ಬೆಳಗಾವಿ ಕನ್ನಡ ಭವನದಲ್ಲಿ ಕಿತ್ತಾಟ | ಕನ್ನಡ- ಸಂಸ್ಕೃತಿ ಇಲಾಖೆ ಉಪನಿರ್ದೇಶಕಿಯನ್ನು ಹೊರಗೆ ಕಳುಹಿಸಿದ ನಾಯಕರು - Vistara News

ಪ್ರಮುಖ ಸುದ್ದಿ

ಬೆಳಗಾವಿ ಕನ್ನಡ ಭವನದಲ್ಲಿ ಕಿತ್ತಾಟ | ಕನ್ನಡ- ಸಂಸ್ಕೃತಿ ಇಲಾಖೆ ಉಪನಿರ್ದೇಶಕಿಯನ್ನು ಹೊರಗೆ ಕಳುಹಿಸಿದ ನಾಯಕರು

ಇಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ನಡೆಸಿದ ಕನ್ನಡ ಭವನ ಉದ್ಘಾಟನೆಗೂ ಮುನ್ನ ಕನ್ನಡ ಭವನ ಆಡಳಿತ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ನಡುವೆ ಕಿತ್ತಾಟ ನಡೆದಿದ್ದು, ಇಲಾಖೆ ಉಪನಿರ್ದೇಶಕರನ್ನು ಹೊರಗೆ ಕಳುಹಿಸಲಾಗಿದೆ.

VISTARANEWS.COM


on

kannada bhavana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಇಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ನಡೆಸಿದ ಕನ್ನಡ ಭವನ ಉದ್ಘಾಟನೆಗೂ ಮುನ್ನ ಕನ್ನಡ ಭವನ ಆಡಳಿತ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ನಡುವೆ ಕಿತ್ತಾಟ ನಡೆದಿದ್ದು, ಇಲಾಖೆ ಉಪನಿರ್ದೇಶಕರನ್ನು ಹೊರಗೆ ಕಳುಹಿಸಲಾಗಿದೆ.

ನಿನ್ನೆ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡ ಭವನ ರಂಗಮಂದಿರ ಉದ್ಘಾಟಿಸಿದ್ದರು. ಇದಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ‌ ಭಜಂತ್ರಿ ಹಾಗೂ ಕನ್ನಡ ಭವನ ಆಡಳಿತ ಮಂಡಳಿ ಸದಸ್ಯರ ಮಧ್ಯೆ ವಾಗ್ವಾದ ನಡೆದಿತ್ತು.

ಕನ್ನಡ ಭವನ ನಿರ್ಮಾಣಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ಪಡೆಯಲಾಗಿದೆ. ಜೊತೆಗೆ ವಿಶ್ವ ಕನ್ನಡ ಸಮ್ಮೇಳನ ವೇಳೆ ಉಳಿದ ಹಣ ಬಳಕೆ ಮಾಡಿ ಕನ್ನಡ ಭವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಕನ್ನಡ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಾಮಫಲಕ ಹಾಕಿ, ಭವನ ನಿರ್ವಹಣೆ ನಮಗೆ ನೀಡಿ ಎಂದು ಕೇಳಲು ಉಪನಿರ್ದೇಶಕಿ ವಿದ್ಯಾವತಿ‌ ಭಜಂತ್ರಿ ಸ್ಥಳಕ್ಕೆ ಬಂದಿದ್ದರು. ಈ ವೇಳೆ ಕನ್ನಡ ಭವನ ಆಡಳಿತ ಮಂಡಳಿ ಅಧ್ಯಕ್ಷ ಪ್ರಭಾಕರ ಕೋರೆ ಮತ್ತಿತರ ಸದಸ್ಯರು ವಿದ್ಯಾವತಿ ಭಜಂತ್ರಿಯವರನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ ಸಿಎಂ ಕಾರ್ಯಕ್ರಮದಿಂದ ಮಹಿಳಾ ಅಧಿಕಾರಿಯನ್ನು ಡಿಸಿ ನಿತೇಶ ಪಾಟೀಲ್ ಹೊರಗೆ ಕಳಿಸಿದರು.

ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮುದ್ರಣ ವಿಚಾರವಾಗಿಯೂ ಉಭಯ ಬಣಗಳ ನಡುವೆ ಮುನಿಸು ಸೃಷ್ಟಿಯಾಗಿತ್ತು. ಕನ್ನಡ ಭವನ ಆಡಳಿತ ಮಂಡಳಿ ಮೊದಲು ತನ್ನದೊಂದೇ ಹೆಸರಿನಲ್ಲಿ ಆಮಂತ್ರಣ ಪತ್ರಿಕೆ ಮುದ್ರಿಸಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ ಕಾರ್ಯಕ್ರಮ ಆಹ್ವಾನ ಪತ್ರಿಕೆಯನ್ನು ಚೇಂಜ್ ಮಾಡಿಸಿತ್ತು. ಇದೀಗ ಕನ್ನಡ ಭವನ ನಿರ್ವಹಣೆ ವಿಚಾರವಾಗಿ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿಕಾರಿಗಳ ಮಧ್ಯೆ ಕಿತ್ತಾಟ ಶುರುವಾಗಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ| ಬೆಳಗಾವಿಯಲ್ಲ, ಕೇಂದ್ರಾಡಳಿತ ಪ್ರದೇಶ ಮಾಡಬೇಕಾಗಿರುವುದು ಮುಂಬಯಿಯನ್ನು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Phalodi Satta Pazar: ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ.

VISTARANEWS.COM


on

Phalody Satta Bazar
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) 6 ಹಂತದ ಮತದಾನ ಮುಕ್ತಾಯಗೊಂಡಿದೆ. ಏಳನೇ ಅಥವಾ ಕೊನೆಯ ಹಂತದ ಮತದಾನವು ಜೂನ್‌ 1ರಂದು ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಫಲೋಡಿ ಸಟ್ಟಾ ಬಜಾರ್‌ ಮಾರ್ಕೆಟ್‌ (Phalodi Satta Bazar) ಸಂಸ್ಥೆಯು ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಲೇಟೆಸ್ಟ್ ಸಮೀಕ್ಷಾ ವರದಿ ಪ್ರಕಟಿಸಿದೆ. ನೂತನ ಸಮೀಕ್ಷಾ ವರದಿ ಪ್ರಕಾರ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ 325-330 ಸೀಟುಗಳು ಲಭಿಸುವುದು ನಿಶ್ಚಿತ ಎಂದು ತಿಳಿಸಿದೆ.

ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

SP-Congress seat sharing final in Uttar Pradesh and INDIA Bloc intact

ಯಾವ ರಾಜ್ಯದಲ್ಲಿ ಬಿಜೆಪಿಗೆ ಎಷ್ಟು ಕ್ಷೇತ್ರ?

ರಾಮಮಂದಿರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 63-65 ಕ್ಷೇತ್ರಗಳು ಲಭಿಸಲಿವೆ ಎಂಬುದಾಗಿ ಸಮೀಕ್ಷೆ ತಿಳಿಸಿದೆ. ಇನ್ನು, ಗುಜರಾತ್‌ 25, ಮಧ್ಯಪ್ರದೇಶ 28-29, ದೆಹಲಿ 5-6, ಪಂಜಾಬ್‌ 2-3, ಹಿಮಾಚಲ ಪ್ರದೇಶ 4, ಛತ್ತೀಸ್‌ಗಢ 10-11, ಉತ್ತರಾಖಂಡ 5, ಬಿಹಾರ 28-29, ತೆಲಂಗಾಣ 8-9, ಜಾರ್ಖಂಡ್‌ 10-11 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ಹೆಚ್ಚಿನ ಕ್ಷೇತ್ರಗಳು ಬರಲಿವೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ ಎಂದು ವರದಿ ತಿಳಿಸಿದೆ.

ಫಲೋಡಿ ಸಟ್ಟಾ ಮಾರುಕಟ್ಟೆ ಇತಿಹಾಸವೇನು?

