Site icon Vistara News

ಕಸ ಗುಡಿಸುತ್ತಿದ್ದ ಮಹಿಳೆ ಕಾರು ಹರಿದು ಸಾವು, ಚಾಲಕನಿಗೆ ಧರ್ಮದೇಟು

ಬೆಳಗಾವಿ: ಬಸವೇಶ್ವರ ವೃತ್ತದ ಬಳಿ ಎಲ್‌ಐಸಿ ಕಚೇರಿಯ ಆವರಣದಲ್ಲಿ ಶುಕ್ರವಾರ ಬೆಳಗ್ಗೆ ಕಸಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಟಿಳಕವಾಡಿಯ ಪಿ.ಕೆ.ಕ್ವಾಟರ್ಸ್ ನಿವಾಸಿ ಅನಿತಾ ರಾಜೇಶ ಬನ್ಸ್ (52) ಮೃತಪಟ್ಟವರು. ಅನಿತಾ ಅವರು ಎಂದಿನಂತೆ ಎಲ್‌ಐಸಿ ಕಚೇರಿ ಆವರಣವನ್ನು ಶುಚಿಗೊಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಗುರುರಾಜ ಕುಲಕರ್ಣಿ ಎಂಬುವರು ಎಲ್‌ಐಸಿ ಆವರಣದಿಂದಲೇ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಈ ವೇಳೆ ಅನಿತಾ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅನಿತಾ ಅವರು ಸ್ಥಳದಲ್ಲಿಯೇ ಮೃತಪಟ್ಟರು.

ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಆಕ್ರೋಶಗೊಂಡು ಕಾರು ಚಾಲಕ ಗುರುರಾಜ್‌ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಟಿಳಕವಾಡಿ ಠಾಣೆ ಪೊಲೀಸರು ಅವರನ್ನು ರಕ್ಷಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಕಾರಿನ ಎಡಭಾಗ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ| ಪತಿಗೆ ಮೊಬೈಲ್‌ ಕೊಡಲು ಹೋದ ಮಹಿಳೆ ಟ್ರ್ಯಾಕ್ಟರ್ ಗೆ ಸಿಲುಕಿ ದಾರುಣ ಸಾವು

Exit mobile version