ಬೆಳಗಾವಿ ಅಧಿವೇಶನ | ಹೊಸ ಆರ್‌ಟಿಒ ಕಚೇರಿಗಳ ಸ್ಥಾಪನೆ ಇಲ್ಲ ಎಂದ ಸಚಿವ ಬಿ. ಶ್ರೀರಾಮುಲು - Vistara News

ಬೆಳಗಾವಿ

ಬೆಳಗಾವಿ ಅಧಿವೇಶನ | ಹೊಸ ಆರ್‌ಟಿಒ ಕಚೇರಿಗಳ ಸ್ಥಾಪನೆ ಇಲ್ಲ ಎಂದ ಸಚಿವ ಬಿ. ಶ್ರೀರಾಮುಲು

ಸಾರಿಗೆ ಇಲಾಖೆಯಲ್ಲಿ ಈಗಾಗಲೆ ಅನೇಕ ಸೇವೆಗಳನ್ನು ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿದೆ. ಹಾಗಾಗಿ ಹೊಸ ಆರ್‌ಟಿಒ ಕಚೇರಿಗಳನ್ನು ತೆರೆಯುವ ಪ್ರಸ್ತಾಪ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಉತ್ತರ ನೀಡಿದ್ದಾರೆ.

VISTARANEWS.COM


on

no-new-rto-offices-says-transport-minister
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನಸಭೆ: ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬಹುತೇಕ ಕಡೆಗಳಲ್ಲಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ. ಸುಮಾರು 30 ಸೇವೆಗಳನ್ನು ಆನ್‌ಲೈನ್ ಮೂಲಕವೇ ಒದಗಿಸಲಾಗುತ್ತಿದೆ. ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕ ರಹಿತವಾಗಿ ಸೇವೆಗಳನ್ನು ಪಡೆಯುವ ಸೌಲಭ್ಯಗಳಿರುವುದರಿಂದ ರಾಜ್ಯದಲ್ಲಿ ಹೊಸದಾಗಿ ಪ್ರಾದೇಶಿಕ ಸಾರಿಗೆ (ಆರ್‌ಟಿ‌ಒ)ಕಚೇರಿಗಳನ್ನು ಸ್ಥಾಪಿಸುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು‌.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬೈಂದೂರು ಶಾಸಕ ಸುಕುಮಾರಶೆಟ್ಟಿ ಪ್ರಶ್ನೆಗೆ ಉತ್ತರಿಸುತ್ತ ಈ ಮಾಹಿತಿ ನೀಡಿದರು.

ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ತಾಲೂಕುಗಳು ಮತ್ತು ಸುತ್ತಮುತ್ತಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಕುಂದಾಪುರದಲ್ಲಿ ಪ್ರತಿ ಮಂಗಳವಾರ ಸಾರಿಗೆ ಶಿಬಿರ ನಡೆಯುತ್ತಿದೆ. ರಾಜ್ಯದ ಇತರೆಡೆಗಳಲ್ಲಿಯೂ ಅವಶ್ಯಕತೆಗೆ ಅನುಗುಣವಾಗಿ ನಿಯಮಿತವಾಗಿ ಸಾರಿಗೆ ಶಿಬಿರಗಳು ನಡೆಯುತ್ತಿವೆ.

ಕುಂದಾಪುರದಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಸ್ಥಾಪಿಸಬೇಕೆಂಬ ಪ್ರಸ್ತಾವ ಸರ್ಕಾರದ ಗಮನಕ್ಕೆ ಬಂದಿದ್ದು, ಅಲ್ಲಿ ಕಚೇರಿ ಸ್ಥಾಪನೆಗೆ ಮಾನದಂಡಗಳು ಪೂರೈಕೆಯಾಗಿಲ್ಲ ಎಂಬ ಎಂದು ಉಡುಪಿ ಆರ್‌ಟಿಒ ವರದಿ ಸಲ್ಲಿಸಿದ್ದಾರೆ.

ಹೊಸ ಆರ್‌ಟಿಒ ಅಥವಾ ಎಆರ್‌ಟಿಒ ಕಚೇರಿಗಳನ್ನು ತೆರೆಯಲು ನಿಗದಿಪಡಿಸಿರುವ ಮಾನದಂಡಗಳನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಅಪರ ಸಾರಿಗೆ ಆಯುಕ್ತರು ಹಾಗೂ ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯು, ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ, ಸುಮಾರು 30 ಸೇವೆಗಳನ್ನು ಆನ್‌ಲೈನ್ ಸೇವೆಗಳನ್ನಾಗಿ ಮಾರ್ಪಡಿಸಲಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕರಹಿತವಾಗಿ ಸೇವೆಗಳನ್ನು ಪಡೆಯಲು ಅವಕಾಶಗಳಿರುವದರಿಂದ ಹೊಸ ಆರ್‌ಟಿಒ ಕಚೇರಿಗಳ ಸ್ಥಾಪನೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂಬ ಅಭಿಪ್ರಾಯ ನೀಡಿದೆ.

