Bank Fraud | ಸಹಕಾರಿ ಬ್ಯಾಂಕ್‌ಗಳ ಹಗರಣ; ಸಂತ್ರಸ್ತರಿಂದ ಪ್ರಧಾನಿ, ಗೃಹ ಮಂತ್ರಿ, ಸಿಎಂಗೆ ಪತ್ರ ರವಾನಿಸಲು ಸಹಿ ಸಂಗ್ರಹ ಅಭಿಯಾನ - Vistara News

ಕರ್ನಾಟಕ

Bank Fraud | ಸಹಕಾರಿ ಬ್ಯಾಂಕ್‌ಗಳ ಹಗರಣ; ಸಂತ್ರಸ್ತರಿಂದ ಪ್ರಧಾನಿ, ಗೃಹ ಮಂತ್ರಿ, ಸಿಎಂಗೆ ಪತ್ರ ರವಾನಿಸಲು ಸಹಿ ಸಂಗ್ರಹ ಅಭಿಯಾನ

ಸಹಕಾರಿ ಬ್ಯಾಂಕ್‌ಗಳ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಮತ್ತು ಸಂತ್ರಸ್ತ ಠೇವಣಿದಾರರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿ ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಹಗರಣದ (Bank Fraud) ಸಂತ್ರಸ್ತರು ಮಂಗಳವಾರ ಸಹಿ ಸಂಗ್ರಹ ಅಭಿಯಾನ ನಡೆಸಿದ್ದಾರೆ.

VISTARANEWS.COM


on

Bank Fraud
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಹಗರಣದ (Bank Fraud) ಸಂತ್ರಸ್ತರು ಪ್ರಧಾನಿ, ಕೇಂದ್ರ ಗೃಹ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ಪತ್ರ ರವಾನಿಸುವ ಸಲುವಾಗಿ ಸಹಿ ಸಂಗ್ರಹ ಅಭಿಯಾನವನ್ನು ಮಂಗಳವಾರ ನಡೆಸಿದ್ದಾರೆ.

ಈ ಹಗರಣ ಬೆಳಕಿಗೆ ಬಂದು ಮೂರು ವರ್ಷಗಳಾದರೂ ವಂಚನೆ ಮಾಡಿದ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ. ವಂಚನೆಗೊಳಗಾದ ಷೇರುದಾರರಿಗೆ ಮತ್ತು ಠೇವಣಿದಾರರಿಗೆ ಸೂಕ್ತ ನ್ಯಾಯ ಸಿಕ್ಕಿಲ್ಲ. ಈ ಹಿನ್ನಲೆಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ.

ಬಸವನಗುಡಿಯಲ್ಲಿರುವ ಶ್ರೀ ಗುರುರಾಘವೇಂದ್ರ ಕೋ- ಆಪರೇಟಿವ್ ಬ್ಯಾಂಕ್ ಮುಂಭಾಗದಲ್ಲಿ ನಡೆದ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಬ್ಯಾಂಕ್‌ನ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆಯ ಮಹಾ ಪೋಷಕ ಡಾ. ಶಂಕರ ಗುಹಾ ದ್ವಾರಕಾನಾಥ್ ಬೆಳ್ಳೂರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ವಂಚನೆಗೊಳಾಗದ ಸದಸ್ಯರು ಪ್ರತಿಭಟನೆ ಕೂಡ ನಡೆಸಿದರು.

