Site icon Vistara News

Belagavi | 40 ವರ್ಷಗಳಿಂದ ಅಭಿವೃದ್ಧಿಯಾಗದ ರಸ್ತೆ; ಗ್ರಾಮಕ್ಕೆ ಬಂದ ಬಿಜೆಪಿ ಎಂಎಲ್‌ಎಗೆ ಮಹಿಳೆಯರಿಂದ ತರಾಟೆ

ಬೆಳಗಾವಿ: ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಗೆಂದು ಬಂದ ಬಿಜೆಪಿ ಶಾಸಕರಿಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಇಲ್ಲಿನ ರಾಮದುರ್ಗ ತಾಲೂಕಿನ ಚಿಕೊಪ್ಪ ಕೆ.ಎಸ್.ಗ್ರಾಮಸ್ಥರು (Belagavi) ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಮುತ್ತಿಗೆ ಹಾಕಿದರು.

ಗ್ರಾಮದಲ್ಲಿ 10 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡುವ ವೇಳೆ, ಪಕ್ಕದ ಬಡಾವಣೆಯ ನೂರಾರು ನಿವಾಸಿಗಳು ಜಮಾಯಿಸಿ ನಮ್ಮ ಕಾಲೊನಿ ರಸ್ತೆ ಅಭಿವೃದ್ಧಿಪಡಿಸಿ ಎಂದು ಶಾಸಕ ಯಾದವಾಡ ಅವರನ್ನು ಆಗ್ರಹಿಸಿದರು.

ಯೋಜನೆ ರೂಪಿಸಲು ಫೋನ್‌ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಎಂಎಲ್‌ಎ ಮಹಾದೇವಪ್ಪ ಯಾದವಾಡ

40 ವರ್ಷಗಳಿಂದ ಮನವಿ ಸಲ್ಲಿಸಿದರೂ ರಸ್ತೆ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಮಹಿಳೆಯರೆಲ್ಲ ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಪಿಡಬ್ಲ್ಯೂಡಿ (PWD) ಅಧಿಕಾರಿಗಳಿಗೆ ಫೋನ್ ಮೂಲಕ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ | KPTCL Exam Scam | ಬೆಳಗಾವಿಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಂಡ ಮೂವರು ಆರೋಪಿಗಳ ಬಂಧನ

Exit mobile version