ಸಾರ್ವಜನಿಕರಿಗೆ ವಾಹನ ಅನುಜ್ಞಾ ಪತ್ರ, ವಾಹನ ನೋಂದಣಿಯ ಸ್ಮಾರ್ಟ್ ಕಾರ್ಡ್‌ಗಳನ್ನು ಅವರ ಮನೆಯ ವಿಳಾಸಗಳಿಗೆ ಅಂಚೆ ಮೂಲಕ ತಲುಪಿಸಲಾಗುತ್ತಿದೆ. ವಾಹನ-4, ಸಾರಥಿ-4 ಮತ್ತು ಇ-ಪೇಮೆಂಟ್ ಆಫ್ ಟ್ಯಾಕ್ಸ್‌ನಂತಹ ಆನ್‌ಲೈನ್ ಸೇವೆಗಳನ್ನು ರಾಜ್ಯದ ಎಲ್ಲಾ ಕಚೇರಿಗಳಲ್ಲಿ ಜಾರಿಗೊಳಿಸಲಾಗಿದೆ.

ಕರ್ನಾಟಕ -ಒನ್‌, ಬೆಂಗಳೂರು -ಒನ್‌ ಮತ್ತು ಮೊಬೈಲ್-ಒನ್‌ ಆ್ಯಪ್‌ಗಳ ಮೂಲಕವೂ ವಾಹನಗಳ ಮಾಹಿತಿ, ವಿವರಗಳನ್ನು ಪಡೆಯಬಹುದಾಗಿದೆ. ಇ-ಆಡಳಿತ ಇಲಾಖೆಯ ಗ್ರಾಮ ಒನ್ ಮತ್ತು ಜನಸೇವಕ ಯೋಜನೆಗಳಡಿಯೂ ಸಾರಿಗೆ ಇಲಾಖೆಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಸಾರಿಗೆ ಇಲಾಖೆಯಲ್ಲಿ ಯಾವುದೇ ಹೊಸ ಕಚೇರಿಗಳನ್ನು ಪ್ರಾರಂಭಿಸುವ ಅವಶ್ಯಕತೆ ಉದ್ಭವಿಸುವುದಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ | Transport Workers Protest | ಸಚಿವರ ಭರವಸೆಗೆ ಸಾರಿಗೆ ನೌಕರರ ಡೋಂಟ್ ಕೇರ್; ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Baby Death : ಮೂರು ವರ್ಷದ ಮಗುವೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಮಗುವು ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಗಿದೆ ಎಂದು ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

murder case in Belgavi
ರಾಯಣ್ಣ ಮತ್ತು ಆತನ ಎರಡನೇ ಪತ್ನಿ ಸಪ್ನಾ. ಮೊದಲ ಪತ್ನಿ ಮಗು ಸಮೃದ್ದಿ ಮೃತ ದುರ್ದೈವಿ
Koo

ಬೆಳಗಾವಿ: ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಕಂದಮ್ಮ (Baby Death) ಬಲಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಲತಾಯಿಯೇ 3 ವರ್ಷದ ಮಗುವನ್ನು ಕೊಂದಿದ್ದಾಳೆ (Murder case) ಎನ್ನಲಾಗಿದೆ. ಸಮೃದ್ಧಿ(3) ಮೃತ ದುರ್ದೈವಿ. ಮಲತಾಯಿ ಸಪ್ನಾ ರಾಯಣ್ಣ ನಾವಿ ಎಂಬಾಕೆ ಕೊಲೆ ಆರೋಪ ಎದುರಿಸುತ್ತಿರುವ ಮಲತಾಯಿ ಆಗಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ ಹೆಚ್ ಗ್ರಾಮದಲ್ಲಿ ಘಟನೆ ನಡೆದಿದೆ.

