Bangalore-Mysore Highway: ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ಗೊಂದಲ; ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡ ಹೈಕೋರ್ಟ್‌ - Vistara News

ಕರ್ನಾಟಕ

Bangalore-Mysore Highway: ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ಗೊಂದಲ; ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡ ಹೈಕೋರ್ಟ್‌

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಗ್ಗೆ ಅಪಸ್ವರಗಳು ಕೇಳಿಬರುತ್ತಿರುವ ಬೆನ್ನಲ್ಲೇ ಹೈಕೋರ್ಟ್‌ ಸಹ ಈ ಬಗ್ಗೆ ಪ್ರಶ್ನೆ ಮಾಡಿದೆ. ಮಾಧ್ಯಮಗಳ ವರದಿಯಾಧರಿಸಿ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿರುವ ಹೈಕೋರ್ಟ್‌, ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಟೋಲ್‌ ಸಂಗ್ರಹ ಮಾಡುತ್ತಿರುವ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಎನ್‌ಎಚ್‌ಎಐಗೆ ಸೂಚನೆ ನೀಡಿದೆ.

VISTARANEWS.COM


on

Bangalore Mysore Highway Toll collection High Court registers suo motu case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bangalore-Mysore Highway) ಕಾಮಗಾರಿ ಪೂರ್ಣಕ್ಕೆ ಮುನ್ನವೇ ಟೋಲ್ ಸಂಗ್ರಹ ಹಾಗೂ ಫಾಸ್ಟ್‌ಟ್ಯಾಗ್‌ ಇಲ್ಲದೆ ಮ್ಯಾನುವಲ್‌ ಆಗಿ ಟೋಲ್‌ ಸಂಗ್ರಹ ಮಾಡುತ್ತಿರುವ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಹೈಕೋರ್ಟ್‌ ಸೂಚನೆ ನೀಡಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ಸಂಬಂಧ ಕೇಳಿಬಂದ ಆರೋಪಗಳ ಹಿನ್ನೆಲೆಯಲ್ಲಿ ಹಾಗೂ ಮಾಧ್ಯಮಗಳ ವರದಿಯನ್ವಯ ಸುಮೋಟೊ ಪ್ರಕರಣ ದಾಖಲು ಮಾಡಿಕೊಂಡಿರುವ ಹೈಕೋರ್ಟ್ ಎನ್‌ಎಚ್‌ಎಐಗೆ ಈ ಸೂಚನೆ ನೀಡಿದೆ.

ಬೆಂಗಳೂರು-ಕನಕಪುರ ಹೆದ್ದಾರಿ ಕಾಮಗಾರಿ ಕುರಿತಾದ ಪಿಐಎಲ್ ಅನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ. ಈ ವೇಳೆ ಮಾಹಿತಿ ನೀಡಿದ ಎನ್‌ಎಚ್‌ಎಐ, ಹೆದ್ದಾರಿ ಕಾಮಗಾರಿಯನ್ನು ಬೇರೊಂದು ಕಂಪನಿಗೆ ವಹಿಸಲಾಗಿದೆ. ಕಾಮಗಾರಿ ವೇಳೆ ಸುರಕ್ಷತಾ ಕ್ರಮ ಅಳವಡಿಸಿರುವುದಾಗಿ ಹೇಳಿಕೆ ನೀಡಿದೆ.

ಇದನ್ನೂ ಓದಿ: Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಹೆದ್ದಾರಿ ಪ್ರಾಧಿಕಾರದ ಹೇಳಿಕೆ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಹೈಕೋರ್ಟ್, ಕೋರ್ಟ್ ಕಮಿಷನರ್ ಆಗಿ ವಕೀಲ ಶಿವಪ್ರಸಾದ್ ಶಾಂತನಗೌಡರ್ ಅವರನ್ನು ನೇಮಕ ಮಾಡಿದೆ. ಅಲ್ಲದೆ, ವಿಚಾರಣೆಯನ್ನು ಏಪ್ರಿಲ್‌ 11ಕ್ಕೆ ಮುಂದೂಡಿದೆ. ಈ ಪಿಐಎಲ್ ವಿಚಾರಣೆ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿ ವಿಷಯವನ್ನು ಕೋರ್ಟ್‌ ಪ್ರಸ್ತಾಪ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ನಾಳೆ ರಾಜ್ಯಕ್ಕೆ ರಾಹುಲ್‌ ಗಾಂಧಿ, ಪವನ್‌ ಕಲ್ಯಾಣ್‌ ಎಂಟ್ರಿ

