Soldier Death: ಕನಸಗೇರಿಯಲ್ಲಿ ಕಮರಿತು ಯೋಧನ ಮದುವೆಯ ಕನಸು - Vistara News

ಬೆಳಗಾವಿ

Soldier Death: ಕನಸಗೇರಿಯಲ್ಲಿ ಕಮರಿತು ಯೋಧನ ಮದುವೆಯ ಕನಸು

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದ ಯೋಧ ಕಾಶಿನಾಥ ಶಿಂಧಿಗಾರ (28) ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಕಳೆದ 8 ವರ್ಷಗಳಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

VISTARANEWS.COM


on

belagavi soldier who was going to marry died befire 8 days
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಎಲ್ಲ ಸರಿ ಇದ್ದಿದ್ದರೆ ಇನ್ನು ಎಂಟೇ ದಿನಗಳಲ್ಲಿ ಕನಸಗೇರಿಯ ಆ ಸೇನಾಯೋಧ ಸಪ್ತಪದಿ ತುಳಿಯಬೇಕಿತ್ತು. ಆದರೆ ಮದುವೆಯ ಮೆರವಣಿಗೆಯ ಬದಲು ಗ್ರಾಮದಲ್ಲಿ ಶವ ಮೆರವಣಿಗೆ ನಡೆಯುವಂತಾಗಿದೆ.

ಮದುವೆಗೆಂದು ಸ್ವಗ್ರಾಮಕ್ಕೆ ಬರುತ್ತಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದ ಯೋಧ ಕಾಶಿನಾಥ ಶಿಂಧಿಗಾರ (28) ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಕಳೆದ 8 ವರ್ಷಗಳಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

belagavi soldier who was going to marry died befire 8 days

ಪಂಜಾಬ್‌ನಿಂದ ಸ್ವಗ್ರಾಮಕ್ಕೆ‌ ಮರಳುತ್ತಿದ್ದಾಗ ಲೂಧಿಯಾನ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಯೋಧನ ಸಾವಿನಿಂದ ಸ್ವಗ್ರಾಮ‌ ಕನಸಗೇರಿಯಲ್ಲಿ‌ ದುಃಖ ಮಡುಗಟ್ಟಿದೆ. ಇಂದು ಮುಂಜಾನೆ ಸ್ವಗ್ರಾಮ ಕನಸಗೇರಿಗೆ ಯೋಧನ ಪಾರ್ಥಿವ ಶರೀರ ಆಗಮಿಸಿದ್ದು, ಕನಸಗೇರಿಯ ಪ್ರಮುಖ ಬೀದಿಗಳಲ್ಲಿ ಯೋಧನ ಅಂತಿಮ ಯಾತ್ರೆ ನಡೆಯಿತು. ಮದುವೆ ಮಾಡಿಕೊಂಡು ಹೆಂಡತಿಯೊಂದಿಗೆ ಮೆರವಣಿಗೆ ಮಾಡಿಕೊಳ್ಳಬೇಕಿದ್ದ ಯೋಧನ ಶವ ಮೆರವಣಿಗೆ ಊರಿನ ಬೀದಿಗಳಲ್ಲಿ ನಡೆದದ್ದು ಊರಿನ ಜನತೆಯಲ್ಲಿ ಅಪಾರ ಶೋಕ ಉಂಟುಮಾಡಿದೆ.

