Bangalore Kambala : ಬೆಂಗಳೂರು ಕಂಬಳಕ್ಕೆ ರೆಡಿ; 300 ಕೋಣಗಳ ಅಬ್ಬರ, 8 ಲಕ್ಷ ಜನರ ಸಂಭ್ರಮ - Vistara News

ಕರ್ನಾಟಕ

Bangalore Kambala : ಬೆಂಗಳೂರು ಕಂಬಳಕ್ಕೆ ರೆಡಿ; 300 ಕೋಣಗಳ ಅಬ್ಬರ, 8 ಲಕ್ಷ ಜನರ ಸಂಭ್ರಮ

Bangalore Kambala : ಬೆಂಗಳೂರಿನಲ್ಲಿ ನವೆಂಬರ್‌ 25 ಮತ್ತು 26ರಂದು ನಡೆಯಲಿರುವ ವೈಭವದ ಕಂಬಳಕ್ಕಾಗಿ ಸರ್ವ ಸಿದ್ಧತೆಗಳು ನಡೆಯುತ್ತಿವೆ. 300 ಕೋಣಗಳು ಈ ಕಂಬಳದಲ್ಲಿ ಭಾಗವಹಿಸಲಿದ್ದು 8 ಲಕ್ಷ ಮಂದಿ ಇದನ್ನು ವೀಕ್ಷಿಸಲು ಆಗಮಿಸುವ ನಿರೀಕ್ಷೆ ಇದೆ.

VISTARANEWS.COM


on

Bangalore Kambala on Nov. 25, 26
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರಾವಳಿಯ ಜಾನಪದ ಮತ್ತು ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ವೈಭವವನ್ನು (Kambala Sports) ರಾಜಧಾನಿಯಲ್ಲಿ ಸಾಕಾರಗೊಳಿಸಿ ಇಡೀ ಜಗತ್ತಿಗೆ ಉಣಬಡಿಸುವ ಮಹತ್ವಾಕಾಂಕ್ಷೆ ಹೊತ್ತಿರುವ ಬೆಂಗಳೂರು ಕಂಬಳಕ್ಕೆ (Bangalore Kambala) ದಿನ ಸನ್ನಿಹಿತವಾಗುತ್ತಿದೆ. ನವೆಂಬರ್‌ 25 ಮತ್ತು 26ರಂದು ಅದ್ಧೂರಿ ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದಲ್ಲಿ (Bangalore Palace Ground) ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ಹಿಂದಿನಿಂದಲೂ ಕುತೂಹಲ ಮೂಡಿಸಿದ್ದ, ಕಾಂತಾರ ಸಿನಿಮಾದ (Kantara Movie) ಮೂಲಕ ಇಡೀ ದೇಶದ ಗಮನ ಸೆಳೆದ ಕಂಬಳ ಈಗ ರಾಜಧಾನಿಯಲ್ಲಿ ಹೊಸ ದಾಖಲೆ ಬರೆಯಲು ʻಕರೆ” ಸಜ್ಜಾಗುತ್ತಿದೆ.

Bangalore Kambala

ಅರಮನೆ ಮೈದಾನದ ಸುಮಾರು 70 ಎಕರೆ ಪ್ರದೇಶದಲ್ಲಿ ಕಂಬಳಕ್ಕಾಗಿ ಸರ್ವ ವ್ಯವಸ್ಥೆಗಳನ್ನು ಮಾಡಲಾಗಿದೆ. 155 ಮೀಟರ್‌ ಉದ್ದದ ಕಂಬಳ ಕರೆಗಳ ನಿರ್ಮಾಣ ಪೂರ್ಣವಾಗಿದೆ. ಕಂಬಳಕ್ಕೆ 150 ಜೋಡಿ ಕೋಣಗಳು ಆಗಮಿಸಲಿದ್ದು, ಅವುಗಳ ವಿಶ್ರಾಂತಿ ಮತ್ತು ಆಹಾರಕ್ಕೆ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಜರುಗುವ ಕಂಬಳವನ್ನು ಸುಮಾರು 8 ಮಂದಿ ವೀಕ್ಷಿಸುವ ನಿರೀಕ್ಷೆ ಇದೆ.

Bangalore Kambala

ಈ ಕಂಬಳದ ವೀಕ್ಷಣೆಗೆ ಜನಪ್ರತಿನಿಧಿಗಳು, ರಾಜಕಾರಣಿಗಳು, ಚಿತ್ರ ನಟ-ನಟಿಯರು, ಅಧಿಕಾರಿಗಳು, ಅತಿ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದಾರೆ. ಕಂಬಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ತುಳುನಾಡಿನ ಬದುಕಿನ ವಸ್ತು ಪ್ರದರ್ಶನ, ತುಳುನಾಡೂ ಸೇರಿದಂತೆ ಇಡೀ ರಾಜ್ಯದ ವೈವಿಧ್ಯಗಳನ್ನು ಒಳಗೊಂಡ ಆಹಾರ ಮೇಳವೂ ಇರಲಿದೆ. ಶನಿವಾರ ಬೆಳಗ್ಗೆ 10.30ರಿಂದ ಆರಂಭಗೊಳ್ಳುವ ಕಂಬಳ ರಾತ್ರಿ ಇಡೀ ಹೊನಲು ಬೆಳಕಿನಲ್ಲಿ ನಡೆದು ಮರುದಿನ ಮಧ್ಯಾಹ್ನದ ಹೊತ್ತಿಗೆ ಮುಕ್ತಾಯವಾಗುವ ನಿರೀಕ್ಷೆ ಇದೆ.

