Lynching | ಯುವಕನ ಅರೆಬೆತ್ತಲೆ ಮೆರವಣಿಗೆ, ಮರಕ್ಕೆ ಕಟ್ಟಿ ಥಳಿತ, ಸಾವು - Vistara News

ಕ್ರೈಂ

Lynching | ಯುವಕನ ಅರೆಬೆತ್ತಲೆ ಮೆರವಣಿಗೆ, ಮರಕ್ಕೆ ಕಟ್ಟಿ ಥಳಿತ, ಸಾವು

ಬೆಳಗಾವಿಯ ಬಸವನಕಡಚಿಯಲ್ಲಿ ಯುವಕನೊಬ್ಬನನ್ನು ಅರೆಬೆತ್ತಲೆ ಮೆರವಣಿಗೆ ಮಾಡಿ, ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿದ್ದು, ಹಲ್ಲೆಯಿಂದ ಆತ ಮೃತಪಟ್ಟಿದ್ದಾನೆ.

VISTARANEWS.COM


on

lynching
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬೆಳಗಾವಿ ತಾಲೂಕಿನ ಬಸವನಕುಡಚಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ವ್ಯಕ್ತಿಯೊಬ್ಬನನ್ನು ಅರೆಬೆತ್ತಲೆ ಮೆರವಣಿಗೆ ಮಾಡಿ, ಗಿಡಕ್ಕೆ ಕಟ್ಟಿಹಾಕಿ ಥಳಿಸಿ ಹತ್ಯೆ ಮಾಡಲಾಗಿದೆ.

ಆಗಸ್ಟ್ 18ರಂದು ರಾತ್ರಿ 11.30 ಗಂಟೆಗೆ ಘಟನೆ ನಡೆದಿದೆ. ಹಲ್ಲೆಗೊಳಗಾಗಿದ್ದ ಪೇಂಟರ್ ವಿಶಾಲ್ ಪಟಾಯತ್(27) ಎಂಬಾತ ಮೃತಪಟ್ಟಿದ್ದಾನೆ. ಊರಿನ 20ಕ್ಕೂ ಅಧಿಕ ಯುವಕರು ಈ ಕೃತ್ಯ ನಡೆಸಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ಘಟನೆ ನಡೆದ ದಿನ ವಿಶಾಲ್‌ ಪತ್ನಿಯೊಂದಿಗೆ ಜಗಳ ಮಾಡಿದ್ದ. ನಂತರ ಆಕೆ ತವರು ಮನೆಗೆ ಹೋಗಿದ್ದಳು. ಇದಾದ ಬಳಿಕ ಆತ ಕಂಟ್ರಿ ಸರಾಯಿಗಾಗಿ ಬೇರೆಯವರ ಮನೆ ಕದ ತಟ್ಟಿದ್ದ. ಇದನ್ನು ಪ್ರಶ್ನೆ ಮಾಡಿದವರ ಜೊತೆ ಜಗಳವಾಡಿ ಮೂವರ ಮೇಲೆ ಗಂಭೀರ ಹಲ್ಲೆ ನಡೆಸಿದ್ದ. ಈ ವಿಚಾರ ಗೊತ್ತಾಗಿ ಗ್ರಾಮದ ಯುವಕರ ತಂಡ ವಿಶಾಲ್ ಮೇಲೆ ಪ್ರತಿ ದಾಳಿ ನಡೆಸಿತ್ತು. ಗಿಡಕ್ಕೆ ಕೈಕಾಲು ಕಟ್ಟಿಹಾಕಿ ಮನಸೋ ಇಚ್ಛೆ ಹಲ್ಲೆ ಮಾಡಿದ್ದರು. ಬಟ್ಟೆ ಕಳಚಿ ಚಡ್ಡಿ ಮೇಲೆ ಗ್ರಾಮದ‌ ತುಂಬ ಮೆರವಣಿಗೆ ಮಾಡಿಸಿದ್ದರು. ಸ್ಥಳಕ್ಕೆ ಪೊಲೀಸರು ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

