ನೀಡಿ ಅಧಿಸೂಚನೆ ಹೊರಡಿಸಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬೈ, ದೆಹಲಿಯಂತಹ ನಗರಗಳಲ್ಲಿ ಹೋಟೆಲ್‌ಗಳು 24/7 ಓಪನ್‌ ಇರಲು ಸರ್ಕಾರದ ಅನುಮತಿ ಇರುವಂತೆಯೇ ಬೆಂಗಳೂರಿನಲ್ಲೂ ಅವಕಾಶ ನೀಡಬೇಕು ಎಂದು ಪೊಲೀಸ್‌ ಇಲಾಖೆಯನ್ನು ಹೋಟೆಲ್‌ ಮಾಲೀಕರು ಒತ್ತಾಯಿಸಿದ್ದಾರೆ. ಹೋಟೆಲ್‌ ಸೇರಿ ಎಲ್ಲ ಉದ್ದಿಮೆಗಳನ್ನೂ ದಿನದ 24 ಗಂಟೆಯೂ ತೆರೆಯಲು ಅವಕಾಶ ನೀಡಿ 2019ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಅನುಗುಣವಾಗಿ ಅವಕಾಶ ನೀಡಿ ಎಂಬ ಒತ್ತಾಯವನ್ನು ಮಾಡಿದ್ದಾರೆ.

ಮನವಿ ಪತ್ರ

2019ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎಲ್ಲ ಉದ್ದಿಮೆದಾರರೂ ಸ್ವಾಗತಿಸಿದ್ದರು. ಇನ್ನೇನು ಆದೇಶ ಜಾರಿ ಆಗಬೇಕು ಎನ್ನುವಷ್ಟರಲ್ಲಿ ಕೊರೋನಾ ಸಂಕಷ್ಟ ಎದುರಾಗಿತ್ತು. ಸಾಕಷ್ಟು ಹೋಟೆಲ್‌ಗಳು ನಷ್ಟ ಅನುಭವಿಸುವಂತಾಗಿತ್ತು. ಅನೇಕ ಹೋಟೆಲ್‌ಗಳು ಮುಚ್ಚಿದವು. ಈಗ ಕೊರೋನಾ ಭೀತಿಯಿಂದ ಹೊರಬಂದಿರುವ ಕಾರಣ ಹೋಟೆಲ್‌ ಸಂಘದವರು ಲಾಭದತ್ತ ಮುಖಮಾಡಿದ್ದಾರೆ. ಸರ್ಕಾರ ನೀಡಿರುವ ಅನುಮತಿಯ ಅಧೀಸೂಚನೆ ಜಾರಿಗಾಬೇಕು ಎಂದಿದ್ದಾರೆ. ಅಧಿಸೂಚನೆಗೆ ಅನುಗುಣವಾಗಿ ಪೊಲೀಸರು ಅನುಮತಿ ನೀಡಬೇಕು. ಈ ಕುರಿತು ಶೀಘ್ರದಲ್ಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೃಹತ್‌ ಬೆಂಗಳೂರು ಹೋಟೆಲ್‌ ಸಂಘದ ಸದಸ್ಯರು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ಗೆ ಮನವಿ ಮಾಡಿದ್ದಾರೆ.

ಏನೇನು ತೆರೆದಿರುತ್ತದೆ?
ಬೆಂಗಳೂರು ನಗರದಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ನೌಕರರು, ವಾಹನ ಚಾಲಕರು, ನಗರದ ವ್ಯಾಪಾರಿಗಳು, ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹೋಟೆಲ್‌ಗಳು, ಬೇಕರಿಗಳು, ಆಹಾರೋತ್ಪನ್ನ, ಬಟ್ಟೆ ಅಂಗಡಿ ಸೇರಿದಂತೆ ಇನ್ನಿತರೆ ಅಂಗಡಿಗಳು ದಿನದ 24 ಗಂಟೆ ತೆರೆದಿಡಬಹುದು.

ಎದುರಿರುವ ಆತಂಕಗಳು?

