bbmp pourakarmikas Model code of conduct prevents permanent appointment of pourakarmikasBbmp Pourakarmikas: ಪೌರಕಾರ್ಮಿಕರ ಕಾಯಂ ನೇಮಕಾತಿಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ; ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯ್ತು - Vistara News

ಕರ್ನಾಟಕ

Bbmp Pourakarmikas: ಪೌರಕಾರ್ಮಿಕರ ಕಾಯಂ ನೇಮಕಾತಿಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ; ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯ್ತು

Bbmp Pourakarmikas: ಹಲವು ದಿನಗಳ ಹೋರಾಟದ ಫಲವಾಗಿ ಪೌರಕಾರ್ಮಿಕರ ನೌಕರಿ ಕಾಯಂಗೊಳಿಸುವುದಾಗಿ ಬಿಜೆಪಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದೀಗ ಕಾಯಂ ನೇಮಕಾತಿಗೆ ವಿಧಾನಸಭಾ ಚುನಾವಣಾ (Karnataka Election 2023) ನೀತಿ ಸಂಹಿತೆ ತಣ್ಣೀರು ಎರಚಿದೆ. ಈ ಮೂಲಕ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

VISTARANEWS.COM


on

BBMP workers stage a protest against the Government
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಸವರಾಜ್‌ ಬೊಮ್ಮಾಯಿ ಸರ್ಕಾರ ಪೌರಕಾರ್ಮಿಕರ (Bbmp Pourakarmikas) ಒತ್ತಡಕ್ಕೆ ಮಣಿದು ನೌಕರಿಯನ್ನು ಕಾಯಂಗೊಳಿಸುವ ನಿರ್ಧಾರ ಮಾಡಿತ್ತು. ಇದಕ್ಕಾಗಿ ಮೂರು ತಿಂಗಳ ಸಮಯವಕಾಶ ಕೇಳಿ ನೌಕರರ ಪ್ರತಿಭಟನೆ ಅಂತ್ಯಗೊಳಿಸಿತ್ತು. ಕಾಯಂ ನೇಮಕಾತಿಯ ಖುಷಿಯಲ್ಲಿದ್ದ ನೌಕರರಿಗೆ ಈಗ ಚುನಾವಣಾ ನೀತಿಸಂಹಿತೆ ತಣ್ಣೀರು ಎರಚಿದೆ.

ಹತ್ತಾರು ಬಾರಿ ಹಗ್ಗಜಗ್ಗಾಟದ ಬಳಿಕ ಬಿಬಿಎಂಪಿ ಸೇರಿದಂತೆ ರಾಜ್ಯದ 8 ಮಹಾನಗರ ಪಾಲಿಕೆಯ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 14,980 ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ಆದೇಶ ಮಾಡಿತ್ತು. ಆದರೆ ಈ ನೇಮಕಾತಿ ಆದೇಶಕ್ಕೆ ಈಗ ಚುನಾವಣೆ ನೀತಿಸಂಹಿತೆಯ ಗ್ರಹಣ ಹಿಡಿದಿದೆ.

ಚುನಾವಣೆ ಸಮೀಪಿಸುತ್ತಿದಂತೆ ಬಿಜೆಪಿ ಸರ್ಕಾರ ಕಳೆದ ಫೆಬ್ರವರಿಯಲ್ಲಿ ಬಿಬಿಎಂಪಿ ಸೇರಿದಂತೆ ರಾಜ್ಯದ ಇನ್ನು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ ನಿಯಮ ರೂಪಿಸಿತ್ತು. ಕೆಲವು ನೇಮಕಾತಿ ನಿಯಮಗಳನ್ನು ಸಡಿಲಗೊಳಿಸಿ ಅರ್ಜಿ ಆಹ್ವಾನಿಸಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನೂ ಬಿಡುಗಡೆ ಮಾಡಿತ್ತು.

ಕಳೆದ ವರ್ಷ ಮಾರ್ಚ್‌ನಲ್ಲಿ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರು ಎಲ್ಲರೂ ಏಕಕಾಲಕ್ಕೆ ಕಾಯಂಗೊಳಿಸಬೇಕೆಂದು ಪಟ್ಟುಹಿಡಿದ ಹಿನ್ನೆಲೆ ಹೆಚ್ಚುವರಿಯಾಗಿ 14 ಸಾವಿರ ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಇದೀಗ ನೀತಿಸಂಹಿತೆ ಜಾರಿ ಇರುವುದರಿಂದ ಪೌರಕಾರ್ಮಿಕರು ಕಂಗಾಲಾಗಿದ್ದಾರೆ.

