Rain news: ಕೃಷ್ಣೆಯಲ್ಲಿ ಹೆಚ್ಚಿದ ಪ್ರವಾಹ, ಸೇತುವೆಗಳು ಮುಳುಗಡೆ, ಮೈದುಂಬಿದ ಗೋಕಾಕ ಫಾಲ್ಸ್‌ Vistara News
Connect with us

ಪ್ರಮುಖ ಸುದ್ದಿ

Rain news: ಕೃಷ್ಣೆಯಲ್ಲಿ ಹೆಚ್ಚಿದ ಪ್ರವಾಹ, ಸೇತುವೆಗಳು ಮುಳುಗಡೆ, ಮೈದುಂಬಿದ ಗೋಕಾಕ ಫಾಲ್ಸ್‌

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಗೋಕಾಕ್‌ ಜಲಪಾತ ಮೈತುಂಬಿಕೊಂಡು ಧುಮುಕುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

VISTARANEWS.COM


on

krishna river
Koo

ಬೆಳಗಾವಿ/ಜಮಖಂಡಿ/ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೆಲವು ಸೇತುವೆಗಳು ಮುಳುಗಿವೆ. ಗೋಕಾಕ ಫಾಲ್ಸ್‌ ಮೈದುಂಬಿಕೊಂಡಿದ್ದು, ಪ್ರವಾಸಿಗರು ಹರ್ಷಿತರಾಗಿದ್ದಾರೆ.

ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಮತ್ತೆರಡು ಕೆಳ ಹಂತದ ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಗೆ ಅಡ್ಡಲಾಗಿರುವ ಜತ್ರಾಟ- ಭೀವಶಿ‌ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ- ಬಾವನಸೌದತ್ತಿ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಿವೆ. ಬ್ರಿಡ್ಜ್ ಮೇಲೆ ಓಡಾಡದಂತೆ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿದ್ದಾರೆ.

ಇದಕ್ಕೂ ಮುನ್ನ ನಾಲ್ಕು ಕೆಳ ಹಂತದ ಸೇತುವೆ ಮುಳುಗಿವೆ. ಕಲ್ಲೋಳ- ಯಡೂರ, ಮಲಿಕವಾಡ- ದತ್ತವಾಡ, ಕಾರದಗಾ- ಭೋಜ, ಭೋಜವಾಡಿ- ಕೂನ್ನುರ ಗ್ರಾಮದ ಕೆಳ ಹಂತದ ನಾಲ್ಕು ಸೇತುವೆಗಳು ಮುಳುಗಿದ್ದವು. ಕೃಷ್ಣಾ, ದೂದ್‌ಗಂಗಾ, ವೇದಗಂಗಾ ನದಿಯಲ್ಲಿ ಹೆಚ್ಚಿನ ನೀರು ಬಂದಿದೆ. ತಾಲೂಕಿನಲ್ಲಿ ಪ್ರವಾಹಕ್ಕೆ ಸಿಲುಕಬಹುದಾದ ತುಬಚಿ, ಶೂರ್ಪಾಲಿ ಗ್ರಾಮಗಳಿಗೆ ತಹಶೀಲ್ದಾರ ಸದಾಶಿವ ಅವರು ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಸ್ಥಳಾಂತರಕ್ಕೆ ಸಿದ್ದತೆ ಮಾಡಿಕೊಳ್ಳಲು ಜನರಿಗೆ ಸಲಹೆ ನೀಡಿದ್ದಾರೆ.

ಹಿಪ್ಪರಗಿ ಬ್ಯಾರೇಜ್‌ನಿಂದ 73 ಸಾವಿರ ಕ್ಯೂಸೆಕ್ ನೀರು ಹರಿದು ಬರ್ತಿದೆ. ಸದ್ಯಕ್ಕೆ ಅಪಾಯ ಇಲ್ಲ. ಆದರೆ ಎರಡು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬಂದಲ್ಲಿ ಹತ್ತಾರು ಗ್ರಾಮಗಳು ಪ್ರವಾಹಕ್ಕೆ ಸಿಲುಕಲಿವೆ. ಹೀಗಾಗಿ ಸುರಕ್ಷಿತ ಸ್ಥಳಕ್ಕೆ ತೆರಳಲು ಸನ್ನದ್ದರಾಗಬೇಕು ಎಂದಿದ್ದಾರೆ. ಪ್ರತಿ ವರ್ಷ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದಾಗ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನ ಕೃಷ್ಣಾ ತೀರದ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತವೆ.