  • ರಾತ್ರಿ ಓಡಾಟ ಹೆಚ್ಚಾಗುವುದರಿಂದ ನಗರದಲ್ಲಿ ಕ್ರೈಂ ಸಂಖ್ಯೆ ಏರಿಕೆ ಆಗಬಹುದು ಎಂಬುದು ಪೊಲೀಸರ ಆತಂಕ.
  • ರಾತ್ರಿಯಲ್ಲಿ ಹೋಟೆಲ್‌, ಇತರೆ ನೌಕರರು ಹಾಗೂ ಸಾರ್ವಜನಿಕರ ಸುರಕ್ಷೆಯ ಹೊಣೆ ಪೊಲೀಸರದ್ದಾಗಿರುತ್ತದೆ. ಅವರಿಗೆ ಭದ್ರತೆಯನ್ನು ಕಲ್ಪಿಸಲು ಪೊಲೀಸರು ಕಷ್ಟಪಡಬೇಕಾಗಬಹುದು.
  • ರಾತ್ರಿ ವೇಳೆ ರಸ್ತೆ ಖಾಲಿ ಇರುತ್ತದೆ ಎಂದು ಮನಸೋಯೆಚ್ಛೆ ವಾಹನ ಚಲಾಯಿಸುವವರು ಹೆಚ್ಚಬಹುದು. ಮದ್ಯಸೇವನೆ ಮಾಡಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಬಹುದು. ಅದರಿಂದ ಆಕ್ಸಿಡೆಂಟ್‌ ಸಂಖ್ಯೆ ಏರಬಹುದು. ಇದನ್ನು ತಡೆಯಲು ನಗರದಲ್ಲಿ ಸಿಗ್ನಲ್‌ ನಿಯಮವನ್ನು ಇಡೀ ರಾತ್ರಿ ಚಾಲತಿಯಲ್ಲಿಡಬೇಕಾಗುತ್ತದೆ. ಈ ಕುರಿತು ಪೊಲೀಸ್‌ ಇಲಾಖೆ ಚಿಂತನೆ ನಡೆಸಬೇಕಾಗುತ್ತದೆ.
  • ಹೋಟೆಲ್‌ ಇಡೀ ರಾತ್ರಿ ತೆರೆದಿಡುವುದರಿಂದ ವಿದ್ಯತ್‌ ಹಾಗೂ ನೀರಿನ ಸಮಸ್ಯೆ ಎದುರಾಗಬಹುದು. ಹಾಗೂ ನಗರದಲ್ಲಿ ತ್ಯಾಜ್ಯದ ಪ್ರಮಾಣ ಅಧಿಕಗೊಳ್ಳಬಹುದು.

ಇದರಿಂದ ಆಗುವ ಅನುಕೂಲಗಳು?

