Aniruddha Jatkar : ಯಾಕೆ ಅನಿರುದ್ಧ ಟಾರ್ಗೆಟ್ ಆಗ್ತಿದಾರೆ?  - Vistara News

ಬೆಳಗಾವಿ

Aniruddha Jatkar : ಯಾಕೆ ಅನಿರುದ್ಧ ಟಾರ್ಗೆಟ್ ಆಗ್ತಿದಾರೆ? 

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Lakshmi Hebbalkar: ಪ್ರಜ್ವಲ್ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Lakshmi hebbalkar: ಇಡೀ ದೇಶವೇ ತಲೆ ತಗ್ಗಿಸುವಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

VISTARANEWS.COM


on

Minister Lakshmi hebbalkar Latest statement in Belagavi
Koo

ಬೆಳಗಾವಿ: ಇಡೀ ದೇಶವೇ ತಲೆ ತಗ್ಗಿಸುವಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು (BJP Leaders) ಮೌನ ವಹಿಸಿರುವುದು ಏಕೆ? ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಭಾರೀ ಆಸಕ್ತಿ ತೋರಿಸಿದ್ದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಬೆಳಗಾವಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರೇ ಈಗಲೂ ಸಂತ್ರಸ್ತ ಮಹಿಳೆಯರ ಪರ ಧ್ವನಿ ಎತ್ತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಗೃಹ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಎಲ್ಲೇ ಅನ್ಯಾಯವಾದರೂ ನಾವು ಖಂಡಿಸುತ್ತೇವೆ. ಅವರ ಪರವಾಗಿ ನಿಲ್ಲುತ್ತೇವೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಅದರಲ್ಲಿ ರಾಜಕೀಯ ಬೆರೆಸಲು ನಾವು ಹೋಗುವುದಿಲ್ಲ. ಆದರೆ ಹುಬ್ಬಳ್ಳಿ ಪ್ರಕರಣದಲ್ಲಿ ಅತೀವ ಆಸಕ್ತಿ ತೋರಿಸಿದ್ದ ಬಿಜೆಪಿ ನಾಯಕರು ಈಗೇಕೆ ಮೌನವಾಗಿದ್ದಾರೆ. ಇಲ್ಲೂ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದೆಯಲ್ಲವೇ? ಈಗಲೂ ಸಂಸದೆ ಮಂಗಲಾ ಅಂಗಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಿ. ಜಗದೀಶ ಶೆಟ್ಟರ್ ಅಷ್ಟೇ ಆಸಕ್ತಿಯಿಂದ ಹೇಳಿಕೆಗಳನ್ನು ನೀಡಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಏನು‌ ಹೇಳ್ತೀರಾ? ನಾರಿ ಶಕ್ತಿ, ನಾರಿ‌ ಸಮ್ಮಾನ್, ಬೇಟಿ ಬಚ್ಚಾವ್, ಬೇಟಿ ಪಡಾವ್ ಅಂತ ಹೇಳುವ ಬಿಜೆಪಿಗರು, ಈಗ ಯಾಕೆ ಮೌನವಾಗಿದ್ದಾರೆ. ಮಾತು ಆಡಿದರೆ ಕರ್ನಾಟಕ ಸರ್ಕಾರವನ್ನು ಟೀಕಿಸುವ ಮೋದಿಜೀ ಅವರ ಈಗಿನ ನಿಲುವೇನು? ಇಲ್ಲಿನ ಸಂತ್ರಸ್ತ ಮಹಿಳೆಯರ ಮಾಂಗಲ್ಯದ ಕಥೆಯೇನು? ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಪ್ರಶ್ನೆ ಕೇಳ್ತಾ ಇದ್ದೀನಿ ಎಂದು ಹೇಳಿದರು.

ಕಾನೂನು ಚೌಕಟ್ಟಿನಡಿ ಕ್ರಮ

ವಿದೇಶದಿಂದ, ಹೊರ ರಾಜ್ಯಗಳಿಂದ ಫೋನ್ ಕಾಲ್‌ಗಳು ಬರುತ್ತಿವೆ. ಇಂತಹ ಪ್ರಕರಣ ನಡೆದಿದ್ದು ನಿಜವೇ ಎಂದು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ತನಿಖೆಗೆ ವಹಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಿಜೆಪಿಯ ಮಹಿಳಾಮಣಿಗಳು ಎಲ್ಲಿದ್ದಾರೆ?

