Maha Melava | ಡಿ.19ರಂದು ಬೆಳಗಾವಿಯಲ್ಲಿ ಎಂಇಎಸ್‌ನಿಂದ ಮಹಾ ‌ಮೇಳಾವ್; ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಪತ್ರ - Vistara News

ಬೆಳಗಾವಿ

Maha Melava | ಡಿ.19ರಂದು ಬೆಳಗಾವಿಯಲ್ಲಿ ಎಂಇಎಸ್‌ನಿಂದ ಮಹಾ ‌ಮೇಳಾವ್; ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಪತ್ರ

Maha Melava | ಬೆಳಗಾವಿಯಲ್ಲಿ ಭಾಷಾದ್ವೇಷದ ಕಿಡಿ ಹಚ್ಚಲು ಎಂಇಎಸ್‌ ಹುನ್ನಾರ ನಡೆಸುತ್ತಿದೆ. ಹೀಗಾಗಿ ಮಹಾ ಮೇಳಾವ್‌ಗೆ ಅನುಮತಿ ‌ನೀಡಬಾರದು ಎಂದು ಕನ್ನಡ ಪರ‌ ಸಂಘಟನೆಗಳು ಒತ್ತಾಯಿಸಿವೆ.

VISTARANEWS.COM


on

Maha Melava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಚುನಾವಣೆ ‌ಹೊಸ್ತಿಲಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ನಾಡದ್ರೋಹಿ ಎಂಇಎಸ್ ಹೆಣಗಾಡುತ್ತಿದ್ದು, ಚಳಿಗಾಲ ಅಧಿವೇಶನದ ವೇಳೆ ಮಹಾ ಮೇಳಾವ್ (ಮರಾಠಾ ಸಮ್ಮೇಳನ-Maha Melava) ಆಯೋಜಿಸಲು ನಿರ್ಧರಿಸಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಡಿ.19 ರಂದು ಚಳಿಗಾಲ ‌ಅಧಿವೇಶನ ಆರಂಭವಾಗಲಿದೆ. ಹೀಗಾಗಿ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ನಡೆಸಲು ಎಂಇಎಸ್ ‌ಸಿದ್ಧತೆ ನಡೆಸಿದೆ.

ಬೆಳಗಾವಿಯ ಟಿಳಕವಾಡಿಯ ವ್ಯಾಕ್ಸಿನ್ ಡಿಪೋದಲ್ಲಿ ಡಿ.19ರಂದು ಮಹಾ ‌ಮೇಳಾವ್ ನಡೆಸಲು ಎಂಇಎಸ್‌ ನಿರ್ಧರಸಿದೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಅಸ್ತಿತ್ವ ಉಳಿಸಿಕೊಳ್ಳಲು ಎಂಇಎಸ್ ಕಸರತ್ತು ನಡೆಸುತ್ತಿರುವ ಎಂಇಎಸ್‌, ಮಹಾ ಮೇಳಾವ್ ನಡೆಸಲು ಅನುಮತಿ ಕೋರಿ ಎಂಇಎಸ್‌ ಮುಖಂಡರು, ಬೆಳಗಾವಿ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತ, ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ, ಮಹಾನಗರ ‌ಪಾಲಿಕೆ‌‌ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಎಂಇಎಸ್, ಸಂಪೂರ್ಣ ನೆಲಕಚ್ಚಿದ್ದರೂ ಬುದ್ಧಿ ಕಲಿತಿಲ್ಲ. ಮುಗ್ಧ ಮರಾಠಿ ಭಾಷಿಕರನ್ನು ಪ್ರಚೋದಿಸಿ ಕರ್ನಾಟಕ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕುತಂತ್ರದ ಮೂಲಕ ರಾಜಕೀಯ ‌ಲಾಭ ಪಡೆಯಲು ಎಂಇಎಸ್ ಹುನ್ನಾರ ನಡೆಸುತ್ತಿದೆ.