  • ಇಡೀ ರಾತ್ರಿ ಅಂಗಡಿಗಳು ತೆರೆದಿಡುವುದರಿಂದ ಆತಂಕಗಳು ಎಷ್ಟಿವೆಯೋ ಅದರಿಂದ ಅನುಕೂಲಗಳು ಸಾಕಷ್ಟಿವೆ.
  • ಇದರಿಂದ ಮುಖ್ಯವಾಗಿ ಹೋಟೆಲ್‌ ಮಾಲೀಕರಿಗೆ ತುಂಬಅ ಸಹಾಯವಾಗುತ್ತದೆ. ಜಾಗದ ಬಾಡಿಗೆ ಕಟ್ಟುತ್ತಿರುವ ಮಾಲೀಕರು, ಅದೇ ಬಾಡಿಗೆಯಲ್ಲಿ ಹೆಚ್ಚಿನ ಆದಾಯ ಪಡೆಯಬಹುದು. ಕೇವಲ 10ರಿಂದ 12 ಗಂಟೆ ತೆರೆದಿಟ್ಟು ಆದಾಯ ಗಳಿಸಿದರೂ ಜಾಗದ ಬಾಡಿಗೆ ಕಟ್ಟುವಷ್ಟೇ ಕಟ್ಟಬೇಕು. ಆದರೆ, 24 ಗಂಟೆ ತೆರಿದಿದ್ದರೆ ಹೆಚ್ಚಿನ ಆದಾಯ ಉತ್ಟತ್ತಿಯಾಗುತ್ತದೆ.
  • ಅಧಿಕ ಉದ್ಯೋಗ ಅವಕಾಶ
    ಹೋಟೆಲ್‌ನಲ್ಲಿ ಅರೆಕಾಲಿಕ ಉದ್ಯೋಗ ಮಾಡುವವರಿಗೆ ಅವಕಾಶಗಳು ಹೆಚ್ಚಾಗುತ್ತದೆ.
  • ರಾತ್ರಿ ಪಾಳಿಯ ನೌಕರರಿಗೆ ಸಂತೋಷ
    ಬೆಂಗಳೂರು ನಗರದಲ್ಲಿ ಹಲವು ಕಾಲ್‌ ಸೆಂಟರ್‌ಗಳು, ಉದ್ಯೋಗ ಕಂಪೆನಿಗಳು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತವೆ. ನೌಕರರು ರಾತ್ರಿ ಆಹಾರಕ್ಕಾಗಿ ಹೋಟೆಲ್‌ಗಳನ್ನು ಅವಲಂಬಿಸುತ್ತಾರೆ. ಅಂಥವರಿಗೆ ಇದೊಂದು ಸಿಹಿ ಸುದ್ದಿಯಾಗಿದೆ.
    ವಾಹನ ಚಾಲಕರು, ಆಟೋರಿಕ್ಷಾ ಚಾಲಕರಿಗೆ ಇದರಿಂದ ಉಪಯೋಗವಾಗುತ್ತದೆ. ನಡುರಾತ್ರಿ ಆಹಾರಕ್ಕಾಗಿ ಪರದಾಡುವ ಸನ್ನಿವೇಶ ಎದುರಾಗುವುದಿಲ್ಲ.
  • ರಾತ್ರಿ ವೇಳೆ ನಗರದಲ್ಲಿ ಅಂಗಡಿಗಳು ತೆರೆದಿಡುವುದರಿಂದ ಕ್ರೈಂ ಸಂಖ್ಯೆ ಇಳಿಯಬಹುದು ಎಂದು ಈ ಹಿಂದೆ ನಗರದ ಕಮಿಷನರ್‌ ಆದ ಭಾಸ್ಕರ್‌ ರಾವ್‌ ಹೇಳಿದ್ದರು. ರಾತ್ರಿ ಜನರ ಓಡಾಟ ಹೆಚ್ಚುವುದರಿಂದ ರೌಡಿಗಳು, ಕಳ್ಳರು ಕ್ರೈಂ ಮಾಡುವ ಧೈರ್ಯ ಮಾಡುವುದಿಲ್ಲ. ಇದರಿಂದ ಅನುಕೂಲವಾಗುತ್ತದೆ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದರು.
  • ಈಗಿನ ಯುವಕ/ಯುವತಿಯರಿಗೆ ನಡು ರಾತ್ರಿ ಏನಾದರೂ ಸೇವಿಸುವ ಆಸೆಯಾದಾಗ ಅಂಗಡಿ ಮುಚ್ಚಿರುತ್ತದೆ ಎಂಬ ಭಯವಿರುವುದಿಲ್ಲ. ಪತಿ ತನ್ನ ಪತ್ನಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗುವುದಾಗಿ ಹೇಳಿ ನಂತರ ಆಫೀಸ್‌ನಿಂದ ಹೊರಡಲು ತಡವಾದರೆ ಹೆಂಡತಿ ಹೋಟೆಲ್‌ ಮುಚ್ಚುತ್ತದೆ ಎಂದು ಕೋಪಮಾಡಿಕೊಳ್ಳುತ್ತಾಳೆ. ಹಾಗೆ ತಡಮಾಡುವ ಪತಿಯರಿಗೆ ಇದೊಂದು ಖುಷಿಯ ವಿಚಾರ ಎನ್ನಬಹುದು.

ಹೆಚ್ಚಿನ ಓದಿಗಾಗಿ: ಹಿಂದವೀ ಮೀಟ್‌ ಮಾರ್ಟ್‌ಗೆ ಬಿಬಿಎಂಪಿ “ಝಟ್ಕಾ”: ಪರವಾನಗಿ ಪಡೆಯಲು ನೋಟಿಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Job Alert: ಒಂದೊಳ್ಳೆ ಉದ್ಯೋಗ ಬೇಕು ಎಂದು ಹುಡುಕಾಡುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್‌ 19. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ (Anganwadi Worker And Helper Recruitment 2024). ಇದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 19 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ.

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಜತೆಗೆ ಡಿ.ಎಸ್‌.ಇ.ಆರ್‌.ಟಿ.ಯಿಂದ ಇ.ಸಿ.ಸಿ.ಇ. ಡಿಪ್ಲೋಮಾ ಕೋರ್ಸ್‌, ಜೆ.ಒ.ಸಿ. ಕೋರ್ಸ್‌, ಎನ್‌.ಟಿ.ಟಿ. ಕೋರ್ಸ್‌ ಮತ್ತು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಡಿಪ್ಲೋಮಾ ನ್ಯೂಟ್ರಿಶಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೆಟ್‌ ಕೋರ್ಸ್‌, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ಲಭಿಸಲಿದೆ.