ಸಂಸದೆ ಮಂಗಲಾ ಅಂಗಡಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಬೇಕು, ನೇಹಾ ಹಿರೇಮಠ ವಿಷಯದಲ್ಲಿ ಮಾತಾಡಿದಂತೆ ಜಗದೀಶ್ ಶೆಟ್ಟರ್ ಅವರು ಮಾತಾಡಬೇಕು. 16 ವರ್ಷದಿಂದ 50, 60 ವರ್ಷದ ಮಹಿಳೆಯರು ಪ್ರಜ್ವಲ್ ರೇವಣ್ಣ ಅವರಿಂದ ನೊಂದಿದ್ದಾರೆ‌ ಎಂದು ಆರೋಪಿಸಿದ ಅವರು, ಮಹಿಳೆಯರ ಪರ ಮೈತ್ರಿ ನಾಯಕರು ನಿಲ್ಲಲಿ ಎಂದು ಈ ವೇಳೆ ಒತ್ತಾಯಿಸಿದರು.

ಇದನ್ನೂ ಓದಿ: Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ, ಹಿರಿಯ ಮುಖಂಡ ಎ.ಟಿ. ರಾಮಸ್ವಾಮಿ, ದೇವರಾಜ್ ಗೌಡ ಎಂಬುವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮೈಸೂರು ಪ್ರವಾಸದಲ್ಲಿದ್ದ ಅಮಿತ್ ಷಾ ಅವರ ಗಮನಕ್ಕೆ ಆಗಲೇ ತಂದಿದ್ದರು. ಇಂಥ ವಿಷಯ ಗೊತ್ತಿದ್ದರೂ ಮೈತ್ರಿ ನಾಯಕರು ಪ್ರಜ್ವಲ್ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದ್ದು ಎಷ್ಟು ಸರಿ. ಇದಕ್ಕೆ ಬಿಜೆಪಿ ನಾಯಕರು ಉತ್ತರಿಸುವರೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಬಿಜೆಪಿ ನಾಯಕರಿಗೆ ಮೊದಲೇ ಅರಿವಿತ್ತು ಎಂದೂ ಸಚಿವರು ತಿಳಿಸಿದರು.

ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ನಾಯಕರು, ಈಗ ಯಾಕೆ ಜಾಣ ಮೌನವಾಗಿದ್ದಾರೆ. ಮೊನ್ನೆ ಮಾಜಿ ಶಾಸಕರೊಬ್ಬರೂ ನನ್ನ ಬಗ್ಗೆ ತುಚ್ಛವಾಗಿ ಮಾತನಾಡುವಾಗ ವೇದಿಕೆಯಲ್ಲಿದ್ದ ಸಂಸದೆ ಮಂಗಲಾ ಅಂಗಡಿ, ಜಗದೀಶ್ ಶೆಟ್ಟರ್ ನಕ್ಕರು ಹೊರತು ಏನು ಮಾತಾಡಲಿಲ್ಲ. ಸಂಜಯ್ ಪಾಟೀ;ಗೆ ಕನಿಷ್ಠ ಬುದ್ದಿವಾದ ಹೇಳಲಿಲ್ಲ ಎಂದು ಸಚಿವರು ಆರೋಪಿಸಿದರು.

ಉಡುಪಿ ಹಾಸ್ಟೆಲ್‌ನಲ್ಲಿ ಕ್ಯಾಮೆರಾ ಇಟ್ಟ ವಿಷಯವನ್ನು ಬಿಜೆಪಿಯವರು ರಾಜಕರಣ‌ಗೊಳಿಸಿದ್ರು, ರಾಷ್ಟ್ರೀಯ ಮಹಿಳಾ ಆಯೋಗದವರು ಓಡೋಡಿ ಬಂದರು. ಈಗ ಸಾವಿರಾರು ಮಹಿಳೆಯರ ಮಾನ ಹರಾಜಾದ್ರು ಯಾರು ಏನೂ ಮಾತಾಡುತ್ತಿಲ್ಲ. ಅಶೋಕ್, ವಿಜಯೇಂದ್ರ ಅವರೇ ಈಗ ಏನು ಹೇಳ್ತೀರಾ, ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಅವರು ಯಾಕೆ ಏನು ಹೇಳ್ತಿಲ್ಲ. ಮಂಡ್ಯ ಸೊಸೆ ಸುಮಲತಾ ಏನ್ ಮಾಡ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.