ಇದನ್ನೂ ಓದಿ | Kannada University | 31ನೇ ನುಡಿಹಬ್ಬ, ಘಟಿಕೋತ್ಸವ; ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಿಂದ ಉಭಯ‌ ರಾಜ್ಯಗಳಲ್ಲಿ ತ್ವೇಷಮಯ ವಾತಾವರಣ ಉಂಟಾಗಿದೆ. ಈ ನಡುವೆ ಉರಿಯುವ ಬೆಂಕಿಗೆ ತುಪ್ಪ ಸುರಿಯಲು ಎಂಇಎಸ್ ಮುಂದಾಗಿದೆ. ಮಹಾ ಮೇಳಾವ್‌ನಲ್ಲಿ ಪಾಲ್ಗೊಳ್ಳುವಂತೆ ಮಹಾರಾಷ್ಟ್ರ ‌ನಾಯಕರಿಗೆ ಎಂಇಎಸ್ ‌ಆಹ್ವಾನ ನೀಡಿದೆ. ಮಹಾರಾಷ್ಟ್ರ ‌ಮುಖ್ಯಮಂತ್ರಿ ಏಕನಾಥ್ ‌ಶಿಂಧೆ, ಎನ್‌ಸಿಪಿ ವರಿಷ್ಠ ಶರದ್ ಪವಾರ್‌, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ‌ಪಾಟೀಲ, ಶಂಭುರಾಜ್ ದೇಸಾಯಿ, ಶಿವಸೇನೆ ‌ಮುಖ್ಯಸ್ಥ ಉದ್ಧವ್ ಠಾಕ್ರೆ ಸೇರಿ ಹಲವು ನಾಯಕರಿಗೆ ಎಂಇಎಸ್ ‌ಆಹ್ವಾನ ನೀಡಿದೆ. ಬಿಜೆಪಿ, ಕಾಂಗ್ರೆಸ್, ಏಕನಾಥ ಶಿಂಧೆ ಬಣ, ಶಿವಸೇನೆ, ಎನ್‌ಸಿಪಿಗೆ ಎಂಇಎಸ್‌ ಪತ್ರ ಬರೆದಿದ್ದು, ಒಂದು ಪಕ್ಷದಿಂದ ತಲಾ ಇಬ್ಬರು ನಾಯಕರನ್ನು ಮಹಾ‌ ಮೇಳಾವ್‌ಗೆ ಕಳುಹಿಸುವಂತೆ ಮನವಿ ಮಾಡಲಾಗಿದೆ.

ಕಳೆದ ವರ್ಷ ಸರಳವಾಗಿ ಮಹಾ ಮೇಳಾವ್ ಆಯೋಜಿಸಲಾಗಿತ್ತು. ಆದರೆ ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ‌ಈ ಬಾರಿ ಅದ್ಧೂರಿಯಾಗಿ ಮಹಾ ಮೇಳಾವ್ ‌ನಡೆಸಲು ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಬೆಳಗಾವಿಯಲ್ಲಿ ಭಾಷಾದ್ವೇಷದ ಕಿಡಿ ಹಚ್ಚಲು ಹುನ್ನಾರ ನಡೆಲಾಗುತ್ತಿದೆ. ಹೀಗಾಗಿ ಮಹಾ ಮೇಳಾವ್‌ಗೆ ಅನುಮತಿ ‌ನೀಡಬಾರದು ಎಂದು ಕನ್ನಡ ಪರ‌ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ | Janardana Reddy | ಬೇನಾಮಿ ಆಸ್ತಿ ಸಂಪಾದನೆ: ಜನಾರ್ದನ ರೆಡ್ಡಿ ವಿರುದ್ಧ ನಾಲ್ಕು ಪ್ರಕರಣಗಳು ಮುಕ್ತಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