belagavi soldier who was going to marry died befire 8 days

ಸೈನ್ಯದ ರೂಢಿಯಂತೆ ಅಂತಿಮ ನಮನಗಳನ್ನು ಸಲ್ಲಿಸಿದ ಬಳಿಕ ಬಂಧುಗಳಿಗೆ ಶವವನ್ನು ಒಪ್ಪಿಸಲಾಗಿದ್ದು, ಸಮುದಾಯದ ಸಂಪ್ರದಾಯದಂತೆ ಕುಟುಂಬದ ಜಮೀನಿನಲ್ಲಿ ಅಂತಿಮ ವಿಧಿವಿಧಾನಗಳು ಹಾಗೂ ಶವಸಂಸ್ಕಾರ ನಡೆಯಿತು. ಮೃತ ಯೋಧ ಕಾಶಿನಾಥನಿಗೆ ಮೂವರು ಸಹೋದರರು, ತಂದೆ, ತಾಯಿ ಇದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Heat Wave : ವಿಪರೀತ ತಾಪಮಾನವು ಜನರಿಗೆ ತಲೆ ಬಿಸಿ (highest temperature) ಮಾಡಿದೆ. ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ದಾಖಲೆಯಲ್ಲಿ ಉಷ್ಣಾಂಶ ಏರಿಕೆ ಆಗುತ್ತಿದೆ. ಮುಂದಿನ ಐದು ದಿನಗಳಿಗೆ ಹೀಟ್‌ ವೇವ್ಸ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೇಸಿಗೆಯ ಬೇಗೆ ಶುರುವಾಗಿದ್ದು, ಜನರು ಹನಿ ನೀರಿಗೂ (Karnataka Weather Forecast) ಹೆಣಗಾಡುತ್ತಿದ್ದಾರೆ. ಈ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ (bangalore temperature) ಈ ಬಗ್ಗೆ ಹವಾಮಾನ ಇಲಾಖೆ (bangalore weather) ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ.

ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇದೀಗ ಈ ದಾಖಲೆಯು ನಿನ್ನೆ ಉಡೀಸ್‌ ಆಗಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಬೆಂಗಳೂರು ಮಾತ್ರವಲ್ಲ ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ, ಕೊಪ್ಪಳದಲ್ಲಿ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಈ ಬಗ್ಗೆ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ.

ಜಿಲ್ಲೆಗರಿಷ್ಠ ತಾಪಮಾನದಿನ ಹಾಗೂ ವರ್ಷ
ಬೆಂಗಳೂರು37.3 ಡಿ.ಸೆ29th 1996
ಕಲಬುರಗಿ4331st 1996
ಬಾಗಲಕೋಟೆ41.631st 1996
ರಾಯಚೂರು44.627th 1992
ಬಳ್ಳಾರಿ4330th 1996
ಕೊಪ್ಪಳ40.224th 2019
ವಿಜಯಪುರ41.929, 30th 1996

ಇನ್ನೂ 5 ದಿನಗಳು ಸುಡುವ ಕೆಂಡ

ಬೇಸಿಗೆ ಆರಂಭವಾಗುವ ಮೊದಲೇ ಜನರು ಬೇಸಿಗೆಯ ಅನುಭವಿಸಿದ್ದರು. ಮಾರ್ಚ್‌ ಮುಗಿಯುವ ಮೊದಲೇ ಸೂರ್ಯ ದಿನೇದಿನೆ ಪ್ರಖರವಾಗುತ್ತಿದ್ದಾನೆ. ಎಲ್ಲ ರಾಜ್ಯಗಳಲ್ಲೂ ಬೇಸಿಗೆಯನ್ನು ಎದುರಿಸಲು, ಅಗತ್ಯ ಪರಿಹಾರ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬೆನ್ನಲ್ಲೇ ಮುಂದಿನ ಐದು ದಿನಗಳು ಕೆಲವು ಕಡೆ 40 ರಿಂದ 50 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾದ ತಾಪಮಾನವಾಗಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಹೀಗಿದೆ..

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ

ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

ಬರಗಾಲದ ಮಧ್ಯೆಯೂ ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ದೇವಿ ದೇಗುಲಕ್ಕೆ ಭಾರಿ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ. ಒಂದೇ ವರ್ಷದಲ್ಲಿ 11 ಕೋಟಿ ರೂ. ಸಂಗ್ರಹವಾಗಿದೆ.

VISTARANEWS.COM


on

Savadatti Yallamma
Koo

ಬೆಳಗಾವಿ: ಕುಂದಾ ನಗರಿ ಬೆಳಗಾವಿ ಸೇರಿ ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕೃಷಿ ಚುಟುವಟಿಕೆ ಬಿಡಿ, ಕುಡಿಯಲು ಕೂಡ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿ ಮಧ್ಯೆಯೂ ಬೆಳಗಾವಿ (Belagavi) ಜಿಲ್ಲೆ ಸವದತ್ತಿಯಲ್ಲಿರುವ ಯಲ್ಲಮ್ಮ ದೇವಿ (Savadatti Yallamma Devi Temple) ದೇವಾಲಯಕ್ಕೆ ಭರಪೂರ ಕಾಣಿಕೆ ಹರಿದುಬಂದಿದೆ. ದೇವಾಲಯದ ಹುಂಡಿ ಹಣವನ್ನು (Donation Box) ಎಣಿಕೆ ಮಾಡಲಾಗಿದ್ದು, ಒಂದೇ ವರ್ಷದಲ್ಲಿ 11 ಕೋಟಿ ರೂ. ಕಾಣಿಗೆ ಸಂಗ್ರಹವಾಗಿದೆ.