ಅಂಗನವಾಡಿ ಸಹಾಯಕಿ: ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ / ಮುಕ್ತ ವಿದ್ಯಾಲಯಗಳಲ್ಲಿ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರು. ಇವರು ಪ್ರಥಮ / ದ್ವಿತೀಯ ಭಾಷೆಯಾಗಿ ಕನ್ನಡ ಮತ್ತು ಸಾಮಾನ್ಯ ಗಣಿತ, ಸಮಾಜ ಶಾಸ್ತ್ರ / ಸಮಾಜ ವಿಜ್ಞಾನಗಳನ್ನು ಕಡ್ಡಾಯವಾಗಿ ಓದಿರಬೇಕು. ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ಓದಿದವರೂ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಲ್ಲಿ ಕೇಳಲಾಗುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿ.
  • ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎನ್ನುವುದನ್ನು ಆಯ್ಕೆ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ; ವಿವಿಧ ಹುದ್ದೆಗಳಿಗೆ ಏ. 25ರೊಳಗೆ ಅರ್ಜಿ ಸಲ್ಲಿಸಿ

Continue Reading

ಕಲಬುರಗಿ

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Lok Sabha Election 2024: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಭಂಕೂರ್ ಮತ್ತು ರಾವೂರ್ ಮಹಾಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಸಂಸದ ಡಾ. ಉಮೇಶ್ ಜಾಧವ್ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Kalaburagi MP Dr. Umesh Jadav spoke in booth level workers meeting Chittapur assembly constituency
Koo

ಕಲಬುರಗಿ: ಸಂಸತ್ತಿನಲ್ಲಿ ಪರಿಶಿಷ್ಟ ವರ್ಗ ಮೀಸಲಾತಿ ಚರ್ಚೆಯ ಸಂದರ್ಭದಲ್ಲಿ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಬಗ್ಗೆ ಮಾತನಾಡುವ ಅವಕಾಶವಿದ್ದರೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಆ ದಿನ ರಾಜ್ಯಸಭೆಗೆ ಬಹಿಷ್ಕಾರ ಹಾಕಿ ಹೊರ ನಡೆದದ್ದು ಕೋಲಿ ಸಮಾಜದವರಿಗೆ ಮಾಡಿದ ಮಹಾ ಮೋಸ ಎಂದು ಸಂಸದ ಡಾ. ಉಮೇಶ್ ಜಾಧವ್ (Lok Sabha Election 2024) ಆರೋಪಿಸಿದ್ದಾರೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಭಂಕೂರ್ ಮತ್ತು ರಾವೂರ್ ಮಹಾಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ಕೋಲಿ ಸಮುದಾಯದವರನ್ನು ಎಸ್‌ಟಿ ಪಂಗಡಕ್ಕೆ ಸೇರಿಸಲು ಸಂಸತ್ತಿನಲ್ಲಿ ಚರ್ಚೆಗೆ ಬಂದಾಗ ನಾನು ದಾಖಲೆ ಪತ್ರಗಳ ಸಹಿತ ಚರ್ಚೆ ಮಾಡಿ ವಿಷಯ ಪ್ರಸ್ತಾಪಿಸಿದ ಬಗ್ಗೆ ಪಾರ್ಲಿಮೆಂಟಿನ ಕಡತದಲ್ಲಿ ದಾಖಲಾಗಿದೆ. ಆದರೆ, ಮಲ್ಲಿಕಾರ್ಜುನ ಖರ್ಗೆಯವರು ಈ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಪಾಲ್ಗೊಳ್ಳದೆ ಬಹಿಷ್ಕಾರ ಹಾಕಿರುವುದರಿಂದ ಕೋಲಿ ಸಮುದಾಯದವರಿಗೆ ನ್ಯಾಯ ಒದಗಿಸುವ ವಿಶೇಷ ಅವಕಾಶವನ್ನು ಕಳೆದುಕೊಂಡರು. ಈ ಬಗ್ಗೆ ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ಅವರು ಖರ್ಗೆಯವರ ನಡೆಯನ್ನು ತೀವ್ರವಾಗಿ ಟೀಕಿಸಿದ್ದರು ಎಂದು ಜಾಧವ್ ನೇರವಾಗಿ ಆರೋಪಿಸಿದರು.