Lok Sabha Election 2024: ರಾಜ್ಯದಲ್ಲಿ ಚುನಾವಣಾ ಕಾವು ಏರತೊಡಗಿದ್ದು, ಬುಧವಾರ ಕರ್ನಾಟಕಕ್ಕೆ ರಾಹುಲ್‌ ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಮೊದಲು ಮಂಡ್ಯಕ್ಕೆ ಆಗಮಿಸಲಿದ್ದು, ಪಕ್ಷ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಕೋಲಾರಕ್ಕೆ ತೆರಳಿ ಪ್ರಚಾರ ನಡೆಸಲಿದ್ದಾರೆ. ಇನ್ನು ಬೆಂಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪವನ್‌ ಕಲ್ಯಾಣ್‌ ಪ್ರಚಾರಕ್ಕೆ ಆಗಮಿಸಲಿದ್ದಾರೆ.

VISTARANEWS.COM


on

Lok Sabha Election 2024 Rahul Gandhi and Pawan Kalyan to visit Karnataka April 17
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಆಯಾ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಸ್ಟಾರ್‌ ನಾಯಕರು, ಸಿನಿಮಾ ಹೀರೋಗಳು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ (ಏಪ್ರಿಲ್‌ 17) ಕರ್ನಾಟಕಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ಆಂಧ್ರಪ್ರದೇಶದ ಜನಸೇನಾ ಪಕ್ಷದ ನಾಯಕ, ಖ್ಯಾತ ನಟ ಪವನ್ ಕಲ್ಯಾಣ್‌ (Pavan Kalyan) ಎಂಟ್ರಿ ಕೊಡಲಿದ್ದಾರೆ.

ರಾಜ್ಯದಲ್ಲಿ ಚುನಾವಣಾ ಕಾವು ದಿನೇ ದಿನೆ ಏರತೊಡಗಿದ್ದು, ಒಂದು ಹಂತದ ಪ್ರಚಾರ ಕಾರ್ಯಗಳು ಮುಗಿಯುತ್ತಾ ಬಂದಿದೆ. ಮತದಾನಕ್ಕೆ ಇನ್ನು ಕೆಲವೇ ದಿನ ಇದೆ ಎಂಬ ಹೊತ್ತಿನಲ್ಲಿ ರಾಹುಲ್‌ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಮೊದಲು ಮಂಡ್ಯಕ್ಕೆ ಆಗಮಿಸಲಿದ್ದು, ಪಕ್ಷ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಕೋಲಾರಕ್ಕೆ ತೆರಳಿ ಪ್ರಚಾರ ನಡೆಸಲಿದ್ದಾರೆ.

ಟಕ್ಕರ್‌ ಕೊಡಲು ರಾಗಾ ರೆಡಿ?

ದೇಶಾದ್ಯಂತ ನಡೆಸುತ್ತಿರುವ ನ್ಯಾಯಯಾತ್ರೆಯಲ್ಲಿ ಬ್ಯುಸಿಯಾಗಿದ್ದ ರಾಹುಲ್‌ ಗಾಂಧಿ ಬುಧವಾರ ರಾಜ್ಯಕ್ಕೆ ಆಗಮಿಸಿ ನೇರವಾಗಿ ಮಂಡ್ಯಕ್ಕೆ ಬರಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ರಣಕಹಳೆ ಊದಲಿದ್ದಾರೆ. ಎನ್‌ಡಿಎ ಅಭ್ಯರ್ಥಿಗೆ ಅಲ್ಲಿಂದಲೇ ಸಂದೇಶ ರವಾನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆ ಬಳಿಕ ಕೋಲಾರಕ್ಕೆ ಆಗಮಿಸಲಿದ್ದು, ಅಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

ಬೆಂಗಳೂರಿನಲ್ಲಿ ಪವನ್‌ ಕಲ್ಯಾಣ್‌ ಹವಾ!

ಇತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಬಳ್ಳಾಪುರ, ರಾಯಚೂರು, ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪವನ್‌ ಕಲ್ಯಾಣ್‌ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಅವರ ಸಿನಿಮಾ ಸ್ಟೈಲ್‌ ಡೈಲಾಗ್‌ಗಳು ಎಷ್ಟು ಜನರನ್ನು ಮುಟ್ಟಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಆಂಧ್ರಪ್ರದೇಶದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್‌ ಅವರಿಗೆ ಕರ್ನಾಟಕದಲ್ಲಿ ಅವರದ್ದೇ ಆದ ಫ್ಯಾನ್‌ ಫಾಲೋವರ್ಸ್‌ ಇದ್ದಾರೆ. ಪ್ರಚಾರ ಕಾರ್ಯವನ್ನು ನಡೆಸಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ತೆಲುಗು ಭಾಷಿಕರು ಹೆಚ್ಚಾಗಿ ಇರುವ ಕ್ಷೇತ್ರಗಳಲ್ಲಿ ಇವರನ್ನು ಕರೆತರಲಾಗುತ್ತಿದೆ. ಮಾಸ್ ಡೈಲಾಗ್ ಮೂಲಕ ಹುಚ್ಚೆಬ್ಬಿಸುವ ಪವನ್ ಕಲ್ಯಾಣ್ ಅವರ ಎಂಟ್ರಿಯಿಂದ ರಾಜ್ಯದ ರಾಜಕೀಯ ಅಖಾಡ ರಂಗೇರಿದೆ. ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಸಿನಿಮಾ ಸ್ಟೈಲ್‌ನಲ್ಲಿ ರಾಜಕಾರಣ ಮಾಡುತ್ತಾ ಬಂದಿದ್ದಾರೆ.

Continue Reading

ಬಳ್ಳಾರಿ

Ballari News: ಬಳ್ಳಾರಿಯ ವಾರ್ಡ್ಲಾ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ

Ballari News: ಬಳ್ಳಾರಿ ನಗರದ ವಾರ್ಡ್ಲಾ ಕಾಲೇಜಿನಲ್ಲಿ ಸೋಮವಾರ ಕಾಲೇಜಿನ 2001-2003 ನೇ ಸಾಲಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರುಗಿತು.

VISTARANEWS.COM


on

Snehasammilana programme at Wardlaw College Ballari
Koo

ಬಳ್ಳಾರಿ: ನಗರದ ವಾರ್ಡ್ಲಾ ಕಾಲೇಜಿನಲ್ಲಿ ಸೋಮವಾರ ಕಾಲೇಜಿನ 2001-2003ನೇ ಸಾಲಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು (Ballari News) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಗುರುಗಳಾದ ಹರಿಕುಮಾರ್, ಪಿ.ವಿಕ್ಟರ್ ಇಮ್ಯಾನುಯೆಲ್, ಕುಲಕರ್ಣಿ, ಕೆ. ರಾಜಶೇಖರ್, ಲಕ್ಷ್ಮೀ ನಾರಾಯಣ, ಪ್ರಸನ್ನ ಡಬ್ಲ್ಯೂ ಉಳ್ಳಾಗಡ್ಡಿ, ಪಿ. ಸಿಸಿಲಿಯಾ ಜೋಸಿಲಿನ್, ಎಂ.ಸೈಲಾ ಕುಮಾರಿ, ಅಗಸ್ಟೀನ್ ಲೂಥರ್ ಕಿಂಗ್, ಕೆ.ಎಂ. ಶಂಬುನಾಥ, ಕೆ. ಶೈಕ್ಷಾವಲಿ ಮತ್ತು ಶಿವಕುಮಾರ್ ಅವರನ್ನು 2001-2003 ನೇ ಸಾಲಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು ಗೌರವಿಸಿ, ಸನ್ಮಾನಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

ಆ ಬ್ಯಾಚ್‌ನಲ್ಲಿ ಓದಿರುವ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಬೆಳೆಯುವ ಜತೆಗೆ ದೇಶದ ನಾನಾ ಭಾಗದಲ್ಲಿ, ವಿದೇಶದಲ್ಲಿಯೂ ಇದ್ದಾರೆ. ಜರ್ಮನ್, ಖತಾರ್, ದುಬೈ, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸಿ ಸುಮಾರು 3,62,001 ರೂ.ಗಳನ್ನು ತಮ್ಮ ಕಾಲೇಜಿನ ಅಭಿವೃದ್ಧಿಗೆ ದೇಣಿಗೆ ನೀಡಿದರು.