ಕೂಡಲೇ ಸಂತ್ರಸ್ತರ ನೆರವಿಗೆ ಬರುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಮತ್ತು ಸಹಕಾರಿ ಸಚಿವರಾದ ಅಮಿತ್ ಶಾ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗಿದ್ದು, ಇದಕ್ಕೆ ಸಹಿ ಪಡೆದುಕೊಳ್ಳಲಾಯಿತು. ಶ್ರೀ ಗುರು ರಾಘವೇಂದ್ರ ಬ್ಯಾಂಕ್, ವಸಿಷ್ಠ ಸೌಹಾರ್ದ, ಗುರುಸಾರ್ವಭೌಮ ಸೊಸೈಟಿ, ಕಣ್ವ ಸೊಸೈಟಿ, ನಾಗರತ್ನ ಬ್ಯಾಂಕ್ ಹಾಗೂ ಇನ್ನುಳಿದ ಎಲ್ಲಾ ಸಹಕಾರಿ ಬ್ಯಾಂಕ್ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶಂಕರ ಗುಹಾ ದ್ವಾರಕಾನಾಥ್, ಗುರು ರಾಘವೇಂದ್ರ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಮೂರು ವರ್ಷ ಕಳೆದಿದೆ. ಆದರೆ ಈ ಬಗ್ಗೆ ಸರಿಯಾಗಿ ತನಿಖೆ ನಡೆಯುತ್ತಿಲ್ಲ. ಸಿಬಿಐಗೆ ಈ ಪ್ರಕರಣವನ್ನು ಒಪ್ಪಿಸುಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಕ್ಷೇತ್ರದ ಶಾಸಕ ರವಿಸುಬ್ರಣ್ಯ ಅವರು ಈ ವಿಷಯದಲ್ಲಿ ಬೇಜವಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಮೂರು ವರ್ಷಗಳಿಂದ ಹೇಳಿದ್ದನ್ನೇ ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದ ಡಾ. ಶಂಕರ ಗುಹಾ ದ್ವಾರಕಾನಾಥ್ ಬೆಳ್ಳೂರು, ಡಿಐಸಿಜಿಸಿ (DICGC) ಇನ್ಷೂರೆನ್ಸ್ ಹಣ ಬಂದಿರುವುದಕ್ಕೆ ಯಾರು ಕ್ರೆಡಿಟ್ ತೆಗೆದುಕೊಳ್ಳಬೇಕಿಲ್ಲ. ಇದು ಸಹಜವಾದ ಪ್ರಕ್ರಿಯೆ ಎಂದು ಎಚ್ಚರಿಸಿದರು.

ಸಂಸದ ತೇಜಸ್ವಿಯವರನ್ನು ನಾವು ಅತಿಯಾಗಿ ನಂಬಿದ್ದು ತಪ್ಪಾಯಿತು. ಅವರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದ ಡಾ. ಶಂಕರ ಗುಹಾ ದ್ವಾರಕಾನಾಥ್‌ ಬೆಳ್ಳೂರು, ಇತ್ತೀಚೆಗೆ ವಿಧಾನಸಭೆಯಲ್ಲಿ ಸಹಕಾರಿ ಸಚಿವರು ಕೂಡ ಈ ವಿಷಯದಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ. ಈ ಅಕ್ರಮದಲ್ಲಿ ಭಾಗಿಯಾದವರ ಸಹಾಯವನ್ನು ಸಂಸದ ತೇಜಸ್ವಿ ಸೂರ್ಯ ಪಡೆದುಕೊಂಡಿರಬಹುದು. ಹೀಗಾಗಿಯೇ ಅವರ ಬಗ್ಗೆ ಮೃದುಧೋರಣೆ ತಾಳುತ್ತಿದ್ದಾರೆ ಎಂದು ಟೀಕಿಸಿದರು.

