Bank Fraud | ಕೋಆಪರೇಟಿವ್‌ ಬ್ಯಾಂಕ್‌ ಧೋಖಾ; ಗ್ರಾಹಕರ ಮುತ್ತಿಗೆ ಕಂಡು ಸಿಬ್ಬಂದಿ ಆತ್ಮಹತ್ಯೆ ಯತ್ನ - Vistara News

ಉಡುಪಿ

Bank Fraud | ಕೋಆಪರೇಟಿವ್‌ ಬ್ಯಾಂಕ್‌ ಧೋಖಾ; ಗ್ರಾಹಕರ ಮುತ್ತಿಗೆ ಕಂಡು ಸಿಬ್ಬಂದಿ ಆತ್ಮಹತ್ಯೆ ಯತ್ನ

ರಾಜ್ಯದಲ್ಲಿ ಸಹಕಾರ ಬ್ಯಾಂಕ್‌ಗಳ (Bank Fraud) ದೋಖಾ ಪ್ರಕರಣಗಳು ಹೆಚ್ಚುತ್ತಲಿದ್ದು, ಆ ಪಟ್ಟಿಗೆ ಈಗ ಉಡುಪಿಯ ಕಮಲಾಕ್ಷಿ ವಿವಿದ್ಧೋದ್ದೇಶ ಸಹಕಾರಿ ಸಂಘವು ಸೇರ್ಪಡೆಗೊಂಡಿದೆ.

VISTARANEWS.COM


on

Bank Fraud ಉಡುಪಿ
ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಇಲ್ಲಿನ ಕೃಷ್ಣಪುರ ಮಠ ಸಮೀಪ ಇರುವ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ರೊಚ್ಚಿಗೆದ್ದ ಗ್ರಾಹಕರು ಸೋಮವಾರ ಸಹಕಾರಿ ಬ್ಯಾಂಕ್‌ಗೆ (Bank Fraud) ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಸಹಕಾರ ಬ್ಯಾಂಕ್ ಮುಖ್ಯಸ್ಥ ಬಿ.ವಿ.ಲಕ್ಷ್ಮೀನಾರಾಯಣ ಎಂಬಾತ ನಾಪತ್ತೆ ಆಗಿದ್ದು, ವಿವಿಧ ಸೊಸೈಟಿ ಮತ್ತು ಗ್ರಾಹಕರಿಂದ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಗ್ರಾಹಕರ ಠೇವಣಿ ಹಣವನ್ನು ಹಲವು ಕಡೆ ಹೂಡಿಕೆ ಮಾಡಿ ಸೊಸೈಟಿ ನಷ್ಟ ಹೊಂದಿದೆ ಎಂದು ಹೇಳಲಾಗಿದೆ. ಜತೆಗೆ ಕಳೆದ ಜೂನ್ ತಿಂಗಳಿಂದ ಗ್ರಾಹಕರಿಗೆ ಯಾವುದೇ ಬಡ್ಡಿ ನೀಡಿಲ್ಲ. ಅಸಲು ಕೇಳಿದರೂ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕಾರಣದಿಂದ ಬೇಸತ್ತ ಗ್ರಾಹಕರು ಬ್ಯಾಂಕ್‌ ಒಳ ನುಗ್ಗಿ ಪ್ರತಿಭಟಿಸಿದರು.

Bank Fraud
ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ

ಈ ವೇಳೆ ಮಹಿಳಾ ಸಿಬ್ಬಂದಿಯನ್ನು ಗ್ರಾಹಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಹಕರ ಒತ್ತಡದಿಂದ ನೊಂದ ಮಹಿಳಾ ಸಿಬ್ಬಂದಿ ಬ್ಯಾಗ್‌ನಲ್ಲಿದ್ದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಏಳೆಂಟು ಮಾತ್ರೆಗಳನ್ನು ನುಂಗಲು ಯತ್ನಿಸಿದಾಗ ಗ್ರಾಹಕರು ತಪ್ಪಿಸಲು ಯತ್ನಿಸಿದ್ದಾರೆ. ಬಳಿಕ ಸಿಬ್ಬಂದಿಗೆ ಬೈದು ಮಾತ್ರೆಗಳನ್ನು ಹೊರಹಾಕುವಂತೆ ತಾಕೀತು ಮಾಡಿದ್ದಾರೆ. ಸ್ಥಳಕ್ಕೆ ಉಡುಪಿ ನಗರ ಠಾಣೆ ಪೊಲೀಸರು ಆಗಮಿಸಿ ದೂರು ದಾಖಲಿಸಿಕೊಂಡಿದ್ದಾರೆ.

