Site icon Vistara News

ಮನೆ ಚಾವಣಿಗೆ ತಗಡಿನ ಶೀಟ್‌ ಹಾಕುವಾಗ ವಿದ್ಯುತ್‌ ತಗುಲಿ ಇಬ್ಬರ ಸಾವು, ಒಬ್ಬನ ಸ್ಥಿತಿ ಗಂಭೀರ

ವಿದ್ಯುತ್‌ ಸ್ಪರ್ಶ

ಬೆಳಗಾವಿ: ತಾಲೂಕಿನ ಸುಳಗಾ ಗ್ರಾಮದಲ್ಲಿ ಮಳೆ ನೀರು ಸೋರದಂತೆ ಮನೆ ಮಾಳಿಗೆ ಮೇಲೆ ತಗಡಿನ ಶೀಟ್‌ ಹಾಕುವ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸುಳಗಾ ನಿವಾಸಿ ವಿನಾಯಕ ಕೃಷ್ಣ ಕಾಲಖಾಂಬಕರ (25), ಬೆನಕನಹಳ್ಳಿ ನಿವಾಸಿ ವಿಲಾಸ ಗೋ‍ಪಾಲ ಅಗಸಗೇಕರ (57) ಮೃತರು. ನಿರಂತರ ಮಳೆಯಿಂದ ವಿನಾಯಕ ಅವರ ಮನೆ ಸೋರುತ್ತಿತ್ತು. ಹೀಗಾಗಿ ಚಾವಣಿ ಮೇಲೆ ಹೊಸ ತಗಡಿನ ಶೀಟ್‌ಗಳನ್ನು ಹಾಕಲು ಇಬ್ಬರೂ ಮೇಲೆ ಹತ್ತಿದ್ದಾಗ ಮನೆ ಮೇಲೆ ಹಾದು ಹೋದ ವಿದ್ಯುತ್‌ ತಂತಿಗೆ ಶೀಟ್‌ ತಗುಲಿದ್ದರಿಂದ ಅವಘಡ ಸಂಭವಿಸಿದೆ.

ಈ ವೇಳೆ ಅವರ ರಕ್ಷಣೆಗೆ ಬಂದಿದ್ದ ಇನ್ನೊಬ್ಬ ವ್ಯಕ್ತಿಗೂ ವಿದ್ಯುತ್‌ ತಗುಲಿ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ‌ಗ್ರಾಮೀಣ‌ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Rain News | ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಹೈರಾಣಾದ ಜನ

Exit mobile version