Anjali Murder Case: ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

anjali murder case girish
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli news) ನೇಹಾ ಹಿರೇಮಠ (Neha Hiremath murder) ಕೊಲೆ ಮಾದರಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಎಂಬಾಕೆಯನ್ನು ಚುಚ್ಚಿ ಸಾಯಿಸಿದ (Anjali Murder Case) ಆರೋಪಿ ಗಿರೀಶ್‌ನನ್ನು ಬಂಧಿಸಲಾಗಿದೆ. ಈತ ಮೂರು ದಿನಗಳಿಂದ ತಲೆ ತಪ್ಪಿಸಿಕೊಂಡು (Abscond) ಪರಾರಿಯಾಗಿದ್ದ.

ಆರೋಪಿಯನ್ನು‌ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೊಲೆಗಾರ ಗಿರೀಶ್‌ನನ್ನು ಸಾರ್ವಜನಿಕರು ಥಳಿಸಿದ್ದಾರೆ. ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಸ್ನೇಹಿತನೂ ಕೊಲೆ ಆರೋಪಿ

ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್‌ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.

ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Continue Reading

ಕ್ರೈಂ

UDR Case: ಟೆಕ್ಕಿ ಪತ್ನಿಯ ಅನುಮಾನಾಸ್ಪದ ಸಾವು

UDR Case: ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ.

VISTARANEWS.COM


on

techie wife udr case
Koo

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್‌ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.

ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಚಾಮರಾಜನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಚಾಮರಾಜನಗರ ತಾಲ್ಲೋಕಿನ ಜ್ಯೋತಿಗೌಡನಪುರ ಗ್ರಾಮದ ಹೊರವಲಯದಲ್ಲಿ ಗ್ರಾಮದ ಬಸವನಕಟ್ಟೆ ದೇವಸ್ಥಾನದ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಅನುಮಾನ ಮೂಡಿದೆ. ಸ್ಥಳಕ್ಕೆ ರಾಮಸಮುದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಜತೆಗೆ ಮೃತನ ಗುರುತು ಪತ್ತೆಗಾಗಿ, ಸ್ಥಳದಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ದಾವಣಗೆರೆ: ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿ (Murder case) ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ದಾವಣಗೆರೆ ತಾಲೂಕಿನ ಒಬಜ್ಜಿಹಳ್ಳಿಯ ಹೊರ ವಲಯದಲ್ಲಿ ಘಟನೆ ನಡೆದಿದೆ. ಸುದೀಪ್ (25) ಕೊಲೆಯಾದವನು.

ದಾವಣಗೆರೆ ನಗರದ ಬೂದಾಳ್ ರಸ್ತೆಯ ನಿವಾಸಿ ಸುದೀಪ್‌ನನ್ನು ಕಳೆದ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವ ಸುದೀಪ್‌ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಸಿಪಿಐ ಕಿರಣ್ ಕುಮಾರ್, ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ರಾತ್ರಿ ವೇಳೆ ಗಲಾಟೆಯಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಕೊಲೆ ಕೇಸ್‌ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Continue Reading

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Tatkal Tickets
ದೇಶ13 mins ago

Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

Prajwal Revanna Case DK Shivakumar offers Rs 100 crore to get involved in pen drive case Devaraje Gowda allegations
ಕ್ರೈಂ16 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Delhi Airport
ದೇಶ18 mins ago

Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

water aerator
ಬೆಂಗಳೂರು24 mins ago

Water Aerator : ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ರೆ 10 ನಿಮಿಷದಲ್ಲಿ ಮನೆ ತಲುಪುತ್ತದೆ ವಾಟರ್ ಏರಿಯೇಟರ್​

Holenarasipura sexual assault case lot of confusion in the victim statement against HD Revanna Case
ಕ್ರೈಂ56 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

Bhatkal News
ಕರ್ನಾಟಕ59 mins ago

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Dubbing Premier League
ಕ್ರಿಕೆಟ್1 hour ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ1 hour ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

theft Case
ಕ್ರೈಂ2 hours ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