ಮೈದುಂಬಿದ ಗೋಕಾಕ ಜಲಪಾತ

ಗೋಕಾಕ ಜಲಪಾತ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ವರುಣನ ಅಬ್ಬರ ಮುಂದುವರರಿದಿದ್ದು, ಬೆಳಗಾವಿಯಲ್ಲೂ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಗೋಕಾಕ್ ಜಲಪಾತ ಮೈದುಂಬಿಕೊಂಡಿದ್ದು, ನಯಾಗರ ಫಾಲ್ಸ್‌ ಅನ್ನು ಹೋಲುತ್ತಿದೆ. ಜಲಪಾತ ವೀಕ್ಷಿಸಲು ಗೋಕಾಕ ಫಾಲ್ಸಿಗೆ ಪ್ರವಾಸಿಗರ ದಂಡು ಬರುತ್ತಿದೆ. ಮಳೆಯಿಂದ ಘಟಪ್ರಭಾ ನದಿಯ ಒಳ ಹರಿವು ಹೆಚ್ಚಳವಾಗಿದ್ದು, ಗೋಕಾಕ ಜಲಪಾತದಲ್ಲೂ ನೀರಿನ ಪ್ರಮಾಣ ಏರಿದೆ.

ಇದನ್ನೂ ಓದಿ: Rain news | ಭೂಕುಸಿತ, ಪ್ರವಾಹ: ಆಗುಂಬೆ ಘಾಟಿ, ಸಂಪಾಜೆ ರಸ್ತೆ ಭಾಗಶಃ ಬಂದ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Top 10 news kannada
Koo

1. ಬೆಂಗಳೂರು ಬಂದ್‌ ಸಕ್ಸಸ್‌; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್‌ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ :ಕೇಳಿದ್ದಕ್ಕಿಂತಲೂ ಹೆಚ್ಚು ನೀರು ಕೊಡುತ್ತಿದೆ ಕರ್ನಾಟಕ! ಈಗ ಹರಿಯುತ್ತಿರುವುದು 6300 ಕ್ಯೂಸೆಕ್!‌

2. CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್‌ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿದಿನ 3000 ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಕಾವೇರಿ ನೀರು ಬಿಡದಂತೆ ಸುಗ್ರೀವಾಜ್ಞೆ; ಸರ್ಕಾರಕ್ಕೆ ಹೋರಾಟಗಾರರಿಂದ ಮೂರು ದಿನ ಗಡುವು

3. ಬೆಂಗಳೂರು ಬಂದ್‌ ಹತ್ತಿಕ್ಕಲು ಪೊಲೀಸ್‌ ಬಲ ಪ್ರಯೋಗ ನಡೆಯಿತೇ? ಕಮಿಷನರ್‌ ಹೇಳಿದ್ದೇನು?
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ (Cauvery water Dispute) ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ಕರೆ ನೀಡಿದ್ದ ಒಂದು ದಿನದ ಬೆಂಗಳೂರು ಬಂದ್‌ (Bangalore Bandh) ಸಾಂಗವಾಗಿ ಮುಕ್ತಾಯಗೊಂಡಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಡೆದ ಪ್ರತಿಭಟನೆಯ ವೇಳೆ ಗಮನೀಯ ಅನಾಹುತಕಾರಿ ಘಟನೆಗಳು ಇಲ್ಲದೆ ಬಂದ್‌ ಬಹುತೇಕ ಶಾಂತಿಯುತವಾಗಿ ನಡೆಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

4. ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ
ಜಡ್ಜ್‌ಗಳ ನೇಮಕಾತಿ ವಿಷಯಕ್ಕೆ (Appointment of Judges) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ಹಾಗೂ ಕೇಂದ್ರ ಸರ್ಕಾರ (Central Government) ನಡುವೆ ಮತ್ತೊದು ಸುತ್ತಿನ ಜಟಾಪಟಿ ಶುರುವಾಗುವ ಸಾಧ್ಯತೆಗಳಿವೆ. ಹೈಕೋರ್ಟ್‌ ಶಿಫಾರಸಗಳನ್ನು (High court Recommendations) ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳ ಹೆಸರು ಅಂತಿಮಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ವಿಳಂ ಧೋರಣೆಯನ್ನು ಅನುಸರಿಸುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ. ಅಲ್ಲದೇ ಈ ವಿಷಯವನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

5. ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್;‌ ಮಣಿಪುರ ಮತ್ತೆ ಉದ್ವಿಗ್ನ?
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಶವಗಳ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಮಣಿಪುರದಲ್ಲಿ ಮತ್ತೆ ಜನಾಕ್ರೋಶ ಭುಗಿಲೇಳುವ ಸಂಭವ ಕಂಡುಬರುತ್ತಿದೆ. ಬಂದೂಕು ಹಿಡಿದಿರುವ ಇಬ್ಬರು ದುಷ್ಕರ್ಮಿಗಳು ಕೂಡ ಈ ಫೋಟೋದಲ್ಲಿದ್ದಾರೆ. ಇವರು ಕುಕಿ ಸಮುದಾಯದವರು ಎಂದು ಹೇಳಲಾಗಿದೆ.