ಈ ಪ್ರಕರಣವನ್ನು ಕೂಡಲೇ ಸಿಬಿಐಗೆ ಒಪ್ಪಿಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ ಅವರು, ಈ ವಂಚನೆಯಿಂದ ಅಘಾತಕ್ಕೊಳಗಾದ ಸುಮಾರು 150 ಮಂದಿ ಸಂತ್ರಸ್ತ ಠೇವಣಿದಾರರು ಮತ್ತು ಷೇರುದಾರರು ತೀರಿಕೊಂಡಿದ್ದಾರೆ. ಅವರಿಗೆಲ್ಲ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಕೋ-ಆಪರೇಟಿವ್ ಹಗರಣಗಳಿಂದಾದ ನಷ್ಟ 25,000 ಕೋಟಿ ರೂಪಾಯಿ. ಒಟ್ಟು 1.8ಕೋಟಿ ಜನ ಸಂತ್ರಸ್ತರಾಗಿದ್ದಾರೆ. ಅಂದರೆ ಮೂವರಲ್ಲಿ ಒಬ್ಬರಿಗೆ ಸಹಕಾರಿ ಬ್ಯಾಂಕ್‌ಗಳಲ್ಲಿನ ವಂಚನೆಯಿಂದಾಗಿ ಮೋಸವಾಗಿದೆ. ಇದನ್ನ ತಡೆಯಲು ಸರಿಯಾದ ಕಾನೂನು ಇಲ್ಲ. ಸಂಸದ ತೇಜಸ್ವಿ ಸೂರ್ಯರವರು ಈ ಪ್ರಕರಣದಲ್ಲಿ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿದ್ದಲ್ಲಿ ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಬಹುದಿತ್ತು. ಆದರೆ ಎಲ್ಲರನ್ನೂ ದೂರ ಮಾಡಿ, ತಾವೇ ಕ್ರೆಡಿಟ್ ತೆಗೆದುಕೊಳ್ಳಲು ಹೋಗಿ ಜನ ಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ. ಬಹುಶಃ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಅವರು ಇದ್ದಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಗುಹಾ ದ್ವಾರಕಾನಾಥ್‌ ಬೆಳ್ಳೂರು ಹೇಳಿದ್ದಾರೆ.

ಇದನ್ನೂ ಓದಿ | Bank Fraud | ಕೋಆಪರೇಟಿವ್‌ ಬ್ಯಾಂಕ್‌ ಧೋಖಾ; ಗ್ರಾಹಕರ ಮುತ್ತಿಗೆ ಕಂಡು ಸಿಬ್ಬಂದಿ ಆತ್ಮಹತ್ಯೆ ಯತ್ನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

MLC Election: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಜೂನ್ 01ರ ಸಂಜೆ 06 ಗಂಟೆಯಿಂದ ಜೂ. 03ರ ಮಧ್ಯರಾತ್ರಿಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೆಲವು ಷರತ್ತುಗಳನ್ನು ವಿಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

MLC Election North East Graduates Constituency Election Prohibitory order imposed in Vijayanagar district from June 1
Koo

ಹೊಸಪೇಟೆ: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆಯನ್ನು (MLC Election) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಜೂನ್ 01ರ ಸಂಜೆ 06 ಗಂಟೆಯಿಂದ ಜೂ. 03ರ ಮಧ್ಯರಾತ್ರಿಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೆಲವು ಷರತ್ತುಗಳನ್ನು ವಿಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ., ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯೊಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜಿರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್‌ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಹಾಗೂ ಯಾವುದೇ ದಾಹಕ ವಸ್ತುಗಳನ್ನು ಹಾಗೂ ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮಾಡುವಂತಿಲ್ಲ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಶವಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮಾರ್ಗಸೂಚಿಗಳನ್ನು ನಿಯಮಗಳನ್ನು ಪಾಲಿಸುವುದು., ಚುನಾವಣಾ ಕಾರ್ಯದಲ್ಲಿ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆ ಕೇಂದ್ರಗಳ ಸುತ್ತಲು 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಪೋನ್, ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಷರತ್ತುಗಳನ್ನು ಪಾಲಿಸತಕ್ಕದ್ದು., ಮತಗಟ್ಟೆಗಳ ಸುತ್ತಲೂ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಚುನಾವಣೆಯ ಮತದಾನವು ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಚುನಾವಣೆ ಪ್ರಚಾರ ಹಾಗೂ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಸಮಯದಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದು ನಿರ್ಬಂಧಿಸಿರುವುದಿಲ್ಲ. ಆದರೆ 5 ಜನರಿಗಿಂತ ಹೆಚ್ಚಿನ ಜನರು ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತಯಾಚಿಸುವುದು ನಿರ್ಬಂಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Artificially Ripened Fruits: ಬಾಳೆ, ಮಾವು ಮತ್ತಿತರ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ರಾಸಾಯನಿಕಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಬಿಜೆಪಿ ಯುವ ಮುಖಂಡರೊಬ್ಬರು, ಗಂಗಾವತಿ ನಗರಸಭೆಗೆ ಮನವಿ ಸಲ್ಲಿಸಿದ್ದಾರೆ.

