Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ - Vistara News

ಬೆಳಗಾವಿ

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

Belagavi News: ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ.

VISTARANEWS.COM


on

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿಯ ಕನ್ನಡ ಶಾಲೆಗಳಿಗೆ (Kannada Schools) ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯ ಹಾಳು ಮಾಡುತ್ತಿರುವ ಮಹಾರಾಷ್ಟ್ರ ಸರ್ಕಾರದ (Maharashtra Government) ಕನ್ನಡ ವಿರೋಧಿ ನೀತಿಯನ್ನು ಪ್ರತಿಭಟಿಸುವ ಕುರಿತು ಈಗ ಕನ್ನಡಿಗರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ (Belagavi News) ಬರೆದಿದ್ದಾರೆ.

ಈ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ಗಮನ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದು ಹೇಳಿದ್ದಾರೆ.

ಸಾಂಗ್ಲಿ ಜಿಲ್ಲಾ ಪಂಚಾಯಿತಿಯು ಇತ್ತೀಚೆಗೆ ಕನ್ನಡ ಶಾಲೆಗಳಿಗಾಗಿ ನೇಮಕ ಮಾಡಿದ 24 ಶಿಕ್ಷಕರ ಪೈಕಿ ಕೇವಲ ನಾಲ್ವರು ಮಾತ್ರ ಕನ್ನಡಿಗರಾಗಿದ್ದಾರೆ. ಕನ್ನಡ ಡಿ.ಎಡ್. ಪದವಿ ಪಡೆದ ನೂರಾರು ಶಿಕ್ಷಕರು ಕನ್ನಡ ಪ್ರದೇಶಗಳಲಿದ್ದು ಅವರನ್ನು ಕನ್ನಡ ಶಾಲೆಗಳಿಗೆ ನೇಮಕ ಮಾಡದೇ ಮರಾಠಿ ಶಿಕ್ಷಕರನ್ನು ನೇಮಕ ಮಾಡುತ್ತಿರುವ ಅಲ್ಲಿಯ ಸರ್ಕಾರದ ಕ್ರಮವು ದುರದ್ದೇಶಪೂರಿತವಾಗಿದೆ. ಈ ಕ್ರಮದ ವಿರುದ್ಧ ಅಲ್ಲಿಯ ಕನ್ನಡಿಗರು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಅವರ ಬೆನ್ನಿಗೆ ಕರ್ನಾಟಕ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ತನ್ನ ಸೂಕ್ತ ಹಾಗೂ ಸಮಂಜಸವಾದ ಪ್ರತಿಭಟನೆಯನ್ನು ತಿಳಿಸಬೇಕು. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರನ್ನೊಳಗೊಂಡ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ ಸಮಗ್ರವಾದ ವರದಿಯೊಂದನ್ನು ತಾವು ತರಿಸಿಕೊಂಡು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಅಲ್ಲಿಯ ಕನ್ನಡಿಗರ ಹಿತರಕ್ಷಣೆಗೆ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಬೇಕೆಂದು ಕೋರುತ್ತೇವೆ ಎಂದು ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಸದಸ್ಯರು ಪತ್ರ ಬರೆದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಧೋರಣೆಯನ್ನು ಮನವರಿಕೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Rain News: ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು.

VISTARANEWS.COM


on

rain news wall collapse 4 death
Koo

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

ಅನಂತಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading

ಮಳೆ

Karnataka Weather : ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಮಳೆ ಅಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೂನ್‌ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಊತ್ತರ ಒಳನಾಡಿನ ಕೆಲ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಜೂನ್‌ 27ರವರೆಗೆ ಮೀನುಗಾರರಿಗೆ ಎಚ್ಚರಿಕೆ