6. ಮನ ಕಲಕುವ ವಿಡಿಯೊ; ಜಿಮ್ನಾಸ್ಟಿಕ್ಸ್‌ನಲ್ಲಿ ಗೆದ್ದ​ ಬಾಲಕಿಗೆ ಕಪ್ಪು ಬಣ್ಣದವಳೆಂದು ಪದಕ ನೀಡದ ಆಯೋಜಕರು!

7. ಚಾಟ್‌ಜಿಪಿಟಿ ಜತೆ ನೀವಿನ್ನು ಮಾತನಾಡಬಹುದು! ಹೊಸ ಫೀಚರ್ ಪರಿಚಯಿಸಿದ ಓಪನ್ಎಐ

8. ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ

9. Dadasaheb Phalke Award: ವಹೀದಾ ರೆಹಮಾನ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

10. ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್‌ ಇಲಿ!
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ದೇಶ

Kashmir Dispute: ಗಿಲ್ಗಿಟ್‌-ಬಾಲ್ಟಿಸ್ತಾನಕ್ಕೆ ಅಮೆರಿಕ ರಾಯಭಾರಿ ರಹಸ್ಯ ಭೇಟಿ! ಭಾರತಕ್ಕೆ ಶೀಘ್ರ ಸಿಗುತ್ತಾ ಸಿಹಿ ಸುದ್ದಿ?

Kashmir Dispute: ಪಾಕ್ ಆಕ್ರಮಿತ ಪ್ರದೇಶದ ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶಕ್ಕೆ ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರಿ ಭೇಟಿ ನೀಡಿರುವ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

VISTARANEWS.COM


on

Edited by

David Blome
Koo

ನವದೆಹಲಿ: ಭಾರತ-ಪಾಕಿಸ್ತಾನ (India and Pakistan) ನಡುವಿನ ಕಾಶ್ಮೀರ ವಿವಾದ (Kashmir Dispute) ಬಗೆಹರಿಸಲು ಅಮೆರಿಕ (America) ಮಧ್ಯಸ್ಥಿಕೆಗೆ ಮುಂದಾಗಿದೆಯಾ? ಇಂಥದೊಂದು ಅನುಮಾನ ಮೂಡಲು ಕಾರಣವಿದೆ. ಜಿ20 ಶೃಂಗಸಭೆ (G20 Summit) ನಡೆಯುತ್ತಿರುವಾಗಲೇ ಅಮೆರಿಕನ್ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಿದರೆ, ಅದೇ ಸಮಯದಲ್ಲಿ ಪಾಕಿಸ್ತಾನದಲ್ಲಿರುವ ಅಮೆರಿಕದ ರಾಯಭಾರಿ ಡೇವಿಡ್ ಬ್ಲೋಮ್ (David Blome) ಅವರು ಪಾಕಿಸ್ತಾನ್ ಆಕ್ರಮಿತ ಕಾಶ್ಮೀರ ಪ್ರದೇಶದ ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ (Gilgit-Baltistan) ರಹಸ್ಯ ಭೇಟಿ ನೀಡಿದ್ದರು. ಈ ಕಾರಣಕ್ಕಾಗಿಯೇ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ. ಆದರೆ, ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ (Eric Garcetti) ಅವರು ಮಾತ್ರ, ಪಾಕಿಸ್ತಾನ ಮತ್ತು ಭಾರತಗಳು ತಮ್ಮ ನಡುವಿನ ಈ ಸಮಸ್ಯೆಯವನ್ನು ದ್ವಿಪಕ್ಷೀಯವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿನ ಅಮೆರಿಕ ರಾಯಭಾರಿಗೆ ಪ್ರತಿಕ್ರಿಯಿಸುವುದು ನನ್ನ ಕೆಲಸವಲ್ಲ. ಆದರೆ, ಅವರು ಆಗಲೇ ಅಲ್ಲಿದ್ದರು. ಜಿ20 ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಮ್ಮ ನಿಯೋಗದ ಭಾಗವವಾಗಿ ನಾವಿದ್ದೇವೆ ಎಂದು ಅಮೆರಿಕದ ರಾಯಭಾರಿ 20 ನೇ ಭಾರತ-ಅಮೆರಿಕ ಆರ್ಥಿಕ ಶೃಂಗದ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕಾಶ್ಮೀರ ವಿಷಯದ ಬಗ್ಗೆ ಅಮೆರಿಕದ ಹೊಂದಿರುವ ನಿಲುವನ್ನು ರಾಯಭಾರಿ ಗಾರ್ಸೆಟ್ಟಿ ಅವರು ಪುನರುಚ್ಚಾರ ಮಾಡಿದರು. ಕಾಶ್ಮೀರ ವಿವಾದವು ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆಯ ಮೂಲಕ ಪರಿಹರಿಸಬೇಕಾದ ದ್ವಿಪಕ್ಷೀಯ ವಿಷಯವಾಗಿದೆ. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಹರಿಸಬೇಕಾದ ಸಮಸ್ಯೆಯಾಗಿದೆ ಮತ್ತು ಅಮೆರಿಕ ಸೇರಿದಂತೆ ಮೂರನೇ ವ್ಯಕ್ತಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಎರಿಕ್ ಗಾರ್ಸೆಟ್ಟಿ ಅವರು ಹೇಳಿದರು.