ಸಹಕಾರ ಬ್ಯಾಂಕ್‌ಗಳ ಅವ್ಯವಹಾರ
ಬೆಂಗಳೂರಿನಲ್ಲಿ ಗುರು ರಾಘವೇಂದ್ರ ಕೋಆಪರೇಟಿವ್‌ ಬ್ಯಾಂಕ್‌, ವಶಿಷ್ಠ ಕೋಆಪರೇಟಿವ್‌ ಬ್ಯಾಂಕ್‌ ಹಾಗೂ ಸಿರಿ ವೈಭವ ಪತ್ತಿನ ಸಹಕಾರಿ ಬ್ಯಾಂಕ್‌ ಮತ್ತು ಶುಶೃತಿ ಕೋಆಪರೇಟಿವ್‌ ಬ್ಯಾಂಕ್‌, ಯಾದಗಿರಿಯ ಶ್ರೀ ರೇವಣಸಿದ್ದೇಶ್ವರ ವಿವಿಧೋದ್ದೇಶ ಸಹಕಾರ ಸಂಘ ನಿ. ಬ್ಯಾಂಕ್‌ಗಳಲ್ಲಿ ಈಗಾಗಲೇ ವಂಚನೆಯಾಗಿದ್ದು, ಈ ಸಾಲಿಗೆ ಈಗ ಕಮಲಾಕ್ಷಿ ವಿವಿದ್ಧೋದ್ದೇಶ ಸಹಕಾರಿ ಸಂಘವು ಸೇರಿಕೊಂಡಂತಾಗಿದೆ.

ಇದನ್ನೂ ಓದಿ | Viral post | ರಾವಣನ ಜೊತೆ ಇಲ್ಲಿ ವ್ಯಾಯಾಮ ಮಾಡಿ: ಪೌರಾಣಿಕ ಪಾತ್ರಗಳ ಜಿಮ್ಮಿದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Rain News : ಮುಲ್ಕಿ, ಉಡುಪಿ, ಭಾಗಮಂಡಲದಲ್ಲಿ ಭಾರಿ ಮಳೆಯಾಗಿದೆ. ವಾರಾಂತ್ಯದಲ್ಲೂ ಭಾರಿ ವರ್ಷಧಾರೆಯ (Heavy rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಮ್ಮೆ ಬಾರಿ ಜೋರಾಗಿ ಮಳೆ (Heavy Rain) ಬಂದರೂ ಜನರಿಗೆ ಕಷ್ಟ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈ ನಡುವೆ ಎಂದಿಗಿಂತ ತುಸು ಜೋರಾಗಿ ಹಾಗೂ ಹೆಚ್ಚಾಗಿಯೇ ಮಳೆಯಾಗುತ್ತಿರುವುದು (Rain News) ಜನರನ್ನು ಹೈರಣಾಗಿಸಿದೆ. ಸದ್ಯ ಇನ್ನೊಂದು ವಾರಕ್ಕೂ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ವಾರಾಂತ್ಯದಲ್ಲಿ ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ನಿರಂತರ ಗಾಳಿ ಬೀಸಲಿದ್ದು ಗಂಟೆಗೆ 40-50 ಕಿ.ಮೀನಲ್ಲಿ ವೇಗ ಇರಲಿದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ-ಮಲೆನಾಡಿನಲ್ಲಿ ವಿಪರೀತ ಮಳೆ

ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನೂ ಅತಿ ಹೆಚ್ಚು ಮಳೆಯು ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 30 ಸೆಂ.ಮೀ, ಉಡುಪಿ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ , ಮಣಿ , ಕಾರ್ಕಳ, ಆಗುಂಬೆಯಲ್ಲಿ ತಲಾ 17 ಸೆಂ.ಮೀ, ಪಣಂಬೂರು , ಬೆಳ್ತಂಗಡಿ, ಹೊನ್ನಾವರ, ಧರ್ಮಸ್ಥಳದಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟ, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 14 ಸೆಂ.ಮೀ, ನಾಪೋಕ್ಲು13, ಪೊನ್ನಂಪೇಟೆ 12 ಸೆಂ.ಮೀ ಮಳೆಯಾಗಿದೆ. ಪುತ್ತೂರು , ಕೊಲ್ಲೂರು, ಸುಳ್ಯ, ಮೂರ್ನಾಡು, ವಿರಾಜಪೇಟೆಯಲ್ಲಿ 11 ಸೆಂ.ಮೀ, ಮಂಗಳೂರು 10 ಸೆಂ.ಮೀ, ಮಂಕಿ, ಕಳಸ, ಶೃಂಗೇರಿಯಲ್ಲಿ 9 ಸೆಂ.ಮೀ, ಕುಂದಾಪುರ, ಕುಮಟಾ, ಅಂಕೋಲಾದಲ್ಲಿ 8 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಗೋಕರ್ಣ, ಕೊಪ್ಪ6 ಸೆಂ.ಮೀ, ಸಿದ್ದಾಪುರ , ಜಯಪುರ 5 ಸೆಂ.ಮೀ, ಕದ್ರಾ , ತಾಳಗುಪ್ಪ , ಬಂಡೀಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಲೋಂಡಾ, ಕುಶಾಲನಗರ, ಸೋಮವಾರಪೇಟೆ, ಹಾರಂಗಿ, ಹುಣಸೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಜೋಯಿಡಾ, ಯಲ್ಲಾಪುರ, ಬಾಳೆಹೊನ್ನೂರು, ಹುಂಚದಕಟ್ಟೆ , ಸರಗೂರು 2 ಸೆಂ.ಮೀ, ಮುಂಡಗೋಡ , ಕಾರವಾರ , ಬನವಾಸಿ, ಹಳಿಯಾಳ, ಕಿರವತ್ತಿ , ತ್ಯಾಗರ್ತಿ, ಹಾಸನ , ಕೃಷ್ಣರಾಜಸಾಗರ, ಆನವಟ್ಟಿ, ಎನ್ ಆರ್ ಪುರ, ಗುಂಡ್ಲುಪೇಟೆ, ನಂಜನಗೂಡು, ಕೆ ಆರ್ ನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Road Accident : ಸಂಬಂಧಿಕರ ಅಂತ್ಯಸಂಸ್ಕಾರಕ್ಕೆ ತೆರಳಿ ಮನೆಗೆ ವಾಪಸ್‌ ಆಗುವಾಗ ದಂಪತಿ ಮೇಲೆ ಬೃಹತ್‌ ಮರವೊಂದು ಬಿದ್ದಿದೆ. ಇತ್ತ ಉಡುಪಿಯಲ್ಲಿ ಏಕಾಏಕಿ ಕಾರೊಂದು ಹೊತ್ತಿ ಉರಿದಿದೆ.

VISTARANEWS.COM


on

By

Road Accident A huge tree fell on the bike Riders are serious
Koo

ಕಾರವಾರ/ಉಡುಪಿ: ಭಾರಿ ಮಳೆ ಎಫೆಕ್ಟ್‌ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಬೃಹತ್ ಮರ (Road Accident) ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ ಘಟನೆ ನಡೆದಿದೆ. ಅನಿಲಗೋಡ ಗ್ರಾಮದ ಸವಾರ ಬಾಬು ನಾಯ್ಕ(52), ಭಾಗೀರಥಿ ನಾಯ್ಕ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಈ ದಂಪತಿ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಬೈಕ್‌ನಲ್ಲಿ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಏಕಾಏಕಿ ಬೃಹತ್‌ ಮರವು ಇವರಿಬ್ಬರ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸವಾರರನ್ನು ಕೂಡಲೇ ಸ್ಥಳೀಯರು ಹಾಗೂ ಭಟ್ಕಳದ ಬಿಜೆಪಿ ಮುಖಂಡರು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Road Accident Car Fire

ತಡರಾತ್ರಿ ಹೊತ್ತಿ ಉರಿದ ಕಾರು

ತಡರಾತ್ರಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಉಡುಪಿಯ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ಘಟನೆ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ರಿಡ್ಜ್ ಕಾರು ಬೆಂಕಿಗಾಹುತಿ ಆಗಿದೆ. ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕಾರಿನ ಬಾನೆಟ್‌ನಲ್ಲಿ ಹೊಗೆ ಕಂಡು ಕಾರು ಚಾಲಕ ಹೊರಬಂದಿದ್ದು, ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಮಾಲೀಕನ ಮಾಹಿತಿ ಮೇಲೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

ಹಾವೇರಿ: ಬ್ಯಾಡಗಿಯಲ್ಲಿ (Haveri Accident) ಇಂದು ಮುಂಜಾನೆ 13 ಮಂದಿಯನ್ನು ಬಲಿ ಪಡೆದುಕೊಂಡ ಅಪಘಾತ (Road Accident) ಸಂಭವಿಸಿದ ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ವಾಹನದ ಪೂಜೆಗಾಗಿ (Vehicle Puja) ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿತ್ತು.