ಚುನಾವಣಾ ಫಲಿತಾಂಶದ ಭವಿಷ್ಯವಾಣಿಗಾಗಿ ರಾಜಸ್ಥಾನ ಮೂಲಕ ಫಲೋಡಿ ಸಟ್ಟಾ ಬಜಾರ್‌ನತ್ತ ಎಲ್ಲರೂ ಮುಖಮಾಡಿದ್ದಾರೆ. ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು. ಕಾನೂನೂ ಬಾಹಿರವಾಗಿದ್ದರೂ ಕ್ರಿಕೆಟ್‌, ಐಪಿಎಲ್‌ ಸಂದರ್ಭದಲ್ಲಿ ಇಲ್ಲಿ ಅತಿ ಹೆಚ್ಚಾಗಿ ಬೆಟ್ಟಿಂಗ್‌ ನಡೆಯುತ್ತದೆ ಎಂಬ ಆರೋಪ ಕೇಳಿಬರುತ್ತದೆ.

ಇದನ್ನೂ ಓದಿ: Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Continue Reading

ಪ್ರಮುಖ ಸುದ್ದಿ

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

Turbulence: ವಿಮಾನದಲ್ಲಿ ಏಕಾಏಕಿ ಪ್ರಕ್ಷುಬ್ಧತೆ ಉಂಟಾದ ಕಾರಣ ಲಗೇಜ್‌ಗಳು ಪ್ರಯಾಣಿಕರ ಮೇಲೆ ಬಿದ್ದಿವೆ. ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ 6 ಪ್ರಯಾಣಿಕರು ಹಾಗೂ 6 ಸಿಬ್ಬಂದಿಗೆ ಗಾಯಗಳಾಗಿವೆ. “ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಮಾನವು ಡಬ್ಲಿನ್‌ನಲ್ಲಿ ಲ್ಯಾಂಡ್‌ ಆಯಿತು. ಲ್ಯಾಂಡ್‌ ಆದ ಕೂಡಲೇ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನಿಸಲಾಯಿತು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

turbulence
Koo

ದೋಹಾ: ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಸಿಂಗಾಪುರ ಏರ್‌ಲೈನ್‌ ವಿಮಾನವು ಪ್ರಕ್ಷುಬ್ಧತೆಗೆ (Turbulence) ಒಬ್ಬ ವ್ಯಕ್ತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೊಂದು ವಿಮಾನವು ಟರ್ಬುಲೆನ್ಸ್‌ಗೆ ತುತ್ತಾಗಿದೆ. ಕತಾರ್‌ ರಾಜಧಾನಿ ದೋಹಾದಿಂದ (Doha) ಐರ್ಲೆಂಡ್‌ ರಾಜಧಾನಿ ಡಬ್ಲಿನ್‌ಗೆ (Dublin) ತೆರಳುತ್ತಿದ್ದ ವಿಮಾನವು ಪ್ರಕ್ಷುಬ್ಧತೆಗೆ ಸಿಲುಕಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಕತಾರ್‌ ಏರ್‌ವೇಸ್‌ ವಿಮಾನದಲ್ಲಿ ಪ್ರಕ್ಷುಬ್ಧತೆ ಉಂಟಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ದೋಹಾದಿಂದ ಡಬ್ಲಿಂಗ್‌ಗೆ ಹೊರಟಿದ್ದ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಪ್ರಕ್ಷುಬ್ಧತೆಗೆ ಸಿಲುಕಿತು. ವಿಮಾನದಲ್ಲಿ ಏಕಾಏಕಿ ಪ್ರಕ್ಷುಬ್ಧತೆ ಉಂಟಾದ ಕಾರಣ ಲಗೇಜ್‌ಗಳು ಪ್ರಯಾಣಿಕರ ಮೇಲೆ ಬಿದ್ದಿವೆ. ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ 6 ಪ್ರಯಾಣಿಕರು ಹಾಗೂ 6 ಸಿಬ್ಬಂದಿಗೆ ಗಾಯಗಳಾಗಿವೆ. “ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಮಾನವು ಡಬ್ಲಿನ್‌ನಲ್ಲಿ ಲ್ಯಾಂಡ್‌ ಆಯಿತು. ಲ್ಯಾಂಡ್‌ ಆದ ಕೂಡಲೇ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನಿಸಲಾಯಿತು” ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವರಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬ್ರಿಟನ್‌ ರಾಜಧಾನಿ ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಕ್ಷುಬ್ಧತೆ ಉಂಟಾಗಿ ಒಬ್ಬರು ಮೃತಪಟ್ಟು 30 ಜನ ಗಾಯಗೊಂಡಿರುವ ಘಟನೆ ಮಂಗಳವಾರ (ಮೇ 21) ನಡೆದಿತ್ತು. ಬಳಿಕ ಈ ಸಿಂಗಾಪುರ ಏರ್‌ಲೈನ್ಸ್‌ ವಿಮಾನವನ್ನು ಬ್ಯಾಂಕಾಕ್‌ನ ಸುವರ್ಣಭೂಮಿ ಏರ್‌ಪೋರ್ಟ್‌ನಲ್ಲಿ ತುರ್ತು ಲ್ಯಾಂಡ್‌ ಮಾಡಲಾಗಿತ್ತು. ಕೂಡಲೇ ವೈದ್ಯರು ಧಾವಿಸಿ ಪ್ರಯಾಣಿಕರಿಗೆ ಅಗತ್ಯ ನೆರವು ನೀಡಿದ್ದರು. ವಿಮಾನದೊಳಗಿನ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದ್ದವು.

