Site icon Vistara News

Bangalore Kambala : ಬೆಂಗಳೂರು ಕಂಬಳ ಸಂಪನ್ನ, ಅಂತಿಮ ಫಲಿತಾಂಶ ಇಲ್ಲಿದೆ

Bangalore Kambala Result

ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿ ಕರಾವಳಿಯನ್ನು ಹೊರತುಪಡಿಸಿ ನಡೆದ ಅದ್ಧೂರಿ ಬೆಂಗಳೂರು ಕಂಬಳ (Bangalore Kambala) ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಮುಕ್ತಾಯಗೊಂಡಿದೆ. ನವೆಂಬರ್‌ 25ರ ಬೆಳಗ್ಗೆ 11 ಗಂಟೆಗೆ ಆರಂಭವಾದ ಕೋಣಗಳ ಓಟ ನವೆಂಬರ್‌ 26ರ ರಾತ್ರಿ 2 ಗಂಟೆಗೆ ಅಂತ್ಯಗೊಂಡಿದ್ದು, ಫಲಿತಾಂಶ ಪ್ರಕಟಗೊಂಡಿದೆ (Bangalore Kambala Result) ಎರಡೂ ದಿನಗಳಲ್ಲಿ ಅರಮನೆ ಮೈದಾನದಲ್ಲಿ (Bangalore Palace Grounds) ಕಾಲಿಡಲೂ ಜಾಗವಿಲ್ಲದಂತೆ ಕಂಬಳ ಅಭಿಮಾನಿಗಳು ನೆರೆದಿದ್ದು ಈ ಮೂಲಕ ಹೊಸ ಚರಿತ್ರೆಯನ್ನೇ ಬರೆಯಲಾಗಿದೆ.

159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ (ರಾಜ-ಮಹಾರಾಜ ಕಂಬಳ) ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಸಿ ಕೋಣಗಳು ಪ್ರಥಮ ಬಹುಮಾನ ಪಡೆದರೆ ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು ದ್ವಿತೀಯ ಬಹುಮಾನ ಪಡೆದಿವೆ. ಶ್ರೀಕಾಂತ್‌ ಭಟ್‌ ಅವರ ಕೋಣಗಳನ್ನು ಬಂಬ್ರಾಣ ಬೈಲು ವಂದಿತ್‌ ಶೆಟ್ಟಿ ಅವರು ಓಡಿಸಿದ್ದಾರೆ. ಈ ಕೋಣಗಳು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿವೆ. ಇದು ಕೂಟ ದಾಖಲೆಯಾಗಿದೆ ಮತ್ತು ಈ ಹಿಂದಿನ ದಾಖಲೆಯನ್ನು ಸರಿಗಟ್ಟಿದಂತಾಗಿದೆ. ಈ ಹಿಂದೆ ಬಜಗೋಳಿ ಜೋಗಿಬೆಟ್ಟು ನಿಶಾಂತ್‌ ಶೆಟ್ಟಿ ಅವರು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿದ್ದರು.

ಅಂತಿಮ ಫಲಿತಾಂಶ ಹೀಗಿದೆ ನೋಡಿ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : 159
ಕನೆಹಲಗೆ: 07 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 32 ಜೊತೆ
ಹಗ್ಗ ಕಿರಿಯ: 31 ಜೊತೆ
ನೇಗಿಲು ಕಿರಿಯ: 62 ಜೊತೆ
••••••••••••••••••••••••••••••••••••••••••••••

ಕನೆಹಲಗೆ ವಿಭಾಗ

ಬೊಳ್ಳಂಬಳ್ಳಿ ಶ್ರೀರಾಮ ಚೈತ್ರ ಪರಮೇಶ್ವರ ಭಟ್ “ಬಿ”
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ಅಡ್ಡ ಹಲಗೆ ವಿಭಾಗ

ಪ್ರಥಮ: ಎಸ್.ಎಮ್.ಎಸ್ ಫ್ಯಾಮಿಲಿ ಬೆಂಗಳೂರು
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ ವಿಭಾಗ

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

ಹಗ್ಗ ಕಿರಿಯ ವಿಭಾಗ

ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ ವಿಭಾಗ

ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ
ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರು ಚರಣ್

ನೇಗಿಲು ಕಿರಿಯ ವಿಭಾಗ

ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ಹಗ್ಗ ಹಿರಿಯ ವಿಭಾಗದಲ್ಲಿ ಮೊದಲ ಬಹುಮಾನ ಗೆದ್ದ ನಂದಳಿಕೆ ಟೀಮ್‌

ಇದನ್ನೂ ಓದಿ : Bangalore Kambala: ಬೆಂಗಳೂರು ಕಂಬಳಕ್ಕೆ ರಕ್ಷಿತ್ ಶೆಟ್ಟಿ ಸಪೋರ್ಟ್‌; ತಾರೆಯರ ಸಮಾಗಮ!

ಗೆದ್ದವರಿಗೆ ಬಹುಮಾನ ಎಷ್ಟು?

ಈ ಕೂಟದಲ್ಲಿ ಪ್ರಥಮ ಪ್ರಶಸ್ತಿ ಗೆದ್ದವರಿಗೆ 16 ಪವನ್‌ ಚಿನ್ನ ಮತ್ತು 1 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ. ದ್ವಿತೀಯ ಪ್ರಶಸ್ತಿ ಗೆದ್ದವರಿಗೆ 8 ಪವನ್‌ ಚಿನ್ನ ಮತ್ತು 50 ಸಾವಿರ ರೂ. ಬಹುಮಾನ ನೀಡಲಾಗಿದೆ. ಮೂರನೇ ಬಹುಮಾನವಾಗಿ 4 ಪವನ್‌ ಚಿನ್ನ ಮತ್ತು 25 ಸಾವಿರ ರೂ. ನೀಡಲಾಗುತ್ತದೆ ಎಂದು ಘೋಷಿಸಲಾಗಿತ್ತು.

Exit mobile version