ಸವದತ್ತಿ ಯಲ್ಲಮ್ಮ ದೇವಿ ದೇವಾಲಯವು ಉತ್ತರ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಹಾಗಾಗಿ, ಬರಗಾಲದ ಮಧ್ಯೆಯೂ ದೇವಾಲಯದ ಹುಂಡಿಯಲ್ಲಿ 2023-24ನೇ ಸಾಲಿನಲ್ಲಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಭಕ್ತರು ನಗದು, ಚಿನ್ನ, ಬೆಳ್ಳಿಯ ಆಭರಣಗಳನ್ನು ಹುಂಡಿಗೆ ಹಾಕಿ ಭಕ್ತಿ ಮೆರೆಯುತ್ತಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 2.4 ಕೋಟಿ ರೂ. ಹೆಚ್ಚಿನ ಕಾಣಿಕೆ ಸಂಗ್ರಹವಾಗಿದೆ.

ದೇವಾಲಯದ ಹುಂಡಿಯಲ್ಲಿ 2022–23ರಲ್ಲಿ 8.01 ಕೋಟಿ ರೂ. ನಗದು, 66.28 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 15.43 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಸೇರಿ ಒಟ್ಟು 8.83 ಕೋಟಿಯ ಕಾಣಿಕೆ ಸಂಗ್ರಹವಾಗಿತ್ತು. ಇನ್ನು 2023–24ರಲ್ಲಿ ತೀವ್ರ ಬರಗಾಲದ ಮಧ್ಯೆಯೂ 10.22 ಕೋಟಿ ರೂ. ನಗದು, 84.14 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 16.65 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು ಸೇರಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಜತೆಗೆ ಕೆನಡಾ ದೇಶದ ಎರಡು ಕರೆನ್ಸಿ ನೋಟುಗಳು ಕೂಡ ಪತ್ತೆಯಾಗಿವೆ.

ಇದನ್ನೂ ಓದಿ: Koppala News: ಅಂಜನಾದ್ರಿ ಆಂಜನೇಯ ಸ್ವಾಮಿ ದೇಗುಲದ ಹುಂಡಿ ಹಣ ಎಣಿಕೆ; 9.29 ಲಕ್ಷ ರೂ. ಸಂಗ್ರಹ

ಶಿವಮೊಗ್ಗ ಜಿಲ್ಲೆ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಳೆದ ಡಿಸೆಂಬರ್ ತಿಂಗಳಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 31,35,360 ರೂ. ಸಂಗ್ರಹವಾಗಿತ್ತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 22,52,700 ರೂ. ಕಾಣಿಕೆ ಸಂಗ್ರಹವಾಗಿದೆ, ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರದಲ್ಲಿ ಬಿಸಿಲ ಏಟು; ಮಲೆನಾಡು, ಕರಾವಳಿಯಲ್ಲಿ ಮಳೆಯಾಟ

Heat Wave Alert: ಉತ್ತರ ಒಳನಾಡಿನ 4 ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಅಲರ್ಟ್‌ (Karnataka Weather Forecast) ನೀಡಲಾಗಿದ್ದು, ಈ ನಡುವೆ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Karnataka Weather
Koo

ಬೆಂಗಳೂರು: ಉತ್ತರ ಒಳನಾಡಿನಲ್ಲಿ ವಿಪರೀತ ತಾಪಮಾನ (Temperature Forecast) ಇದ್ದರೆ, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಉಳಿದಂತೆ ಚಾಮರಾಜನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಸೇರಿ ಮಲೆನಾಡಿನ ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಹಾಸನ ಚಿಕ್ಕಮಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಜತೆಗೆ ಮುಂದಿನ ಐದು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ. ಬಿಸಿಗಾಳಿ ಬೀಸಲಿದ್ದು, ಉರಿ ಬಿಸಿಲು ಜನರನ್ನು ತತ್ತರಿಸುವಂತೆ ಮಾಡಿದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ದಾಖಲಾಗಿದೆ. ಕೆಲವೊಮ್ಮೆ ಬಿಸಿ ಗಾಳಿ ಬೀಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 36 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 26 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 21 ಡಿ.ಸೆ
ಗದಗ: 39 ಡಿ.ಸೆ – 23 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಬೆಳಗಾವಿ: 37 ಡಿ.ಸೆ – 22 ಡಿ.ಸೆ
ಕಾರವಾರ: 36 ಡಿ.ಸೆ – 26 ಡಿ.ಸೆ