ಇದನ್ನೂ ಓದಿ: UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಕೋಲಿ ಸಮಾಜದವರನ್ನು ಎಸ್ ಟಿ ಪಂಗಡಕ್ಕೆ ಸೇರಿಸಲು ಜಾಧವ್ ಅವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಿರುವವರು ಕೋಲಿ ಸಮುದಾಯದವರಿಗೆ ಎಸ್‌ಟಿಗೆ ಸೇರಿಸುವ ವಿಚಾರ ಪ್ರಸ್ತಾಪ ಮಾಡಲು ಅವಕಾಶ ಬಳಸದೆ ರಾಜ್ಯಸಭೆಯಿಂದ ಹೊರ ನಡೆದ ಖರ್ಗೆಯವರು ಕೋಲಿ ಸಮುದಾಯಕ್ಕೆ ಉತ್ತರ ನೀಡಬೇಕು. ಹೊರತಾಗಿ ಜಾಧವ್ ಏನು ಮಾಡಿದ್ದಾರೆ ಎಂದು ಪದೇ ಪದೆ ಕೇಳುವ ಬದಲು ಪಾರ್ಲಿಮೆಂಟಿನ ಕಡತದಲ್ಲಿ ಎಸ್‌ಟಿಗೆ ಸೇರಿಸಬೇಕೆಂದು ದಾಖಲೆ ಪತ್ರ ಹಾಗೂ ವಿಚಾರ ಮಂಡಿಸಿದ ಬಗ್ಗೆ ನೋಡಿ ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಕೋಲಿ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಸುರಿಸಿ ಕೇವಲ ಅನುಕಂಪ ಪಡೆಯಲು ಕಾಂಗ್ರೆಸ್ ಈ ರೀತಿಯ ನಾಟಕವನ್ನು ಮಾಡುತ್ತಿದೆ. ಹಿಂದುಳಿದ ವರ್ಗಗಳ ಬಗ್ಗೆ ನಿಜವಾದ ಕಾಳಜಿ ಬಿಜೆಪಿಗಿದ್ದು ಆ ಕೆಲಸವನ್ನು ಮಾಡುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಮೋದಿ ಕೆಲಸ ಏನು? ಜಾಧವ್ ಕೆಲಸ ಏನು? ಎಂದು ಪ್ರಶ್ನಿಸುವ ಕಾಂಗ್ರೆಸ್‌ನವರು 60 ವರ್ಷಗಳಲ್ಲಿ ಮಾಡಿದ ಕೆಲಸದ ಲೆಕ್ಕವನ್ನು ಕೊಡಲಿ ಎಂದು ತಿಳಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

1972 ರಿಂದ ಬರಗಾಲ ಕಾಡಿದ ನಮ್ಮ ಭಾಗದಲ್ಲಿ ಎಂಎಸ್‌ಕೆ ಮಿಲ್, ಶಹಾಬಾದಿನ ಸಿಮೆಂಟ್ ಕಾರ್ಖಾನೆಗಳು ಮುಚ್ಚಿದ್ದು, ಈ ಭಾಗದಿಂದ ಉದ್ಯೋಗಕ್ಕಾಗಿ ವಲಸೆ ಹೋಗುವುದು ಹೆಚ್ಚಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಲಕ್ಷ ನೇರ ಮತ್ತು ಎರಡು ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿಯ ಮೆಗಾ ಜವಳಿ ಪಾರ್ಕ್ ಕೊಡುಗೆ ನೀಡಿದ್ದಾರೆ. 1575 ಕೋಟಿ ರೂಪಾಯಿ ವೆಚ್ಚದ ಸೂರತ್-ಚೆನ್ನೈ ಭಾರತ್ ಮಾಲ್ ರಸ್ತೆ, 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಮೃತ ಭಾರತ್ ಸ್ಟೇಷನ್ ಅಭಿವೃದ್ಧಿ ಅಡಿಯಲ್ಲಿ ವಾಡಿ, ಶಹಾಬಾದ್‌, ಕಲಬುರಗಿ ಮತ್ತು ಸ್ಟೇಷನ್ ಗಾಣಗಾಪುರ ರೈಲು ನಿಲ್ದಾಣಗಳ ಅಭಿವೃದ್ಧಿ, 68 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಗಿಣಾ ನದಿಗೆ ಮಳಖೇಡದಲ್ಲಿ ಸೇತುವೆ, ಹುಮ್ನಾಬಾದ್ ಬೇಸ್‌ನಿಂದ ರಾಮಮಂದಿರದವರೆಗೆ 58 ಕೋಟಿ ರೂಪಾಯಿ ವೆಚ್ಚದ ಸರ್ವಿಸ್ ರಸ್ತೆ, ನಂದೂರು (ಕೆ) ಕೈಗಾರಿಕಾ ಪ್ರದೇಶದಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಗತಿ ಶಕ್ತಿ ಯೋಜನೆಯಲ್ಲಿ ಬಿಪಿಸಿಎಲ್ ಕಂಪೆನಿಯ ಪೆಟ್ರೋಲಿಯಂ ತೈಲಾಗಾರ ಸಂಗ್ರಹ ಮತ್ತು ಅಲ್ಲಿವರೆಗೆ ರೈಲು ಹಳಿ ವಿಸ್ತರಣೆ, ಇಎಸ್ಐ ಆಸ್ಪತ್ರೆಯಲ್ಲಿ ರಕ್ತ ನಿಧಿ ಕೇಂದ್ರ, ವಿವಿಧ ಕೋರ್ಸ್‌ಗಳ ಆರಂಭ, ದ್ರವೀಕೃತ ಆಮ್ಲಜನಕ ಘಟಕ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡರು ಕಾಂಗ್ರೆಸ್‌ನವರಿಗೆ ಮಾತ್ರ ಯಾವುದು ಕಣ್ಣಿಗೆ ಕಾಣುತ್ತಿಲ್ಲ. ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಮತ್ತು ಎರಡನೇ ಬಾರಿಗೆ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿದರೆ ಈ ಹಿಂದಿನ ಬಡ್ಡಿ ಸಮೇತ ಜನಸೇವೆ ಮಾಡಲು ಸಿದ್ಧ. 18ನೇ ಲೋಕಸಭಾ ಚುನಾವಣೆ ಬಹಳ ಮಹತ್ವಪೂರ್ಣವಾಗಿದ್ದು ಸನಾತನ ಧರ್ಮದ ರಕ್ಷಣೆ, ದೇಶದ ಸುಂದರ ಭವಿಷ್ಯಕ್ಕಾಗಿ ನಿಮ್ಮ ವೋಟಿನ ಶಕ್ತಿ ಮೋದಿಯವರಿಗೆ ಶಕ್ತಿ ತುಂಬುತ್ತದೆ ಎಂದು ಹೇಳಿದರು.