ಮಗುವಿನ ಮೇಲೆ ಕ್ರೌರ್ಯ ಮೆರೆದು ಕೊಲೆ ಮಾಡಿದ್ದಾಗಿ ಸಮೃದ್ಧಿಯ ಅಜ್ಜಿ ಹಾಗೂ ಚಿಕ್ಕಪ್ಪ ಆರೋಪಿಸಿದ್ದಾರೆ. ಸಮೃದ್ಧಿ ತಂದೆ ರಾಯಣ್ಣ ಸಿಆರ್‌ಪಿಎಫ್ ಯೋಧನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮೊದಲ ಪತ್ನಿ ನಿಧನದ ನಂತರ ಎರಡನೇ ಮದುವೆಯಾಗಿದ್ದರು. ಇದೀಗ ರಾಯಣ್ಣನ 2ನೇ ಪತ್ನಿ ಸಪ್ನಾ ಎಂಬಾಕೆ ಸಮೃದ್ದಿಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Murder case in Belgavi
ರಾಯಣ್ಣ ಹಾಗೂ ಮೊದಲ ಪತ್ನಿ ಭಾರತಿ ನಾವಿ, ಆಕೆಯ ಮಗಳು ಸಮೃದ್ದಿ

ಮೊದಲ ಪತ್ನಿ ಕೊಲೆ ಆರೋಪ ಎದುರಿಸುತ್ತಿರುವ ಕುಟುಂಬ

ಈಗಾಗಲೇ ಮೊದಲ ಪತ್ನಿ ಭಾರತಿ ನಾವಿ ಕೊಲೆ ಆರೋಪವನ್ನು ರಾಯಣ್ಣ ಹಾಗೂ ಆತನ ಕುಟುಂಬಸ್ಥರು ಎದುರಿಸುತ್ತಿದ್ದಾರೆ. ಪತಿ ರಾಯಣ್ಣ ಹಾಗೂ ತಾಯಿ ಶೋಭಾ ಹಾಗೂ ತಂಗಿ ರೂಪಾ ವಿರುದ್ಧ 2021ರಲ್ಲಿ ಮೃತ ಭಾರತಿ ನಾವಿ ಕುಟುಂಬಸ್ಥರು ನಾಗಪುರದ ಕಾರದಾ ಠಾಣೆಯಲ್ಲಿ ದಾಖಲಿಸಿದ್ದಾರೆ. ಆ ಪ್ರಕರಣದಲ್ಲೂ ರಾಯಣ್ಣ ನಾವಿ ಕುಟುಂಬ ಆರೋಪಿಯಾಗಿದ್ದರು. ಅಂದು ತಾಯಿ ಕೊಂದರು, ಇಂದು ಆಕೆಯ ಮಗಳು ಸಮೃದ್ಧಿಯನ್ನೂ ಕೊಂದಿದ್ದಾರೆ ಎಂದು ಮೊದಲ ಪತ್ನಿ ಕುಟುಂಬಸ್ಥರು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಗುವಿಗೆ ಅನಾರೋಗ್ಯ ಸಮಸ್ಯೆ

ಬೆಳಗಾವಿಯಲ್ಲಿ ಮೂರು ವರ್ಷದ ‌ಮಗು ಕೊಲೆ ಆರೋಪ‌ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಪ್ನ, ಮದುವೆಯಾದಾಗಿನಿಂದಲೂ ಮಗುವು ನನ್ನ ಬಳಿಯೇ ಇದೆ. ಆಗಿನಿಂದಲೂ ಮಗುವಿಗೆ ಅನಾರೋಗ್ಯ ಸಮಸ್ಯೆ ಇತ್ತು, ನಾನು ಮಗುವನ್ನು ಜೋಪಾನ ಮಾಡಿಕೊಂಡು ಬಂದಿದ್ದೇನೆ. ಜತೆಗೆ ಅಗತ್ಯ ಚಿಕಿತ್ಸೆಯನ್ನು ಕೊಡಿಸಿದ್ದೆ.

ಮಗುವಿನ ಅಜ್ಜ ಅಜ್ಜಿ ಮಾಡುತ್ತಿರುವ ಆರೋಪ ಸಂಪೂರ್ಣ ಸುಳ್ಳು. ನಾನು ರಾಯಣ್ಣರಿಗೆ ಎರಡನೇ ಪತ್ನಿ ಎನ್ನುವ ಕಾರಣಕ್ಕೆ ನನ್ನ ಮೇಲೆ ಆರೋಪ‌ ಮಾಡುತ್ತಿದ್ದಾರೆ. ಸಮೃದ್ದಿಯನ್ನು ನನ್ನ ಮಗು ಎಂಬಂತೆ ನೋಡಿಕೊಂಡಿದ್ದಾನೆ ಎಂದಿದ್ದಾರೆ.