ಇದಕ್ಕೆ ಕಾರಣ ವಿಧಾನಸಭಾ ಚುನಾವಣೆ. ಹೌದು ಚುನಾವಣೆ ಮುಕ್ತಾಯಗೊಂಡು ಸರ್ಕಾರ ರಚನೆ ಆಗಬೇಕು. ಬಳಿಕ ಸಂಬಂಧಪಟ್ಟ ಇಲಾಖೆಗೆ ಸಚಿವರ ನೇಮಕವಾಗುವವರೆಗೆ ಸುಮಾರು 6 ತಿಂಗಳ ನಂತರ ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಮರು ಚಾಲನೆ ದೊರೆಯುವ ಸಾಧ್ಯತೆ ಇದೆ.

ಚುನಾವಣೆ ಹೊತ್ತಿನಲ್ಲಿ ರಾಜ್ಯ ಸರ್ಕಾರ ತರಾತುರಿಯಲ್ಲಿ ಗುತ್ತಿಗೆ ಪೌರಕಾರ್ಮಿಕರ ಒತ್ತಡಕ್ಕೆ ಮಣಿದು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಆದೇಶ ಮಾಡಿದೆ. ಆದರೆ ಮುಂದೆ ಅಸ್ತಿತ್ವಕ್ಕೆ ಬರುವ ಸರ್ಕಾರ, ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಂದಿನ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: Shivamogga Jail: ಶಿವಮೊಗ್ಗ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು; ಕೊಲೆಯೆಂದು ಕುಟುಂಬಸ್ಥರ ಆರೋಪ

ಹೀಗಾಗಿ, ಗುತ್ತಿಗೆ ಪೌರಕಾರ್ಮಿಕರ ಕಾಯಂಗೊಳಿಸುವ ಪ್ರಕ್ರಿಯೆ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಇದೇ ಭೀತಿಯಲ್ಲಿರುವ ಪೌರಕಾರ್ಮಿಕರು ಈಗ ಮತ್ತೆ ಹೋರಾಟಕ್ಕೆ ಯೋಜನೆ ರೂಪಿಸಿದ್ದಾರೆ. ನಮಗೆ ಅದಷ್ಟು ಬೇಗ ನೇಮಕಾತಿ ಆದೇಶ ನೀಡಬೇಕು, ಇಲ್ಲವಾದರೆ ರಾಜ್ಯ ವ್ಯಾಪ್ತಿ ಹೋರಾಟ ಮಾಡುವುದಾಗಿ ಬಿಬಿಎಂಪಿ ಪೌರಕಾರ್ಮಿಕರ ಮುಖಂಡ ಬಾಬು ಎಚ್ಚರಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋಲಾರ

Murder Case: ಶಿಕ್ಷಕಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ, ಹಂತಕರಿಂದ ಪುತ್ರಿ ಪಾರು

Murder Case: ಮುಳಬಾಗಿಲು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ ದಿವ್ಯಶ್ರೀ ಅವರು ಮಗಳೊಂದಿಗೆ ವಾಸವಾಗಿದ್ದು, ಇವರ ಪತಿ ಪದ್ಮನಾಭ ಶೆಟ್ಟಿ ಅಗರಬತ್ತಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದಾರೆ. ಇವರ ಮತ್ತೊಬ್ಬ ಮಗ ಪ್ರೇಮ್‌ ವಿದ್ಯಾಭ್ಯಾಸದ ನಿಮಿತ್ತ ಬೇರೆ ಊರಿನಲ್ಲಿ ನೆಲೆಸಿದ್ದಾರೆ. ಪತಿ ಹೊರಗೆ ಹೋಗಿದ್ದು, ಮನೆಯಲ್ಲಿ ದಿವ್ಯಶ್ರೀ ಹಾಗೂ ಪುತ್ರಿ ನಿಶಾ ಮಾತ್ರ ಇದ್ದಾಗ ಪಾತಕ ನಡೆದಿದೆ.