ಇದನ್ನೂ ಓದಿ: NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

ತಮ್ಮ ನೆಚ್ಚಿನ ಗುರುಗಳಿಂದ ಆಶೀರ್ವಾದ ಪಡೆದು ಸಂತಸ ಪಟ್ಟರು.ಇದೇ ವೇಳೆ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

Continue Reading

ಬೆಂಗಳೂರು

Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

Lok Sabha Election 2024 : ಏ.13ರಂದು ಬೆಂಗಳೂರಿನ ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ರೂಪಾಯಿಗೆ ವಾರಸುದಾರರು ಯಾರು ಎಂಬುದು ನಿಗೂಢವಾಗಿಯೇ ಉಳಿದಿದೆ. ಈ ನಡುವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಚುನಾವಣಾಧಿಕಾರಿ ಕೊಟ್ಟ ದೂರನ್ನು ಆಧರಿಸಿ ಸ್ಕೂಟರ್‌ ಹಾಗೂ ಕಾರು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

VISTARANEWS.COM


on

By

Lok Sabha Election 2024
Koo

ಬೆಂಗಳೂರು: ಚುನಾವಣಾ ಸಮಯದಲ್ಲಿ (Lok Sabha Election 2024) ಹಣದ ಹೊಳೆಯೇ (Lok Sabha Election 2024) ಹರಿಯುತ್ತದೆ. ಸದ್ಯ ಜಯನಗರ ಚೆಕ್‌ಪೋಸ್ಟ್‌ನಲ್ಲಿ ಕಾರೊಂದರಲ್ಲಿ ಸಿಕ್ಕಿದ ಕೋಟ್ಯಂತರ ರೂ. ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿ ಎನ್‌ ಮಂಜುನಾಥ್‌ ಕೊಟ್ಟ ದೂರನ್ನು ಆಧರಿಸಿ ಏ.15ರಂದು ಸ್ಕೂಟರ್‌ ಹಾಗೂ ಕಾರು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ, ಇಬ್ಬರಿಗೂ ನೋಟಿಸ್‌ ನೀಡಿದ್ದಾರೆ.

ವಶಕ್ಕೆ ಪಡೆದಿರುವ ಕೋಟ್ಯಂತರ ರೂ. ಹಣವನ್ನು ನಗರ ಚುನಾವಣಾಧಿಕಾರಿ ಮನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ. ಕಾರಿನಲ್ಲಿ ಸಿಕ್ಕ ಹಣವನ್ನು ಎಣಿಕೆ ಮಾಡಿದಾಗ 1,34,99,000 ರೂ. ಹಣ ಪತ್ತೆಯಾಗಿದ್ದು, ಜತೆಗೆ ಬಿಬಿಎಂಪಿಗೆ ಸಂಬಂಧಿಸಿದ ಕೆಲ ದಾಖಲೆಗಳು ಸಿಕ್ಕಿವೆ. ಇವೆಲ್ಲವನ್ನೂ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕರಣದ ವರದಿಯನ್ನು ಕೊಟ್ಟಿದ್ದಾರೆ.

ಇನ್ನೂ ಕ್ಲಾಸ್ ಒನ್ ಗುತ್ತಿಗೆದಾರನಿಗೆ ಸೇರಿದ ಹಣ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂ. ಹಣವು ಯಾವುದಾದರು ಪಕ್ಷಕ್ಕೆ ಸೇರಿದ್ದಾ? ವೈಯಕ್ತಿಕ ವ್ಯವಹಾರದ್ದ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸೀಜ್‌ ಮಾಡಿರುವ ಸ್ಕೂಟರ್‌ ಹಾಗೂ ಕಾರಿನ ಮಾಲೀಕರಾದ ಸೋಮಶೇಖರ್ ಮತ್ತು ಧನಂಜಯ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

ಆ ದಿನ ನಡೆದಿದ್ದು ಏನು? ದೂರಿನಲ್ಲಿ ಏನಿದೆ?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬೆಂಗಳೂರು ಪ್ಲೈಯಿಂಗ್‌ ಸ್ಕ್ವಾಡ್‌ ತಂಡ 3ರ ಟೀಮ್‌ ಲೀಡರ್‌ ಆಗಿ ನೇಮಕಗೊಂಡಿರುವ ಮಂಜುನಾಥ್‌ ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ಆ ದೂರಿನನ್ವಯ ಏ.13ರ ಬೆಳಗ್ಗೆ 11:50ರ ಸುಮಾರಿಗೆ ಜಯನಗರ 4ನೇ ಬ್ಲಾಕ್‌ ಸಮೀಪ ಅಪರಿಚಿತ ವ್ಯಕ್ತಿಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಹೆಚ್ಚಿನ ಪ್ರಮಾಣದ ನಗದನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ನೋಡಲ್‌ ಅಧಿಕಾರಿ ನಿಖಿತ ಚಿನ್ನಸ್ವಾಮಿ ಅವರು ತೆರಳಿದ್ದರು.