ಕಳೆದ 15 ದಿನದ ಹಿಂದಷ್ಟೇ ಹೊಸ ಸೆಕೆಂಡ್ ಹ್ಯಾಂಡ್ ಟೆಂಪೊ ಟ್ರಾಕ್ಸ್‌ ವಾಹನ ಖರೀದಿ ಮಾಡಿದ್ದ ಕುಟುಂಬ, ವಾಹನಕ್ಕೆ ಪೂಜೆ ಮಾಡಿಸಲು ಮನೆ ದೇವರು ಯಲ್ಲಮ್ಮ ದೇವಾಲಯಕ್ಕೆ ತೆರಳಿದ್ದರು. ನಾಗೇಶ್‌ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು. ವಾಹನಕ್ಕೆ ಪೂಜೆ ಮಾಡಿಸಿಕೊಂಡು ಮರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು.

ಟಿಟಿ ವಾಹನ ಖರೀದಿಸಿ ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು. ಸೋಮವಾರದಿಂದ ದೇವರ ದರ್ಶನಕ್ಕೆ ಹೊರಟಿದ್ದ ಆದರ್ಶ, ನಿನ್ನೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ಟೆಂಪಲ್‌ನಲ್ಲಿ ವಾಹನ ಪೂಜೆ ಮಾಡಿಸಿ ಪೂಜೆ ಪೋಟೋಗಳನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಾಹನ ಛಿದ್ರಛಿದ್ರವಾಗಿದೆಯಲ್ಲದೆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದುರ್ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ನಂಬರ್ ಕೆಎ 51 ಡಿ3530ಗೆ ಟಿಟಿ ವಾಹನ ಸಂಖ್ಯೆ ಕೆಎ01 ಎಬಿ4760 ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಚಾಲಕ ಆದರ್ಶ ಇದಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಬಹುಶಃ ಲಾರಿ ಕಾಣಿಸಿರಲಾರದು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆದರು. ಸ್ಥಳಕ್ಕೆ ಹಾವೇರಿ ಎಸ್‌ಪಿ ಅಂಶುಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಟಿಟಿ ವಾಹನದಲ್ಲಿ 17 ಜನ ಪ್ರಯಾಣ ಮಾಡುತ್ತಿದ್ದರು. 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿರುವ ಗಾಯಾಳುಗಳು.

13 ಜನರ ಸಾವಿನ ಸುದ್ದಿ ಕೇಳಿ ಎಮ್ಮೆಹಟ್ಟಿ ಗ್ರಾಮದ ಜನತೆ ಶಾಕ್ ಆಗಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ವಿಶಾಲಾಕ್ಷಮ್ಮ, ಆದರ್ಶ್, ನಾಗೇಶ್, ಭಾಗ್ಯ, ಮಾನಸ, ಸುಭದ್ರತಾಯಿ ಮೂಲತಃ ಎಮ್ಮೆಹಟ್ಟಿ ಗ್ರಾಮದವರು. ಪರಶುರಾಮ್, ರೂಪ ದಂಪತಿಗಳು ಶಿವಮೊಗ್ಗ ನಗರದ ಹಾಲ್ಕೋಳ ನಿವಾಸಿಗಳು. ಮಂಜುಳಬಾಯಿ, ಮಂಜುಳ ಭದ್ರಾವತಿ ತಾಲೂಕಿನ ಕಲ್ಯಾಳ್ ಸರ್ಕಲ್‌ನವರು. ಅಂಜು ಕಡೂರು ತಾಲೂಕಿನ ಬೀರೂರು ನಿವಾಸಿ. ಪುಣ್ಯ ಬಾಯಿ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಹಾಲಿನ ಡೈರಿ ಗ್ರಾಮದ ನಿವಾಸಿ.

ಎಮ್ಮೆಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಮ್ಮೆಹಟ್ಟಿ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

Rain News: ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

rain news bhagamandala
ಭಾಗಮಂಡಲದಲ್ಲಿ ರಸ್ತೆ ಮುಳುಗಡೆ, ಕೊಯ್ನಾಡಿನಲ್ಲಿ ಶಾಲೆ ಮೇಲೆ ಕುಸಿದ ಗುಡ್ಡ
Koo

ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Monsoon) ಅಬ್ಬರಿಸುತ್ತಿದೆ. ಕರಾವಳಿ (Coast), ಮಲೆನಾಡಿನಲ್ಲಿ (Wester Gaht) ಮಳೆಯ ಆರ್ಭಟ (Rain News) ಜೋರಾಗಿದೆ. ಒಳನಾಡು, ಬಯಲುಸೀಮೆ ಹಾಗೂ ರಾಜಧಾನಿಯಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡಿನಲ್ಲಿ ನದಿಗಳು ತುಂಬಿ ಹರಿಯುತ್ತಿದೆ; ಜಲಪಾತಗಳು ಧುಮ್ಮಿಕ್ಕುತ್ತಿವೆ. ಹಲವೆಡೆ ಧರೆ ಕುಸಿದು ಮನೆಗಳು ನೆಲಕಚ್ಚಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ 20 ವರ್ಷದ ಯುವತಿ ಪ್ರತೀಕ್ಷಾ ಶೆಟ್ಟಿ ಅಸುನೀಗಿದ್ದಾರೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರಿನ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶುಕ್ರವಾರ ಕೂಡಾ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ಭಾರಿ ಮಳೆಗೆ ಮಣ್ಣು ಶಕ್ತಿ ಕಳೆದುಕೊಂಡಿದ್ದು, ಮನೆಯ ಆವರಣದಲ್ಲಿದ್ದ ಬಾವಿ ಕಣ್ಣೆದುರಿಗೇ ಕುಸಿದುಹೋಗಿದೆ. ಬಾವಿ ಕುಸಿಯುವ ದೃಶ್ಯ ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಬಳಿ ಭದ್ರಾ ನದಿ ಮೈತುಂಬಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಇದೆ. ಕಾಸರಗೋಡಿನ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತಗೊಂಡಿದೆ

ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಸುತ್ತಮುತ್ತಲೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿಶ್ವವಿಖ್ಯಾತ ಜೋಗ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದೆ. ತೀರ್ಥಹಳ್ಳಿ ಭಾಗದಲ್ಲಿ ವರ್ಷಧಾರೆಯಿಂದಾಗಿ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆಗುಂಬೆಯಲ್ಲಿ ಭೂಕುಸಿತ ಭೀತಿ ಇರುವುದರಿಂದ ಸೆಪ್ಟೆಂಬರ್ 15ರವರೆಗೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ.

ಘಟ್ಟ ಪ್ರದೇಶದಲ್ಲಿನ ಮಳೆಗೆ ಕುಮಾಧಾರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಬಳಿ ಸ್ನಾನಘಟ್ಟ, ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆ ಆಗಿದೆ. ನೇತ್ರಾವತಿ ನದಿ ಕೂಡಾ ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಪವಿತ್ರ ಸ್ನಾನಘಟ್ಟ ಮುಳುಗಿ, ಮುಖ್ಯ ದ್ವಾರದವೆರಗೂ ನೀರು ತಲುಪಿದೆ. ಭಕ್ತರು ಪುಣ್ಯ ಸ್ನಾನ ಹಾಗೂ ಪಿಂಡ ಪ್ರದಾನ ಮಾಡಲು ಸಾಧ್ಯವಾಗುತ್ತಿಲ್ಲ. ಕೊಡಗಿನ ಕೊಯ್ನಾಡಿನಲ್ಲಿ ಶಾಲಾ ಕಟ್ಟಡ ಮೇಲೆ ಗುಡ್ಡ ಕುಸಿದು ಶಾಲಾ ಕೊಠಡಿಯ ಗೋಡೆ, ಕಿಟಕಿ ಜಖಂ ಆಗಿವೆ. ಶಾಲೆಗೆ ರಜೆ ಇದ್ದುದ್ದರಿಂದ ಅನಾಹುತ ತಪ್ಪಿದೆ. ಕಳೆದ ಮಳೆಗಾಲದಲ್ಲೂ ಶಾಲೆಯ ಮೇಲೆ ಗುಡ್ಡ ಕುಸಿದು ಹಾನಿಯಾಗಿತ್ತು.

ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಡಲ ಕೊರೆತ ಆರಂಭವಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯವುದನ್ನು ನಿಲ್ಲಿಸಿದ್ದಾರೆ. ಕಾರವಾರದ ದೇವಬಾಗ್ ಕಡಲತೀರದಲ್ಲಿ ಕಡಲಕೊರೆತ ಹೆಚ್ಚಾಗಿದ್ದು, ರೆಸಾರ್ಟ್‌ಗೆ ಹಾನಿಯಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

Continue Reading
Advertisement
UGC NET Exam
ದೇಶ3 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ3 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ4 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ4 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ5 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ5 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ6 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ6 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ6 hours ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ6 hours ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ16 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