20ಕ್ಕೂ ಹೆಚ್ಚು ಜನರಿಂದ ಈ ಹಲ್ಲೆ ನಡೆದಿದ್ದು, ನಂತರ ಆತನನ್ನು ಬಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಮಾಳಮಾರುತಿ ಠಾಣೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ | Murder mystery | ಮೊಬೈಲ್‌ ಸಿಮ್‌ ಬಿಡಿಸಿದ ಮಹಿಳೆಯ ಮರ್ಡರ್‌ ರಹಸ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

Road Accident: ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ಶುಕ್ರವಾರ ಬೆಳಗ್ಗೆ ಅಪಘಾತ ನಡೆದಿದೆ. ವೇಗವಾಗಿ ಬಂದು ವಾಟರ್‌ ಟ್ಯಾಂಕರ್‌ ಡಿಕ್ಕಿಯಾಗಿದ್ದರಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಅಕ್ಕ-ತಮ್ಮ ಮೃತಪಟ್ಟಿದ್ದಾರೆ.

VISTARANEWS.COM


on

Road accident
Koo

ಬೆಂಗಳೂರು: ಕಿಲ್ಲರ್ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ-ಬಲಿಯಾಗಿರುವ ಘಟನೆ (Road Accident) ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ವೇಗವಾಗಿ ಬಂದ ವಾಟರ್ ಟ್ಯಾಂಕರ್, ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.

ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿಗಳಾದ ಮಧುಮಿತ (20), ರಂಜನ್(18) ಮೃತರು. ಬೆಂಗಳೂರಿನ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ಮಧುಮಿತ ವ್ಯಾಸಂಗ ಮಾಡುತ್ತಿದ್ದಳು. ಮೊದಲ ದಿನ ಅಕ್ಕನನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ಹೋಗಿದ್ದ. ಈ ವೇಳೆ ಕಿಲ್ಲರ್ ವಾಟರ್ ಟ್ಯಾಂಕರ್ ಇಬ್ಬರನ್ನೂ ಬಲಿ ಪಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಗಿದೆ.

ಬೈಕ್‌ ಮಿರರ್‌ಗೆ ವೇಗವಾಗಿ ಬಂದ ವಾಟರ್ ಟ್ಯಾಂಕರ್ ಡಿಕ್ಕಿಯಾಗುತ್ತಲೇ ಅಕ್ಕ-ತಮ್ಮ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಅವರ ತಲೆ ಮೇಲೆ ಟ್ಯಾಂಕರ್ ಹಿಂಬದಿ ಚಕ್ರ‌ ಹರಿದು ದುರಂತ ಸಂಭವಿಸಿದೆ. ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಕಾರು ಅಪಘಾತ, 3 ಸಾವು, ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

road accident gauribidanuru

ಚಿಕ್ಕಬಳ್ಳಾಪುರ: ಭೀಕರ ಕಾರು ಅಪಘಾತವೊಂದರಲ್ಲಿ (Road Accident) ಕಾರು ಕಾಲುವೆಗೆ ಬಿದ್ದು (car Accident) ಮೂವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರೇ ಬೆಚ್ಚಿಬಿದ್ದಿದ್ದಾರೆ.

ಗೌರಿಬಿದನೂರು (Gauribidanur) ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ದುರ್ಘಟನೆ ನಡೆದಿದೆ. ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ. ಇವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್‌ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಚಿಮ್ಮಿದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

ರಾಯಚೂರು: ರಾಯಚೂರಲ್ಲಿ ಅಕ್ಷರ ದಾಸೋಹ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದು ಕಳೆದ ಒಂದು ತಿಂಗಳಲ್ಲಿ ವರದಿಯಾಗುತ್ತಿರುವ ಇಂಥ ಮೂರನೇ ಪ್ರಕರಣವಾಗಿದೆ.

ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು. ಕೆಲಸದ ಜತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ಟ್ಯಾಬ್ಲೆಟ್‌ಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

ಕಳೆದ ತಿಂಗಳು ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅವರು ಬರೆದಿಟ್ಟ ಡೆತ್‌ನೋಟ್‌ ಇದೀಗ ಸಚಿವರ ತಲೆದಂಡ ಪಡೆದಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತುಮಕೂರಿನ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಬಿಲ್‌ ಹಣ ಬಿಡುಗಡೆಯಾಗಿತ್ತು.

