Site icon Vistara News

Murder Case: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Shanoor poojary

ಬೆಳಗಾವಿ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗೋಕಾಕ್‌ ಪಟ್ಟಣದಲ್ಲಿ ನಡೆದಿದೆ. ಶಾನೂರ್ ಪೂಜಾರಿ (27) ಕೊಲೆಯಾದ ದುರ್ದೈವಿ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳ ತಂಡ ಪರಾರಿಯಾಗಿದೆ.

ಗೋಕಾಕ ನಗರದ ಆದಿಜಾಂಬವ ನಗರದಲ್ಲಿ ಘಟನೆ ನಡೆದಿದ್ದು, ಹತ್ಯೆಯಿಂದ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಗೋಕಾಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Shivamogga News: ಸಿಗಂದೂರು ಸೇತುವೆ ಕಾಮಗಾರಿ ವೇಳೆ ಬಿದ್ದು ಕಾರ್ಮಿಕ ಸಾವು

ಪೋಟೊ ಶೂಟ್ ವಿಚಾರಕ್ಕೆ ಚಾಕು ಇರಿದು ಯುವಕನ ಕೊಲೆ

ದೊಡ್ಡಬಳ್ಳಾಪುರ: ಪೋಟೊ ಶೂಟ್ ವಿಚಾರಕ್ಕೆ ಯುವಕನ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದ ಕೂಗೇನಹಳ್ಳಿ ಬಳಿಯ ಡಾರ್ಕ್ ನೈಟ್ ಡಾಬಾದಲ್ಲಿ ನಡೆದಿದೆ. ಯುವಕರ ನಡುವೆ ಪೋಟೊ ತೆಗೆಯುವ ವಿಚಾರದಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಸೂರ್ಯ (22) ಮೃತ ಯುವಕ. ದೊಡ್ಡಬಳ್ಳಾಪುರದ ಕೂಗೇನಹಳ್ಳಿ ಬಳಿಯ ಡಾರ್ಕ್ ನೈಟ್ ಡಾಬಾದಲ್ಲಿ ಸ್ನೇಹಿತರ ಜತೆ ಸೂರ್ಯ ಫೋಟೋ ತೆಗೆಯುತ್ತಿದ್ದ. ಈ ವೇಳೆ ನಮ್ಮದೂ ಫೋಟೊ ತೆಗೆಯಿರಿ ಎಂದು ಕೆಲವರು ಗಲಭೆ ಮಾಡಿದ್ದಾರೆ. ಆಗ ಒಂದು ಫೊಟೊ ತೆಗೆದರೂ ಮತ್ತೆ ಗಲಾಟೆ ಮುಂದುವರಿದಿದೆ. ಮಾತಿಗೆ ಮಾತು ಬೆಳೆದು ಸೂರ್ಯ ಎದೆ ಭಾಗಕ್ಕೆ ಯುವಕನೊಬ್ಬ ಚಾಕು ಇರಿದಿದ್ದರಿಂದ, ತೀವ್ರ ರಕ್ತಸ್ರಾವವಾಗಿತ್ತು.

ಇದನ್ನೂ ಓದಿ | Murder Case : ಕೇವಲ 15 ನಿಮಿಷದಲ್ಲಿ ನಾಲ್ವರನ್ನು ಬಲಿ ಪಡೆದ ಕೊಲೆಗಡುಕ

ಗಾಯಾಳು ಯುವಕನನ್ನು ದೊಡ್ಡಬಳ್ಳಾಪುರದ‌ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಆದರೆ, ಅತಿಯಾದ ರಕ್ತ ಸ್ರಾವದಿಂದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಕ್ರಮ ಸಂಬಂಧ ಆರೋಪ; ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದ ಕಲಾಸಿಪಾಳ್ಯ ಮಾರ್ಕೆಟ್‌ನಲ್ಲಿ ನಡೆದಿದೆ. ವ್ಯಕ್ತಿಯನ್ನು ಹತ್ಯೆಗೈದು ಸುಟ್ಟು ಹಾಕಲಾಗಿದೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

Exit mobile version