VISTARANEWS.COM


on

teacher murder case
Koo

ಕೋಲಾರ: ಮನೆಯೊಳಗೆ ನುಗ್ಗಿದ ಮೂವರು ಹಂತಕರು (Killers) ಚಾಕುವಿನಿಂದ ಶಿಕ್ಷಕಿಯೊಬ್ಬರ (Teacher) ಕುತ್ತಿಗೆ ಕೊಯ್ದು (slitting throat) ಕೊಲೆ (Murder Case) ಮಾಡಿರುವ ಘಟನೆ ಮುಳಬಾಗಿಲು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಲಾರ (Kolar news) ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಿವ್ಯಶ್ರೀ (46) ಕೊಲೆಯಾದ ಶಿಕ್ಷಕಿ. ಮನೆಯ ಮೇಲ್ಮಾಳಿಗೆಯಲ್ಲಿದ್ದ ಪುತ್ರಿ ಕೊಲೆಗಡುಕರ ದೃಷ್ಟಿಗೆ ಬೀಳದೆ ಪಾರಾಗಿದ್ದಾಳೆ.

ಮುಳಬಾಗಿಲು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ ದಿವ್ಯಶ್ರೀ ಅವರು ಮಗಳೊಂದಿಗೆ ವಾಸವಾಗಿದ್ದು, ಇವರ ಪತಿ ಪದ್ಮನಾಭ ಶೆಟ್ಟಿ ಅಗರಬತ್ತಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದಾರೆ. ಇವರ ಮತ್ತೊಬ್ಬ ಮಗ ಪ್ರೇಮ್‌ ವಿದ್ಯಾಭ್ಯಾಸದ ನಿಮಿತ್ತ ಬೇರೆ ಊರಿನಲ್ಲಿ ನೆಲೆಸಿದ್ದಾರೆ. ಪತಿ ಹೊರಗೆ ಹೋಗಿದ್ದು, ಮನೆಯಲ್ಲಿ ದಿವ್ಯಶ್ರೀ ಹಾಗೂ ಪುತ್ರಿ ನಿಶಾ ಮಾತ್ರ ಇದ್ದಾಗ ಪಾತಕ ನಡೆದಿದೆ.

ನಿಶಾ ನಿನ್ನೆ ಸಂಜೆ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಓದುತ್ತಿದ್ದಳು. ನೆಲ ಮಾಳಿಗೆಯಲ್ಲಿ ದಿವ್ಯಶ್ರೀ ಅವರು ರಾತ್ರಿ 7.30ರ ಸುಮಾರಿನಲ್ಲಿ ಟಿವಿ ವೀಕ್ಷಿಸುತ್ತ ಕುಳಿತಿದ್ದರು. ಆ ವೇಳೆ ಮೂವರು ಹಂತಕರು ಏಕಾಏಕಿ ಮನೆಯೊಳಗೆ ನುಗ್ಗಿ ಚಾಕುವಿನಿಂದ ದಿವ್ಯಶ್ರೀ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮನೆಯೊಳಗೆ ಏನೋ ಗಲಾಟೆಯಾಗುತ್ತಿದೆ ಎಂದು ನಿಶಾ ಕೆಳಗೆ ಇಳಿದು ಬಂದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಇದ್ದದ್ದು ಕಂಡು ಚೀರಾಡಿದ್ದಾರೆ. ನೆರೆಹೊರೆಯವರು ಏನಾಯಿತೆಂದು ಇವರ ಮನೆಗೆ ಬಂದು ನೋಡಿ ತಕ್ಷಣ ರಕ್ತದ ಮಡುವಿನಲ್ಲಿ ಬಿದಿದ್ದ ದಿವ್ಯಶ್ರೀ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜನಭರಿತ ಈ ಬಡಾವಣೆಯಲ್ಲಿ ಶಿಕ್ಷಕಿಯ ಕೊಲೆ ನಡೆದಿರುವುದು ಕಂಡು ಆತಂಕಗೊಂಡ ಸುತ್ತಮುತ್ತಲ ನಿವಾಸಿಗಳು ಭಯಭೀತರಾಗಿದ್ದಾರೆ.