ಬಿಜೆಪಿಯ ನಗರ ಅಧ್ಯಕ್ಷ ಚಂದು ಪಾಟೀಲ್ ಮಾತನಾಡಿ, ಕಾಂಗ್ರೆಸ್‌ನವರ ಅನ್ಯಾಯವನ್ನು ತಾಳಿಕೊಂಡು ಚಿತ್ತಾಪುರದಲ್ಲಿ ಸತತವಾಗಿ ಬಿಜೆಪಿಗೆ ಬೆಂಬಲಿಸಿದ್ದೀರಿ. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತ ನೀಡಿ ಮೂರನೇ ಬಾರಿ ಪ್ರಧಾನಿಯವರಿಗೆ ಅವಕಾಶ ನೀಡಬೇಕು ಮತ್ತು ಎರಡನೇ ಬಾರಿ ಜಾದವ್ ಅವರನ್ನು ಸಂಸತ್ತಿಗೆ ಕಳಿಸಿ, ಅವರನ್ನು ಸಚಿವರನ್ನಾಗಿ ನಾವೆಲ್ಲ ಕಾಣಬೇಕು ಎಂದು ತಿಳಿಸಿದರು.

ಇದನ್ನೂ ಓದಿ: IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಇದೇ ವೇಳೆ ಮಾಜಿ ಸಚಿವ ದಿ. ಗುರುನಾಥ್ ಅವರ ಪುತ್ರಿ ಜ್ಯೋತಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಇವರನ್ನು ಸಂಸದ ಡಾ. ಉಮೇಶ್ ಜಾಧವ್, ಬಿಜೆಪಿ ಉಸ್ತುವಾರಿ ಶರಣಪ್ಪ ತಳವಾರ್ ಸೇರಿದಂತೆ ನಾಯಕರು ಬಿಜೆಪಿ ಶಾಲು ಹಾಕಿ, ಪಕ್ಷಕ್ಕೆ ಬರಮಾಡಿಕೊಂಡರು.

Continue Reading

ಮಂಡ್ಯ

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Lok Sabha Election 2024: ಮದ್ದೂರು ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಮದ್ದೂರು ಶಾಸಕ ಉದಯ್ ಚುನಾವಣಾ ಪ್ರಚಾರ ನಡೆಸಿದರು.