ಸರ್ಕಾರ ನೊಂದ ಮಹಿಳೆಯರ ಪರವಾಗಿ ನಿಲ್ಲಲಿದೆ. ಅವರ ರಕ್ಷಣೆ ಮಾಡಲಿದೆ. ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಪ್ರಜ್ವಲ್ ಪ್ರಕರಣದ ವಿಡಿಯೋಗಳನ್ನು ಯಾರೂ ಫಾರ್ವರ್ಡ್ ಮಾಡಬಾರದು ಎಂದು ಸಚಿವರು ಮನವಿ ಮಾಡಿದರು.

ಇದನ್ನೂ ಓದಿ: Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

ಸುದ್ದಿಗೋಷ್ಠಿಯಲ್ಲಿ ಸಚಿವ ಡಾ.ಎಂ.ಸಿ. ಸುಧಾಕರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ವಿನಯ್ ನಾವಲಗಟ್ಟಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

Lok Sabha Election 2024

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

If Congress comes to power all your assets will belong to Government says PM Narendra Modi
Koo

ಬೆಳಗಾವಿ: ಎಲ್ಲಿಯವರೆಗೆ ನಿಮ್ಮ ನರೇಂದ್ರ ಮೋದಿ (PM Narendra Modi) ಬದುಕಿರುತ್ತಾರೋ ಅಲ್ಲಿಯವರೆಗೂ ಕಾಂಗ್ರೆಸ್‌ ಕುಕೃತ್ಯಕ್ಕೆ ಅವಕಾಶ ಕೊಡಲ್ಲ. ನಿಮ್ಮ ಮಂಗಳಸೂತ್ರ, ನಿಮ್ಮ ಸಂಪತ್ತನ್ನು ಲೂಟಿ ಮಾಡಲು ಅವಕಾಶ ಕೊಡಲ್ಲ. ಪೂರ್ವಜರ ಆಸ್ತಿಗಳಿಗೆ ತೆರಿಗೆ (Tax on ancestral properties) ಹಾಕುತ್ತೇವೆ, ಕಾನೂನು ತರುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಕೆಡುತ್ತದೆ. ನಿಮ್ಮ ವಂಶಸ್ಥರು ಮಾಡಿರುವ ಆಸ್ತಿಯನ್ನು ಈ ಕಾಂಗ್ರೆಸಿಗರು ವಾಪಸ್ ಪಡೆಯುತ್ತಾರಂತೆ. ನೀವು ಕೂಡಿಟ್ಟಿರೋ ಆಸ್ತಿಯನ್ನು ನಿಮ್ಮ ಮಕ್ಕಳಿಗೆ ಕೊಡಲು ಆಗುವುದಿಲ್ಲ. ನಿಮ್ಮ ಆಸ್ತಿಗೆ ಶೇಕಡಾ 55ರಷ್ಟು ತೆರಿಗೆ ವಿಧಿಸಿ ಆಸ್ತಿಯನ್ನು ಹೊಡೆಯುವುದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವೋಟ್ ಬ್ಯಾಂಕ್‌ ಭದ್ರ ಮಾಡಿಕೊಳ್ಳಲು ಕಾಂಗ್ರೆಸ್‌ನಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಆ ರೀತಿ ಆಗಲು ನೀವು ಬಿಡುತ್ತೀರಾ ಎಂದು ಕರ್ನಾಟಕದ ಎಲ್ಲ ಜನರಿಗೆ ನಾನು ಕೇಳುತ್ತಿದ್ದೇನೆ. ಆ ರೀತಿಯ ಕಾನೂನು ತರಲು ಹೊರಟಿರುವ ಕಾಂಗ್ರೆಸ್‌ಗೆ ಅಧಿಕಾರ ಕೊಡುತ್ತೀರಾ? ಇಂಥ ಕಾಂಗ್ರೆಸಿಗರನ್ನು ಹುಡುಕಿ ಹುಡುಕಿ ದೂರ ಇಡಿ ಎಂದು ಮನವಿ ಮಾಡಿದರು.

