Ballari News: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ - Vistara News

ಬಳ್ಳಾರಿ

Ballari News: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

Ballari News: ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಆಯುಧ ಲೈಸೆನ್ಸ್ ಹೊಂದಿದ ಎಲ್ಲಾ ಲೈಸನ್ಸ್‍ದಾರರು (ರಾಷ್ಟ್ರೀಕೃತ ಬ್ಯಾಂಕ್‍ಗಳು, ರಿಸರ್ವ್ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ ಬ್ಯಾಂಕ್‍ಗಳ ಸೆಕ್ಯೂರಿಟಿ ಗಾರ್ಡ್‍ಗಳ ಆಯುಧಗಳನ್ನು ಹೊರತುಪಡಿಸಿ) ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಜೂ.13 ರವರೆಗೆ ಠೇವಣಿ ಮಾಡುವಂತೆ ಸಿ.ಆರ್.ಪಿ.ಸಿ ಕಾಯ್ದೆ 1973 ಕಲಂ 144 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.

VISTARANEWS.COM


on

Ballari DC Prashanth Kumar Mishra pressmeet says dc Prashanth Kumar Mishra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ (Lok Sabha Election-2024) ಅಂಗವಾಗಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಆಯುಧ ಕಾಯ್ದೆ 1959 ಕಲಂ (4), ಕಲಂ (21) ಮತ್ತು ಕಲಂ 24-ಎ(1) ರಡಿ ಆಯುಧ ಲೈಸೆನ್ಸ್ ಹೊಂದಿದ ಎಲ್ಲಾ ಲೈಸನ್ಸ್‍ದಾರರು (ರಾಷ್ಟ್ರೀಕೃತ ಬ್ಯಾಂಕ್‍ಗಳು, ರಿಸರ್ವ್ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ ಬ್ಯಾಂಕ್‍ಗಳ ಸೆಕ್ಯೂರಿಟಿ ಗಾರ್ಡ್‍ಗಳ ಆಯುಧಗಳನ್ನು ಹೊರತುಪಡಿಸಿ) ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಜೂ.13 ರವರೆಗೆ ಠೇವಣಿ ಮಾಡುವಂತೆ ಸಿ.ಆರ್.ಪಿ.ಸಿ ಕಾಯ್ದೆ 1973 ಕಲಂ 144 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ (Ballari News) ಆದೇಶಿಸಿದ್ದಾರೆ.

ಇದನ್ನೂ ಓದಿ:Job Alert: ಗಮನಿಸಿ; ಜಲಮಂಡಳಿಯ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಸಂಪೂರ್ಣ ವಿವರ

ಯಾವುದೇ ಲೈಸೆನ್ಸ್‌ದಾರರು ಚುನಾವಣೆ ಸ್ಥಳ ಮತ್ತು ಸಾರ್ವಜನಿಕ ಸ್ಥಳದಲ್ಲಿ ಆಯುಧಗಳನ್ನು ಹೊತ್ತೊಯ್ಯುವುದು ಮತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Lok Sabha Election 2024: ದರೋಜಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಿರುಸಿನ ಪ್ರಚಾರ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha Constituency Congress Candidate E Tukaram Election Campaign in Daroji
Koo

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಚುನಾವಣಾ (Lok Sabha Election 2024) ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಏನನ್ನೂ ಕೊಡಲಿಲ್ಲ. ಆದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಎಲ್ಲಾ ಸೌಲಭ್ಯಗಳನ್ನೂ ನೀಡುತ್ತಾ ಬಂದಿದೆ. ಅನ್ನಭಾಗ್ಯದಿಂದ ಹಿಡಿದು ಮೂಲಸೌಕರ್ಯಗಳನ್ನು ಒದಗಿಸುತ್ತಿದೆ ಎಂದ ಅವರು, ಬಿಜೆಪಿಗೆ ಬಡವರ ಬಗ್ಗೆ ಕನಿಕರ ಇಲ್ಲ ಎಂದು ಅವರು ದೂರಿದರು.

ಇದನ್ನೂ ಓದಿ: Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

ಈ ಬಾರಿಯ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮತದಾರರದಲ್ಲಿ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಕಾಂಬ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜನಾರ್ಧನ, ದರೋಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hassan Pen drive case
ಕರ್ನಾಟಕ10 mins ago

Hassan Pen Drive Case: ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ10 mins ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Cleric
ದೇಶ22 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ23 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ33 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ41 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ45 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ54 mins ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

T20 World Cup 2024
ಕ್ರೀಡೆ1 hour ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ1 hour ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202424 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