Murder Case: ಆಸ್ತಿಗಾಗಿ ದಾಯಾದಿಗಳ ಕಲಹ; ತಲೆ ಮೇಲೆ ರುಬ್ಬುವ ಕಲ್ಲು ಎತ್ತಿಹಾಕಿ ಕೊಲೆ - Vistara News

ಬೆಳಗಾವಿ

Murder Case: ಆಸ್ತಿಗಾಗಿ ದಾಯಾದಿಗಳ ಕಲಹ; ತಲೆ ಮೇಲೆ ರುಬ್ಬುವ ಕಲ್ಲು ಎತ್ತಿಹಾಕಿ ಕೊಲೆ

Murder case : 20 ವರ್ಷಗಳ ಆಸ್ತಿ ಕಲಹಕ್ಕೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ದಾಯಾದಿಗಳಿಬ್ಬರು ಮದ್ಯದ ನಶೆಯಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

Murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಆಸ್ತಿ ವಿಚಾರಕ್ಕೆ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ದಬದಬಹಟ್ಟಿ ಗ್ರಾಮದ ಕೇಶವ ಬೊಸಲೆ (47) ಕೊಲೆಯಾದ ದುರ್ದೈವಿ. ಖಂಡೊಬಾ ಬೊಸಲೆ (27) ಕೊಲೆ ಆರೋಪಿಯಾಗಿದ್ದಾನೆ.

ಆರೋಪಿ ಹಾಗೂ ಕೊಲೆಯಾದವನು ದಬದಬಹಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಕಳೆದ 20 ವರ್ಷಗಳಿಂದ ಜಮೀನಿನ ಸಲುವಾಗಿ ಚಿಕ್ಕಪ್ಪ ಹಾಗೂ ಮಗನ ಜತೆ ಜಗಳ ನಡೆಯುತ್ತಿತ್ತು. ನಿನ್ನೆ ಗುರುವಾರ ಇಬ್ಬರು ದಾಯಾದಿಗಳು ಕೂಡಿ ಕೊಕಟನೂರ ಹೊರವಲಯದಲ್ಲಿ ಮದ್ಯ ಸೇವನೆ ಮಾಡಿದ್ದಾರೆ. ನಶೆ ಏರುತ್ತಿದ್ದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತಿರುಗಿ ಖಂಡೊಬಾ, ಕೇಶವನನ್ನು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಆರೋಪಿ ಖಂಡೊಬಾ ಬೊಸಲೆಯನ್ನು ಐಗಳಿ ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಈ ಕುರಿತು ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

ಬೆಂಗಳೂರು: ಬೆಂಗಳೂರಿನ ಎಸ್‌ಆರ್‌ ನಗರ ಠಾಣಾ ವ್ಯಾಪ್ತಿಯಲ್ಲಿ ಯುವಕನ ಶವ (Dead Body Found) ಪತ್ತೆಯಾಗಿದೆ. ಮಿಷನ್ ರೋಡ್‌ನ ಪಿ.ಸಿ.ಮೋಹನ್ ಆ್ಯಂಡ್‌ ಕೊ ಕಾಂಪ್ಲೆಕ್ಸ್‌ನ ಗ್ರೌಂಡ್ ಫ್ಲೋರ್‌ನಲ್ಲಿ ಶವ (Murder Case) ಪತ್ತೆಯಾಗಿದೆ. ಮೃತನನ್ನು ಕೆ.ಎಸ್. ಗಾರ್ಡನ್ ನಿವಾಸಿ ಸತ್ಯ (22) ಎಂದು ಗುರುತಿಸಲಾಗಿದೆ.

ಪ್ಲಂಬರ್ ಕೆಲಸ ಮಾಡಿಕೊಂಡಿದ್ದ ಸತ್ಯ ಗುರುವಾರ ರಾತ್ರಿ ಸ್ನೇಹಿತರ ಜತೆಗೆ ಮನೆಯಿಂದ ಹೊರಗಡೆ ಹೋಗಿದ್ದ. ಆದರೆ ಬೆಳಗಾಗುವುದರಲ್ಲಿ ಬೀದಿ ಹೆಣವಾಗಿದ್ದಾನೆ. ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದಾಗ ಮೃತ ಗುರುತು ಪತ್ತೆ ಮಾಡಿದ್ದಾರೆ. ಸತ್ಯನ ಕಿವಿಯಿಂದ ರಕ್ತ ಬಂದಿರುವುದು ಪತ್ತೆಯಾಗಿದೆ. ಮಗನ ಮೃತದೇಹ ಕಂಡು ಸತ್ಯ ತಾಯಿ ಮೂರ್ಚೆ ಹೋಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರೀತಿ ವಿಷ್ಯಕ್ಕೆ ಬಲಿ?