ಈ ವೇಳೆ ನೀಲಿ ಬಣ್ಣದ ಆಕ್ಸಸ್‌ ಗಾಡಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗ್‌ ಇಟ್ಟುಕೊಂಡಿದ್ದ. ನೋಡಲ್‌ ಅಧಿಕಾರಿ ನಿಖಿತ ಅವರು ಆತನ ಬಳಿ ಹೋಗಿ ವಿಚಾರಿಸಲು ಮುಂದಾಗುತ್ತಿದ್ದಂತೆ, ಸ್ಕೂಟರ್‌ ಹಾಗೂ ಹಣದ ಬ್ಯಾಗ್‌ ಬಿಟ್ಟು ಪರಾರಿ ಆಗಿದ್ದ. ಅದೇ ರಸ್ತೆಯಲ್ಲಿದ್ದ ಕೆಂಪು ಬಣ್ಣದ ವೋಕ್ಸ್‌ ವ್ಯಾಗನ್‌ ಕಾರು ಮತ್ತು ರಿಜಿಸ್ಟೇಷನ್‌ ನಂಬರ್‌ ಇಲ್ಲದ ಬಿಳಿ ಬಣ್ಣದ ಬೆಂಜ್‌ ಕಾರಿನಲ್ಲೂ ಗರಿ ಗರಿ ನೋಟು ಪತ್ತೆಯಾಗಿತ್ತು.

ಮೊದಮೊದಲು ಬ್ಯಾಗ್‌ನಲ್ಲಿ ಏನಿದೆ ತೋರಿಸಿ ಎಂದಾಗ ಮಾವಿನ ಹಣ್ಣಿನ ಬ್ಯಾಗ್‌ ಎಂದಿದ್ದರು. ಯಾವಾಗ ನೋಡೆಲ್‌ ಅಧಿಕಾರಿ ನಿಖಿತ ಅವರು ಕಾರು ಪರಿಶೀಲನೆ ಮಾಡಲು ಹೋದಾಗ ಕಾರಲ್ಲಿದ್ದ ಐವರು ಕಾಲ್ಕಿತ್ತಿದ್ದರು. ಒಟ್ಟು 1,34,99,000 ಹಣ ಪತ್ತೆಯಾಗಿದೆ. ಜತೆಗೆ ವೋಕ್ಸ್‌ ವ್ಯಾಗನ್‌ ಕಾರಲ್ಲಿ ಬಿಬಿಎಂಪಿ ದಾಖಲಾತಿಗಳು ಹಾಗೂ ರಿಜಿಸ್ಟೇಷನ್‌ ನಂಬರ್‌ ಇಲ್ಲದ ಕಾರಲ್ಲಿ ಒಂದು ಮೊಬೈಲ್‌, ಒಂದು ಕಾರ್ಡ್‌ ಪೌಚ್‌ ದೊರೆತಿದೆ. ಇದೆಲ್ಲವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

Actor Dwarakish: ಹಲವು ಹೊಸ ನಟ ನಟಿಯರನ್ನು ಕನ್ನಡಕ್ಕೆ ತಂದ, ಹಲವು ಹೊಸ ಸಾಹಸಗಳನ್ನು ಮಾಡಿದ ಕನ್ನಡದ ಕುಳ್ಳ ದ್ವಾರಕೀಶ್‌ ಅವರ ಬಗ್ಗೆ ನೀವು ತಿಳಿದಿಲ್ಲದಿರಬಹುದಾದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ.

VISTARANEWS.COM


on

actor dwarakish
Koo

ಬೆಂಗಳೂರು: ಇಂದು ಮುಂಜಾನೆ ನಿಧನರಾದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (Actor Dwarakish death) ಕನ್ನಡ ಚಿತ್ರರಂಗದಲ್ಲಿ (Kannada Film industry) ಹಲವು ಹೊಸತುಗಳನ್ನು ತಂದವರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರ ನಿಧನದ ಸುಳ್ಳು ಸುದ್ದಿಯೂ (Fake news) ಈ ಹಿಂದೊಮ್ಮೆ ಹರಡಿತ್ತು. ಆಗ ಅವರು “ನಾನಿನ್ನೂ ಬದುಕಿದ್ದೇನೆ” ಎಂದು ಪ್ರತಿಕ್ರಿಯೆ ನೀಡಿದ್ದರು. ಇಂದಿನ ಸುದ್ದಿ ಮಾತ್ರ ವಿಷಾದಕರವಾಗಿ ನಿಜವೇ ಆಗಿದೆ.

ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ರಾಜನಂತೆ ಮೆರೆದವರು. ಹಲವು ನಾಯಕ ನಟರು ನಿರ್ಮಾಣ- ನಿರ್ದೇಶನಕ್ಕೆ ಇವರಿಗೆ ಕಾಲ್‌ಶೀಟ್‌ ನೀಡಿ ಕಾಯುತ್ತಿದ್ದರು. ಇಂಥ ʼಪ್ರಚಂಡ ಕುಳ್ಳʼನ ಬಗ್ಗೆ ನೀವರಿಯದ ಹಲವು ಸಂಗತಿಗಳು ಇಲ್ಲಿವೆ.

1) ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗ ಪರಿಚಯಸಿದ್ದಾರೆ. ಶ್ರುತಿ ಎಂಬ ಅದ್ಭುತ ನಟಿಯನ್ನು ಚಿತ್ರರಂಗಕ್ಕೆ ಕರೆತಂದವರೇ ದ್ವಾರಕೀಶ್.‌ 1990ರಲ್ಲಿ ದ್ವಾರಕೀಶ್‌ ʼಪುದುವಸಂತಂʼ ತಮಿಳು ಚಿತ್ರವನ್ನು ʼಶ್ರುತಿʼ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ರಿಮೇಕ್‌ ಮಾಡಿದರು. ಇದರಲ್ಲಿ ಶ್ರುತಿ ಎಂಬ ಹೊಸ ನಟಿಯನ್ನು ಕನ್ನಡಕ್ಕೆ ಪರಿಚಯಿಸಿದರು. ಅಲ್ಲಿಂದ ಮುಂದೆ ಶ್ರುತಿ ಕನ್ನಡ ಚಿತ್ರರಂಗದ ಇತಿಹಾಸವಾದರು.

2) 1964ರಲ್ಲಿ ʼವೀರ ಸಂಕಲ್ಪ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ನಟನಾಗಿ ಎಂಟ್ರಿ ಕೊಟ್ಟ ದ್ವಾರಕೀಶ್ ಮೊದಲು ಹಾಸ್ಯ ಕಲಾವಿದರಾಗಿ ಮಿಂಚಿದರು. ನಂತರ ನಿರ್ದೇಶನ ಹಾಗೂ ನಿರ್ಮಾಣಕ್ಕಿಳಿದರು. 1966ರಲ್ಲಿ ʼಮಮತೆಯ ಬಂಧನʼ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ನಿರ್ಮಿಸಿದರು. 1985ರಲ್ಲಿ ʼನೀ ಬರೆದ ಕಾದಂಬರಿʼ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು 19 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

3) 1973ರಲ್ಲಿ ʼಕೌಬಾಯ್‌ ಕುಳ್ಳʼ ಎಂಬ ಚಿತ್ರವನ್ನು ನಿರ್ಮಿಸಿ ನಟಿಸಿದರು. ಇದು ಕನ್ನಡದಲ್ಲಿ ಮೊದಮೊದಲ ಕೌಬಾಯ್‌ ಮಾದರಿಯ ಚಿತ್ರಗಳಲ್ಲಿ ಒಂದು. ದ್ವಾರಕೀಶ್‌ ಸ್ವತಃ ಇದರಲ್ಲಿ ಹೀರೋ ಆಗಿ ನಟಿಸಿದರು.

4) 1996ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಯಿತು. ವರನಟ ರಾಜ್‌ ಜೊತೆಗೆ ನಾಲ್ಕಾರು ಸಿನಿಮಾಗಳನ್ನು ಮಾಡಿ, ನಂತರ ಅವರು ರಾಜ್‌ ಕ್ಯಾಂಪ್‌ನಿಂದ ಬೇರೆಯಾದರು. ವಿಷ್ಣುವರ್ಧನ್‌ ಅವರಲ್ಲಿ ತಮ್ಮ ಜೊತೆಗಾರನನ್ನು ಕಂಡುಕೊಂಡರು.

5) ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ- ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು. ಮಧ್ಯೆ ಒಮ್ಮೆ ಇಬ್ಬರೂ ವಿರಸದಿಂದ ಬೇರ್ಪಟ್ಟು, ಮತ್ತೆ 2004ರಲ್ಲಿ ʼಆಪ್ತಮಿತ್ರʼ ಚಿತ್ರದಲ್ಲಿ ಒಂದಾದರು.