ಏನಿದು ಟರ್ಬುಲೆನ್ಸ್?‌

ವಿಮಾನವು ಹಾರಾಟ ನಡೆಸುವಾಗ ಹವಾಮಾನ ವೈಪರೀತ್ಯದಿಂದಾಗಿ ಗಾಳಿಯ ಒತ್ತಡದಲ್ಲಿ ದಿಢೀರನೆ ಏರುಪೇರಾಗುತ್ತದೆ. ಇದರ ತೀವ್ರತೆಗೆ ವಿಮಾನವು ಹಾರಾಟ ನಡೆಸುವಾಗಲೇ ಏಕಾಏಕಿ ಅಲುಗಾಡುತ್ತದೆ. ಹೀಗೆ ದಿಢೀರನೆ ಅಲುಗಾಡುವುದನ್ನೇ ಟರ್ಬುಲೆನ್ಸ್‌ ಅಥವಾ ಪ್ರಕ್ಷುಬ್ಧತೆ ಎಂದು ಕರೆಯುತ್ತಾರೆ. ಸಣ್ಣಪುಟ್ಟ ಪ್ರಕ್ಷುಬ್ಧತೆ ಉಂಟಾದರೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ, ತೀವ್ರ ಪ್ರಮಾಣದಲ್ಲಿ ಉಂಟಾದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಲಗೇಜ್‌ಗಳು ಪ್ರಯಾಣಿಕರ ಮೈಮೇಲೆ ಬೀಳುತ್ತವೆ. ಇನ್ನೂ ಹಲವು ತೊಂದರೆಗಳನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ, ಟರ್ಬುಲೆನ್ಸ್‌ ಉಂಟಾದಾಗ ದಿಢೀರನೆ ವಿಮಾನ ಹಾರುವ ಎತ್ತರವನ್ನು ಕಡಿಮೆಗೊಳಿಸುವುದು ಕೂಡ ಅಪಾಯಕಾರಿ ಎನಿಸಿದೆ.

ಇದನ್ನೂ ಓದಿ: Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Continue Reading

ಪ್ರಮುಖ ಸುದ್ದಿ

Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

Yashasvi Jaiswal : ಜೈಸ್ವಾಲ್​ ಗೆಳತಿ ಮ್ಯಾಡಿ ಹ್ಯಾಮಿಲ್ಟನ್ ಆಗಾಗೆ ಐಪಿಎಲ್ ಪಂದ್ಯಗಳ ಸ್ಟ್ಯಾಂಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತರೆ. ಜೈಸ್ವಾಲ್ ಮತ್ತು ಅವರ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅವರು ಅವರನ್ನು ಬೆಂಬಲಿಸುತ್ತಿರುವುದು ಇದೇ ಮೊದಲಲ್ಲ, ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಸಮಯದಲ್ಲಿಯೂ ಹಾಜರಿದ್ದರು.