ಸತ್ಯ ಹುಡುಗಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ವಿಷಯ ತಿಳಿದ ಯುವತಿಯ ಮನೆಯವರು ಸತ್ಯನಾ ವಿರುದ್ಧ ಬಲವಂತವಾಗಿ ಯುವತಿ ಕಡೆಯಿಂದ ಪೊಲೀಸರಿಗೆ ದೂರು ಕೊಡಿಸಿದ್ದರು. ಈ ಸಂಬಂಧ ಸತ್ಯನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿಯೇ ಕೂರಿಸಿಕೊಂಡಿದ್ದರು. ಈ ಘಟನೆಯ ಬಳಿಕ ಸತ್ಯ ಸಾಕಷ್ಟು ನೊಂದಿದ್ದ. ಆದರೆ ಇತ್ತೀಚೆಗೆ ಮತ್ತೆ ಯುವತಿಯ ಜತೆ ಮಾತಾಡುತ್ತಿದ್ದ ಎನ್ನಲಾಗಿದೆ. ಈ ವಿಚಾರ ತಿಳಿದು ಯುವತಿಯ ಕಡೆಯವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇದು ಕೊಲೆಯೋ ಆಕಸ್ಮಿಕ ಸಾವೋ ಎಂಬುದನ್ನು ತಿಳಿಯಲು ಮುಂದಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿದ ಪ್ರೇಮಿ

ಸೋಮವಾರಪೇಟೆ: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ಕೊಲೆ ಮಾಡಿದ ಪಾಗಲ್‌ ಪ್ರೇಮಿಯನ್ನು ವಿರೂಪಾಕ್ಷ ಎಂದು ಗುರುತಿಸಲಾಗಿದೆ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಭೀಕರ ಘಟನೆಯು ಈ ಪ್ರದೇಶದ ಜನರನ್ನು ಬೆಚ್ಚಿ ಬೀಳಿಸಿದೆ.

ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಕೊಲೆ ಮಾಡಿದ್ದಾನೆ ಆರೋಪಿ ವಿರೂಪಾಕ್ಷ.

ಬಾಲಕಿಯನ್ನು ಆರೋಪಿ ವಿರೂಪಾಕ್ಷ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Karnataka Rain : ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಭಾನುವಾರ ಸುರಿದ ಎರಡು ಗಂಟೆಯ ಮಳೆಗೆ ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗಿದೆ. 133 ವರ್ಷದ ದಾಖಲೆಯನ್ನು ಬೆಂಗಳೂರು ಮಳೆ ರೆಕಾರ್ಡ್ ಬ್ರೇಕ್ ಮಾಡಿದೆ. ಜತೆಗೆ ಸೋಮವಾರವು ಹಲವೆಡೆ ಮಳೆಯು ಅಬ್ಬರಿಸಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Rain) ಜೂನ್‌ ಮೊದಲ ವಾರವೇ ಮಳೆಯಲ್ಲಿ ರೆಕಾರ್ಡ್‌ ಬ್ರೇಕ್‌ ಮಾಡಿದೆ. ಜೂ.2ರ ಭಾನುವಾರ ಬೆಂಗಳೂರಿನಲ್ಲಿ 111.2 mm ಮಳೆಯಾಗಿದೆ. ಈ ಮೂಲಕ 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರಿನಲ್ಲಿ 1891ರ ಜೂನ್ 16ರಂದು 101.6 mm ಮಳೆ ಆಗಿತ್ತು. ಆದರೆ ನಿನ್ನೆ ಭಾನುವಾರ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ (Karnataka Rain) ಮುರಿದಿದೆ ಎಂದು ವಿಸ್ತಾರ ನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಾಖಲೆಯ ಮಳೆ ಅಬ್ಬರದ ಡಿಟೈಲ್ಸ್‌

