Border Dispute: ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್ - Vistara News

ಬೆಳಗಾವಿ

Border Dispute: ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

Border Dispute: ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಗಡಿ ವಿವಾದದ (Border Dispute) ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚುತ್ತಿದ್ದು, ಕಚೇರಿ ತೆರೆಯಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.

ಇದನ್ನೂ ಓದಿ: HSRP Number Plate ಅವಧಿ ಮತ್ತೆ 3 ತಿಂಗಳು ವಿಸ್ತರಣೆ; ವಿಧಾನ ಪರಿಷತ್‌ನಲ್ಲಿ ಸರ್ಕಾರ ಘೋಷಣೆ

ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದು ಹೇಳಿದರು.

ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಿಎಂ ಜತೆ ಚರ್ಚೆ

ಲೋಕಸಭಾ ಚುನಾವಣೆ ವಿಚಾರವಾಗಿ ಕೇಳಿದಾಗ “ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು ಚರ್ಚಿಸಿ ಹೈಕಮಾಂಡ್‌ಗೆ ಪಟ್ಟಿ ಕಳಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ರಾಜ್ಯಸಭೆ ಟಿಕೆಟ್‌ ಬಗ್ಗೆ ಹೈಕಮಾಂಡ್‌ ತೀರ್ಮಾನ ಅಂತಿಮ

ರಾಜ್ಯಸಭೆಗೆ ರಾಜ್ಯದಿಂದ ಹೆಸರು ಸೂಚಿಸಲಾಗುವುದೇ ಎಂದು ಕೇಳಿದಾಗ, “ರಾಜ್ಯಸಭೆಗೆ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Karnataka Budget Session 2024: ಕುಕ್ಕರ್‌ ಬ್ಲಾಸ್ಟ್‌ ಮಾಡಿದ್ದ ಬ್ರದರ್‌ ಬಗ್ಗೆ ಹೇಳುತ್ತೀರಿ, ಹಾವೇರಿ ಸಿಸ್ಟರ್‌ ಬಗ್ಗೆಯೂ ಮಾತಾಡಿ: ಅಶೋಕ್!

40 ಪರ್ಸೆಂಟ್ ಕಮಿಷನ್ ತನಿಖೆಯನ್ನು ಸಮಿತಿ ಮಾಡುತ್ತದೆ

40 ಪರ್ಸೆಂಟ್ ಕಮಿಷನ್ ವಿಚಾರವಾಗಿ ತನಿಖೆ ನಿಧಾನಗತಿಯಲ್ಲಿ ಸಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, “ಹೈಕೋರ್ಟ್ ಅಭಿಪ್ರಾಯವನ್ನು ಗೌರವಿಸುತ್ತೇವೆ. ನಾವು ತನಿಖೆಯನ್ನು ಸಮಿತಿಗೆ ನೀಡಿದ್ದು, ಅವರ ಕರ್ತವ್ಯವನ್ನು ಅವರು ಮಾಡುತ್ತಾರೆ” ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Karnataka Rain: ಸಿಡಿಲಾಘಾತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಹಲವೆಡೆ ಸಿಡಿಲು ಸಹಿತ ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಸಿಡಿಲು ಬಡಿದು ಕುರಿಗಳು ಬಲಿಯಾದರೆ, ಮೇವಿನ ಬಣವೆ, ತೆಂಗಿನ ಮರ ಸೇರಿ ಮನೆಯು ಹಾನಿಯಾಗಿದೆ. ಗಾಳಿ ಮಳೆಗೆ ಬೆಳೆಗಳು ನಾಶವಾಗಿವೆ.

VISTARANEWS.COM


on

By

karnataka Rain Effected
Koo

ವಿಜಯಪುರ/ಹಾವೇರಿ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಗಾಳಿಯೊಂದಿಗೆ (Karnataka Rain) ಮಳೆಯಾಗುತ್ತಿದೆ. ಮಳೆ ಅನಾಹುತ (Rain News) ಒಂದು ಕಡೆಯಾದರೆ, ಮತ್ತೊಂದು ಕಡೆ ಸಿಡಿಲಾಘಾತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ವಿಜಯಪುರದಲ್ಲಿ ಸಿಡಿಲು ಬಡಿದು ಕುರಿಗಳು ಮೃತಪಟ್ಟರೆ, ಹಾವೇರಿಯಲ್ಲಿ ಮೇವಿನ ಬಣವೆ ಸುಟ್ಟು ಕರಕಲಾಗಿದೆ. ಕೊಡಗಿನಲ್ಲಿ ಸಿಡಿಲಿಗೆ ಮನೆಗೆ ಹಾನಿಯಾಗಿದ್ದು ಚಾವಣಿ ಕಿತ್ತುಬಂದಿದೆ. ಕೊಪ್ಪಳದಲ್ಲಿ ಗಾಳಿ ಮಳೆಗೆ ಮನೆಯ ಶೀಟ್‌ಗಳು ಹಾರಿ ಹೋದರೆ, ವಿಜಯಪುರ, ವಿಜಯನಗರದಲ್ಲಿ ಬೆಳೆಗಳಿಗೆ ಹಾನಿಯಾಗಿವೆ.