VISTARANEWS.COM


on

Yashasvi Jaiswal
Koo

ಬೆಂಗಳೂರು: ಐಪಿಎಲ್​ ಪ್ರಶಸ್ತಿ ಗೆಲ್ಲುವ ರಾಜಸ್ಥಾನ್ ರಾಯಲ್ಸ್ ತಂಡದ ಆಸೆ ಕಮರಿ ಹೋದ ಬಳಿಕ ಆ ತಂಡದ ಆಟಗಾರರು ತಮ್ಮ ತಮ್ಮ ನೆಲೆಗಳಿಗೆ ಹೋರಟು ಹೋಗಿದ್ದಾರೆ. ಅದರಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಮತ್ತು ಸಂಜು ಸ್ಯಾಮ್ಸನ್​ ಟೀಮ್​ ಇಂಡಿಯಾಕ್ಕೆ ಟಿ20 ವಿಶ್ವ ಕಪ್​ಗಾಗಿ ಆಯ್ಕೆಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಪ್ಲೇಆಫ್​ 2ನೇ ಪಂದ್ಯದಲ್ಲಿ ಪಂದ್ಯದಲ್ಲಿ ಆರ್​ಆರ್ ತಂಡ ಸೋತ ಬಳಿಕ ಆಟಗಾರರು ಚೆನ್ನೈ ವಿಮಾನ ನಿಲ್ದಾಣದ ಮೂಲಕ ತಮ್ಮ ಊರುಗಳಿಗೆ ತೆರಳಿದ್ದರು. ಅಂತೆಯೇ ಯಶಸ್ವಿ ಜೈಸ್ವಾಲ್​ ಕೂಡ ಅದೇ ನಿಲ್ದಾಣದ ಮೂಲಕ ಹೋಗಿದ್ದರು. ಈ ವೇಳೆ ಅವರ ಜತೆ ಗೆಳತಿಯೂ ಜತೆಗಿದ್ದರು. ಅವರಿಬ್ಬರು ಜತೆಯಾಗಿ ಹೋಗುವ ವಿಡಿಯೊ ವೈರಲ್ ಆಗಿದೆ.

ಜೈಸ್ವಾಲ್​ ಗೆಳತಿ ಮ್ಯಾಡಿ ಹ್ಯಾಮಿಲ್ಟನ್ ಆಗಾಗೆ ಐಪಿಎಲ್ ಪಂದ್ಯಗಳ ಸ್ಟ್ಯಾಂಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತರೆ. ಜೈಸ್ವಾಲ್ ಮತ್ತು ಅವರ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅವರು ಅವರನ್ನು ಬೆಂಬಲಿಸುತ್ತಿರುವುದು ಇದೇ ಮೊದಲಲ್ಲ, ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಸಮಯದಲ್ಲಿಯೂ ಹಾಜರಿದ್ದರು. ಹ್ಯಾಮಿಲ್ಟನ್ ಅವರೊಂದಿಗಿನ ಸಂಬಂಧದ ಬಗ್ಗೆ ವದಂತಿಗಳನ್ನು ಜೈಸ್ವಾಲ್ ಇನ್ನೂ ಸಾರ್ವಜನಿಕವಾಗಿ ಹೇಳಿಕೊಳ್ಳದೇ ಹೋದರೂ ಸಾಮಾಜಿಕ ಮಾಧ್ಯಮಗಳು ಹಲವಾರು ಊಹಾಪೋಹಗಳನ್ನು ಸೃಷ್ಟಿಸುತ್ತಿವೆ.