ಜೂನ್‌ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ

ಇದನ್ನೂ ಓದಿ: Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

ಮಳೆಗಾಲಕ್ಕೂ ಟ್ರೆಂಚ್‌ ಕೋಟ್‌ (Monsoon trench coat fashion) ಫ್ಯಾಷನ್‌ ಎಂಟ್ರಿ ನೀಡಿದೆ. ಹೌದು, ಕೇವಲ ಚಳಿಗಾಲದಲ್ಲಿ ಟ್ರೆಂಡಿಯಾಗುತ್ತಿದ್ದ, ಟ್ರೆಂಚ್‌ ಕೋಟ್‌ಗಳು ಇದೀಗ ಮಾನ್ಸೂನ್‌ ಸೀಸನ್‌ಗೂ ಕಾಲಿಟ್ಟಿದ್ದು, ಸೆಲೆಬ್ರೆಟಿಗಳನ್ನು ಮಾತ್ರವಲ್ಲ, ಸಾಮಾನ್ಯ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಇದಕ್ಕೆ ಪೂರಕ ಎಂಬಂತೆ, ಕಿಂಗ್‌ ಖಾನ್‌ ಮಗಳು ಹಾಗೂ ನಟಿ ಸುಹಾನಾ ಖಾನ್‌ ಟ್ರೆಂಚ್‌ ಕೋಟ್‌ ಧರಿಸಿದ್ದು, ಈ ಫ್ಯಾಷನ್‌ ಜೆನ್‌ ಜಿ ಹುಡುಗಿಯರನ್ನು ಸೆಳೆದಿದೆ. ಮಾನ್ಸೂನ್‌ನಲ್ಲೂ ಟ್ರೆಂಚ್‌ ಕೋಟ್‌ ಕ್ಲಾಸಿಯಾಗಿ ಕಾಣಿಸುತ್ತದೆ ಎಂಬುದನ್ನು ಪ್ರೂವ್‌ ಮಾಡಿದೆ.

Monsoon Trench Coat Fashion

ಟ್ರೆಂಚ್‌ಕೋಟ್‌ ವೆರೈಟಿ ವಿನ್ಯಾಸ

ಟ್ರೆಂಚ್‌ ಕೋಟ್‌ಗಳು ನೋಡಲು ಒಂದೇ ಬಗೆಯದ್ದಾಗಿ ಕಾಣುತ್ತವಾದರೂ ಸ್ಟಿಚ್ಚಿಂಗ್‌ ನಾನಾ ಶೈಲಿಯಲ್ಲಿರುತ್ತವೆ. ಸ್ಲೀಕ್‌ ಲುಕ್‌, ಫಾರ್ಮಲ್‌ ಬ್ಲೇಜರ್‌ ಸ್ಟೈಲ್‌ನಲ್ಲೂದೊರಕುತ್ತವೆ. ಮೊದಲೆಲ್ಲಾ ಹಿಲ್‌ ಸ್ಟೇಷನ್‌ಗಳಲ್ಲಿ ಮಾತ್ರ ಇವುಗಳ ಬಳಕೆ ಹೆಚ್ಚಾಗಿತ್ತು. ಬರಬರುತ್ತಾ ಸಿನಿಮಾ ತಾರೆಯರ ವಾರ್ಡ್‌ರೋಬ್‌ ಸೇರಿದ ನಂತರ ಸಾಮಾನ್ಯ ಹುಡುಗಿಯರ ಮನಸ್ಸನ್ನು ಗೆಲ್ಲತೊಡಗಿದವು. ಸ್ವೆಟರ್‌ ಹಾಗೂ ಜಾಕೆಟ್‌ ಧರಿಸುವಂತೆ, ಟ್ರೆಂಚ್‌ ಕೋಟ್‌ಗಳನ್ನು ಧರಿಸುವುದು ಹೆಚ್ಚಾಯಿತು ಎನ್ನುತ್ತಾರೆ ಜಿಯಾ.

ಕ್ಲಾಸಿಕ್‌ ಲುಕ್‌ ಗ್ಯಾರಂಟಿ

ಅಂದಹಾಗೆ, ವೆಸ್ಟರ್ನ್‌ ಲುಕ್‌ ನೀಡುವಲ್ಲಿಈ ಟ್ರೆಂಚ್‌ ಕೋಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಡಿಸೈನರ್‌ ಋತು ಹೇಳುವಂತೆ, ಇದೀಗ ಇಂಡೋ – ವೆಸ್ಟರ್ನ್ ಸ್ಟೈಲ್‌ನಲ್ಲೂ ಈ ಕೋಟ್‌ಗಳನ್ನು ಬಳಸುವುದು ಹೆಚ್ಚಾಗತೊಡಗಿದೆ. ಹಾಗಾಗಿ ಫಾರ್ಮಲ್‌ , ಎಥ್ನಿಕ್‌ ಡ್ರೆಸ್‌ ಧರಿಸುವ ಮಾನಿನಿಯರಿಗೂ ಪ್ರಿಯವಾಗತೊಡಗಿವೆ ಎನ್ನುತ್ತಾರೆ ಅವರು.