Continue Reading

ಚಿತ್ರದುರ್ಗ

Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

Assault Case : ಕುಡಿದ ಮತ್ತಿನಲ್ಲಿ ಕಿರಾತಕನೊಬ್ಬ ಬಾಲಕಿಗೆ ತಿಂಡಿ ಕೊಡಿಸುವುದಾಗಿ ಆಸೆ ಹುಟ್ಟಿಸಿ, ನಂತರ ಆಕೆ ಕತ್ತು ಕೊಯ್ದು ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್‌ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

By

Assault Case
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಹಾಗೂ ಆರೋಪಿ ಹನುಮಂತ
Koo

ಚಿತ್ರದುರ್ಗ: ಕಿರಾತಕನೊಬ್ಬ ಪರಿಚಿತ ಮಗುವಿಗೆ ಚಿಪ್ಸ್ ಕೊಡಿಸುವ ನೆಪದಲ್ಲಿ ಕತ್ತು ಕೊಯ್ದು ಹಲ್ಲೆ (Assault Case ) ನಡೆಸಿದ್ದಾನೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಮಲಸಿಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲಸಿಂಗನಹಳ್ಳಿ ಗ್ರಾಮದ ಹನುಮಂತ (36) ಎಂಬಾತ ಬಾಲಕಿ ಮೇಲೆ ಹಲ್ಲೆ‌ ನಡೆಸಿದವನು.

ಹನುಮಂತ ಕಂಠಪೂರ್ತಿ ಕುಡಿದು ಬಂದವನೇ 5 ವರ್ಷದ ಬಾಲಕಿಗೆ ಚಿಪ್ಸ್‌ ಕೊಡಿಸುವುದಾಗಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಚಾಕುವಿನಿಂದ ಮಗುವಿನ ಕತ್ತಿಗೆ ಇರಿದಿದ್ದಾನೆ. ಹಲ್ಲೆ ನಡೆಸಿ ಬಾಲಕಿಯನ್ನು ಜಮೀನಿನಲ್ಲಿ ಬಿಸಾಡಿ ಹೋಗಿದ್ದಾನೆ.

Assault Case

ಕೂಡಲೇ ಬಾಲಕಿಯ ಅಳು ಕೇಳಿ ಅಕ್ಕ-ಪಕ್ಕದ ಜಮೀನಿನಲ್ಲಿದ್ದವರು ಬಂದು ನೋಡಿದ್ದಾರೆ. ಈ ವೇಳೆ ಮಗು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತ್ವರಿತ ಚಿಕಿತ್ಸೆಯಿಂದ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಮುಂದುವರಿದಿದೆ.

ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ‌ ಪಡೆದಿದ್ದಾರೆ. ಚಿತ್ರಹಳ್ಳಿ ಗೇಟ್ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು ಬಾಲಕಿ

ವಿಜಯನಗರ: ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರ ವಿಧಿಗೆ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (Electric shock) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.

ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ ಮೃತಪಟ್ಟವಳಿ. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

ಬಾಲಕಿ ತುಳಸಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

Electric shock : ಕರೆಂಟ್‌ ಶಾಕ್‌ನಿಂದ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಶಾಲೆಗೆಂದು ಹೋದವಳು ಮಸಣ ಸೇರಿದ್ದಾಳೆ. ಬಾಲಕಿಯ ಅಗಲಿಕೆಗೆ ಇಡೀ ಊರಿಗೆ ಊರೇ ದುಃಖದಲ್ಲಿದೆ.

VISTARANEWS.COM


on

By

Electric shock in vijayanagara
Koo

ವಿಜಯನಗರ: ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರ ವಿಧಿಗೆ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (Electric shock) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.

ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ ಮೃತಪಟ್ಟವಳಿ. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

Electric shock in vijayanagara Class II girl dies of electrocution

ಬಾಲಕಿ ತುಳಸಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

ಮಾಸ್ಕೋ: ರಷ್ಯಾದಲ್ಲಿ ಘೋರ ದುರಂತವೊಂದು ನಡೆದಿದ್ದು, ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ (Drown In River). ಓರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಂಟ್‌ ಪೀಟರ್ಸ್‌ಬರ್ಗ್‌ (St. Petersburg) ಬಳಿ ನದಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ದೃಢಪಡಿಸಿದೆ. ಶವಗಳನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ರಷ್ಯಾದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದೆ.

ʼʼಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯ ಮೃತಪಟ್ಟಿದ್ದು, ಇವರ ವಯಸ್ಸು ಅಂದಾಜು 18-20 ವರ್ಷ. ಇವರು ವೆಲಿಕಿ ನೊವ್ಗೊರೊಡ್ ನಗರದ ಸಮೀಪದಲ್ಲಿರುವ ನೊವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿ(Novgorod State University)ಯಲ್ಲಿ ಅಧ್ಯಯನ ಮಾಡುತ್ತಿದ್ದರುʼʼ ಎಂದು ಮೂಲಗಳು ವರದಿ ಮಾಡಿವೆ.

ದುರಂತ ನಡೆದಿದ್ದು ಹೇಗೆ?

ವೋಲ್ಖೋವ್ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಕೆಯ ನಾಲ್ವರು ಸ್ನೇಹಿತರು ಯತ್ನಿಸಿದ ವೇಳೆ ಈ ದುರಂತ ನಡೆದಿದೆ. ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಷ್ಯಾದ ಮಾಧ್ಯಮಗಳು ಹೇಳಿವೆ. “ಸಾಧ್ಯವಾದಷ್ಟು ಬೇಗ ಶವಗಳನ್ನು ಸಂಬಂಧಿಕರಿಗೆ ಕಳುಹಿಸಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಅಪಾಯದಿಂದ ಪಾರಾದ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಸ್ಕೋದಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಅಮೆರಿಕದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು

ಕೆಲವು ದಿನಗಳ ಹಿಂದೆ ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.

ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಈ ಪೈಕಿ ಆರ್ಯನ್‌ ಜೋಷಿ, ಶ್ರೀಯಾ ಅವಸರಳ ಸ್ಥಳದಲ್ಲೇ ಅಸುನೀಗಿದ್ದರೆ, ಅನ್ವಿ ಶರ್ಮಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿತ್ತು.

ಈ ಐವರು ಆಲ್ಫಾರೆಟ್ಟಾ ಹೈಸ್ಕೂಲ್‌ ಮತ್ತು ಜಾರ್ಜಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ಇವರಿದ್ದ ಕಾರು ಅತಿ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದರು. ಚಾಲಕನ ನಿಯಂತ್ರಣಕ್ಕೆ ಸಿಗದೆ ಮೇ 14ರಂದು ಕಾರು ಆಲ್ಫಾರೆಟ್ಟಾ ಬಳಿ ಅಪಘಾತಕ್ಕೀಡಾಗಿತ್ತು. ʼʼಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ತಲೆಕೆಳಗಾಗಿ ನಿಂತಿತ್ತುʼʼ ಎಂದಯ ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ತೀವ್ರತೆಯನ್ನು ವಿವರಿಸಿದ್ದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳು

ಇವರೆಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದರು. ಶ್ರೀಯಾ ಅವಸರಳ ಯುಜಿಎ ಶಿಕಾರಿ (UGA Shikaari) ಡ್ಯಾನ್ಸ್‌ ತಂಡದ ಸದಸ್ಯೆಯಾಗಿದ್ದರು. ಇನ್ನು ಅನ್ವಿ ಶರ್ಮಾ ಯುಜಿಎ ಕಲಾಕಾರ್‌ (UGA Kalakaar) ಮತ್ತು ಕ್ಯಾಪೆಲ್ಲ ಗ್ರೂಪ್‌ (Capella Group)ನ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ನೀವೊಮ್ಮ ಅದ್ಭುತ ಡ್ಯಾನ್ಸರ್‌. ನಿಮ್ಮ ಕಣ್ಮರೆಯ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲʼʼ ಎಂದು ಶಿಕಾರಿ ತಂಡ ಆಘಾತ ಸೂಚಿಸಿತ್ತು. ಕಲಾಕಾರ್‌ ಗ್ರೂಪ್‌ ಕೂಡ ಅನ್ವಿ ಶರ್ಮಾಗೆ ಶ್ರದ್ಧಾಂಜಲಿ ಸಲ್ಲಿಸಿತ್ತು.