ಕಂಬಳಕ್ಕೆ ಬರುವವರಲ್ಲಿ ಎಂಟು ಸಾವಿರ ಮಂದಿಗೆ ಕುಳಿತುಕೊಳ್ಳುವ ಆಸನದ ವ್ಯವಸ್ಥೆ ಮಾಡಲಾಗಿದೆ. 2000 ವಿಐಪಿಗಳು ಆಗಮಿಸಲಿದ್ದು ಅವರಿಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಈ ಕಂಬಳಕ್ಕೆ ಎಲ್ಲರಿಗೂ ಮುಕ್ತ ಪ್ರವೇಶವಿದೆ.

23ರಂದು ಹೊರಡಲಿದೆ 15೦ ಜೋಡಿ ಕೋಣಗಳ ಮೆರವಣಿಗೆ

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದಲ್ಲಿ 150 ಜೋಡಿ ಕೋಣಗಳು ಭಾಗವಹಿಸಲಿವೆ. ಕಂಬಳದಲ್ಲಿ ಪಾಲ್ಗೊಳ್ಳುವ ಕೋಣಗಳನ್ನು ನ. 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಿಂದ ಜತೆಯಾಗಿ ಹೊರಡಲಿವೆ. ಅಲ್ಲಿ 150 ಲಾರಿಗಳಲ್ಲಿ ಕೋಣಗಳು ಜತೆಯಾಗಿ ಮೆರವಣಿಗೆ ಮೂಲಕ ಹೊರಡಲಿವೆ. ದಕ್ಷಿಣ ಕನ್ನಡ ಜಿಲ್ಲಾಡಳಿತವೇ ಈ ಮೆರವಣಿಗೆಗೆ ಹಸಿರು ನಿಶಾನೆ ತೋರಿಸುವ ಸಾಧ್ಯತೆ ಇದೆ.

Bangalore Kambala

ನವೆಂಬರ್ 23ರಂದು ಬೆಳಗ್ಗೆ 10 ಗಂಟೆಗೆ ಉಪ್ಪಿನಂಗಡಿಯಿಂದ ಕೋಣಗಳು ಲಾರಿಯಲ್ಲಿ ಹೊರಡಲಿದ್ದು ಹಾಸನದಲ್ಲಿ ಅವುಗಳಿಗೆ ಭವ್ಯ ಸ್ವಾಗತಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಎರಡು ಗಂಟೆಗಳ ಕಾಲ ವಿಶ್ರಾಂತಿಯ ಬಳಿಕ ಅಲ್ಲಿಂದ ಬೆಂಗಳೂರಿನ ಕಡೆ ಪ್ರಯಾಣ ಮುಂದುವರಿಯಲಿದೆ. ನೆಲಮಂಗಲದಲ್ಲಿ ರಾತ್ರಿ ಕೆಲಹೊತ್ತು ವಿಶ್ರಾಂತಿ ಪಡೆದು ಆಹಾರ ಸೇವನೆಯ ಬಳಿಕ ಪ್ರಯಾಣ ಮುಂದುವರಿಯಲಿದೆ. ನಡುರಾತ್ರಿಯ ವೇಳೆ ಅರಮನೆ ಮೈದಾನದಲ್ಲಿ ಏಕಕಾಲದಲ್ಲಿ 300 ಜೋಡಿ ಕೋಣಗಳು ಮತ್ತು ಅವುಗಳ ಜತೆಗಿರುವ ಸುಮಾರು 5000 ಜನರು ಇಳಿಯಲಿದ್ದಾರೆ.

ಈಗಾಗಲೇ ಕಂಬಳದಲ್ಲಿ ವೈಭವವನ್ನು ಮೆರೆದಿರುವ ಪ್ರಶಸ್ತಿಗಳನ್ನು ಪಡೆದಿರುವ ನೂರು ಜೋಡಿ ಕೋಣಗಳು ಇಲ್ಲಿರಲಿವೆ. ಜತೆಗೆ ಇದೇ ಕೂಟದಲ್ಲಿ ಮೊದಲ ಬಾರಿ ಕರೆಗಿಳಿಯುವ 15 ಜೋಡಿಗಳು ಕೋಣಗಳೂ ಕೂಡಾ ಸಿದ್ಧವಾಗಿವೆ.

ಯಾವ ಯಾವ ವಿಭಾಗದಲ್ಲಿ ಸ್ಪರ್ಧೆ? ಬಹುಮಾನ ಎಷ್ಟು?