ಪಾಕಿಸ್ತಾನದಲ್ಲಿರುವ ಅಮೆರಿಕದ ರಾಯಭಾರಿ ಡೊನಾಲ್ಡ್ ಬ್ಲೋಮ್ ಅವರು ಇತ್ತೀಚೆಗೆ ಗಿಲ್ಗಿಟ್-ಬಾಲ್ಟಿಸ್ತಾನ್‌ಗೆ ಖಾಸಗಿ ಭೇಟಿ ನೀಡಿದ್ದರು. ಈ ಘಟನೆಯೇ ಗಾರ್ಸೆಟ್ಟಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಪ್ರೇರಣೆಯಾಗಿದೆ. ಗಿಲ್ಗಿಟ್-ಬಾಲ್ಟಿಸ್ತಾನವನ್ನು ನವದೆಹಲಿಯು, ಅವಿಭಜಿತ ಜಮ್ಮು ಮತ್ತು ಕಾಶ್ಮೀರ ಹಾಗೂ ಭಾರತದ ಅವಿಭಾಜ್ಯ ಅಂಗ ಎಂದು ಪರಿಗಣಿಸುತ್ತದೆ.

ಈ ಸುದ್ದಿಯನ್ನೂ ಓದಿ: G 20 Meeting: ಚೀನಾ ಮತ್ತೆ ಉದ್ಧಟತನ; ಕಾಶ್ಮೀರ ವಿವಾದಿತ ಪ್ರದೇಶ ಎಂದು ಹೇಳಿಕೆ, ಜಿ-20 ಸಭೆ ಬಹಿಷ್ಕಾರ

ಭೇಟಿಯ ವೇಳೆ ಪಾಕಿಸ್ತಾನದ ರಾಯಭಾರಿ ಡೊನಾಲ್ಡ್ ಬ್ಲೋಮ್ ಅವರು ಗಿಲ್ಗಿಟ್-ಬಾಲ್ಟಿಸ್ತಾನದ ಅನೇಕ ಮನರಂಜನೆಯ ಸ್ಥಳಗಳಿಗೆ ಭೇಟಿ ನೀಡಿದರು ಮತ್ತು ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ನಡೆಯುತ್ತಿರುವ ವಿವಿಧ ಯೋಜನೆಗಳನ್ನು ಪರಿಶೀಲಿಸಿದರು. ಇದೇ ವೇಳೆ ಅವರು ಗಿಲ್ಗಿಟ್-ಬಾಲ್ಟಿಸ್ತಾನ್ ಅಸೆಂಬ್ಲಿಯ ಡೆಪ್ಯುಟಿ ಸ್ಪೀಕರ್ ಸಾದಿಯಾ ಡ್ಯಾನಿಶ್ ಮತ್ತು ಅಸೆಂಬ್ಲಿ ಸದಸ್ಯೆ ರಾಣಿ ಸನಮ್ ಫರ್ಯಾದ್ ಅವರೊಂದಿಗೆ ಸಭೆ ನಡೆಸಿದರು.

ಅಮೆರಿಕದ ರಾಜತಾಂತ್ರಿಕರು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. 2002ರ ಅಕ್ಟೋಬರ್‌ನಲ್ಲಿ ಡೊನಾಲ್ಡ್ ಬ್ಲೋಮ್ ಅವರು ಮುಜಫರಾಬಾದ್‌ಗೆ ಭೇಟಿ ನೀಡಿ, ಪಾಕ್‌ನಿಂದ ನೇಮಕವಾಗಿರುವ ತನ್ವೀರ್ ಇಲ್ಯಾಸ್ ಅವರನ್ನು ಭೇಟಿ ಮಾಡಿದ್ದರು. 2005ರ ಭೂಕಂಪದಲ್ಲಿ ಮೃತಪಟ್ಟ ಜನರಿಗೆ ಈ ವೇಳೆ ಬ್ಲೋಮ್ ಶ್ರದ್ಧಾಂಜಲಿ ಸಲ್ಲಿಸಿದ್ದರು. ಅಲ್ಲದೇ, ಪಾಕಿಸ್ತಾನ ಮತ್ತು ಅಮೆರಿಕ ನಡುವಿನ ಪಾಲುದಾರಿಕೆಯನ್ನು ದೃಢಪಡಿಸಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕರ್ನಾಟಕ