ವರ್ಷ- ಮಳೆ ಪ್ರಮಾಣ
1891ರ ಜೂನ್ 16ರಂದು 101.6 mm
2013ರ ಜೂನ್‌ 1ರಂದು 100mm
2009ರ ಜೂನ್ 11ರಂದು 89.6 mm
2024ರ ಜೂನ್‌ 2ರಂದು 111.2 mm

ಇದನ್ನೂ ಓದಿ: Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

ಚಿಕ್ಕಮಗಳೂರಲ್ಲಿ ಮಳೆಗೆ 50 ಎಕರೆ ಅಡಿಕೆ ತೋಟ ಜಲಾವೃತ

ಚಿಕ್ಕಮಗಳೂರು ಬಯಲುಸೀಮೆ ಭಾಗದಲ್ಲಿ ಸೋಮವಾರ (ಜೂ. 3) ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ 50 ಎಕರೆ ಅಡಿಕೆ ತೋಟ ಜಲಾವೃತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು, ಸಾದರಹಳ್ಳಿ ಗ್ರಾಮಗಳಲ್ಲಿ ಘಟನೆ ನಡೆದಿದೆ. ಗ್ರಾಮದ ಬಸವರಾಜು, ಲೋಕೇಶ್ ಸೇರಿದಂತೆ ಹಲವು ರೈತರ ತೋಟ ನೀರುಪಾಲಾಗಿದೆ. ಇನ್ನೂ ಚಿಕ್ಕಮಗಳೂರು, ಮುಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್ ಪುರದಲ್ಲಿ ನಿರಂತರ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ, ಕಿಗ್ಗಾ, ಬಸರಿ ಕಟ್ಟೆ ಭಾಗದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಾವಣಗೆರೆಯಲ್ಲಿ ಕೊಚ್ಚಿ ಹೋದ ಮಂಡಲೂರು ಸೇತುವೆ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಮಂಡಲೂರು ಸೇತುವೆ ಕೊಚ್ಚಿ ಹೋಗಿದೆ. ದಾವಣಗೆರೆಯ ಮಂಡಲೂರಿನಿಂದ ಕಾಟಿಹಳ್ಳಿ ತಾಂಡಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಕೊಚ್ಚಿ ಹೋದ ಕಾರಣದಿಂದ ಸಂಚಾರಕ್ಕೆ ಅಡಚಣೆ ಆಗಿತ್ತು. ಮಂಡಲೂರು ಗ್ರಾಮಕ್ಕೆ ಬರಲು ಹೋಗಲು ಆಗದೆ ಕಾಟಿಹಳ್ಳಿ ತಾಂಡದ ಜನರಿಗೆ ತೊಂದರೆ ಅನುಭವಿಸಿದರು. ಸೇತುವೆ ತುರ್ತು ಕಾಮಗಾರಿ ಆರಂಭಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಡಗಿಗೂ ಎಂಟ್ರಿ ಕೊಟ್ಟ ಮುಂಗಾರು ಮಳೆ

ಸೋಮವಾರ ಕೊಡಗು ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಬಿಸಿಲ ವಾತವರಣವಿತ್ತು. ಸೋಮವಾರ ಮಧ್ಯಾಹ್ನದ ನಂತರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮನ್ಸೂನ್ ಮಾದರಿಯ ವಾತಾವರಣ ಕಂಡು ಬಂತು. ಮಳೆಯಿಂದಾಗಿ ಕೊಡಗಿನ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿದೆ. ಇತ್ತ ದಿಢೀರ್‌ ಮಳೆಗೆ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ನಾಶ

ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಆರ್ಭಟಕ್ಕೆ ಮೊಳಕಾಲ್ಮುರು ತಾಲೂಕಿನಲ್ಲಿ ಅವ್ಯವಸ್ಥೆ ಆಗಿದೆ. ಪಕ್ಕುರ್ತಿ ಗ್ರಾಮದಲ್ಲಿ ಮಳೆಯಿಂದಾಗಿ ಶೇಂಗಾ, ಹತ್ತಿ, ಕಲ್ಲಂಗಡಿ, ಕನಕಾಂಬರ ಬೆಳೆ ನಾಶವಾಗಿದೆ. ಮಳೆ ರಭಸಕ್ಕೆ ನಾಲ್ಕು ಬೋರ್ವೆಲ್,ವಿದ್ಯುತ್ ಪರಿಕರ,ಪೈಪ್ ಲೈನ್ ಕೊಚ್ಚಿ ಹೋಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

