Kukke Temple : ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಆಶ್ಲೇಷಾ ಬಲಿ ಸೇವೆ - Vistara News

ಕರ್ನಾಟಕ

Kukke Temple : ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಆಶ್ಲೇಷಾ ಬಲಿ ಸೇವೆ

ಕೇಂದ್ರ ಗೃಹ ಮಂತ್ರಿ ಅಮಿತ್​ಶಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದ ಪುತ್ರ ಜಯ್​ ಶಾ.

VISTARANEWS.COM


on

Jay sha at kukke temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಬ್ರಹ್ಮಣ್ಯ: ಇಲ್ಲಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾಋ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್‌ ಶಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದ್ದಾರೆ. ಅವರೊಂದಿಗೆ ಪತ್ನಿ ರಿಷಿತಾ ಶಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.

ಶ್ರೀ ದೇವಳದ ಒಳಗೆ ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್‌ಶಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪೂಜೆ ಸಲ್ಲಿಸಿದರು. ಬಳಿಕ ಶ್ರೀ ದೇವಳದಲ್ಲಿ ಷಾ ಕುಟುಂಬಸ್ಥರು ಪ್ರಸಾದ ಬೋಜನ ಸ್ವೀಕರಿಸಿದರು. ಕೇಂದ್ರ ಗೃಹ ಮಂತ್ರಿ ಅಮಿತ್​ಶಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದರು.

ಗೌರವಾರ್ಪಣೆ

ದೇವರ ಸೇವೆ ಬಳಿಕ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿಗೆ ಭೇಟಿ ನೀಡಿದ ಜಯ್‌ಷಾ ಅವರಿಗೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಹಾಗೂ ಮನೋಜ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್. ಟಿ ಸೂಕ್ತ ಬಂದೋಬಸ್ತ್ ಮಾಡಿದ್ದರು.

ಇದನ್ನೂ ಓದಿ : World Cup 2023 : ಭಾರತ, ಪಾಕಿಸ್ತಾನ ಪಂದ್ಯದ ತಾಣ ಬದಲು; ಜಯ್​ ಶಾ ಸ್ಪಷ್ಟನೆ ಏನು?

ಶ್ರೀ ದೇವರ ದರುಶನದಿಂದ ಅತೀವ ಸಂತಸ: ಜಯ್‌ ಶಾ

ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಶ್ರೀ ದೇವರ ದರುಶನ ಪಡೆದುದು ಅತೀವ ಸಂತಸ ತಂದಿದೆ. ನನಗೆ ಶ್ರೀ ದೇವರ ದರುಶನ ಮಾಡಿ ಸೇವೆ ನೆರವೇರಿಸಲು ಉತ್ತಮವಾದ ವ್ಯವಸ್ಥೆ ಮಾಡಿಕೊಟ್ಟ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಸದಸ್ಯರಿಗೆ ಮತ್ತು ದೇವಳದ ಆಡಳಿತ ಮಂಡಳಿಗೆ ತುಂಬು ಹೃದಯದ ಧನ್ಯವಾದಗಳು. ಮುಂದೆ ಅನೇಕ ಬಾರಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆಯುವ ಕನಸು ಹೊಂದಿದ್ದೇನೆ. ಇದನ್ನು ಶ್ರೀ ದೇವರು ನೆರವೇರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಜಯ್‌ಶಾ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

Pepper Spray:ಬೆಂಗಳೂರಿನಲ್ಲಿ ನಡೆದಿದ್ದ ಪೆಪ್ಪರ್‌ ಸ್ಪ್ರೇ ದಾಳಿ ಪ್ರಕರಣದ ತನಿಖೆಗೆ ಕೈಗೆತ್ತಿಕೊಂಡ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ , ಪ್ರಾಣಕ್ಕೆ ಕಂಟಕ ತಂದೊಡ್ಡುವ ಪೆಪ್ಪರ್‌ ಸ್ಪ್ರೇಯನ್ನು ಸ್ವಯಂ ರಕ್ಷಣೆಗಾಗಿ ಬಳಸಲು ಅವಕಾಶ ಇಲ್ಲ ಎಂದು ಹೇಳಿದೆ.