Bangalore Bandh : ಶುಕ್ರವಾರ ಇಡೀ ಕರ್ನಾಟಕ ಬಂದ್‌; ಸೆಕ್ಷನ್‌ 144 ಹಾಕಿದ್ರೆ ಹುಷಾರ್‌ ಎಂದು ಗುಡುಗಿದ ವಾಟಾಳ್‌

Bangalore News : ಸೆ. 29ರಂದು ನಡೆಯಲಿರುವ ಕರ್ನಾಟಕ ಬಂದ್‌ ವೇಳೆ ನಿಷೇಧಾಜ್ಞೆ ಹಾಕುವಂತಿಲ್ಲ ಎಂದು ವಾಟಾಳ್‌ ನಾಗರಾಜ್‌ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

VISTARANEWS.COM


on

Edited by

Vataka Nagaraj Karnataka Bandh
Koo

ಬೆಂಗಳೂರು: ಮಂಗಳವಾರ ನಡೆದ ಬೆಂಗಳೂರು ಬಂದ್‌ನ್ನು (Bangalore Bandh) ಸರ್ಕಾರ ಪೊಲೀಸ್‌ ಬಲ ಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನ ಮಾಡಿದೆ. ಆದರೆ ಸೆಪ್ಟೆಂಬರ್‌ 29ರಂದು ನಡೆಯಲಿರುವ ಕನ್ನಡದ ಒಕ್ಕೂಟ ಕರೆ ನೀಡಿರುವ ಅಖಿಲ ಕರ್ನಾಟಕ ಬಂದ್‌ನ್ನು (Karnataka Bandh) ತಡೆಯಲು ಯತ್ನಿಸಿದರೆ ಹುಷಾರ್‌ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ (Vatal Nagaraj) ಸರ್ಕಾರವನ್ನು ಎಚ್ಚರಿಸಿದ್ದಾರೆ.

ಅವರು ಮಂಗಳವಾರ ನಡೆದ ಬೆಂಗಳೂರು ಬಂದ್‌ ನಡುವೆಯೇ ತಮ್ಮ ತಂಡವನ್ನು ಕೂಡಿಕೊಂಡು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆದರೆ, ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದರು. ಇದೂ ಸೇರಿದಂತೆ ಹೋರಾಟಗಾರರ ಹಕ್ಕನ್ನು ಕಸಿಯಲಾಗಿದೆ ಎಂದು ಅವರು ಸಂಜೆ ಆಪಾದಿಸಿದರು.

ರಾಜ್ಯ ಸರ್ಕಾರ ಸೆಕ್ಷನ್‌ 144ರ ಅಡಿ ನಿಷೇಧಾಜ್ಞೆ ವಿಧಿಸಿ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಮಾರ್ಗ ಕಂಡುಕೊಂಡಿದೆ. ಆದರೆ, ಶುಕ್ರವಾರ ಈ ತಂತ್ರವನ್ನು ಪ್ರಯೋಗಿಸಿದರೆ ಎಚ್ಚರಿಕೆ ಎಂದು ಹೇಳಿದರು ವಾಟಾಳ್‌ ನಾಗರಾಜ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿರುದ್ಧ ಸೆ. 27ರ ಬುಧವಾರ ಕನ್ನಡ ಪರ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಅವರ ಮುಂದೆ ಪ್ರತಿಭಟನೆ ನಡೆಸಲಿವೆ. ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್‌ ಆಗಲಿದೆ ಎಂದು ಅವರು ಹೇಳಿದರು. ವಾಟಾಳ್ ನಾಗರಾಜ್, ಕನ್ನಡ ಹೋರಾಟಗಾರರ ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಸೇರಿದಂತೆ 50ಕ್ಕೂ ಅಧಿಕ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: Bangalore Bandh : ಬೆಂಗಳೂರು ಬಂದ್‌ ಸಕ್ಸಸ್‌; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ

ಶುಕ್ರವಾರ ಏನಿರುತ್ತೆ ಏನಿರಲ್ಲ: ವಾಟಾಳ್‌ ಕೊಟ್ಟ ಲಿಸ್ಟ್‌

-ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್, ಖಾಸಗಿ ಬಸ್, ಓಲಾ, ಉಬರ್, ಟ್ಯಾಕ್ಸಿ, ಆಟೋ ಗೂಡ್ಸ್ ವಾಹನ ಸೇವೆ ಇರುವುದಿಲ್ಲ
-ಶುಕ್ರವಾರ ಮಾಲ್, ಹೋಟೆಲ್, ರೆಸ್ಟೊರೆಂಟ್, ಮಾಲ್, ಮಲ್ಟಿಪ್ಲೆಕ್ಸ್
-ಯಶವಂತಪುರ, ದಾಸನಪುರ ಎಪಿಎಂಸಿ ಮಾರುಕಟ್ಟೆ, ಕೆ.ಆರ್‌ ಮಾರ್ಕೆಟ್‌ ಬಂದ್‌
– ಅಂಗಡಿ ಮಳಿಗೆಗಳು, ಕೈಗಾರಿಕೆಗಳು ಬಂದ್.

ವಾಟಾಳ್‌ ನಾಗರಾಜ್‌ ನೇತೃತ್ವದ ಬಂದ್‌ಗೆ ಮಂಗಳವಾರದ ಬಂದ್‌ಗೆ ಕರೆ ಕೊಟ್ಟ ಸಂಘಟನೆಗಳಲ್ಲದೆ ಹೋಟೆಲ್‌ ಅಸೋಸಿಯೇಷನ್‌, ಓಲಾ ಊಬರ್‌ ಚಾಲಕರ ಸಂಘಟನೆ, ಆದರ್ಶ ಆಟೋ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬಂದ್ ಇನ್ನಷ್ಟು ಪ್ರಖವಾಗುವ ನಿರೀಕ್ಷೆ ಇದೆ. ಆದರೆ, ರಾಜ್ಯದ ಎಲ್ಲ ಭಾಗಗಳಲ್ಲಿ ಯಶಸ್ವಿಯಾಗುವುದು ಡೌಟ್‌. ಕರಾವಳಿ, ಉತ್ತರ ಕರ್ನಾಟಕದಲ್ಲಿ ಕಾವೇರಿ ಹೋರಾಟದ ಕಾವು ಅಷ್ಟಾಗಿ ತಟ್ಟುವುದಿಲ್ಲ. ಆದರೆ, ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ ಭಾಗದಲ್ಲಿ ಹೆಚ್ಚು ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ಮಧ್ಯ ಪ್ರವೇಶಕ್ಕೆ ಆಗ್ರಹ

ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯದ ಸಂಸದರು ಸಂಪೂರ್ಣ ನಾಯಪತ್ತೆಯಾಗಿದ್ದಾರೆ. ಅವರಿಗೆ ಕಾವೇರಿ ನೀರು ಬೇಡ್ವಾ ಎಂದು ಕೇಳಿದರು. ಶುಕ್ರವಾರ ಸಂಪೂರ್ಣ ಬಂದ್‌ಗೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

Continue Reading

ಕ್ರಿಕೆಟ್

World Cup 2023 : ವಿಶ್ವ ಕಪ್​ಗೆ 15 ಸದಸ್ಯರ ಬಾಂಗ್ಲಾದೇಶ ತಂಡ ಪ್ರಕಟ, ಸ್ಟಾರ್ ಆಟಗಾರನೇ ಇಲ್ಲ

ವಿಶ್ವ ಕಪ್​ಗೆ (World Cup 2023) ಆಯ್ಕೆಯಾಗಿರುವ ಬಾಂಗ್ಲಾದೇಶ ತಂಡದನ್ನು ಆಲ್​ರೌಂಡರ್​​ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.

VISTARANEWS.COM


on

Bangladesh Cricket team
Koo

ನವದೆಹಲಿ: ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ಬಾಂಗ್ಲಾದೇಶ ಮಂಗಳವಾರ (ಸೆಪ್ಟೆಂಬರ್ 26) ತನ್ನ 15 ಸದಸ್ಯರ ತಂಡವನ್ನು ಅನಾವರಣಗೊಳಿಸಿದೆ. ಆಲ್​ರೌಂಡರ್​​ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಜುಲೈನಲ್ಲಿ ನಿವೃತ್ತಿ ನಿರ್ಧಾರವನ್ನು ಬದಲಾಯಿಸುವ ಮೂಲಕ ಕ್ರಿಕೆಟ್​ ಕ್ಷೇತ್ರಕ್ಕೆ ಆಘಾತ ನೀಡಿದ್ದ ಅನುಭವಿ ತಮೀಮ್ ಇಕ್ಬಾಲ್ ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳಲಾಗಿಲ್ಲ. ಬೆನ್ನುನೋವಿನಿಂದಾಗಿ ಏಷ್ಯಾ ಕಪ್ 2023 ರಲ್ಲಿ ಕಾಣಿಸಿಕೊಳ್ಳದಿದ್ದರೂ, ಅವರು ಫಿಟ್ನೆಸ್ ಅನ್ನು ಮರಳಿ ಪಡೆದುಕೊಂಡಿದ್ದರು. ಅವರು ಇತ್ತೀಚೆಗೆ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸಿದ್ದರು. ಆದ್ದರಿಂದ, ವಿಶ್ವ ಕಪ್ ತಂಡದಿಂದ ಅವರ ಅನುಪಸ್ಥಿತಿಯು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ : World Cup 2023 : ಮುಂಬರುವ ವಿಶ್ವ ಕಪ್​ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್​ ಪ್ಲೇಯರ್​ಗಳ ಲಿಸ್ಟ್​ ಇಲ್ಲಿದೆ

ಜುಲೈನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಬಲಗೈ ವೇಗಿ ಎಬಾದತ್ ಹುಸೇನ್ ಮೊಣಕಾಲು ಗಾಯದಿಂದ ಅವಕಾಶ ಪಡೆಯಲು ವಿಫಲರಾಗಿದ್ದರು. ಅವರೂ ವಿಶ್ವ ಕಪ್​ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಅನುಭವಿಗಳ ಸೇರ್ಪಡೆ

ತಮೀಮ್ ಅನುಪಸ್ಥಿತಿಯ ಹೊರತಾಗಿಯೂ, ಬಾಂಗ್ಲಾದೇಶದ ಬ್ಯಾಟಿಂಗ್ ಸಾಲಿನಲ್ಲಿ ಮುಷ್ಫಿಕರ್ ರಹೀಮ್, ನಜ್ಮುಲ್ ಹುಸೇನ್ ಶಾಂಟೊ, ಲಿಟನ್ ದಾಸ್ ಮತ್ತು ಶಕೀಬ್ ಅವರಂತಹ ಅನುಭವಿ ಪ್ರಚಾರಕರು ಇದ್ದಾರೆ. ಶಕೀಬ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್ ಮತ್ತು ಮಹೆದಿ ಹಸನ್ ಅವರ ಉಪಸ್ಥಿತಿಯೊಂದಿಗೆ ಬಾಂಗ್ಲಾದೇಶದ ಸ್ಪಿನ್ ವಿಭಾಗವು ಸಾಕಷ್ಟು ಪ್ರಬಲವಾಗಿದೆ.

ಟಸ್ಕಿನ್ ಅಹ್ಮದ್ ಮತ್ತು ಮುಸ್ತಾಫಿಜುರ್ ರೆಹಮಾನ್ ವೇಗದ ದಾಳಿಯನ್ನು ಮುನ್ನಡೆಸಲಿದ್ದು, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್ ಮತ್ತು ತಂಝಿಮ್ ಹಸನ್ ಕೂಡ ಅವಕಾಶ ಪಡೆದಿದ್ದಾರೆ. ಬಾಂಗ್ಲಾದೇಶ ತನ್ನ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 7 ರಂದು ಧರ್ಮಶಾಲಾದಲ್ಲಿ ಅಫ್ಘಾನಿಸ್ತಾನ ವಿರುದ್ಧ ಪ್ರಾರಂಭಿಸಲಿದೆ.

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಮುಷ್ಫಿಕರ್ ರಹೀಮ್, ಲಿಟನ್ ದಾಸ್ (ಉಪನಾಯಕ), ನಜ್ಮುಲ್ ಹುಸೇನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದೋಯ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್, ನಸೂಮ್ ಅಹ್ಮದ್, ಮಹೆದಿ ಹಸನ್, ತಂಝೀಮ್ ಹಸನ್ ಸಾಕಿಬ್, ತಂಜಿದ್ ಹಸನ್ ತಮೀಮ್, ಮಹಮುದುಲ್ಲಾ ರಿಯಾದ್.

ಶ್ರೀಲಂಕಾ ತಂಡವೂ ಪ್ರಕಟ

ಶ್ರೀಲಂಕಾದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಗಾಯದ ಸಮಸ್ಯೆಯಿಂದಾಗಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವುದರಿಂದ ಮುಂಬರುವ ಏಕ ದಿನ ವಿಶ್ವಕಪ್​​ಗೆ (World Cup 2023) ಶ್ರೀಲಂಕಾ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮೂರನೇ ಹಂತದ ಸ್ನಾಯು ಸೆಳೆತದಿಂದಾಗಿ ಹಸರಂಗ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಲಂಕಾ ತಂಡವು ಪ್ರಮುಖ ಬೌಲರ್​ಗಳು ಇಲ್ಲದೇ ಆಡುವಂತಾಗಿದೆ. ತಮ್ಮ ಕೆಲವು ಪ್ರಮುಖ ಆಟಗಾರರನ್ನು ಕಾಡುತ್ತಿರುವ ಗಾಯವು ಅಲ್ಲಿನ ಆಯ್ಕೆದಾದರರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಇದೀಗ ಪ್ರಮುಖ ಸ್ಪಿನ್ನರ್​ಗಳು ಇಲ್ಲದೇ ತಂಡವನ್ನು ಪ್ರಕಟಿಸಲಾಗಿದೆ.