ಇದನ್ನೂ ಓದಿ: Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

ಕ್ರಿಕೆಟ್​ ಪ್ರೇಕ್ಷಕರು ಹ್ಯಾಮಿಲ್ಟನ್ ಅವರ ಸೌಂದರ್ಯದ ಬಗ್ಗೆಯೂ ಮೆಚ್ಚುಗೆಯ ಮಾತನಾಡಿದ್ದಾರೆ. ಯುವ ಕ್ರಿಕೆಟಿಗನೊಂದಿಗಿನ ಅವರ ಸಂಪರ್ಕವನ್ನು ಚರ್ಚಿಸುತ್ತಿದ್ದಾರೆ. ಈ ಜೋಡಿ ಮೂರು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳು ಕೇಳಿ ಬಂದಿವೆ. 22ರ ಹರೆಯದ ಜೈಸ್ವಾಲ್ 15 ಇನ್ನಿಂಗ್ಸ್​ಗಳಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕ ಸೇರಿದಂತೆ 155.91ರ ಸ್ಟ್ರೈಕ್ ರೇಟ್​ನೊಂದಿಗೆ 435 ರನ್ ಗಳಿಸಿದ್ದಾರೆ.

ಜೂನ್ 1 ರಿಂದ ಪ್ರಾರಂಭವಾಗುವ ಮುಂಬರುವ ಟಿ 20 ವಿಶ್ವಕಪ್ 2024 ಗಾಗಿ ಜೈಸ್ವಾಲ್ ಶೀಘ್ರದಲ್ಲೇ ಯುಎಸ್ಎಗೆ ತೆರಳಲಿದ್ದಾರೆ. ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ ಸೆಣಸಲಿದೆ.

ಕೊಹ್ಲಿಯ ಸಾಧನೆ ಸರಿಗಟ್ಟಿದ ಯಶಸ್ವಿ ಜೈಸ್ವಾಲ್​

ರಾಂಚಿ: ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿ ಭಾರತದ ಕೈವಶವಾಗಿದೆ. 192 ರನ್​​ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ (Yashasvi Jaiswal) ಆರಂಭಿಕರಾಗಿ ಕಣಕ್ಕೆ ಇಳಿದು 44 ರನ್ ಗಳಿಸಿದರು. ರೋಹಿತ್ ಶರ್ಮಾ ಜತೆ ಶಾಂತವಾಗಿ ಆಡಿದ ಅವರು ಆರಂಭಿಕ ವಿಕೆಟ್​ಗೆ 84 ರನ್​ ಬಾರಿಸಿದರು.

ಗೆಲುವಿನಲ್ಲಿ ರೋಹಿತ್ ಶರ್ಮಾ ಅವರ 55 ರನ್​, ಶುಭ್ಮನ್ ಗಿಲ್ ಅವರ ಅಜೇಯ 52 ಮತ್ತು ಧ್ರುವ್ ಜುರೆಲ್ ಅವರ ಉಪಯುಕ್ತ 35 ರನ್​ಗಳಿವೆ. ಇವೆಲ್ಲದರ ನಡುವೆ ಯಶಸ್ವಿ ಜೈಸ್ವಾಲ್​ ಭಾರತ ಪರ ವಿಶೇಷ ಸಾಧನೆ ಮಾಡಿದ್ದಾರೆ. ಈ ಹಾದಿಯಲ್ಲಿ ಅವರು ಮಾಜಿ ನಾಯಕ ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ್ದಾರೆ.

ಜೈಸ್ವಾಲ್​ ನಾಲ್ಕು 50+ ಸ್ಕೋರ್ ಮತ್ತು ಎರಡು ದ್ವಿಶತಕಗಳೊಂದಿಗೆ, ಜೈಸ್ವಾಲ್ ಪ್ರಸ್ತುತ ಸರಣಿಯಲ್ಲಿ 93.57 ಸರಾಸರಿಯಲ್ಲಿ 655 ರನ್ ಗಳಿಸಿದ್ದಾರೆ. 2016/17ರಲ್ಲಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಂಡಿದ್ದಾಗ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಜೈಸ್ವಾಲ್​ ಸರಣಿಯಲ್ಲಿ ಇನ್ನೂ ಒಂದು ಪಂದ್ಯವನ್ನು ಹೊಂದಿದ್ದಾರೆ. ಅಂದರೆ ಅವರು ವಿರಾಟ್ ಕೊಹ್ಲಿಯನ್ನು ಮೀರಿಸುತ್ತಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ದ್ವಿಪಕ್ಷೀಯ ಸರಣಿಯಲ್ಲಿ ನಿರ್ವಿವಾದ