ಹಗ್ಗ (ಕಿರಿಯ ಮತ್ತು ಹಿರಿಯ ವಿಭಾಗ), ನೇಗಿಲು (ಕಿರಿಯ ಮತ್ತು ಹಿರಿಯ ವಿಭಾಗ), ಅಡ್ಡಹಲಗೆ ಮತ್ತು ಆಕಾಶದೆತ್ತರಕ್ಕೆ ನೀರು ಚಿಮ್ಮಿಸುವ ಕನಹಲಗೆ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ.

ಗೆದ್ದ ಕೋಣಗಳ ಮಾಲೀಕರಿಗೆ ಪ್ರಥಮ ಬಹುಮಾನವಾಗಿ 16 ಗ್ರಾಂ ಚಿನ್ನದ ಪದಕ ಮತ್ತು 1 ಲಕ್ಷ ರೂ. ನಗದು ಬಹುಮಾನವಿದ್ದರೆ, ದ್ವಿತೀಯ ಸ್ಥಾನ ಪಡೆದವರಿಗೆ 8 ಗ್ರಾಂ ಚಿನ್ನದ ಪದಕ ಮತ್ತು 50 ಸಾವಿರ ನಗದು ಸಿಗಲಿದೆ. ತೃತೀಯ ಸ್ಥಾನಿಗಳಿಗೆ 4 ಗ್ರಾಂ ಚಿನ್ನದ ಪದಕ ಮತ್ತು 25 ಸಾವಿರ ನಗದು ದೊರೆಯಲಿದೆ. ಎಲ್ಲ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಬಹುಮಾನವಿರುತ್ತದೆ.

ಕಂಬಳದಲ್ಲಿ ಬಗೆಬಗೆಯ ಆಹಾರ ಮೇಳ

ಕಂಬಳದಲ್ಲಿ ಕೋಣಗಳ ಓಟದ ವೈಭವವನ್ನು ಕಣ್ತುಂಬಿಕೊಳ್ಳಲು ಬರುವವರಿಗೆ ಕೋಣಗಳ ಓಟದ ಅಬ್ಬರವನ್ನು ವೀಕ್ಷಿಸುವುದರ ಜೊತೆಗೆ ಬಗೆಬಗೆಯ ಖಾದ್ಯಗಳನ್ನು ಸವಿಯಬಹುದಾಗಿದೆ. ಕರಾವಳಿ ಭಾಗದಲ್ಲಿ ಪ್ರಸಿದ್ಧವಾಗಿರುವ ಕೋರಿ ರೊಟ್ಟಿ, ಪುಂಡಿ, ಗಸಿ, ಪತ್ರೊಡೆ, ಅಕ್ಕಿ ಸೇಮಿಗೆ ಸೇರಿದಂತೆ ನಾನಾ ಖಾದ್ಯಗಳು ಮೇಳೈಸಲಿವೆ. ರಾಜ್ಯದ ಎಲ್ಲ ಭಾಗಗಳ ತಿಂಡಿ ತಿನಿಸುಗಳು ಕೂಡಾ ಮೇಳದಲ್ಲಿ ಇರಲಿವೆ. ಸುಮಾರು ಐದು ಎಕರೆ ಪ್ರದೇಶದಲ್ಲಿ ಆಹಾರ ಮೇಳ ನಡೆಯಲಿದೆ.

ಇದನ್ನೂ ಓದಿ : Bangalore Kambala : ಬೆಂಗಳೂರು ಕಂಬಳದಿಂದ ವಿವಾದಿತ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಔಟ್‌

Bangalore Kambala Anushka Shetty and Aishwarya rai

ಕಂಬಳಕ್ಕೆ ಬರಲಿದ್ದಾರೆ ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ

ಬೆಂಗಳೂರಿನ ಕಂಬಳಕ್ಕೆ ಸ್ಯಾಂಡಲ್‌ವುಡ್‌ ಮಾತ್ರವಲ್ಲ ಬಾಲಿವುಡ್ ಸೇರಿದಂತೆ ಪ್ಯಾನ್‌ ಇಂಡಿಯಾ ಸ್ಟಾರ್‌ಗಳು ಬರಲಿದ್ದಾರೆ. ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ ಕಂಬಳ ನೋಡಲು ಬರುತ್ತಾರೆ ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Drowned in Water: ಹಂಪಿಯ ಸ್ನಾನಘಟ್ಟದ ಬಳಿ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದವನನ್ನು ರಕ್ಷಿಸಲು ಹೋಗಿದ್ದ ಯುವಕ ಮುಳುಗಿ ಮೃತಪಟ್ಟಿದ್ದಾನೆ. ಮೈಸೂರು ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ವಿಜಯಪುರದ ಸಂಜು (24) ಮೃತ ದುರ್ದೈವಿ. ಮೈಸೂರಿನಿಂದ ಹಂಪಿಗೆ ಬಂದಿದ್ದ 12 ಜನರ ಕುಟುಂಬ ಸದಸ್ಯರು, ವಿರೂಪಾಕ್ಷೇಶ್ವರ ಗುಡಿ ಸಮೀಪದಲ್ಲಿ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.