ಇಷ್ಟೆಲ್ಲ ಅನ್ಯಾಯ ಮಾಡುವ ಕಾಂಗ್ರೆಸ್‌ಗೆ ಜನ ಪಾಠ ಕಲಿಸಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಹೆಣ್ಣು ಮಕ್ಕಳ ಹತ್ಯೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ನಡೆದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಬೆಳಗಾವಿ ದಲಿತ ಮಹಿಳೆ ಬೆತ್ತಲೆ ಪ್ರಕರಣ ಪ್ರಸ್ತಾಪ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿ ದೌರ್ಜನ್ಯ ಎಸೆಗಲಾಗಿದೆ, ಜೈನ ಮುನಿ ಕೊಲೆ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಮಾಜಘಾತುಕ ಸಂಘಟನೆಗಳನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಇಂಥ ಮತಾಂಧ ಸಂಘಟನೆಗಳ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಆದರ್ಶಗಳ ಪ್ರೇರಣೆಯೊಂದಿಗೆ ಬಿಜೆಪಿ ಆಡಳಿತವು ನಡೆಯುತ್ತಿದೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಇದೆ, ಮಕ್ಕಳು ಅಲ್ಲಿ ಓದುತ್ತಿದ್ದಾರೆ. ನಿಮ್ಮ ಕನಸುಗಳೇ ಮೋದಿ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Narendra Modi: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಮೇಲೆ ನಡೆದ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ,

VISTARANEWS.COM


on

Congress ties with Aurangzeb supporters and Girls killed under his rule says Narendra Modi
Koo

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆದರೂ ಸಹ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಮಾಜಘಾತುಕ ಸಂಘಟನೆಗಳನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಇಂಥ ಸಂಘಟನೆಗಳ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ನಿಮ್ಮ ಆಸ್ತಿ ಮೇಲೆ ಕಣ್ಣಿಟ್ಟ ಸರ್ಕಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯಲ್ಲವೂ ಅನ್ಯರ ಪಾಲಾಗುತ್ತದೆ. ನೀವು ಮಾಡಿಟ್ಟ ಮನೆ, ಆಸ್ತಿ, ಚಿನ್ನ ಎಲ್ಲವೂ ಅನ್ಯರ ಪಾಲಾಗಿದೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಗೆಡುತ್ತದೆ. ಅವರು ದಿಲ್ಲಿಯಲ್ಲಿ ಆಡಳಿತಕ್ಕೆ ಬಂದರೆ ನಿಮ್ಮ ಆಸ್ತಿಯನ್ನು ವಶಕ್ಕೆ ಪಡೆಯುತ್ತದೆ. ನೀವು ನಿಮ್ಮ ಮಕ್ಕಳಿಗಾಗಿ ಪೈಸೆ ಪೈಸೆ ಕೂಡಿಟ್ಟು ಮಾಡಿದ ಆಸ್ತಿಯಲ್ಲಿ ಶೇಕಡಾ 55 ಪರ್ಸೆಂಟ್‌ ಅನ್ನು ಕಾಂಗ್ರೆಸ್‌ ವಶಕ್ಕೆ ಪಡೆಯಲಿದೆ. ಈ ಮೂಲಕ ನಿಮ್ಮ ಆಸ್ತಿಯು ನಿಮ್ಮ ಮಕ್ಕಳಿಗೆ ಸಿಗುವುದಿಲ್ಲ. ಹೀಗಾಗಿ ನಿಮ್ಮ ಆಸ್ತಿಯ ಬಹುದೊಡ್ಡ ಪಾಲು ಕಾಂಗ್ರೆಸ್‌ ಸರ್ಕಾರದ್ದಾಗುತ್ತದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇರ ವಾಗ್ದಾಳಿ ನಡೆಸಿದರು.

Continue Reading
Advertisement
Champions Trophy 2025
ಕ್ರೀಡೆ11 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ53 mins ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ55 mins ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ1 hour ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ2 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ2 hours ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ2 hours ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ2 hours ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು2 hours ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Hassan Pen Drive Case
ಕರ್ನಾಟಕ3 hours ago

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20249 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202410 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