ಆರ್ಯನ್‌ ಜೋಷಿ ಪದವಿ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು. ಆಲ್ಫಾರೆಟ್ಟಾ ಹೈ ಕ್ರಿಕೆಟ್‌ ಟೀಮ್‌ (Alpharetta High cricket team) ತನ್ನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಆರ್ಯನ್‌ ಜೋಷಿ ನಿಧನಕ್ಕೆ ನೋವು ತೋಡಿಕೊಂಡು, ʼʼಆರ್ಯನ್‌ ಜೋಷಿ ನಮ್ಮ ಬಹು ದೊಡ್ಡ ಬೆಂಬಲಿಗರಾಗಿದ್ದರು ಮತ್ತು ತಮ್ಮ ತಂಡದ ಬೆನ್ನೆಲುಬಾಗಿದ್ದರು. ನಮ್ಮ ತಂಡದ ಗೆಲುವಿನಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು. ಅವರ ಅಗಲಿಕೆ ನಮ್ಮ ಪಾಲಿಗೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Bhavani Revanna: ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

VISTARANEWS.COM


on

bhavani revanna Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯ ಕಿಡ್ನಾಪ್‌ ಪ್ರಕರಣದಲ್ಲಿ (Kidnap Case) ಆರೋಪಿಯಾಗಿರುವ, ಸದ್ಯಕ್ಕೆ ತಲೆ ಮರೆಸಿಕೊಂಡಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಕೋರ್ಟ್‌ ಮಧ್ಯಂತರ ಜಾಮೀನು (Interim Bail) ನೀಡಿದೆ. ಇದರಿಂದ ಭವಾನಿ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದರಲ್ಲಿ ಇಂದು ಟ್ವಿಸ್ಟ್‌ ಇದೆ. ಅದೇನೆಂದರೆ, ಇಂದು ಮಧ್ಯಾಹ್ನ 1 ಗಂಟೆಗೆ ಅವರು ಎಸ್‌ಐಟಿ (SIT) ಮುಂದೆ ಹಾಜರಾಗಬೇಕಿದೆ.

ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಬೇಕಾಗಿದ್ದು, ತನಿಖೆಗೆ ಸಹಕರಿಸಿದೆ ತಲೆ ಮರೆಸಿಕೊಂಡಿರುವ ಭವಾನಿ ಅವರಿಗೆ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ನೀಡಿದೆ. ಆದರೆ ಇಂದು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು ಎಂದಿದೆ. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿದೆ.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಭವಾನಿ ಅವರಿಗೆ ಕೋರ್ಟ್‌ ಕೆಲವು ಸೂಚನೆಗಳನ್ನು ನೀಡಿದೆ. ಅದರಂತೆ ಅವರು ನಡೆದುಕೊಳ್ಳಬೇಕಿದೆ. ಅವುಗಳು ಹೀಗಿವೆ:
1) ಭವಾನಿ ಅವರು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಬೇಕು.
2) ವಿಚಾರಣೆಯ ನಂತರ ಐದು ಗಂಟೆಯ ಬಳಿಕ ಅವರನ್ನು ಇಟ್ಟುಕೊಳ್ಳಬಾರದು.
3) ಕೆ.ಆರ್‌ ನಗರ ತಾಲ್ಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು.
4) ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು.