VISTARANEWS.COM


on

Drowned in Water young man drowned in tungabhadra river and died
Koo

ವಿಜಯನಗರ (ಹೊಸಪೇಟೆ): ಹಂಪಿಯ ಸ್ನಾನಘಟ್ಟದ ಬಳಿ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದವನನ್ನು ರಕ್ಷಿಸಲು ಹೋಗಿದ್ದ ಯುವಕ ಮುಳುಗಿ (Drowned in Water) ಮೃತಪಟ್ಟಿರುವ ಘಟನೆ ಜರುಗಿದೆ.

ಮೈಸೂರು ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ವಿಜಯಪುರದ ಸಂಜು (24) ಮೃತ ದುರ್ದೈವಿ. ಮೈಸೂರಿನಿಂದ ಹಂಪಿಗೆ ಬಂದಿದ್ದ 12 ಜನರ ಕುಟುಂಬ ಸದಸ್ಯರು, ವಿರೂಪಾಕ್ಷೇಶ್ವರ ಗುಡಿ ಸಮೀಪದಲ್ಲಿ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಮನ್ವಿತ್ ಎಂಬಾತ ಕಾಲು ಜಾರಿ ನದಿಗೆ ಬಿದ್ದಿದ್ದು, ಈತನನ್ನು ರಕ್ಷಿಸಲು ಹೋದ ಸಂಜು ಕೂಡ ಮುಳುಗಿದ್ದಾನೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ. ಈ ವೇಳೆ ಸ್ಥಳೀಯರಾದ ಮರಿಸ್ವಾಮಿ ಮತ್ತು ವೆಂಕಟೇಶ್ ಎಂಬುವವರು ಇಬ್ಬರನ್ನೂ ನೀರಿನಿಂದ ರಕ್ಷಣೆ ಮಾಡಿ ಹೊರತಂದರು.

ಇದನ್ನೂ ಓದಿ: SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

ಮೊದಲು ನದಿಗೆ ಬಿದ್ದಿದ್ದ ಮನ್ವಿತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಂಜುನನ್ನು ಕಮಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದ ವೇಳೆ ಮೃತಪಟ್ಟಿರುವ ಕುರಿತು ವೈದ್ಯರು ಖಚಿತಪಡಿಸಿದ್ದಾರೆ. ಈ ಕುರಿತು ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ನಾಲ್ವರು ಸೇರಿ 9 ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ 9 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61) ಆಶಾ ಸುಧಾಕರ್ (72)‌, ಪದ್ಮನಾಭನ್‌ ಕೆಪಿಎಸ್‌ (50), ವಿನಾಯಕ್‌ ಎಂದು ಗುರುತಿಸಲಾಗಿದೆ. ಇನ್ನು ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್‌, ಸ್ಮೃತಿ, ಸೀನಾ ಸೇರಿ ಹಲವರನ್ನು ರಕ್ಷಣೆ ಮಾಡಲಾಗಿದೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಸಹಸ್ತ್ರ ತಾಲ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದಾರರೆ. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ 9 ಮಂದಿ ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಪ್ರಸ್ತುತ ಕೆಲವರು ಈಗ ಕೊಹ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ. ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Kannada New Movie: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Operation London Cafe movie will be released very soon
Koo

ಬೆಂಗಳೂರು: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು (Kannada New Movie) ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

ಕವೀಶ್ ಮತ್ತು ಮೇಘಾ ಶೆಟ್ಟಿ ಜತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ. ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.

ಇದನ್ನೂ ಓದಿ: R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಕರ್ನಾಟಕ

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

HD Kumaraswamy: ಎನ್‌ಡಿಎ ಸಭೆಯ ಬಳಿಕ ಬೆಂಗಳೂರಿಗೆ ತೆರಳುವ ಮೊದಲು ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು. “ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಿತು. ನರೇಂದ್ರ ಮೋದಿ ಅವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೊಂದು ವೇಳೆ, ನರೇಂದ್ರ ಮೋದಿ ಅವರು ಬಯಸಿದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ” ಎಂಬುದಾಗಿ ಮನದ ಆಸೆಯನ್ನು ಬಿಚ್ಚಿಟ್ಟಿದ್ದಾರೆ.

VISTARANEWS.COM


on

HD Kumaraswamy
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ನವದೆಹಲಿಯಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಮಿತ್ರಪಕ್ಷಗಳ (NDA Meeting) ಸಭೆ ನಡೆದಿದೆ. ಸಭೆಯಲ್ಲಿ ಭಾಗವಹಿಸಿದ ಎಲ್ಲ ಪಕ್ಷಗಳ ನಾಯಕರು ನರೇಂದ್ರ ಮೋದಿ (Narendra Modi) ಅವರನ್ನು ಪ್ರಧಾನಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ. ಒಂದು ಸಾಲಿನ ನಿರ್ಣಯಕ್ಕೂ ಅಂಗೀಕಾರ ಹಾಕಿದ್ದಾರೆ. ಇದರೊಂದಿಗೆ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಚಿತವಾಗಿದೆ. ಇದರ ಬೆನ್ನಲ್ಲೇ, “ನಾನೂ ಮಂತ್ರಿಯಾಗಲು ರೆಡಿ” ಎಂಬುದಾಗಿ ಎನ್‌ಡಿಎ ಸಭೆಯ ಬಳಿಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಮನದಾಸೆಯನ್ನು ಬಿಚ್ಚಿಟ್ಟಿದ್ದಾರೆ.