VISTARANEWS.COM


on

Maddur MLA Uday election campaign in various places of Maddur taluk
Koo

ಮದ್ದೂರು: ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರವು (State Congress Government) ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದ್ದು ಎಲ್ಲರಿಗೂ ತಲುಪುತ್ತಿವೆ, ಈ ಬಾರಿ ಚುನಾವಣೆಯಲ್ಲಿ (Lok Sabha Election 2024) ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ, ಕಾಂಗ್ರೆಸ್ ಶಕ್ತಿ ಹೆಚ್ಚಿಸಿ ಎಂದು ಮದ್ದೂರು ಶಾಸಕ ಉದಯ್ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ನಿಮಗೆ ಜಿಲ್ಲೆಯ ಮಗ ಬೇಕಾ? ಅಥವಾ ಹೊರಗಿನಿಂದ ಬಂದವರು ಬೇಕಾ? ಸಿಎಂ ಆಗಿ ಅಧಿಕಾರದಲ್ಲಿದ್ದಾಗಲೇ ಜಿಲ್ಲೆಗೆ ಏನು ಕೊಡುಗೆ ನೀಡಿಲ್ಲ. ಅನುಕಂಪ ಗಿಟ್ಟಿಸಿಕೊಳ್ಳಲು ಭಾವನಾತ್ಮಕ ಮಾತಿಗೆ ಜಿಲ್ಲೆಯ ಜನ ಮರುಳಾಗಬಾರದು ಎಂದು ತಿಳಿಸಿದರು.

ಇದನ್ನೂ ಓದಿ: IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ನಾವು ರೈತರ ಮಕ್ಕಳು ಅಂತಾರೆ, ಆದರೆ ಒಂದು ನಾಲೆಯನ್ನೂ ಅಭಿವೃದ್ಧಿ ಮಾಡಿಲ್ಲ, ಕಾವೇರಿಗೆ ನ್ಯಾಯ ಕೊಡಿಸಲಿಲ್ಲ. ಅವರು ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡುವುದಿಲ್ಲ ಎಂದು ಆರೋಪಿಸಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ರಾಜಕೀಯ ಮಾಡಲು ಬಂದಿಲ್ಲ, ಜನಸೇವೆ ಮಾಡಲು ಬಂದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಜಾರಿ ಮಾಡಲಾಗಿದ್ದು ಎಲ್ಲರಿಗೂ ತಲುಪುತ್ತಿದೆ. ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಿ ಎಂದು ಕರೆಕೊಟ್ಟರು.

Continue Reading

Lok Sabha Election 2024

Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

Lok Sabha Election 2024: ಎಚ್.ಡಿ. ದೇವೇಗೌಡರು ನಡೆಸುತ್ತಿದ್ದ ಪ್ರಚಾರ ಸಭೆಗೆ ಏಕಾಏಕಿ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ಕೊಡಿಸಬೇಕು. ಅವರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲು ಮಾಡಬೇಕು, ಕಾರ್ಯಕ್ರಮ ನಡೆಯುವ ಜಾಗದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

VISTARANEWS.COM


on

Lok Sabha Election 2024 HD DeveGowda Congress cries out at HD DeveGowda Complaint to Election Commission
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಕೆಲವು ಪಕ್ಷಗಳ ಕಾರ್ಯಕರ್ತರು ಇನ್ನೊಂದು ಪಕ್ಷದ ಪ್ರಚಾರ ಸಭೆಗಳಿಗೆ ಹೋಗಿ ಗಲಾಟೆ ಮಾಡುತ್ತಿರುವ ಪ್ರಕರಣಗಳೂ ವರದಿಯಾಗುತ್ತಿವೆ. ಈ ನಡುವೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರು ಪ್ರಚಾರ ಮಾಡುವ ವೇಳೆ ಸ್ಥಳಕ್ಕೆ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ನುಗ್ಗಿ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಈಗ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್‌ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಕೆ.ಎನ್.‌ ರಾಜಣ್ಣ ಅವರು ಕುಮ್ಮಕ್ಕು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂದು ಗಲಾಟೆ ಮಾಡಿದ್ದಾರೆ. ಇದರಿಂದ ಮಾಜಿ ಪ್ರಧಾನಿಗೆ ನೀಡಬೇಕಿದ್ದ ಭದ್ರತೆಯಲ್ಲಿ ಲೋಪವಾಗಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ರಿಟರ್ನಿಂಗ್ ಆಫೀಸರ್​​ಗೆ ಜೆಡಿಎಸ್ ಪಕ್ಷದ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ದೂರು ನೀಡಿದ್ದಾರೆ

ತಕ್ಕ ಶಿಕ್ಷೆಯಾಗಬೇಕು

ಎಚ್.ಡಿ. ದೇವೇಗೌಡರು ನಡೆಸುತ್ತಿದ್ದ ಪ್ರಚಾರ ಸಭೆಗೆ ಏಕಾಏಕಿ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ಕೊಡಿಸಬೇಕು. ಅವರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲು ಮಾಡಬೇಕು, ಕಾರ್ಯಕ್ರಮ ನಡೆಯುವ ಜಾಗದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ಏನಿದು ಗಲಾಟೆ?