VISTARANEWS.COM


on

Artificially ripened fruits
Koo

ಗಂಗಾವತಿ: ಹಣ್ಣುಗಳನ್ನು ತ್ವರಿತಗತಿಯಲ್ಲಿ ಮಾಗಿಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ದುಡ್ಡು ಮಾಡಬೇಕೆಂಬ ಕಾರಣಕ್ಕೆ ನಗರದಲ್ಲಿ ಬಹುತೇಕ ವರ್ತಕರು ಬಾಳೆ ಮತ್ತು ಮಾವಿನ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ರಾಸಾಯನಿಕಗಳನ್ನು (Artificially Ripened Fruits) ಬಳಸುತ್ತಿದ್ದು, ಇದರಿಂದ ಜನರಲ್ಲಿ ಕ್ಯಾನ್ಸರ್‌ನಂತ ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂಬ ದೂರು ದಾಖಲಾಗಿದೆ.

ರಾಚಪ್ಪ ಸಿದ್ದಾಪುರ

ನಗರಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಯುವ ಮುಖಂಡ ರಾಚಪ್ಪ ಸಿದ್ದಾಪುರ ಅವರು ಈ ಬಗ್ಗೆ ನಗರಸಭೆಯ ಪೌರಾಯುಕ್ತರಿಗೆ ದೂರು ಸಲ್ಲಿಸಿದ್ದು, ಕೃತಕವಾಗಿ ರಾಸಾಯನಿಕಗಳನ್ನು ಬಳಸಿಕೊಂಡು ಹಣ್ಣುಗಳನ್ನು ಮಾಗಿಸುವ ಘಟಕಗಳ ಮೇಲೆ ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನಗರದಲ್ಲಿ ಬಾಳೆ ಮತ್ತು ಮಾವಿನ ಹಣ್ಣುಗಳನ್ನು ಬೇಗನೇ ಮಾಗಿಸುವ ಮತ್ತು ಆಕರ್ಷಕ ಬಣ್ಣಗಳ ಮೂಲಕ ಗ್ರಾಹಕರನ್ನು ಆಕರ್ಷಿಸಲು ವರ್ತಕರು ಕ್ಯಾಲ್ಷಿಯಂ ಕಾರ್ಬೈಡ್‌ನಂತಹ (calcium carbide) ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕ್ಯಾಲ್ಷಿಯಂ ಕಾರ್ಬೈಡ್‌ನಿಂದ ಆರ್ಸೆನಿಕ್ ಮತ್ತು ಫಾಸ್ಪರಸ್‌ನಂತಃ ಅಂಶಹೊಂದಿರುವ ಅಸಿಟಿಲಿನ್ ಎಂಬ ಅನಿಲ ಬಿಡುಗಡೆಯಾಗುತ್ತದೆ. ಇದು ಮಾನವನ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಇಂತಹ ರಾಸಾಯನಿಕಯುಕ್ತ ಹಣ್ಣುಗಳನ್ನು ದೀರ್ಘಕಾಲ ಬಳಕೆ ಮಾಡಿದರೆ ಕ್ಯಾನ್ಸರ್‌ನಂತಹ ಕಾಯಿಲೆ ಬರುತ್ತದೆ.
ಈ ಹಿಂದಿನ ಕಾಲದಲ್ಲಿ ಬಿಡಿ-ಸಿಗರೇಟ್, ಜರ್ದಾ, ಗುಟ್ಕಾದಂತ ದುಶ್ಚಟಗಳಿರುವ ವ್ಯಕ್ತಿಗಳಿಗೆ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ, ಈಗ ಯಾವುದೇ ಚಟವಿಲ್ಲದ ವ್ಯಕ್ತಿಗಳಲ್ಲೂ ಕ್ಯಾನ್ಸರ್‌ನಂತಹ ಕಾಯಿಲೆ ಕಾಣಿಸಿಕೊಳ್ಳಲು ಹಣ್ಣುಗಳಿಗೆ ಉಪಯೋಗಿಸುವ ರಾಸಾಯನಿಕಗಳು ಕಾರಣವಾಗಿದೆ.