ಎನ್‌ಡಿಎ ಸಭೆಯ ಬಳಿಕ ಬೆಂಗಳೂರಿಗೆ ತೆರಳುವ ಮೊದಲು ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು. “ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಿತು. ನರೇಂದ್ರ ಮೋದಿ ಅವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೊಂದು ವೇಳೆ, ನರೇಂದ್ರ ಮೋದಿ ಅವರು ಬಯಸಿದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ” ಎಂಬುದಾಗಿ ಅವರು ಹೇಳಿದರು. ಕರ್ನಾಟಕದಲ್ಲಿ ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಮಾಡಿಕೊಂಡಿರುವುದರಿಂದ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಕೂಡ ಸಹಕಾರಿಯಾಗಿದೆ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ಮೋದಿಗೆ ಎಲ್ಲರ ಬೆಂಬಲ

ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಎಲ್ಲ ಪಕ್ಷಗಳ ನಾಯಕರು ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಿಸಿದರು. ಮೈತ್ರಿಕೂಟದ ಸರ್ಕಾರ ರಚನೆಗೆ ಕುರಿತು ತೆಗೆದುಕೊಂಡ ಒಂದು ಸಾಲಿನ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಿದರು. ಖಾತೆ ಹಂಚಿಕೆ, ಯಾವ ಖಾತೆ ಯಾರಿಗೆ ನೀಡಬೇಕು ಎಂಬುದರ ಕುರಿತು ಆಮೇಲೆ ನೋಡಿಕೊಳ್ಳೋಣ. ಮೊದಲು ಸರ್ಕಾರ ರಚನೆಯಾಗಲಿ ಎಂಬುದಾಗಿ ಎಲ್ಲ ನಾಯಕರು ಮೋದಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ತೆಗೆದುಕೊಂಡ ನಿರ್ಣಯ

‌ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸಭೆ ನಡೆಯಿತು. ತೆಲುಗುದೇಶಂ ಪಕ್ಷದ (TDP), ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌, ಆರ್‌ಎಲ್‌ಡಿಯ ಜಯಂತ್‌ ಚೌಧರಿ, ಜನಸೇನಾ ಪಕ್ಷದ ಪವನ್‌ ಕಲ್ಯಾಣ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಎಲ್ಲರೂ ಒಗ್ಗೂಡಿ ಸರ್ಕಾರ ರಚಿಸುವುದು, ಒಗ್ಗಟ್ಟಿನಿಂದ ಇರುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚೆಯಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Narendra Modi: ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Continue Reading

ಕರ್ನಾಟಕ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

Toyota: ವಿಶ್ವ ಪರಿಸರ ದಿನದ ಅಂಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪರಿಸರ ಪ್ರಜ್ಞೆಯನ್ನು ಮತ್ತಷ್ಟು ಬೆಳೆಸಲು, ಹಸಿರು, ಸುಸ್ಥಿರ ಭವಿಷ್ಯವನ್ನು ಪ್ರತಿಪಾದಿಸಲು ಈ ವರ್ಷದ ಜೂನ್ ತಿಂಗಳನ್ನು ಟೊಯೊಟಾ ಪರಿಸರ ಮಾಸಾಚರಣೆ ಆರಂಭಿಸಿದೆ. ಪರಿಸರ ನಿರ್ವಹಣೆಯ ಕುರಿತು ಜಾಗೃತಿ ಮತ್ತು ಕಾರ್ಯಕ್ರಮಗಳನ್ನು ಹೆಚ್ಚಿಸುವ ಗುರಿಯನ್ನು ಇದು ಹೊಂದಿದೆ.

VISTARANEWS.COM


on

Environment Month celebration by Toyota Kirloskar Motor
Koo

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ)ನಿಂದ ಪರಿಸರ ಪ್ರಜ್ಞೆಯನ್ನು ಮತ್ತಷ್ಟು ಬೆಳೆಸುವುದು ಮತ್ತು ಹಸಿರು, ಸುಸ್ಥಿರ ಭವಿಷ್ಯವನ್ನು ಪ್ರತಿಪಾದಿಸಲು ಜೂನ್ 2024ಅನ್ನು ಟೊಯೊಟಾ (Toyota Kirloskar Motor) ಪರಿಸರ ಮಾಸಾಚರಣೆ ಪ್ರಾರಂಭಿಸಲಾಗಿದೆ.