ಇದನ್ನೂ ಓದಿ: Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

ಬೇಸಿಗೆಯಲ್ಲಿ ಕರಬೂಜದ ಹಣ್ಣನ್ನು ಭರಪೂರ ತಿನ್ನಿ!

ʻಬಂತಲ್ಲ ಬೇಸಿಗೆ, ಕೆಟ್ಟ ಬಿಸಿಲುʼ ಎಂದು ಗೊಣಗುವವರಿಗೆ ಬೇಸಿಗೆಯ ಹಣ್ಣುಗಳ ಪರಿಚಯ ಇದೆಯೋ ಇಲ್ಲವೋ. ಕಲ್ಲಂಗಡಿ, ದ್ರಾಕ್ಷಿಯಿಂದ ಹಿಡಿದು ಕರಬೂಜ, ಮಾವಿನಹಣ್ಣುಗಳವರೆಗೆ, ಬಳಲುವ ಶರೀರಗಳ ದಾಹ ತಣಿಸಲೋ ಎಂಬಂತೆ ನಿಸರ್ಗವೇ ಮಾಡಿಕೊಟ್ಟ ಅನುಕೂಲವಿದು. ಕರಬೂಜಕ್ಕೆ ಮಧುಫಲ ಎಂಬ ಹೆಸರೂ ಇದೆ. ಕಲ್ಲಂಗಡಿ, ಕುಂಬಳಕಾಯಿಗಳ ಜಾತಿಗೆ ಸೇರಿದ ಈ ಹಣ್ಣು ಮೊದಲಿಗೆ ಪಶ್ಚಿಮ ಏಷ್ಯಾ ದೇಶಗಳ ಬೆಳೆಯಾಗಿದ್ದರೂ, ನಂತರದ ವರ್ಷಗಳಲ್ಲಿ ಬ್ರೆಜಿಲ್‌, ಅಮೆರಿಕಾ ಮತ್ತು ಏಷ್ಯಾದ ಹಲವಾರು ಭಾಗಗಳಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಭಾರತದಲ್ಲೂ ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಇದನ್ನು ಬೆಳೆಯಲಾಗುತ್ತದೆ. ಏನಿವೆ ಇದನ್ನು ತಿನ್ನುವುದರ ಲಾಭಗಳು (Muskmelon Benefits) ಎಂಬುದನ್ನು ನೋಡೋಣ.

muskmelon

ಪೌಷ್ಟಿಕಾಂಶಗಳು ಏನಿವೆ?

ವಿಟಮಿನ್‌ ಸಿ ಹೆಚ್ಚಿನ ಪ್ರಮಾಣದಲ್ಲಿರುವ ಫಲವಿದು. ಬೇಸಿಗೆಯಲ್ಲಿ ದಾಳಿ ಇಡಬಹುದಾದ ರೋಗಗಳನ್ನು ದೂರ ಇರಿಸುವುದಕ್ಕೆ ಅಗತ್ಯವಾದ ರಕ್ಷಾಕವಚನ್ನು ಸಿ ಜೀವಸತ್ವ ಒದಗಿಸುತ್ತದೆ. ಜೊತೆಗೆ, ಕಣ್ಣು, ಕೂದಲು ಮತ್ತು ಚರ್ಮಗಳ ಸ್ವಾಸ್ಥ್ಯಕ್ಕೆ ಬೇಕಾದ ವಿಟಮಿನ್‌ ಎ ಸಹ ಹೇರಳವಾಗಿದೆ. ಇದರಲ್ಲಿರುವ ಗ್ಯಾಲಿಕ್‌ ಆಮ್ಲ, ಎಲಾಜಿಕ್‌ ಆಮ್ಲದಂಥ ಆಂಟಿ ಆಕ್ಸಿಡೆಂಟ್‌ಗಳು ದೇಹದಲ್ಲಿ ಕೋಶಗಳ ಹಾನಿಯನ್ನು ತಡೆದು, ಶರೀರವನ್ನು ಪುನರುಜ್ಜೀವನಗೊಳಿಸುತ್ತವೆ. ರಕ್ತನಾಳಗಳನ್ನು ಸಡಿಲಿಸಿ, ರಕ್ತ ಪರಿಚಲನೆಯನ್ನು ಚುರುಕುಗೊಳಿಸುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಕರಬೂಜದ ಹಣ್ಣನ್ನು ಯಥಾವತ್‌ ಆಗಿ ಅಥವಾ, ಪಾನಕ, ಸಲಾಡ್‌ ಯಾವುದೇ ರೀತಿಯಲ್ಲಿ ಸೇವಿಸಲು ಯೋಗ್ಯವಾಗಿದೆ.