VISTARANEWS.COM


on

Pepper spray
Koo

ಬೆಂಗಳೂರು: ಪೆಪ್ಪರ್‌ ಸ್ಪ್ರೇ(Pepper Spray) ಬಹಳ ಅಪಾಯಕಾರಿಯಾಗಿದ್ದು, ರಕ್ಷಣೆಗಾಗಿ ಅದನ್ನು ಅಸ್ತ್ರವನ್ನಾಗಿ ಬಳಸಬಾರದು. ಪ್ರಾಣಕ್ಕೆ ಅಪಾಯವಾದ ಸಂದರ್ಭ ಬಿಟ್ಟು ಬೇರೆ ಸಂದರ್ಭಗಳಲ್ಲಿ ಅದನ್ನು ಬಳಸಲು ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್‌(High court of Karnataka) ಸ್ಪಷ್ಟಪಡಿಸಿದೆ. ಬೆಂಗಳೂರಿನಲ್ಲಿ ನಡೆದಿದ್ದ ಪೆಪ್ಪರ್‌ ಸ್ಪ್ರೇ ದಾಳಿ ಪ್ರಕರಣದ ತನಿಖೆಗೆ ಕೈಗೆತ್ತಿಕೊಂಡ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ , ಪ್ರಾಣಕ್ಕೆ ಕಂಟಕ ತಂದೊಡ್ಡುವ ಪೆಪ್ಪರ್‌ ಸ್ಪ್ರೇಯನ್ನು ಸ್ವಯಂ ರಕ್ಷಣೆಗಾಗಿ ಬಳಸಲು ಅವಕಾಶ ಇಲ್ಲ ಎಂದು ಹೇಳಿದೆ. ಸಿ. ಕೃಷ್ಣಯ್ಯ ಚೆಟ್ಟಿ ಅಂಡ್ ಸನ್ಸ್ ಕಂಪನಿ ಚಿನ್ನಾಭರಣಗಳ ಮಳಿಗೆಯ ನಿರ್ದೇಶಕ ಸಿ. ಗಣೇಶ್ ನಾರಾಯಣ ಮತ್ತು ಅವರ ಪತ್ನಿ ವಿದ್ಯಾ ನಟರಾಜ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಏಕಸದಸ್ಯ ನ್ಯಾಯಪೀಠ ಈ ಅಂಶದ ಮೇಲೆ ಗಮನ ಸೆಳೆದಿದೆ.

ಏನಿದು ಪ್ರಕರಣ?

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕೃಷ್ಣಯ್ಯ ಚೆಟ್ಟಿ ಅಂಡ್ ಸನ್ಸ್ ಕಂಪನಿ ಕಂಪನಿಯ ಉದ್ಯೋಗಿ ರಾಜ್‌ದೀಪ್ ದಾಸ್ ಅವರ ಮೇಲೆ ಸಿ. ಗಣೇಶ್ ನಾರಾಯಣ ಮತ್ತು ಅವರ ಪತ್ನಿ ವಿದ್ಯಾ ನಟರಾಜ್ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದ್ದರು. ರಾಜ್‌ದೀಪ್‌ ದಾಸ್‌ ಅವರು ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್ 30, 2023 ರಂದು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ತಮ್ಮ ರಕ್ಷಣೆಗಾಗಿ ಪೆಪ್ಪರ್ ಸ್ಪ್ರೆ ಬಳಸಿದ್ದಾರೆ ಮತ್ತು ಅದನ್ನು ಐಪಿಸಿ ಸೆಕ್ಷನ್ 100 ರ ಅಡಿಯಲ್ಲಿ ರಕ್ಷಿಸಲಾಗಿದೆ. ದಾಸ್ ಮತ್ತು ಭದ್ರತಾ ಸಿಬ್ಬಂದಿ ಅರ್ಜಿದಾರರ ಆಸ್ತಿಯಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನಿಸಿದ್ದರಿಂದ ಹಾಗೆ ಮಾಡಬೇಕಾಯಿತು. ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ವಾದಿಸಿದರು.

ದಂಪತಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಅದನ್ನು ತಿರಸ್ಕರಿಸಿದೆ. ಅಲ್ಲದೇ ದಂಪತಿಗೆ ಯಾವುದೇ ರೀತಿಯ ಪ್ರಾಣಾಪಾಯ ಎದುರಾಗಿರಲಿಲ್ಲ. ಅದಾಗ್ಯೂ ಅವರು ದೂರುದಾರರ ಮೇಲೆ ಪೆಪ್ಪರ್‌ ಸ್ಪ್ರೇ ಮಾಡಿದ್ದಾರೆ. ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೋರ್ಟ್‌ ಹೇಳಿದೆ. ಇನ್ನು ಇದೇ ವೇಳೆ 2018ರಲ್ಲಿ ಪ್ರಕರಣವೊಂದರಲ್ಲಿ ಅಮೆರಿಕ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿದ ಕೋರ್ಟ್‌, ಪೆಪ್ಪರ್ ಸ್ಪ್ರೇ ಸಹ ಹಾನಿಕಾರಕ ರಾಸಾಯನಿಕಗಳಿರುವ ಅಪಾಯಕಾರಿ ಆಯುಧ ಎಂಬುದಾಗಿ ಅಮೆರಿಕ ನ್ಯಾಯಾಲಯ ಸ್ಪಷ್ಟಪಡಿಸಿದೆ ಎಂದು ಹೇಳಿದೆ.

ಇದನ್ನೂ ಓದಿ:Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಅಲ್ಲದೆ, ಸಿವಿಲ್‌ ವ್ಯಾಜ್ಯವೊಂದರ ವಿಚಾರವಾಗಿ ಅರ್ಜಿದಾರರು ಹಾಗೂ ದೂರುದಾರರು ನಡುವೆ ನಡೆದ ಗಲಾಟೆ ಸಂಬಂಧ ಇಬ್ಬರು ದೂರು-ಪ್ರತಿ ದೂರು ದಾಖಲಿಸಿದ್ದಾರೆ. ಅವುಗಳ ತನಿಖೆ ನಡೆಯಬೇಕಿದೆ. ಪ್ರಕರಣ ತನಿಖಾ ಹಂತದಲ್ಲಿದೆ. ಈ ಸಂದರ್ಭದಲ್ಲಿ ಎಫ್‌ಐಆರ್‌ ರದ್ದುಪಡಿಸಿದರೆ ತನಿಖೆಯನ್ನು ತಡೆದಂತಾಗುತ್ತದೆ. ಆದ್ದರಿಂದ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿದೆ.


Continue Reading

ರಾಜಕೀಯ

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲರ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Will resign says DK Shivakumar and slams HD Kumaraswamy
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಹೇಳಿದರು.

ಅಸೆಂಬ್ಲಿಗೆ ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ

ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲರ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading

ಕರ್ನಾಟಕ

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Palthady Ramakrishna Achar: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Palthady Rama krishna achar
Koo

ಪುತ್ತೂರು: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ(Tulu Sahitya academy)ಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್(Palthady Ramakrishna Achar) ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಪೆಲತ್ತಾಜೆಯಲ್ಲಿ ಹುಟ್ಟಿ ಹೆಚ್ಚಿನ ಕಾಲವನ್ನು ಪಾಲ್ತಾಡಿಯಲ್ಲಿ ಕಳೆದು ನಿವೃತ್ತಿಯ ಬಳಿಕ ಪುತ್ತೂರಿನ ಬೆದ್ರಾಳದಲ್ಲಿ ನೆಲೆಸಿದ್ದರು.ಬೆಟ್ಟಂಪಾಡಿ, ಪಾಣಾಜೆ ಹಿ.ಪ್ರಾ. ಶಾಲೆ, ಬೆಳ್ಳಾರೆ ಬೋರ್ಡ್‌ ಹೈಸ್ಕೂಲ್ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದರು. ಅನಂತರ ಉಜಿರೆಯ ಸರಕಾರಿ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಟಿ.ಸಿ.ಎಚ್‌ ಡಿಪ್ಲೊಮಾ ಮಾಡಿದರು. 1963ರಲ್ಲಿ ಕುಂತೂರು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಕರಾಗಿ ಸೇವೆಗೆ ಸೇರಿದರು. ಕೆಯ್ಯೂರು, ಕಾವು ಮಾಟ್ನೂರು, ಸಾಮೆತ್ತಡ್ಕ ಮೊದಲಾದ ಕಡೆ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಈ ಮಧ್ಯೆ ಪದವಿ ಶಿಕ್ಷಣ ಪಡೆದು ಬಿ.ಎಡ್‌ ಪದವಿ ಪಡೆದರು. ಅನಂತರ ಧಾರವಾಡ ವಿಶ್ವವಿದ್ಯಾಲಯದಿಂದ ಎಂ.ಎ (ಕನ್ನಡ) ಸ್ನಾತಕೋತ್ತರ ಪದವಿ ಪಡೆದರು. ಹಿಂದಿಯಲ್ಲಿ ರಾಷ್ಟ್ರ ಭಾಷಾವಿಶಾರದಾ ಪದವಿಯನ್ನು ಪೂರ್ಣಗೊಳಿಸಿದ್ದರು. ನಿವೃತ್ತಿ ಆದ ಬಳಿಕ ಸವಣೂರಿನ ವಿದ್ಯಾರಶ್ಮಿ ಶಿಕ್ಷಕ ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಗೌರವ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