ಎಸ್‌‍ಪಿ ನಿಖಿಲ್‌, ತಹಸೀಲ್ದಾರ್‌ ವೆಂಕಟಚಲಪತಿ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ರವಿಶಂಕರ್‌, ಜಗದೀಶ್‌, ಡಿವೈಎಸ್‌‍ಪಿ ನಂದಕುಮಾರ್‌, ನಗರ ಠಾಣೆ ಇನ್‌ಸ್ಪೆಕ್ಟರ್‌ ಶಿವಕುಮಾರ್‌, ಗ್ರಾಮಾಂತರ ಠಾಣೆ ಸಿ.ಪಿ.ಐ ಸತೀಶ್‌, ಪಿಎಸ್‌‍ಐಗಳಾದ ವಿಠಲ್‌ ವೈ ತಳವಾರ್‌, ಮಮತಾ, ನಂಗ್ಲಿ ಠಾಣೆಯ ಪಿಎಸ್‌‍ಐ ಅರ್ಜುನ್‌ ಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ.

ಈ ಕೊಲೆ ಪೂರ್ವ ಯೋಜಿತವೇ ಅಥವಾ ಮನೆ ಕಳವಿಗೆ ಬಂದ ಕಳ್ಳರು ಈ ಕೃತ್ಯವೆಸಗಿದ್ದಾರೆಯೇ ಅಥವಾ ಬೇರೆ ಯಾವ ದುರುದ್ದೇಶದಿಂದ ಶಿಕ್ಷಕಿಯನ್ನು ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆಯೆಂದಷ್ಟೇ ಹೊರ ಬರಬೇಕಿದೆ. ಸ್ಥಳಕ್ಕೆ ಕೋಲಾರದಿಂದ ಬೆರಳಚ್ಚು ತಜ್ಞರು, ಎಫ್‌ಎಸ್‌‍ಎಲ್‌ ತಂಡ ಆಗಮಿಸಿ ಮಾದರಿಯನ್ನು ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Continue Reading

ಉದ್ಯೋಗ

ITBP Recruitment 2024: ITBPಯಲ್ಲಿದೆ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗ; 69,100 ರೂ.ವರೆಗೂ ಸಂಬಳ

ITBP Recruitment 2024: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕಿದೆ. ಅದಾಗ್ಯೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

VISTARANEWS.COM


on

ITBP Recruitment 2024
Koo

ಬೆಂಗಳೂರು: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ (ITBP Recruitment 2024) ಕಾನ್ಸ್‌ಟೇಬಲ್ ಹುದ್ದೆಗಳು (Job news) ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 01 ರ ಒಳಗೆ ಅರ್ಜಿ ಸಲ್ಲಿಕೆ (application) ಮಾಡಬೇಕಿದೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನಲ್ಲಿ ಒಟ್ಟಾರೆ 819 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಯ್ಕೆ ಆದವರು 69,100 ರೂ.ವರೆಗೂ ತಿಂಗಳ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ತಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಇನ್ನು ಒಟ್ಟು ಹುದ್ದೆಗಳಲ್ಲಿ 122 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಹಾಗೂ 697 ಹುದ್ದೆಗಳು ಪುರುಷ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಅಲ್ಲದೆ ಜಾತಿವಾರು ಮೀಸಲಾತಿ ಸಹ ಇದೆ.

ವಯಸ್ಸಿನ ಅರ್ಹತೆ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕಿದೆ. ಅದಾಗ್ಯೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ ಎಷ್ಟು?

ಮಹಿಳೆಯರು, ಎಸ್‌ಸಿ, ಎಸ್‌ಟಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡುವ ಹಾಗಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ 100 ರೂ.ಗಳನ್ನು ಪಾವತಿ ಮಾಡಬೇಕಿದೆ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಮೊದಲು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ನಡೆಸಲಾಗುತ್ತದೆ. ನಂತರ ದೈಹಿಕ ಗುಣಮಟ್ಟದ ಪರೀಕ್ಷೆ (PST) ನಡೆಸಲಾಗುತ್ತದೆ. ಇದಾದ ನಂತರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆ ಆದರೆ ಡಾಕ್ಯುಮೆಂಟ್ ಪರಿಶೀಲನೆ ಮಾಡಲಾಗುತ್ತದೆ. ಈ ಹಂತದ ನಂತರ ವಿವರವಾದ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತದೆ. ಬಳಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-09-2024 ಹಾಗೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-ಅಕ್ಟೋಬರ್-2024. ಇನ್ನು ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳು ತಿಂಗಳಿಗೆ 21,700 ರೂ.ಗಳಿಂದ 69,100 ರೂ.ಗಳ ವರೆಗೆ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ. https://recruitment.itbpolice.nic.in/rect/index.php

ಇದನ್ನೂ ಓದಿ: Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

Continue Reading

ಪ್ರಮುಖ ಸುದ್ದಿ

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಏನು? ಹೆಚ್ಚಿನ ಫಲ ಪಡೆಯಲು ಪೂಜೆ ಹೇಗೆ ಮಾಡಬೇಕು?

