Site icon Vistara News

Bear Attack: ತೋಟದಲ್ಲಿ ಕಟ್ಟಿಗೆ ತರಲು ಹೋದ ವೃದ್ಧನ ಮೇಲೆ ಕರಡಿ ದಾಳಿ; ಬೆಚ್ಚಿ ಬಿದ್ದ ಗ್ರಾಮಸ್ಥರು

Bear Attack in belagavi district

Bear Attack in belagavi district

ಶಿವಮೊಗ್ಗ: ಸಾಗರ ತಾಲೂಕಿನ ಜೋಗದ ಹೆನ್ನಿ ಬಳಿ ವೃದ್ಧರೊಬ್ಬರ ಮೇಲೆ ಕರಡಿಯೊಂದು (Bear Attack) ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ತಿಮ್ಮನಾಯ್ಕ್ (88) ಕರಡಿ ದಾಳಿಗೊಳಗಾದವರು.

ತಿಮ್ಮನಾಯ್ಕ್ ಅವರು ಎಂದಿನಂತೆ ಮಧ್ಯಾಹ್ನ ಸಮಯ ಕಟ್ಟಿಗೆ ತರಲೆಂದು ತೋಟಕ್ಕೆ ತೆರಳಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಬಂದ ಕರಡಿಯೊಂದು ಮೈ ಮೇಲೆ ಎರಗಿದೆ. ಕೂಡಲೇ ಬಿಡಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಆಗದೇ ಇದ್ದಾಗ, ಜೋರಾಗಿ ಕಿರುಚಿಕೊಂಡಿದ್ದಾರೆ. ಈ ವೇಳೆ ಕರಡಿ ಗಾಬರಿಯಾಗಿ ಓಡಿದೆ.

ವೃದ್ಧರ ಕಿರುಚಾಟ ಕೇಳುತ್ತಿದ್ದಂತೆ ಅಕ್ಕ ಪಕ್ಕದ ರೈತರು ಆಗಮಿಸಿದ್ದು, ತೀವ್ರ ಗಾಯಗೊಂಡಿದ್ದವರನ್ನು ಕೂಡಲೇ ಮಧುಗಿರಿ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಕರಡಿ ದಾಳಿಯಿಂದ ವೃದ್ಧ ತಿಮ್ಮನಾಯ್ಕ್‌ ಮುಖ, ಕಣ್ಣಿನ ಭಾಗ ಪೂರ್ತಿ ಹಾನಿ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕರಡಿ ದಾಳಿಗೊಳಗಾದ ವೃದ್ಧನನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನೆ

ಇದನ್ನೂ ಓದಿ: ಕಾಲೇಜಿನಲ್ಲಿ ಕಿರುಕುಳಕ್ಕೆ ಬೇಸತ್ತು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ; ಗೋಡೆ ಮೇಲಿತ್ತು ಡೆತ್‌ನೋಟ್‌!

ಚಿರತೆ, ಕಾಡಾನೆ ಹಾವಳಿ ಹೆಚ್ಚಾಗುತ್ತಿರುವಾಗಲೇ ಈಗ ಕರಡಿ ದಾಳಿ ನಡೆಸುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ.

Exit mobile version