ಇದನ್ನೂ ಓದಿ | FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಕೂಡಲೇ ನಗರಸಭೆಯ ಅಧಿಕಾರಿಗಳು ಸೂಕ್ತಗಮನ ಹರಿಸಿ ರಾಸಾಯನಿಕಗಳಿಂದ ಹಣ್ಣುಗಳನ್ನು ಕೃತಕವಾಗಿ ಮಾಗಿಸುವ ಘಟಕಗಳ ಮೇಲೆ ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಚಪ್ಪ ಸಿದ್ದಾಪುರ ಒತ್ತಾಯಿಸಿದ್ದಾರೆ.

Continue Reading

ಯಾದಗಿರಿ

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Yadgiri News: ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೇ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಂಡರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಖಡಕ್ ಸೂಚನೆ ನೀಡಿದ್ದಾರೆ.

VISTARANEWS.COM


on

Legal action if drought relief money is credited to farmers loans says Dr Sushila
Koo

ಯಾದಗಿರಿ: ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ (Drought) ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೇ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಂಡರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಖಡಕ್ ಸೂಚನೆ (Yadgiri News) ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ರೈತರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಏನಾದರೂ ತಾಂತ್ರಿಕ ದೋಷಗಳಿದ್ದರೆ ತಿಳುವಳಿಕೆ ಮೂಡಿಸಿ ಇತ್ಯರ್ಥ ಪಡಿಸಬೇಕು. ಬ್ಯಾಂಕುಗಳ ವಿರುದ್ಧ ಸಾರ್ವಜನಿಕರಿಂದ ದೂರು ಬರದಂತೆ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಯಾದಗಿರಿ ಜಿಲ್ಲೆಯನ್ನು 2023-24 ನೇ ಸಾಲಿನಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅದರಂತೆ ಸರ್ಕಾರದಿಂದ ಬರ ಪರಿಹಾರದ ಮೊತ್ತವನ್ನು ರೈತರಿಗೆ ಪರಿಹಾರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದ್ದು, ಆದರೆ ಕೆಲ ರೈತರು ಬ್ಯಾಂಕ್ ಅಧಿಕಾರಿಗಳು ಸದರಿ ಪರಿಹಾರದ ಮೊತ್ತವನ್ನು ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ತಿಳಿಸಿರುತ್ತಾರೆ. ಇಂತಹ ಸಮಸ್ಯೆಗಳಿಗೆ ಅಧಿಕಾರಿಗಳು ಅವಕಾಶ ಕೊಡಬಾರದು.