ಮಕ್ಕಳ ಕವನ ಸಂಕಲನ, ಕಥಾ ಸಂಕಲನ, ಸಂವಹನ ಮಾಧ್ಯಮವಾಗಿ ಜಾನಪದ, ಜಾನಪದ ಪರಿಸರ, ಜಾನಪದ ವೈದ್ಯ, ಜಾನಪದ ಕುಣಿತ, ದೈವಾರಾಧನೆ, ತುಳುನಾಡಿನ ಸಮಗ್ರ ಪ್ರದರ್ಶನ ಕಲೆ ಮತ್ತು ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಪಾಲ್ತಾಡಿ ತುಳು ಭಾಷೆಯ ಬೆಳವಣಿಗೆಯಲ್ಲಿ ವಿಶೇಷ ಪಾತ್ರವಹಿಸಿದರು. ತುಳು ಜಾನಪದ ಕೂಡುಕಟ್ಟು ಅಧ್ಯಕ್ಷರಾಗಿ, ತುಳು ಅಕಾಡಮಿ ರಿಜಿಸ್ಟ್ರಾರ್‌ ಆಗಿ, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಸಾರ್ವಜನಿಕ ಆಟಿ ಉತ್ಸವ, ಕೆಡ್ಡಸ ಕೂಟವನ್ನು ಪರಿಚಯಿಸಿದ ಹಿರಿಮೆ ಇವರದ್ದು. ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿ, ತುಳು ಡಿಪ್ಲೊಮಾ ಕೋರ್ಸ್‌ಗಳಿಗೆ ಪಠ್ಯ ರಚನೆಕಾರರಾಗಿ, ತುಳು ಭಾಷೆಯನ್ನು ಎಂಟನೇ ಪರಿಚ್ಛೇದ ಸೇರಿಸಬೇಕು ಎಂಬ ಆಗ್ರಹದಲ್ಲಿ ಮುಂಚೂಣಿಯಲ್ಲಿ ನಿಂತು ಶ್ರಮಿಸಿದವರು.

ಇದನ್ನೂ ಓದಿ: Flights cancelled: 300 ಸಿಬ್ಬಂದಿ ಸಾಮೂಹಿಕ ರಜೆ; 86 ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕ್ಯಾನ್ಸಲ್‌

1979ರಲ್ಲಿ “ಬಾಂಗ್ಲಾ ವಿಜಯ’ ಎಂಬ ಯಕ್ಷಗಾನ ಪ್ರಸಂಗ ಕೃತಿ ಪ್ರಕಟಿಸುವ ಮೂಲಕ ಸಾಹಿತ್ಯ ಕ್ಷೇತ್ರದ ಸೇವೆಯಲ್ಲಿ ತೊಡಗಿದ್ದರು. ವಿವಿಧ ಪತ್ರಿಕೆ-ನಿಯತ ಕಾಲಿಕೆಗಳಲ್ಲಿ ಕತೆ ಕವಿತೆಗಳು ಪ್ರಕಟವಾಗಿವೆ. ಕನ್ನಡ ಸಂಘ, ತುಳು ಸಂಘ, ಯಕ್ಷಗಾನ ಸಂಘ, ಸಮುದಾಯ ಸಂಘ ಇಂತಹ ಕೂಟಗಳನ್ನು ಆರಂಭಿಸಿ ತುಳು ಭಾಷೆಯ ಬೆಳವಣಿಗಾಗಿ ಶ್ರಮಿಸಿ ದರು.