ಇದೀಗ ಕುತೂಹಲದ ಅಂಶವೆಂದರೆ ಇಂದು 1 ಗಂಟೆಗೆ ಅವರು ಎಸ್‌ಐಟಿ ಮುಂದೆ ಹಾಜರಾಗ್ತಾರಾ ಎಂಬುದು. ಬೆಂಗಳೂರಿನಲ್ಲೇ ಇದ್ದರೆ ಅವರು ಎಸ್‌ಐಟಿ ಮುಂದೆ ಹಾಜರಾಗಬಹುದು. ಆದರೆ ಬೆಂಗಳೂರಿನಿಂದ ದೂರ ಎಲ್ಲಾದರೂ ಅಥವಾ ಹೊರರಾಜ್ಯದಲ್ಲಿ ಇದ್ದರೆ ಒಂದು ಗಂಟೆ ವೇಳೆಗೆ ಆಗಮಿಸುವುದು ಕಷ್ಟವಾಗಲಿದೆ. ಅಷ್ಟು ಹೊತ್ತಿಗೆ ಬರದಿದ್ದರೆ ಅದೇ ಕಾರಣ ನೀಡಿ ಅವರನ್ನು ಎಸ್‌ಐಟಿ ಬಂಧಿಸಬಹುದಾಗಿದೆ.

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗಿತ್ತು. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆದಿತ್ತು. ಅವರ ಮೊಬೈಲ್ ಲೊಕೇಶನ್‌ ಟವರ್ ಡಂಪ್, ಸಿಡಿಆರ್ ಪರಿಶೀಲನೆ ನಡೆಸಲಾಗಿತ್ತು.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

Continue Reading
Advertisement
Narendra Modi
Lok Sabha Election 202453 seconds ago

Narendra Modi: ಮುಂದಿನ ಹತ್ತು ವರ್ಷ ನಾವೇ: ನರೇಂದ್ರ ಮೋದಿ

Nikhil Kumaraswamy may Good Bye To Cinema
ಸ್ಯಾಂಡಲ್ ವುಡ್12 mins ago

Nikhil Kumaraswamy: ಸಿನಿಮಾಗೆ ಗುಡ್‌ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ?

Road accident
ಬೆಂಗಳೂರು18 mins ago

Road Accident: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

karnataka rain
ಮಳೆ28 mins ago

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

karnataka Rain
ಮಳೆ29 mins ago

Karnataka Rain : ಆಗುಂಬೆಯಲ್ಲಿ ದುರಂತ; ಅಡಿಕೆ ತೋಟದಲ್ಲಿ ಕಳೆ ಕೀಳುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

T20 World Cup
ಕ್ರೀಡೆ30 mins ago

T20 World Cup: ಪಾಕಿಸ್ತಾನಕ್ಕೆ ಮುಖಭಂಗ ಮಾಡಿದ ಅಮೆರಿಕ ಕ್ರಿಕೆಟ್‌ ತಂಡದ ಸೌರಭ್ ನೇತ್ರವಾಲ್ಕರ್ ಹಿನ್ನೆಲೆ ಏನು?

NDA Meeting
Lok Sabha Election 202448 mins ago

NDA Meeting: ಮತ್ತೊಮ್ಮೆ ಮೋದಿ ಸರ್ಕಾರ; ಜೂ. 9ರಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕಾರ

Chetan Ahimsa says that Upendra is not intelligent he is delusional
ಸ್ಯಾಂಡಲ್ ವುಡ್48 mins ago

Chetan Ahimsa: ಉಪೇಂದ್ರ ಬುದ್ಧಿವಂತನಲ್ಲ, ಅವರಿಗೆ ಭ್ರಮೆ; ನಟ ಚೇತನ್ ಗೇಲಿ

Art exhibition
ಬೆಂಗಳೂರು57 mins ago

Art Exhibition : ಜುಲೈ 10ರವರೆಗೆ ಬೆಂಗಳೂರಿನಲ್ಲಿ ಯೂಸುಫ್, ಶಿಬು ಅರಕ್ಕಲ್ ಚಿತ್ರಗಳ ಪ್ರದರ್ಶನ

Prajwal Revanna Case
ಪ್ರಮುಖ ಸುದ್ದಿ59 mins ago

Prajwal Revanna Case: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ‌ ಪ್ರತ್ಯಕ್ಷ; ಎಸ್ಐಟಿ ವಿಚಾರಣೆಗೆ ಹಾಜರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