6) ʼಆಪ್ತಮಿತ್ರʼಕ್ಕೂ ಮೊದಲು ಹಲವು ಫಿಲಂಗಳನ್ನು ಮಾಡಿ ಕೈ ಸುಟ್ಟುಕೊಂಡಿದ್ದ ದ್ವಾರಕೀಶ್‌ ಅವರ ವಿನಂತಿಯ ಮೇರೆಗೆ, ಅವರಿಂದ ಒಂದು ರೂಪಾಯಿಯನ್ನೂ ಪಡೆಯದೆ ವಿಷ್ಣುವರ್ಧನ್‌ ಆಪ್ತಮಿತ್ರದಲ್ಲಿ ನಟಿಸಿದರು. ಅದರ ಯಶಸ್ಸಿನಿಂದ ದ್ವಾರಕೀಶ್‌ ಹಳೆಯ ಸಾಲಗಳನ್ನು ತೀರಿಸಿಕೊಂಡರು.

7) 1992ರಲ್ಲಿ ಶಶಿಕುಮಾರ್‌ ಅವರ ಜೊತೆಯಾಗಿ ʼಹೊಸ ಕಳ್ಳ ಹಳೆ ಕುಳ್ಳʼ ಎಂಬ ಸಿನಿಮಾ ಮಾಡಿ, ವಿಷ್ಣುವರ್ಧನ್‌ ಜೊತೆಗೆ ತಾವು ಮಾಡಿದ ಮ್ಯಾಜಿಕ್‌ ಅನ್ನು ಮರುಸೃಷ್ಟಿಸಲು ಯತ್ನಿಸಿದರು. ಅದು ಮಿಶ್ರಫಲ ನೀಡಿತು. ಶಶಿಕುಮಾರ್‌ ಬೇಡಿಕೆಯ ಹೀರೋ ಆದರು.

8) ಕನ್ನಡದಲ್ಲಿ ತನಗೆ ಸೂಕ್ತ ಮನ್ನಣೆ ಸಿಗುತ್ತಿಲ್ಲ ಎಂದು ಕೋಪಿಸಿಕೊಂಡು ಚೆನ್ನೈಗೆ ತೆರಳಿ ಸ್ವಲ್ಪ ಕಾಲ ಅಲ್ಲಿದ್ದರು. ಆ ಸಂದರ್ಭದಲ್ಲಿ 1983ರಲ್ಲಿ ತಮಿಳಿನಲ್ಲಿ ʼಅಡುತ ವಯಸುʼ ಎಂಬ ಭಾರಿ ಚಿತ್ರವನ್ನು ನಿರ್ಮಾಣ ಮಾಡಿದರು. ಇದರಲ್ಲಿ ರಜನಿಕಾಂತ್‌ ಹೀರೋ ಆಗಿದ್ದರೆ, ಶ್ರೀದೇವಿ ಹೀರೋಯಿನ್‌ ಆಗಿದ್ದರು. ಸಿಲ್ಕ್‌ ಸ್ಮಿತಾ ಕೂಡ ಇದರಲ್ಲಿದ್ದರು.

9) 1983ರಲ್ಲಿ ಗಿರೀಶ್ ಕಾರ್ನಾಡ್ ಅವರನ್ನು ಲೀಡ್‌ ರೋಲ್‌ನಲ್ಲಿ ಹಾಕಿಕೊಂಡು ಸಂಗೀತ ಪ್ರಧಾನವಾದ “ಆನಂದ ಭೈರವಿ” ಎಂಬ ಸಿನಿಮಾ ಮಾಡಿದರು. ಕಾಂಚನ, ಮಾಳವಿಕ, ರಾಜೇಶ್, ಮಹಾಲಕ್ಷ್ಮಿ ತಾರಾಗಣದಲ್ಲಿದ್ದರು. ಇದೊಂದು ಸದಭಿರುಚಿಯ, ಸಾಹಿತ್ಯ- ಸಂಗೀತಪ್ರಧಾನ ಸಿನಿಮಾ ಆಗಿ ಹೆಸರು ಮಾಡಿತು.