Karnataka Rain : ಸಿಡಿಲು ಬಡಿದು ಆಕಳು ಬಲಿಯಾಗಿದ್ದರೆ, ರಾಜ್ಯದಲ್ಲಿ ಮಳೆ (Rain News) ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನೋಡಿದಷ್ಟು ದೂರ ಮಳೆ ನೀರಿನಿಂದ ರಸ್ತೆಗಳು ಜಲಾವೃತಗೊಮಡಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಮಾತ್ರವಲ್ಲದೇ ವಿವಿಧ ಜಿಲ್ಲೆಗಳಲ್ಲೂ ಮಳೆಯು (Karnataka Rain) ಅವಾಂತರವೇ ಸೃಷ್ಟಿಸಿದೆ. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮುಖ್ಯವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆಯಾಗಿದ್ದು, ಮನೆಗಳಿಗೆ (Rain News) ನೀರು ನುಗ್ಗಿದೆ. ಜತೆಗೆ ಜಮೀನುಗಳು ಜಲಾವೃತಗೊಂಡಿದೆ. ವಿಜಯಪುರದಲ್ಲಿ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಮೃತಪಟ್ಟಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿದೆ ಎಂದು (Karnataka weather Forecast) ಮಾಹಿತಿ ಇಲ್ಲಿದೆ.

Karnataka rain

ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು. ವರುಣನ ಅಬ್ಬರದಿಂದ ಬೈಕ್ ಸವಾರರು ಪರದಾಡಬೇಕಾಯಿತು.

Karnataka Rain

ರಾಯಚೂರಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಾತ್ರಿಯಿಂದ ಮುಂದುವರೆದ ಮಳೆ ಮುಂದುವರಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯದಿಂದಾಗಿ ಸಾರ್ವಜನಿಕರು ಪರದಾಡಿದರು. ಕಳೆದ 10 ಗಂಟೆಯಿಂದಲೂ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ.

karnataka Rain

ವಿಜಯನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬಾಳೆ, ಕಬ್ಬು, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ನೀರು ನುಗ್ಗಿದೆ. ಹೊಸಪೇಟೆಯ ಜಂಬುನಾಥನ ಹಳ್ಳಿ ಪ್ರದೇಶದ ರಾಯರಕೆರೆ ಭಾಗದಲ್ಲಿನ ರೈತರ ಬೆಳೆಗಳು ನೀರುಪಾಲಾಗಿದೆ.

ಬಾಗಲಕೋಟೆ ಜಿಲ್ಲೆ ಇಲಕಲ್ಲ ತಾಲ್ಲೂಕಿನ ಕರಡಿ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲಕಲ್ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಕರಡಿ ಗ್ರಾಮದ ಸಂಪರ್ಕ ರಸ್ತೆ ಹಳ್ಳದ ನೀರಿನಿಂದ ಜಲಾವೃತಗೊಂಡಿದೆ. ಕರಡಿ ರಸ್ತೆ ಮೇಲ್ಸೇತುವೆ ಕಾಮಗಾರಿಯಿಂದ ನೀರು ರಸ್ತೆಗೆ ನುಗ್ಗಿದೆ. ಕರಡಿ, ದಾಸಬಾಳ, ಪಾಲತಿ, ಕೊಣ್ಣೂರ, ಹುನಗುಂದ ಸಂಪರ್ಕ ಕಡಿತಗೊಂಡಿದೆ.

karnataka Rain

ತಡರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿಜಯಪುರ ನಗರದ ಜುಮನಾಳ, ಸಾರವಾಡ, ಹೊನಗನಹಳ್ಳಿ ಸೇರಿದಂತೆ ಭಾರಿ ಮಳೆಯಾಗಿದೆ. ವಿಜಯಪುರ ನಗರದ ಮೀನಾಕ್ಷಿ ವೃತ್ತ ಜಲಾವೃತಗೊಂಡಿದ್ದು, ನೀರು ತುಂಬಿದ ರಸ್ತೆಯಲ್ಲೇ ಸವಾರರು ವಾಹನ ಚಲಾಯಿಸಿದ್ದಾರೆ.