ಟೊಯೊಟಾ ಎನ್ವಿರಾನ್‌ಮೆಂಟ್ ಚಾಲೆಂಜ್ 2050 (ಟಿಇಸಿ 2050) ಮತ್ತು ಈ ವರ್ಷದ ಥೀಮ್ “ಜಾಗತಿಕ ನಂ.1 ಆಗಲು ಜವಾಬ್ದಾರಿಯುತ ಸಂಪನ್ಮೂಲ ಬಳಕೆಗಾಗಿ ಒಗ್ಗೂಡಿ” ಎಂಬ ಧ್ಯೇಯ ವಾಕ್ಯದೊಂದಿಗೆ ತನ್ನ ದೀರ್ಘಕಾಲೀನ ದೃಷ್ಟಿಕೋನದ ಕಾರ್ಯಕ್ರಮಗಳ ಮೂಲಕ ಕಂಪನಿಯು ನೀರಿನ ನಿರ್ವಹಣೆ ಮತ್ತು ಅರಣ್ಯೀಕರಣದ ಮೂಲಕ ನೈಸರ್ಗಿಕ ಪರಿಸರ ವ್ಯವಸ್ಥೆಯ ಪುನರುಜ್ಜೀವನದ ಮೇಲೆ ಪ್ರಮುಖ ಗಮನ ಹರಿಸಿದೆ.

ಪರಿಸರ ನಿರ್ವಹಣೆಯ ಕುರಿತು ಜಾಗೃತಿ ಮತ್ತು ಕಾರ್ಯಕ್ರಮಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದು “ನಮ್ಮ ಭೂಮಿ, ನಮ್ಮ ಭವಿಷ್ಯ” ಎಂಬ ಘೋಷಣೆ ಸುತ್ತುವರೆದಿರುವ ಭೂ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವದ ನಿರ್ಣಾಯಕ ಸಮಸ್ಯೆಗಳನ್ನು ಒತ್ತಿ ಹೇಳುತ್ತದೆ.

ಇದನ್ನೂ ಓದಿ: Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

ಹಲವು ವರ್ಷಗಳಿಂದ ಟಿಕೆಎಂ ಪ್ರಜ್ಞಾಪೂರ್ವಕವಾಗಿ ಸುಸ್ಥಿರ ವ್ಯವಹಾರ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಕಾರು ತಯಾರಕರಿಂದ ಚಲನಶೀಲತೆ ಕಂಪನಿಯಾಗಿ ರೂಪಾಂತರಗೊಂಡಿದೆ. ಭೂ ಗ್ರಹವನ್ನು ಗೌರವಿಸುವ ತತ್ವವನ್ನು ಗಮನದಲ್ಲಿಟ್ಟುಕೊಂಡು, ಟೊಯೊಟಾ ಜಾಗತಿಕವಾಗಿ ಅಕ್ಟೋಬರ್ 2015 ರಲ್ಲಿ ‘ಟೊಯೊಟಾ ಎನ್ವಿರಾನ್‌ಮೆಂಟ್ ಚಾಲೆಂಜ್ 2050’ (ಟಿಇಸಿ 2050) ಅನ್ನು ಘೋಷಿಸಿತು. ಇದು ಆರು ಪರಿಸರ ಸವಾಲುಗಳನ್ನು ಒಳಗೊಂಡಿದೆ. ಮೊದಲ ಮೂರು ಸವಾಲುಗಳು – ನಮ್ಮ ಉತ್ಪನ್ನಗಳಿಂದ ಇಂಗಾಲದ ತಟಸ್ಥತೆಯನ್ನು ಸಾಧಿಸುವುದರ ಮೇಲೆ ಕೇಂದ್ರೀಕರಿಸುತ್ತದೆ, ಮತ್ತು ಉತ್ಪಾದನಾ ಚಟುವಟಿಕೆಗಳು ಸೇರಿದಂತೆ ಅದರ ಸಂಪೂರ್ಣ ಮೌಲ್ಯ ಸರಪಳಿಯನ್ನು ಒಳಗೊಂಡಿದೆ.

ನಂತರದ 3 ಸವಾಲುಗಳು ನೀರಿನ ಬಳಕೆಯನ್ನು ಕಡಿಮೆ ಮಾಡುವ ಮತ್ತು ಉತ್ತಮಗೊಳಿಸುವ ಮೂಲಕ, ಮರುಬಳಕೆ ಆಧಾರಿತ ಸಮಾಜವನ್ನು ಸಕ್ರಿಯಗೊಳಿಸುವುದು ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯ’ದಲ್ಲಿ ಭವಿಷ್ಯದ ಸಮಾಜವನ್ನು ಸ್ಥಾಪಿಸುವ ಮೂಲಕ ಸಕಾರಾತ್ಮಕ ಪರಿಣಾಮವನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ.