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಅವರ ಪರವಾಗಿ ತುಮಕೂರಿನ ಕುಂಚಿಟಿಗರ ಭವನದಲ್ಲಿ ಏರ್ಪಡಿಸಲಾಗಿದ್ದ ಸಮಾವೇಶದಲ್ಲಿ ಭಾಗಿಯಾಗಿದ್ದರು. ಆಗ ಒಂದಿಷ್ಟು ಮಂದಿ ಮಹಿಳೆಯರು ದೇವೇಗೌಡರ ಬಳಿ ಬಂದಿದ್ದು, ತಾವು ಬಿಜೆಪಿ ಕಾರ್ಯಕರ್ತೆಯರಾಗಿದ್ದು ಫೋಟೊಗೆ ಪೋಸ್‌ ಕೊಡಿ ಎಂದು ಮನವಿ ಮಾಡಿದ್ದರು. ಜತೆಗೆ ನಿಂತವರು ಏಕಾಏಕಿಯಾಗಿ ಮಹಿಳೆಯರ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಸಾಕಷ್ಟು ಗದ್ದಲವಾಗಿದೆ.

ಹೊರಗೆ ಕಳಿಸಿದ ಬಿಜೆಪಿ

ತಕ್ಷಣ ಮಧ್ಯ ಪ್ರವೇಶ ಮಾಡಿದ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತೆಯರನ್ನು ಹೊರಗೆ ಕಳಿಸಲು ಮುಂದಾದರು. ಜತೆಗೆ ಬಿಜೆಪಿ ಕಾರ್ಯಕರ್ತರೂ ಒಟ್ಟಾಗಿದ್ದು, ಎಲ್ಲರೂ ಸೇರಿ ಆ ಇಬ್ಬರು ಮಹಿಳೆಯರನ್ನು ಸಭಾಂಗಣದಿಂದ ಹೊರಗೆ ಕಳುಹಿಸಿದರು.

ಈ ಬಗ್ಗೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಕಾಂಗ್ರೆಸ್‌ನವರು ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ. ಯಾರೋ ಹೆಣ್ಣು ಮಕ್ಕಳನ್ನು ಕಳುಹಿಸಿ ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದ್ದರು.

Continue Reading
Advertisement
Job Alert
ಉದ್ಯೋಗ24 seconds ago

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Kalaburagi MP Dr. Umesh Jadav spoke in booth level workers meeting Chittapur assembly constituency
ಕಲಬುರಗಿ3 mins ago

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Maddur MLA Uday election campaign in various places of Maddur taluk
ಮಂಡ್ಯ7 mins ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Lok Sabha Election 2024 HD DeveGowda Congress cries out at HD DeveGowda Complaint to Election Commission
Lok Sabha Election 202411 mins ago

Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

jain monk
ಪ್ರಮುಖ ಸುದ್ದಿ17 mins ago

Viral Video: ಮೆರವಣಿಗೆಯಲ್ಲಿ ಸಾಗಿ 200 ಕೋಟಿ ರೂ. ಜನರ ಮೇಲೆ ಸುರಿದ ಜೈನ ದಂಪತಿ; ವಿಡಿಯೊ ವೈರಲ್​

Summer Fashion
ಫ್ಯಾಷನ್18 mins ago

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌

Ram Navami
ಧಾರ್ಮಿಕ42 mins ago

Ram Navami: ನಾಳೆ ದೇಶಾದ್ಯಂತ ರಾಮ ನವಮಿ ಸಂಭ್ರಮ; ಈ ದಿನದ ಮಹತ್ವವೇನು ಗೊತ್ತೇ ?

Indian stock market
ವಾಣಿಜ್ಯ46 mins ago

Indian stock market: ಸೆನ್ಸೆಕ್ಸ್ ಕುಸಿತ: ಭಾರತೀಯ ಷೇರು ಮಾರುಕಟ್ಟೆಗೆ ಭಾರಿ ಹೊಡೆತ

Air India
ದೇಶ51 mins ago

Air India: ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಏರ್​ ಇಂಡಿಯಾ ವಿಮಾನಗಳ ಹಾರಾಟ; ಅಧಿಕಾರಿಗಳು ಹೇಳಿದ್ದೇನು?

Physical Abuse From husband
ಬೆಂಗಳೂರು51 mins ago

Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ13 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