VISTARANEWS.COM


on

Varamahalakshmi Festival 2024
Koo

ವಿವಾಹಿತ ಮಹಿಳೆಯರು ವಿಶೇಷವಾಗಿ ಮಾಡುವ ವರಮಹಾಲಕ್ಷ್ಮಿ ಹಬ್ಬವನ್ನು (Varamahalakshmi Festival 2024) ಆಗಸ್ಟ್ 16ರಂದು ಶುಕ್ರವಾರ ಆಚರಿಸಲಾಗುತ್ತಿದೆ. ವರಲಕ್ಷ್ಮಿ ವ್ರತವು (varalakshmi vrata) ಮಹಿಳೆಯರೆಲ್ಲ ಸೇರಿ ಭಕ್ತಿ ಮತ್ತು ಸಂತೋಷದಿಂದ ಆಚರಿಸುತ್ತಾರೆ. ಈ ದಿನ ಮಹಿಳೆಯರು ಉಪವಾಸ (fasting) ವ್ರತ ಮಾಡಿ ಲಕ್ಷ್ಮಿ ದೇವಿಯನ್ನು ಪೂಜಿಸಿ ತಮ್ಮ ಪತಿ, ಮಕ್ಕಳು ಮತ್ತು ಇಡೀ ಕುಟುಂಬಕ್ಕೆ ಆಶೀರ್ವಾದವನ್ನು ಕೋರುತ್ತಾರೆ.

ಪಾರ್ವತಿ ದೇವಿಯು ಶಿವನಲ್ಲಿ ಒಮ್ಮೆ ಭೂಮಿಯಲ್ಲಿ ಮಹಿಳೆಯರ ಕಷ್ಟಗಳನ್ನು ದೂರ ಮಾಡಬಹುದಾದ ವ್ರತ ಯಾವುದು ಎಂಬುದಾಗಿ ಪ್ರಶ್ನಿಸುತ್ತಾಳೆ. ಅದಕ್ಕೆ ಶಿವನು ಒಂದು ಕಥೆ ಹೇಳುತ್ತಾನೆ. ಅದರ ಪ್ರಕಾರ ಕುಂಡಿನಿ ಎಂಬ ಪಟ್ಟಣದಲ್ಲಿ ಚಾರುಮತಿ ಎಂಬ ಬ್ರಾಹ್ಮಣ ಪತಿವ್ರತಾ ಸ್ತ್ರೀ ನಿರ್ಮಲ ಮನಸ್ಸಿನವಳಾಗಿದ್ದಳು. ಒಂದು ದಿನ ಲಕ್ಷ್ಮಿ ದೇವಿಯು ಆಕೆಯ ಕನಸಿನಲ್ಲಿ ಬಂದು ವರಲಕ್ಷ್ಮಿ ವ್ರತ ಮಾಡಿದರೆ ನಿನ್ನ ಇಷ್ಟಾರ್ಥವನ್ನು ನೆರವೇರಿಸುವುದಾಗಿ ಹೇಳುತ್ತಾಳೆ. ಬಳಿಕ ಆಕೆ ನೆರೆಹೊರೆಯ ಮಹಿಳೆಯರನ್ನು ಸೇರಿಸಿ ವರಮಹಾಲಕ್ಷ್ಮಿ ವ್ರತವನ್ನು ಮಾಡಿ, ಲಕ್ಷ್ಮಿ ದೇವಿಗೆ ಪೂಜೆಯನ್ನು ಸಲ್ಲಿಸುತ್ತಾಳೆ. ಬಳಿಕ ಅವಳ ಕಷ್ಟಗಳಲ್ಲೇ ಒಂದೊಂದಾಗಿ ಪರಿಹಾರವಾಗುತ್ತದೆ. ಆ ಬಳಿಕ ವರಮಹಾಲಕ್ಷ್ಮಿ ವ್ರತವು ಮಹಿಳೆಯರು ಮಾಡಬಹುದಾದ ಶ್ರೇಷ್ಠ ವ್ರತವಾಯಿತು ಎಂದು ಶಿವ ಪಾರ್ವತಿಗೆ ಹೇಳಿದನು ಎಂಬುದು ಈ ವ್ರತದ ಐತಿಹ್ಯ.