ನಮ್ಮ ಸಂಪನ್ಮೂಲಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವ ಗುರಿಯೊಂದಿಗೆ, ಟಿಕೆಎಂ ಸಮಗ್ರ ವಿಧಾನವನ್ನು ಅಳವಡಿಸಿಕೊಂಡಿದೆ. ಉತ್ಪಾದನೆಗೆ ಅಗತ್ಯವಿರುವ 95% ನೀರನ್ನು ಮರುಬಳಕೆ ಮತ್ತು ಮಳೆನೀರು ಕೊಯ್ಲು ಮೂಲಕ ಪೂರೈಸಲಾಗುತ್ತದೆ. ಇದಲ್ಲದೆ, ಟಿಕೆಎಂ ತ್ಯಾಜ್ಯದ ಮರುಬಳಕೆಯನ್ನು 96% ವರೆಗೆ ಹೆಚ್ಚಿಸುವುದರೊಂದಿಗೆ ಮರುಬಳಕೆ ಆಧಾರಿತ ಸಮಾಜವನ್ನು ಉತ್ತೇಜಿಸುತ್ತಿದೆ.

ಇದನ್ನೂ ಓದಿ: India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಪರಿಸರದ ಮೇಲ್ವಿಚಾರಕರಾಗಿ ಕಂಪನಿಯು ಪ್ರಕೃತಿ ಸಂರಕ್ಷಣೆಯಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಹಲವು ವರ್ಷಗಳಿಂದ ಟಿಕೆಎಂ ಮಿಯಾವಾಕಿ ಪರಿಕಲ್ಪನೆಯನ್ನು ಬಳಸಿಕೊಂಡು ತನ್ನ ಕಾರ್ಖಾನೆ ಆವರಣದಲ್ಲಿ 112 ಎಕರೆಗಳಲ್ಲಿ 328,000 ಕ್ಕೂ ಹೆಚ್ಚು ಮರಗಳನ್ನು ನೆಟ್ಟಿದೆ. ಇದು “ಸಂಭಾವ್ಯ ನೈಸರ್ಗಿಕ ಸಸ್ಯವರ್ಗ” ಪರಿಕಲ್ಪನೆಯ ಆಧಾರದ ಮೇಲೆ ಕಾಡುಗಳನ್ನು ಪುನಃಸ್ಥಾಪಿಸುವ ಮತ್ತು ಪುನರ್ನಿರ್ಮಿಸುವತ್ತ ಗಮನ ಹರಿಸುತ್ತದೆ.

ಸ್ಥಳೀಯ ಜೀವವೈವಿಧ್ಯತೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಲು ಟಿಕೆಎಂ ಅತ್ಯಾಧುನಿಕ ‘ಪರಿಸರ ವಲಯ’ ಎಂಬ ಪ್ರಾಯೋಗಿಕ ಕಲಿಕಾ ಕೇಂದ್ರವನ್ನು ಸ್ಥಾಪಿಸಿದೆ. ಇದು ಟಿಕೆಎಂನ ಸ್ಥಾವರದಲ್ಲಿ 17 ಥೀಮ್ ಪಾರ್ಕ್‌ಗಳನ್ನು ಹೊಂದಿದೆ. ಹವಾಮಾನ ಬದಲಾವಣೆ, ಕಸದಿಂದ-ರಸ, ಪರಿಸರ ಸಮತೋಲನ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಪ್ರಕೃತಿ ಸಂರಕ್ಷಣೆಯ ವಿವಿಧ ಅಂಶಗಳ ಬಗ್ಗೆ ಜ್ಞಾನ ಹಂಚಿಕೆಯ ಮೂಲಕ ಕೊಡುಗೆ ನೀಡುತ್ತಲೇ ಇದೆ.

ಬಿಡದಿ ಮತ್ತು ರಾಮನಗರ ಪ್ರದೇಶಗಳಲ್ಲಿನ ಉದ್ಯೋಗಿಗಳು ಮತ್ತು ಅವರ ಕುಟುಂಬಗಳು, ವ್ಯವಹಾರ ಸಹವರ್ತಿಗಳು, ಟೊಯೋಟಾ ಗ್ರೂಪ್ ಕಂಪನಿಗಳ ಸದಸ್ಯರು, ಶಾಲಾ ಮಕ್ಕಳು ಮತ್ತು ಸಮುದಾಯದ ಸದಸ್ಯರು ಸೇರಿದಂತೆ ಮಧ್ಯಸ್ಥಗಾರರಲ್ಲಿ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸಲು “ಟೊಯೊಟಾ ಸ್ವಚ್ಛ ಅಭಿಯಾನ, “ರಾರ್” (ಜವಾಬ್ದಾರಿಯಾಗಿ ಮರುಬಳಕೆ / ಉದಾ. ಕಚೇರಿ ಸಮವಸ್ತ್ರ ಮರುಬಳಕೆ), ಟೊಯೊಟಾ ಇಕೋ ಕ್ಲಬ್, ಇಕೋ ಫ್ಯಾಮಿಲಿ ವಾಕ್ (ಪರಿಸರ ವಲಯ) ಮುಂತಾದ ಚಟುವಟಿಕೆಗಳನ್ನು ಇಡೀ ತಿಂಗಳು ಆಯೋಜಿಸಲಾಗಿದೆ.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಉತ್ಪಾದನಾ ನಿರ್ದೇಶಕ ಬಿ.ಪದ್ಮನಾಭ ಟಿಕೆಎಂನ ಪರಿಸರ ಮಾಸಾಚರಣೆ ಕುರಿತು ಮಾತನಾಡಿ, “ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಲ್ಲಿ ಆರ್ಥಿಕ ಪ್ರಗತಿಯಷ್ಟೇ ಅಲ್ಲದೆ, ಪರಿಸರ ಮತ್ತು ಸಾಮಾಜಿಕ ಸುಸ್ಥಿರತೆಯೂ ನಿರ್ಣಾಯಕವಾಗಿದೆ ಎಂದು ನಾವು ಗುರುತಿಸುತ್ತೇವೆ. ಟೊಯೊಟಾ ಜಾಗತಿಕವಾಗಿ ಪರಿಹರಿಸಲು ಪ್ರಯತ್ನಿಸುತ್ತಿರುವ ಆರು ಪರಿಸರ ಸವಾಲುಗಳಿಗೆ ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

