Belagavi Winter Session: ಸದನದಲ್ಲಿ ಕದನ; ಬಿಜೆಪಿ ನಾಯಕರ ಸಿಟ್ಟು, ಜಮೀರ್‌ ರಾಜೀನಾಮೆಗೆ ಪಟ್ಟು! - Vistara News

ಕರ್ನಾಟಕ

Belagavi Winter Session: ಸದನದಲ್ಲಿ ಕದನ; ಬಿಜೆಪಿ ನಾಯಕರ ಸಿಟ್ಟು, ಜಮೀರ್‌ ರಾಜೀನಾಮೆಗೆ ಪಟ್ಟು!

Belagavi Winter Session: ಸಭಾಪತಿ ಕೊಠಡಿಯಲ್ಲಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕ ಭೋಸ್ ರಾಜು ಜತೆಗೂಡಿ ಕೋಟ ಶ್ರೀನಿವಾಸ್ ಪೂಜಾರಿ, ಎನ್. ರವಿಕುಮಾರ್ ಅವರೊಂದಿಗೆ ಸಂಧಾನ ಸಭೆಯನ್ನು ನಡೆಸಲಾಯಿತು. ಮೇಲ್ಮನೆಯಲ್ಲಿ ಕೆಳಮನೆಯ ವಿಚಾರ ತರುವುದು ಬೇಡ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮನವೊಲಿಸಲು ಪ್ರಯತ್ನ ಮಾಡಿದರು. ಆದರೆ, ಕೋಟ ಶ್ರೀನಿವಾಸ್ ಪೂಜಾರಿ, ಎನ್. ರವಿಕುಮಾರ್ ಮನವೊಲಿಕೆಗೆ ಒಪ್ಪಿಲ್ಲ.

VISTARANEWS.COM


on

Belagavi Winter Session BJP members protest demanding Jamir Ahmad resignation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಳಗಾವಿ: ಬಿಜೆಪಿಯವರು ಮುಸ್ಲಿಂ ಸ್ಪೀಕರ್‌ಗೆ ಬಗ್ಗಿ ನಮಸ್ಕಾರ ಮಾಡುವಂತೆ ಮಾಡಿದ್ದು ನಮ್ಮ ಕಾಂಗ್ರೆಸ್‌ನವರು ಎಂದು ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ಕ್ಷಮೆ ಕೇಳುವಂತೆ ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಬಿಜೆಪಿ ಪಟ್ಟುಹಿಡಿದಿದೆ. ವಿಧಾನ ಪರಿಷತ್‌ (Legislative Council) ಕಲಾಪಕ್ಕೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಆಗಮಿಸುತ್ತಿದ್ದಂತೆ ಅವರು ಕ್ಷಮೆ ಕೇಳಬೇಕೆಂದು ಬಿಜೆಪಿ (BJP Karnataka) ಆಗ್ರಹಿಸಿತು. ಆದರೆ, ‌ಜಮೀರ್‌ ಕ್ಷಮೆ ಕೇಳದೆ ಸ್ಪಷ್ಟೀಕರಣ ನೀಡಲು ಮುಂದಾಗುತ್ತಿದ್ದಂತೆ ಬಿಜೆಪಿ ಗದ್ದಲ ನಡೆಸಿದೆ. ಜತೆಗೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದೆ. ಈ ನಡುವೆ ಸಭಾಪತಿಗಳು ನಡೆಸಿದ ಸಂಧಾನ ಸಭೆಯೂ ವಿಫಲವಾಗಿದೆ. ಇನ್ನು, ಜಮೀರ್‌, ನಾನು ಸಲಾಂ ಮಾಡ್ತಾರೆ ಎಂಬ ಪದ ಬಳಸಿಲ್ಲ. ಹಾಗೆ ಪದ ಬಳಸಿದ್ದರೆ ರಾಜಕೀಯ ನಿವೃತ್ತಿ (Political retirement) ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಪರಿಷತ್ ಕಲಾಪಕ್ಕೆ ಜಮೀರ್ ಅಹಮದ್ ಹಾಜರಾಗುತ್ತಿದ್ದಂತೆ ಅವರ ವಿರುದ್ಧ ಬಿಜೆಪಿ ಸದಸ್ಯರು ಗದ್ದಲ ಮಾಡಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ಉತ್ತರ ನೀಡಲು ಎದ್ದು ಜಮೀರ್ ಎದ್ದುನಿಂತರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಆಗ ಸಭಾನಾಯಕ ಭೋಸ್ ರಾಜು, ಈ ಸದನದ ಪೀಠಕ್ಕೆ ಜಮೀರ್ ಅಗೌರವ ತೋರಿಸಿಲ್ಲ ಎಂದು ಹೇಳಿದರು. ಅದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಈ ಸದನಕ್ಕೆ ಸಂಬಂಧ ಇಲ್ಲದ ವಿಷಯ ಅದು. ಪ್ರತಿಭಟನೆ ಕೈಬಿಟ್ಟು ಚರ್ಚೆ ಮಾಡಿ ಎಂದು ಹೇಳಿದರು.