ಊಹಾಪೋಹಗಳು ಮತ್ತು ಅನುಮಾನಗಳನ್ನು ನಿವಾರಿಸಿದ ದಸುನ್ ಶನಕಾ ಅವರು ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ವನಿಂದು ಹಸರಂಗ, ಮಹೇಶ್ ತೀಕ್ಷಣಾ ಮತ್ತು ದಿಲ್ಶಾನ್ ಮಧುಶಂಕಾ ಅವರ ಫಿಟ್ನೆಸ್ ಬಗ್ಗೆ ದೀರ್ಘಕಾಲದ ಕಳವಳ ವ್ಯಕ್ತತೊಂಡಿವೆ. ಶ್ರೀಲಂಕಾದ ಮ್ಯಾನೇಜ್ಮೆಂಟ್ ಈ ವಿಷಯದ ಮೇಲೆ ಬೆಳಕು ಚೆಲ್ಲಿದೆ, ಅವರ ಭಾಗವಹಿಸುವಿಕೆಯು ಅವರ ದೈಹಿಕ ಸ್ಥಿತಿಯ ಮೇಲೆ ಅವಲಂಬಿತವಾಗಿದೆ ಎಂದು ಒತ್ತಿಹೇಳಿದೆ.

ಶ್ರೀಲಂಕಾ ತಂಡ: ದಸುನ್ ಶನಕಾ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಕುಸಾಲ್ ಪೆರೆರಾ, ಪಥುಮ್ ನಿಸ್ಸಾಂಕಾ, ದಿಮುತ್ ಕರುಣರತ್ನೆ, ಸದೀರಾ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶಾನ್ ಹೇಮಂತ, ಮಹೇಶ್ ತೀಕ್ಷಾ, ದುನಿತ್ ವೆಲ್ಲಾಗೆ, ಕಸುನ್ ರಜಿತಾ, ಮಥೀಶಾ ಪತಿರಾನಾ, ಲಹಿರು ಕುಮಾರ, ದಿಲ್ಶಾನ್ ಮಧುಶಂಕಾ.

Continue Reading
Advertisement
MLA Dr N T Srinivas drives the foot and mouth disease vaccination campaign at Kudligi
ವಿಜಯನಗರ33 mins ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ33 mins ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ37 mins ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ38 mins ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

David Blome
ದೇಶ39 mins ago

Kashmir Dispute: ಗಿಲ್ಗಿಟ್‌-ಬಾಲ್ಟಿಸ್ತಾನಕ್ಕೆ ಅಮೆರಿಕ ರಾಯಭಾರಿ ರಹಸ್ಯ ಭೇಟಿ! ಭಾರತಕ್ಕೆ ಶೀಘ್ರ ಸಿಗುತ್ತಾ ಸಿಹಿ ಸುದ್ದಿ?

Vataka Nagaraj Karnataka Bandh
ಕರ್ನಾಟಕ43 mins ago

Bangalore Bandh : ಶುಕ್ರವಾರ ಇಡೀ ಕರ್ನಾಟಕ ಬಂದ್‌; ಸೆಕ್ಷನ್‌ 144 ಹಾಕಿದ್ರೆ ಹುಷಾರ್‌ ಎಂದು ಗುಡುಗಿದ ವಾಟಾಳ್‌

Bangladesh Cricket team
ಕ್ರಿಕೆಟ್1 hour ago

World Cup 2023 : ವಿಶ್ವ ಕಪ್​ಗೆ 15 ಸದಸ್ಯರ ಬಾಂಗ್ಲಾದೇಶ ತಂಡ ಪ್ರಕಟ, ಸ್ಟಾರ್ ಆಟಗಾರನೇ ಇಲ್ಲ

Bangalore Bandh KG Road
ಕರ್ನಾಟಕ1 hour ago

Bangalore Bandh : ಬೆಂಗಳೂರು ಬಂದ್‌ ಸಕ್ಸಸ್‌; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ

Supreme Court
ಕೋರ್ಟ್1 hour ago

Supreme Court: ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ

Rishabh Pant
ಕ್ರಿಕೆಟ್2 hours ago

World Cup 2023 : ಮುಂಬರುವ ವಿಶ್ವ ಕಪ್​ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್​ ಪ್ಲೇಯರ್​ಗಳ ಲಿಸ್ಟ್​ ಇಲ್ಲಿದೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ1 day ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ1 day ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ1 day ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