Different Types of Tasty Ripe Melons on Wooden Table

ಬಹೂಪಯೋಗಿ ಹಣ್ಣು

ಮಾನಸಿಕ ಒತ್ತಡವನ್ನು ಕಳೆದು ದೇಹ ಮತ್ತು ಮನಸ್ಸಿಗೆ ತಂಪೆರೆಯುವ ಸಾಮರ್ಥ್ಯ ಇದಕ್ಕಿದೆ. ಜೊತೆಗೆ, ಇದರಲ್ಲಿರುವ ಪೊಟಾಶಿಯಂನಂಥ ಖನಿಜಗಳು ನಿದ್ದೆಯನ್ನು ಉದ್ದೀಪಿಸುವ ಗುಣ ಹೊಂದಿವೆ. ಅಧಿಕ ನೀರಿನಂಶದಿಂದ ದೇಹದ ಬಳಲಿಕೆಯನ್ನೂ ದೂರ ಮಾಡಿ, ಕಣ್ತುಂಬಾ ನಿದ್ದೆ ಬರಿಸುತ್ತದೆ. ಇದರಲ್ಲಿರುವ ವಿಟಮಿನ್‌ ಎ ಅಂಶವು ದೃಷ್ಟಿಯನ್ನು ಚುರುಕುಗೊಳಿಸಿ, ಕಣ್ಣನ್ನು ಸೋಂಕುಗಳಿಂದ ರಕ್ಷಿಸುತ್ತದೆ. ಈ ಹಣ್ಣಿನ ಪ್ರಖರ ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣಗಳು ಹೆಚ್ಚಿನ ಕೆರೋಟಿನಾಯ್ಡ್‌ಗಳಿರುವ ಸಂಕೇತ. ಈ ಅಂಶ ಹೆಚ್ಚಿದ್ದಷ್ಟೂ ಕಣ್ಣಿನ ಆರೋಗ್ಯಕ್ಕೆ ಉತ್ತಮ.
ಉದರ ಸಂಬಂಧೀ ಸಮಸ್ಯೆಗಳಿಗೂ ಇದು ಮದ್ದು. ಅಜೀರ್ಣದ ಸಮಸ್ಯೆಗಳನ್ನು ದೂರ ಮಾಡಿ, ಅಸಿಡಿಟಿಯನ್ನು ಹತೋಟಿಯಲ್ಲಿ ಇರಿಸುತ್ತದೆ. ಮಾತ್ರವಲ್ಲ, ನಿಯಮಿತ ಸೇವನೆಯಿಂದ ಹೊಟ್ಟೆ ಹುಣ್ಣು ಮತ್ತು ಮಲಬದ್ಧತೆಗೂ ಉಪಶಮನ ನೀಡುತ್ತದೆ. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನಾರಿನ ಅಂಶದಿಂದಾಗಿ ಸಹಜ ವಿರೇಚಕದಂತೆ ಕೆಲಸ ಮಾಡಿ, ಹೊಟ್ಟೆಯನ್ನು ಸ್ವಚ್ಛ ಮಾಡುತ್ತದೆ.