karnataka Rain

ದಾವಣಗೆರೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿತ್ತು. ದಾವಣಗೆರೆ ತಾಲೂಕಿನ ಅನಗೋಡು, ಮಾಯಕೊಂಡ, ಹುಣಸೇಕಟ್ಟೆ, ಹೆಬ್ಬಾಳು, ನರಗನಹಳ್ಳಿ ಹಾಗೂ ಹೊನ್ನಯಕನಹಳ್ಳಿ ಒಬಣ್ಣನಹಳ್ಳಿ ಭಾವಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭರ್ಜರಿ ಮಳೆಯಾಗಿದೆ. ಹೆಬ್ಬಾಳು ನರಗನಹಳ್ಳಿ, ಕೊಡಗನೂರು ಸೇರಿದಂತೆ ಇತರೆ ಕೆರೆಗಳಿಗೆ ನೀರು ಹರಿದು ಬಂದಿದೆ. ಮಳೆಯ ರಭಸಕ್ಕೆ ಹೊಲಗಳಿಗೆ ನೀರು ನುಗ್ಗಿದ್ದು, ಗುಲಾಬಿ ಗಿಡಗಳು ನೆಲಕಚ್ಚಿದೆ.

karnataka rain

ಈಶಾನ್ಯ ಪದವೀಧರ ಕ್ಷೇತ್ರದ ಮತದಾನಕ್ಕೂ ಮಳೆ ಎಫೆಕ್ಟ್‌ ತಟ್ಟಿದೆ. ರಾಯಚೂರಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಪವರ್ ಕಟ್ ಆಗಿದ್ದು, ಸಿಬ್ಬಂದಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮತದಾನ ನಡೆದಿದೆ. ಪವರ್ ಇಲ್ಲದೆ ಮೊಬೈಲ್ ‌ಟಾರ್ಚ್ ಬಳಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮತಗಟ್ಟೆ ನಂ.84ರಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮತದಾನ ಮಾಡಬೇಕಾಯಿತು.

Karnataka Rain

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ಹಿರೇಮಸಳಿ ಗ್ರಾಮದಲ್ಲಿ ಸಿಡಿಲು ಬಡಿದು ಆಕಳು ಮೃತಪಟ್ಟಿದೆ. ಶಿವಯೋಗಿ ಹೊಸಮನಿ ಎಂಬುವವರಿಗೆ ಸೇರಿದ ಆಕಳನ್ನು ಹೊಲದಲ್ಲಿ ಮರದ ಕೆಳಗೆ ಕಟ್ಟಲಾಗಿತ್ತು. ಈ ವೇಳೆ ಸಿಡಿಲು ಬಡಿದು ಆಕಳು ಮೃತಪಟ್ಟಿದೆ. ಇಂಡಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಕೃಪಾ ನಗರ ಹಾಗೂ ಹೊಸಳ್ಳಿ ಕ್ರಾಸ್ ಸಮೀಪದ 20ಕ್ಕೂ ಹೆಚ್ಚು ಗುಡಿಸಲು ಒಳಗೆ ನೀರು ನುಗ್ಗಿದೆ. ಅಲೆಮಾರಿ ಜನಾಂಗದವರು ವಾಸ ಮಾಡುವ ಗುಡಿಸಲು ನೀರುಪಾಲಾಗಿದ್ದು, ರಾತ್ರಿ ಪೂರ್ತಿ ಜಾಗರಣೆ ಮಾಡಿದ್ದಾರೆ. ಸರಕಾರ ವಾಸಕ್ಕೆ ಮನೆ ಸೌಲಭ್ಯ ಕಲ್ಪಿಸುವಂತೆ ಅಲೆಮಾರಿ ಜನಾಂಗದವರು ಒತ್ತಾಯಿಸಿದ್ದಾರೆ.