ಇದನ್ನೂ ಓದಿ: BS Yediyurappa: ಬಿ.ಎಸ್.‌ ಯಡಿಯೂರಪ್ಪ ಮತ್ತೆ ಸ್ಪರ್ಧಿಸಿ ಸದನಕ್ಕೆ ಬರಲಿ: ಡಿ.ಕೆ. ಶಿವಕುಮಾರ್

ಆದರೆ, ಸಮಾಧಾನಗೊಳ್ಳದ ಬಿಜೆಪಿ ಸದಸ್ಯರು ತೀವ್ರ ಗದ್ದಲ ನಡೆಸಿದರು. ಗದ್ದಲದ ನಡುವೆಯೂ ಪ್ರಶ್ನೋತ್ತರ ಮುಂದುವರಿದಿದ್ದು, ಜಮೀರ್‌ ಅಹ್ಮದ್‌ ಉತ್ತರ ನೀಡಿದ್ದಾರೆ.

ಸಭಾಪತಿ ಸಂಧಾನ ವಿಫಲ

ಇದಾದ ಬಳಿಕ ಸಭಾಪತಿ ಕೊಠಡಿಯಲ್ಲಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕ ಭೋಸ್ ರಾಜು ಜತೆಗೂಡಿ ಕೋಟ ಶ್ರೀನಿವಾಸ್ ಪೂಜಾರಿ, ಎನ್. ರವಿಕುಮಾರ್ ಅವರೊಂದಿಗೆ ಸಂಧಾನ ಸಭೆಯನ್ನು ನಡೆಸಲಾಯಿತು. ಮೇಲ್ಮನೆಯಲ್ಲಿ ಕೆಳಮನೆಯ ವಿಚಾರ ತರುವುದು ಬೇಡ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮನವೊಲಿಸಲು ಪ್ರಯತ್ನ ಮಾಡಿದರು. ಆದರೆ, ಕೋಟ ಶ್ರೀನಿವಾಸ್ ಪೂಜಾರಿ, ಎನ್. ರವಿಕುಮಾರ್ ಮನವೊಲಿಕೆಗೆ ಒಪ್ಪಿಲ್ಲ. ಸಭೆಯಿಂದ ವಾಪಸ್ ಆದ ಬಿಜೆಪಿ ಸದಸ್ಯರು ಕೆಲಕಾಲ ಸಮಾಲೋಚನೆ ನಡೆಸಿದ್ದು, ಜಮೀರ್ ರಾಜೀನಾಮೆಗೆ ಆಗ್ರಹಿಸಲು ನಿರ್ಧಾರ ಮಾಡಿದರು. ಹೀಗಾಗಿ ಧರಣಿಯನ್ನು ವಾಪಸ್ ಪಡೆಯದಿರಲು ತೀರ್ಮಾನಿಸಿದರು.