Continue Reading

ಪ್ರಮುಖ ಸುದ್ದಿ

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

VISTARANEWS.COM


on

Jos Butler
Koo

ಬೆಂಗಳೂರು: ಬಲಗೈ ಬ್ಯಾಟರ್​ ಜೋಸ್ ಬಟ್ಲರ್ ಆಧುನಿಕ ಪೀಳಿಗೆಯ ಅತ್ಯುತ್ತಮ ವೈಟ್-ಬಾಲ್ ಬ್ಯಾಟರ್​ಗಳಲ್ಲಿ ಒಬ್ಬರು. ಅವರು ಜೂನ್ 2 ರಿಂದ ಪ್ರಾರಂಭವಾಗಲಿರುವ ಟಿ 20 ವಿಶ್ವಕಪ್ 2024 ರಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅವರ ನಾಯಕತ್ವದಲ್ಲಿ ತಂಡ ವಿಶ್ವ ಕಪ್​ ಟ್ರೋಫಿಯನ್ನು ಉಳಿಸಿಕೊಳ್ಳುವುದಕ್ಕೆ ಯತ್ನಿಸಲಿದೆ. ಹಿಂದಿನ ಬಾರಿ ಬೆನ್​ಸ್ಟೋಕ್ಸ್ ನೇತೃತ್ವದಲ್ಲಿ ಇಂಗ್ಲೆಂಡ್​ ತಂಡ ಹಿಂದಿನ ಆವೃತ್ತಿಯಲ್ಲಿ ಕಪ್​ ಗೆದ್ದಿತ್ತು. ಅವರೀಗ ಟಿ20ಐನಲ್ಲಿ 3000 ರನ್ ಗಡಿ ದಾಟಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಬಟ್ಲರ್ ಪಾತ್ರರಾಗಿದ್ದಾರೆ.

ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ 2 ನೇ ಟಿ 20 ಪಂದ್ಯದಲ್ಲಿ ಜೋಸ್ ಬಟ್ಲರ್ ಕೇವಲ 51 ಎಸೆತಗಳಲ್ಲಿ 84 ರನ್ ಗಳಿಸಿ ಪಾಕಿಸ್ತಾನ ವಿರುದ್ಧದ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಬಟ್ಲರ್ ಈಗ ಟಿ 20 ಪಂದ್ಯಗಳಲ್ಲಿ ಒಂಬತ್ತನೇ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ. 106 ಇನ್ನಿಂಗ್ಸ್​ಗಳಲ್ಲಿ 35.42 ಸರಾಸರಿ ಮತ್ತು 145.10 ಸ್ಟ್ರೈಕ್ ರೇಟ್​ಪ್ರಕಾರ 3011 ರನ್ ಗಳಿಸಿದ್ದಾರೆ.

ಬಟ್ಲರ್ ಟಿ 20 ಪಂದ್ಯಗಳಲ್ಲಿ ತಮ್ಮ ಹೆಸರಿನಲ್ಲಿ ಒಂದು ಶತಕದ ದಾಖಲೆಯನ್ನೂ ಹೊಂದಿದ್ದಾರೆ. ಈ ಬಾರಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರನಾಗಲಿದ್ದಾರೆ. ಅವರ ಬ್ಯಾಟಿಂಗ್ ಪ್ರದರ್ಶನ ಉತ್ತಮವಾಗಿರುವ ಕಾರಣ ಅವಕಾಶ ಹೆಚ್ಚಿದೆ.