ಈ ಹಿಂದೆ ಟಿಕೆಎಂ ತನ್ನ ಪರಿಸರ ಬದ್ಧತೆಗಾಗಿ ಆಯಾ ವಿಭಾಗಗಳಲ್ಲಿ ವಿವಿಧ ಪ್ರಶಂಸೆಗಳು / ಮಾನ್ಯತೆಗಳನ್ನು ಪಡೆದಿದೆ. ಟೆರಿ ವಾಟರ್ ಸಸ್ಟೈನಬಿಲಿಟಿ ಪ್ರಶಸ್ತಿ, ಜೀವವೈವಿಧ್ಯತೆಗಾಗಿ ಸಿಐಐ ಸುಸ್ಥಿರತೆ ಪ್ರಶಸ್ತಿ, ನೀರು ಮತ್ತು ಅಪಾಯಕಾರಿ ತ್ಯಾಜ್ಯ ನಿರ್ವಹಣೆಗಾಗಿ ಸಿಐಐ ಪ್ರಶಸ್ತಿ, ನೀರಿನ ನಿರ್ವಹಣೆಯಲ್ಲಿ ಸಿಐಐ-ಎಸ್ಆರ್ ಇಎಚ್ಎಸ್ ಎಕ್ಸಲೆನ್ಸ್ ಪ್ರಶಸ್ತಿ, ಸಿಐಐ ಗ್ರೀನ್ ಕೋ ಪ್ಲಾಟಿನಂ ಕಂಪನಿ ಪರಿಸರ ಶ್ರೇಷ್ಠತೆ ಮತ್ತು ಸುಸ್ಥಿರ ನಾಯಕತ್ವಕ್ಕಾಗಿ ಪ್ರಶಸ್ತಿ, ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದೆ.

Continue Reading
Advertisement
Rahul Dravid
ಕ್ರೀಡೆ6 mins ago

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Drowned in Water young man drowned in tungabhadra river and died
ಕರ್ನಾಟಕ12 mins ago

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Operation London Cafe movie will be released very soon
ಕರ್ನಾಟಕ20 mins ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Lok Sabha Election 2024
ರಾಜಕೀಯ25 mins ago

Lok Sabha Election 2024: ಹಿಂದೂಗಳಿಗೆ ಬುದ್ಧಿ ಇದ್ದಿದ್ದರೆ ಬಿಜೆಪಿ ಇಷ್ಟು ಹಿನ್ನಡೆ ಕಾಣುತ್ತಿರಲಿಲ್ಲ! ವಿಡಿಯೊ ವೈರಲ್‌

HD Kumaraswamy
ಕರ್ನಾಟಕ27 mins ago

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Star Street Fashion
ಫ್ಯಾಷನ್37 mins ago

Star Street Fashion: ಬೆಂಗಳೂರಿನ ರಸ್ತೆಯಲ್ಲಿ ಕಾಂತಾರ ಬೆಡಗಿಯ ಹೈ ಸ್ಟ್ರೀಟ್‌ ಫ್ಯಾಷನ್‌!

Narendra Modi
ದೇಶ54 mins ago

Narendra Modi: ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ?

Vitamin A
ಆರೋಗ್ಯ58 mins ago

Vitamin A: ವಿಟಮಿನ್‌ ಎ ಕೊರತೆಯಾದರೆ ಏನಾಗುತ್ತದೆ?

Pakistan Players
T20 ವಿಶ್ವಕಪ್1 hour ago

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Cabinet meeting
ದೇಶ1 hour ago

Cabinet Meeting: “ನಂಬರ್‌ ಬಗ್ಗೆ ಚಿಂತೆ ಬೇಡ…ಉತ್ತಮ ಕೆಲಸ ಮಾಡಿ”- ನಿರ್ಗಮಿತ ಸಚಿವರಿಗೆ ಮೋದಿ ಕಿವಿಮಾತು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