10) 1987ರಲ್ಲಿ ವಿನೋದ್‌ ರಾಜ್‌ ಅವರನ್ನು ಹೀರೋ ಆಗಿ ಮಡಲು ಪಣತೊಟ್ಟು, ಅವರಿಗಾಗಿ ʼಡ್ಯಾನ್ಸ್‌ ರಾಜಾ ಡ್ಯಾನ್ಸ್‌ʼ ಎಂಬ ಸಿನಿಮಾ ಮಾಡಿದರು. ಈ ಫಿಲಂ ಇಂಡಸ್ಟ್ರಿ ಹಾಗೂ ಚಿತ್ರರಸಿಕರ ಗಮನ ಸೆಳೆಯಿತಾದರೂ, ವಿನೋದ್‌ ರಾಜ್‌ ಅದೃಷ್ಟ ಇದರಿಂದ ಏನೂ ಬದಲಾಗಲಿಲ್ಲ.

11) 1986ರಲ್ಲಿ ʼಆಫ್ರಿಕಾದಲ್ಲಿ ಶೀಲಾʼ ಎಂಬ ಹಾಲಿವುಡ್‌ ಮಾದರಿಯ ಸಾಹಸ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. ಇದು ಆಫ್ರಿಕಾದಲ್ಲಿ ಶೂಟಿಂಗ್‌ ಆದ ಕನ್ನಡದ ಮೊದಲ ಚಿತ್ರ ಎನಿಸಿಕೊಂಡಿತು. ಬಪ್ಪಿ ಲಾಹರಿ ಇದಕ್ಕೆ ಸಂಗೀತ ನೀಡಿದ್ದರು. ಇದನ್ನೇ ನಾನಾ ಪಾಟೇಕರ್‌ ಅವರನ್ನು ಹಾಕಿಕೊಂಡು ಹಿಂದಿಯಲ್ಲಿ ರಿಮೇಕ್‌ ಮಾಡಿದರು.

12) ಸದಾ ಹೊಸಬಗೆಯ ಫಿಲಂಗಳನ್ನು ಮಾಡುವ ಕಡೆಗೆ ಅವರ ಮನಸ್ಸು ಇತ್ತು. ʼದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಕಟ್ಟಿಕೊಂಡು ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌, ರವಿಚಮದ್ರನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದರು, ನಿರ್ದೇಶಿಸಿದರು. ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.

ಇದನ್ನೂ ಓದಿ: Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

Continue Reading
Advertisement
Lok Sabha Election 2024 Rahul Gandhi and Pawan Kalyan to visit Karnataka April 17
Lok Sabha Election 20249 mins ago

Lok Sabha Election 2024: ನಾಳೆ ರಾಜ್ಯಕ್ಕೆ ರಾಹುಲ್‌ ಗಾಂಧಿ, ಪವನ್‌ ಕಲ್ಯಾಣ್‌ ಎಂಟ್ರಿ

Baba Ramdev
ದೇಶ11 mins ago

Baba Ramdev: ನೀವೇನು ಅಮಾಯಕರಲ್ಲ, ಕ್ಷಮಿಸಲ್ಲ; ಬಾಬಾ ರಾಮದೇವ್‌ಗೆ ಸುಪ್ರೀಂ ಚಾಟಿ!

Snehasammilana programme at Wardlaw College Ballari
ಬಳ್ಳಾರಿ17 mins ago

Ballari News: ಬಳ್ಳಾರಿಯ ವಾರ್ಡ್ಲಾ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ

Lok Sabha Election 2024
ಬೆಂಗಳೂರು42 mins ago

Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

actor dwarakish
ಪ್ರಮುಖ ಸುದ್ದಿ47 mins ago

Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

ಕ್ರೀಡೆ48 mins ago

IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

Actor Dwarakish
ಕರ್ನಾಟಕ52 mins ago

Actor Dwarakish: ಅಣ್ಣಾವ್ರಿಗೆ ಆಪ್ತ, ವಿಷ್ಣುವರ್ಧನ್‌ಗೆ ಆಪ್ತಮಿತ್ರ ದ್ವಾರಕೀಶ್;‌ ಇವರ ನಂಟು ಹೇಗಿತ್ತು?

Lok Sabha Election 2024 What is the reason for DK Shivakumar and HD Kumaraswamy personal fight
Lok Sabha Election 202456 mins ago

Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

Rama Navami
ಪ್ರಮುಖ ಸುದ್ದಿ1 hour ago

Ram Navami 2024: ರಾಮ ನವಮಿಯನ್ನು ವಿಶೇಷವಾಗಿ ಆಚರಿಸುವ ಟಾಪ್‌ 5 ಸ್ಥಳಗಳಿವು

RR vs KKR
ಕ್ರೀಡೆ1 hour ago

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ9 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