ಮತ್ತೆ ನಡೆದ ಸದನದಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರು ಸಲಾಂ ಹೊಡೆಯುತ್ತಾರೆ ಅಂದಿದ್ದಾರೆ. ಈ ವೇಳೆ ಎದ್ದು ನಿಂತ ಜಮೀರ್ ತಮ್ಮ ಹೇಳಿಕೆಯನ್ನು ಪುನರುಚ್ಚಾರ ಮಾಡಿದರು. ನಾನು ಸಲಾಂ ಆಲೇಕುಂ ಅನ್ನಬೇಕು ಎಂದು ಹೇಳಿದ್ದೇನಾ? ನಾನು ಹೇಳಿದ್ದರಲ್ಲಿ ತಪ್ಪೇನಿದೆ? ಎಂದು ಸಚಿವ ಜಮೀರ್ ಅಹ್ಮದ್‌ ಖಾನ್ ಪ್ರಶ್ನೆ‌ ಮಾಡಿದರು.

ಈ ವೇಳೆ ಎದ್ದು ನಿಂತ ಕೋಟ ಶ್ರೀನಿವಾಸ್ ಪೂಜಾರಿ, ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿ ಸಲಾಂ ಹೊಡಿಯಬೇಕು ಅಂತ ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ಪರಸ್ಪರ ವಾಗ್ವಾದ ನಡಿದಿದೆ. ಸಚಿವ ಜಮೀರ್ ಅಹ್ಮದ್ ರಾಜಿನಾಮೆ ನೀಡಬೇಕು.‌ ಪೀಠಕ್ಕೆ ಅಗೌರವ ತೋರಿದವರನ್ನು ಸುಮ್ಮನೆ ಯಾಕೆ ಬಿಡುತ್ತೀರಾ? ರಾಜಿನಾಮೆ ಪಡೆಯಿರಿ ಎಂದು ಕೂಗಾಡಿದರು.

ಈ ವೇಳೆ ಎದ್ದು ನಿಂತ ಸಚಿವ ಸಂತೋಷ್ ಲಾಡ್, ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಭಿಕ್ಷೆ ಎಂದಿದ್ದ ಕಂಗನಾ ರಣಾವತ್ ಸಿನಿಮಾ ನೋಡೋಕೆ ಯುಪಿ ಸಿಎಂ ಆದಿತ್ಯನಾಥ್ ಹೋಗಿದ್ದರು. ಮೊದಲು ಅವರ ರಾಜಿನಾಮೆ ಪಡೆಯಿರಿ ಎಂದು ಹೇಳಿದರು. ಸಿಟ್ಟಿಗೆದ್ದ ಸಭಾಪತಿ ಬಸವರಾಜ ಹೊರಟ್ಟಿ, ಕಲಾಪವನ್ನ ಅನಿರ್ಧಿಷ್ಟಾವಧಿ ಮುಂದೂಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಳಿಕವೂ ಪರಸ್ಪರ ಜಟಾಪಟಿ ಮುಂದುವರಿದಿದೆ.

ವಿಧಾನ ಪರಿಷತ್‌ ಸದಸ್ಯ ಜಮೀರ್ ಅಹ್ಮದ್‌ ಹೇಳಿಕೆ ವಿಚಾರವಾಗಿ ಮಾತನಾಡಿದ ಎನ್. ರವಿಕುಮಾರ್, ಜಮೀರ್ ರಾಜ್ಯದ ಮಂತ್ರಿಯಾಗಿದ್ದಾರೆ. ಅವರು ಯಾವುದೇ ಸಮುದಾಯಕ್ಕೆ ಮಾತ್ರ ಮಂತ್ರಿ ಅಲ್ಲ.