ವರಲಕ್ಷ್ಮಿ ವ್ರತವನ್ನು ಮಾಡುವ ಸಿದ್ಧತೆಯಲ್ಲಿ ಇರುವವರು ಈ ಬಾರಿ ಪೂಜೆಯ ಮನೆ, ದೇವಿಯ ಅಲಂಕಾರದಲ್ಲಿ ವಿಶೇಷತೆಯನ್ನು ತೋರಬಹುದು. ಈ ಮೂಲಕ ಹಬ್ಬವನ್ನು ಅರ್ಥಪೂರ್ಣಗೊಳಿಸಬಹುದು. ಅಲಂಕಾರದಲ್ಲಿ ಕುಟುಂಬದ ಸಂಪ್ರದಾಯ ಮತ್ತು ಶೈಲಿಯನ್ನು ಪ್ರತಿಬಿಂಬಿಸುವ ಅಂಶಗಳನ್ನು ಸೇರಿಸಲು ಮರೆಯದಿರಿ. ಕರಕುಶಲ ವಸ್ತುಗಳು, ಗೃಹೋಪಯೋಗಿ ವಸ್ತುಗಳನ್ನು ಅಲಂಕಾರಕ್ಕೆ ಬಳಸಿ.

ವರಮಹಾಲಕ್ಷ್ಮಿ ಪೂಜೆಯ ಅಲಂಕಾರಕ್ಕೆ ಬೇಕಾಗುವ ಸಾಮಗ್ರಿಗಳ ವಿವರ ಇಂತಿದೆ.


1. ಕುಂಕುಮ

ಹಣೆಯ ಮೇಲಿನ ಪವಿತ್ರ ಗುರುತಾಗಿ ಮತ್ತು ಪೂಜಾ ವಿಧಿಗಳಲ್ಲಿ ಕುಂಕುಮವನ್ನು ಬಳಸಿ. ಪೂಜಾ ಜಾಗಕ್ಕೆ ಸಾಂಪ್ರದಾಯಿಕ ಕೆಂಪು ಬಣ್ಣದ ಸ್ಪರ್ಶವನ್ನು ನೀಡಿ.

2. ಅರಶಿನ

ಹಬ್ಬದ ಆಚರಣೆ ಮತ್ತು ಅಲಂಕಾರಗಳಲ್ಲಿ ಅರಶಿನ ಅತ್ಯಗತ್ಯ. ಇದನ್ನು ಮಂಗಳಕರ ಮತ್ತು ಶುದ್ಧೀಕರಿಸುವ ಗುಣಗಳಿಗಾಗಿ ಬಳಸಲಾಗುತ್ತದೆ.

3. ಕಲಶ

ನೀರು, ತೆಂಗಿನಕಾಯಿ ಮತ್ತು ಮಾವಿನ ಎಲೆಗಳಿಂದ ತುಂಬಿದ ಕಲಶವನ್ನು ಅಲಂಕರಿಸಿ. ಇದು ಸಮೃದ್ಧಿಯನ್ನು ಸಂಕೇತಿಸುತ್ತದೆ ಮತ್ತು ಪೂಜಾದಲ್ಲಿ ಇದು ಕೇಂದ್ರ ಭಾಗವಾಗಿದೆ.

4. ಮಾವಿನ ಎಲೆಗಳು

ತಾಜಾ ಮಾವಿನ ಎಲೆಗಳನ್ನು ಪ್ರವೇಶದ್ವಾರದಲ್ಲಿ ಮತ್ತು ಪೂಜಾ ಪ್ರದೇಶದ ಸುತ್ತಲೂ ನೇತುಹಾಕಿ. ಅವರು ಶುದ್ಧತೆಯನ್ನು ಸೂಚಿಸುತ್ತದೆ ಮತ್ತು ನಕಾರಾತ್ಮಕ ಶಕ್ತಿಯನ್ನು ಹೊರಹಾಕುತ್ತದೆ.