ಇದನ್ನೂ ಓದಿ: Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

ಕೊಯಂಬತ್ತೂರ್‌: ಕಳೆದ ತಿಂಗಳು ಅಪಾರ್ಟ್‌ಮೆಂಟ್‌(Apartment)ನ ಕಿಟಕಿಯಿಂದ ವಿಂಡೋ ಪೋರ್ಚ್‌(Window Porch) ಮೇಲೆ ಬಿದ್ದು, ಪವಾಡ ಸದೃಶ್ಯವಾಗಿ ಬದುಕಿ ಬಂದ ಏಳು ತಿಂಗಳ ಮಗುವಿನ(Toddler) ತಾಯಿ ಇದೀಗ ಆತಹತ್ಯೆಗೆ ಶರಣಾಗಿದ್ದಾಳೆ(Viral News). ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ಮಗು ಅದೃಷ್ಟವಶಾತ್‌ ಅಲ್ಲೇ ನೇತಾಡಿಕೊಂಡು ಸ್ಥಳೀಯರ ಸಹಾಯದಿಂದ ಬದುಕುಳಿದಿತ್ತು.

ಈ ಘಟನೆ ಬಳಿಕ ಮಗುವಿನ ತಾಯಿ ರಮ್ಯಾ ತೀರ ಖಿನ್ನತೆಗೊಳಗಾಗಿದ್ದರು. ತನ್ನ ಅಜಾಗುರೂಕತೆಯಿಂದ ದುರಂತ ಸಂಭವಿಸಿದೆ ಎಂಬುದನ್ನು ಪದೇ ಪದೇ ಹೇಳುತ್ತಲೇ ಇದ್ದರು. ಇನ್ನು ನೆರೆಹೊರೆಯವರು, ನೆಟ್ಟಿಗರು ಈ ಘಟನೆ ಬಗ್ಗೆ ತಿಳಿದವರು ಎಲ್ಲರೂ ರಮ್ಯಾಳ ಅಜಾಗುರೂಕತೆಯಿಂದಲೇ ಈ ಘಟನೆ ನಡೆದಿದೆ ಎಂದು ದೂರುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ರಮ್ಯಾ ಖಿನ್ನತೆಗೊಳಗಾಗಿದ್ದರು. ಇದನ್ನು ಗಮನಿಸಿದ ಆಕೆಯ ಪತಿ ವೆಂಕಟೇಶ್‌ ಕೊಯಂಬತ್ತೂರ್‌ನಲ್ಲಿರುವ ಆಕೆಯ ತವರು ಮನೆಗೆ ಕರೆದುಕೊಂಡು ಬಂದಿದ್ದರು.

ಭಾನುವಾರ ರಮ್ಯಾಳನ್ನು ಒಬ್ಬಳೇ ಮನೆಯಲ್ಲಿ ಬಿಟ್ಟು ಎಲ್ಲರೂ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ವಾಪಸ್‌ ಮನೆಗೆ ಬಂದಾಗ ರಮ್ಯಾ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡು ಮನೆಯವರು ಗಾಬರಿಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ. ಇನ್ನು ಆಕೆಯ ಸಾವಿಗೆ ಕಾರಣ ಏನೆಂಬುದು ಸರಿಯಾಗಿ ತಿಳಿದುಬಂದಿಲ್ಲ. ಆಕೆ ಏನಾದರೂ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಏ.28ರಂದು ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಮಗುವಿನ ರಕ್ಷಣೆಗೆ ಧಾವಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಂಡೋ ಪೋರ್ಚ್‌ ಮೇಲೆ ಬಿದ್ದಿ ಮಗುವಿನ ರಕ್ಷಣೆಗೆ ದೌಡಾಯಿಸಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಂದು ಕಿಟಕಿಯಿಂದ ಹೊರಬಂದು ಮಗುವನ್ನು ರಕ್ಷಿಸಿಲು ಹರಸಾಹನ ಪಟ್ಟರು. ನಾಲ್ಕೈದು ಜನ ಕಿಟಕಿಯ ಹೊರ ಭಾಗದಲ್ಲಿರುವ ಸಣ್ಣ ಜಾಗದಲ್ಲಿ ನಿಂತು ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ರಕ್ಷಿಸಿದ್ದಾರೆ. ಇನ್ನು ಕೆಳಗೆ ಅನೇಕ ಜನ ದೊಡ್ಡ ಬಟ್ಟೆಯೊಂದು ಹಿಡಿದು ಮಗುವಿನ ರಕ್ಷಣೆಗೆ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಶಂಸೆ ವ್ಯಕ್ತಪಡಿಸಿರುವ ನೆಟ್ಟಿಗರು, ಅಚಾನಕ್ಕಾಗಿ ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದ್ದ 7 ತಿಂಗಳಿನ ಮಗುವನ್ನು ಬಹಳ ಜಾಣ್ಮೆಯಿಂದ ರಕ್ಷಿಸಿದ್ದಾರೆ. ಅವರ ಕಾರ್ಯಕ್ಕೆ ಸಲಾಂ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ4 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ4 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20244 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ4 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ5 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ5 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ5 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ6 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ6 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ6 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ14 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