ರಾಜ್ಯದಲ್ಲಿ ಮುಸ್ಲಿಮರು‌ ಕಾಂಗ್ರೆಸ್‌ಗೆ ವೋಟ್ ಹಾಕುತ್ತಾರೆ ಸತ್ಯ. ಆದರೆ, 100% ಸತ್ಯ ಅಲ್ಲ. ಬಿಜೆಪಿ, ಜೆಡಿಎಸ್‌ಗೆ ಸಹ ವೋಟ್ ಹಾಕ್ತಾರೆ. ಸ್ಪೀಕರ್ ಸ್ಥಾನಕ್ಕೆ ಗೌರವ ಕೊಡಬೇಕು ಹೌದು. ಅದರಲ್ಲಿ ಸಂಶಯ ಬೇಡ. ಬಿಜೆಪಿಯವರನ್ನೂ ನಮಸ್ಕಾರ ಮಾಡುವ ಹಾಗೇ ಮಾಡಿದ್ದೇವೆ ಅಂದಿದ್ದಾರೆ. ಆದರೆ, ನಾವು ಮೊದಲು ಗೌರವ ಕೊಡುತ್ತಿರಲಿಲ್ವಾ ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಸಚಿವ ಜಮೀರ್‌ ಅಹ್ಮದ್‌, ನಾನು ಹಾಗೇ ಹೇಳಿಲ್ಲ ಎಂದು ತಿಳಿಸಿದರು.

ಸದನಕ್ಕೆ ತಪ್ಪು ಮಾಹಿತಿ ನೀಡಬೇಡಿ ಎಂದು ಎದ್ದು ನಿಂತ ಜಮೀರ್, ನಾನು ನೀಡಿದ ಹೇಳಿಕೆಯ ವಿಡಿಯೊ ಪ್ಲೇ ಮಾಡಿ ಸದನಕ್ಕೆ ತಪ್ಪು ‌ಮಾಹಿತಿ ಕೊಡಬೇಡಿ ಎಂದು ಹೇಳಿದರು. ಆಗ ಕಲಾಪದಲ್ಲಿ ಮತ್ತೆ ಗದ್ದಲ ನಡೆದಿದೆ. ಇದರಿಂದ ಮತ್ತೆ ಕಲಾಪವನ್ನು ಹತ್ತು ನಿಮಿಷಗಳ ಕಾಲ ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದರು.

ಬಿಜೆಪಿ ತಂತ್ರಗಾರಿಕೆ

ಸದನವನ್ನು 10 ನಿಮಿಷಗಳ ಕಾಲ ಮುಂದೂಡುತ್ತಿದ್ದಂತೆ ಜಮೀರ್ ವಿರುದ್ಧದ ಹೋರಾಟಕ್ಕೆ ರಣತಂತ್ರ ರೂಪಿಸುವಲ್ಲಿ ಬಿಜೆಪಿ ಸದಸ್ಯರು ಒಂದೆಡೆ ಸೇರಿದರು. ಯಾವುದೇ ಕಾರಣಕ್ಕೂ ಪಟ್ಟು ಸಡಿಲಿಸದಿರುವ ತೀರ್ಮಾನಕ್ಕೆ ಬರಲಾಯಿತು.