ಈ ನಿಟ್ಟಿನಲ್ಲಿ ಪ್ರಕೃತಿ ವಿಕೋಪದಡಿ ಸಂದಾಯವಾಗುವ ಹಣವನ್ನು ರೈತರ ಸಾಲದ ಖಾತೆಗೆ ಜಮಾ ಮಾಡುವಂತಿಲ್ಲ ಎಂದು ಸ್ಪಷ್ಟವಾದ ಸರ್ಕಾರದ ನಿರ್ದೇಶನವಿರುತ್ತದೆ. ಈ ರೀತಿ ಮಾಡಿದಲ್ಲಿ ತಾವುಗಳು ಸರ್ಕಾರದ ನಿರ್ದೇಶನ ಉಲ್ಲಂಘಿಸಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಇಲ್ಲವಾದಲ್ಲಿ ತಪ್ಪು ಮಾಡುವ ಬ್ಯಾಂಕ್‌ಗಳ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡೇ-ನಲ್ಮ್‌ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯಲು ನೋಂದಣಿ ಪ್ರಮಾಣ ಪತ್ರ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಸ್ವ- ಸಹಾಯ ಸಂಘಗಳ ಖಾತೆ ತೆರೆಯಲು ಅವಕಾಶ ಕಲ್ಪಿಸಿ ಕೊಡುವಂತೆ ನಿರ್ದೇಶಿಸಿದರು.

ಪಿ.ಎಂ ಸ್ವನಿಧಿ ಯೋಜನೆಯಡಿಯಲ್ಲಿ ಸಾಲ ನೀಡುವಾಗ ಫಲಾನುಭವಿಗಳಿಗೆ ಯಾವುದೇ ಸ್ಟ್ಯಾಂಪ್ ಶುಲ್ಕ ವಿಧಿಸತಕ್ಕದ್ದಲ್ಲ ಎಂದು ಇದೇ ವೇಳೆ ಸೂಚಿಸಿದರು.

ಇದನ್ನೂ ಓದಿ: Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ, ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್, ಎಸ್‌ಬಿಐ ಪ್ರಾದೇಶಿಕ ಕಛೇರಿಯ ಮುಖ್ಯ ವ್ಯವಸ್ಥಾಪಕ ಲೋಯಿಸ್ ಸಿ.ಎಂ, ಕೆ.ಜಿ.ಬಿ ಕರ್ನಾಟಕ ಗ್ರಾಮೀಣ ಪ್ರಾದೇಶಿಕ ವ್ಯವಸ್ಥಾಪಕ ಗುರುಪ್ರಸಾದ್ ಸ್ವಾಮಿ, ಕೆ.ಜಿ.ಬಿ ಕರ್ನಾಟಕ ರಿಜಿನಲ್ ಆಫೀಸರ್ (ಸಿ.ಎಂ. ಕ್ರೆಡಿಟ್) ಸುಬೇದಾರ್, ಲೀಡ್ ಬ್ಯಾಂಕ್‌ನ ಸಿಬ್ಬಂದಿಗಳಾದ ಕುಮಾರಸ್ವಾಮಿ, ಅಮೀರ್ ಪಟೇಲ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ತುಮಕೂರು

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

Tumkur News: ಕೊರಟಗೆರೆ ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ನೆರೆವೇರಿತು. ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

VISTARANEWS.COM


on

Shree Bevinalamma Devi Jaladhi Mahotsav celebration in koratagere taluk
Koo

ಕೊರಟಗೆರೆ: ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ (Tumkur News) ನೆರೆವೇರಿತು.

ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಇದನ್ನೂ ಓದಿ: Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