Karnataka Rain

ಕೊಪ್ಪಳದ ನಗರದ ಗಣೇಶ ನಗರದಲ್ಲಿ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಗಣೇಶ ನಗರ ಬಡಾವಣೆಯ ಹತ್ತಾರು ಮನೆಗಳ ಮುಂದೆ ಜಲಾವೃತಗೊಂಡಿದ್ದು, ಭಾಗ್ಯನಗರ ಪಟ್ಟಣ ಪಂಚಾಯತ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Karnataka Rain

ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ಕಿತ್ನೂರು ಸರ್ಕಾರಿ ಶಾಲೆ ಆವರಣವು ಕೆರೆಯಂತಾಗಿತ್ತು. ನಿನ್ನೆ ರಾತ್ರಿ ಸುರಿದ ಮಳೆಗೆ ಶಾಲಾ ಆವರಣದಲ್ಲಿ ಮಳೆ ನೀರು ತುಂಬಿತ್ತು.

Karnataka Rain

ಯಾದಗಿರಿಯ ಹೊಸಳ್ಳಿ ಕ್ರಾಸ್ ಸಮೀಪದಲ್ಲಿ 3 ಮನೆಗಳಿಗೆ ಮಳೆ ನೀರು ನುಗ್ಗಿದೆ. ಧವಸ ಧಾನ್ಯ ಹಾಗೂ ಅಗತ್ಯ ವಸ್ತುಗಳಿಗೆ ಹಾನಿಯಾಗಿದೆ. ಕೃಷ್ಣಾ ದೇಗುಲ ಜಲ ದಿಗ್ಬಂಧನವಾಗಿದೆ. ನಗರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

karnataka Rain

ತುಮಕೂರಿನ ತಿಪಟೂರಿನಲ್ಲಿ ಧಾರಕಾರವಾಗಿ ಸುರಿದ ಮಳೆಗೆ ಕುಡಿಯುವ ನೀರಿನ ಕೆರೆಗೆ ಕಲುಷಿತ ನೀರು ಸೇರ್ಪಡೆಯಾಗಿದೆ. ತಿಪಟೂರು ಪಟ್ಟಣದ ಕಲುಷಿತ ನೀರು ಈಚನೂರು ಕೆರೆಗೆ ಸೇರ್ಪಡೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಲು ಸ್ಥಳೀಯರು ಮನವಿ ಮಾಡಿದ್ದಾರೆ.

Karnataka Rain

ಬಾಗಲಕೋಟೆಯ ಬಾದಾಮಿ ಭಾಗದಲ್ಲಿ ರಾತ್ರಿ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರ್ಮಾಣ ಹಂತದ ಕಾಲುವೆಯಿಂದ ನೀರು ನುಗ್ಗಿದ್ದು, 4 ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು, ಗೋವಿನಜೋಳ ನಾಶವಾಗಿದೆ. ಹನುಮಂತ ಚೂರಿ ಎಂಬ ರೈತರ ಬೆಳೆ ಹಾನಿಯಾಗಿದೆ.

karnataka Rain

ಯಾದಗಿರಿಯಲ್ಲಿ ಮಳೆ ಆರ್ಭಟಕ್ಕೆ ಕಿರಾಣಿ ಅಂಗಡಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ನರಸಿಂಹ ಅವರಿಗೆ ಸೇರಿದ ಕಿರಾಣಿ ಅಂಗಡಿ ಹಾಳಾಗಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಿಡಿಕಾರಿದ್ದಾರೆ.

karnataka Rain

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ‌ 150ಎ ರಲ್ಲಿನ ಅಂಡರ್ ಪಾಸ್ ಜಲಾವೃತಗೊಂಡಿತ್ತು. ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅಂಡರ್ ಪಾಸ್‌ನಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಹೈರಾಣಾದರು. ನೀರಿನಲ್ಲಿ ವಾಹನ ತಳ್ಳಿಕೊಂಡು ಹೋದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Belagavi Lok Sabha Constituency: ಶೆಟ್ಟರ್‌ ವರ್ಸಸ್‌ ಹೆಬ್ಬಾಳ್ಕರ್‌; ಯಾರಿಗೆ ಬೆಳಗಾವಿ ಕುಂದಾ?