Heart Health In Winter

ಹೃದಯ-ಸ್ನೇಹಿ

ಇದೇ ಪೊಟಾಶಿಯಂ ಸತ್ವಗಳಿಂದಾಗಿ, ರಕ್ತದ ಒತ್ತಡ ನಿಯಂತ್ರಣಕ್ಕೆ ನೆರವು ದೊರೆಯುತ್ತದೆ ಮತ್ತು ಹೃದಯದ ಆರೋಗ್ಯ ಕಾಪಾಡುವಲ್ಲಿ ನೆರವಾಗುತ್ತದೆ. ಅದಲ್ಲದೆ, ಹೃದಯಸ್ನೇಹಿ ಎನಿಸಿಕೊಳ್ಳುವುದಕ್ಕೆ ಮತ್ತೂ ಕಾರಣಗಳಿವೆ. ಕರಬೂಜದಲ್ಲಿರುವ ಅಡೆನೋಸಿನ್‌ ಎಂಬ ಅಂಶವು ರಕ್ತ ಹೆಪ್ಪುಗಟ್ಟದಂತೆ ನೋಡಿಕೊಳ್ಳುವ ಮತ್ತು ರಕ್ತ ನೀರಾಗಿಸುವ ಗುಣವನ್ನು ಹೊಂದಿದೆ. ಹಾಗಾಗಿ ಹೃದಯಕ್ಕೆ ರಕ್ತ ಪೂರೈಕೆಯಲ್ಲಿ ತೊಂದರೆಯಾಗದಂತೆ ಕಾಪಾಡುತ್ತದೆ.
ಮಹಿಳೆಯರಿಗೆ ಮುಟ್ಟಿನ ದಿನಗಳಲ್ಲಿ ಕಾಡುವ ಹೊಟ್ಟೆನೋವನ್ನು ಶಮನ ಮಾಡಬಲ್ಲದು. ರಕ್ತ ನೀರಾಗುವಂತೆ ನೋಡಿಕೊಳ್ಳುವ ಗುಣದಿಂದಲೇ, ರಕ್ತಸ್ರಾವ ಸರಾಗವಾಗುವಂತೆ ಮಾಡಿ ಹೊಟ್ಟೆಯ ನೋವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಮುಟ್ಟಿನ ಮೊದಲ ದಿನವೇ ಕರಬೂಜ ಸೇವನೆಯನ್ನು ಪರಂಪರಾಗತ ವೈದ್ಯ ಪದ್ಧತಿಯನ್ನು ಪ್ರೋತ್ಸಾಹಿಸುತ್ತಾರೆ.

weight loss

ತೂಕ ಇಳಿಕೆಗೆ

ತಿನ್ನುವುದಕ್ಕೆ ಸಿಹಿ ರುಚಿಯ ಈ ಹಣ್ಣಿನಲ್ಲಿರುವ ಕ್ಯಾಲರಿಗಳು ಕಡಿಮೆ. ನೀರಿನ ಪ್ರಮಾಣವೇ ಹೆಚ್ಚಿರುವುದರಿಂದ ತೂಕ ಇಳಿಸುವವರಿಗೆ ಒಳ್ಳೆಯ ಆಯ್ಕೆ. ಬೇಗ ಹೊಟ್ಟೆ ತುಂಬಿದ ಅನುಭವ ನೀಡಿ, ದೀರ್ಘಕಾಲದವರೆಗೆ ಹೊಟ್ಟೆ ಹಸಿವಾಗದಂತೆ ಕಾಪಾಡುತ್ತದೆ. ಹೆಚ್ಚು ನೀರಿನಂಶ ಹೊಂದಿರುವ ಇದು ಶರೀರವನ್ನು ತಂಪಾಗಿಸುವ ಗುಣವನ್ನು ಹೊಂದಿದೆ. ಜೊತೆಗೆ, ಡೈಯುರೇಟಿಕ್‌ ಸಹ ಹೌದಾಗಿದ್ದು, ಬೇಡದ ಕಶ್ಮಲಗಳನ್ನು ದೇಹದಿಂದ ಹೊರದೂಡುತ್ತದೆ. ಮೂತ್ರಪಿಂಡಗಳ ಆರೋಗ್ಯವನ್ನೂ ರಕ್ಷಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

Belagavi News: ಜಗದೀಶ್‌ ಶೆಟ್ಟರ್ ಬೆಳಗಾವಿಗೆ ಏನು ಮಾಡಿದ್ದಾರೆ? ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

VISTARANEWS.COM


on

minister Lakshmi hebbalkar latest statement
Koo

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಹಂಚಿಕೆ ಆಗಿದ್ದ ಆಕ್ಸಿಜನ್‌ ಅನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ (Jagadish Shettar) ಕೊಡುಗೆ ಏನಿದೆ ಬೆಳಗಾವಿ ಜಿಲ್ಲೆಗೆ? ಈಗ ಇಲ್ಲಿಗೆ ಬಂದು ಕರ್ಮಭೂಮಿ ಕರ್ಮಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ (Belagavi News) ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರಶ್ನಿಸಿದ್ದಾರೆ.

ಗೋಕಾಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬೆಳಗಾವಿಗೆ ಏನು ಮಾಡಿದ್ದಾರೆ? ಬೆಳಗಾವಿ ದೊಡ್ಡ ಜಿಲ್ಲೆ, ಜನಸಂಖ್ಯೆ ಹೆಚ್ಚಿದೆ. ಕೊರೋನಾ ಸಂದರ್ಭದಲ್ಲಿ ಜಿಲ್ಲೆಗೆ ಆಕ್ಸಿಜನ್ ಅಲೋಟ್ ಮಾಡಿದ್ದನ್ನು ಹುಬ್ಬಳ್ಳಿ -ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಕರ್ಮಭೂಮಿ ಎನ್ನಲು ಏನು ಮಾಡಿದ್ದಾರೆ ಬೆಳಗಾವಿಗೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

6 ಬಾರಿ ಹುಬ್ಬಳ್ಳಿ ಜನರು ಶೆಟ್ಟರ್‌ ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ಅವರು ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂಥವರನ್ನು ಹುಬ್ಬಳ್ಳಿ- ಧಾರವಾಡ ಜನರು ಹೊರಗೆ ಹಾಕಿದ್ದಾರೆ. ಈಗ ಇಲ್ಲಿಗೆ ಬಂದು ಕರ್ಮಭೂಮಿ ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಏನಾದರೂ ಕೊಡುಗೆ ಇದೆಯಾ ನಾಚಿಕೆಯಾಗಬೇಕು ನಿಮಗೆ ಎಂದು ಹೆಬ್ಬಾಳ್ಕರ್ ಕಿಡಿಕಾರಿದರು.

ಇದನ್ನೂ ಓದಿ: IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

ಗೋ ಬ್ಯಾಕ್ ಶೆಟ್ಟರ್ ಎನ್ನುವುದು ಅವರ ಪಕ್ಷದ ಕಾರ್ಯಕರ್ತರೇ ಮಾಡುತ್ತಿರುವ ಅಭಿಯಾನ, ಅವರ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ನಾಚಿಕೆಯಾಗಬೇಕು ಇವರಿಗೆ ಎಂದು ಹೆಬ್ಬಾಳ್ಕರ್‌ ಟೀಕಿಸಿದ್ದಾರೆ.

Continue Reading
Advertisement
Bullet Train
ದೇಶ8 mins ago

Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

Lok Sabha Election 2024 BJP JDS coordination committee meeting successful Fight to win with the workers
Lok Sabha Election 202426 mins ago

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

tcs jobs IT hiring
ಉದ್ಯೋಗ27 mins ago

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

Road Accident
ಬೆಂಗಳೂರು ಗ್ರಾಮಾಂತರ30 mins ago

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Sonarika Bhadoria
ಕಿರುತೆರೆ38 mins ago

Sonarika Bhadoria: ಹನಿಮೂನ್‌ನ ಹಾಟ್‌ ಫೋಟೊ ಶೇರ್‌ ಮಾಡಿದ ಹಿಂದಿ ಸೀರಿಯಲ್‌ ನಟಿ!

Riyan Parag
ಕ್ರೀಡೆ50 mins ago

Riyan Parag: 3 ದಿನ ನೋವು ನಿವಾರಕ ಮಾತ್ರೆ ಸೇವಿಸಿ ಹಾಸಿಗೆಯಲ್ಲಿದ್ದೆ; ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ಭಾವುಕರಾದ ​ಪರಾಗ್

Accident Case
ತುಮಕೂರು1 hour ago

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

shani louk photo hamas terrorists
ವಿದೇಶ1 hour ago

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Rahul Gandhi And Sonia Gandhi
ದೇಶ1 hour ago

Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Karimani Malika Ninalla play by violinist Aneesh Vidyashankar
ವೈರಲ್ ನ್ಯೂಸ್2 hours ago

Karimani Malika Ninalla: ʻಕರಿಮಣಿ ಮಾಲೀಕʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದ ವಯೋಲಿನ್‌ ವಾದಕ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