Continue Reading

ರಾಜಕೀಯ

Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

Prajwal Revanna Case: ಕಾರ್ತಿಕ್‌ ರಾಜಾರೋಷವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾನೆ. ಇಷ್ಟಾದರೂ ಆತನಿಗೆ ಏಕೆ ಈವರೆಗೆ ನೋಟಿಸ್‌ ಕೊಡಲಾಗಿಲ್ಲ? ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ. ಜತೆಗೆ ಕೋರ್ಟ್‌ನಲ್ಲಿಯೂ ಮನವಿ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Prajwal Revanna Case SIT not issuing notice to Karthik HDK decides to approach Governor and Court
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡನ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕಾರ್ತಿಕ್‌ ರಾಜಾರೋಷವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾನೆ. ಇಷ್ಟಾದರೂ ಆತನಿಗೆ ಏಕೆ ಈವರೆಗೆ ನೋಟಿಸ್‌ ಕೊಡಲಾಗಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ಸಂಬಂಧ ಪ್ರಕರಣವನ್ನು ಸಿಬಿಐಗೆ ರಾಜ್ಯಪಾಲರು ಹಾಗೂ ಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾಗಿ ಹೇಳಿದ್ದಾರೆ.

ಈ ಬಗ್ಗೆ ವಿಸ್ತಾರ ನ್ಯೂಸ್‌ನೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಗಳಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ಇದು ಯಾವ ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ. ಜತೆಗೆ ಕೋರ್ಟ್‌ನಲ್ಲಿಯೂ ಮನವಿ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದ ಎಚ್‌ಡಿಕೆ

‌ಅಶ್ಲೀಲ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದರು. ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶ್ನೆ ಮಾಡಿದ್ದರು.

ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದ್ದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದ್ದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಹೇಳಿದ್ದರು.

Continue Reading
Advertisement
Srinidhi Shetty Attends Daiva Kola Festivities in Mangalore
ಸ್ಯಾಂಡಲ್ ವುಡ್2 mins ago

Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Pepper spray
ಕರ್ನಾಟಕ10 mins ago

Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

Prajwal Revanna Case Will resign says DK Shivakumar and slams HD Kumaraswamy
ರಾಜಕೀಯ12 mins ago

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Sam Pitroda
ದೇಶ26 mins ago

Sam Pitroda: “ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ…” ಸ್ಯಾಮ್‌ ಪಿತ್ರೋಡಾ ಮತ್ತೊಂದು ಆತ್ಮಹತ್ಯಾ ಬಾಂಬ್!

World Red Cross Day
Latest31 mins ago

World Red Cross Day: ದಾನ ಮತ್ತು ಸೇವೆಯಿಂದ ಸಂತೋಷ; ಇದು ರೆಡ್ ಕ್ರಾಸ್ ದಿನದ ಸಂದೇಶ

Palthady Rama krishna achar
ಕರ್ನಾಟಕ47 mins ago

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Actor Darshan devil starring making video release on may 10
ಸಿನಿಮಾ1 hour ago

Actor Darshan: ಮೇ 10ಕ್ಕೆ ಗುಡ್‌ನ್ಯೂಸ್‌ ಕೊಡ್ತಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌! ಏನದು?

Prajwal Revanna Case SIT not issuing notice to Karthik HDK decides to approach Governor and Court
ರಾಜಕೀಯ1 hour ago

Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

Self Harming
ಕ್ರೈಂ1 hour ago

Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

Flights cancelled
ದೇಶ1 hour ago

Flights cancelled: 300 ಸಿಬ್ಬಂದಿ ಸಾಮೂಹಿಕ ರಜೆ; 86 ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕ್ಯಾನ್ಸಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ17 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ20 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ21 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