ವಿಡಿಯೊ ತೋರಿಸಿ ಬಿಜೆಪಿ ಗದ್ದಲ

ಸಭಾಪತಿ ಕೊಠಡಿಯಲ್ಲಿ ಬಿಜೆಪಿ ಸದಸ್ಯರು ವಿಡಿಯೊ ತೋರಿಸಿದ್ದಾರೆ. ಅದರಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ದೊಡ್ಡ ಬಿಜೆಪಿ ನಾಯಕರು ಸಲಾಂ ಹೊಡೆಯುವಂತೆ ಮಾಡಿದ್ದೇವೆ ಅಂತ ಹೇಳಿದ್ದಾರೆ. ಹೀಗಾಗಿ ಇದನ್ನು ಘೋರ ಅಪರಾಧ ಅಂತ ಪರಿಗಣಿಸಬೇಕು. ಜಮೀರ್ ಅವರ ರಾಜಿನಾಮೆ ಪಡೆಯಬೇಕು ಇಲ್ಲವೇ ಕ್ಷಮೆ ಕೇಳಬೇಕು ಎಂದು ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದರು. ಈ ವೇಳೆ ಪಾಯಿಂಟ್ ಆಫ್ ಆರ್ಡರ್ ಎಂದು ಎದ್ದು ನಿಂತ ಬಿಜೆಪಿಯ ನಾರಾಯಣಸ್ವಾಮಿ, ಪ್ರಮಾಣ ವಚನ ತೆಗೆದುಕೊಳ್ಳಬೇಕಾದರೆ ಬಳಸುವ ವಾಕ್ಯಗಳನ್ನು ಓದಿದರು. ಈ ವೇಳೆ ಎದ್ದು ನಿಂತ ಸಚಿವ ಜಮೀರ್ ಅಹಮದ್, ನಾನು ಸಲಾಂ ಹೊಡೆಯಬೇಕು ಅಂತ ಹೇಳಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

ಆಗ ಸಭಾ ನಾಯಕ ಬೋಸರಾಜು ಮಾತನಾಡಿ, ಸಚಿವರು ಈಗಾಗಲೇ ಇದಕ್ಕೆ ಉತ್ತರ ನೀಡಿದ್ದಾರೆ. ಜಮೀರ್‌ ಅಹ್ಮದ್‌ ಖಾನ್‌ ಅವರ ಹೇಳಿಕೆಗೂ ಅಧಿವೇಶನಕ್ಕೂ ಸಂಬಂಧವಿಲ್ಲ. ಕೆಳಮನೆ ಸ್ಪೀಕರ್ ಬಗ್ಗೆ ಮಾತನಾಡಿದ್ದಾರೆ‌. ಬರಗಾಲದ, ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ಹೇಳಿದರು.

ಹಕ್ಕು ಭಾದ್ಯತಾ ಸಮಿತಿಗೆ ವಹಿಸಲು ಸಮಿತಿಯನ್ನು ರಚನೆ ಮಾಡಿ

ಹಕ್ಕು ಭಾದ್ಯತಾ ಸಮಿತಿಗೆ ವಹಿಸಲು ಸಮಿತಿಯನ್ನು ರಚನೆ ಮಾಡಿ. ಜಮೀರ್ ಮಾತು ಸರಿಯೋ ತಪ್ಪು ಎಂಬುದನ್ನು ಆ ಸಮಿತಿ ನಿರ್ಧಾರ ಮಾಡಲಿ ಎಂದು ಬಿಜೆಪಿ ಆಗ್ರಹಿಸಿತು. ಈ ವೇಳೆ ಸಂವಿಧಾನಕ್ಕೆ ಅಪಮಾನ ಮಾಡಿದ ಜಮೀರ್‌ಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರ ಘೋಷಣೆ ಕೂಗಿದರು. ಘೋಷಣೆ ಕೂಗುತ್ತಾ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಬಿಜೆಪಿ ಸದಸ್ಯರ ಸಭಾತ್ಯಾಗ ನಡುವೆಯೂ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪ ಮುಂದುವರಿಯಿತು.

ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಜಮೀರ್‌ ಅಹ್ಮದ್‌ ಖಾನ್‌ ಅಸಂಬದ್ಧ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೋಟಾ ಶ್ರೀನಿವಾಸ ಪೂಜಾರಿ, ಸ್ಪೀಕರ್‌ ಸ್ಥಾನಕ್ಕೆ ಧರ್ಮ ಲೇಪನ‌ ಮಾಡಿ ಸಂವಿಧಾನ ಪೀಠಕ್ಕೆ ಅಪಮಾನ ಮಾಡಲಾಗಿದೆ. ಜಮೀರ್‌ ರಾಜೀನಾಮೆ ನೀಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಕನಿಷ್ಠ ಕ್ಷಮೆ ಕೇಳುವ ಸೌಜನ್ಯವನ್ನೂ ಜಮೀರ್ ಮಾಡಿಲ್ಲ.‌ ಇದು ಸಂವಿಧಾನ ಪೀಠಕ್ಕೆ ಮಾಡಿರುವ ಅಕ್ಷಮ್ಯ ಅಪಚಾರ ಹಾಗೂ ಅಪರಾಧವಾಗಿದೆ. ಈ ಬಗ್ಗೆ ಸರ್ಕಾರ ಮೊಂಡುವಾದ ಮುಂದಿಟ್ಟಿದೆ. ಸಭಾಪತಿ ಮೂಲಕ ಒಂದು ವಾರ ಸದನ‌ವನ್ನು ಮುಂದುವರಿಸುವಂತೆ ವಿನಂತಿ ಮಾಡುತ್ತೇವೆ. ಜಮೀರ್ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.‌ ಕ್ಷಮೆ ಕೇಳುವ ಮನಸ್ಥಿತಿ‌ ಜಮೀರ್ ಅವರಲ್ಲಿ ಇಲ್ಲ. ದುರಂತ ಎಂದರೆ ಇಡಿ ಪಕ್ಷ ಜಮೀರ್‌ ಬೆಂಬಲಕ್ಕೆ ನಿಂತಿರುವುದಾಗಿದೆ. ಸದನದಲ್ಲಿ ಜಮೀರ್‌ ಕಾರ್ಯಕ್ರಮ, ಚಟುವಟಿಕೆಗೆ ಬಿಜೆಪಿ ಬಹಿಷ್ಕಾರ ಹಾಕಲಿದೆ. ಜಮೀರ್‌ ಅವರ ರಾಜೀನಾಮೆಯೇ ಈ ಸಮಸ್ಯೆಗೆ ಪರಿಹಾರವಾಗಿದೆ. ಸದನ ಸಮಿತಿ ತನಿಖೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Security Breach in Lok Sabha: ಪ್ರತಾಪ್‌ ಸಿಂಹಗೆ ಬುದ್ಧಿ ಹೇಳಿ ಎಂದ ಡಿಕೆಶಿ; ತಿರುಗಿಬಿದ್ದ ಬಿಜೆಪಿ

ಸುವರ್ಣ ಸೌಧದ ಪ್ರವೇಶ ದ್ವಾರದ ಮುಂದೆ ಪ್ರತಿಭಟನೆ

ಇದೇ ವೇಳೆ 10ಕ್ಕೂ ಹೆಚ್ಚು ಪರಿಷತ್ ಸದಸ್ಯರಿಂದ ಸುವರ್ಣಸೌಧ ಪ್ರವೇಶ ದ್ವಾರದ ಮುಂದೆ ಪ್ರತಿಭಟನೆ ಮಾಡಿದರು. ಸಚಿವ‌ ಸ್ಥಾನಕ್ಕೆ ಜಮೀರ್‌ ಅಹ್ಮದ್‌ ಖಾನ್ ರಾಜೀನಾಮೆ ‌‌ಕೊಡಬೇಕು ಎಂದು ಆಗ್ರಹಿಸಿದರು. ಕೋಟ ಶ್ರೀನಿವಾಸ್ ಪೂಜಾರಿ, ರವಿಕುಮಾರ್ ಸೇರಿ 10ಕ್ಕೂ ಹೆಚ್ಚು ಸದಸ್ಯರು ಘೋಷಣೆ ಕೂಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest39 minutes ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest1 hour ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest2 hours ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest3 hours ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
Live News10 hours ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest1 day ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest2 days ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest2 days ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest3 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest4 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