Site icon Vistara News

Bear Stuck In Tree: ಆಹಾರಕ್ಕಾಗಿ ಬಂದು ಮರದಲ್ಲಿ ಸಿಲುಕಿದ ಕರಡಿ; ಅರಣ್ಯ ಸಿಬ್ಬಂದಿಯಿಂದ ರಕ್ಷಣೆ

Bear Stuck In Tree

ತುಮಕೂರು: ಆಹಾರಕ್ಕಾಗಿ ಬಂದ ಕರಡಿಯೊಂದು ಮರದಲ್ಲಿ ತಂತಿಗೆ ಸಿಲುಕಿಕೊಂಡು (Bear Stuck In Tree) ಪರದಾಡಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಾಡಬೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಳಿಕ ಅರಣ್ಯ ಸಿಬ್ಬಂದಿ ಕರಡಿಯನ್ನು ರಕ್ಷಣೆ ಮಾಡಿದ್ದಾರೆ.

ಗ್ರಾಮದ ರಾಜಣ್ಣ ಎಂಬುವರ ಜಮೀನಿನಲ್ಲಿ ಸಪೋಟ ಹಣ್ಣು ತಿನ್ನಲು ಕರಡಿ ಹೋಗಿದೆ. ಈ ವೇಳೆ ಮರದಲ್ಲಿ ತಂತಿಗೆ ಸಿಲುಕಿಕೊಂಡಿದ್ದು, ಎಷ್ಟೇ ಪ್ರಯತ್ನಿಸಿದರೂ ತಂತಿಯಿಂದ ಬಿಡಿಸಿಕೊಳ್ಳಲು ಕರಡಿಗೆ ಸಾಧ್ಯವಾಗಿಲ್ಲ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕರಡಿಗೆ ಅರವಳಿಕೆ ಮದ್ದು ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ | Bike Accident: ಬೈಕ್‌ಗೆ ಕಾರು ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಮೂವರಿಗೆ ಗಂಭೀರ ಗಾಯ

ಸುಮಾರು ಮೂರು ವರ್ಷದ ಗಂಡು ಕರಡಿ‌ಯನ್ನು ರಕ್ಷಣೆ ಮಾಡಲಾಗಿದೆ. ಹುಲಿಯೂರುದುರ್ಗ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version