Belagavi Lok Sabha Constituency: ಯುವ ನಾಯಕತ್ವ, ಸುರೇಶ್‌ ಅಂಗಡಿ ಕುಟುಂಬದ ಪ್ರಾಬಲ್ಯ ಇಲ್ಲದಿರುವುದು, ಗ್ಯಾರಂಟಿ ಯೋಜನೆಗಳು ಸೇರಿ ಹಲವು ಅಂಶಗಳು ಮೃಣಾಲ್‌ ಹೆಬ್ಬಾಳ್ಕರ್‌ ಅವರಿಗೆ ಸಕಾರಾತ್ಮಕವಾಗಿವೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸುರೇಶ್‌ ಅಂಗಡಿಯವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ನಂತರ ಮಂಗಲಾ ಅಂಗಡಿಯವರು ಕೂಡ ಗೆದ್ದಿದ್ದು, ಆ ಮೂಲಕ ಬಿಜೆಪಿ ಬೇರುಗಳನ್ನು ಗಟ್ಟಿಗೊಳಿಸಿದ್ದು ಮೃಣಾಲ್‌ಗೆ ಕುತ್ತಾಗುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

Belagavi Lok Sabha Constituency
Koo

ಬೆಳಗಾವಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬೆಳಗಾವಿ ಲೋಕಸಭೆ ಚುನಾವಣೆ ಕ್ಷೇತ್ರದ (Belagavi Lok Sabha Constituency) ಚುನಾವಣೆಯು ಈ ಬಾರಿ ಭಾರಿ ಕುತೂಹಲ ಕೆರಳಿಸಿದೆ. ಬಿಜೆಪಿ ಭದ್ರಕೋಟೆಯೇ ಆಗಿರುವ ಬೆಳಗಾವಿಯಲ್ಲಿ ಈ ಬಾರಿ ಬಿಜೆಪಿಯಿಂದ ಜಗದೀಶ್‌ ಶೆಟ್ಟರ್‌ (Jagadish Shettar) ಕಣಕ್ಕಿಳಿದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ (Mrinal Hebbalkar) ಸ್ಪರ್ಧಿಸಿದ್ದಾರೆ. ಹಾಗಾಗಿ, ಬೆಳಗಾವಿ ಲೋಕಸಭೆ ಕ್ಷೇತ್ರವು ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದೆ.

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ತೆರಳಿ, ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ವಾಪಸಾದ ಜಗದೀಶ್‌ ಶೆಟ್ಟರ್‌ ಅವರು ಸ್ಥಳೀಯ ನಾಯಕರ ವಿಶ್ವಾಸ ಗಳಿಸುವುದು, ಕಾರ್ಯಕರ್ತರಿಗೆ ಬಲ ತುಂಬುದು, ಮೋದಿ ಅವರ ಅಲೆಯನ್ನು ಸದುಪಯೋಗ ಮಾಡಿಕೊಳ್ಳುವುದು ಸೇರಿ ಹಲವು ತಂತ್ರಗಳನ್ನು ಹೂಡಿದ್ದರು. ಇನ್ನು ಮಂಗಲಾ ಸುರೇಶ್‌ ಅಂಗಡಿಯವರು ಜಗದೀಶ್‌ ಶೆಟ್ಟರ್‌ ಅವರಿಗೆ ಸಂಬಂಧಿಯಾದ ಕಾರಣ ಅಷ್ಟೇನೂ ಹೊರಗಿನವರು ಎಂಬ ಭಾವನೆ ಇಲ್ಲ. ಇನ್ನು, ಜಗದೀಶ್‌ ಶೆಟ್ಟರ್‌ ಅವರು ಎರಡು ಬಾರಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಹಾಗಾಗಿ, ಬೆಳಗಾವಿಯಲ್ಲಿ ಜಗದೀಶ್‌ ಶೆಟ್ಟರ್‌ ಪರ ಒಲವಿದೆ ಎಂದೇ ಹೇಳಲಾಗುತ್ತಿದೆ.

