Site icon Vistara News

Road Accident : ಭೀಕರ ಅಪಘಾತ; ತಿರುಪತಿ ದರ್ಶನ ಮಾಡಿ ಮರಳುತ್ತಿದ್ದ ಒಂದೇ ಕುಟುಂಬದ ಐವರು ದಾರುಣ ಸಾವು

people from athani met with accident

ಚಿಕ್ಕೋಡಿ: ಆಂಧ್ರ ಪ್ರದೇಶದ ತಿರುಪತಿ ದೇವಸ್ಥಾನಕ್ಕೆ (Tirupati Temple) ಹೋಗಿ ಮರಳಿ ಬರುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (Family from Athani) ಒಂದೇ ಕುಟುಂಬದ ಐವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ (Five of family died in Accident). 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ನಡೆದ ಅಪಘಾತದಲ್ಲಿ (Road Accident) ಈ ಸಾವು ಸಂಭವಿಸಿದೆ. ಅಥಣಿಯ ಕುಟುಂಬದವರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ನಡೆದಿರುವ ಭೀಕರ ಅಪಘಾತ (Cruieser- lorry accident) ಇದಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ 16 ಮಂದಿ ಕ್ರೂಸರ್‌ ವಾಹನದಲ್ಲಿ ತಿರುಪತಿಗೆ ಹೋಗಿದ್ದರು. ತಿರುಪತಿ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಶುಕ್ರವಾ ಬೆಳಗಿನ ಜಾವ ಈ ದುರಂತ ನಡೆದಿದೆ.

ಶುಕ್ರವಾರ ಬೆಳಗಿನ ಜಾವ 3:30ರ ಸುಮಾರು ಕಡಪ-ಚಿತ್ತೂರ ರಾಷ್ಟ್ರೀಯ ಹೆದ್ದಾರಿಯಯಲ್ಲಿ ಈ ದುರಂತ ಸಂಭವಿಸಿದ್ದು, ಮೃತರನ್ನು ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32)
ಹನುಮಂತ ಆಜೂರ (42), ಚಾಲಕ ಹನುಮಂತ ಜಾಧವ (32) ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಗಾಯಗೊಂಡಿರುವ 11 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Road Accident : ಬೈಕ್‌ – ಬೊಲೆರೋ ಮುಖಾಮುಖಿ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು

ಕುಟುಂಬದ ಸದಸ್ಯರು ಅಥಣಿಯಿಂದ ಹೊರಟು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ಗುರುವಾರ ದೇವರ ದರ್ಶನ ಪಡೆದು ರಾತ್ರಿ ಹೊರಟು ಊರಿಗೆ ಬರುತ್ತಿದ್ದರು. ಆದರೆ, ವಿಧಿಲಿಖಿತ ಬೇರೆ ಇತ್ತು. ಭೀಕರ ದುರಂತದಲ್ಲಿ ಐವರು ಪ್ರಾಣವನ್ನೇ ಕಳೆದುಕೊಂಡರು.

Exit mobile version