ಸಾಹಿತಿ ಡಾ. ನರಸಿಂಹಮೂರ್ತಿ ಮಾತನಾಡಿ, ಸುಮಾರು 250 ವರ್ಷಗಳ ಇತಿಹಾಸವುಳ್ಳ ದೇವಗಾನಿಕೆ ಶ್ರೀ ಬೇವಿನಳಮ್ಮ ತಾಯಿ ಏಳು ಜನ ಅಕ್ಕತಂಗಿಯರಲ್ಲಿ ತಾಯಿಯು ಒಬ್ಬಳು. ಈ ತಾಯಿಯ ಜಾತ್ರೆ-ಜಲಧಿ ವಿಶೇಷವಾಗಿ ಆಚರಣೆ ಮಾಡುತ್ತಾ ನಮ್ಮ ಪೂರ್ವಿಕರು ಬಂದಿದ್ದಾರೆ. ಹಾಗೆ ನಾವು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಾ ಬಂದಿದ್ದೇವೆ. ಈ ದೇವಿಯ ಜಾತ್ರೆಯನ್ನು ಐದು ವರ್ಷಕ್ಕೊಮ್ಮೆ ಮಾಡುತ್ತಿದ್ದು, ಜಲಧಿಯನ್ನು ವರ್ಷಕ್ಕೊಮ್ಮೆ ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಮಾತನಾಡಿ, ಜಟ್ಟಿ ಅಗ್ರಹಾರ ಎಂದರೇ ಜಟ್ಟಿ ಮನೆತನದವರಿಗೆ ರಾಜ ಮಹಾರಾಜರು ಉಡುಗೊರೆಯಾಗಿ ನೀಡಿದಂತಹ ಇತಿಹಾಸವುಳ್ಳ ಗ್ರಾಮವಾಗಿದ್ದು, ಇಲ್ಲಿ ನೆಲೆಸಿರುವ ಗ್ರಾಮ ಶಕ್ತಿ ಬೇವಿನಳಮ್ಮ ತಾಯಿಯು ಗ್ರಾಮಕ್ಕೆ ಯಾವುದೇ ತೊಂದರೆ ತೊಡಕುಗಳು ಆಗದಂತೆ ಕಾಪಾಡಿಕೊಂಡು ಬರುತ್ತಿದ್ದಾಳೆ. ಬರಗಾಲವಿರುವುದರಿಂದ ಅದ್ದೂರಿಯಾಗಿ ಜಾತ್ರೆ ಮಾಡಲು ಆಗದ ಕಾರಣ ಜಲಧಿಯನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:

ಈ ಸಂದರ್ಭದಲ್ಲಿ ಪೂಜಾರು ಲಕ್ಷ್ಮೀಶ್, ಗ್ರಾಮಸ್ಥರಾದ ತಿಮ್ಮರಾಜು, ಮಧುಸೂಧನ್, ಟೈಗರ್ ನಾಗರಾಜು, ಬಸವರಾಜು, ಕೇಬಲ್ ಸಿದ್ದಗಂಗಯ್ಯ, ಮಂಜುನಾಥ್, ಹನುಮಂತರಾಜು, ಚಂದ್ರಕುಮಾರ್, ಸಿದ್ದರಾಜು, ದೇವರಾಜು, ನಾಗರಾಜು, ಕೆಂಪರಾಜು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಪಾಲ್ಗೊಂಡಿದ್ದರು.

Continue Reading
Advertisement
MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ20 seconds ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Artificially ripened fruits
ಕರ್ನಾಟಕ43 seconds ago

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Legal action if drought relief money is credited to farmers loans says Dr Sushila
ಯಾದಗಿರಿ2 mins ago

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Shree Bevinalamma Devi Jaladhi Mahotsav celebration in koratagere taluk
ತುಮಕೂರು4 mins ago

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

udupi Shree Bhandarakeri math annual award programme in bengaluru
ಕರ್ನಾಟಕ6 mins ago

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

5 foreign coins found in anjanadri temple hundi counting
ಕರ್ನಾಟಕ8 mins ago

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

IPL 2024
ಪ್ರಮುಖ ಸುದ್ದಿ27 mins ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Narendra Modi
ದೇಶ34 mins ago

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Janardhan Reddy
ರಾಜಕೀಯ37 mins ago

Janardhan Reddy: ಮಡದಿಗಾಗಿ ಮರವೇರಿ ಮಾವು ಕಿತ್ತುಕೊಟ್ಟ ರೆಡ್ಡಿ: ವಿಡಿಯೊ ವೈರಲ್

Harbhajan Singh
ಕ್ರೀಡೆ1 hour ago

Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು9 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು10 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