ಹೀಗಿರಲಿ ಟ್ರೆಂಚ್‌ ಕೋಟ್‌ ಸ್ಟೈಲಿಂಗ್‌

  • ಟ್ರೆಂಚ್‌ ಕೋಟ್‌ ಬೆಚ್ಚಗಿಡುವುದರಿಂದ ಧರಿಸುವವರು ಸಿಂಪಲ್‌ ಇನ್ನರ್‌ ಡ್ರೆಸ್‌ ಧರಿಸುವುದು ಬೆಸ್ಟ್.
  • ಉದ್ದಗಿರುವವರಿಗೆ ಯಾವುದೇ ಬಗೆಯ ಟ್ರೆಂಚ್‌ ಕೋಟ್‌ ಆದರೂ ಸೂಟ್‌ ಆಗುತ್ತವೆ.
  • ಪ್ಲಂಪಿಯಾಗಿರುವವರು ಆದಷ್ಟು ಡಿಸೈನರ್‌ ಕೋಟ್‌ ಧರಿಸುವುದು ಉತ್ತಮ.
  • ವಿಂಟೆಂಜ್‌ ಹಾಗೂ ರಾಯಲ್‌ ಕಲರ್‌ಗಳ ಟ್ರೆಂಚ್‌ ಕೋಟ್‌ಗಳು ರಾಯಲ್‌ ಲುಕ್‌ ನೀಡುತ್ತವೆ.
  • ಪ್ರಿಂಟೆಡ್‌ ಕೋಟ್‌ಗಳು ಟ್ರೆಂಡ್‌ನಲ್ಲಿಲ್ಲ.
  • ಫಿಟ್ಟಿಂಗ್‌ ಇದ್ದರೇ ಮಾತ್ರ ಚೆನ್ನಾಗಿ ಕಾಣಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lakshmi Hebbalkar: ರಾಜಹಂಸಗಡ ಕೋಟೆ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ: ಹೆಬ್ಬಾಳಕರ್

Lakshmi Hebbalkar: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

50 lakh rupees grant for the development of Rajahamsagada fort says Minister Lakshmi Hebbalkar
Koo

ಬೆಂಗಳೂರು: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಪ್ರತಿ ವರ್ಷ ಒಂದು ಕೋಟಿ ರೂಪಾಯಿ ಅನುದಾನ ನೀಡುವಂತೆ ಸಚಿವರು ಮನವಿ ಸಲ್ಲಿಸಿದರು.

ಇದನ್ನೂ ಓದಿ: krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

ಮನವಿಗೆ ಸ್ಪಂದಿಸಿದ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌, ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿ ಹಾಗೂ ಒಳನಾಡಿನ ವಿವಿಧೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕಡಲ ತೀರದಲ್ಲಿ ಅಲೆಗಳು ಆಳೆತ್ತರದಲ್ಲಿ ಅಪ್ಪಳಿಸುತ್ತಿದ್ದು, ನಾಳೆಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವರುಣಾರ್ಭಟ (Rain News) ಮುಂದುವರೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿ ಹಿನ್ನೆಲೆಯಲ್ಲಿ ದಡಕ್ಕೆ ಆಳೆತ್ತರದ ಅಲೆಗಳು ಅಪ್ಪಳಿಸುತ್ತಿದೆ. ರೆಡ್‌ ಅಲರ್ಟ್‌ ನೀಡಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್ ಬಿದ್ದಿದೆ. ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ಜೂನ್‌ 25ರವರೆಗೆ ಕರಾವಳಿ ಮತ್ತು ದಕ್ಷಿನ ಒಳನಾಡಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ , ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸಲಿದೆ.

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು, ಭಾಲ್ಕಿ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ , ಕೊಟ್ಟಿಗೆಹಾರ ತಲಾ 4 ಸೆಂ.ಮೀ ಮಳೆಯಾಗಿದೆ. ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮಂಕಿ, ಪುತ್ತೂರು , ಅಂಕೋಲಾ, ರೋನ್, ಭಾಗಮಂಡಲ, ಆಗುಂಬೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ದೇಶ11 mins ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ17 mins ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು24 mins ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ58 mins ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್1 hour ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ1 hour ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest1 hour ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ2 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest2 hours ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ2 hours ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