Site icon Vistara News

Murder Case | ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ರುಂಡ ಕತ್ತರಿಸಿ ಬರ್ಬರ ಕೊಲೆ!

Murder

ಬೆಳಗಾವಿ: ಜಿಲ್ಲೆಯ ಹಿರೇಬಾಗೇವಾಡಿ ಬಳಿ ಬೈಕ್ ಮೇಲೆ ಹೋಗುತ್ತಿದ್ದ ವ್ಯಕ್ತಿಯ ರುಂಡ ಕತ್ತರಿಸುವ ಮೂಲಕ ಹಗಲಿನಲ್ಲಿಯೇ ಬರ್ಬರವಾಗಿ ಕೊಲೆ (Murder Case) ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ತಾರಿಹಾಳ ಕ್ರಾಸ್ ಬಳಿಯ ಮುನವಳ್ಳಿ ನಿವಾಸಿ ಗದಗಯ್ಯ ಹಿರೇಮಠ (40) ಹತ್ಯೆಯಾದವರು. ತಾಲೂಕಿನ ಹಲಗಾ ಗ್ರಾಮದಲ್ಲಿ ಶುಕ್ರವಾರ ಭೀಕರ ಹತ್ಯೆ ನಡೆದಿದೆ. ಗ್ರಾಮದಲ್ಲಿ ಬೈಕ್ ಮೇಲೆ ಹೋಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಅಪರಿಚಿತ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ರುಂಡ ಕತ್ತರಿಸಿದ್ದಾರೆ. ಬೈಕ್ ಮೇಲೆ ಬಿದ್ದಿರುವ ರುಂಡ ಇಲ್ಲದ ದೇಹವನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | ನಾಯಿ ತಪ್ಪಿಸಲು ಹೋಗಿ ಪಲ್ಟಿಯಾದ ಆಟೊ, ಮೂವರು ವಿದ್ಯಾರ್ಥಿಗಳಿಗೆ ಗಾಯ

Exit mobile version