5. ಬಾಳೆಹಣ್ಣು

ಪೂಜೆಯಲ್ಲಿ ಬಾಳೆ ಹಣ್ಣು ಅತ್ಯಂತ ಪ್ರಮುಖ ವಸ್ತು. ಇದನ್ನು ದೇವರಿಗೆ ನೈವೇದ್ಯವಾಗಿ ಸಮರ್ಪಿಸಲು, ಉಪವಾಸ ಮಾಡುತ್ತಿರುವ ಬಂದ ಅತಿಥಿಗಳಿಗೆ ನೀಡಲು ಬಳಸಬಹುದು.

Varamahalakshmi Festival 2024
Varamahalakshmi Festival 2024


6. ಲಕ್ಷ್ಮಿ ಮುಖ ಅಲಂಕಾರ

ಲಕ್ಷ್ಮಿ ದೇವಿಯ ಉಪಸ್ಥಿತಿ ಮತ್ತು ಆಶೀರ್ವಾದವನ್ನು ಸಂಕೇತಿಸಲು ಪೂಜಾ ಪ್ರದೇಶದ ಮಧ್ಯದಲ್ಲಿ ಲಕ್ಷ್ಮಿ ದೇವಿಯನ್ನು ಸುಂದರವಾಗಿ ಅಲಂಕರಿಸಿದ ಮುಖವನ್ನು ಇರಿಸಿ.

7. ಹೂವುಗಳು

ಚೆಂಡು ಹೂವು, ಸೇವಂತಿಗೆ, ಗುಲಾಬಿ ಮತ್ತು ಮಲ್ಲಿಗೆಯಂತಹ ಹೂವುಗಳನ್ನು ಪೂಜಾ ಸ್ಥಳವನ್ನು ಅಲಂಕರಿಸಲು ಬಳಸಬಹುದು. ಇದು ಪರಿಮಳಯುಕ್ತ ಮತ್ತು ವರ್ಣರಂಜಿತ ವಾತಾವರಣವನ್ನು ಸೃಷ್ಟಿಸುತ್ತದೆ.

8. ಹಣ್ಣುಗಳು

ಪೂಜಾ ಸ್ಥಳದ ಸುತ್ತಲೂ ತಾಜಾ ಹಣ್ಣುಗಳನ್ನು ನೈವೇದ್ಯವಾಗಿ ಜೋಡಿಸಿ. ಇದರಿಂದ ಪೂಜೆ ಸ್ಥಳದಲ್ಲಿ ನೈಸರ್ಗಿಕ ಸೌಂದರ್ಯದ ಅಲಂಕಾರ ಮಾಡಿದಂತಾಗುತ್ತದೆ. ಇದು ಸಮೃದ್ಧಿಯನ್ನು ಸೂಚಿಸುತ್ತದೆ.

9. ಚಂದನ

ಪವಿತ್ರ ಗುಣಲಕ್ಷಣ ಇರುವ ಶ್ರೀಗಂಧವನ್ನು ಪೇಸ್ಟ್ ಮಾಡಿ ಪೂಜಾ ಸ್ಥಳದಲ್ಲಿ ಇರಿಸಿ. ಇದನ್ನು ಪೂಜೆಯಲ್ಲಿ ಭಾಗವಹಿಸುವವರ ಹಣೆಗೆ ಹಚ್ಚಿ.

10. ಡ್ರೈ ಫ್ರೂಟ್ಸ್ ಮತ್ತು ಗಿಫ್ಟ್ ಹ್ಯಾಂಪರ್ಸ್

ಬಂದ ಅತಿಥಿಗಳಿಗೆ ನೀಡಲು ಒಣ ಹಣ್ಣು, ಉಡುಗೊರೆ ಹ್ಯಾಂಪರ್‌ಗಳನ್ನು ಮೊದಲೇ ಸಿದ್ದಪಡಿಸಿ ಅಲಂಕಾರದ ರೂಪದಲ್ಲಿ ಜೋಡಿಸಿ.


11. ಲಕ್ಷ್ಮಿ ದೇವಿಯ ವಿಗ್ರಹ

ಪೂಜಾ ಪ್ರದೇಶದ ಮಧ್ಯದಲ್ಲಿ ಸುಂದರವಾಗಿ ಅಲಂಕರಿಸಿದ ಲಕ್ಷ್ಮಿ ದೇವಿಯ ವಿಗ್ರಹವನ್ನು ಇರಿಸಿ. ಸುತ್ತಲೂ ಹೂವು ಮತ್ತು ಅಗತ್ಯ ವಸ್ತುಗಳನ್ನು ಜೋಡಿಸಿ.