ಇದನ್ನೂ ಓದಿ: Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

ಐಪಿಎಲ್ಗೂ ಮುನ್ನ ಬಟ್ಲರ್ ಐಪಿಎಲ್ 2024ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಅಲ್ಲಿ ಅವರು ಎರಡು ಶತಕಗಳನ್ನು ಬಾರಿಸಿದ್ದರು. ಲೀಡ್ಸ್​​ನಲ್ಲಿ ನಡೆದ ಮೊದಲ ಪಂದ್ಯ ರದ್ದಾದ ನಂತರ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟಿ 20 ಐ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ಮೂರನೇ ಪಂದ್ಯ ಕಾರ್ಡಿಫ್​​ನಲ್ಲಿ ನಡೆಯಲಿದ್ದು, ಉಳಿದ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ನಾಯಕ ತನ್ನ ಬ್ಯಾಟಿಂಗ್ ಪ್ರದರ್ಶನ ಹೇಗೆ ನೀಡುತ್ತಾರೆ ಎಂದು ಕಾದು ನೋಡಬೇಕಷ್ಟೆ.

ಐಪಿಎಲ್​ ನಡುವೆಯೇ ಹೆಸರು ಬದಲಾಯಿಸಿಕೊಂಡ ಜೋಸ್ ಬಟ್ಲರ್​

ಮುಂಬಯಿ: ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಸಾಕಷ್ಟು ಸಂದರ್ಭದಲ್ಲಿ ತಪ್ಪು ಹೆಸರನ್ನು ಕರೆದ ಬಳಿಕ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದಕ್ಕೆ ನಿರ್ಧರಿಸಿಕೊಂಡರು. ಇಂಗ್ಲೆಂಡ್ ಪರ 57 ಟೆಸ್ಟ್, 181 ಏಕದಿನ ಹಾಗೂ 114 ಟಿ20 ಪಂದ್ಯಗಳನ್ನು ಆಡಿದ್ದಾರೆ ಜೋಸ್ ಬಟ್ಲರ್​. ಜೂನ್​ನಲ್ಲಿ ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿಕೆಟ್ ಕೀಪರ್ ಬ್ಯಾಟರ್​ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅವರೀಗ ಏಕಾಏಕಿ ಹೆಸರನ್ನು ಬದಲಿಸಿಕೊಂಡಿದ್ದಾರೆ.

ನಾನು ಇಂಗ್ಲೆಂಡ್ ತಂಡದ ವೈಟ್ ಬಾಲ್ ನಾಯಕ. ಇಲ್ಲಿಯವರೆಗೆ ನನ್ನನ್ನು ತಪ್ಪು ಹೆಸರಿನೊಂದಿಗೆ ಕರೆಯಲಾಗುತ್ತಿತ್ತು . ನನ್ನ ಹುಟ್ಟುಹಬ್ಬದ ಕಾರ್ಡ್ ನಲ್ಲಿ ಬೀದಿಯಲ್ಲಿರುವ ಜನರಿಂದ ಹಿಡಿದು ನನ್ನ ತಾಯಿಯವರೆಗೆ. ಪ್ರಿಯ ಜೋಶ್ ಎಂದು ಕರೆಯಬೇಕು. ಇಂಗ್ಲೆಂಡ್ ಪರ 13 ವರ್ಷಗಳ ಕಾಲ ಆಡಿದ ನಂತರ ಮತ್ತು ಎರಡು ವಿಶ್ವಕಪ್ ಪಂದ್ಯಗಳನ್ನು ಗೆದ್ದ ನಂತರ, ನಾನು ಸಮಸ್ಯೆಯನ್ನು ಪರಿಹರಿಸಲು ನಿರ್ಧರಿಸಿದ್ದೇನೆ. ನಾನು ಅಧಿಕೃತವಾಗಿ ಜೋಶ್ ಬಟ್ಲರ್​ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement
Phalody Satta Bazar
ದೇಶ33 seconds ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Shivamogga News
ಕರ್ನಾಟಕ25 mins ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

turbulence
ಪ್ರಮುಖ ಸುದ್ದಿ41 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

FIR Filed
ದೇಶ41 mins ago

FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

Yashasvi Jaiswal
ಪ್ರಮುಖ ಸುದ್ದಿ46 mins ago

Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ1 hour ago

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Jos Butler
ಪ್ರಮುಖ ಸುದ್ದಿ1 hour ago

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

Wagah Border
ದೇಶ2 hours ago

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Virat kohli
ಪ್ರಮುಖ ಸುದ್ದಿ2 hours ago

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

FSSAI Warning
ಆರೋಗ್ಯ2 hours ago

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