ವಿಜಯಪುರದಲ್ಲಿ ಸಿಡಿಲಿಗೆ ಕುರಿಗಳು ಬಲಿ

ಸಿಡಿಲು ಬಡಿದು ಎರಡು ಕುರಿಗಳು ಮೃತಪಟ್ಟಿವೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹಾಲಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಬಣ್ಣ ಬಸನಗೌಡ ಬಿರಾದಾರ ಎಂಬುವವರ ಕುರಿಗಳು ಮೃತಪಟ್ಟಿವೆ. ಇತ್ತ ಶಿವಸಂಗಪ್ಪ ರಾಯಪ್ಪ ಬೇವಿನಮಟ್ಟಿ ಎಂಬುವವರಿಗೆ ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Karnataka Rain

ಹಾವೇರಿಯಲ್ಲಿ ಸಿಡಿಲಿಗೆ ಸುಟ್ಟು ಕರಕಲಾದ ಮೇವಿನ ಬಣವೆ

ಸಿಡಿಲು ಬಡಿದು ಮೇವಿನ ಬಣವೆ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ ತಾಲೂಕಿನ ವರ್ದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಪರಶುರಾಮ ಬಾರ್ಕಿ ಎಂಬ ರೈತ ಧನಕರುಗಳಿಗೆ ಮೇವಿನ ಬಣವೆ ಸಂಗ್ರಹಿಸಿಟ್ಟಿದ್ದರು. ಆದರೆ ಬೆಂಕಿ ಎಲ್ಲವೂ ಸುಟ್ಟು ಕರಲಾಗಿದೆ. ಆಡೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತ ಸಿಡಿಲು ಬಡಿದು ತೆಂಗಿನಮರ ಸುಟ್ಟು ಭಸ್ಮವಾಗಿದೆ. ಹನುಮಂತಪ್ಪ ದೇಸೂರ ಮನೆಯ ಆವರಣದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ‌ ಹಿರೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕೊಡಗಿನಲ್ಲಿ ಸಿಡಿಲಿಗೆ ಮನೆಗೆ ಹಾನಿ

ಕೊಡಗಿನಲ್ಲಿ ರಾತ್ರಿ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿಯಾಗಿದೆ. ಮಡಿಕೇರಿ ಸಮೀಪದ ಕಾಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಎನ್.ಟಿ.ಲಿಂಗಮ್ಮ ಎಂಬವರಿಗೆ ಸೇರಿದ ಮನೆ ಸಂಪೂರ್ಣ ಜಖಂಗೊಂಡಿದೆ. ಸಿಡಿಲಿಗೆ ಮನೆಯ ಚಾವಣಿ ಕುಸಿದು ಬಿದ್ದಿದೆ. ಸಿಡಿಲಿನಾಘಾತಕ್ಕೆ ಮನೆ ಮಂದಿ ಕಂಗಾಲಾಗಿದ್ದಾರೆ. ಜಿಲ್ಲೆಯ ಹಲವೆಡೆ ರಾತ್ರಿಯೆಲ್ಲ ಗುಡುಗು ಸಹಿತ ಮಳೆಯಾಗಿದೆ.

Karnataka Rain

ಇದನ್ನೂ ಓದಿ: POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

ಕೊಪ್ಪಳದಲ್ಲಿ ಭಾರಿ ಗಾಳಿ ಮಳೆಗೆ ಹಾರಿ ಹೋದ ಚಾವಣಿ

ಶನಿವಾರ ರಾತ್ರಿ ಕೊಪ್ಪಳ ಸೇರಿದಂತೆ ಹಲವು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಭಾರಿ ಮಳೆಗೆ ಮನೆ ಚಾವಣಿಯ ಶೀಟ್‌ಗಳು ಹಾರಿಹೋಗಿವೆ. ಮರಗಳು ಉರುಳಿ ಬಿದ್ದಿವೆ. ಕೊಪ್ಪಳ ತಾಲೂಕಿನ ನರೇಗಲ್ ಗ್ರಾಮದಲ್ಲಿ ವೀರೇಶಪ್ಪ ಯಲಬುರ್ಗಿ ಎಂಬುವವರ ಮನೆಯಲ್ಲಿ ಬಿರುಗಾಳಿಗೆ ಶೀಟ್‌ಗಳು ಹಾರಿ ಹೋಗಿವೆ.

