Site icon Vistara News

Border Dispute: ಡಿ.ಕೆ. ಶಿವಕುಮಾರ್‌ ಅವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಉತ್ತರ

border-dispute-CM Basavaraja bommai condemns maharashtra govt decision

Basavaraj Bommai

ಬೆಳಗಾವಿ: ಮಹಾರಾಷ್ಟ್ರದವರು ಕರ್ನಾಟಕದ ಹಳ್ಳಿಗಳಿಗೆ ಯೋಜನೆ ಜಾರಿ ಮಾಡಿದರೆ ನಾನೇಕೆ ರಾಜೀನಾಮೆ ನೀಡಬೇಕು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ತಾನು ಹೇಳುತ್ತಿರುವ 865 ಹಳ್ಳಿಗಳಲ್ಲೂ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂಬ ಡಿ.ಕೆ. ಶಿವಕುಮಾರ್‌ ಮಾತಿಗೆ ಪ್ರತಿಕ್ರಿಯಿಸಿದ್ದಾರೆ.

ನಾವೂ ಕೂಡ ಮಹಾರಾಷ್ಟ್ರದಲ್ಲಿರುವ ಪಂಡರಪುರ, ತುಳಜಾಪುರಕ್ಕೆ ಹೋಗುವ ಕರ್ನಾಟಕದವರಿಗೆ ಹಣ ಬಿಡುಗಡೆ ಮಾಡ್ತೀವಿ. ಅವರು ಏನು ಬಿಡುಗಡೆ ಮಾಡಿದ್ದಾರೆ ನೋಡ್ತೀನಿ. ಯಾವ ರೀತಿಯಲ್ಲಿ ತಡೆಗಟ್ಟಬೇಕು ನೋಡ್ತೀನಿ. ಡಿಕೆಶಿ ಅವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Border Dispute: ಮತ್ತೆ ಗಡಿ ಕ್ಯಾತೆ ತೆಗೆದ ಶಿವಸೇನೆ-ಬಿಜೆಪಿ ʼಮಹಾʼ ಸರ್ಕಾರ: ರಾಜ್ಯದ ನೆಲದಲ್ಲಿ ತನ್ನ ಯೋಜನೆ ಜಾರಿಗೆ ತೀರ್ಮಾನ

Exit mobile version