Jagadish Shettar

ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮಗನನ್ನು ಕಣಕ್ಕಿಳಿಸಿ, ಮಗನಿಗಿಂತ ಹೆಚ್ಚಾಗಿ ಅವರೇ ಪ್ರಚಾರ ಕೈಗೊಂಡಿದ್ದಾರೆ. ಯುವ ನಾಯಕತ್ವ, ಸುರೇಶ್‌ ಅಂಗಡಿ ಕುಟುಂಬದ ಪ್ರಾಬಲ್ಯ ಇಲ್ಲದಿರುವುದು, ಗ್ಯಾರಂಟಿ ಯೋಜನೆಗಳು ಸೇರಿ ಹಲವು ಅಂಶಗಳು ಮೃಣಾಲ್‌ ಹೆಬ್ಬಾಳ್ಕರ್‌ ಅವರಿಗೆ ಸಕಾರಾತ್ಮಕವಾಗಿವೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸುರೇಶ್‌ ಅಂಗಡಿಯವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ನಂತರ ಮಂಗಲಾ ಅಂಗಡಿಯವರು ಕೂಡ ಗೆದ್ದಿದ್ದು, ಆ ಮೂಲಕ ಬಿಜೆಪಿ ಬೇರುಗಳನ್ನು ಗಟ್ಟಿಗೊಳಿಸಿದ್ದು ಮೃಣಾಲ್‌ಗೆ ಕುತ್ತಾಗುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹಿಂದಿನ ಚುನಾವಣೆ ಫಲಿತಾಂಶ ಏನಾಗಿತ್ತು?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸುರೇಶ್‌ ಅಂಗಡಿ ಅವರು ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಸಾರ್ವತ್ರಿಕ ಚುನಾವಣೆಯಲ್ಲಿಯೂ ಸುರೇಶ್ ಅಂಗಡಿ ಅವರು ಕಾಂಗ್ರೆಸ್‌ನ ವಿರೂಪಾಕ್ಷಿ ಸಾಧುಣ್ಣವರ್‌ ವಿರುದ್ಧ ಗೆಲುವು ಸಾಧಿಸುವ ಜತೆಗೆ ಕೇಂದ್ರದಲ್ಲಿ ಸಚಿವರೂ ಆಗಿದ್ದರು. ಆದರೆ, ಸುರೇಶ್‌ ಅಂಗಡಿಯವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ 2021ರಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಿತು. ಆಗ, ಸುರೇಶ್‌ ಅಂಗಡಿ ಅವರ ಪತ್ನಿ ಮಂಗಲಾ ಸುರೇಶ್‌ ಅಂಗಡಿ ಅವರು ಸತೀಶ್‌ ಜಾರಕಿಹೊಳಿ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Continue Reading

ಮಳೆ

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು (Bengaluru rains) ಸೇರಿದಂತೆ ದಕ್ಷಿಣ ಕರ್ನಾಟಕಕ್ಕೆ ಅಧಿಕೃತವಾಗಿ ಮುಂಗಾರು (monsoon rain) ಆವರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಸೋಮವಾರದಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ (Bengaluru rains) ಶನಿವಾರ- ಭಾನುವಾರ ಅಬ್ಬರಿಸಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದು ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

karnataka Weather Forecast

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಇದರ ಪ್ರಭಾವದಿಂದಾಗಿ ಜೂನ್‌ 7ರ ವರೆಗೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಉಳಿದಂತೆ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲೂ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗುಡುಗು, ಮಿಂಚು ಸಂಭವವಿದೆ. ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

ಈ ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಗಾಳಿ ವೇಗವು ಗಂಟೆಗೆ 30-40ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Stock Market
ವಾಣಿಜ್ಯ8 mins ago

Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Dharwad Lok Sabha Constituency
ಧಾರವಾಡ16 mins ago

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Anant Ambani Radhika Merchant Pre Wedding
ಫ್ಯಾಷನ್30 mins ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ35 mins ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್47 mins ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ57 mins ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Maldives
ವಿದೇಶ1 hour ago

Maldives: ಇಸ್ರೇಲಿಗರ ಪ್ರವೇಶವನ್ನು ನಿಷೇಧಿಸಿದ ಮಾಲ್ಡೀವ್ಸ್‌; ಭಾರತದ ಬೀಚ್‌ಗೆ ತೆರಳಿ ಎಂದು ತಿರುಗೇಟು ನೀಡಿದ ಇಸ್ರೇಲ್‌

Cow including lineman dies of electric shock
ಉಡುಪಿ1 hour ago

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Rave Party
ಕರ್ನಾಟಕ1 hour ago

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

Saree Fashion
ಫ್ಯಾಷನ್2 hours ago

Saree Fashion: ರಫಲ್‌ ಡಿಸೈನ್‌ನಲ್ಲಿ ಬಂದಿದೆ ಜಾರ್ಜೆಟ್ ಲೆಹೆಂಗಾ ಸೀರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