Site icon Vistara News

Crime News: ಸರ್ಕಾರಿ ಶಾಲೆ ಎದುರು ಯುವಕನ ಶವ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

mahantesh murderd

ಬೆಳಗಾವಿ: ಸರ್ಕಾರಿ ಶಾಲಾ ಕೊಠಡಿಯ ಎದುರು ಕೊಲೆಯಾದ ಸ್ಥಿತಿಯಲ್ಲಿ ಯುವಕನೊಬ್ಬನ ಶವ (murder) ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆ ಮಾರಿಹಾಳ ಸರ್ಕಾರಿ ಕನ್ನಡ ಶಾಲೆಯಲ್ಲಿ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ರಕ್ತದ ಮಡುವಿನಲ್ಲಿ ಬಿದ್ದ ಯುವಕನ ಮೃತದೇಹ ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಹಾಂತೇಶ ರುದ್ರಪ್ಪ ಕರಲಿಂಗಣ್ಣವರ್ (24) ಎಂಬಾತನ ಹತ್ಯೆ ಮಾಡಲಾಗಿದೆ.

ಮಧ್ಯರಾತ್ರಿ ಮಹಾಂತೇಶ ಕರಲಿಂಗಣ್ಣವರ್ ಅವರ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶವ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮದ್ಯ ಚಲಾಯಿಸಿ ಅಪಘಾತ ಮಾಡಿದ ಕಾರು ಚಾಲಕನಿಗೆ ಚಪ್ಪಲಿ ಸೇವೆ

ವಿಜಯಪುರ: ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ ಅಪಘಾತ ಮಾಡಿದ ಕಾರ್ ಚಾಲಕನಿಗೆ ಮಹಿಳೆಯಿಂದ ಚಪ್ಪಲಿ ಸೇವೆ ನಡೆದಿದೆ.

ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದ ಘಟನೆಯಿದು. ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ ಎರಡು ಆಟೋ ಹಾಗೂ ಒಂದು ಬೈಕ್‌ಗೆ ಕಾರು ಚಾಲಕ ಡಿಕ್ಕಿಯಾಗಿದ್ದಾನೆ. ಇದರಿಂದ ಆಟೋ ಪಲ್ಟಿಯಾಗಿದೆ. ಪಲ್ಟಿಯಾದ ಅಟೋದಲ್ಲಿದ್ದ ಮಹಿಳೆ, ಬೇಜವಾಬ್ದಾರಿಯಾಗಿ ಹಾಗೂ ಮದ್ಯ ಸೇವಿಸಿ ಕಾರ್‌ ಚಲಾಯಿಸಿ ಅಪಘಾತ ಮಾಡಿದ್ದರಿಂದ ಆಕ್ರೋಶಗೊಂಡು ಚಾಲಕನಿಗೆ ಚಪ್ಪಲಿ ಸೇವೆ ಮಾಡಿದ್ದಾಳೆ.

ಅಪಘಾತದಿಂದ ಆಟೋಗಳಲ್ಲಿ ಹಾಗೂ ಬೈಕ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆಯಿಂದ ಕಾರ್ ಚಾಲಕನಿಗೆ ಥಳಿತದ ವಿಡಿಯೊ ವೈರಲ್ ಆಗುತ್ತಿದೆ. ಕಾರ್ ಚಾಲಕ ಪೊಲೀಸರ ವಶವಾಗಿದ್ದಾನೆ.

Exit mobile version