ವಿಜಯನಗರದಲ್ಲಿ ಭಾರಿ ಮಳೆಗೆ ಬಾಳೆ ಗಿಡಗಳು ನಾಶ

ಭಾರಿ ಮಳೆಗೆ ನೂರಾರು ಎಕರೆ ಬಾಳೆ ಗಿಡಗಳು ನೆಲಕ್ಕೆ ಬಾಗಿವೆ. ವಿಜಯನಗರದ ಹೊಸಪೇಟೆ ತಾಲೂಕಿನ ಹೊಸೂರು ಮಾಗಾಣಿ, ನಾಗೇನಹಳ್ಳಿ ಹಾಗೂ ಚಿತ್ತವಾಡ್ಗಿ, ಹಾನಗಲ್, ಇಪ್ಪತೇರಿ, ಕರೆಕಲ್ ಮಾಗಾಣಿ, ನರಸಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಸುಗಂಧಿ, ಯಾಲಕ್ಕಿ, ಬಾಳೆಗಿಡಗಳು ನೆಲಕ್ಕುರುಳಿವೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅನ್ನದಾತರು ಕಂಗಾಲಾಗಿದ್ದಾರೆ.

karnataka Rain

ವಿಜಯಪುರದಲ್ಲಿ ನಿಂಬೆ ಬೆಳೆ ನಾಶ

ಶನಿವಾರ ತಡರಾತ್ರಿ ಬೀಸಿದ ಮಳೆ ಗಾಳಿಗೆ ನಿಂಬೆ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಹೊರ ಭಾಗದಲ್ಲಿನ ನಿಂಬೆ ತೋಟಕ್ಕೆ ಹಾನಿಯಾಗಿದೆ. ಇಂಡಿ ಅಹಿರಸಂಗ ರಸ್ತೆಯಲ್ಲಿನ ಸಂಜು ವಾಘಮೋಡೆ ಎಂಬುವವರ ನಿಂಬೆ ತೋಟದಲ್ಲಿನ‌ ನಿಂಬೆ ಗಿಡಗಳು ಹಾನಿಯಾಗಿದೆ.

ಬರಗಾಲ ಹಾಗೂ ಬೇಸಿಗೆಯಲ್ಲಿ ಕಷ್ಟಪಟ್ಟು ಉಳಿಸಿಕೊಂಡಿದ್ದ ನಿಂಬೆ ಬೆಳೆ, ನಿನ್ನೆ ತಡರಾತ್ರಿ ಮಳೆಯ ಗಾಳಿಗೆ ಬುಡ ಸಮೇತ ಕಿತ್ತು ಬಿದ್ದಿವೆ. ಎರಡು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಯು ನಾಶವಾಗಿವೆ. ತೋಟಗಾರಿಕಾ ಇಲಾಖೆಯಿಂದ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಚಿಕ್ಕೋಡಿಯಲ್ಲಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ವಿಧ್ಯುತ್ ಕಂಬಗಳು ಧರೆಗುರುಳಿವೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದೆ.

Karnataka Rain

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಪರಿವರ್ತಕ ಸಹಿತ ವಿದ್ಯುತ್ ಕಂಬಗಳು ಧರೆಗುರುಳಿವೆ. ಏಳು ಕಂಬಗಳು ಧರೆಗುರುಳಿದ ಪರಿಣಾಮ ಕರೆಂಟ್‌ ಇಲ್ಲದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳಲ್ಲಿ ರಾತ್ರಿ ಇಡಿ ಸುರಿದ ಬಿರುಗಾಳಿ ಸಹಿತ ಮಳೆಗೆ ವಾತಾವರಣ ತಂಪಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಐಪಿಎಲ್ 202428 mins ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ55 mins ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Vande Bharat Express
ದೇಶ1 hour ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಕರ್ನಾಟಕ1 hour ago

Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 hour ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Adhir Ranjan
ದೇಶ1 hour ago

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

felicitation programme for SSLC student Harshita D M who got 2nd place in the state
ತುಮಕೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

130 crore crop compensation amount paid to Vijayanagara district says DC m S Diwakar
ವಿಜಯನಗರ2 hours ago

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 hour ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ15 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