12. ಧೂಪದ್ರವ್ಯದ ತುಂಡು

ಗಾಳಿಯನ್ನು ಶುದ್ಧೀಕರಿಸಲು ಮತ್ತು ಪೂಜಾ ಸ್ಥಳದ ಆಧ್ಯಾತ್ಮಿಕ ವಾತಾವರಣವನ್ನು ಹೆಚ್ಚಿಸಲು ಅಲಂಕಾರಿಕ ಸ್ಟ್ಯಾಂಡ್‌ನಲ್ಲಿ ಧೂಪದ್ರವ್ಯವನ್ನು ಬೆಳಗಿಸಿ.


ಇದನ್ನೂ ಓದಿ: Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ

13. ಲಕ್ಷ್ಮೀ ಪೂಜಾ ತಾಳಿ

ಕುಂಕುಮ, ಅರಶಿನ, ಅಕ್ಕಿ, ವೀಳ್ಯದೆಲೆ ಮತ್ತು ಅಡಿಕೆಯಂತಹ ಎಲ್ಲಾ ಅಗತ್ಯ ವಸ್ತುಗಳೊಂದಿಗೆ ಅಲಂಕರಿಸಿದ ಲಕ್ಷ್ಮಿ ಪೂಜಾ ತಾಳಿಯನ್ನು ಸಿದ್ಧಪಡಿಸಿ.

14. ಹೊಸ ರವಿಕೆ ಕಣ

ಪೂಜೆಯ ಭಾಗವಾಗಿ ಹೊಸ ರವಿಕೆ ತುಂಡುಗಳನ್ನು ದೇವರಿಗೆ ಅರ್ಪಿಸಿ. ಇದು ಗೌರವ ಮತ್ತು ಕೃತಜ್ಞತೆಯನ್ನು ಸಂಕೇತಿಸುವ ಸಾಂಪ್ರದಾಯಿಕ ಕೊಡುಗೆಯಾಗಿದೆ. ಇದನ್ನು ಬಂದಿರುವ ಮಹಿಳೆಯರಿಗೆ ನೀಡಿ.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shocking Incident
ಪ್ರಮುಖ ಸುದ್ದಿ33 seconds ago

Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

teacher murder case
ಕೋಲಾರ4 mins ago

Murder Case: ಶಿಕ್ಷಕಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ, ಹಂತಕರಿಂದ ಪುತ್ರಿ ಪಾರು

ITBP Recruitment 2024
ಉದ್ಯೋಗ34 mins ago

ITBP Recruitment 2024: ITBPಯಲ್ಲಿದೆ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗ; 69,100 ರೂ.ವರೆಗೂ ಸಂಬಳ

Indian Medical Association
ಪ್ರಮುಖ ಸುದ್ದಿ38 mins ago

Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

Mahabharat Story
ಧಾರ್ಮಿಕ56 mins ago

Mahabharat Story: ಕೌರವರೊಂದಿಗೆ ಸಂಧಾನಕ್ಕೆ ಹೋದ ಶ್ರೀ ಕೃಷ್ಣ ಪಾಂಡವರಿಗಾಗಿ ಕೇಳಿದ 5 ಗ್ರಾಮಗಳು ಈಗ ಎಲ್ಲಿವೆ ಗೊತ್ತೆ?

lakshya sen ರಾಜಮಾರ್ಗ ಅಂಕಣ
ಅಂಕಣ1 hour ago

ರಾಜಮಾರ್ಗ ಅಂಕಣ: ಪದಕವೊಂದೇ ಲಕ್ಷ್ಯ – ಲಕ್ಷ್ಯ ಸೇನ್!

Benefits of weight training for women
ಆರೋಗ್ಯ2 hours ago

Benefits of weight training for women: ತೂಕ ಎತ್ತುವ ವ್ಯಾಯಾಮ ಮಹಿಳೆಯರಿಗೆ ಏಕೆ ಬೇಕು?

Varamahalakshmi Festival 2024
ಪ್ರಮುಖ ಸುದ್ದಿ2 hours ago

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಏನು? ಹೆಚ್ಚಿನ ಫಲ ಪಡೆಯಲು ಪೂಜೆ ಹೇಗೆ ಮಾಡಬೇಕು?

karnataka weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ3 hours ago

Dina Bhavishya :ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